Author: kannadanewsnow09

ಬೆಂಗಳೂರು: ಕರ್ನಾಟಕ ವಿಧಾನಸಭೆಯ ಸದಸ್ಯರಿಂದ ವಿಧಾನಪರಿಷತ್ತಿಗೆ ನಡೆಯುವ ದೈವಾರ್ಷಿಕ ಚುನಾವಣೆ-2024: 11 ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿದ್ದಾರೆ ಅಂತ ಚುನಾವಣಾಧಿಕಾರಿ ಎಂ.ಕೆ ವಿಶಾಲಾಕ್ಷಿ ಮಾಹಿತಿ ನೀಡಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಅವರು, ಕರ್ನಾಟಕ ವಿಧಾನಸಭೆಯ ಸದಸ್ಯರಿಂದ ವಿಧಾನಪರಿಷತ್ತಿಗೆ ಹನ್ನೊಂದು ಸದಸ್ಯರನ್ನು ಆಯ್ಕೆ ಮಾಡಲು ದೈವಾರ್ಷಿಕ ಚುನಾವಣೆಯನ್ನು ದಿನಾಂಕ 13ನೇ ಜೂನ್, 2024 ರಂದು ನಿಗದಿಪಡಿಸಲಾಗಿತ್ತು, ಈ ಚುನಾವಣೆಗೆ ದಿನಾಂಕ 27.05.2024 ರಿಂದ 03.06.2024ರವರೆಗೆ ನಾಮಪತ್ರಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. ಸದರಿ ಅವಧಿಯಲ್ಲಿ ಒಟ್ಟು 12 ಜನ ಅಭ್ಯರ್ಥಿಗಳು ನಾಮಪತ್ರಗಳನ್ನು ಸಲ್ಲಿಸಿದ್ದರು ಎಂದು ತಿಳಿಸಿದ್ದಾರೆ. ಸದರಿ ನಾಮಪತ್ರಗಳನ್ನು ದಿನಾಂಕ :04.06.2024 ರಂದು ಪರಿಶೀಲನೆಗೆ ತೆಗೆದುಕೊಳ್ಳಲಾಗಿತ್ತು. ಪರಿಶೀಲನೆಯ ಸಂದರ್ಭದಲ್ಲಿ ಶ್ರೀ ಆಸಿಫ್ ಪಾಷಾ ಆರ್.ಎಮ್. ಎಂಬುವವರ ನಾಮಪತ್ರವು ಸೂಚಕರಿಲ್ಲದ ಕಾರಣ ತಿರಸ್ಕೃತಗೊಂಡಿದ್ದು, ಉಳಿದ 11 ಜನ ಅಭ್ಯರ್ಥಿಗಳ ನಾಮಪತ್ರಗಳು ಅಂಗೀಕಾರಗೊಂಡಿದ್ದವು. ಇಂದು ದಿನಾಂಕ:06.06.2024 ರಂದು ಮಧ್ಯಾಹ್ನ 3.00 ಗಂಟೆಯವರೆಗೆ ನಾಮಪತ್ರ ಹಿಂತೆಗೆದುಕೊಳ್ಳಲು ಅಂತಿಮ ದಿನವಾಗಿದ್ದು. ಯಾರು ನಾಮಪತ್ರವನ್ನು ಹಿಂಪಡೆದಿರುವುದಿಲ್ಲ. ಭರ್ತಿ ಮಾಡಬೇಕಾದ 11…

Read More

ಜೆಕ್ ಗಣರಾಜ್ಯ: ಜೆಕ್ ನಗರ ಪಾರ್ಡುಬಿಸ್ನಲ್ಲಿ ಬುಧವಾರ (ಜೂನ್ 5) ಸಂಜೆ ಪ್ರಯಾಣಿಕರ ರೈಲು ಸರಕು ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು 27 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಪ್ರಾದೇಶಿಕ ಗವರ್ನರ್ ತಿಳಿಸಿದ್ದಾರೆ. ರಕ್ಷಣಾ ಸೇವೆಗಳು ಘಟನಾ ಸ್ಥಳದಲ್ಲಿವೆ ಮತ್ತು ಪೊಲೀಸರು ಪ್ರಯಾಣಿಕರನ್ನು ಸ್ಥಳಾಂತರಿಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರೇಗ್ ನಿಂದ ಪೂರ್ವಕ್ಕೆ ದೇಶದ ಮುಖ್ಯ ರೈಲು ಕಾರಿಡಾರ್ ನ ಭಾಗವಾದ ಪಾರ್ಡುಬಿಸ್ ನಲ್ಲಿ ಈ ಅಪಘಾತ ಸಂಭವಿಸಿದೆ. ಪ್ಯಾಸೆಂಜರ್ ರೈಲನ್ನು ರೈಲು ಕಂಪನಿ ರೆಜಿಯೊ ಜೆಟ್ ನಿರ್ವಹಿಸುತ್ತಿದೆ ಎಂದು ಪಾರ್ಡುಬಿಸ್ ಪ್ರದೇಶದ ಗವರ್ನರ್ ಮಾರ್ಟಿನ್ ನೆಟೊಲಿಕಿ ಫೇಸ್ಬುಕ್ನಲ್ಲಿ ತಿಳಿಸಿದ್ದಾರೆ. “ರೆಜಿಯೋಜೆಟ್ ರೈಲು ಮತ್ತು ಸರಕು ರೈಲು ನಡುವೆ ಮುಖಾಮುಖಿ ಡಿಕ್ಕಿಯಾಗಿ ಹಲವಾರು ಜನರು ಸಾವನ್ನಪ್ಪಿದ್ದಾರೆ. ಡಜನ್ಗಟ್ಟಲೆ ಜನರು ಗಾಯಗೊಂಡಿದ್ದಾರೆ” ಎಂದು ಅವರು ಹೇಳಿದರು. ಸುದ್ದಿ ವೆಬ್ಸೈಟ್ idnes.cz ಅಪಘಾತದ ನಂತರದ ತುಣುಕುಗಳು ಹಳಿಯಿಂದ ಕನಿಷ್ಠ ಒಂದು ಗಾಡಿಯನ್ನು ತೋರಿಸಿದರೆ, ಪೊಲೀಸರು ತಮ್ಮ ಎಕ್ಸ್…

Read More

ಬೆಂಗಳೂರು: ವಿಧಾನ ಸಭೆಯಿಂದ ವಿಧಾನ ಪರಿಷತ್ತಿನ ಸದಸ್ಯರ ಆಯ್ಕೆಗಾಗಿ ಚುನಾವಣೆ ಘೋಷಣೆಯಾಗಿತ್ತು. ಈ ಚುನಾವಣೆಯಲ್ಲಿ ವಿಧಾನಸಭೆಯಿಂದ ವಿಧಾನಪರಿಷತ್ತಿಗೆ 11 ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಂದು ಪ್ರಕಟವಾದಂತ ಚುನಾವಣಾ ಫಲಿತಾಂಶದಲ್ಲಿ ಕರ್ನಾಟಕ ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ 11 ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇದನ್ನು ಚುನಾವಣಾಧಿಕಾರಿ ಎಂ.ವಿಶಾಲಾಕ್ಷಿ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ನಾಮಪತ್ರ ಸಲ್ಲಿಸಿದ್ದಂತ 7 ಮಂದಿ, ಬಿಜೆಪಿಯಿಂದ 3 ಹಾಗೂ ಜೆಡಿಎಸ್ ಪಕ್ಷದಿಂದ ನಾಮಪತ್ರ ಸಲ್ಲಿಸಿದ್ದಂತ ಓರ್ವ ಅಭ್ಯರ್ಥಿ ಅವಿರೋಧವಾಗಿ ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ಆಯ್ಕೆಯಾಗಿರೋದಾಗಿ ಘೋಷಣೆ ಮಾಡಿದ್ದಾರೆ. https://kannadanewsnow.com/kannada/good-news-for-mobile-users-the-phone-will-be-charged-in-just-60-seconds/ https://kannadanewsnow.com/kannada/readers-should-note-this-is-the-last-day-to-update-your-aadhaar-card-for-free/

Read More

ಶಿವಮೊಗ್ಗ: ಕರ್ನಾಟಕ ಲೋಕಸೇವಾ ಆಯೋಗದಿಂದ 2024 ನೇ ಸಾಲಿನ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆ ಕುರಿತು ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಲಾಗಿದ್ದ ಪೂರ್ವ ಸಿದ್ಧತಾ ಸಭೆಯಲ್ಲಿ ಡಯಟ್ ಪ್ರಾಂಶುಪಾಲರಾದ ಬಸವರಾಜ್ ಅವರು ಮಾಹಿತಿ ನೀಡಿದರು. ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ಹೊಸದಾಗಿ ನೇಮಕಗೊಂಡಿರುವ ಸಿಬ್ಬಂದಿಗಳಿಗೆ ನಡೆಸಲಾಗುವ ಇಲಾಖಾ ಪರೀಕ್ಷೆಗಳು ಇದಾಗಿದ್ದು, ವೇಳಾಪಟ್ಟಿ ಸಮಯ ಪ್ರತಿ ಪತ್ರಿಕೆಗಳಿಗೂ ಬೇರೆ ಬೇರೆ ಇರುತ್ತದೆ. ದಿನಾಂಕ 07-06-2024 ರಿಂದ 09-06-2024 ಮತ್ತು 11-06-2024 ರಿಂದ 23-06-2024 ರವರೆಗೆ (10-06-2024 ಮತ್ತು 15-06-2024 ರಿಂದ 18-06-2024 ದಿನಗಳನ್ನು ಹೊರತುಪಡಿಸಿ) ಪರೀಕ್ಷೆಗಳನ್ನು ನಡೆಸಲಾಗುತ್ತದೆ ಎಂದು ತಿಳಿಸಿದರು. ಶಿವಮೊಗ್ಗ ಜಿಲ್ಲೆಯ ಒಟ್ಟು 8 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಪರೀಕ್ಷೆ ಮೇಲ್ವಿಚಾರಣೆಗಾಗಿ 2 ಜನ ವೀಕ್ಷಕರನ್ನು, ಮಾರ್ಗಾಧಿಕಾರಿಗಳು, ಸ್ಥಳೀಯ ನಿರೀಕ್ಷಣಾದಿಕಾರಿ ಸೇರಿದಂತೆ ಅಗತ್ಯ ಸಿಬ್ಬಂದಿಗಳನ್ನು ನೇಮಿಸಲಾಗಿದೆ. ವಿಶೇಷ ಚೇತನರಿಗೆ, ದೃಷ್ಟಿಮಾಂದ್ಯ ಅಭ್ಯರ್ಥಿಗಳಿಗೆ ಕೆಪಿಎಸ್‍ಸಿ ನಿಯಮಾನುಸಾರ ಪರೀಕ್ಷೆ ನಡೆಸಲಾಗುವುದು. ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 144 ಸೆಕ್ಷನ್ ಜಾರಿ ಮಾಡಿ…

Read More

ಶಿವಮೊಗ್ಗ: ಹೊಳಲೂರು ಶಾಖಾ ವ್ಯಾಪ್ತಿಯಲ್ಲಿ 66/11 ಕೆವಿ ವಿ.ವಿ ಕೇಂದ್ರದಲ್ಲಿ ಎಫ್-7,8 ಮತ್ತು 10 ಮಾರ್ಗಗಳಲ್ಲಿ ಲಿಂಕ್‍ಲೈನ್ ಮಾರ್ಗ ರಚಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜೂನ್ 07 ಮತ್ತು 08 ರಂದು ಬೆಳಗ್ಗೆ 10.00 ರಿಂದ ಸಂಜೆ 6.00ರವರೆಗೆ ಹಾಡೋನಹಳ್ಳಿ, ಹಳೆ/ಹೊಸ ಮಡಿಕೆಚೀಲೂರು ಮತ್ತು ಬಿ.ಕೆ.ತಾವರೆ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಬಿಐಇಆರ್ಟಿ ಹುದ್ದೆಗೆ ವಿಶೇಷ ಶಿಕ್ಷಕರ ನೇಮಕಾತಿಗಾಗಿ ಅರ್ಜಿ ಆಹ್ವಾನ ಶಿವಮೊಗ್ಗ: ಶಾಲಾ ಶಿಕ್ಷಣ ಇಲಾಖೆಯು ಸಮಗ್ರ ಶಿಕ್ಷಣ ಕರ್ನಾಟಕ ಶಿವಮೊಗ್ಗ ಜಿಲ್ಲೆಯ 7 ತಾಲೂಕುಗಳಲಿ ಸಮನ್ವಯ ಶಿಕ್ಷಣ ಮಧ್ಯವರ್ತನೆಯಡಿಯಲ್ಲಿ ಖಾಲಿ ಇರುವ ಬಿಐಇಆರ್ಟಿ (ಪ್ರಾಥಮಿಕ ಮತ್ತು ಪ್ರೌಢ) ಹುದ್ದೆಗಳಿಗೆ ನೇರ ಗುತ್ತಿಗೆಯಡಿ ನೇಮಕ ಮಾಡಿಕೊಳ್ಳುತ್ತಿದ್ದು, ಬಿ.ಇಡಿ ಅಥವಾ ಡಿ.ಇಐ.ಇಡಿ ವಿದ್ಯಾರ್ಹತೆ ಹೊಂದಿರುವ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಉಪನಿರ್ದೇಶಕರು ಹಾಗೂ ಪದನಿಮಿತ್ತ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿ, ಸಮಗ್ರ ಶಿಕ್ಷಣ ಕರ್ನಾಟಕ, ಶಿವಮೊಗ್ಗ ಇವರಿಂದ ಪಡೆದು, ಭರ್ತಿ…

Read More

ಬೆಂಗಳೂರು ಗ್ರಾಮಾಂತರ: ಐ20 ಕಾರಿನಲ್ಲಿ ತೆರಳುತ್ತಿದ್ದಂತ ಕಾರು ಚಾಲಕನೊಬ್ಬ ಕುಡಿದ ಮತ್ತಿನಲ್ಲಿ ಕಾರನ್ನು ಅಡ್ಡಾದಿಡ್ಡಿಯಾಗಿ ಚಲಾಯಿಸಿದ್ದಾನೆ. ಇದರ ಪರಿಣಾಮ ಅಪಘಾತ ಉಂಟಾಗಿದೆ. ಆ ಅಪಘಾತದಿಂದ ತಪ್ಪಿಸಿಕೊಳ್ಳೋದಕ್ಕೆ ಹೋಗಿ ಬೈಕ್ ಸವಾರರಿಗೆ ಡಿಕ್ಕಿ ಹೊಡೆದ ಪರಿಣಾಮ, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ಹೊಸಕೋಟೆ ಹೊರವಲಯದಲ್ಲಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ-ಚಿಂತಾಮಣಿ ರಾಜ್ಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಐ20 ಕಾರನ್ನು ಕುಡಿದ ಮತ್ತಿನಲ್ಲಿ ಅಡ್ಡಾದಿಡ್ಡಿಯಾಗಿ ಚಾಲಕ ಪ್ರಗತೀಶ್ ರಾವ್ ಚಲಾಯಿಸಿದ್ದಾರೆ. ಈ ಪರಿಣಾಮ ಬೈಕ್ ಸವಾರರಿಗೆ ಢಿಕ್ಕಿಯಾಗಿ ಬೆಂಗಳೂರಿನ ಶಿವಾಜಿನಗರದ ನಿವಾಸಿ ಮೊಹಮ್ಮಧ್ ಫೈಜ್(18) ಹಾಗೂ ಜಗದೀಶ್ (30) ಎಂಬುವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೂ ಈ ಅಪಘಾತದಲ್ಲಿ ಅಬ್ಬಾರ್, ಪಾಷಾ, ಅಬುಜರ್ ಎಂಬುವರು ಗಾಯಗೊಂಡಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಕುಡಿದ ಅಮಲಿನಲ್ಲಿ ಪ್ರಗತೀಶ್ ರಾವ್ ಕಾರು ಚಲಾಯಿಸಿದ್ದೇ ಅಪಘಾತಕ್ಕೆ ಕಾರಣ. ಮೃತ ಕುಟುಂಬಗಳಿಗೆ ನ್ಯಾಯ ಕೊಡಿಸುವಂತ ಜಗದೀಶ್ ಕುಟುಂಬಸ್ಥರು ಹೊಸಕೋಟೆಯ ಶವಾಗಾರದ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಸಂಬಂಧ…

Read More

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭವು ಜೂನ್ 9 ರ ಸಂಜೆ ನಡೆಯುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಈ ಮೊದಲು, ಸಮಾರಂಭವು ಜೂನ್ 8 ರಂದು ನಡೆಯಬೇಕಿತ್ತು, ಆದರೆ ಈಗ ಅದು ಭಾನುವಾರ ಸಂಜೆ 6 ಗಂಟೆಗೆ ನಡೆಯುವ ಸಾಧ್ಯತೆ ಇದೆ. ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ, ಶ್ರೀಲಂಕಾ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಮತ್ತು ನೇಪಾಳ ಪ್ರಧಾನಿ ಪುಷ್ಪ ಕಮಲ್ ದಹಲ್ ಸೇರಿದಂತೆ ವಿಶ್ವ ನಾಯಕರು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಇತರ ದೇಶಗಳ ರಾಷ್ಟ್ರಗಳ ಮುಖ್ಯಸ್ಥರ ವೇಳಾಪಟ್ಟಿಯನ್ನು ಗಮನದಲ್ಲಿಟ್ಟುಕೊಂಡು ಅಂತಿಮ ದಿನಾಂಕ ಮತ್ತು ಸಮಯವನ್ನು ಇನ್ನೂ ರೂಪಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಇಂದು ದಿನದ ಅಂತ್ಯದ ವೇಳೆಗೆ ಅವರ ವೇಳಾಪಟ್ಟಿಗಳು ಮುಗಿದ ನಂತರ, ಅಂತಿಮ ದಿನಾಂಕ ಮತ್ತು ಸಮಯವನ್ನು ಅಂತಿಮಗೊಳಿಸಬಹುದು. ಭಾನುವಾರ ಸಂಜೆಯೊಳಗೆ ಹಲವಾರು ಗಣ್ಯರು ಹೊರಡಬೇಕಾಗಿ ಬಂದರೆ, ಭಾನುವಾರ ಬೆಳಿಗ್ಗೆ ರಾಷ್ಟ್ರಪತಿ ಭವನದಲ್ಲಿ ಸಮಾರಂಭವನ್ನು ನಡೆಸುವ ಸಾಧ್ಯತೆಯೂ ಇದೆ ಎಂದು ಮೂಲಗಳು ತಿಳಿಸಿವೆ. ಏತನ್ಮಧ್ಯೆ,…

Read More

ಬೆಂಗಳೂರು: ಹಾವೇರಿ ಜಿಲ್ಲೆಗೆ ಅವಶ್ಯವಿರುವ ಗೊಬ್ಬರವನ್ನು ಪೂರೈಸಲು ಅಗತ್ಯ ಕ್ರಮ ವಹಿಸುವಂತೆ ಕೃಷಿ ಇಲಾಖೆಯ ಆಯುಕ್ತರಿಗೆ ಸೂಚನೆಗಳನ್ನು ನೀಡಿರುವುದಾಗಿ ಕೃಷಿ ಸಚಿವ ಎನ್. ಚಲುವರಾಯ ಸ್ವಾಮಿ ಅವರು ಮಾಜಿ ಸಿಎಂ ಹಾಗೂ ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ ಅವರಿಗೆ ತಿಳಿಸಿದ್ದಾರೆ. ಇತ್ತೀಚೆಗೆ ಬೀಳುತ್ತಿರುವ ಮುಂಗಾರು ಮಳೆಯಿಂದ ರೈತರು ಉತ್ಸುಕರಾಗಿ ಬಿತ್ತನೆ ಮಾಡಲು ಸಿದ್ದರಾಗಿದ್ದು, ಅದಕ್ಕಾಗಿ ಗೊಬ್ಬರ ಪಡೆದುಕೊಳ್ಳಲು ಮುಂದೆ ಬಂದ ಸಂದರ್ಭದಲ್ಲಿ ಹಾವೇರಿ ಜಿಲ್ಲೆಯಲ್ಲಿ ಗೊಬ್ಬರ ಕಡಿಮೆ ಇದ್ದು, ನೂಕು-ನುಗ್ಗಲು ಪರಿಸ್ಥಿತಿ ಉಂಟಾಗಿರುವುದಾಗಿ, ಹಾವೇರಿ ಜಿಲ್ಲೆಗೆ ಸುಮಾರು 35,000 ಮೆಟ್ರಿಕ್ ಟನ್ ಮುಂಗಾರು ಹಂಗಾಮಿನಲ್ಲಿ ಡಿ.ಎ.ಪಿ.ಗೊಬ್ಬರ ಅವಶ್ಯಕತೆ ಇದ್ದು, ಕೇವಲ 6.500 ಮೆಟ್ರಿಕ್ ಟನ್ ಮಾತ್ರ ಸರಬರಾಜಾಗಿರುವುದರಿಂದ ಬಾಕಿ ಇರುವ 29,000 ಮೆಟ್ರಿಕ್ ಟನ್ ಗೊಬ್ಬರವನ್ನು ಹಾವೇರಿ ಜಿಲ್ಲೆಗೆ ಸರಬರಾಜು ಮಾಡುವಂತೆ ಹಾಗೂ ಇದೇ ರೀತಿ ಯೂರಿಯಾ 65000 ಮೆಟ್ರಿಕ್ ಟನ್ ಮತ್ತು ಕಾಂಪ್ಲೆಕ್ಸ್ 38000 ಮೆಟ್ರಿಕ್ ಟನ್ ಸಹ ಸರಬರಾಜು ಮಾಡಲು ಕ್ರಮ ಜರುಗಿಸುವಂತೆ ಜುಲೈ 22 ರಂದು ಮಾಜಿ…

Read More

ಬೆಂಗಳೂರು: ಅಶ್ಲೀಲ ವೀಡಿಯೋ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ಎಸ್ಐಟಿ ವಶದಲ್ಲಿ ತನಿಖೆಗೆ ಒಳಗಾಗುತ್ತಿರುವಂತ ಪ್ರಜ್ವಲ್ ರೇವಣ್ಣ ಅವರನ್ನು, ಜೂನ್.10ರವರೆಗೆ ಮತ್ತಷ್ಟು ತನಿಖೆಗಾಗಿ ಎಸ್ಐಟಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ. ಮಾಜಿ ಸಂಸದ ಪ್ರಜಲ್ ರೇವಣ್ಣ ಅವರ ಅಶ್ಲೀಲ ವೀಡಿಯೋ ಪ್ರಕರಣ ಬೆಳಕಿಗೆ ಬಂದ ನಂತ್ರ, ವಿದೇಶಕ್ಕೆ ಹಾರಿ ತಲೆ ಮರೆಸಿಕೊಂಡಿದ್ದರು. ಕೆಲ ದಿನಗಳ ಹಿಂದೆ ಜರ್ಮನಿಯ ಮ್ಯೂನಿಚ್ ನಿಂದ ಬೆಂಗಳೂರಿಗೆ ಆಗಮಿಸಿದ್ದಂತ ಅವರನ್ನು ಪ್ರಕರಣದ ತನಿಖೆ ನಡೆಸುತ್ತಿದ್ದಂತ ಎಸ್ಐಟಿ ಏರ್ ಪೋರ್ಟ್ ನಲ್ಲೇ ತಡರಾತ್ರಿ ಬಂಧಿಸಿತ್ತು. ಬಂಧನಕ್ಕೆ ಒಳಗಾಗಿದ್ದಂತ ಪ್ರಜ್ವಲ್ ರೇವಣ್ಣ ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಹೆಚ್ಚಿನ ವಿಚಾರಣೆಗಾಗಿ ಎಸ್ಐಟಿ ವಶಕ್ಕೆ ನೀಡಿತ್ತು. ಇಂದಿಗೆ ಅವರ ಎಸ್ಐಟಿ ಕಸ್ಟಡಿ ಅವಧಿ ಮುಕ್ತಾಯಗೊಂಡಿತ್ತು. ಈ ಹಿನ್ನಲೆಯಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಹೆಚ್ಚಿನ ವಿಚಾರಣೆಗಾಗಿ ತಮ್ಮ ವಶಕ್ಕೆ ನೀಡುವಂತೆ ಕೋರಿದ್ದರು. ಈ ಹಿನ್ನಲೆಯಲ್ಲಿ ಜೂನ್.10ರವರೆಗೆ ಪ್ರಜ್ವಲ್ ರೇವಣ್ಣ ಅವರನ್ನು ಎಸ್ಐಟಿ ಕಸ್ಟಡಿಗೆ…

Read More

ಬೆಂಗಳೂರು: ನಾನು ಸಚಿವ ಸ್ಥಾನಕ್ಕೆ ಇನ್ನೂ ರಾಜೀನಾಮೆ ನೀಡಿಲ್ಲ ಎಂಬುದಾಗಿ ಸಚಿವ ಬಿ.ನಾಗೇಂದ್ರ ಅವರೇ ಸ್ಪಷ್ಟ ಪಡಿಸಿದ್ದಾರೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿರುವಂತ ಅವರು, ನಾನು ರಾಜೀನಾಮೆ ನೀಡಿಲ್ಲ ಎಂಬುದಾಗಿ ಯುವತನ ಸೇವೆ, ಕ್ರೀಡೆ ಮತ್ತು ಪರಿಶಿಷ್ಟ ಕಲ್ಯಾಣಗಳ ಸಚಿವ ಬಿ.ನಾಗೇಂದ್ರ ಅವರು ಸ್ಪಷ್ಟ ಪಡಿಸಿದ್ದಾರೆ. ಇದೇ ಸಂದರ್ಭದಲ್ಲಿ ನಾನು ಸಂಜೆ 4.30ಕ್ಕೆ ಪತ್ರಿಕಾ ಘೋಷ್ಠಿಯನ್ನು ನಡೆಸಲಿದ್ದೇನೆ. ಅಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣ ಸಂಬಂಧ ಮಾಹಿತಿ ಬಿಚ್ಚಿಡಲಿದ್ದೇನೆ ಎಂಬುದಾಗಿ ತಿಳಿಸಿರೋದಾಗಿ ತಿಳಿದು ಬಂದಿದೆ. ಅಂದಹಾಗೇ ಇಂದು ಸಿಎಂ ಸಿದ್ಧರಾಮಯ್ಯ ಅವರ ಗೃಹ ಕಚೇರಿಗೆ ಕೃಷ್ಣಾಗೆ ತೆರಳಿದ್ದರು. ಸಿಎಂ ಸಿದ್ಧರಾಮಯ್ಯ ಅವರನ್ನು ಭೇಟಿಯಾಗಿ ರಾಜೀನಾಮೆ ನೀಡಿದ್ದಾರೆ ಎನ್ನಲಾಗುತ್ತಿತ್ತು. ಇದನ್ನು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಸಚಿವ ನಾಗೇಂದ್ರ ರಾಜೀನಾಮೆ ನೀಡಿದ್ದಾರೆ ಎಂಬುದಾಗಿ ತಿಳಿಸಿದ್ದರು. ಈ ಬೆನ್ನಲ್ಲೇ ಇನ್ನೂ ನಾನು ರಾಜೀನಾಮೆ ನೀಡಿಲ್ಲ ಅಂತ ಬಿ.ನಾಗೇಂದ್ರ ಸ್ಪಷ್ಟ ಪಡಿಸಿದ್ದಾರೆ. https://kannadanewsnow.com/kannada/good-news-for-mobile-users-the-phone-will-be-charged-in-just-60-seconds/ https://kannadanewsnow.com/kannada/readers-should-note-this-is-the-last-day-to-update-your-aadhaar-card-for-free/

Read More