Author: kannadanewsnow09

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಇಂದು ಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಅದೇ ಆಗಸ್ಟ್.12ರವರೆಗೆ ವಿಚಾರಣೆಯನ್ನು ಮುಂದೂಡಿದೆ. ಇಂದು ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ ಸಂಬಂಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸಲ್ಲಿಸಿದ್ದಂತ ಸಿಬಿಐ ತನಿಖೆಗೆ ಹಿಂಪಡೆ ಸರ್ಕಾರದ ಕ್ರಮವನ್ನು ಪ್ರಶ್ನಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ವಿಚಾರಣೆ ನಡೆಸಿತು. ಇಂದಿನ ಕೋರ್ಟ್ ಕಲಾಪಕ್ಕೆ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ತುರ್ತು ಕಾರಣಗಳಿಂದ ಹಾಜರಾಗಿರಲಿಲ್ಲ. ಈ ಬಗ್ಗೆ ಕೋರ್ಟ್ ಗಮನಕ್ಕೆ ರಾಜ್ಯ ಸರ್ಕಾರದ ಅಡ್ವಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರು ಕೇಸ್ ಮುಂದೂಡುವನ್ನು ಮನವಿ ಮಾಡಿದರು. ಈ ಮನವಿಯನ್ನು ಪುರಸ್ಕರಿಸಿದಂತ ಹೈಕೋರ್ಟ್ ನ್ಯಾಯಪೀಠವು ಆಗಸ್.12ಕ್ಕೆ ವಿಚಾರಣೆಯನ್ನು ಮುಂದೂಡಿದೆ. ಈ ಮೂಲಕ ಡಿಸಿಎಂ ಡಿ.ಕೆ ಶಿವಕುಮಾರ್ ಗೆ ತಾತ್ಕಾಲಿಕ ರಿಲೀಫ್ ನೀಡಿದೆ. https://kannadanewsnow.com/kannada/breakingtensions-in-middle-east-air-india-suspends-all-flights-to-and-from-tel-aviv/ https://kannadanewsnow.com/kannada/mangaluru-college-students-clash-in-the-middle-of-the-road/

Read More

ಬೆಂಗಳೂರು: ನಗರದಲ್ಲಿರುವಂತ ಅನೇಕ ಪೇಯಿಂಗ್ ಗೆಸ್ಟ್ ಗಳಿಗೆ ಸಿಸಿಟಿವಿಯನ್ನು ಅಳವಡಿಕೆ ಮಾಡಿಲ್ಲ. ಕೆಲ ದಿನಗಳ ಹಿಂದಷ್ಟೇ ಯುವತಿಯನ್ನು ಪಿಜಿಗೆ ನುಗ್ಗಿ ಚಾಕುವಿನಿಂದ ಪ್ರಿಯಕರ ಇರಿದ ಘಟನೆ ವರದಿಯಾದ ನಂತ್ರ, ಇನ್ಮುಂದೆ ಬೆಂಗಳೂರಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಕೆ ಕಡ್ಡಾಯಗೊಳಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಆದೇಶಿಸಿದ್ದಾರೆ. ಈ ಕುರಿತಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು ಆದೇಶ ಹೊರಡಿಸಿದ್ದಾರೆ. ಅದರಲ್ಲಿ ಬೆಂಗಳೂರು ನಗರದಲ್ಲಿರುವ ಪೇಯಿಂಗ್‌ ಗೆಸ್ಟ್‌ಗಳಲ್ಲಿ (ಪಿ.ಜಿ) ಸಿಸಿಟಿವಿ ಕ್ಯಾಮೆರಾ ಕಡ್ಡಾಯವಾಗಿ ಅಳವಡಿಸಬೇಕು. ಪಿ.ಜಿಗಳಲ್ಲಿ ಭದ್ರತಾ ಸಿಬ್ಬಂದಿ ನೇಮಿಸಿಕೊಳ್ಳಬೇಕು. ಅಪರಿಚಿತರಿಗೆ ಪ್ರವೇಶ ನೀಡಬಾರದು. ಪೊಲೀಸರು ತಮ್ಮ ವ್ಯಾಪ್ತಿಯಲ್ಲಿರುವ ಪಿ.ಜಿಗಳಿಗೆ ಕಡ್ಡಾಯವಾಗಿ ಭೇಟಿ ನೀಡಿ ಪರಿಶೀಲಿಸಬೇಕು ಎಂದಿದ್ದಾರೆ. ಅನಧಿಕೃತವೆಂದು ಕಂಡುಬಂದರೆ ಬಿಬಿಎಂಪಿ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ಅಕ್ರಮ, ಅನೈತಿಕ ಚಟುವಟಿಕೆ ನಡೆಯುತ್ತಿದ್ದರೆ ಮಾಹಿತಿ ಕಲೆ ಹಾಕಬೇಕು. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಬೆಂಗಳೂರು ನಗರ ಪೊಲೀಸ್‌ ಕಮಿಷನರ್‌‌ ಬಿ. ದಯಾನಂದ ತಿಳಿಸಿದ್ದಾರೆ. https://kannadanewsnow.com/kannada/mangaluru-college-students-clash-in-the-middle-of-the-road/ https://kannadanewsnow.com/kannada/breakingtensions-in-middle-east-air-india-suspends-all-flights-to-and-from-tel-aviv/

Read More

ಮಂಗಳೂರು: ಜಿಲ್ಲೆಯಲ್ಲಿ ನಡು ರಸ್ತೆಯಲ್ಲೇ ವಿದ್ಯಾರ್ಥಿ-ವಿದ್ಯಾರ್ಥಿಗಳ ನಡುವೆ ಹೊಡೆದಾಟ ಉಂಟಾಗಿದೆ. ಕಾಲೇಜು ಯೂನಿಫಾರಂನಲ್ಲೇ ಗೆಳೆಯ ಗೆಳೆಯರೇ ವಿದ್ಯಾರ್ಥಿಗಳು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಮಂಗಳೂರಿನ ಸೆಂಟ್ ಅಲೋಶಿಯಸ್ ಕಾಲೇಜಿನ ವಿದ್ಯಾರ್ಥಿಗಳು ನಡು ರಸ್ತೆಯಲ್ಲೇ ಹೊಡೆದಾಡಿಕೊಂಡಿದ್ದಾರೆ. ಕಾಲೇಜು ಯೂನಿಫಾರಂನಲ್ಲೇ ವಿದ್ಯಾರ್ಥಿಗಳು ಪರಸ್ಪರ ಹೊಡೆದಾಡಿಕೊಂಡ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಕಾಲೇಜು ಗೇಟ್ ಎದುರು ಹಿಗ್ಗಾಮುಗ್ಗಾ ವಿದ್ಯಾರ್ಥಿಗಳು ಹೊಡೆದಾಡಿಕೊಂಡಿದ್ದಾರೆ. ಕ್ಷುಲ್ಲಕ ಕಾರಣಕ್ಕಾಗಿ ಗೆಳೆಯರ ಮಧ್ಯೆಯೇ ಹೊಡೆದಾಟ ನಡೆದಿದೆ ಎಂಬುದಾಗಿ ತಿಳಿದು ಬಂದಿದೆ. ನಡು ರಸ್ತೆಯಲ್ಲೇ ಅಲೋಶಿಯಸ್ ಕಾಲೇಜಿನ ವಿದ್ಯಾರ್ಥಿಗಳು ಪರಸ್ಪರ ಹೊಡೆದಾಡಿಕೊಂಡ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. https://kannadanewsnow.com/kannada/special-meal-scheme-for-school-children-education-department-issues-guidelines-adherence-mandatory/ https://kannadanewsnow.com/kannada/breakingtensions-in-middle-east-air-india-suspends-all-flights-to-and-from-tel-aviv/

Read More

ಬೆಂಗಳೂರು: 2024-24ನೇ ಸಾಲಿನ ಪಿಎಂ ಪೋಷಣ್ ಮಧ್ಯಾಹ್ನದ ಉಪಹಾರ ಯೋಜನೆಯ ಅಡಿಯಲ್ಲಿ ಶಾಲಾ ಮಕ್ಕಳಿಗೆ ವಿಶೇಷ ಭೋಜನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಯೋಜನೆ ಜಾರಿಗೊಳಿಸುವ ಬಗ್ಗೆ ಶಿಕ್ಷಣ ಇಲಾಖೆಯಿಂದ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗಿದೆ. ಅದರಲ್ಲಿ ಕೇಂದ್ರ ಸರ್ಕಾರ ಸೂಚಿತ “ವಿಶೇಷ ಭೋಜನ” (ತಿಥಿ ಭೋಜನ) ಪರಿಕಲ್ಪನೆಯು ಒಂದು ಸಮುದಾಯ ಭಾಗವಹಿಸುವಿಕೆ ಕಾರ್ಯಕ್ರಮವಾಗಿದ್ದು, ಇದರಲ್ಲಿ ಎನ್ ಜಿ ಒ ಗಳು / ಕೈಗಾರಿಕೆಗಳು/ ವಾಣಿಜ್ಯ/ ವ್ಯಾಪಾರ ಇತ್ಯಾದಿ ಸಮುದಾಯದ ಸದಸ್ಯರು, ಸರ್ಕಾರಿ ಮತು ಸರ್ಕಾರಿ ಅನುದಾನಿತ ಶಾಲೆಗಳಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಹಬ್ಬಗಳು, ಮದುವೆ ಮದುವೆ ವಾರ್ಷಿಕೋತ್ಸವಗಳು, ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಜನ್ಮದಿನಗಳು, ರಾಜ್ಯ ಸ್ಥಾಪನೆ ದಿನಗಳು, ರಾಷ್ಟ್ರೀಯ ಪ್ರಾಮುಖ್ಯತೆ ದಿನಗಳು ಮತ್ತು ಯಾವುದೇ ಇತರೆ ವಿಶೇಷ ಸಂದರ್ಭಗಳಲ್ಲಿ ಪೌಷ್ಠಿಕ ಮತ್ತು ಆರೋಗ್ಯಕರ ಊಟ/ ಆಹಾರ ಪದಾರ್ಥಗಳನ್ನು ಒದಗಿಸುವುದಾಗಿದೆ ಎಂಬುದನ್ನು ಸ್ಪಷ್ಟಪಡಿಸುತ್ತಾ ಸದರಿ ಕಾರ್ಯಕ್ರಮವನ್ನು ಅನುಷ್ಟಾನಗೊಳಿಸುವ ಸಂಬಂಧ ಈ ಕೆಳಕಂಡಂತೆ ಮಾರ್ಗಸೂಚಿಯನ್ನು ನೀಡಿದೆ ಎಂದಿದ್ದಾರೆ. ಹೀಗಿದೆ…

Read More

ಬೆಂಗಳೂರು: ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ವತಿಯಿಂದ ಯುನೈಟೆಡ್ ಅರಬ್ ಎಮಿರೈಟ್ಸ್ (ಯುಎಈ)ನಲ್ಲಿ ಪುರುಷ ನರ್ಸ್ಗಳಿಗೆ ಉದ್ಯೋಗ ಅವಕಾಶ ಕಲ್ಪಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಬಿಎಸ್ಸಿ ನರ್ಸಿಂಗ್, ಪೋಸ್ಟ್ ಬೇಸಿಕ್ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಹತೆ ಇರುವರಿಗೆ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮವು ಅರ್ಹರಿಗೆ ಈ ಉದ್ಯೋಗ ಅವಕಾಶವನ್ನು ಒದಗಿಸಲಿದೆ. ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ದಿ ಮತ್ತು ಜೀವನೋಪಾಯ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಅವರು ಈ ಹಿಂದೆ ಸ್ಲೋವಾಕಿಯಾದಲ್ಲಿ ಹಲವಾರು ಕನ್ನಡಿಗರಿಗೆ ನಿಗಮದ ಮೂಲಕ ಉದ್ಯೋಗ ದೊರಕಿಸಿಕೊಡುವಲ್ಲಿ ಯಶಸ್ವಿಯಾಗಿದ್ದರು. ಇದರ ಬೆನಲ್ಲೇ ಯುಎಈ ನಲ್ಲಿ ಪುರುಷ ನರ್ಸ್ಗಳಿಗೆ ಉದ್ಯೋಗ ನೀಡುವ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ. ಹಾಗೆಯೇ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷೆ ಕಾಂತ ನಾಯಕ್ ಅವರು ಈ ಯೋಜನೆಗೆ ವಿಶೇಷ ಆಸಕ್ತಿ ವಹಿಸಿದ್ದಾರೆ. ಯುಎಈ ನಲ್ಲಿ ಪುರುಷ ನರ್ಸಿಂಗ್ ಹುದ್ದೆ ಬಯಸುವವರು 40 ವರ್ಷದೊಳಗಿನವರಾಗಿರಬೇಕು. 2 ವರ್ಷ ಅನುಭವ ಹೊಂದಿರಲೇಬೇಕು. ಆಯ್ಕೆಯಾಗುವವರಿಗೆ 5 ಸಾವಿರ ಎಇಡಿ(ಮಾಸಿಕ 1,11,000. ರೂ ವೇತನ), 30 ದಿನ ವೇತನ ರಹಿತ ಸಂಬಳ,…

Read More

ವಯನಾಡ್: ಕೇರಳದ ವಯನಾಡ್ ಜಿಲ್ಲೆಯಲ್ಲಿ 100ಕ್ಕೂ ಹೆಚ್ಚು ಮನೆಗಳನ್ನು ನಿರ್ಮಿಸುವುದಾಗಿ ಕಾಂಗ್ರೆಸ್ ಪಕ್ಷ ಭರವಸೆ ನೀಡಿದೆ ಎಂದು ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ. ವಯನಾಡ್ ನ ಹಾಲಿ ಸಂಸದರಾಗಿದ್ದ ರಾಹುಲ್ ಗಾಂಧಿ ಅವರು ಪೀಡಿತ ಪ್ರದೇಶಗಳ ಪರಿಹಾರ ಶಿಬಿರಗಳಿಗೆ ಭೇಟಿ ನೀಡುತ್ತಿದ್ದಾರೆ. ಈ ವೇಳೆಯಲ್ಲಿ ಮಾತನಾಡಿದಂತ ಅವರು ಭೂ ಕುಸಿತದಿಂದ ಸಂತ್ರಸ್ತರಾಗಿರುವಂತ ಜನರಿಗೆ 100 ಮನೆಗಳನ್ನು ನಿರ್ಮಿಸುವುದಾಗಿ ಅವರು ಹೇಳಿದರು. ಅಂದಹಾಗೇ ವಯನಾಡಲ್ಲಿ ಭೂಕುಸಿತದಿಂದ 300ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. 200ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ. ಅವರ ಪತ್ತೆಕಾರ್ಯಚರಣೆ ಮುಂದುವರೆದಿದೆ. https://kannadanewsnow.com/kannada/actor-darshans-murder-case-police-get-more-concrete-evidence/ https://kannadanewsnow.com/kannada/breakingtensions-in-middle-east-air-india-suspends-all-flights-to-and-from-tel-aviv/

Read More

ಬೆಂಗಳೂರು: ನಟ ದರ್ಶನ್ ಗೆ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಮತ್ತಷ್ಟು ಸಂಕಷ್ಟ ಎದುರಾಗಿದೆ. ಕಾರಣ ಅವರು ಪ್ರಕರಣದಲ್ಲಿ ಭಾಗಿಯಾಗಿರುವ ಬಗ್ಗೆ ಬಲವಾದ ಸಾಕ್ಷ್ಯ ಲಭ್ಯವಾಗಿರುವುದಾಗಿದೆ. ಹೌದು ನಟ ದರ್ಶನ್ ಅವರು ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸರಿಗೆ ಬಲವಾದ ಸಾಕ್ಷ್ಯ ಲಭ್ಯವಾಗಿದೆ. ಅದೇ ನಟ ದರ್ಶನ್ ಮನೆಯಲ್ಲಿನ ಸಿಸಿಟಿವಿ ದೃಶ್ಯಾವಳಿಯನ್ನು ಡಿಲಿಟ್ ಮಾಡಿರೋದನ್ನು, ರಿಟ್ರೀವ್ ಮಾಡಿರುವುದೇ ಆಗಿದೆ. ಜೂನ್.8, 9 ಹಾಗೂ 10ರಂದು ನಟ ದರ್ಶನ್ ಮನೆಯಲ್ಲಿನ ಸಿಸಿಟಿವಿ ಡಿವಿಆರ್ ನಲ್ಲಿನ ದೃಶ್ಯಾವಳಿಯನ್ನು ಡಿಲಿಟ್ ಮಾಡಲಾಗಿತ್ತು. ಸಿಸಿಟಿವಿ ಡಿವಿಆರ್ ಕೊಂಡೊಯ್ತಿದ್ದಂತ ಪೊಲೀಸರು ಅದರಲ್ಲಿನ ವೀಡಿಯೋ ರಿಟ್ರೀವಿಗೆ ಪ್ರಯತ್ನಿಸಿದ್ದರು. ಅದು ಸಾಧ್ಯವಾಗಿದೆ. ನಟ ದರ್ಶನ್ ಮನೆಗೆ ಗ್ಯಾಂಗ್ ನ ಸದಸ್ಯರು ಬಂದು ಹೋಗಿರುವುದು ಸಿಸಿಟಿವಿ ರಿಟ್ರೀವ್ ದೃಶ್ಯಾವಳಿಯಲ್ಲಿ ಲಭ್ಯವಾಗಿದೆ ಎನ್ನಲಾಗುತ್ತಿದೆ. ಇದಷ್ಟೇ ಅಲ್ಲದೇ ಶವ ಸಾಗಿಸುತ್ತಿದ್ದರ ಬಗ್ಗೆ ಸಿಕ್ಕ ಸಾಕ್ಷ್ಯಾಧಾರಗಳಲ್ಲಿ ನಟ ದರ್ಶನ್ ಫಿಂಗರ್ ಪ್ರಿಂಟ್ ಕೂಡ ದೊರೆತಿದೆ ಎಂದು ಹೇಳಲಾಗುತ್ತಿದೆ. ಇನ್ನೂ ಪವಿತ್ರಾ ಗೌಡಗೂ ಸಂಕಷ್ಟ ಎದುರಾಗಿದ್ದೂ, ರೇಣುಕಾಸ್ವಾಮಿ ಕಳುಹಿಸಿದ್ದಂತ…

Read More

ಬೆಂಗಳೂರು: ಬೆಂಗಳೂರು ಇಂಡಿಯಾ ನ್ಯಾನೋ ತಂತ್ರಜ್ಞಾನ ಸಮ್ಮೇಳನ ಮಾದರಿಯಲ್ಲಿ ‘ ಕ್ವಾಂಟಮ್ ತಂತ್ರಜ್ಞಾನ ಸಮ್ಮೇಳನ’ವನ್ನು ಸರ್ಕಾರ ಶೀಘ್ರದಲ್ಲೇ ಆಯೋಜಿಸುತ್ತದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. 13ನೇ ಬೆಂಗಳೂರು ನ್ಯಾನೋ ತಂತ್ರಜ್ಞಾನ ಸಮ್ಮೇಳನದ ಉದ್ಘಾಟರ ಸಮಾರಂಭದಲ್ಲಿ ಮಾತನಾಡಿದ ಅವರು ” ತಂತ್ರಜ್ಞಾನ ಮನುಷ್ಯನ ಭವಿಷ್ಯದ ಬದುಕಿಗೆ ಪೂರಕವಾಗಿ ಇರಬೇಕು. ನ್ಯಾನೋ ಮತ್ತು ಕ್ವಾಂಟಮ್ ತಂತ್ರಜ್ಞಾನದ ಬೆಳವಣಿಗೆಗೆ ಸರ್ಕಾರದ ಜೊತೆ ಎಲ್ಲರು ಕೈ ಜೋಡಿಸಬೇಕು. ಬೆಂಗಳೂರನ್ನು ಅಗ್ರಗಣ್ಯ ನಗರವನ್ನಾಗಿ ಮಾಡಲು ಸಹಕರಿಸಬೇಕು” ಎಂದು ಹೇಳಿದರು. “ನ್ಯಾನೋ ತಂತ್ರಜ್ಞಾನದಿಂದ ಪ್ರತಿಯೊಂದು ಕ್ಷೇತ್ರದಲ್ಲಿಯೂ ಅತ್ಯಂತ ಸಮರ್ಥವಾಗಿ ಉತ್ಪಾದನೆಯನ್ನು ಮಾಡಬಹುದು. ಈ ತಂತ್ರಜ್ಞಾನದಿಂದ ಕೃಷಿ, ವಿದ್ಯುತ್, ಆಹಾರ ಸಂಸ್ಕರಣೆ, ಕೈಗಾರಿಕಾ ಕ್ಷೇತ್ರಗಳಲ್ಲಿ ಕಡಿಮೆ ದರದಲ್ಲಿ ಹೆಚ್ಚು ಉತ್ಪಾದನೆ ಮಾಡಿ ಜನಸ್ನೇಹಿಯಾಗಿಸಬೇಕಿದೆ” ಎಂದರು. “ರಾಜ್ಯದಲ್ಲಿ ಕೈಗಾರಿಕೆ, ಶೈಕ್ಷಣಿಕ ಮತ್ತು ಸಂಶೋಧಕರಿಗೆ ಜ್ಞಾನ ವಿನಿಮಯಕ್ಕೆ ಈ ಕಾರ್ಯಕ್ರಮವು ಜಾಗತಿಕ ವೇದಿಕೆಯಾಗಿದೆ. ನ್ಯಾನೋ ವಿಜ್ಞಾನ ಮತ್ತು ನ್ಯಾನೋ ತಂತ್ರಜ್ಞಾನ ಕೈಗಾರಿಕಾ ಕ್ಷೇತ್ರಗಳ ಅಭಿವೃದ್ಧಿಗೆ ನೆರವಾಗಲಿದೆ. ನ್ಯಾನೋ ವಿಜ್ಞಾನ ಮತ್ತು ತಂತ್ರಜ್ಞಾನವು ಭವಿಷ್ಯದಲ್ಲಿ…

Read More

ಬೆಂಗಳೂರು : “ಆಸ್ತಿ ತೆರಿಗೆ ಸುಸ್ತಿದಾರರಿಗಾಗಿ ಜಾರಿಗೆ ತರಲಾಗಿದ್ದ ‘ಒಂದು ಬಾರಿ ಪರಿಹಾರ ಯೋಜನೆ’ (ಒಟಿಎಸ್)ಯ ಕಾಲಾವಧಿ (ಜುಲೈ 31) ಮುಕ್ತಾಯಗೊಂಡಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರ ಒತ್ತಡದ ಮೇರೆಗೆ ಇದನ್ನು ಒಂದು ತಿಂಗಳ ಕಾಲ ಅಂದರೆ ಆಗಸ್ಟ್ 31ರವರೆಗೆ ವಿಸ್ತರಣೆ ಮಾಡಲಾಗಿದೆ” ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದರು. 13ನೇ ನ್ಯಾನೋ ತಂತ್ರಜ್ಞಾನ ಅಂತಾರಾಷ್ಟ್ರೀಯ ಸಮ್ಮೇಳನ ಕಾರ್ಯಕ್ರಮದ ಬಳಿಕ ಮಾಧ್ಯಮಗಳ ಜತೆ ಶುಕ್ರವಾರ ಮಾತನಾಡಿದ ಶಿವಕುಮಾರ್ ಅವರು, “ಈವರೆಗೂ 3 ಸಾವಿರ ಕೋಟಿಯಷ್ಟು ಆಸ್ತಿ ತೆರಿಗೆ ಸಂಗ್ರಹವಾಗಿದ್ದು, ಹೆಚ್ಚುವಾರಿಯಾಗಿ 400 ಕೋಟಿ ತೆರಿಗೆ ಸಂಗ್ರಹವಾಗಿದೆ. ಕೆಲ ಬದಲಾವಣೆ ಮಾಡಿಕೊಳ್ಳಬೇಕು ಮತ್ತು ಒಟಿಎಸ್ ಕಾಲಾವಧಿ ಒಂದು ತಿಂಗಳು ವಿಸ್ತರಣೆ ಮಾಡಬೇಕು ಎಂದು ಅಧಿಕಾರಿಗಳು ಹಾಗೂ ಸಾರ್ವಜನಿಕರಿಂದ ಒತ್ತಡ ಬರುತ್ತಿದೆ. ಸರ್ವರ್ ಸಮಸ್ಯೆ ಹಾಗೂ ಮತ್ತೆ ಕೆಲವರು ಚೆಕ್ ನೀಡಿದ್ದು, ಜುಲೈ 31ರವರೆಗೆ ನೀಡಲಾಗಿದ್ದ ಕಾಲಾವಧಿಯನ್ನು ಒಂದು ತಿಂಗಳ ಕಾಲ ಅಂದರೆ ಆಗಸ್ಟ್ 31ರವರೆಗೆ ವಿಸ್ತರಣೆ ಮಾಡಲಾಗಿದೆ” ಎಂದು ತಿಳಿಸಿದರು. “ಪ್ರಾಮಾಣಿಕವಾಗಿ ತೆರಿಗೆ ಪಾವತಿ ಮಾಡುತ್ತಿರುವವರಿಗೆ ತೊಂದರೆಯಾಗದ…

Read More

ಬಳ್ಳಾರಿ: ಅಂತರ್ಜಾತಿ ವಿವಾಹಕ್ಕೆ ವಿರೋಧ ವ್ಯಕ್ತ ಪಡಿಸಿದ ಹಿನ್ನಲೆಯಲ್ಲಿ ಪ್ರೇಮಿಗಳಿಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ಬಳ್ಳಾರಿಯ ಸಿರಗುಪ್ಪದಲ್ಲಿ ನಡೆದಿದೆ. ಬಳ್ಳಾರಿ ಜಿಲ್ಲೆಯ ಸಿರಗುಪ್ಪ ಪಟ್ಟಣದ ಜಮೀನೊಂದರಲ್ಲಿ ವಿಷ ಸೇವಿಸಿ ರಾಜು(23) ಹಾಗೂ ಪವಿತ್ರಾ(20) ಆತ್ಮಹತ್ಯೆಗೆ ಶರಣಾದಂತ ಪ್ರೇಮಿಗಳಾಗಿದ್ದಾರೆ. ಅನ್ಯ ಜಾತಿಯವರಾಗಿದ್ದಂತ ಇಬ್ಬರೂ, ಪರಸ್ಪರ ಪ್ರೀತಿಸುತ್ತಿದ್ದರು. ಆದರೇ ಇವರ ವಿವಾಹಕ್ಕೆ ಮನೆಯಲ್ಲಿ ಪೋಷಕರು ವಿರೋಧ ವ್ಯಕ್ತ ಪಡಿಸಿದ್ದರು. ಈ ಹಿನ್ನಲೆಯಲ್ಲಿ ಇಂದು ಸಿರಗುಪ್ಪದ ಜಮೀನೊಂದರಲ್ಲಿ ವಿಷ ಸೇವಿಸಿ ರಾಜು ಹಾಗೂ ಪವಿತ್ರ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ವಿಷಯ ತಿಳಿದಂತ ಸಿರಗುಪ್ಪ ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡು, ತನಿಖೆ ಕೈಗೊಂಡಿದ್ದಾರೆ. https://kannadanewsnow.com/kannada/governor-issues-notice-on-muda-scam-what-did-cm-siddaramaiah-say-heres/ https://kannadanewsnow.com/kannada/140-army-personnel-constructed-120-foot-long-bailey-bridge-in-record-31-hours-in-wayanad/

Read More