Author: kannadanewsnow09

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವಂತ ಪ್ಲೇ ಹೋಂ, ಎಲ್ ಕೆ ಜಿ, ಯುಕೆಜಿ ಸೇರಿದಂತೆ ಎಲ್ಲಾ ಪೂರ್ವ ಪ್ರಾಥಮಿಕ ಶಾಲೆಗಳು ನೋಂದಣಿ ಮಾಡಿಕೊಳ್ಳುವುದು ಕಡ್ಡಾಯ ಎಂಬುದಾಗಿ ಶಾಲಾ ಶಿಕ್ಷಣ ಇಲಾಖೆ ಆದೇಶ ಮಾಡಿದೆ. ಪೂರ್ವ ಪ್ರಾಥಮಿಕ ಶಾಲೆಗಳಿಗೆ ನೋಂದಣಿ ಕಡ್ಡಾಯಗೊಳಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಎಸ್‌ಎಟಿಎಸ್‌ ಪೋರ್ಟಲ್‌ನಲ್ಲಿ ಹೊಸ ಸಾಫ್ಟ್‌ವೇರ್‌ ಅಭಿವೃದ್ಧಿಪಡಿಸಲಾಗಿದ್ದು, ಪ್ಲೇ ಹೋಂ, ಎಲ್‌ಕೆಜಿ, ಯುಕೆಜಿ ಸೇರಿ ಎಲ್ಲ ಪೂರ್ವ ಪ್ರಾಥಮಿಕ ಶಾಲೆ ನಡೆಸುವವರು ಆನ್‌ಲೈನ್‌ ಮೂಲಕ ನೋಂದಣಿ ಮಾಡಿಕೊಳ್ಳತಕ್ಕದ್ದು. ಇಲ್ಲದಿದ್ದರೆ ಶಾಲೆ ನಡೆಸಲು ಅವಕಾಶ ಇರುವುದಿಲ್ಲ ಎಂದು ಆದೇಶದಲ್ಲಿ ತಿಳಿಸಿದೆ. https://twitter.com/KarnatakaVarthe/status/1927711763341901979 https://kannadanewsnow.com/kannada/opposition-from-congress-mlas-to-vacate-janaushadhi-kendra-on-state-government-hospital-premises/ https://kannadanewsnow.com/kannada/security-drills-to-be-conducted-tomorrow-in-gujarat-rajasthan-punjab-and-jammu-kashmir/

Read More

ಶಿವಮೊಗ್ಗ: ರಾಜ್ಯ ಸರ್ಕಾರವು ಸರ್ಕಾರಿ ಆಸ್ಪತ್ರೆ ಆವರಣದಲ್ಲಿನ ಜನೌಷಧಿ ಕೇಂದ್ರ ತೆರವಿಗೆ ಆದೇಶ ಹೊರಡಿಸಿತ್ತು. ಈ ಸರ್ಕಾರದ ನಿರ್ಧಾರವನ್ನು ಕಾಂಗ್ರೆಸ್ ಶಾಸಕರೇ ವಿರೋಧಿಸಿದ್ದಾರೆ. ಅಲ್ಲದೇ ಜನೌಷಧಿ ಕೇಂದ್ರ ತರವಿಗೆ ನನ್ನದು ವಿರೋಧವಿದೆ ಎಂಬುದಾಗಿ ಕಾಂಗ್ರೆಸ್ ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಉಪವಿಭಾಗೀಯ ಆಸ್ಪತ್ರೆಯಲ್ಲಿ ಕೊರೋನಾ, ಡೆಂಗ್ಯೂ ನಿಯಂತ್ರಣ ಕುರಿತಂತೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸರ್ಕಾರಿ ಆಸ್ಪತ್ರೆ ಆವರಣದಲ್ಲಿನ ಜನೌಷಧಿ ಕೇಂದ್ರಗಳಿಂದ ಬಡವರಿಗೆ ಸಹಾಯವಾಗುತ್ತಿತ್ತು. ಕಡಿಮೆ ಬೆಲೆಗೆ ಉತ್ತಮ ಗುಣಮಟ್ಟದ ಔಷಧಿ ಕೂಡ ಸಿಗುತ್ತಿದ್ದವು ಎಂದರು. ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಜನೌಷಧಿ ಕೇಂದ್ರ ಇರುವುದು ಸೂಕ್ತವಾಗಿದೆ. ಇಂತಹ ಜನೌಷಧಿ ಕೇಂದ್ರವನ್ನು ಸರ್ಕಾರಿ ಆಸ್ಪತ್ರೆ ಆವರಣದಿಂದ ತೆರವುಗೊಳಿಸುತ್ತಿರೋದಕ್ಕೆ ನನ್ನ ವಿರೋಧವಿದೆ. ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಭೇಟಿಯಾಗಿ ಚರ್ಚಿಸುವುದಾಗಿ ತಿಳಿಸಿದರು. ಇದೇ ಸಂದರ್ಭದಲ್ಲಿ ಸಾಗರದ ಸಾರ್ವಜನಿಕ ಆಸ್ಪತ್ರೆ ಮೂಲ ಸೌಕರ್ಯ ಅಭಿವೃದ್ಧಿಗೆ 1.70 ಕೋಟಿ ಹಾಗೂ ತಾಯಿ ಮಕ್ಕಳ ಆಸ್ಪತ್ರೆಗೆ…

Read More

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಬುಧವಾರ ಇಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡುವ ಸಮಿತಿಯ 65 ನೇ ಸಭೆಯಲ್ಲಿ 4 ಹೊಸ ಬಂಡವಾಳ ಹೂಡಿಕೆ ಯೋಜನೆಗಳು ಹಾಗೂ 2 ಹೆಚ್ಚುವರಿ ಬಂಡವಾಳ ಹೂಡಿಕೆ / ತಿದ್ದುಪಡಿ ಪ್ರಸ್ತಾವಗಳಿಗೆ ಅನುಮೋದನೆ ನೀಡಲಾಗಿದ್ದು, ಇದರಿಂದ ರಾಜ್ಯದಲ್ಲಿ ₹15,441.17 ಕೋಟಿ ಬಂಡವಾಳ ಹೂಡಿಕೆಯಾಗಲಿದ್ದು, ಸುಮಾರು 5,277 ಜನರಿಗೆ ಉದ್ಯೋಗಾವಕಾಶಗಳು ಲಭ್ಯವಾಗಲಿವೆ. ಶ್ರೀ ಸಿಮೆಂಟ್‌ ಲಿಮಿಟೆಡ್‌ನ ₹ 2,406 ಕೋಟಿ, ದಾಲ್ಮಿಯಾ ಸಿಮೆಂಟ್‌ (ಭಾರತ್‌) ಲಿಮಿಟೆಡ್‌ನ ₹ 3,000 ಕೋಟಿ , ದಾಲ್ಮಿಯಾ ಸಿಮೆಂಟ್‌ (ಭಾರತ್‌) ಲಿಮಿಟೆಡ್‌ನ ₹ 3020 ಕೋಟಿ ಮೊತ್ತದ ಇನ್ನೊಂದು ಯೋಜನೆ ಹಾಗೂ ಎಂವೀ ಎನರ್ಜಿ ಪ್ರೈವೇಟ್‌ ಲಿಮಿಟೆಡ್‌ನ ₹ 5,495 ಕೋಟಿ ಸೇರಿದಂತೆ ಒಟ್ಟಾರೆ ₹ 13,921 ಕೋಟಿ ಮೊತ್ತದ ಹೊಸ ಬಂಡವಾಳ ಹೂಡಿಕೆಯ ಪ್ರಸ್ತಾವನೆಗಳಿಗೆ ಒಪ್ಪಿಗೆ ನೀಡಲಾಗಿದೆ. ಇವುಗಳಿಂದ ರಾಜ್ಯದಲ್ಲಿ ಒಟ್ಟಾರೆ 3,948 ಹೊಸ ಉದ್ಯೋಗ ಅವಕಾಶಗಳು ಸೃಷ್ಟಿಯಾಗಲಿವೆ. ಹೆಚ್ಚುವರಿ ಬಂಡವಾಳ ಹೂಡಿಕೆ ಪ್ರಸ್ತಾವನೆಗಳು: ಕಲರ್‌ಟೋನ್‌…

Read More

ಹಿಂದೂ ಧರ್ಮದಲ್ಲಿ ರಾಮಾಯಣ ಗ್ರಂಥವನ್ನು ಅತ್ಯಂತ ಪವಿತ್ರ ಗಂಥವೆಂದು ಪರಿಗಣಿಸಲಾಗತ್ತದೆ. ಹನುಮಂತನು ಶ್ರೀರಾಮನ ಪರಮ ಭಕ್ತನಾಗಿದ್ದರೂ, ಶ್ರೀರಾಮನಿಗೆ ಹನುಮಂತನೇ ಅತ್ಯಂತ ಪ್ರಿಯಾಗಿದ್ದರೂ ಶ್ರೀರಾಮ ಹನುಮಂತನಿಗೆ ಮರಣದಂಡನೆಯನ್ನು ವಿಧಿಸುತ್ತಾನೆ. ಕಾರಣವೇನು ?   ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ…

Read More

ಶಿವಮೊಗ್ಗ : ಶಿವಮೊಗ್ಗದ ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಬೋಧನಾ ಆಸ್ಪತ್ರೆಗೆ ಬೋಧಕ ಸಿಬ್ಬಂದಿ, ಆಸ್ಪತ್ರೆಗೆ ಸ್ಟಾಫ್‌ನರ್ಸ್ ನೇಮಕ ಸೇರಿದಂತೆ ವಿವಿಧ ಬೇಡಿಕೆಗಳನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ತಿಳಿಸಿದರು. ಬುಧವಾರ ಶಿವಮೊಗ್ಗದ ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಬೋಧನಾ ಆಸ್ಪತ್ರೆಗೆ ಭೇಟಿ ನೀಡಿ, ಇದೇ ವೇಳೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು. ಕಾಲೇಜಿನ ಪ್ರಭಾರ ಪ್ರಾಂಶುಪಾಲರಾದ ಡಾ.ಪ್ರಶಾಂತ ಕೆಕೊಡ ಮಾತನಾಡಿ, ಕಾಲೇಜಿನಲ್ಲಿ ಪ್ರಾಧ್ಯಾಪಕರು, ಸಹ ಪ್ರಾಧ್ಯಾಪಕರು ಸೇರಿದಂತೆ ಬೋಧಕ ಸಿಬ್ಬಂದಿಗಳ ಕೊರತೆ ಇದೆ. ಆದ ಕಾರಣ ಬಿಎಎಂಎಸ್ ವಿದ್ಯಾರ್ಥಿಗಳ ಮಂಜೂರು ಸೀಟು 60 ಇದ್ದು, ದಾಖಲು ಸಂಖ್ಯೆ 33 ಕ್ಕೆ ಇಳಿಕೆಯಾಗಿದೆ. ಆಯುರ್ವೇದ ಬೋಧನಾ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಕೊರತೆ ಸಹ ಇದ್ದು, ಇವರನ್ನು ನೇಮಕ ಮಾಡುವಂತೆ ಹಾಗೂ ಹೊಸದಾಗಿ ಪಿಜಿ ಕೋರ್ಸ್ ಆರಂಭಿಸಲು ಜಾಗದ ಅವಶ್ಯಕತೆ ಇದ್ದು, ಸ್ಥಳಾವಕಾಶ ಮಾಡಿಕೊಡುವಂತೆ ಮನವಿ ಮಾಡಿದರು. ವಿದ್ಯಾರ್ಥಿಗಳು…

Read More

ಬೆಂಗಳೂರು: ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 65 ನೇ ಸಭೆಯ ಅಧ್ಯಕ್ಷತೆ ವಹಿಸಿದ್ದ ಮುಖ್ಯಮಂತ್ರಿಗಳು, ಒಟ್ಟು 15441.17 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆ ಯೋಜನೆಗಳಿಗೆ ಅನುಮೋದನೆ ನೀಡಿದ್ದು , ಸುಮಾರು 5277 ಜನರಿಗೆ ಉದ್ಯೋಗ ಲಭ್ಯವಾಗಲಿದೆ ಎಂದು ತಿಳಿಸಿದರು. ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆದ ಇಂದಿನ ಸಭೆಯಲ್ಲಿ ನಾಲ್ಕು ಹೊಸ/ ವಿಸ್ತರಣಾ ಬಂಡವಾಳ ಹೂಡಿಕೆ ಪ್ರಸ್ತಾವನೆಗಳು ಹಾಗೂ ಎರಡು ಹೆಚ್ಚುವರಿ ಬಂಡವಾಳ ಹೂಡಿಕೆ ಪ್ರಸ್ತಾವನೆಗಳು ಸೇರಿದಂತೆ ಅನುಷ್ಠಾನದ ವಿವಿಧ ಹಂತದಲ್ಲಿರುವ ಒಟ್ಟು 10 ತಿದ್ದುಪಡಿ ಯೋಜನಾ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದರು. ಮೆ.ಶ್ರೀ ಸಿಮೆಂಟ್ ಲಿಮಿಟೆಡ್ ಸಂಸ್ಥೆಯ 2406 ಕೋಟಿ ರೂ.ಗಳ ಹೊಸ ಬಂಡವಾಳ ಹೂಡಿಕೆಯ ಯೋಜನೆಯಿಂದ 300 ಉದ್ಯೋಗ , ಮೆ. ದಾಲ್ಮಿಯಾ(ಭಾರತ್) ಲಿ. ಸಂಸ್ಥೆ ಯ 3000 ಕೋಟಿ ರೂ. ಹೂಡಿಕೆಯಿಂದ 570 ಉದ್ಯೋಗ ಹಾಗೂ ಮೆ. ದಾಲ್ಮಿಯಾ(ಭಾರತ್) ಲಿ. ಸಂಸ್ಥೆ ಯ 3020 ಕೋಟಿ ರೂ. ಹೂಡಿಕೆಯಿಂದ 570 ಉದ್ಯೋಗ ಸೃಷ್ಠಿ,…

Read More

ಬೆಂಗಳೂರು: ಕರ್ನಾಟಕದಿಂದ ಆಂಧ್ರಕ್ಕೆ ಹೆಚ್ಎಎಲ್ ಸ್ಥಳಾಂತರ ಸಾಧ್ಯವೇ ಇಲ್ಲ. ಆದರೇ ಹೊಸ ಘಟಕವನ್ನು ಸ್ಥಾಪನೆ ಮಾಡುವುದು ಮಾಧ್ಯವೇ ಸಾಧ್ಯವಿದೆ ಎಂಬುದಾಗಿ ಬಿಜೆಪಿ ಮುಖಂಡ ಪ್ರಕಾಶ್ ಅಭಿಪ್ರಾಯ ಪಟ್ಟಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ದಶಕಗಳಿಂದ ಬೆಂಗಳೂರಿನಲ್ಲಿ ಭದ್ರವಾಗಿ ನೆಲೆಸಿರುವ HAL ಆಂಧ್ರಕ್ಕೆ ಸ್ಥಳಾಂತರವಾಗುವುದು ಅಸಾಧ್ಯವಾದ ಕೆಲಸ. ಕೇವಲ ಹತ್ತು ಸಾವಿರ ಎಕರೆ ಜಮೀನು ಕೊಡುವರೆಂದು ಉದ್ದಿಮೆ ಸ್ಥಳಾಂತರ ಮಾಡಲಾಗುವುದಿಲ್ಲ ಎಂದಿದ್ದಾರೆ. ಸಾವಿರಾರು ಜನರ ನುರಿತ ಅನುಭವಿ ನೌಕರರನ್ನು ಕರೆದೊಯ್ಯಲಾಗದು. ನೂರಾರು ತಂತ್ರಜ್ಞರು ಸರ್ಕಾರದ ರಾಗಕ್ಕೆ ಕುಣಿಯುವುದಿಲ್ಲ. ಈಗಾಗಲೇ ಸ್ಥಾಪಿತವಾಗಿರುವ ಬೃಹತ್ ಉಪಕರಣಗಳು ಮೂಲಸೌಕರ್ಯಗಳನ್ನು ಪುನರ್ ನಿರ್ಮಾಣ ಮಾಡುವುದು ಅಸಾಧ್ಯ ಎಂದು ಹೇಳಿದ್ದಾರೆ. HAL ಮತ್ತೊಂದು ಘಟಕವನ್ನು ಹೊಸದಾಗಿ ಸ್ಥಾಪನೆ ಮಾಡಲು ಮಾತ್ರ ಸಾಧ್ಯ. ಅನಗತ್ಯ ವಿವಾದವನ್ನು ಹುಟ್ಟು ಹಾಕಲಾಗಿದೆ. ಆದರೆ ಬಿಜೆಪಿ ನಾಯಕರುಗಳಿಗೆ ಇದರ ಬಗ್ಗೆ ಸ್ಪಷ್ಟನೆ ಕೊಡಬೇಕು ಎಂದು ಅನ್ನಿಸದಿರುವುದು ಶೋಚನೀಯ ಎಂಬುದಾಗಿ ತಿಳಿಸಿದ್ದಾರೆ. https://twitter.com/sprakaashbjp/status/1927587802645934365 https://kannadanewsnow.com/kannada/heavy-rains-holiday-declared-for-anganwadi-schools-and-colleges-in-kodagu-district-tomorrow/ https://kannadanewsnow.com/kannada/security-drills-to-be-conducted-tomorrow-in-gujarat-rajasthan-punjab-and-jammu-kashmir/

Read More

ಮಡಿಕೇರಿ: ಜಿಲ್ಲೆಯಲ್ಲಿ ನಾಳೆ ಭಾರೀ ಮಳೆಯಾಗುವಂತ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕೊಡಗು ಜಿಲ್ಲೆಯಲ್ಲಿ ನಾಳೆಯಿಂದ ಎರಡು ದಿನ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಕುರಿತಂತೆ ಮಡಿಕೇರಿ ಜಿಲ್ಲಾಧಿಕಾರಿ ವೆಂಕಟರಾಜಾ ಅವರು ಆದೇಶಿಸಿದ್ದು, ಗುರುವಾರ, ಶುಕ್ರವಾರದಂದು ಜಿಲ್ಲೆಯಲ್ಲಿ ಭಾರೀ ಮಳೆಯಾಗುವಂತ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಅಲ್ಲದೇ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದಿದ್ದಾರೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕೊಡಗು ಜಿಲ್ಲೆಯ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ನಾಳೆ, ನಾಡಿದ್ದು ರಜೆ ಘೋಷಿಸಲಾಗಿದೆ ಅಂತ ಡಿಸಿ ಆದೇಶದಲ್ಲಿ ತಿಳಿಸಿದ್ದಾರೆ. https://kannadanewsnow.com/kannada/n-chandrasekaran-resigns-from-the-chairman-position-of-tata-chemicals/ https://kannadanewsnow.com/kannada/security-drills-to-be-conducted-tomorrow-in-gujarat-rajasthan-punjab-and-jammu-kashmir/

Read More

ಮುಂಬೈ: ಟಾಟಾ ಸನ್ಸ್ ಅಧ್ಯಕ್ಷ ಎನ್. ಚಂದ್ರಶೇಖರನ್ ಅವರು ಮೇ 29 ರಿಂದ ಜಾರಿಗೆ ಬರುವಂತೆ ಟಾಟಾ ಕೆಮಿಕಲ್ಸ್‌ನ ನಿರ್ದೇಶಕ ಮತ್ತು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಕಂಪನಿ ಬುಧವಾರ ಷೇರು ವಿನಿಮಯ ಕೇಂದ್ರಗಳಿಗೆ ತಿಳಿಸಿದೆ. ಮಂಡಳಿಯು ಅವರ ರಾಜೀನಾಮೆಯನ್ನು ಅಂಗೀಕರಿಸಿತು ಮತ್ತು ಪ್ರಸ್ತುತ ನಿರ್ದೇಶಕರಾಗಿರುವ ಎಸ್. ಪದ್ಮನಾಭನ್ ಅವರನ್ನು ಮೇ 30 ರಿಂದ ಜಾರಿಗೆ ಬರುವಂತೆ ಹೊಸ ಅಧ್ಯಕ್ಷರನ್ನಾಗಿ ನೇಮಿಸಿತು. ಹೆಚ್ಚುವರಿಯಾಗಿ, ಮೋಡನ್ ಸಹಾ ಅವರನ್ನು ಮೇ 28 ರಿಂದ ಜಾರಿಗೆ ಬರುವಂತೆ ಹೆಚ್ಚುವರಿ ನಿರ್ದೇಶಕರನ್ನಾಗಿ ನೇಮಿಸಲಾಗಿದೆ ಎಂದಿದೆ. ಮೇ 29, 2025 ರಿಂದ ಟಾಟಾ ಕೆಮಿಕಲ್ಸ್ ಲಿಮಿಟೆಡ್‌ನ ನಿರ್ದೇಶಕ ಮತ್ತು ಮಂಡಳಿಯ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುವ ನನ್ನ ನಿರ್ಧಾರವನ್ನು ಔಪಚಾರಿಕವಾಗಿ ನಿಮಗೆ ತಿಳಿಸಲು ನಾನು ಬರೆಯುತ್ತಿದ್ದೇನೆ” ಎಂದು ಚಂದ್ರಶೇಖರನ್ ಮಂಡಳಿಗೆ ಬರೆದ ಪತ್ರದಲ್ಲಿ ಬರೆದಿದ್ದಾರೆ. “ನನ್ನ ಪ್ರಸ್ತುತ ಮತ್ತು ಭವಿಷ್ಯದ ಬದ್ಧತೆಗಳನ್ನು ಎಚ್ಚರಿಕೆಯಿಂದ ಮೌಲ್ಯಮಾಪನ ಮಾಡಿದ ನಂತರ, ನಾನು ಮಂಡಳಿಯಿಂದ ಕೆಳಗಿಳಿಯಲು ನಿರ್ಧರಿಸಿದ್ದೇನೆ. ಟಾಟಾ ಕೆಮಿಕಲ್ಸ್ ಮಂಡಳಿಯ…

Read More

ಶಿವಮೊಗ್ಗ : ಮಳೆಗಾಲದ ವೇಳೆಯಲ್ಲಿ ಡೆಂಗ್ಯೂ, ಕೋವಿಡ್ ಹೆಚ್ಚಾಗುವುದು ಮಾಮೂಲಿಯಾಗಿದೆ. ಈ ಕೋವಿಡ್ ಹಾಗೂ ಡೇಂಗ್ಯೂ ಬಗ್ಗೆ ಆತಂಕ ಬೇಡ. ಮುಂಜಾಗೃತೆಯಿರಲಿ ಎಂಬುದಾಗಿ ಸಾಗರ ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಉಪವಿಭಾಗೀಯ ಆಸ್ಪತ್ರೆಯಲ್ಲಿ ತಾಲ್ಲೂಕಿನ ಕೊರೋನಾ, ಡೆಂಗ್ಯೂ ನಿಯಂತ್ರಣ ಕ್ರಮಗಳ ಬಗ್ಗೆ ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಮಾಹಿತಿ ಪಡೆದರು. ಈ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ತಾಲ್ಲೂಕಿನಲ್ಲಿ ಕೋವಿಡ್, ಡೆಂಗ್ಯೂ ಹೆಚ್ಚಳವಾಗದಂತೆ ನಿಯಂತ್ರಣ ಕ್ರಮವಹಿಸಬೇಕು. ಕೆಎಫ್ ಡಿ ಬಗ್ಗೆಯೂ ಗಮನಹರಿಸಬೇಕು ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು. ಸಾಗರ ತಾಲ್ಲೂಕಿನಲ್ಲಿ ಈವರೆಗೆ ಯಾವುದೇ ಕೋವಿಡ್ ಕೇಸ್ ವರದಿಯಾಗಿಲ್ಲ. ರಾಜ್ಯದ ಬೆಂಗಳೂರು ಸೇರಿದಂತೆ ಇತರೆಡೆ ಕೋವಿಡ್ ಪ್ರಕರಣಗಳು ವರದಿಯಾಗುತ್ತಿವೆ. ಈಗಾಗಲೇ ಈ ಬಗ್ಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ನಿಯಂತ್ರಣ ಕ್ರಮಕ್ಕೆ ಖಡಕ್ ಸೂಚನೆ ನೀಡಿದ್ದಾರೆ ಎಂದರು. ಸಾಗರ ತಾಲ್ಲೂಕಿನಲ್ಲಿ…

Read More