Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ನಗರದಲ್ಲಿ ಪತ್ನಿ ಕಿರುಕುಳಕ್ಕೆ ಮತ್ತೊಂದು ಬಲಿಯಾಗಿದೆ. ಪತಿಯೊಬ್ಬ ಪತ್ನಿ ಕಿರುಕುಳಕ್ಕೆ ಬೇಸತ್ತು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವಂತ ಘಟನೆ ಗಿರಿನಗರದಲ್ಲಿ ನಡೆದಿದೆ. ಬೆಂಗಳೂರಿನ ಗಿರಿನಗರದಲ್ಲಿ ಗಗನ್ ರಾವ್ ಎಂಬುವರೇ ಪತ್ನಿಯ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾದಂತ ವ್ಯಕ್ತಿಯಾಗಿದ್ದಾರೆ. ಗಗನ್ ರಾವ್ ಅವರು ಬ್ಯಾಂಕ್ ಒಂದರಲ್ಲಿ ಕೆಲಸ ಮಾಡುತ್ತಿದ್ದರು. ಕಳೆದ 8 ತಿಂಗಳ ಹಿಂದಷ್ಟೇ ಗಗನ್ ರಾವ್ ಹಾಗೂ ಮೇಘನ್ ಜಾಧವ್ ವಿವಾಹವಾಗಿದ್ದರು. ಆರಂಭದಲ್ಲಿ ಎಲ್ಲವೂ ಚೆನ್ನಾಗಿದ್ದಂತ ಸಂಸಾರವು, ಪತಿ-ಪತ್ನಿ ನಡುವೆ ಜಗಳಕ್ಕೆ ಆನಂತ್ರ ಕಾರಣವಾಗಿತ್ತು. ಪತಿ ಗಗನ್ ರಾವ್ ಗೆ ಪತ್ನಿ ಮೇಘನ ಜಾಧವ್ ಕಿರುಕುಳ ನೀಡುತ್ತಿದ್ದರಂತೆ. ಈ ಹಿನ್ನಲೆಯಲ್ಲಿ ಪತ್ನಿ ಮೇಘನ ಜಾಧವ್ ಕಿರುಕುಳಕ್ಕೆ ಬೇಸತ್ತು ಪತಿ ಗಗನ್ ರಾವ್ ತಮ್ಮ ಗಿರಿನಗರದ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದಂತ ಗಿರಿನಗರ ಠಾಣೆಯ ಪೊಲೀಸರು, ಮೃತನ ತಂಗಿಯಿಂದ ದೂರು ಪಡೆದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. https://kannadanewsnow.com/kannada/adoption-under-law-is-a-wealth-of-life-long-happiness-child-welfare-committee-chairman-tajuddin-khan/ https://kannadanewsnow.com/kannada/big-news-good-news-for-caste-census-surveyors-and-supervisors-honorary-allowance-released-by-the-state-government/
ಶಿವಮೊಗ್ಗ: ಕಾನೂನಿನಡಿ ಪಡೆದ ದತ್ತು – ಜೀವನವಿಡಿ ಸುಖದ ಸಂಪತ್ತು ಎಂಬುದಾಗಿ ಶಿವಮೊಗ್ಗ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದಂತ ತಾಜುದ್ದೀನ್ ಖಾನ್ ಅವರು ತಿಳಿಸಿದ್ದಾರೆ. ಘಟನೆ 1. ಇತ್ತೀಚಿಗೆ ಜಿಲ್ಲೆಯಲ್ಲಿ ನಡೆದ ಘಟನೆ ಕೆಲವು ಗಂಟೆಗಳ ಮುಂದೆ ಜನಿಸಿದ ನವಜಾತ ಹೆಣ್ಣು ಶಿಶುವಿಗೆ ರಸ್ತೆಯ ಬದಿಯಲ್ಲಿ ಗೋಣಿಚೀಲದಲ್ಲಿ ಸುತ್ತಿ ಪ್ಲಾಸ್ಟಿಕ್ ಚೀಲದಲ್ಲಿ ಕಟ್ಟಿ ಬಿಸಾಡಿದ್ದರು ನಂತರ ಮಗುವಿನ ಅಳುವ ಶಬ್ದವನ್ನು ಕೇಳಿದ ಸಾರ್ವಜನಿಕರು ಚೀಲ ಬಿಚ್ಚಿ ನೋಡಿದಾಗ ಆಗ ತಾನೆ ಜನಿಸಿದ ಇರುವೆ ಮುತ್ತಿಕೊಂಡ ಮಾಂಸದ ಮುದ್ದೆ. ಮಾಹಿತಿ ತಿಳಿದ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಮಗುವನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದಾಗ ಮಗುವಿಗೆ ಚಿಕಿತ್ಸೆ ಕೊಡಿಸಲಾಯಿತು ಅದೃಷ್ಟವಶಾತ್ ಮಗು ಬದುಕುಳಿಯಿತು, ಜೈವಿಕ ಪೋಷಕರು ಪತ್ತೆಯಾಗದೆ ಇದ್ದಾಗ ಮಗುವನ್ನು ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಹಾಜರುಪಡಿಸಿ ಕಾನೂನಿನ ಪ್ರಕಾರ ಮಗುವನ್ನು ದತ್ತು ಪ್ರಕ್ರಿಯೆಗೆ ಒಳಪಡಿಸಲಾಯಿತು. ಘಟನೆ 2. ಮದುವೆಯಾಗಿ 16 ವರ್ಷಗಳಾಗಿದ್ದು ಮಕ್ಕಳಾಗಲಿಲ್ಲವೆಂದು ಕೊರಗುತ್ತಿದ್ದ ದಂಪತಿಗಳು ದೂರದ ಪರಿಚಯಸ್ತರಿಗೆ ಹುಟ್ಟಿದ ಮಗುವನ್ನು…
ಶಿವಮೊಗ್ಗ: ಒಂದು ಮಗುವನ್ನು ದತ್ತು ತೆಗೆದುಕೊಂಡಲ್ಲಿ ಜಗತ್ತು ಬದಲಾಗುವುದಿಲ್ಲ. ಆದರೆ ಆ ಮಗುವಿನ ಜಗತ್ತು ಬದಲಾಗುತ್ತದೆ… ಪ್ರತಿಯೊಂದು ಮಗುವೂ ಕುಟುಂಬ ಹೊಂದಲು ಅರ್ಹ. ಈ ನಿಟ್ಟಿನಲ್ಲಿ ಭಾರತ ಸರ್ಕಾರ ಕಾನೂನು ಬದ್ದ ದತ್ತು ಯೋಜನೆಯನ್ನು ರೂಪಿಸಿದ್ದು, ಜಿಲ್ಲಾ ಮಕ್ಕಳ ರಕ್ಷಣಾ ಘಟಕಗಳು ಈ ಯೋಜನೆಯನ್ನು ಜಾರಿಗೊಳಿಸುತ್ತಾ ಬಂದಿದೆ. ಈ ಯೋಜನೆಯ ಭಾಗವಾಗಿ ನವೆಂಬರ್ ಮಾಸ ಪೂರ್ತಿ ದತ್ತು ಮಾಸಾಚರಣೆಯನ್ನು ಆಚರಿಸುವ ಮೂಲಕ ದತ್ತು ಪ್ರಕ್ರಿಯೆ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ. ವಿಶೇಷ ಮಕ್ಕಳು ಸೇರಿದಂತೆ ಮಕ್ಕಳು ಹುಟ್ಟಿದಾಗ ಎಲ್ಲೆಂದರಲ್ಲಿ ಬಿಟ್ಟು ಹೋಗದೆ, ಬಿಸಾಡದೇ ಸರ್ಕಾರಿ ಆಸ್ಪತ್ರೆಗಳು, ಮಕ್ಕಳ ಕಲ್ಯಾಣ ಸಮಿತಿ, ಮಕ್ಕಳ ರಕ್ಷಣಾ ಘಟಕ ಸಂಪರ್ಕಿಸಿ ಒಪ್ಪಿಸುವ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಮಾಸಾಚರಣೆ ಮಾಡಲಾಗುತ್ತದೆ. ಈ ವರ್ಷ ವಿಶೇಷ ಅಗತ್ಯತೆಯುಳ್ಳ ಮಕ್ಕಳನ್ನು ದತ್ತು ನೀಡುವ ಕುರಿತು ಅರಿವು ಮೂಡಿಸಲಾಗುತ್ತಿದೆ. ವಿಶೇಷ ಅಗತ್ಯವಿರುವ ಮಕ್ಕಳಿಗೆ ಕುಟುಂಬ ಆಧಾರಿತ ಆರೈಕೆ ನೀಡಿ, ಕಾಳಜಿಯಿಂದ ಭವಿಷ್ಯವನ್ನು ನಿರ್ಮಿಸುವ ಉದ್ದೇಶ ಹೊಂದಲಾಗಿದೆ. ಪ್ರತಿಯೊಂದು ಮಗುವೂ ಒಂದು ಕುಟುಂಬ…
ಬೆಂಗಳೂರು: 2025-26ನೇ ಸಾಲಿನಲ್ಲಿ ಡಿಪ್ಲೋಮಾ ಲ್ಯಾಟರಲ್ ಎಂಟ್ರಿ ಮೂಲಕ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳ ಶುಲ್ಕ ಪಾವತಿಸುವಂತೆ ಕಾಲೇಜುಗಳಿಗೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ(ವಿಟಿಯು) ಸೂಚಿಸಿದೆ. ಲ್ಯಾಟರಲ್ ಎಂಟ್ರಿ ಮೂಲಕ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳ ಅನುಮೋದಿತ ಪಟ್ಟಿ ಹಾಗೂ ವಿಶ್ವವಿದ್ಯಾಲಯದ ಶುಲ್ಕವನ್ನು ಪಾವತಿಸಿದ ರಶೀದಿಯನ್ನು ವಿಟಿಯುಗೆ ಸಲ್ಲಿಸಲು ಸೂಚಿಸಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಮೂಲಕ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳ ಶುಲ್ಕವನ್ನು ಕೆಇಎ ಆಯಾ ಕಾಲೇಜುಗಳಿಗೆ ಪಾವತಿಸಿರುತ್ತದೆ. ಈ ಮೊತ್ತವನ್ನು ಕಾಲೇಜುಗಳು ವಿಟಿಯು ಖಾತೆಗೆ ಪಾವತಿಸಬೇಕೆಂದು ಕೋರಿದೆ. ಕೆಇಎ ಮತ್ತು ಮ್ಯಾನೇಜ್ಮೆಂಟ್ ಮೂಲಕ ಪ್ರವೇಶ ಪಡೆದ ವಿದ್ಯಾರ್ಥಿಗಳ ಮೊತ್ತವನ್ನು ಪಾವತಿಸಲು ಸೂಚಿಸಿದೆ. ವಿಟಿಯು ವಿತ್ತಾಧಿಕಾರಿ ಖಾತೆಗೆ ಆಡಳಿತ ವಿಭಾಗಕ್ಕೆ ಸಂಬಂಧಿತ ಶುಲ್ಕವನ್ನು ಮಾತ್ರ ಪಾವತಿಸಲು ಸೂಚಿಸಿದ್ದು, ಪರೀಕ್ಷಾ ವಿಭಾಗದ ಶುಲ್ಕವನ್ನು ಪಾವತಿಸಲು ಪರೀಕ್ಷಾ ವಿಭಾಗವನ್ನು ಸಂಪರ್ಕಿಸಬೇಕೆಂದು ಕೋರಿದೆ. ವಿದ್ಯಾರ್ಥಿಗಳ ಶುಲ್ಕವನ್ನು ಪಾವತಿಸದೇ ಇದ್ದ ಪಕ್ಷದಲ್ಲಿ ಅಂತಹ ವಿದ್ಯಾರ್ಥಿಗಳ ಪಟ್ಟಿಯನ್ನು ಸ್ವೀಕರಿಸಲಾಗುವುದಿಲ್ಲವೆಂದು ವಿಟಿಯು ಸ್ಪಷ್ಟಪಡಿಸಿದೆ. ಹೆಚ್ಚಿನ ಮಾಹಿತಿಗೆ ವಿಟಿಯು ವೆಬ್ಸೈಟ್ https://vtu.ac.in/ ನೋಡಬಹುದು. ವಾಸ್ತುಶಿಲ್ಪ ತರಗತಿಗಳು ಜ.1ರಿಂದ…
ಚೆನ್ನೈ: ತಮ್ಮ ವಿರುದ್ಧ ಬೆಂಗಳೂರಿನ ಫ್ಯಾಶನ್ ಡಿಸೈನರ್ ಪಾರ್ವತಿ ಮಾಡುತ್ತಿರುವಂತ ಲೈಂಗಿಕ ಆರೋಪ ಸುಳ್ಳು. ತಾನು ಅವರ ವಿರುದ್ಧ ನೀಡಿದಂತ ವಂಚನೆ ಕೇಸ್ ಮುಚ್ಚಿ ಹಾಕೋದಕ್ಕೆ ಈ ರೀತಿಯಗಾ ಇಲ್ಲ ಸಲ್ಲದ ಆರೋಪ ಮಾಡುತ್ತಿರುವುದಾಗಿ ಬಿಗ್ ಬಾಸ್ ತಮಿಳು ಖ್ಯಾತಿಯ ಇವಿಪಿ ಫಿಲ್ಮ್ ಮಾಲೀಕ ಸಂತೋಷ್ ರೆಡ್ಡಿ ಸ್ಪಷ್ಟ ಪಡಿಸಿದ್ದಾರೆ. ಅವರು ವೀಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದು, ತಮ್ಮ ಮೇಲೆ ಬೆಂಗಳೂರಿನ ಇನ್ಸ್ಟಾಗ್ರಾಮ್ ಖ್ಯಾತಿಯ ಫ್ಯಾಶನ್ ಡಿಸೈನರ್ ಮಹಿಳೆ ಪಾರ್ವತಿ ದಾಖಲಿಸಿರುವ ಲೈಂಗಿಕ ಕಿರುಕುಳ ಪ್ರಕರಣವು, ತಾವು ಈ ಹಿಂದೆ ದಾಖಲಿಸಿದ್ದ ಕೋಟ್ಯಂತರ ರೂಪಾಯಿ ವಂಚನೆ ಪ್ರಕರಣದಿಂದ ಪಾರಾಗಲು ರೂಪಿಸಿದ ಸಂಚು ಎಂದು ಆರೋಪಿಸಿದ್ದಾರೆ. ಪಾರ್ವತಿ ಅವರು ಬೆಂಗಳೂರಿನಲ್ಲಿ ದೂರು ನೀಡುವುದಕ್ಕೂ 8 ದಿನಗಳ ಮೊದಲೇ, ಅಂದರೆ ಸೆಪ್ಟೆಂಬರ್ 17, 2025ರಂದೇ ತಾವು ಚೆನ್ನೈನಲ್ಲಿ ವಂಚನೆ ದೂರು ದಾಖಲಿಸಿದ್ದಾಗಿ ಸಂತೋಷ್ ರೆಡ್ಡಿ ಅಧಿಕೃತ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ. ಪಾರ್ವತಿ ವಿರುದ್ಧ ಮೊದಲೇ ದೂರು ದಾಖಲಿಸಿದ್ದ ಸಂತೋಷ್ ರೆಡ್ಡಿ ನಾನು ಪಾರ್ವತಿ ಮತ್ತು…
ಚಿತ್ರದುರ್ಗ: ಭಾನುವಾರದಂದು ನಡೆದಂತ ಚಿತ್ರದುರ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಶಾಖೆಗೆ ಪದಾಧಿಕಾರಿಗಳ ಆಯ್ಕೆಯ ಚುನಾವಣೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ವೀರೇಶ್ ವಿ ಚಳ್ಳಕೆರೆ ( ಅಪ್ಪು) ಭರ್ಜರಿ ಗೆಲುವು ಸಾಧಿಸಿ, ಆಯ್ಕೆಯಾಗಿದ್ದಾರೆ. ಈ ಕುರಿತು ಜಿಲ್ಲಾ ಚುನಾವಣಾಧಿಕಾರಿ ಚಿಕ್ಕಪ್ಪನಹಳ್ಳಿ ಷಣ್ಣುಖ ಮಾಹಿತಿ ನೀಡಿದ್ದು, ದಿನಾಂಕ 09-11-2025ರಂದು ನಡೆದ 2025-2028ರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಪದಾಧಿಕಾರಿಗಳ ಚುನಾವಣೆಯಲ್ಲಿ ಸ್ಪರ್ಧಿಸಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ವೀರೇಶ್ ವಿ ಚಳ್ಳಕೆರೆ ಆಯ್ಕೆಯಾಗಿದ್ದಾರೆ ಎಂಬುದಾಗಿ ಘೋಷಿಸಿದ್ದಾರೆ. ವೀರೇಶ್ ವಿ ಚಳ್ಳಕೆರೆ ಬಗ್ಗೆ ಮಾಹಿತಿ ಅಂದಹಾಗೇ ವೀರೇಶ್ ವಿ ಚಳ್ಳಕೆರೆ( ಅಪ್ಪು) ಅವರು ಮಾಧ್ಯಮ ವೃತ್ತಿ ಬದುಕಿನ 15 ವರ್ಷದ ಹಾದಿಯಲ್ಲಿ 3 ವರ್ಷಗಳ ಕಾಲ ಬೆಂಗಳೂರಿನಲ್ಲಿ ಜನಶ್ರೀ ಮತ್ತು ಸುವರ್ಣ ನ್ಯೂಸ್ ನಲ್ಲಿ ಸೇವೆ ಸಲ್ಲಿಸಿದ್ದಾರೆ. ಕಳೆದ 12 ವರ್ಷಗಳಿಂದ ಚಿತ್ರದುರ್ಗ ಜಿಲ್ಲೆಯಲ್ಲಿ ಸಮಯ ನ್ಯೂಸ್, ಟಿವಿ5 ಕನ್ನಡ, ದಿಗ್ವಿಜಯ, ಈಗ R. ಕನ್ನಡ ಸುದ್ದಿ ವಾಹಿನಿ ಜಿಲ್ಲಾ ವರದಿಗಾರರಾಗಿ ಕೆಲಸ…
ತುಮಕೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತುಮಕೂರು ಜಿಲ್ಲಾ ಘಟಕಕ್ಕೆ ನಿನ್ನೆ ಚುನಾವಣೆ ನಡೆಯಿತು. ಈ ಚುನಾವಣೆಯಲ್ಲಿ ಜಿಲ್ಲಾ ಕಾರ್ಯಕಾರಿಣಿ ಸಮಿತಿ ಸದಸ್ಯ ಸ್ಥಾನಕ್ಕೆ ಜಯ್ಯಣ್ಣ ಬೆಳಗೆರೆ ಹಾಗೂ ರಘು ಹೆಚ್ಚು ಮತಗಳನ್ನು ಗಳಿಸುವ ಮೂಲಕ ವಿಜೇತರಾಗಿ ಆಯ್ಕೆಯಾಗಿದ್ದಾರೆ. ಈ ಬಗ್ಗೆ ಜಿಲ್ಲಾ ಚುನಾವಣಾಧಿಕಾರಿ ಟಿ.ಸಿ ಕಾಂತರಾಜ್ ಮಾಹಿತಿ ನೀಡಿದ್ದು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತುಮಕೂರು ಜಿಲ್ಲಾ ಘಟಕಕ್ಕೆ ಚುನಾವಣೆ ನಡೆಯಿತು. ಮತಏಣಿಕೆಯ ನಂತ್ರ ಆಯ್ಕೆಯಾದ ಪದಾಧಿಕಾರಿಗಳು, ರಾಜ್ಯ ಪರಿಷತ್ ಸದಸ್ಯರು ಹಾಗೂ ಜಿಲ್ಲಾ ಕಾರ್ಯಕಾರಿಣಿ ಸದಸ್ಯರ ವಿವರ ಈ ಕೆಳಗಿನಂತಿದೆ ಎಂಬುದಾಗಿ ತಿಳಿಸಿದ್ದಾರೆ. ತುಮಕೂರು ಜಿಲ್ಲಾ ಘಟಕದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಸುವರ್ಣ ನ್ಯೂಸ್ ಯೋಗೇಶ್ ಅವರು ಚುನಾಯಿತರಾಗಿದ್ದರೇ, ಉಪಾಧ್ಯಕ್ಷರಾಗಿ ಜಯ್ಯಣ್ಣ ಸಿ ಜಯನುಡಿ, ದಶರಥ ಚುನಾಯಿತರಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ಏಕೇಶ್ ಪತ್ರಿಕೆಯ ಟಿಇ ರಘುರಾಮ್ ಆಯ್ಕೆಯಾಗಿದ್ದಾರೆ. ಇನ್ನು ಕಾರ್ಯದರ್ಶಿಯಾಗಿ ರಂಗಧಾಮಯ್ಯ ಕೊರಟಗೆರೆ, ಯಶಸ್ ಕೆ ಪದ್ಮನಾಭ, ನಂದೀಶ್ ಬಿಎಲ್ ತುರುವೇಕೆರೆ ಚುನಾಯಿತರಾಗಿದ್ದಾರೆ. ಜಿಲ್ಲಾ ಕಾರ್ಯಕಾರಿ…
: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ಚುನಾವಣೆ ಪ್ರಕ್ರಿಯೆಯಲ್ಲಿ ಪಾಲ್ಗೊಂಡ ಎಲ್ಲರಿಗೂ ಧನ್ಯವಾದಗಳನ್ನು ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರ ತಿಳಿಸಿದ್ದಾರೆ. ಇಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು KUWJ ಚುನಾವಣೆಯಲ್ಲಿ ನೂತನ ಸಾಲಿನ ಆಡಳಿತ ಮಂಡಳಿಗೆ ಆಯ್ಕೆಯಾದ ಎಲ್ಲರಿಗೂ ಅಭಿನಂದನೆಗಳು ಎಂದು ಹೇಳಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆ ಅನಿವಾರ್ಯ. ಸ್ಪರ್ಧಿಸಿದವರೆಲ್ಲರೂ ಗೆಲ್ಲಲು ಆಗುವುದಿಲ್ಲ. ಹಾಗೆಯೇ ಎಲ್ಲರೂ ಸೋಲಲು ಆಗುವುದಿಲ್ಲ. ಸ್ಪರ್ಧೆಯಲ್ಲಿ ಸೋಲು-ಗೆಲುವು ಅನಿವಾರ್ಯ. ಗೆದ್ದವರು ಹಿಗ್ಗಬೇಕಿಲ್ಲ. ಸೋತವರು ಕುಗ್ಗಬೇಕಿಲ್ಲ. ಇಂದಿನ ಸೋಲು ಮುಂದೆ ಗೆಲುವಾಗಬಹುದು. ಸಮಾನ ಮನಸ್ಥಿತಿಯಲ್ಲಿ ಎಲ್ಲವನ್ನೂ ಸ್ವೀಕರಿಸುವುದು ಆರೋಗ್ಯಕರ ಲಕ್ಷಣ ಎಂದಿದ್ದಾರೆ. ಎಷ್ಟೇ ಆದರೂ ನಾವೆಲ್ಲರೂ ವೃತ್ತಿಬಾಂಧವರು. ನಾವೆ ಒಪ್ಪಿಕೊಂಡ ಆದರ್ಶಗಳನ್ನು ಪರಿಪಾಲನೆ ಮಾಡುವ ಮೂಲಕ ವೃತ್ತಿ ಘನತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕಾಯಕ ಮಾಡೋಣ ಅಂತ ತಿಳಿಸಿದ್ದಾರೆ. ಚುನಾವಣೆ ಎನ್ನುವುದು ಪ್ರಜಾಪ್ರಭುತ್ವದ ಸೊಬಗು. ಮುಂದೆಯೂ ಚುನಾವಣೆ ಬರುತ್ತದೆ. ಸಮಾಧಾನ, ಸಂಯಮ ನಮ್ಮನ್ನು ಇನ್ನಷ್ಟು ಎತ್ತರಕ್ಕೆ ಬೆಳೆಸುತ್ತದೆ. ಪ್ರೀತಿ, ವಿಶ್ವಾಸದಿಂದ ಜಗತ್ತನ್ನು ಗೆಲ್ಲಬಹುದೇ ಹೊರತು ದ್ವೇಷದಿಂದ ಅಲ್ಲ. ಎಲ್ಲರಿಗೂ…
ನವದೆಹಲಿ: ಇತ್ತೀಚಿನ ದಿನಗಳಲ್ಲಿ, ಅಧ್ಯಯನವು ಹೆಚ್ಚಿನ ಅಂಕಗಳನ್ನು ಗಳಿಸುವುದು ಮತ್ತು ಅತ್ಯುತ್ತಮ ಕಾಲೇಜಿಗೆ ಪ್ರವೇಶ ಪಡೆಯುವ ಬಗ್ಗೆ ಹೆಚ್ಚು ಗಮನ ಹರಿಸುತ್ತಿದೆ, ಆದರೆ ವಾಸ್ತವವಾಗಿ ಕಲಿಯುವುದು ಅಥವಾ ಪ್ರಕ್ರಿಯೆಯನ್ನು ಆನಂದಿಸುವ ಬದಲು ನಿರಂತರ ಒತ್ತಡವು ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರುತ್ತಿದೆ. ಅನೇಕರು ಹೊರೆಯಾಗಿ ಭಾವಿಸುತ್ತಾರೆ ಮತ್ತು ನಿರೀಕ್ಷೆಗಳನ್ನು ಪೂರೈಸಲು ಸಾಧ್ಯವಾಗದಿದ್ದಾಗ ತೀವ್ರ ಕ್ರಮಗಳನ್ನು ತೆಗೆದುಕೊಳ್ಳುತ್ತಾರೆ. ಹೀಗಾಗಿಯೇ ಅಧ್ಯಯನದ ಪ್ರಕಾರ ವಿಶ್ವದಲ್ಲಿ ಆತ್ಮಹತ್ಯೆಗೆ ಶರಣಾಗುವ 9 ವಿದ್ಯಾರ್ಥಿಗಳಲ್ಲಿ ಭಾರತದಲ್ಲಿ ಒಬ್ಬರು ಸೇರಿದ್ದಾರೆ ಎಂಬುದಾಗಿ ಬಹಿರಂಗ ಪಡಿಸಿದೆ. ಹೊಸ ವರದಿಯೊಂದು ಆತಂಕಕಾರಿ ಸತ್ಯವನ್ನು ಬಹಿರಂಗಪಡಿಸಿದೆ, ವಿಶ್ವದ ಪ್ರತಿ ಒಂಬತ್ತು ವಿದ್ಯಾರ್ಥಿ ಆತ್ಮಹತ್ಯೆಗಳಲ್ಲಿ ಒಂದು ಭಾರತದ್ದಾಗಿದೆ. 2024 ರ IC3 ವಿದ್ಯಾರ್ಥಿ ಆತ್ಮಹತ್ಯೆ ವರದಿಯು ದೇಶಾದ್ಯಂತ ವಿದ್ಯಾರ್ಥಿಗಳ ಆತ್ಮಹತ್ಯೆಗಳು ತೀವ್ರವಾಗಿ ಹೆಚ್ಚುತ್ತಿವೆ, ವಿಶೇಷವಾಗಿ ಶೈಕ್ಷಣಿಕ ಒತ್ತಡ ತೀವ್ರವಾಗಿರುವ ಶಾಲೆಗಳು ಮತ್ತು ಕಾಲೇಜುಗಳಲ್ಲಿ ಎಂದಿದೆ. 2013 ಮತ್ತು 2022 ರ ನಡುವೆ, ಭಾರತವು ಒಂದು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಆತ್ಮಹತ್ಯೆಗಳನ್ನು ದಾಖಲಿಸಿದೆ, ಇದು ಹಿಂದಿನ ದಶಕಕ್ಕೆ ಹೋಲಿಸಿದರೆ ಶೇಕಡಾ…
ಬೆಂಗಳೂರು: ಕಾನೂನು ಸಂಘರ್ಷಕ್ಕೆ ಒಳಪಟ್ಟ ಮಕ್ಕಳಿಗೆ ಬಾಲಾಪರಾಧಿ ಎಂಬುದಾಗಿ ಕರೆಯುವುದು ಕಾನೂನು ಬಾಹಿರವಾಗಿದೆ. ಹಾಗೆ ಬಾಲಾಪರಾಧಿ ಎನ್ನುವಂತಿಲ್ಲ. ಇನ್ಮುಂದೆ ಅದರ ಬದಲಾಗಿ ಬೇರೆ ಪದಗಳನ್ನು ಬಳಸುವಂತೆ ಮಕ್ಕಳ ರಕ್ಷಣಾ ನಿರ್ದೇಶನಾಲಯವು ಆದೇಶ ಹೊರಡಿಸಿದೆ. ಈ ಕುರಿತಂತೆ ಮಕ್ಕಳ ರಕ್ಷಣಾ ನಿರ್ದೇಶನಾಲಯದ ನಿರ್ದೇಶಕರು ಆದೇಶ ಹೊರಡಿಸಿದ್ದು, ಬಾಲ ನ್ಯಾಯ( ಮಕ್ಕಳ ಪಾಲನೆ ಮತ್ತು ರಕ್ಷಣೆ) ಕಾಯ್ದೆ 2015 ಅನ್ನು ಅನುಷ್ಠಾನಗೊಳಿಸುತ್ತಿದ್ದು, ಸದರಿ ಕಾಯ್ದೆಯ ಅನುಸಾರ ಕಾನೂನಿನ ಸಂಘರ್ಷಕ್ಕೆ ಒಳಪಟ್ಟ ಮಕ್ಕಳಿಗೆ ಬಾಲಾಪರಾಧಿಗಳು ಎಂದು ಮಕ್ಕಳ ಪಾಲನಾ ಸಂಸ್ಥೆಗಳನ್ನು ಸುಧಾರಣಾ ಸಂಸ್ಥೆಗಳು (ಕರೆಕ್ಷನಲ್ ಹೋಮ್ಸ್) ಎಂದು ಕರೆಯುವುದು ಕಾನೂನು ಬಾಹಿರವಾಗಿರುತ್ತದೆ ಎಂದಿದ್ದಾರೆ. ಆದುದ್ದರಿಂದ ಬಾಲಾಪರಾಧಿಗಳು ಎಂದು ಸಂಬೋಧಿಸುವ ಬದಲು ಕಾನೂನು ಸಂಘರ್ಷಕ್ಕೆ ಒಳಪಟ್ಟ ಮಕ್ಕಳು ಎಂದು ಬಳಸಿ. ರಿಮಾಂಡ್ ಹೋಂ ಎನ್ನುವ ಬದಲು ವೀಕ್ಷಣಾಲಯ ಎಂದು ಬಳಸಬೇಕು. ಸುಧಾರಣಾ ಸಂಸ್ಥೆಗಳು, ಕರೆಕ್ಷನಲ್ ಹೋಮ್ಸ್ ಎಂದು ಸಂಬೋಧಿಸುವ ಬದಲು ಮಕ್ಕಳ ಪಾಲನಾ ಸಂಸ್ಥೆಗಳು ಎಂದು ಸಂಬೋಧಿಸುವಂತೆ ಸೂಚಿಸಿದ್ದಾರೆ. ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು https://kannadanewsnow.com/kannada/cm-siddaramaiah-launches-rs-870-crore-project-to-fill-74-lakes-with-water/…














