Author: kannadanewsnow09

ಬೆಂಗಳೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಹಾಸ್ಟೆಲ್‌ನಲ್ಲಿ ಪಾರದರ್ಶಕತೆ ಹಾಗೂ ಉತ್ತಮ ಗುಣಮಟ್ಟದ ಪೌಷ್ಟಿಕಾಂಶದ ಆಹಾರ ಪೂರೈಕೆಯೇ ಇಲಾಖೆಯ ಮುಖ್ಯ ಗುರಿ ಎಂದು ಇಲಾಖೆ ಆಯುಕ್ತರು ಅಕ್ರಂ ಪಾಷ ಹೇಳಿದರು. ಇಲಾಖೆ ವತಿಯಿಂದ ರಾಜ್ಯಾದ್ಯಂತ ನಡೆಸುವ ವಸತಿ ನಿಲಯಗಳಿಗೆ ಆಹಾರ ಸರಬರಾಜು ಪದ್ಧತಿ ಉನ್ನತೀಕರಣ ಹಾಗೂ ಗುಣಮಟ್ಟದ ಆಹಾರ ಪೂರೈಕೆ ವ್ಯವಸ್ಥೆಯನ್ನು ಸಂಪೂರ್ಣ ಗಣಕೀಕರಣಗೊಳಿಸಿದ ನಿಲಯ ಪೋರ್ಟಲ್ ಗೆ ಶನಿವಾರ ಹೊಸಕೋಟೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಆಯುಕ್ತರು ಚಾಲನೆ ನೀಡಿ ಮಾತನಾಡಿದರು‌. 31 ಜಿಲ್ಲೆಗಳಲ್ಲಿ ಹೊಸ ಆಹಾರ ಸರಬರಾಜು ಪದ್ಧತಿಯನ್ನು ಅಳವಡಿಸಿಕೊಳ್ಳುವ ಮೂಲಕ ರಾಜ್ಯದಲ್ಲಿ ಪ್ರಥಮ ಬಾರಿಗೆ ಆಹಾರ ಪದ್ಧತಿಯನ್ನು ಗಣಕೀಕರಣಗೊಳಿಸಿದ ಪೋರ್ಟಲ್‌ನ್ನು ಜಾರಿಗೆ ತರಲಾಗಿದೆ. ಈ ಮೂಲಕ ಕ್ರಾಂತಿಕಾರಕ ಬದಲಾವಣೆಗೆ ಇಲಾಖೆ ಮುಂದಡಿ ಇಟ್ಟಿದೆ ಎಂದರು.‌ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಹಾರ ಪೂರೈಕೆ ಮಾಡಬೇಕೆಂದು ಇಲಾಖೆ ಸಚಿವರಾದ ಶಿವರಾಜ್ ಎಸ್.ತಂಗಡಗಿ ಅವರ ಇಚ್ಛೆಯಾಗಿತ್ತು. ಟೆಂಡರ್ ದಾರರು ಆಹಾರ ಉತ್ತಮ ಗುಣಮಟ್ಟದ ಪೌಷ್ಟಿಕಾಂಶದ ಆಹಾರ ಪೂರೈಸಬೇಕು ಎಂದು ಆಯುಕ್ತರು ತಿಳಿಸಿದರು. ಯಾವುದೇ ರಾಜ್ಯದಲ್ಲೂ ಸರ್ಕಾರದಿಂದ…

Read More

ಬೆಂಗಳೂರು: ಬಿಬಿಎಂಪಿ ಚುನಾವಣೆಗೆ ಮುಹೂರ್ತ ಫಿಕ್ಸ್ ಎನ್ನುವ ಸುಳಿವನ್ನು ಸಚಿವ ರಾಮಲಿಂಗಾರೆಡ್ಡಿ ನೀಡಿದ್ದಾರೆ. ಮೇ ತಿಂಗಳಿನಲ್ಲಿ ಬಿಬಿಎಂಪಿ ಚುನಾವಣೆ ನಡೆಯಲಿದೆ ಎಂಬುದಾಗಿ ಮಹತ್ವದ ಅಪ್ ಡೇಟ್ ನೀಡಿದ್ದಾರೆ. ವಿಧಾನಸೌಧದಲ್ಲಿ ಇಂದು ಮಾತನಾಡಿದಂತ ಅವರು, ಬಿಜೆಪಿಯವರಿಗೆ ಬೆಂಗಳೂರಿನ ಅಭಿವೃದ್ಧಿ ಬೇಕಾಗಿಲ್ಲ. ಅವರಿಗೆ ವೋಟ್ ಮಾತ್ರವೇ ಬೇಕಿದೆ. ಹೀಗಾಗಿ ಗ್ರೇಟರ್ ಬೆಂಗಳೂರು ವಿಧೇಯಕವನ್ನು ಅವರು ವಿರೋಧಿಸುತ್ತಿದ್ದಾರೆ ಎಂಬುದಾಗಿ ಆಕ್ರೋಶ ವ್ಯಕ್ತ ಪಡಿಸಿದರು. ಬಿಬಿಎಂಪಿ ಚುನಾವಣೆ ಮೇಯಲ್ಲಿ 100% ಆಗಲಿದೆ. ಗ್ರೇಟರ್ ಬೆಂಗಳೂರು ಆದರೇ ವಾರ್ಡ್ ಜಾಸ್ತಿ ಆಗಬಹುದು. 2 ರಿಂದ 3 ಪಾಲಿಕೆ ಆಗಬಹುದು. ಈಗಿನ ಬೆಂಗಳೂರನ್ನು ಒಬ್ಬ ಮೇಯರ್, ಕಮೀಷನರ್ ಆಡಳಿತ ಮಾಡಲು ಸಾಧ್ಯವಿಲ್ಲ ಎಂದರು. https://kannadanewsnow.com/kannada/bjp-to-hold-protest-against-state-government-in-bengaluru-on-march-5/ https://kannadanewsnow.com/kannada/drunk-man-sets-his-house-on-fire/ https://kannadanewsnow.com/kannada/breaking-woman-staff-sexually-assaulted-at-bbmp-office-this-officer-asks-if-she-has-contracted-hiv-if-she-goes-on-leave/

Read More

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಸಿಡಿದೆದ್ದಿದೆ. ಗ್ಯಾರಂಟಿಗಳಿಗೆ ಎನ್ ಸಿ ಇ ಪಿ ಹಾಗೂ ಟಿಎಸ್ಪಿ ಅನುದಾನ ಬಳಕೆ ಆರೋಪದ ಹಿನ್ನಲೆಯಲ್ಲಿ ಮಾರ್ಚ್.5ರಂದು ಬೆಂಗಳೂರಲ್ಲಿ ಬಿಜೆಪಿಯಿಂದ ಪ್ರತಿಭಟನೆಗೆ ನಿರ್ಧರಿಸಲಾಗಿದೆ. ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಗ್ಯಾರಂಟಿ ಯೋಜನೆಗಳಿಗೆ ಎಸ್ಸಿ, ಎಸ್ಟಿಗೆ ಮೀಸಲಾಗಿರುವಂತ ಎನ್ ಸಿ ಇ ಪಿ ಹಾಗೂ ಟಿ ಎಸ್ ಪಿ ಅನುದಾನವನ್ನು ವರ್ಗಾವಣೆ ಮಾಡಲಾಗುತ್ತಿದೆ. ಇದು ನಿಲ್ಲಿಸಬೇಕು ಎಂಬುದಾಗಿ ಬಿಜೆಪಿ ಆಗ್ರಹಿಸಿತ್ತು. ಈ ಬೆನ್ನಲ್ಲೇ ನಾಳೆ ಎಸ್ಸಿ ಎಸ್ಟಿ ಸಮುದಾಯದವರಿಗಾಗಿ ಮೀಸಲಿಟ್ಟಿದ್ದಂತ ಅನುದಾನ ಬಳಕೆ ಮಾಡುತ್ತಿರುವ ಸಂಬಂಧ ನಾಳೆ ದಲಿತ ಸಂಘಟನೆಗಳೊಂದಿಗೆ ಮಹತ್ವದ ಚರ್ಚೆ ನಡೆಸಲಿದೆ. ನಾಳಿನ ದಲಿತ ಸಂಘಟನೆಗಳ ಜೊತೆಗಿನ ಬಿಜೆಪಿ ಮುಖಂಡರ ಸಭೆಯಲ್ಲಿ ಹೋರಾಟದ ರೂಪುರೇಷೆಗಳ ಬಗ್ಗೆ ಚರ್ಚೆ ನಡೆಸಲಿದೆ. ಬೆಂಗಳೂರಿನ ಶಾಸಕರ ಭವನದಲ್ಲಿ ಈ ಸಭೆ ನಡೆಯಲಿದೆ. ಮಾರ್ಚ್.5ರಂದು ಬೆಂಗಳೂರಲ್ಲಿ ಯಾರ ರೀತಿಯಲ್ಲಿ ಹೋರಾಟ ನಡೆಸಬೇಕು ಎನ್ನುವ ಬಗ್ಗೆ ಚರ್ಚೆ ನಡೆಯಲಿದೆ. https://kannadanewsnow.com/kannada/no-fuel-for-old-vehicles-above-15-years-in-delhi-after-march-31-manjinder-sirsa/ https://kannadanewsnow.com/kannada/breaking-woman-staff-sexually-assaulted-at-bbmp-office-this-officer-asks-if-she-has-contracted-hiv-if-she-goes-on-leave/ https://kannadanewsnow.com/kannada/european-allies-canada-back-zelenskys-verbal-spat-with-trump-trump-zelensky/

Read More

ನವದೆಹಲಿ: ರಾಷ್ಟ್ರದ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ತಡೆಗಟ್ಟುವ ಸಂಬಂಧ ಬಿಜೆಪಿ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಮಾರ್ಚ್ 31ರ ನಂತರ 15 ವರ್ಷಕ್ಕಿಂತ ಹಳೆಯ ವಾಹನಗಳಿಗೆ ಪೆಟ್ರೋಲ್ ಪಂಪ್ಗಳಲ್ಲಿ ಇಂಧನ ನೀಡದಂತೆ ಸಚಿವ ಮಂಜಿಂದರ್ ಸಿರ್ಸಾ ಆದೇಶ ಮಾಡಿದ್ದಾರೆ. ಮಾರ್ಚ್ 31 ರ ನಂತರ ದೆಹಲಿ ಸರ್ಕಾರವು 15 ವರ್ಷಕ್ಕಿಂತ ಹಳೆಯದಾದ ವಾಹನಗಳಿಗೆ ಪೆಟ್ರೋಲ್ ನೀಡುವುದನ್ನು ನಿಲ್ಲಿಸಲಿದೆ ಎಂದು ಪರಿಸರ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ ಶನಿವಾರ ಪ್ರಕಟಿಸಿದ್ದಾರೆ. ರಾಷ್ಟ್ರ ರಾಜಧಾನಿಯಲ್ಲಿ ವಾಯುಮಾಲಿನ್ಯವನ್ನು ಎದುರಿಸುವ ಕ್ರಮಗಳ ಬಗ್ಗೆ ಚರ್ಚಿಸಲು ಅಧಿಕಾರಿಗಳೊಂದಿಗಿನ ಸಭೆಯ ನಂತರ, ವಾಹನ ಹೊರಸೂಸುವಿಕೆ ಮತ್ತು ಮಾಲಿನ್ಯವನ್ನು ನಿಗ್ರಹಿಸಲು ಸರ್ಕಾರ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಸಿರ್ಸಾ ಹೇಳಿದರು. ಹಳೆಯ ವಾಹನಗಳ ಮೇಲಿನ ನಿರ್ಬಂಧಗಳು, ಕಡ್ಡಾಯ ಹೊಗೆ ವಿರೋಧಿ ಕ್ರಮಗಳು ಮತ್ತು ಎಲೆಕ್ಟ್ರಿಕ್ ಸಾರ್ವಜನಿಕ ಸಾರಿಗೆಗೆ ಪರಿವರ್ತನೆ ಸೇರಿದಂತೆ ಪ್ರಮುಖ ನೀತಿ ನಿರ್ಧಾರಗಳ ಮೇಲೆ ಸಭೆ ಕೇಂದ್ರೀಕರಿಸಿತು. “ನಾವು ಪೆಟ್ರೋಲ್ ಪಂಪ್ಗಳಲ್ಲಿ ಗ್ಯಾಜೆಟ್ಗಳನ್ನು ಸ್ಥಾಪಿಸುತ್ತಿದ್ದೇವೆ. ಅದು 15 ವರ್ಷಕ್ಕಿಂತ ಹಳೆಯ…

Read More

ಮೈಸೂರು: ಜಿಲ್ಲೆಯಲ್ಲಿ ಕುಡಿದ ಮತ್ತಿನಲ್ಲಿ ತನ್ನ ಮನೆಗೆ ತಾನೇ ವ್ಯಕ್ತಿಯೊಬ್ಬ ಬೆಂಕಿ ಇಟ್ಟಿರುವಂತ ಘಟನೆ ಮೈಸೂರಿನ ಅಗ್ರಹಾರದ ಮಧುವನ ಬಡಾವಣೆಯಲ್ಲಿ ನಡೆದಿದೆ. ಕಿಡಿಗೇಡಿಯ ಕೃತ್ಯದಿಂದ ಇಡೀ ಮನೆಯೇ ಸುಟ್ಟು ಹೋಗಿರುವಂತ ಘಟನೆ ನಡೆದಿದೆ. ಮೈಸೂರಿನ ಮಧುವನ ಬಡಾವಣೆಯಲ್ಲಿ ಗುರು ಎಂಬಾತ ಮನೆಯವರೊಂದಿಗೆ ಕುಡಿದ ನಶೆಯಲ್ಲಿ ಜಗಳ ಆಡಿದ್ದಾನೆ. ಇದೇ ಕಾರಣದಿಂದ ಬೀಡಿ ಸೇದುತ್ತಿದ್ದಂತ ಆತ, ಅದನ್ನು ಬೆಡ್ ಶೀಟ್ ಮೇಲೆ ಇಟ್ಟು  ಆಚೆ ಬಂದಿದ್ದಾನೆ. ಬೀಡಿಯ ಕಿಡಿಯಿಂದ ಬೆಡ್ ಶೀಟ್ ಹಾಗೂ ಹಾಸಿಗೆಗೆ ಹೊತ್ತಿಕೊಂಡ ಬೆಂಕಿ, ಆ ಬಳಿಕ ಇಡೀ ಮನೆಗೆ ವ್ಯಾಪಿಸಿದೆ. ಬೆಂಕಿ ನಂದಿಸಲು ಮನೆಯವರು ಎಷ್ಟೇ ಪ್ರಯತ್ನ ಪಟ್ಟರೂ ಅದು ಸಾಧ್ಯವಾಗಿಲ್ಲ. ಕ್ಷಣಾರ್ಧದಲ್ಲಿ ಬೆಂಕಿ ಸಂಪೂರ್ಣ ಮನೆಗೆ ವ್ಯಾಪಿಸಿ ಹೊತ್ತಿ ಉರಿದಿದೆ. ಬೆಂಕಿಯ ಕೆನ್ನಾಲಿಗೆಯಿಂದಾಗಿ ಮನೆಯಲ್ಲಿದ್ದಂತ ಬಟ್ಟೆ, ದವಸ, ಧಾನ್ಯ ಸೇರಿದಂತೆ ಇತರೆ ವಸ್ತುಗಳು ಸುಟ್ಟು ಹೋಗಿದ್ದಾವೆ. ಸ್ಥಳಕ್ಕೆ ಆಗಮಿಸಿದಂತ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. https://kannadanewsnow.com/kannada/uttarakhand-four-killed-50-rescued-5-labourers-missing/ https://kannadanewsnow.com/kannada/there-will-be-a-major-change-in-state-politics-siddaramaiah-holimata-prediction/

Read More

ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಶುಕ್ರವಾರ ಸಂಭವಿಸಿದ ಹಿಮಪಾತದಲ್ಲಿ ಗಡಿ ಗ್ರಾಮ ಮಾನಾ ಬಳಿ ಗಡಿ ರಸ್ತೆಗಳ ಸಂಸ್ಥೆ (ಬಿಆರ್ಒ) ಶಿಬಿರ ಹೂತುಹೋದ ನಂತರ ರಕ್ಷಣಾ ಕಾರ್ಯಾಚರಣೆಯನ್ನು ತೀವ್ರಗೊಳಿಸಲಾಗಿದೆ. ಈವರೆಗೆ ನಾಲ್ವರು ಸಾವನ್ನಪ್ಪಿದ್ದು, 50 ಜನರನ್ನು ರಕ್ಷಣೆ ಮಾಡಲಾಗಿದೆ. ಇನ್ನೂ ಐವರು ಕಾರ್ಮಿಕರು ನಾಪತ್ತೆಯಾಗಿದ್ದು, ಅವರ ಪತ್ತೆಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಹಿಮಪಾತದ ಅವಶೇಷಗಳಿಂದ ರಕ್ಷಿಸಲ್ಪಟ್ಟ 50 ಕಾರ್ಮಿಕರಲ್ಲಿ ನಾಲ್ವರು ಗಾಯಗಳಿಗೆ ಚಿಕಿತ್ಸೆಯ ಸಮಯದಲ್ಲಿ ಸಾವನ್ನಪ್ಪಿದ್ದಾರೆ. ಐವರು ಕಾರ್ಮಿಕರು ಸಿಕ್ಕಿಬಿದ್ದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಏತನ್ಮಧ್ಯೆ, ಹಿಮಪಾತದಿಂದಾಗಿ ರಸ್ತೆಗಳು ನಿರ್ಬಂಧಿಸಲ್ಪಟ್ಟಿರುವುದರಿಂದ ಭಾರತೀಯ ವಾಯುಪಡೆ (ಐಎಎಫ್) ತನ್ನ ಎಂಐ -17 ವಿ 5 ಮಧ್ಯಮ-ಲಿಫ್ಟ್ ಹೆಲಿಕಾಪ್ಟರ್ಗಳು ಮತ್ತು ಲಘು ಹೆಲಿಕಾಪ್ಟರ್ಗಳನ್ನು ಪರಿಹಾರ ಕಾರ್ಯಾಚರಣೆಗಾಗಿ ನಿಯೋಜಿಸಿದೆ ಎಂದು ಅಧಿಕಾರಿಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ. ಈ ಪ್ರದೇಶದಲ್ಲಿ ಹವಾಮಾನ ಪರಿಸ್ಥಿತಿಗಳು ಸುಧಾರಿಸಿದ ನಂತರ, ಐಎಎಫ್ ತನ್ನ ಸ್ವತ್ತುಗಳನ್ನು ಪರಿಹಾರ ಕಾರ್ಯಾಚರಣೆಗಳಿಗೆ ನಿಯೋಜಿಸಲು ಸಿದ್ಧವಾಗಿದೆ ಎಂದು ಅಧಿಕಾರಿಗಳು ಈ ಹಿಂದೆ ತಿಳಿಸಿದ್ದರು. ಸಿಎಂ…

Read More

ಉತ್ತರಾಖಂಡ: ಇಲ್ಲಿನ ಬದರಿನಾಥ್ ಬಳಿಯಲ್ಲಿ ನಿನ್ನೆ ದಿಢೀರ್ ಭಾರೀ ಹಿಮಪಾತ ಉಂಟಾಗಿತ್ತು. ಈ ಘಟನೆಯಲ್ಲಿ ಹಲವರು ಸಿಲುಕಿಕೊಂಡಿದ್ದರು. ಇದೀಗ ನಾಲ್ವರು ಕಾರ್ಮಿಕರು ಸಾವನ್ನಪ್ಪಿದ್ದು, 50 ಮಂದಿ ರಕ್ಷಣೆ ಮಾಡಲಾಗಿದೆ. ಇನ್ನೂ ಹಿಮದಡಿ ಸಿಲುಕಿರುವಂತವರ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಅಲ್ಲದೇ ಸರ್ಕಾರದಿಂದ ಸಂತ್ರಸ್ತರ ನೆರವಿಗಾಗಿ ಸಹಾಯವಾಣಿ ಸಂಖ್ಯೆನ್ನು ಆರಂಭಿಸಲಾಗಿದೆ. https://twitter.com/PTI_News/status/1895773838291399019 ಉತ್ತರಾಖಂಡದ ಚಮೋಲಿಯಲ್ಲಿ ಶುಕ್ರವಾರ ಸಂಭವಿಸಿದ ಹಿಮಪಾತದ ಅವಶೇಷಗಳಿಂದ ರಕ್ಷಿಸಲ್ಪಟ್ಟ ಬಾರ್ಡರ್ ರೋಡ್ಸ್ ಆರ್ಗನೈಸೇಶನ್ (ಬಿಆರ್ಒ) ನ 48 ಕಾರ್ಮಿಕರಲ್ಲಿ ಒಬ್ಬರು ಗಾಯಗಳಿಗೆ ಚಿಕಿತ್ಸೆಯ ಸಮಯದಲ್ಲಿ ಸಾವನ್ನಪ್ಪಿದ್ದಾರೆ. ಏಳು ಮಂದಿಯನ್ನು ಇನ್ನೂ ಹೊರತೆಗೆಯಬೇಕಾಗಿದೆ. ರಕ್ಷಿಸಿದ ಎಲ್ಲಾ ಕಾರ್ಮಿಕರು ಮಾನಾದ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ) ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂಡೋ-ಟಿಬೆಟಿಯನ್ ಗಡಿಯ ಬಳಿಯ ಮಾನಾ ಗ್ರಾಮ ಮತ್ತು ಮಾನಾ ಪಾಸ್ ನಡುವಿನ ಪ್ರದೇಶದಲ್ಲಿ 65 ಕ್ಕೂ ಹೆಚ್ಚು ಸಿಬ್ಬಂದಿ ರಾತ್ರಿಯಿಡೀ ಸುಮಾರು ಏಳು ಅಡಿ ಹಿಮವನ್ನು ತೆರವುಗೊಳಿಸಲಾಗಿದೆ. ಚಮೋಲಿ ಜಿಲ್ಲೆಯಲ್ಲಿ ರಾಜ್ಯದ ಹವಾಮಾನ ಇಲಾಖೆ ಮಳೆ ಮತ್ತು ಹಿಮಪಾತದ ಎಚ್ಚರಿಕೆ ನೀಡಿದ್ದರಿಂದ ಉಳಿದ…

Read More

ವಿಜಯಪುರ: ಕೋಡಿ ಮಠದ ಶ್ರೀಗಳ ಬೆನ್ನಲ್ಲೇ ಸಿದ್ದರಾಮಯ್ಯ ಹೊಳಿಮಠ ಅವರು ರಾಜ್ಯ ರಾಜಕಾರಣದ ಬಗ್ಗೆ ಸ್ಪೋಟಕ ಭವಿಷ್ಯ ನುಡಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವಂತ ಅವರು, ರಾಜಕೀಯದಲ್ಲಿ ಮಹತ್ವದ ಬದಲಾವಣೆಯಾಗುವುದಾಗಿ ಕಾಲಜ್ಞಾನ ಭವಿಷ್ಯವಾಣಿ ನುಡಿದ್ದಾರೆ. ಇದಷ್ಟೇ ಅಲ್ಲದೇ ಶಿಕ್ಷಣ ಕ್ಷೇತ್ರದಲ್ಲೂ ಹೊಸ ತಿರುಪು ಪಡೆದುಕೊಂಡು ಬದಲಾವಣೆಯಾಗಲಿವೆ. ದೇಶದಲ್ಲಿ ಬರಗಾಲದ ಮುನ್ಸೂಚನೆ ಇದೆ. ಅಲ್ಲದೇ ಕಲಿಯುಗದ ಆಟ ಸರ್ವನಾಶ ಆಗುವ ಸಮಯ ಬಂದಿರುವುದಾಗಿ ಬೆಚ್ಚಿ ಬೀಳಿಸುವಂತ ಭವಿಷ್ಯವನ್ನು ನುಡಿದ್ದಾರೆ. ಅಂದಹಾಗೇ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲ್ಲೂಕಿನ ಹೊಳಿಮಠದ ಕಾಲಜ್ಞಾನ ಭವಿಷ್ಯವಾಣಿ ತುಂಬಾನೇ ಹೆಸರುವಾಸಿ. ಈ ಮಠದ ಸದಾಶಿವ ಮುತ್ಯಾರ ಭವಿಷ್ಯವಾಣಿ ಬಹುತೇಕ ನಿಜವಾಗುತ್ತದೆ ಎಂಬುದಾಗಿ ಭಕ್ತರ ನಂಬಿಕೆಯಾಗಿದೆ. https://kannadanewsnow.com/kannada/important-information-for-those-who-were-expecting-the-post-of-private-aided-school-teachers-from-the-state-government/ https://kannadanewsnow.com/kannada/breaking-woman-staff-sexually-assaulted-at-bbmp-office-this-officer-asks-if-she-has-contracted-hiv-if-she-goes-on-leave/

Read More

ಬೆಂಗಳೂರು: ರಾಜ್ಯದ ಖಾಸಗಿ ಅನುದಾನಿತ ಪ್ರೌಢಶಾಲೆಗಳಲ್ಲಿ ನಿಧನ, ನಿವೃತ್ತಿ, ರಾಜೀನಾಮೆ ಮತ್ತು ಇತರೆ ಕಾರಣಗಳಿಂದ ತೆರವಾದ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಈ ಹುದ್ದೆಗಳನ್ನು ಭರ್ತಿ ಮಾಡಲು ಆನ್ ಲೈನ್ ಪ್ರಕ್ರಿಯೆಯಲ್ಲಿ ಅನುಸರಿಸಬೇಕಾದಂತ ಕ್ರಮಗಳನ್ನು ಸರ್ಕಾರ ಬಿಡುಗಡೆ ಮಾಡಿದೆ. ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗಿದ್ದು, ರಾಜ್ಯ ಖಾಸಗಿ ಅನುದಾನಿತ ಪ್ರೌಢಶಾಲೆಗಳಲ್ಲಿ ದಿನಾಂಕ: 01-01-2016 ರಿಂದ 31-12-2020 ರವರೆಗೆ ನಿಧನ, ನಿವೃತ್ತಿ, ರಾಜೀನಾಮೆ ಮತ್ತು ಇತರೆ ಕಾರಣಗಳಿಂದ ತೆರವಾದ ಹುದ್ದೆಗಳನ್ನು ಭರ್ತಿ ಮಾಡಲು ಉಲ್ಲೇಖ(2)ರ ಸರ್ಕಾರದ ಆದೇಶದಲ್ಲಿ ಅನುಮತಿ ನೀಡಲಾಗಿದೆ. ಸದರಿ ಆದೇಶದಲ್ಲಿ ಅನುದಾನಿತ ಪ್ರೌಢಶಾಲೆಗಳ ಖಾಲಿ ಹುದ್ದೆ ಭರ್ತಿ ಪ್ರಕ್ರಿಯೆಯನ್ನು ಆನ್‌ಲೈನ್ ತಂತ್ರಾಂಶದ ಮೂಲಕ ನಿರ್ವಹಿಸಲು ತಂತ್ರಾಂಶವನ್ನು ಅಭಿವೃದ್ಧಿಪಡಿಸಿ ಪುಸ್ತಾವನೆಗಳನ್ನು ವ್ಯವಹರಿಸಲು ನಿರ್ದೇಶಿಸಲಾಗಿದೆ. ಈ ಹಿನ್ನೆಲೆಯಲ್ಲಿ ಖಾಸಗಿ ಅನುದಾನಿತ ಪ್ರೌಢಶಾಲೆಗಳ ನೇಮಕಾತಿ ಪ್ರಕ್ರಿಯೆಯನ್ನು ಆನ್ ಲೈನ್ ಮುಖಾಂತರ ನಿರ್ವಹಿಸಲು ಕ್ರಮವಹಿಸಲಾಗುತ್ತಿದೆ ಎಂದಿದ್ದಾರೆ. ಉಲ್ಲೇಖ-5ರ ಸುತ್ತೋಲೆಯಲ್ಲಿ ದಿನಾಂಕ:28-10-2024ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತಗೆದುಕೊಂಡ ನಿರ್ಣಯದಂತೆ…

Read More

ಬೆಂಗಳೂರು: ವೇತನ ಹೆಚ್ಚಳ, ಸೇವೆ ಖಾಯಂ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಎನ್ ಹೆಚ್ ಎಂ ಗುತ್ತಿಗೆ ನೌಕರರು ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದಿಗೆ 6ನೇ ದಿನಕ್ಕೆ ಪ್ರತಿಭಟನೆ ಕಾಲಿಟ್ಟಿದ್ದರೂ ಕನಿಷ್ಠ ಸೌಜನ್ಯಕ್ಕಾದರೂ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾತ್ರ, ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ, ಬೇಡಿಕೆ ಆಲಿಸುವಂತ ಸೌಜನ್ಯವನ್ನು ತೋರದೇ ಇರೋದು ವಿಪರ್ಯಾಸವೇ ಸರಿ. ಫೆಬ್ರವರಿ.24ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಕರ್ನಾಟಕ ರಾಜ್ಯ ಗುತ್ತಿಗೆ ಶುಶ್ರೂಷಾಧಿಕಾರಿಗಳ ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ಎನ್ ಹೆಚ್ ಎಂ ನರ್ಸಿಂಗ್ ಆಫೀಸರ್ ಅಹೋ ರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ. ಸಮಾನ ಕೆಲಸಕ್ಕೆ ಸಮಾನ ವೇತನ, ಹುದ್ದೆ ಖಾಯಂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಹಗಲು ರಾತ್ರಿ ಎನ್ನದೇ ಫ್ರೀಡಂ ಪಾರ್ಕ್ ನಲ್ಲೇ ಧರಣಿ ಸತ್ಯಾಗ್ರಹ ಮಾಡುತ್ತಿದ್ದಾರೆ. ಮಾರ್ಚ್.1ರ ಇಂದಿಗೆ ಆರೋಗ್ಯ ಇಲಾಖೆಯ ಎನ್ ಹೆಚ್ ಎಂ ಗುತ್ತಿಗೆ ನೌಕರರ ಪ್ರತಿಭಟನೆ 6ನೇ ದಿನಕ್ಕೆ ಕಾಲಿಟ್ಟಿದೆ. ಕಾಂಗ್ರೆಸ್ ಸರ್ಕಾರ ಬರೋದಕ್ಕೂ ಮುನ್ನ ಇದೇ ನೌಕರರು ಪ್ರತಿಭಟನೆ…

Read More