Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಿಗೆ ನಡೆದಂತ ಚುನಾವಣೆಯ ಮತದಾನದ ನಂತ್ರ, ಇಂದು ಮತಏಣಿಕೆ ಕಾರ್ಯ ನಡೆಯಿತು. ಇಂದಿನ ಲೋಕಸಭಾ ಚುನಾವಣೆ ಫಲಿತಾಂಶದಲ್ಲಿ ಯಾವ ಕ್ಷೇತ್ರದಲ್ಲಿ ಯಾರು ಗೆಲುವು? ಯಾರು ಸೋಲು ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ಮುಂದೆ ಓದಿ. ಇಂದು ಪ್ರಕಟವಾದಂತ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಕರ್ನಾಟಕದಲ್ಲಿ ಕಮಾಲ್ ಮೆರೆದಿದೆ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಕರ್ನಾಟಕದಲ್ಲಿ ಯಾವುದೇ ಪ್ರಭಾವವನ್ನು ಮತದಾರರ ಮೇಲೆ ಬೀರಿಲ್ಲ ಎಂಬುದು ಇಂದು ಪ್ರಕಟವಾದಂತ ಲೋಕಸಭಾ ಚುನಾವಣೆ ಫಲಿತಾಂಶದ ಮೂಲಕ ಗೊತ್ತಾಗಿದೆ. ಕೋಲಾರ ಲೋಕಸಭಾ ಕ್ಷೇತ್ರ – ಜೆಡಿಎಸ್ ಅಭ್ಯರ್ಥಿ ಎಂ. ಮಲ್ಲೇಶ್ ಬಾಬು ಗೆಲುವು ಕಂಡ್ರೆ, ಕಾಂಗ್ರೆಸ್ ಅಭ್ಯರ್ಥಿ ಸೋಲು ಕಂಡಿದ್ದಾರೆ. 45 ಸಾವಿರಕ್ಕೂ ಹೆಚ್ಚು ಮತಗಳಿಂದ ಗೆಲುವು ಸಾಧಿಸಿದ್ದಾರೆ. ಚಿಕ್ಕೋಡಿ ಲೋಕಸಭಾ ಕ್ಷೇತ್ರ- ಇಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕ ಜಾರಕಿಹೊಳಿ ಅವರು 63 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆದ್ದಿದ್ದಾರೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ – ಬಿಜೆಪಿ ಅಭ್ಯರ್ಥಿ ಡಾ.ಕೆ ಸುಧಾಕರ್ ಅವರು…
ನವದೆಹಲಿ: ಲೋಕಸಭಾ ಚುನಾವಣೆ 2024 ರ ಮತ ಎಣಿಕೆ ನಡೆಯುತ್ತಿರುವಾಗ, ಮತದಾರರು ಎಲ್ಲಾ ಅಭ್ಯರ್ಥಿಗಳ ವಿರುದ್ಧ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸುವ ಆಯ್ಕೆಯಾದ ನೋಟಾ (ಮೇಲಿನ ಯಾವುದೂ ಇಲ್ಲ) ಇಂದೋರ್ನಲ್ಲಿ ಸುಮಾರು 2 ಲಕ್ಷ ಮತಗಳನ್ನು ಪಡೆದಿದೆ ಎಂದು ಚುನಾವಣಾ ಆಯೋಗದ (ಇಸಿ) ಅಂಕಿ ಅಂಶಗಳು ತಿಳಿಸಿವೆ. ನೋಟಾಗೆ ಶೇ.1.62ರಷ್ಟು ಮತಗಳು ಬಿದ್ದಿವೆ ಎಂದು ಚುನಾವಣಾ ಆಯೋಗ ವರದಿ ಮಾಡಿದೆ. ಬಿಜೆಪಿ ಶೇ.60ರಷ್ಟು ಮತಗಳನ್ನು ಗಳಿಸಿದೆ. ಇದು ನೋಟಾದ ಮೊದಲ ಗಮನಾರ್ಹ ಘಟನೆಯಲ್ಲ. 2019ರಲ್ಲಿ ಇಂದೋರ್ನಲ್ಲಿ ಶೇ.69.31ರಷ್ಟು ಮತದಾನವಾಗಿದ್ದು, 5,045 ಮತದಾರರು ನೋಟಾವನ್ನು ಆಯ್ಕೆ ಮಾಡಿದ್ದರು. ಏಪ್ರಿಲ್ 29 ರಂದು ನಡೆದ ಲೋಕಸಭಾ ಚುನಾವಣೆಯಲ್ಲಿ ತನ್ನ ಅಭ್ಯರ್ಥಿ ಅಕ್ಷಯ್ ಕಾಂತಿ ಬಾಮ್ ಕೊನೆಯ ಕ್ಷಣದಲ್ಲಿ ನಾಮಪತ್ರವನ್ನು ಹಿಂತೆಗೆದುಕೊಂಡ ನಂತರ ಕಾಂಗ್ರೆಸ್ ಮತದಾರರನ್ನು ನೋಟಾವನ್ನು ಆಯ್ಕೆ ಮಾಡುವಂತೆ ಒತ್ತಾಯಿಸುವ ಅಭಿಯಾನವನ್ನು ಪ್ರಾರಂಭಿಸಿತು. ಪ್ರಸ್ತುತ ನಿಯಮಗಳ ಪ್ರಕಾರ, ಒಂದು ಕ್ಷೇತ್ರದಲ್ಲಿ ನೋಟಾ ಅತಿ ಹೆಚ್ಚು ಮತಗಳನ್ನು ಪಡೆದರೆ, ಎರಡನೇ ಅತಿ ಹೆಚ್ಚು ಮತಗಳನ್ನು ಪಡೆದ ಅಭ್ಯರ್ಥಿಯನ್ನು…
ಭೋಪಾಲ್: ಮಧ್ಯಪ್ರದೇಶದ ಇಂದೋರ್ನಲ್ಲಿ ಮತದಾರರಿಗೆ ‘ನನ್ ಆಫ್ ದಿ ಅಬೌ’ ಆಯ್ಕೆಯನ್ನು ಆಯ್ಕೆ ಮಾಡುವಂತೆ ಕಾಂಗ್ರೆಸ್ ಮನವಿ ಮಾಡಿದ ನಂತರ, ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಇದುವರೆಗೆ 1.7 ಲಕ್ಷಕ್ಕೂ ಹೆಚ್ಚು ಮತಗಳನ್ನು ಗಳಿಸಿದೆ. ಇದು ಬಿಹಾರದ ಗೋಪಾಲ್ಗಂಜ್ನ ಹಿಂದಿನ ನೋಟಾ ದಾಖಲೆಯನ್ನು ಮುರಿದಿದೆ. ಒಂದು ಕ್ಷೇತ್ರದ ಎಲ್ಲಾ ಅಭ್ಯರ್ಥಿಗಳನ್ನು ತಿರಸ್ಕರಿಸಲು ನೋಟಾ ಮತದಾರರಿಗೆ ಆಯ್ಕೆಯನ್ನು ನೀಡುತ್ತದೆ. 2019 ರ ಚುನಾವಣೆಯಲ್ಲಿ, ಬಿಹಾರದ ಗೋಪಾಲ್ಗಂಜ್ ಲೋಕಸಭಾ ಸ್ಥಾನವು ಗರಿಷ್ಠ 51,660 ನೋಟಾ ಮತಗಳನ್ನು ದಾಖಲಿಸಿದೆ, ಇದು ಕ್ಷೇತ್ರದಲ್ಲಿ ಚಲಾವಣೆಯಾದ ಒಟ್ಟು ಮತಗಳ ಶೇಕಡಾ 5 ರಷ್ಟಿದೆ. ಮಂಗಳವಾರ ನಡೆಯುತ್ತಿರುವ ಮತ ಎಣಿಕೆಯ ನಡುವೆ ಚುನಾವಣಾ ಆಯೋಗದ ವೆಬ್ಸೈಟ್ನಲ್ಲಿ ಲಭ್ಯವಿರುವ ಇತ್ತೀಚಿನ ಮಾಹಿತಿಯ ಪ್ರಕಾರ, ಇಂದೋರ್ನಲ್ಲಿ ನೋಟಾ ಇಲ್ಲಿಯವರೆಗೆ 1,72,798 ಮತಗಳನ್ನು ಪಡೆದಿದೆ, ಇದು ಬಿಜೆಪಿ ಅಭ್ಯರ್ಥಿ ಶಂಕರ್ ಲಾಲ್ವಾನಿ 9,90,698 ಮತಗಳನ್ನು ಪಡೆದ ನಂತರ ಎರಡನೇ ಅತಿ ಹೆಚ್ಚು ಮತಗಳನ್ನು ಪಡೆದಿದೆ. ಇಂದೋರ್ನ ಇತರ ಎಲ್ಲಾ 13 ಅಭ್ಯರ್ಥಿಗಳು ಇಲ್ಲಿಯವರೆಗೆ ನೋಟಾಕ್ಕಿಂತ ಕಡಿಮೆ…
ಆಂಧ್ರಪ್ರದೇಶ: ಹಿರಿಯ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮತ್ತು ಅವರ ಪಕ್ಷವು 16 ಲೋಕಸಭಾ ಮತ್ತು 130 ವಿಧಾನಸಭಾ ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಈ ಹಿನ್ನಲೆಯಲ್ಲಿ ಜೂನ್.9ರಂದು ಆಂಧ್ರಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಅವರ ತೆಲುಗು ದೇಶಂ ಪಕ್ಷ (ಟಿಡಿಪಿ) 2024 ರ ಆಂಧ್ರಪ್ರದೇಶ ವಿಧಾನಸಭಾ ಚುನಾವಣೆ ಮತ್ತು ಲೋಕಸಭಾ ಚುನಾವಣೆಗಳಲ್ಲಿ ಮುನ್ನಡೆ ಸಾಧಿಸಿದೆ, ಪಕ್ಷದ ಪುನರುತ್ಥಾನದ ಹಿಂದಿನ ಪ್ರೇರಕ ಶಕ್ತಿಯಾಗಿ ನಾಯ್ಡು ಅವರನ್ನು ಇರಿಸಿದೆ. 2019 ರ ರಾಜ್ಯ ಚುನಾವಣೆಯಲ್ಲಿ, ವೈಎಸ್ ಜಗನ್ ಮೋಹನ್ ರೆಡ್ಡಿ ನೇತೃತ್ವದ ಯುವಜನ ಶ್ರಮಿಕ ರೈತ ಕಾಂಗ್ರೆಸ್ ಪಕ್ಷ (ವೈಎಸ್ಆರ್ಸಿಪಿ) 175 ಸ್ಥಾನಗಳಲ್ಲಿ 151 ಸ್ಥಾನಗಳನ್ನು ಗೆಲ್ಲುವ ಮೂಲಕ ಅದ್ಭುತ ವಿಜಯವನ್ನು ಗಳಿಸಿತು. ಕಡಪ, ಕರ್ನೂಲ್, ನೆಲ್ಲೂರು ಮತ್ತು ವಿಜಯನಗರಂ ಸೇರಿದಂತೆ ಪ್ರಮುಖ ಜಿಲ್ಲೆಗಳಲ್ಲಿ ವೈಎಸ್ಆರ್ಸಿಪಿ ಜಯಭೇರಿ ಬಾರಿಸಿದೆ. ಏತನ್ಮಧ್ಯೆ, ಆಡಳಿತಾರೂಢ ಟಿಡಿಪಿ ಕೇವಲ 23 ಸ್ಥಾನಗಳನ್ನು ಗಳಿಸುವಲ್ಲಿ ಯಶಸ್ವಿಯಾಗಿದೆ ಮತ್ತು ಜನಸೇನಾ ಪಕ್ಷ (ಜೆಎಸ್ಪಿ) ಮೈತ್ರಿಕೂಟವು…
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಸಿಎನ್ ಮಂಜುನಾಥ್ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಕನಕಪುರದ ಬಂಡೆಯನ್ನು ಛಿದ್ರ ಛಿದ್ರಗೊಳಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಡಾ.ಸಿಎನ್ ಮಂಜುನಾಥ್ ಅವರನ್ನು ಮತದಾರರು ಈ ಬಾರಿ ಕೈ ಹಿಡಿದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ ಸುರೇಶ್ ಭಾರಿ ಅಂತರದಿಂದ ಸೋಲು ಕಂಡಿದ್ದಾರೆ. ಈ ಸೋಲಿನ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಡಿ.ಕೆ ಸುರೇಶ್ ಅವರು, ನಾನು ಬಿಜೆಪಿ ಅಭ್ಯರ್ಥಿ ಡಾ.ಸಿಎನ್ ಮಂಜುನಾಥ್ ಗೆ ಅಭಿನಂದನೆ ಸಲ್ಲಿಸುತ್ತೇನೆ. ಮತದಾರರ ತೀರ್ಪಿಗೆ ತಲೆ ಭಾಗುತ್ತೇನೆ ಎಂದರು. ರಾಜ್ಯಕ್ಕೆ ಒಳ್ಳೇದಾಗಲಿ. ಕ್ಷೇತ್ರಕ್ಕೆ ಒಳ್ಳೇದಾಗಲಿ. ನಾನು ನನ್ನ ಕ್ಷೇತ್ರದಲ್ಲಿ ಪಕ್ಷದ ಕಾರ್ಯಕರ್ತನಾಗಿ ಜೊತೆಗೆ ಇರುತ್ತೇನೆ. ನಾನು ನಿಮ್ಮಲ್ಲಿ ಬೆಳೆದವನು. ನಿಮ್ಮ ಜೊತೆಗೆ ಓಡಾಡಿದವನು. ಆ ಕೆಲಸ ನಿರಂತರವಾಗಿ ಇರುತ್ತೇನೆ. ಪ್ರಜಾ ಪ್ರಭುತ್ವ ವ್ಯವಸ್ಥೆಯಲ್ಲಿ ಸೋಲು ಗೆಲುವು ಇದ್ದದ್ದೇ ಎಂಬುದಾಗಿ ತಿಳಿಸಿದರು. https://kannadanewsnow.com/kannada/big-news-lok-sabha-election-results-2019-three-former-cms-win-in-karnataka/ https://kannadanewsnow.com/kannada/breaking-stock-market-plunges-again-investors-lose-rs-26-lakh-crore/
ಹಾಸನ: ಜಿಲ್ಲೆಯ ಲೋಕಸಭಾ ಕ್ಷೇತ್ರ ಜೆಡಿಎಸ್ ಭದ್ರಕೋಟೆ ಎಂಬುದಾಗಿಯೇ ಬಿಂಬಿತವಾಗಿತ್ತು. ಕಳೆದ 25 ವರ್ಷಗಳಿಂದ ಜೆಡಿಎಸ್ ಪಕ್ಷದ ಹೊರತಾಗಿ ಬೇರೆ ಯಾರೂ ಸಂಸದರು ಆಗಿರಲಿಲ್ಲ. ಇಂತಹ ಕ್ಷೇತ್ರದಲ್ಲಿ ಜೆಡಿಎಸ್ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಛಿದ್ರ ಛಿದ್ರವಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಇಂದು ನಡೆದಂತ ಲೋಕಸಭಾ ಚುನಾವಣೆಯ ಮತಏಣಿಕೆಯ 18ನೇ ಸುತ್ತಿನಲ್ಲಿ, ಹಾಸನ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ 6,64,848 ಮತಗಳನ್ನು ಪಡೆದಿದ್ದರು. ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರು, 6,21,255 ಮತಗಳನ್ನು ಪಡೆದಿದ್ದರು. ಬರೋಬ್ಬರಿ 43,588 ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಗೆಲುವು ಸಾಧಿಸಿದ್ದಾರೆ. ಅಂದಹಾಗೇ ಹಾಸನ ಲೋಕಸಭಾ ಕ್ಷೇತ್ರದ 2024ರ ಚುನಾವಣೆಯಲ್ಲಿ 13,48,966 ಮತಗಳು ಚಲಾವಣೆಯಾಗಿದ್ದವು. ಇದುವರೆಗೆ 13,28,820 ಮತಗಳ ಏಣಿಕೆ ಕಾರ್ಯ ಪೂರ್ಣಗೊಂಡಿದೆ. ಇನ್ನೂ ಕೇವಲ 26,146 ಮತಗಳ ಏಣಿಕೆ ಮಾತ್ರವೇ ಬಾಕಿ ಉಳಿದಿದೆ. ಇದರಲ್ಲಿ 42,187 ಮತಗಳ ಅಂತರವನ್ನು ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಕಾಯ್ದುಕೊಂಡಿದ್ದು, ಗೆಲುವಿನ…
ಚಿತ್ರದುರ್ಗ: ಲೋಕಸಭಾ ಚುನಾವಣೆಗೆ ನಡೆದಿದ್ದಂತ ಮತದಾನದ ನಂತ್ರ ಇಂದು ಮತಏಣಿಕೆ ಕಾರ್ಯ ನಡೆಯಿತು. ಈ ಮತಏಣಿಕೆಯಲ್ಲಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಭರ್ಜರಿ ಗೆಲುವು ಸಾಧಿಸಿ್ದದಾರೆ. ಇಂದು ಲೋಕಸಭಾ ಚುನಾವಣೆಗೆ ನಡೆದಂತ ಮತದಾನದ ಮತಏಣಿಕೆ ಕಾರ್ಯ ನಡೆಯಿತು. ಚಿತ್ರದುರ್ಗ ಲೋಕಸಭಾ ಚುನಾವಣಾ ಮತಏಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಿಎನ್ ಚಂದ್ರಪ್ಪ ಅವರು 5,75,404 ಮತಗಳನ್ನು ಗಳಿಸಿದ್ರೇ, ಬಿಜೆಪಿಯ ಗೋವಿಂದ ಕಾರಜೋಳ ಅವರು 6,14,890 ಮತಗಳನ್ನು ಪಡೆದರು. ಒಟ್ಟಾರೆಯಾಗಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಗೋವಿಂದ ಕಾರಜೋಳ ಅವರು 45849 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಮುಧೋಳ ವ್ಯಕ್ತಿಗೆ ಚಿತ್ರದುರ್ಗ ಲೋಕಸಭಾ ಕ್ಷೇತ್ರವು ಕೈ ವಶವಾದಂತೆ ಆಗಿದೆ. https://kannadanewsnow.com/kannada/tamil-nadu-bjp-president-annamalai-loses-lok-sabha-elections/ https://kannadanewsnow.com/kannada/big-news-lok-sabha-election-results-2019-three-former-cms-win-in-karnataka/
ತಮಿಳುನಾಡು: ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದಂತ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈಗೆ ಬಿಗ್ ಶಾಕ್ ನೀಡಲಾಗಿದೆ. ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿದ್ದಾರೆ. ತಮಿಳುನಾಡಿನ ಕೊಯಮತ್ತೂರು ಲೋಕಸಭಾ ಕ್ಷೇತ್ರದಿಂದ 2024ರ ಚುನಾವಣೆಗೆ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಕಣಕ್ಕೆ ಇಳಿದಿದ್ದರು. ಇಂತಹ ಅವರು ಇಂದು ಪ್ರಕಟವಾದಂತ ಲೋಕಸಭಾ ಚುನಾವಣೆಯ ಫಲಿತಾಂಶದಲ್ಲಿ 17 ಸಾವಿರ ಮತಗಳ ಅಂತರದಿಂದ ಸೋಲು ಕಂಡಿರುವುದಾಗಿ ತಿಳಿದು ಬಂದಿದೆ. ಲೋಕಸಭಾ ಚುನಾವಣೆಯ ಕೊಯಮತ್ತೂರು ಕ್ಷೇತ್ರದಲ್ಲಿ ಅಣ್ಣ ಮಲೈ ಅವರು 17 ಸಾವಿರ ಮತಗಳ ಅಂತರದಿಂದ ಸೋಲು ಕಂಡಿದ್ದು, ಬಿಗ್ ಶಾಕ್ ನೀಡಿದಂತೆಯೇ ಆಗಿದೆ. https://kannadanewsnow.com/kannada/breaking-stock-market-plunges-again-investors-lose-rs-26-lakh-crore/ https://kannadanewsnow.com/kannada/big-news-lok-sabha-election-results-2019-three-former-cms-win-in-karnataka/
ಬೆಂಗಳೂರು: RTE ಅಡಿಯಲ್ಲಿ ಮಕ್ಕಳ ದಾಖಲಾತಿಗಾಗಿ ಸೀಟು ಹಂಚಿಕೆ ಪ್ರಕ್ರಿಯೆ ನಾಳೆ ಆನ್ ಲೈನ್ ಮೂಲಕ ನಡೆಯಲಿದೆ. ಈ ಮೂಲಕ ಮೊದಲ ಸುತ್ತಿನಲ್ಲಿ ಆರ್ ಟಿಇ ಅಡಿಯಲ್ಲಿ ದಾಖಲಾತಿಗೆ ನಾಳೆ ಸೀಟು ಹಂಚಿಕೆಯನ್ನು ಶಆಲಾ ಶಿಕ್ಷಣ ಇಲಾಖೆ ಮಾಡಲಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಪ್ರಾಥಮಿಕ ಶಿಕ್ಷಣ ವಿಭಾಗದ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ‘ಉಚಿತ ಮತ್ತು ಕಡ್ಡಾಯ ಶಿಕ್ಷಣಕ್ಕಾಗಿ ಮಕ್ಕಳ ಹಕ್ಕು ಕಾಯಿದೆ 2009 ರ ಸೆಕ್ಷನ್ 12(1)(ಬಿ) ಮತ್ತು 12(1)(ಸಿ) ಅಡಿ 2024-25ನೇ ಸಾಲಿಗೆ ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ ದಾಖಲಾತಿಗೆ ಮೊದಲ ಸುತ್ತಿನ ಆನ್ಲೈನ್ ಸೀಟು ಹಂಚಿಕೆ ಪ್ರಕ್ರಿಯೆಯನ್ನು ನಡೆಸಲು ದಿನಾಂಕ: 05.06.2024 ನಿಗದಿಪಡಿಸಲಾಗಿತ್ತು ಎಂದಿದ್ದಾರೆ. ಪ್ರಸ್ತುತ ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆಯ ಹಿನ್ನೆಲೆಯಲ್ಲಿ ಆರ್.ಟಿ.ಇ ಮೊದಲ ಸುತ್ತಿನ ಆನ್ಲೈನ್ ಸೀಟು ಹಂಚಿಕೆ ಪ್ರಕ್ರಿಯೆಯನ್ನು ಮುಂದೂಡಿದ್ದು ದಿನಾಂಕ :07.06.2024ರಂದು ನಡೆಸಲಾಗುವುದು. ಹೆಚ್ಚಿನ ವಿವರಗಳಿಗೆ ಇಲಾಖಾ ಅಧಿಕೃತ ವೆಬ್ಸೈಟ್ http://www.schooleducation.karnataka.gov.in ಜಾಲತಾಣಕ್ಕೆ ಭೇಟಿ ನೀಡಿ, ಮಾಹಿತಿ…
ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಬಗ್ಗೆ ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆ ಮಾತ್ರವೇ ಬಾಕಿ ಉಳಿಸಿದೆ. ಇತ್ತೀಚಿನ ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶದ ವಿವರದಂತೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಯವರು 647736 ಮತಗಳನ್ನು ಪಡೆದಿದ್ದರು. ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು 407678 ಪಡೆದಿದ್ದರು. JDS ಅಭ್ಯರ್ಥಿ ಕುಮಾರಸ್ವಾಮಿ 240158 ಮತಗಳ ಮುನ್ನಡೆಯನ್ನು ಕಾಯ್ದುಕೊಂಡಿದ್ದರು. ಅಂತಿಮ ಮತಏಣಿಕೆ ಮಾತ್ರವೇ ಬಾಕಿ ಉಳಿದಿದ್ದು, ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಮಂಡ್ಯ ಲೋಕಸಭಾ ಕ್ಷೇತ್ರ ಬಿಜೆಪಿ-ಜೆಡಿಎಸ್ ತೆಕ್ಕೆಗೆ ಹೋದಂತೆ ಆಗಿದೆ. https://kannadanewsnow.com/kannada/prajwal-revanna-loses-in-hassan-congress-candidate-shreyas-patel-wins/ https://kannadanewsnow.com/kannada/in-mandya-former-cm-hd-kumaraswamy-is-leading-by-54658-votes/











