Author: kannadanewsnow09

ನವದೆಹಲಿ: ಹಜ್ ಯಾತ್ರೆ-2025 ಸಮೀಪಿಸುತ್ತಿರುವುದರಿಂದ, ಸೌದಿ ಅರೇಬಿಯಾ ಭಾರತ, ಪಾಕಿಸ್ತಾನ ಮತ್ತು ಬಾಂಗ್ಲಾದೇಶ ಸೇರಿದಂತೆ 14 ದೇಶಗಳ ನಾಗರಿಕರಿಗೆ ಕೆಲವು ವೀಸಾಗಳನ್ನು ನೀಡುವುದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಮಕ್ಕಾ ಯಾತ್ರೆ ಮುಕ್ತಾಯಗೊಳ್ಳುತ್ತಿದ್ದಂತೆ ಉಮ್ರಾ, ವ್ಯಾಪಾರ ಮತ್ತು ಕುಟುಂಬ ಭೇಟಿ ವೀಸಾಗಳ ಮೇಲಿನ ನಿಷೇಧವು ಜೂನ್ ಮಧ್ಯಭಾಗದವರೆಗೆ ಜಾರಿಗೆ ಬರಲಿದೆ. ಭಾರತ, ಪಾಕಿಸ್ತಾನ, ಬಾಂಗ್ಲಾದೇಶ, ಈಜಿಪ್ಟ್, ಇಂಡೋನೇಷ್ಯಾ, ಇರಾಕ್, ನೈಜೀರಿಯಾ, ಜೋರ್ಡಾನ್, ಅಲ್ಜೀರಿಯಾ, ಸುಡಾನ್, ಇಥಿಯೋಪಿಯಾ, ಟುನೀಶಿಯಾ, ಯೆಮೆನ್ ಮತ್ತು ಮೊರಾಕೊ ಸೇರಿದಂತೆ 14 ರಾಷ್ಟ್ರಗಳ ಮೇಲೆ ಈ ನಿಷೇಧವು ಪರಿಣಾಮ ಬೀರುತ್ತದೆ. ಸರಿಯಾದ ನೋಂದಣಿ ಇಲ್ಲದೆ ವ್ಯಕ್ತಿಗಳು ಹಜ್ ಮಾಡಲು ಪ್ರಯತ್ನಿಸುವುದನ್ನು ತಡೆಯಲು ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ವರದಿಯಾಗಿದೆ. ಆದಾಗ್ಯೂ, ಉಮ್ರಾ ವೀಸಾಗಳನ್ನು ಹೊಂದಿರುವ ವ್ಯಕ್ತಿಗಳು ಏಪ್ರಿಲ್ 13 ರವರೆಗೆ ಸೌದಿ ಅರೇಬಿಯಾವನ್ನು ಪ್ರವೇಶಿಸಬಹುದು ಎಂದು ಪಾಕಿಸ್ತಾನದ ARY ಸೌದಿ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ ಮಾಡಿದೆ. ಹಿಂದೆ ಅನೇಕ ವಿದೇಶಿ ಪ್ರಜೆಗಳು ಉಮ್ರಾ ಅಥವಾ ಭೇಟಿ ವೀಸಾದಲ್ಲಿ ದೇಶವನ್ನು ಪ್ರವೇಶಿಸಿ ನಂತರ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಪೌರ ಕಾರ್ಮಿಕರು ತ್ಯಾಜ್ಯ ಸಂಗ್ರಹಣಾ ವಾಹನಗಳ ಚಾಲಕರಿಗೆ ಶುಭಸುದ್ದಿಯೊಂದು ಹೊರ ಬಿದ್ದಿದೆ. ಪೌರ ಕಾರ್ಮಿಕರಿಗೆ ಕಾರ್ಮಿಕರ ದಿನವಾದಂತ ಮೇ.1ರಂದು ಖಾಯಂ ಮಾಡುವ ನಿರ್ಧಾರವನ್ನು ಸರ್ಕಾರ ಪ್ರಕಟಿಸಿದೆ. ಈ ಬಗ್ಗೆ ಮಾತನಾಡಿರುವಂತ ಸಿಎಂ ಸಿದ್ಧರಾಮಯ್ಯ ಅವರು, ಕಾರ್ಮಿಕರ ದಿನದಂದು ಗುತ್ತಿಗೆ ಆಧಾರಿತ ಪೌರ ಕಾರ್ಮಿಕರನ್ನು ಹಾಗೂ ತ್ಯಾಜ್ಯ ಸಂಗ್ರಹಣಾ ವಾಹನಗಳ ಚಾಲಕರನ್ನು ಖಾಯಂಗೊಳಿಸುವ ನಿರ್ಧಾರಕ್ಕೆ ನಾವು ಬಂದಿದ್ದೇವೆ ಎಂದಿದ್ದಾರೆ. ಬಸವಾದಿ ಶರಣರ ಕಾಯಕವೇ ಕೈಲಾಸವೆಂಬ ಮಾತಿಗೆ ಬದ್ಧರಾಗಿ ಬಿಸಿಲು – ಮಳೆ, ಹಗಲು – ರಾತ್ರಿಯೆನ್ನದೆ ಸಮಾಜವನ್ನು ಸ್ವಚ್ಚವಾಗಿಡಲು ಶ್ರಮಿಸುತ್ತಿರುವ ಪೌರಕಾರ್ಮಿಕರ ಕಲ್ಯಾಣ ನಮ್ಮ ಕರ್ತವ್ಯ ಅಂತ ತಿಳಿಸಿದ್ದಾರೆ. 2017ರಲ್ಲಿಯೂ 10,000 ಪೌರಕಾರ್ಮಿಕರ ಖಾಯಂಮಾತಿ, ವೇತನವನ್ನು ₹7,000 ದಿಂದ ₹17,000 ಸಾವಿರಕ್ಕೆ ಹೆಚ್ಚಳ ಮಾಡಿದ್ದು ನಾವೇ, ಎಲ್ಲ ಕಾಲಕ್ಕೂ ಶ್ರಮಿಕ ಜನರ ನಿಜವಾದ ಹಿತಚಿಂತಕರು ನಾವೇ ಎಂದು ಹೇಳಿದ್ದಾರೆ. https://twitter.com/KarnatakaVarthe/status/1909175792535498995 https://kannadanewsnow.com/kannada/good-news-for-pourakarmikas-state-govt-to-issue-appointment-letter-on-may-1/ https://kannadanewsnow.com/kannada/big-news-state-government-issues-important-announcement-on-grihalakshmi-scheme/

Read More

ಬೆಂಗಳೂರು: ನನಗೆ ಇಂದೇ ನಿಮಗೆ ನೇಮಕಾತಿ ಪತ್ರ ನೀಡಬೇಕು ಎನ್ನುವ ಆಲೋಚನೆ ಇತ್ತು. ಒಂದಷ್ಟು ಸಿಂದುತ್ವ ಬಾಕಿ ಇರುವ ಕಾರಣ ಮೇ 1 ರಂದು ನೇಮಕಾತಿ ಪತ್ರ ನಿಮ್ಮ ಕೈ ಸೇರುವುದು. ಈ ಬಗ್ಗೆ ಮುಖ್ಯಮಂತ್ರಿಗಳಿಗೂ ನಾನು ಸಲಹೆ ನೀಡಿದೆ. ವಾಹನ ಚಾಲಕರು, ಲೋಡರ್ಸ್ ವಿಚಾರವಾಗಿ ನಾರಾಯಣ ಅವರು ಗಮನ ಸೆಳೆದಿದ್ದಾರೆ. ಅವರ ಮನವಿಯನ್ನು ಕಾರ್ಯಗತಗೊಳಿಸಲು ಕ್ರಮ ತೆಗೆದುಕೊಳ್ಳಲಾಗುವುದು ಎಂಬುದಾಗಿ ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಸೋಮವಾರ ನಡೆದ ಕರ್ನಾಟಕ ರಾಜ್ಯ ನಗರಪಾಲಿಕೆ, ನಗರಸಭೆ, ಪುರಸಭೆಗಳ ಪೌರ ಕಾರ್ಮಿಕರ ಸಮಾವೇಶದಲ್ಲಿ ಮಾತನಾಡಿದರು. “ಶೂ, ಕೈಗವಸು ಸೇರಿದಂತೆ ಇತರೇ ಸಲಕರಣೆಗಳ ವಿತರಣೆಗೆ ರೂ.5 ಕೋಟಿ, ಸಮವಸ್ತ್ರಕ್ಕೆ ರೂ. 6 ಕೋಟಿ, ಮಕ್ಕಳ ವಿದ್ಯಾಭ್ಯಾಸದ ಶುಲ್ಕ ಮರುಪಾವತಿಗೆ ರೂ. 6 ಕೋಟಿ, ಆರೋಗ್ಯಕ್ಕೆ ರೂ.4 ಕೋಟಿ, ಒಂಟಿ ಮನೆಗೆ ಪ್ರತ್ಯೇಕವಾಗಿ ರೂ.30 ಕೋಟಿ, ಕೌಶಲ್ಯ ಅಭಿವೃದ್ದಿಗೆ ರೂ.5 ಕೋಟಿ, ಟ್ಯಾಕ್ಸಿ, ಆಟೋ ಚಾಲಕರಿಗೆ ರೂ. 10 ಕೋಟಿ ಒಟ್ಟು ನಿಮ್ಮ…

Read More

ನವದೆಹಲಿ: ಕರ್ನಾಟಕದ ಜನತೆಗೆ ಬಿಗ್ ಶಾಕ್ ಎನ್ನುವಂತೆ ರಾಜ್ಯ ಕಾಂಗ್ರೆಸ್ ಸರ್ಕಾರ ಡೀಸೆಲ್ ಮೇಲಿನ ಸುಂಕವನ್ನು 2 ರೂಪಾಯಿ ಹೆಚ್ಚಳ ಮಾಡಲಾಗಿತ್ತು. ಹೀಗಾಗಿ ಡೀಸೆಲ್ ದರ 2 ರೂಪಾಯಿ ಹೆಚ್ಚಳವಾಗಿತ್ತು. ಈಗ ದೇಶದ ಜನತೆಗೆ ಬಿಗ್ ಶಾಕ್ ಎನ್ನುವಂತೆ ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ತಲಾ 2 ರೂಪಾಯಿಯನ್ನು ಕೇಂದ್ರ ಸರ್ಕಾರ ಹೆಚ್ಚಿಸಿದೆ. https://twitter.com/ANI/status/1909183305419010272 ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್ಗೆ 2 ರೂ.ಗಳಷ್ಟು ಹೆಚ್ಚಿಸಲಾಗಿದೆ. ಹೀಗಾಗಿ ದೇಶದಲ್ಲಿ ಪೆಟ್ರೋಲ್, ಡೀಸೆಲ್ ದರ ಶೀಘ್ರವೇ ಹೆಚ್ಚಳವಾಗೋ ಸಾಧ್ಯತೆ ಇದೆ. ಈ ಮೂಲಕ ವಾಹನ ಸವಾರರಿಗೆ ಪೆಟ್ರೋಲ್, ಡೀಸೆಲ್ ದರ ಹೆಚ್ಚಳದ ಬಿಸಿ ಮುಟ್ಟಲಿದೆ. https://kannadanewsnow.com/kannada/bbmp-to-allocate-rs-730-crore-for-welfare-of-pourakarmikas-dk-shivakumar/ https://kannadanewsnow.com/kannada/big-news-state-government-issues-important-announcement-on-grihalakshmi-scheme/

Read More

ಬೆಂಗಳೂರು : “ಈ ಬಾರಿಯ ಬಿಬಿಎಂಪಿ ಬಜೆಟ್ ಅಲ್ಲಿ ಪೌರಕಾರ್ಮಿಕರ ವೇತನ ಪಾವತಿಗೆ ರೂ.500 ಕೋಟಿ ಹಣ ಘೋಷಣೆ ಮಾಡಲಾಗಿದೆ. ರೂ. 107 ಕೋಟಿ ಹಣವನ್ನು ಪಿಂಚಣಿಗೆ ಮೀಸಲಿಡಲಾಗಿದೆ. ಮೃತಪಟ್ಟವರ ಹೆಸರಿನಲ್ಲಿ ರೂ.10 ಲಕ್ಷ ಹಣ ಮೀಸಲಿಟ್ಟು ರೂ. 6 ಸಾವಿರ ಪಿಂಚಣಿ ನೀಡುವ ಯೋಜನೆ ತರಲಾಗಿದೆ. ಪೌರಕಾರ್ಮಿಕರಿಗಾಗಿ ಬಿಬಿಎಂಪಿಯಿಂದ ಒಟ್ಟು ರೂ.730 ಕೋಟಿ ಹಣ ನಾವು ಮೀಸಲಿಟ್ಟಿದ್ದೇವೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಬೆಂಗಳೂರಿನ ಅರಮನೆ ಮೈದಾನದಲ್ಲಿ ಸೋಮವಾರ ನಡೆದ ಕರ್ನಾಟಕ ರಾಜ್ಯ ನಗರಪಾಲಿಕೆ, ನಗರಸಭೆ, ಪುರಸಭೆಗಳ ಪೌರ ಕಾರ್ಮಿಕರ ಸಮಾವೇಶದಲ್ಲಿ ಮಾತನಾಡಿದರು. “ಶೂ, ಕೈಗವಸು ಸೇರಿದಂತೆ ಇತರೇ ಸಲಕರಣೆಗಳ ವಿತರಣೆಗೆ ರೂ.5 ಕೋಟಿ, ಸಮವಸ್ತ್ರಕ್ಕೆ ರೂ. 6 ಕೋಟಿ, ಮಕ್ಕಳ ವಿದ್ಯಾಭ್ಯಾಸದ ಶುಲ್ಕ ಮರುಪಾವತಿಗೆ ರೂ. 6 ಕೋಟಿ, ಆರೋಗ್ಯಕ್ಕೆ ರೂ.4 ಕೋಟಿ, ಒಂಟಿ ಮನೆಗೆ ಪ್ರತ್ಯೇಕವಾಗಿ ರೂ.30 ಕೋಟಿ, ಕೌಶಲ್ಯ ಅಭಿವೃದ್ದಿಗೆ ರೂ.5 ಕೋಟಿ, ಟ್ಯಾಕ್ಸಿ, ಆಟೋ ಚಾಲಕರಿಗೆ ರೂ. 10 ಕೋಟಿ ಒಟ್ಟು ನಿಮ್ಮ ಕಲ್ಯಾಣಕ್ಕೆ…

Read More

ಹಾಸನ: ಭವಾನಿ ರೇವಣ್ಣ ಅವರು 10 ತಿಂಗಳ ಬಳಿಕ ಹಾಸನಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಹೀಗೆ ಆಗಮಿಸಿದಂತ ಅವರನ್ನು ಅಭಿಮಾನಿಗಳು, ಹಿತೈಶಿಗಳು ಹೂಮಳೆ ಸುರಿಸಿ, ಪಟಾಕಿ ಸಿಡಿಸಿ ಅದ್ಧೂರಿಯಾಗಿ ಸ್ವಾಗತಿಸಿದರು. ಹಾಸನ ಜಿಲ್ಲೆಯ ಹೊಳೆನರಸೀಪುರಕ್ಕೆ ಭವಾನಿ ರೇವಣ್ಣ ಇಂದು ಭೇಟಿ ನೀಡಿದರು. ಈ ವೇಳೆಯಲ್ಲಿ ಅವರಿಗೆ ಅಭಿಮಾನಿಗಳು ಹೂಮಳೆಯನ್ನು ಸುರಿಸಿ, ಪಟಾಕಿ ಸಿಡಿಸಿ, ಆರತಿ ಬೆಳಗಿ ಅದ್ಧೂರಿಯಾಗಿ ಸ್ವಾಗತಿಸಿದರು. ಈ ವೇಳೆ ಮಾತನಾಡಿದಂತ ಅವರು ನಾನು ಹಾಸನಕ್ಕೆ ಬರೋದಕ್ಕೆ ಈಗ ಅವಕಾಶ ಸಿಕ್ಕಿದೆ. ನನ್ನ ಕೈಲಾದ ಸೇವೆ ಜನರಿಗಾಗಿ ಮಾಡುತ್ತೇನೆ. ನಾನು ಬರುವ ವಿಷಯ ಯಾರಿಗೂ ತಿಳಿಸಿರಲಿಲ್ಲ. ಆದರೂ ಸಾಕಷ್ಟು ಜನರು ಬಂದಿದ್ದೀರಿ. ನಿಮ್ಮ ಈ ಅಭಿಮಾನಕ್ಕೆ ನಾನು ಚಿರಋಣಿ ಎಂಬುದಾಗಿ ತಿಳಿಸಿದರು. https://kannadanewsnow.com/kannada/another-shock-to-the-people-of-bengaluru-by-the-state-government-solid-waste-management-charges-fixed/ https://kannadanewsnow.com/kannada/big-news-state-government-issues-important-announcement-on-grihalakshmi-scheme/

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಬೆಂಗಳೂರು ಜನತೆಗೆ ಬಿಗ್ ಶಾಕ್ ಎನ್ನುವಂತೆ ಪಾಲಿಕೆ ವ್ಯಾಪ್ತಿಯಲ್ಲಿ ಘನತ್ಯಾಜ್ಯ ನಿರ್ವಹಣಾ ಬಳಕೆದಾರರು, ಸೇವಾ ಶುಲ್ಕವನ್ನು 2025-26ನೇ ಆರ್ಥಿಕ ಸಾಲಿನಿಂದ ಆಸ್ತಿ ತೆರಿಗೆ ಜೊತೆಯಲ್ಲಿ ಸಂಗ್ರಹಿಸಲು ಬಿಬಿಎಂಪಿ ಆದೇಶಿಸಿದೆ. ಈ ಕುರಿತಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮುಖ್ಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು,  ಘನ ಸರ್ಕಾರವು ಗೃಹ, ವಾಣಿಜ್ಯ, ಸಾಂಖ್ಯಿಕ ಮತ್ತು ಬೃಹತ್‌ ತ್ಯಾಜ್ಯ ಉತ್ಪಾದಕರಿಂದ ಬಳಕೆದಾರರ ಶುಲ್ಕ (ಸೇವಾ ಶುಲ್ಕ)ವನ್ನು ಸಂಗ್ರಹಿಸಲು ಉಲ್ಲೇಖ (01) ರನ್ವಯ ಅನುಮೋದನೆಯನ್ನು ನೀಡಿದ್ದು ಅನುಷ್ಠಾನದಲ್ಲಿನ ಕೆಲವು ಅಂಶಗಳನ್ನು ಗಮನದಲ್ಲಿಟ್ಟುಕೊಂಡು ತೆಗೆದುಕೊಂಡ ನಿರ್ಣಯಗಳಿಗೆ ಅನುಮೋದನೆಯನ್ನು ನೀಡಿರುತ್ತದೆ ಎಂದಿದ್ದಾರೆ. ಅದರಂತೆ ಗ್ರಹ, ವಾಣಿಜ್ಯ ಮತ್ತು ಸಾಂಖ್ಯಿಕ ತ್ಯಾಜ್ಯ ಉತ್ಪಾದಕರಿಂದ ಘನತ್ಯಾಜ್ಯ ನಿರ್ವಹಣಾ ಬಳಕೆದಾರರ ಶುಲ್ಕ (ಸೇವಾ ಶುಲ್ಕ)ವನ್ನು ದಿನಾಂಕ: 01.04.2025 ರಿಂದ ಅನ್ವಯವಾಗುವಂತೆ ಸಂಗ್ರಹಿಸಲು ಮತ್ತು ಉಲ್ಲೇಖ (01) ರಲ್ಲಿರುವಂತೆ ಶುಲ್ಕದ ವಾರ್ಷಿಕ ವೃದ್ಧಿಯನ್ನು 2026-27ನೇ ಸಾಲಿನಿಂದ ಅನುಷ್ಠಾನಗೊಳಿಸಲು ಉಲ್ಲೇಖ (5) ರಂತೆ ಮಾನ್ಯ ಆಡಳಿತಗಾರರು ಅನುಮೋದನ ನೀಡಿರುತ್ತಾರೆ ಎಂದು ತಿಳಿಸಿದ್ದಾರೆ. https://kannadanewsnow.com/kannada/good-news-for-gram-panchayat-water-operators-from-state-government-weekly-off-fixed/…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಗ್ರಾಮ ಪಂಚಾಯ್ತಿ ವಾಟರ್ ಆಪರೇಟರ್ ಗಳಿಗೆ ಗುಡ್ ನ್ಯೂಸ್ ನೀಡಲಾಗಿದೆ. ಗ್ರಾಮ ಪಂಚಾಯತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಾಟರ್ ಆಪರೇಟರ್ ಗಳಿಗೆ ವಾರದ ರಜೆಯನ್ನು ನಿಗದಿಪಡಿಸಿದೆ. ಈ ಕುರಿತಂತೆ ಆದೇಶ ಹೊರಡಿಸಿದ್ದು,  ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ (ಗ್ರಾಮ ಪಂಚಾಯತಿ ಸಿಬ್ಬಂದಿ ಸ್ವರೂಪ, ವೇತನ ಶ್ರೇಣಿಗಳು, ನೇಮಕಾತಿ ವಿಧಾನ ಮತ್ತು ಇತರ ಸೇವಾ ಷರತ್ತುಗಳು) ನಿಯಮಗಳನ್ನು ರಚಿಸಲಾಗಿದ್ದು, ಸದರಿ ನಿಯಮಗಳ ಕ್ರ.ಸಂ.7 (i) ರಲ್ಲಿ ಗ್ರಾಮ ಪಂಚಾಯತಿ ಸಿಬ್ಬಂದಿಗಳಿಗೆ ರಜೆ ನೀಡುವ ಬಗ್ಗೆ ವಿವರಿಸಲಾಗಿರುತ್ತದೆ. ಗ್ರಾಮ ಪಂಚಾಯತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಾಟರ್ ಆಪರೇಟರ್ ಗಳಿಗೆ ವಾರದಲ್ಲಿ ಒಂದು ದಿನ ರಜೆಯನ್ನು ನಿಗದಿಪಡಿಸುವಂತೆ ಕೋರಿ ಉಲ್ಲೇಖ (2) ರಲ್ಲಿ ಸಲ್ಲಿಸಿದ ಮನವಿಯನ್ನು ಮಾನ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಉಲ್ಲೇಖ (3)ರ ಸಭೆಯಲ್ಲಿ ಪರಿಶೀಲಿಸಿದ್ದು, ಉಲ್ಲೇಖ(4)ರ ಆದೇಶದಂತೆ ಗ್ರಾಮ ಪಂಚಾಯತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಾಟರ್ ಆಪರೇಟರ್‌ಗಳಿಗೆ ಕೆಳಕಂಡ ಷರತ್ತಿಗೊಳಪಟ್ಟು ವಾರದಲ್ಲಿ ಒಂದು ದಿನ ರಜೆಯನ್ನು ನಿಗದಿಪಡಿಸಲು ಕ್ರಮವಹಿಸುವಂತೆ ಸೂಚಿಸಿದೆ.…

Read More

ಬೆಂಗಳೂರು: ಮೈಸೂರಿನಲ್ಲಿ ಇವತ್ತು ಮಧ್ಯಾಹ್ನ ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ 3 ಗಂಟೆ ನಂತರ ಭ್ರಷ್ಟ- ಜನವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಜನಾಕ್ರೋಶ ಯಾತ್ರೆಗೆ ಕೇಂದ್ರದ ಸಚಿವ ಪ್ರಲ್ಹಾದ್ ಜೋಶಿ ಅವರು ಚಾಲನೆ ನೀಡುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ. ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಯಾತ್ರೆಯಲ್ಲಿ ನಮ್ಮ ಪಕ್ಷದ ಎಲ್ಲ ಹಿರಿಯ ಮುಖಂಡರು ಭಾಗವಹಿಸುತ್ತಾರೆ. ಜನಾಕ್ರೋಶ ಯಾತ್ರೆ 4 ಹಂತಗಳಲ್ಲಿ ನಡೆಯಲಿದೆ. ಇವತ್ತು ಮೈಸೂರು, ನಾಳೆ ಮಂಡ್ಯ, ಹಾಸನ, ನಾಡಿದ್ದು ಮಡಿಕೇರಿ, ಮಂಗಳೂರು- ಹೀಗೆ ಪ್ರತಿ ಜಿಲ್ಲಾ ಕೇಂದ್ರಗಳಿಗೆ ನಮ್ಮ ಜನಾಕ್ರೋಶ ಯಾತ್ರೆ ತೆರಳುತ್ತದೆ ಎಂದರು. ಅಯೋಗ್ಯ ಕಾಂಗ್ರೆಸ್ ಸರಕಾರದ ಬೆಲೆ ಏರಿಕೆ, ಮುಸ್ಲಿಮರಿಗೆ ಸರಕಾರಿ ಕಾಮಗಾರಿಗಳಲ್ಲಿ ಮೀಸಲಾತಿ, ದಲಿತರ ಅಭ್ಯುದಯಕ್ಕೆ ಮೀಸಲಿಟ್ಟ ಎಸ್‍ಇಪಿ, ಟಿಎಸ್‍ಪಿ ಹಣದ ವಿಚಾರದಲ್ಲಿ ದೋಖಾ ಸೇರಿ ಜನವಿರೋಧಿ ನೀತಿಯನ್ನು ರಾಜ್ಯದ ಜನರಿಗೆ ತಿಳಿಸುತ್ತೇವೆ ಎಂದು ವಿವರಿಸಿದರು. ಬಿಜೆಪಿ- ಜೆಡಿಎಸ್ ಮಧ್ಯೆ ಒಡಕಿಲ್ಲ. ಇದು ನಮ್ಮ…

Read More

ಬೆಂಗಳೂರು: ನವಿರೋಧಿ ವಿರೋಧ ಪಕ್ಷವನ್ನು ರಾಜ್ಯ ಎಂದೂ ಕಂಡಿಲ್ಲ. ಸ್ವಪಕ್ಷೀಯರೇ ಆರೋಪಿಸುವಂತೆ ‘’ಪೇಮೆಂಟ್ ಸೀಟ್’’ ನಲ್ಲಿ ಕೂತಿರುವ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ರಾಜ್ಯ ಸರ್ಕಾರವನ್ನು ಪ್ರಶ್ನಿಸುವ ಯಾವ ನೈತಿಕತೆ ಇದೆ? ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಅವರು ಪ್ರಶ್ನಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದ್ದು, ಜನಾಕ್ರೋಶ ಯಾತ್ರೆ ಕೈಗೊಂಡಿರುವ ರಾಜ್ಯ ಬಿಜೆಪಿ ನಾಯಕರಿಗೆ ನಾನು ಶುಭ ಕೋರುತ್ತೇನೆ. ಒಂದು ಸಮರ್ಥ ವಿರೋಧ ಪಕ್ಷವಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗದ ವೈಫಲ್ಯ ಮತ್ತು ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಮಾಡುತ್ತಿರುವ ಅನ್ಯಾಯದ ವಿರುದ್ಧ ದನಿ ಎತ್ತಲಾಗದ ಮನೆಮುರುಕುತನದ ಬಗ್ಗೆ ಆಕ್ರೋಶಗೊಂಡಿರುವ ರಾಜ್ಯದ ಜನರ ಮನಸ್ಸು ಅರಿಯಲು ಈ ಯಾತ್ರೆ ನೆರವಾಗಲಿ ಎಂದು ಹೃತ್ಪೂರ್ವಕವಾಗಿ ಹಾರೈಸುತ್ತೇನೆ ಎಂದಿದ್ದಾರೆ. ಇಷ್ಟೊಂದು ಅಸಮರ್ಥ, ನಿರ್ಲಜ್ಜ ಮತ್ತು ಜನವಿರೋಧಿ ವಿರೋಧ ಪಕ್ಷವನ್ನು ರಾಜ್ಯ ಎಂದೂ ಕಂಡಿಲ್ಲ. ಸ್ವಪಕ್ಷೀಯರೇ ಆರೋಪಿಸುವಂತೆ ‘’ಪೇಮೆಂಟ್ ಸೀಟ್’’ ನಲ್ಲಿ ಕೂತಿರುವ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ರಾಜ್ಯ ಸರ್ಕಾರವನ್ನು ಪ್ರಶ್ನಿಸುವ ಯಾವ…

Read More