Author: kannadanewsnow09

ಶಿವಮೊಗ್ಗ: ಶಿವಮೊಗ್ಗ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿಗೆ ಕಾಲೇಜಿನ ಸಹ ಪ್ರಾಧ್ಯಾಪಕನಿಂದಲೇ ಲೈಂಗಿಕ ಕಿರುಕುಳ ನೀಡಿದಂತ ಆರೋಪ ಕೇಳಿ ಬಂದಿದೆ. ಶಿವಮೊಗ್ಗ ಮೆಡಿಕಲ್ ಕಾಲೇಜಿನ ಸಹ ಪ್ರಾಧ್ಯಾಪಕ ಡಾ.ಅಶ್ವಿನ್ ಹೆಬ್ಬಾರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿದೆ. ಶಿವಮೊಗ್ಗ ಮೆಡಿಕಲ್ ಕಾಲೇಜಿನಲ್ಲಿ ಡಾ.ಅಶ್ವಿನ್ ಹೆಬ್ಬಾರ್ ಸರ್ಜರಿ ವಿಭಾಗದ ಸಹ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಹ ಪ್ರಾಧ್ಯಾಪಕ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದರ ಸಂಬಂಧ ಶಿವಮೊಗ್ಗ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರನ್ನು ಸಂತ್ರಸ್ತೆ ದಾಖಲಿಸಿದ್ದಾರೆ. ಇತ್ತ ಆರೋಪ ಕೇಳಿ ಬರುತ್ತಿದ್ದಂತೆ ಡಾ.ಅಶ್ವಿನ್ ಹೆಬ್ಬಾರ್ ಅವರು ಕರ್ತವ್ಯಕ್ಕೆ ಗೈರಾಗಿ ನಾಪತ್ತೆಯಾಗಿದ್ದಾರೆ ಎನ್ನಲಾಗುತ್ತಿದೆ. ಈ ಹಿಂದೆಯೂ ಡಾ.ಅಶ್ವಿನ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿತ್ತು. ಈ ಹಿನ್ನಲೆಯಲ್ಲಿ 3 ತಿಂಗಳು ಅಮಾನತು ಕೂಡ ಸಹ ಪ್ರಾಧ್ಯಾಪಕ ಡಾ.ಅಶ್ವಿನ್ ಹೆಬ್ಬಾರ್ ಗೊಂಡಿದ್ದರು. ಕಾಲೇಜಿನ ಆಂತರಿಕ ತನಿಖಾ ವರದಿ, ಪೊಲೀಸ್ ತನಿಖಾ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುವುದಾಗಿ ಸಿಮ್ಸ್ ಆಡಳಿತಾಧಿಕಾರಿ ಉಮಾ ಡಿ ಸದಾಶಿವ ತಿಳಿಸಿದ್ದಾರೆ. https://kannadanewsnow.com/kannada/loss-of-80-thousand-crores-in-granting-funds-to-the-state-cm-siddaramaiah/ https://kannadanewsnow.com/kannada/breaking-mla-raju-kage-said-he-may-resign-in-2-days-what-did-cm-siddaramaiah-say/

Read More

ರಾಯಚೂರು : 14ನೇ ಹಣಕಾಸಿನ ಆಯೋಗದಿಂದ 15 ನೇ ಹಣಕಾಸಿನ ಆಯೋಗಕ್ಕೆ ಹೋಲಿಸಿದರೆ, ರಾಜ್ಯಕ್ಕೆ ಅನುದಾನ ನೀಡಿಕೆಯಲ್ಲಿ ಸುಮಾರು 80 ಸಾವಿರ ಕೋಟಿಗಳ ನಷ್ಟವಾಗಿದೆ. ಈ ಬಗ್ಗೆ ಯಾವುದೇ ಬಿಜೆಪಿ ಸಂಸದರೂ ಧ್ವನಿ ಎತ್ತುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ರಾಯಚೂರು ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಯವರು ಪ್ರದಾನಿ ಮೋದಿಯವರೊಂದಿಗೆ ನಿಕಟಸಂಪರ್ಕ ಹೊಂದಿರುವ ಪ್ರಭಾವಿ ಸಚಿವ ಎಂದು ಹೇಳಲಾಗುತ್ತದೆ.11495 ಕೋಟಿ ರೂ.ಗಳನ್ನು ಹಣಕಾಸಿನ ಆಯೋಗದಲ್ಲಿ ವಿಶೇಷ ಅನುದಾನ ನೀಡಲು ಸಮ್ಮತಿ ನೀಡಲಾಗಿದ್ದರೂ , ಕೇಂದ್ರ ಸರ್ಕಾರ ಈ ಅನುದಾನವನ್ನು ರಾಜ್ಯಕ್ಕೆ ಬಿಡುಗಡೆ ಮಾಡಲು ಅವರು ಯಾವುದೇ ಸಹಾಯವನ್ನು ಮಾಡಿಲ್ಲ. ಕರ್ನಾಟಕದ ಬಗ್ಗೆ ಮಾತನಾಡಲು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಯವರಿಗೆ ಯಾವುದೇ ನೈತಿಕತೆ ಇಲ್ಲ. ರಾಜ್ಯಕ್ಕೆ 11495 ಕೋಟಿ ರೂ. ಇನ್ನೂ ಬಿಡುಗಡೆಯಾಗಿಲ್ಲ ಎಂದರು. ಕಲ್ಯಾಣ ಕರ್ನಾಟಕಕ್ಕೆ ಕೇಂದ್ರದ ವಿಶೇಷ ಅನುದಾನ ಬಿಡುಗಡೆಗೆ ಒತ್ತಾಯ ದೆಹಲಿ ಪ್ರವಾಸದ ವಿವರಗಳನ್ನು ಪತ್ರಕರ್ತರಿಗೆ ತಿಳಿಸುತ್ತಾ, ರಾಷ್ಟ್ರಪತಿಗಳ ಅಂಗಳಕ್ಕೆ ಹೋಗಿರುವ ಹಲವು…

Read More

ಬೆಂಗಳೂರು: ಮಹಾರಾಷ್ಟ್ರ ಸರ್ಕಾರದ ವೃತ್ತಿಪರ ಕೋರ್ಸ್ ಗಳ ಪ್ರವೇಶ ನಿಯಂತ್ರಣ ಪ್ರಾಧಿಕಾರದ ಅಧ್ಯಕ್ಷರಾದ ಸಮೀರ್ ಕುಮಾರ್ ಬಿಸ್ವಾಸ್ ನೇತೃತ್ವದ ಉನ್ನತ ಮಟ್ಟದ ನಿಯೋಗ ಸೋಮವಾರ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಭೇಟಿ ನೀಡಿ, ಇಲ್ಲಿನ ಪರೀಕ್ಷಾ ವ್ಯವಸ್ಥೆ ಹಾಗೂ ಸುಧಾರಣಾ ಕ್ರಮಗಳ ಬಗ್ಗೆ ಅಧ್ಯಯನ ನಡೆಸಿತು. ಬಿಸ್ವಾಸ್ ಅವರ ಜತೆ ಮಹಾರಾಷ್ಟ್ರ ಸಾಮಾನ್ಯ ಪ್ರವೇಶ ಪರೀಕ್ಷಾ ಘಟಕದ ಆಯುಕ್ತರು ಹಾಗೂ ಪ್ರವೇಶ ನಿಯಂತ್ರಣ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯೂ ಆದ ಹಿರಿಯ ಐಎಎಸ್ ಅಧಿಕಾರಿ ದಿಲೀಪ್ ಸರ್ ದೇಸಾಯಿ ಅವರು ಕೂಡ ಇದ್ದರು. ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ, ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ಅವರು ಕೆಇಎ ಕಾರ್ಯವೈಖರಿ, ಪಾರದರ್ಶಕತೆ ಸಲುವಾಗಿ ಕೈಗೊಂಡ ಹಲವು ಸುಧಾರಣಾ ಕ್ರಮಗಳ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ನಿಯೋಗಕ್ಕೆ ವಿವರಿಸಿದರು. ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಅತ್ಯಂತ ಪಾರದರ್ಶಕವಾಗಿ ಪರೀಕ್ಷೆ ನಡೆಸುವುದು, ನಂತರ ಸೀಟು ಹಂಚಿಕೆ ಮಾಡುವುದರ ಬಗ್ಗೆ ವಿಸ್ತೃತವಾಗಿ ಚರ್ಚೆ ನಡೆಸಲಾಯಿತು. ಅಕ್ರಮ ತಡೆಯಲು ಕೈಗೊಂಡಿರುವ ಸುಧಾರಣಾ ಕ್ರಮಗಳ ಬಗ್ಗೆಯೂ…

Read More

ಪ್ರತಿ ನಿತ್ಯ ಕೆಲಸ ಮಾಡುವವರಲ್ಲಿ ಕುತ್ತಿಗೆ ಹಾಗೂ ಭುಜದ ನೋವು ಸರ್ವೇ ಸಾಮಾನ್ಯ, ಆದರೆ, ಈ ನೋವನ್ನು ನಿರ್ಲಕ್ಷಿಸುವುದು ಸಹ ಅಪಾಯಕ್ಕೆ ಅವಕಾಶ ಮಾಡಿಕೊಟ್ಟಂತೆ. ಕುತ್ತಿಗೆ ಮತ್ತು ಭುಜದ ನೋವು ಸಾಮಾನ್ಯ ದೂರುಗಳಾಗಿದ್ದು ಅದು ದೈನಂದಿನ ಜೀವನದ ಮೇಲೆ ಗಮನಾರ್ಹ ಪರಿಣಾಮ ಬೀರುತ್ತದೆ. ಈ ಲಕ್ಷಣಗಳು ಮಸ್ಕ್ಯುಲೋಸ್ಕೆಲಿಟಲ್ ಸಮಸ್ಯೆಗಳಿಂದ ಉಂಟಾಗುತ್ತವೆ ಎಂದು to ಊಹಿಸುವುದು ಸುಲಭವಾದರೂ, ನರವೈಜ್ಞಾನಿಕ ಸಮಸ್ಯೆಗಳ ಆಧಾರವನ್ನು ಪರಿಗಣಿಸುವುದು ಅತ್ಯಗತ್ಯ. ನರವೈಜ್ಞಾನಿಕ ಪರಿಸ್ಥಿತಿಗಳು ಕುತ್ತಿಗೆ ಮತ್ತು ಅಂಗಗಳಂತೆ ಪ್ರಕಟವಾಗಬಹುದು, ಆಗಾಗ್ಗೆ ಹೆಚ್ಚು ನೇರವಾದ ಮಸ್ಕ್ಯುಲೋಸ್ಕೆಲಿಟಲ್ ಸಮಸ್ಯೆಗಳಾಗಿ ಮಾಸ್ಕೆರಾಡಿಂಗ್ ಮಾಡುತ್ತದೆ. ನರವೈಜ್ಞಾನಿಕ ಸಮಸ್ಯೆಗಳು ಮತ್ತು ಕುತ್ತಿಗೆ ಮತ್ತು ಕೈಕಾಲುಗಳಲ್ಲಿನ ನೋವಿನ ನಡುವಿನ ಸಂಕೀರ್ಣ ಸಂಬಂಧವನ್ನು ಅರ್ಥಮಾಡಿಕೊಳ್ಳುವುದು ನಿಖರವಾದ ರೋಗನಿರ್ಣಯ ಮತ್ತು ಪರಿಣಾಮಕಾರಿ ಚಿಕಿತ್ಸೆಗೆ ನಿರ್ಣಾಯಕವಾಗಿದೆ. ನೋವಿನಲ್ಲಿ ನರಮಂಡಲದ ಪಾತ್ರ ಮೆದುಳು ಮತ್ತು ದೇಹದ ಉಳಿದ ಭಾಗಗಳ ನಡುವೆ ಸಂಕೇತಗಳನ್ನು ರವಾನಿಸುವಲ್ಲಿ ನರಮಂಡಲವು ಪ್ರಮುಖ ಪಾತ್ರ ವಹಿಸುತ್ತದೆ. ನರವೈಜ್ಞಾನಿಕ ಸಮಸ್ಯೆಗಳು ಸಂಭವಿಸಿದಾಗ, ಈ ಸಂಕೇತಗಳು ಅಡ್ಡಿಪಡಿಸಬಹುದು, ಇದು ನೋವು, ಮರಗಟ್ಟುವಿಕೆ, ಜುಮ್ಮೆನಿಸುವಿಕೆ…

Read More

ಶಿವಮೊಗ್ಗ: ರಾಜ್ಯ ಕಾಂಗ್ರೆಸ್ ಸರ್ಕಾರದ ವಸತಿ ಹಗರಣ ಬೃಹತ್ ಸದ್ದು ಮಾಡುತ್ತಿದೆ. ಈ ಹಗರಣದಲ್ಲಿ ವಸತಿ ಸಚಿವರ ರಾಜೀನಾಮೆಗೆ ಸ್ವಪಕ್ಷೀಯ ಶಾಸಕರಿಂದಲೇ ಆಗ್ರಹ ಕೇಳಿ ಬಂದಿದೆ. ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ವಸತಿ ಹಗರಣದಲ್ಲಿ ಸಚಿವರ ರಾಜೀನಾಮೆಗೆ ಆಗ್ರಹಿಸಿದ್ದಾರೆ. ಇಂದು ಶಿವಮೊಗ್ಗದ ಸಾಗರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ದೇಶದಲ್ಲಿ ರಸಗೊಬ್ಬರದ ಬೆಲೆ ಜಾಸ್ತಿಯಾಗಿದೆ. ಸುಮಾರು 160 ರಿಂದ 180 ಒಂದು ಚೀಲಕ್ಕೆ ಜಾಸ್ತಿ ಮಾಡಿದ್ದಾರೆ. ಇದರಿಂದ ದೇಶದ ಸಣ್ಣ ರೈತರಿಗೆ ಹೊಡೆತ ಬಿದ್ದಿದೆ. ಕರ್ನಾಟಕದಲ್ಲಿ ಹಾಲಿನ ದರ ಒಂದು ರೂಪಾಯಿ, ಎರಡು ರೂಪಾಯಿ ಮಾಡಿದಾಗ ಬೀದಿಗೆ ಬಂದು ಬಿಜೆಪಿಯ ನಾಯಕರು ಬಾಯಿ ಬಡಿದುಕೊಂಡರು. ಈ ದೇಶದ ರೈತರ ಮೇಲೆ ರಸಗೊಬ್ಬರದ ಬಾರ ಹೇರಿದ್ದಾರಲ್ಲ. ಇದರ ಬಗ್ಗೆ ಯಾರಾದರೂ ಚಕಾರ ಎತ್ತಿದ್ದೀರಾ? ಎಂದು ಪ್ರಶ್ನಿಸಿದರು. ಈ ದೇಶದ ರೈತರ ಪರ ಅಂತ ಮೋದಿ ಹೇಳುತ್ತಿದ್ದಾರೆ. ರಸಗೊಬ್ಬರ ದರ ಏರಿಕೆ ಮಾಡಿದ್ದಾ ಮೋದಿಜೀ ಅವರ ಕೊಡುಗೆ? ನಿಮಗೆ ನಾಚಿಕೆ ಆಗಬೇಕು ಕರ್ನಾಟಕದ ಬಿಜೆಪಿ…

Read More

ಬೆಂಗಳೂರು: ಅರಣ್ಯ, ಪರಿಸರ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ ಖಂಡ್ರೆ ಅವರ ಸೂಚನೆ ಮೇರೆಗೆ ಬೆಂಗಳೂರು ಪೂರ್ವ ತಾಲೂಕು ಬಿದರಹಳ್ಳಿ ಹೋಬಳಿ, ಕಾಡುಗೋಡಿ ಪ್ಲಾಂಟೇಷನ್ ನ ಸರ್ವೆ ನಂ.1ರಲ್ಲಿ 120 ಎಕರೆ ಅರಣ್ಯ ಭೂಮಿ ಒತ್ತುವರಿ ತೆರವುಗೊಳಿಸಲಾಗಿದೆ. ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ಇಂದು ಬೆಳಗ್ಗೆಯೇ ಜೆಸಿಬಿಯೊಂದಿಗೆ ಕಾರ್ಯಾಚರಣೆಗೆ ಇಳಿದ ಬೆಂಗಳೂರು ನಗರ ಅರಣ್ಯ ಇಲಾಖೆ ಅಧಿಕಾರಿಗಳ ನೇತೃತ್ವದ ತಂಡ ಕಾಡುಗೋಡಿಯ ಪ್ಲಾಂಟೇಷನ್ ನ ಅರಣ್ಯ ಭೂಮಿಯ ಒತ್ತುವರಿ ತೆರವು ಮಾಡಿ, ಮರು ವಶಕ್ಕೆ ಪಡೆದು, ಗಡಿ ಗುರುತಿಸಿ ಸ್ಥಳೀಯ ಪ್ರಭೇದದ ಸಸಿಗಳನ್ನು ನೆಡುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಇಂದು ವಶಪಡಿಸಿಕೊಳ್ಳಲಾದ ಅರಣ್ಯ ಭೂಮಿಯ ಮಾರುಕಟ್ಟೆ ಮೌಲ್ಯ ಸುಮಾರು 4 ಸಾವಿರ ಕೋಟಿ ರೂಪಾಯಿಗೂ ಅಧಿಕ ಎಂದು ಅಂದಾಜಿಸಲಾಗಿದೆ. ಕಾಡುಗೋಡಿ ಅರಣ್ಯ ಪ್ರದೇಶ ಕುರಿತಂತೆ ಇತ್ತೀಚೆಗೆ ನಡೆದ ಸಭೆಯಲ್ಲಿ ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ಅವರು, ಬೆಂಗಳೂರು ವ್ಯಾಪಕವಾಗಿ ಬೆಳೆಯುತ್ತಿದ್ದು, ಹಸಿರು ಹೊದಿಕೆ ದಿನದಿಂದ ದಿನಕ್ಕೆ ಕ್ಷೀಣಿಸುತ್ತಿದೆ. ಹೀಗಾಗಿ ಶ್ವಾಸತಾಣಗಳ ಸಂರಕ್ಷಣೆ…

Read More

ಬಳ್ಳಾರಿ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜೂ.25 ರಂದು ಬೆಳಿಗ್ಗೆ 10 ಗಂಟೆಯಿAದ ಮಧ್ಯಾಹ್ನ 02 ಗಂಟೆಯವರೆಗೆ ನಗರದ ಹಳೆಯ ತಾಲ್ಲೂಕು ಕಚೇರಿ ಆವರಣದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಪಿ.ಎಸ್.ಹಟ್ಟಪ್ಪ ಅವರು ತಿಳಿಸಿದ್ದಾರೆ. ನಗರದ ಜೊಯಾಲೂಕಸ್ ಜ್ಯೂವೆಲರಿ ಕಂಪನಿಯವರು ತಮ್ಮಲ್ಲಿರುವ ಖಾಲಿ ಹುದ್ದೆಗಳಿಗೆ ನೇರ ಸಂದರ್ಶನ ಮೂಲಕ ನೇಮಕ ಮಾಡಿಕೊಳ್ಳುವರು. 25 ವರ್ಷ ಕೆಳಗಿನ ಆಸಕ್ತ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು. ಸಂದರ್ಶನದಲ್ಲಿ ಭಾಗವಹಿಸಲು ಯಾವುದೇ ಶುಲ್ಕವಿರುವುದಿಲ್ಲ. ವಿದ್ಯಾರ್ಹತೆ: ಎಸ್‌ಎಸ್‌ಎಲ್‌ಸಿ, ಪಿಯುಸಿ, ಡಿಪ್ಲೋಮಾ, ಪದವಿ ವಿದ್ಯಾರ್ಹತೆ ಹೊಂದಿರಬೇಕು. ಆಸಕ್ತ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಭಾಗವಹಿಸಿ, ಇದರ ಸದುಪಯೋಗ ಪಡೆದುಕೊಳ್ಳಬೇಕು. ಪುರುಷರು ಮತ್ತು ಮಹಿಳೆಯರು ಭಾಗವಹಿಸಬಹುದು. ಸಂದರ್ಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ತಮ್ಮ ಆಧಾರ್ ಕಾರ್ಡ್ ಪ್ರತಿ ಮತ್ತು ಸ್ವ-ವಿವರ (ಬಯೋಡೇಟಾ) ಗಳೊಂದಿಗೆ ಅಂದು ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ…

Read More

ಬೆಂಗಳೂರು: ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮ ವತಿಯಿಂದ 2025-26ನೇ ಸಾಲಿಗೆ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳಡಿ ಸಹಾಯಧನ ಮತ್ತು ಸಾಲ-ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತೆ: ನಿಗಮದ ಯೋಜನೆಗಳಲ್ಲಿ ಸೌಲಭ್ಯಗಳನ್ನು ಪಡೆಯಲು ಸಾಮಾನ್ಯ ವರ್ಗದ ಆರ್ಯವೈಶ್ಯ ಸಮುದಾಯಕ್ಕೆ ಸೇರಿರಬೇಕು ಮತ್ತು ನಮೂನೆ-ಜಿ ಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರವಿರಬೇಕು. ಅರ್ಜಿ ಸಲ್ಲಿಸುವಾಗ ಅರ್ಜಿದಾರರು ತಮ್ಮ ಮೊಬೈಲ್ ಸಂಖ್ಯೆ ಹಾಗೂ ಬ್ಯಾಂಕ್ ಖಾತೆಯನ್ನು ತಮ್ಮ ಆಧಾರ್ ಸಂಖ್ಯೆಗೆ ಜೋಡಣೆ ಮಾಡಿರಬೇಕು. ಅರ್ಹ ಅರ್ಜಿದಾರರನ್ನು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ರಚಿಸಿರುವ ಜಿಲ್ಲಾ ಮಟ್ಟದ ಆಯ್ಕೆ ಸಮಿತಿ ಮೂಲಕ ಆಯ್ಕೆ ಮಾಡಲಾಗುತ್ತದೆ. 2019-20 ಹಾಗೂ 2021-22ನೇ ಸಾಲಿನಲ್ಲಿ ಸ್ವಯಂ-ಉದ್ಯೋಗ ನೇರಸಾಲ ಯೋಜನೆಯಡಿ ಸಾಲ ಪಡೆದು ಸಕಾಲದಲ್ಲಿ ಪೂರ್ಣ ಪ್ರಮಾಣದಲ್ಲಿ ಮರುಪಾವತಿಸಿದ ಫಲಾನುಭವಿಗಳಿಗೆ ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಯೋಜನೆಗಳ ವಿವರ: ಸ್ವಯಂ ಉದ್ಯೋಗ ಸಾಲ ಯೋಜನೆ, ಆರ್ಯವೈಶ್ಯ ಆಹಾರ ವಾಹಿನಿ ಯೋಜನೆ (ಬ್ಯಾಂಕುಗಳ ಸಹಯೋಗದೊಂದಿಗೆ), ವಾಸವಿ ಜಲಶಕ್ತಿ ಯೋಜನೆ, ಅರಿವು ಶೈಕ್ಷಣಿಕ ಸಾಲ…

Read More

ದಾವಣಗೆರೆ : ದಾವಣಗೆರೆ ಜಿಲ್ಲೆಯು ರಾಜ್ಯದ ಮಧ್ಯಭಾಗದಲ್ಲಿದ್ದು, ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಐತಿಹಾಸಿಕ ಹಾಗೂ ಪ್ರಾಕೃತಿಕ ಸುಂದರವಾದ ಪ್ರವಾಸಿ ತಾಣವನ್ನು ಒಳಗೊಂಡ ಏಷ್ಯಾದ 2ನೇ ಅತೀ ದೊಡ್ಡ ಮಾನವ ನಿರ್ಮಿತ ಶಾಂತಿಸಾಗರ ಜಿಲ್ಲೆಯ ಪ್ರವಾಸಿ ತಾಣಗಳ ಪಟ್ಟಿಯಲ್ಲಿ ಪ್ರಮುಖ ಪ್ರವಾಸಿ ತಾಣವಾಗಿದೆ. ಪ್ರವಾಸಿಗರ ಅನುಕೂಲಕ್ಕಾಗಿ, ಪ್ರವಾಸೋದ್ಯಮ ಇಲಾಖೆಯಿಂದ ಉದ್ಯಾನವನ, ಪಾರ್ಕಿಂಗ್, ಬೋಟಿಂಗ್ ಸೌಲಭ್ಯ ಹಾಗೂ ವಾಣಿಜ್ಯ ಕೊಠಡಿ, ಶೌಚಾಲಯಗಳನ್ನು ನಿರ್ಮಿಸಲಾಗಿದೆ. ಒಂದೆಡೆ ಪ್ರವಾಸಿಗರನ್ನು ಸೆಳೆಯುತ್ತಿರುವುದರಿಂದ ಪ್ರತಿ ದಿನ ಹೆಚ್ಚಿನ ಪ್ರಮಾಣದಲ್ಲಿ ಪ್ರವಾಸಿಗರು ಬೇಟಿ ನೀಡುತ್ತಾರೆ. ಇನ್ನೊಂದೆಡೆ ಅತಿಯಾದ ಪ್ಲಾಸ್ಟಿಕ್ ಬಳಕೆಯಿಂದ ನೈಸರ್ಗಿಕ ವಾತಾವರಣ ಕಲುಷಿತಗೊಳ್ಳುತ್ತಿದೆ. ಪ್ರವಾಸಿಗರು ನೀರಿನ ಬಾಟಲಿ, ಪಾನೀಯ ಬಾಟಲಿ, ಪ್ಲಾಸ್ಟಿಕ್ ಕವರ್, ಚಾಕಲೇಟ್ ಕವರ್, ಚಿಪ್ಸ್ ಪ್ಯಾಕೇಟ್ ಇತ್ಯಾದಿ ಏಕ ಬಳಕೆಯ ಪ್ಲಾಸ್ಟಿಕ್‍ಗಳನ್ನು ಕೆರೆಯಲ್ಲಿ ಮತ್ತು ಎಲ್ಲಂದರಲ್ಲಿ ಹಾಕುತ್ತಿರುವುದರಿಂದ ಕೆರೆ ಮತ್ತು ಪ್ರವಾಸಿ ಸ್ಥಳದ ಸುತ್ತಮುತ್ತಲಿನ ಪರಿಸರ ಹಾಳಾಗುತ್ತಿದೆ. ನೀರಿನಲ್ಲಿ ಹಾಕುವುದರಿಂದ ಜಲಚರಗಳಿಗೂ ಸಹ ಹಾನಿಯಾಗುತ್ತಿದೆ. ಅಲ್ಲದೇ ಪ್ರಸ್ತುತ ಈ ಕೆರೆಯ ನೀರನ್ನು ಬಹುಗ್ರಾಮ ಕುಡಿಯುವ ನೀರಿಗಾಗಿ ಸರಬರಾಜು ಮಾಡಲಾಗುತ್ತಿದೆ.…

Read More

ಚಿತ್ರದುರ್ಗ: ಕ್ರೀಡೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವ ಮೂಲಕ ದೈಹಿಕ ಮತ್ತು ಮಾನಸಿಕವಾಗಿ ಸದೃಢರಾಗಬೇಕು ಎಂದು ಸಮಾಜ ಸೇವಕ ಜಿ. ಜಯರಾಮಯ್ಯ ಅಭಿಪ್ರಾಯಪಟ್ಟರು. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಆನೆಸಿದ್ರಿ ಗೊಲ್ಲರಹಟ್ಟಿ ಗ್ರಾಮದಲ್ಲಿ ಯಧು ಕ್ರಿಕೆಟರ್ಸ್ ಏರ್ಪಡಿಸಿದ್ದ ಟೆನ್ನಿಸ್ ಬಾಲ್ ಕ್ರಿಕೆಟ್ ಟ್ರೋಫಿ ಪಂದ್ಯಾವಳಿಗೆ ಚಾಲನೆ ನೀಡಿ, ಕ್ರೀಡಾಪಟುಗಳಿಗೆ ಶುಭ ಹಾರೈಸಿ, ಮಾತನಾಡಿದರು. ಯುವ ಜನತೆ ಕ್ರೀಡ್ರೆಗಳ ಮಹತ್ವ ಅರಿತು, ಅಭಿವೃದ್ಧಿ ಪಡಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಜೊತೆಗೆ ಕ್ರೀಡೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ದೇಹ ಮತ್ತು ಮನಸ್ಸು ಸದೃಢರಾಗಿರುತ್ತದೆ. ಕ್ರೀಡೆಯಿಂದ ಯುವಜನರಲ್ಲಿ ನಾಯಕತ್ವ ಗುಣ ಮತ್ತು ಕ್ರೀಡಾ ಮನೋಭಾವ ಬೆಳೆಸಲು ಉಪಯುಕ್ತವಾಗಿವೆ. ಕ್ರೀಡೆಯಲ್ಲಿ ಸೋಲು ಗೆಲುವು ಸಾಮಾನ್ಯ, ಆದರೆ ಕ್ರೀಡೆಯಲ್ಲಿ ಪಾಲ್ಗೋಳ್ಳುವುದು ಮುಖ್ಯವಾಗಿದೆ. ಕ್ರೀಡೆಗಳಲ್ಲಿ ಗೆಲುವು ಸ್ವೀಕರಿಸಿದಂತೆ ಸೋಲನ್ನು ಹಾಗೆಯೇ ಸಮಾನವಾಗಿ ಸ್ವೀಕರಿಸಬೇಕು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಮುಖಂಡರಾದ ಡಾಬಾ ಚಿಕ್ಕಣ್ಣ, ಗ್ರಾಪಂ ಸದಸ್ಯ ಮಹಾಲಿಂಗಪ್ಪ, ತಿಪ್ಪಣ್ಣ, ರಾಮಣ್ಣ, ಚಿತ್ತಯ್ಯ, ಶಿವಣ್ಣ, ನಾಗಪ್ಪ, ಕಿಟ್ಟಿ ಸೇರಿದಂತೆ ಮತ್ತಿತರರು ಇದ್ದರು.

Read More