Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಬೆಂಗಳೂರು: ಮಾಜಿ ಭೂಗತ ದೊರೆ ಮುತ್ತಪ್ಪ ರೈ ಅವರ ಆಸ್ತಿ ಹಂಚಿಕೆ ವಿಚಾರವಾಗಿ ಎದ್ದಿದ್ದಂತ ವಿವಾದ, ಈಗ ಸುಖಾಂತ್ಯ ಕಂಡಿದೆ. ಬೆಂಗಳೂರಿನ 19ನೇ ಸಿಸಿಹೆಚ್ ನ್ಯಾಯಾಲಯ ಹಾಗೂ ಸೆಷನ್ಸ್ ಕೋರ್ಟ್ ಆಸ್ತಿ ವಿವಾದವನ್ನು ಇತ್ಯರ್ಥಗೊಳಿಸಿದೆ. ಈ ಸಂಬಂಧ ಲೋಕ ಅದಾಲತ್ ನಲ್ಲಿ ಬಾಗಿಯಾಗಿದ್ದಂತ ಮುತ್ತಪ್ಪ ರೈ ಇಬ್ಬರು ಪತ್ನಿಯರನ್ನು ಸಂಧಾನ ಮಾಡಿ, ಆಸ್ತಿ ವಿವಾದವನ್ನು ಬಗೆ ಹರಿಸುವಲ್ಲಿ ಕೋರ್ಟ್ ಯಶಸ್ವಿಯಾಗಿದೆ. ಅಂದಹಾಗೇ ಮುತ್ತಪ್ಪ ರೈ ಅವರ 2ನೇ ಪತ್ನಿ ಅನುರಾಧಾ ರೈ ಅವರು ಆಸ್ತಿ ವಿಚಾರವಾಗಿ ಕೋರ್ಟ್ ಮೆಟ್ಟಿಲೇರಿದ್ದರು. ಈ ವಿವಾದವನ್ನು ಸಂಧಾನದ ಮೂಲದ ನ್ಯಾಯಾಲಯವು ಇತ್ಯರ್ಥ ಪಡಿಸುವಲ್ಲಿ ಯಶಸ್ವಿಯಾಗಿದೆ. ಮುತ್ತಪ್ಪ ರೈ ಅವರು ಮೃತಪಡುವ ಒಂದು ವರ್ಷದ ಹಿಂದೆ ಅಂದ್ರೆ 2019ರಲ್ಲಿ ತಮ್ಮ ಆಸ್ತಿಯ ಕುರಿತಂತೆ ವಿಲ್ ಮಾಡಿದ್ದರು. ಸುಮಾರು 41 ಪುಟಗಳ ವಿಲ್ ನಲ್ಲಿ ತಮ್ಮ ಪುತ್ರರಾದ ರಾಕಿ ರೈ, ರಿಕ್ಕಿ ರೈ, ಸಹೋದರನ ಪುತ್ರ ಅಶ್ವಿನಿ ರೈ, ತಮ್ಮ ಎರಡನೇ ಪತ್ನಿ ಅನುರಾಧಾ ರೈ ಸೇರಿದಂತೆ ಮನೆ…

Read More

ಶ್ರೀನಗರ: ಮಹತ್ವದ ರಾಜಕೀಯ ಬೆಳವಣಿಗೆಯೊಂದರಲ್ಲಿ, ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರ ನೇತೃತ್ವದಲ್ಲಿ ನಡೆದ ಮೊದಲ ಸಭೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಕ್ಯಾಬಿನೆಟ್ ರಾಜ್ಯ ಸ್ಥಾನಮಾನವನ್ನು ಪುನಃಸ್ಥಾಪಿಸಲು ಕರೆ ನೀಡುವ ನಿರ್ಣಯವನ್ನು ಅಂಗೀಕರಿಸಿದೆ. ಅಬ್ದುಲ್ಲಾ ಅವರು ಸಿದ್ಧಪಡಿಸಿದ ನಿರ್ಣಯವು ಜಮ್ಮು ಮತ್ತು ಕಾಶ್ಮೀರಕ್ಕೆ ಆದಷ್ಟು ಬೇಗ ರಾಜ್ಯ ಸ್ಥಾನಮಾನವನ್ನು ಪುನಃಸ್ಥಾಪಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತದೆ ಎಂದು ಮೂಲಗಳು ತಿಳಿಸಿವೆ. ಹೊಸದಾಗಿ ಆಯ್ಕೆಯಾದ ಸಿಎಂ ಅಬ್ದುಲ್ಲಾ ಮುಂಬರುವ ದಿನಗಳಲ್ಲಿ ದೆಹಲಿಗೆ ಪ್ರಯಾಣಿಸಲಿದ್ದು, ನಿರ್ಣಯವನ್ನು ಪ್ರಧಾನಿ ನರೇಂದ್ರ ಮೋದಿಯವರಿಗೆ ಔಪಚಾರಿಕವಾಗಿ ಪ್ರಸ್ತುತಪಡಿಸಲಿದ್ದಾರೆ. ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಉಪಮುಖ್ಯಮಂತ್ರಿ ಸುರಿಂದರ್ ಚೌಧರಿ, ಸಚಿವರಾದ ಸಕೀನಾ ಇಟೂ, ಜಾವೇದ್ ಅಹ್ಮದ್ ರಾಣಾ, ಜಾವೇದ್ ಅಹ್ಮದ್ ದಾರ್ ಮತ್ತು ಸತೀಶ್ ಶರ್ಮಾ ಭಾಗವಹಿಸಿದ್ದರು. 2019 ರಲ್ಲಿ ಜಮ್ಮು ಮತ್ತು ಕಾಶ್ಮೀರವನ್ನು ಕೇಂದ್ರಾಡಳಿತ ಪ್ರದೇಶವಾಗಿ (ಯುಟಿ) ಕೆಳದರ್ಜೆಗೆ ಇಳಿಸಿದಾಗ ಅದರ ಮರುಸಂಘಟನೆಯ ನಂತರ ರಾಜ್ಯ ಸ್ಥಾನಮಾನವನ್ನು ಪುನಃಸ್ಥಾಪಿಸುವುದು ದೀರ್ಘಕಾಲದ ಬೇಡಿಕೆಯಾಗಿದೆ. ಎನ್ಸಿಯ ಮೈತ್ರಿ ಪಾಲುದಾರ ಕಾಂಗ್ರೆಸ್ ಅಬ್ದುಲ್ಲಾ ಅವರ ಕ್ಯಾಬಿನೆಟ್ಗೆ…

Read More

ಚಿತ್ರದುರ್ಗ: ನಗರದ ಕಾಲೇಜಿನ ಕಟ್ಟಡದ ಮೇಲಿನಿಂದ ಬಿದ್ದು ವಿದ್ಯಾರ್ಥಿನಿಯೊಬ್ಬರು ಸಾವನ್ನಪ್ಪಿರುವಂತ ಘಟನೆ ನಡೆದಿದೆ. ವಿದ್ಯಾರ್ಥಿನಿ ಕಾಲೇಜಿನ ಕಟ್ಟಡದ ಮೇಲಿನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಚಿತ್ರದುರ್ಗ ನಗರದ ಡಾನ್ ಬೋಸ್ಕೋ ಕಾಲೇಜಿನ ಕಟ್ಟಡದ ಮೇಲಿನಿಂದ ಕೆಳಗೆ ಬಿದ್ದು ಪ್ರೇಮಾ(18) ಎಂಬ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾರೆ. ಚಳ್ಳಕೆರೆ ಮೂಲದ ಪ್ರೇಮಾ ಡಾನ್ ಬೋಸ್ಕೋ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು. ಇಂದು ಕಟ್ಟಡದ ಮೇಲಿನಿಂದ ಬಿದ್ದು ಪ್ರೇಮಾ ಸಾವನ್ನಪ್ಪಿದ್ದಾರೆ. ಪ್ರೇಮಾ ಕಾಲೇಜಿನ ಕಟ್ಟಡದ ಮೇಲಿನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವಂತ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಚಿತ್ರದುರ್ಗದ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/big-shock-for-jewellery-lovers-gold-crop-hits-record-high-again/ https://kannadanewsnow.com/kannada/breaking-commissioner-orders-ccb-probe-into-allegations-of-royalty-against-inmates-in-kalaburagi-jail/ https://kannadanewsnow.com/kannada/meta-launches-joint-initiative-with-centre-to-empower-indians-against-online-scams/

Read More

ಬೆಂಗಳೂರು: ಮೈಸೂರಿನ ಕೆ ಆರ್ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದಂತ ಮಹಿಳೆ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣಗೆ ಹೈಕೋರ್ಟ್ ನಿಂದ ಜಾಮೀನು ನೀಡಲಾಗಿತ್ತು. ಈ ಜಾಮೀನು ನೀಡಿರುವುದನ್ನು ರದ್ದುಗೊಳಿಸುವಂತೆ ಸುಪ್ರೀಂ ಕೋರ್ಟ್ ಗೆ ಎಸ್ಐಟಿ ಅರ್ಜಿ ಸಲ್ಲಿಸಿತ್ತು. ಇಂದು ಅರ್ಜಿಯ ವಿಚಾರಣೆ ನಡೆಸಿದಂತ ಸುಪ್ರೀಂ ಕೋರ್ಟ್, ಜಾಮೀನು ರದ್ದುಗೊಳಿಸಲು ನಕಾರ ವ್ಯಕ್ತ ಪಡಿಸಿದೆ. ಈ ಮೂಲಕ ಭವಾನಿ ರೇವಣ್ಣಗೆ ಬಿಗ್ ರಿಲೀಫ್ ನೀಡಿದೆ. ಎಸ್ಐಟಿಯಿಂದ ಸಂತ್ರಸ್ತ ಮಹಿಳೆ ಕಿಡ್ನ್ಯಾಪ್ ಕೇಸ್ ಸಂಬಂಧ ಭವಾನಿ ರೇವಣ್ಣಗೆ ನೀಡಲಾಗಿದ್ದಂತ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಅರ್ಜಿಯನ್ನು ಸಲ್ಲಿಸಲಾಗಿತ್ತು. ಇಂದು ಈ ಅರ್ಜಿಯನ್ನು ವಿಚಾರಣೆ ನಡೆಸಿದಂತ ಸುಪ್ರೀಂ ಕೋರ್ಟ್ ನ್ಯಾಯಪೀಠವು, ಈಗಾಗಲೇ ಪ್ರಕರಣದ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. ರಾಜಕೀಯ ಕುಟುಂಬ ಅಂತ ಜಾಮೀನು ನಿರಾಕರಿಸಲು ಸಾಧ್ಯವಿಲ್ಲ. ಕೆಲ ರಾಜಕಾರಣಿಗಳು ಅಧಿಕಾರ ದುರ್ಬಳಕೆ ಮಾಡಿಕೊಳ್ಳಬಹುದು ಎಂಬುದಾಗಿ ಅಭಿಪ್ರಾಯ ಪಟ್ಟಿತು. ಜಾಮೀನು ರದ್ದು ಮಾಡಲು ನಕಾರ ವ್ಯಕ್ತ ಪಡಿಸಿದೆ. ಈ ಪ್ರಕರಣದಲ್ಲಿ ತನಿಖೆ ದಾರಿ ತಪ್ಪಿದ್ಯಾ…

Read More

ನವದೆಹಲಿ: ಸಕಾರಾತ್ಮಕ ಜಾಗತಿಕ ಸೂಚನೆಗಳು ಮತ್ತು ದೇಶೀಯ ಸ್ಪಾಟ್ ಮಾರುಕಟ್ಟೆಗಳಿಂದ ಆರೋಗ್ಯಕರ ಬೇಡಿಕೆಯಿಂದಾಗಿ ಶುಕ್ರವಾರ ಬೆಳಿಗ್ಗೆ ದೇಶೀಯ ಫ್ಯೂಚರ್ಸ್ ಮಾರುಕಟ್ಟೆಯಲ್ಲಿ ಚಿನ್ನದ ದರಗಳು 10 ಗ್ರಾಂಗೆ 77,641 ರೂ.ಗೆ ಏರಿದೆ. ಎಂಸಿಎಕ್ಸ್ ಗೋಲ್ಡ್ ಡಿಸೆಂಬರ್ 5 ರಂದು ಬೆಳಿಗ್ಗೆ 9:40 ರ ಸುಮಾರಿಗೆ 10 ಗ್ರಾಂಗೆ ಶೇಕಡಾ 0.62 ರಷ್ಟು ಏರಿಕೆಯಾಗಿ 77,587 ರೂ.ಗೆ ವಹಿವಾಟು ನಡೆಸಿತು. ಸಕಾರಾತ್ಮಕ ಜಾಗತಿಕ ಸೂಚನೆಗಳು ಸ್ವದೇಶದಲ್ಲಿ ಭಾವನೆಗಳ ಮೇಲೆ ಪ್ರಭಾವ ಬೀರಿದವು. ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿ, ಚಿನ್ನದ ಬೆಲೆಗಳು ಈ ತಿಂಗಳು ಶೇಕಡಾ 1 ಕ್ಕಿಂತ ಹೆಚ್ಚಾಗಿದೆ. ಯುಎಸ್ ಚುನಾವಣೆ 2024 ರ ಫಲಿತಾಂಶದ ಸುತ್ತಲಿನ ಅನಿಶ್ಚಿತತೆ, ಪಶ್ಚಿಮ ಏಷ್ಯಾದಲ್ಲಿನ ಉದ್ವಿಗ್ನತೆ ಮತ್ತು ಮತ್ತಷ್ಟು ವಿತ್ತೀಯ ಸರಾಗಗೊಳಿಸುವ ನಿರೀಕ್ಷೆಗಳಿಂದಾಗಿ ಶುಕ್ರವಾರ ದಾಖಲೆಯ ಗರಿಷ್ಠ ಮಟ್ಟದಲ್ಲಿ ವಹಿವಾಟು ನಡೆಸಿತು. ಸ್ಪಾಟ್ ಚಿನ್ನವು ಗುರುವಾರ ದಾಖಲೆಯ ಗರಿಷ್ಠ 2,696.59 ಡಾಲರ್ಗೆ ತಲುಪಿದೆ. ಎಲ್ಲೆಲ್ಲಿ ಎಷ್ಟು ಚಿನ್ನದ ಬೆಲೆ ಇದೆ..? ಇಲ್ಲಿದೆ ಡೀಟೆಲ್ಸ್ ದೆಹಲಿ 22 ಕ್ಯಾರೇಟ್ 10 ಗ್ರಾಂ…

Read More

ಪ್ರಾಚೀನ‌ ಕಾಲದಿಂದಲೂ ರತ್ನಗಳನ್ನು ಉಪಯೋಗಿಸುವುದು ಶೃಂಗಾರಕ್ಕಾಗಿ , ಅಲಂಕಾರಕ್ಕಾಗಿ ಮತ್ತು ಐಶ್ವರ್ಯವನ್ನು ಪ್ರದರ್ಶನ ಮಾಡುವುದಕ್ಕಾಗಿ ಎಂಬಲ್ಲಿ ಎರಡು ಮಾತಿಲ್ಲ. ರತ್ನಗಳ ವಿಭಿನ್ನ ಪ್ರಭಾವವು ದೇಹ ವಿಜ್ಞಾನದ ಜೊತೆಗೆ ಆಯುರ್ವೇದದ ವಿಷಯವೂ ಆಗಿದೆ. ವೈದ್ಯಕೀಯ ಗ್ರಂಥಗಳಲ್ಲಿ ರತ್ನಗಳ ಭಸ್ಮ , ರತ್ನಗಳ ಪುಡಿ ಮತ್ತು ರಸಾಯನ ಕ್ರಿಯೆಗಳ ಪ್ರಯೋಗವನ್ನು ಅಸಾಧ್ಯ ರೋಗಗಳ ನಿವಾರಣೆಗಾಗಿ ಸಾವಿರಾರು ವರ್ಷಗಳಿಂದ ಮಾಡಲಾಗುತ್ತಿದೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರು ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9686268564 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ…

Read More

ಮಂಡ್ಯ: ಇಂದು, ನಾಳೆ ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರು ಹಾಗೂ ಕ್ಷೇತ್ರದ ಸಂಸದರೂ ಆಗಿರುವ ಹೆಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಗರದಲ್ಲಿ ಬೃಹತ್ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದ್ದು, ಸುಮಾರು 150ಕ್ಕೂ ಹೆಚ್ಚು ಉದ್ಯೋಗದಾತ ಕಂಪನಿಗಳು ಭಾಗಿಯಾಗಲಿವೆ. ಈ ಬಗ್ಗೆ ಸ್ವತಃ ಕೇಂದ್ರ ಸಚಿವರೇ ಮಾಹಿತಿ ನೀಡಿದ್ದು, ದೇಶದ ಉದ್ದಗಲಕ್ಕೂ ಇರುವ 150ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಉದ್ಯೋಗ ಮೇಳಕ್ಕೆ ಬರಲಿದ್ದು, ಈ ಭಾಗದ ಮೂರು ಸಾವಿರಕ್ಕೂ ಹೆಚ್ಚು ನಿರುದ್ಯೋಗಿ ಯುವ ಜನರಿಗೆ ಉದ್ಯೋಗ ಕೊಡಿಸುವ ಗುರಿ ಹೊಂದಿದ್ದೇವೆ ಎಂದು ತಿಳಿಸಿದ್ದಾರೆ. ಮಂಡ್ಯ ಟೂ ಇಂಡಿಯಾ ಎನ್ನುವ ಘೋಷವಾಕ್ಯದೊಂದಿಗೆ ಉದ್ಯೋಗ ಮೇಳ ನಡೆಯುತ್ತಿದ್ದು, ಮಂಡ್ಯದ ಇತಿಹಾಸದಲ್ಲಿಯೇ ಇದೊಂದು ಮೈಲುಗಲ್ಲು ಆಗಲಿದೆ. ರೈತಾಪಿ ಜನರ ಮಕ್ಕಳಿಗೆ ಉದ್ಯೋಗ ಕಲ್ಪಿಸಬೇಕು ಎನ್ನುವುದು ನನ್ನ ಮಹದಾಸೆ ಆಗಿದ್ದು, ಈ ಮೂಲಕ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರೆ. ಇಂದು ಹಾಗೂ ನಾಳೆ (ಅಕ್ಟೋಬರ್ 18-19) ಮಂಡ್ಯ ನಗರದ ಸರ್ ಎಂ ವಿಶ್ವೇಶ್ವರಯ್ಯ…

Read More

ರಾಯಚೂರು: ರಾಜ್ಯದ ಸರ್ಕಾರಿ ಆಸ್ಪತ್ರೆಯೊಂದರಲ್ಲಿದ್ದಂತ ಲಕ್ಷಾಂತರ ರೂ ಬೆಲೆ ಬಾಳುವಂತ ಯಂತ್ರೋಪಕರಣಗಳು ಕಳವು ಆಗಿರುವುದಾಗಿ ತಿಳಿದು ಬಂದಿದೆ.  ರಾಯಚೂರು ಜಿಲ್ಲೆಯ ದೇವದುರ್ಗ ಸರ್ಕಾರಿ ಆಸ್ಪತ್ರೆಯಲ್ಲೇ ಉಪಕರಣಗಳು ಕಳ್ಳತನವಾಗಿದ್ದಾವೆ. ದೇವದುರ್ಗ ಸರ್ಕಾರಿ ಆಸ್ಪತ್ರೆಯ ಲ್ಯಾಬ್ ನಲ್ಲಿದ್ದಂತ ಲಕ್ಷಾಂತರ ರೂ ಮೌಲ್ಯದ ಉಪಕರಣಗಳು ಕಳ್ಳತನವಾಗಿದ್ದಾವೆ. ಲ್ಯಾಬ್ ನಲ್ಲಿದ್ದಂತ 10 ಲಕ್ಷ ಮೌಲ್ಯದ ಮೂರು ಯಂತ್ರೋಪಕರಣಗಳನ್ನು ಕದಿಯಲಾಗಿದೆ. ಅಲ್ಲದೇ ಸಿಸಿಟಿವಿ ಡಿವಿಆರ್, ರಕ್ತ ಪರೀಕ್ಷೆ ಮಾಡುವಂತ ಅತ್ಯಾಧುನಿಕ ಯಂತ್ರ, ಎಲೆಕ್ಟ್ರೋಲೈಟ್ ಸೇರಿದಂತೆ ಸುಮಾರು 10 ಲಕ್ಷ ಮೌಲ್ಯದ ಉಪಕರಣಗಳನ್ನು ಕಳ್ಳತನ ಮಾಡಲಾಗಿದೆ. ಈ ಸಂಬಂಧ ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಳ್ಳರ ಪತ್ತೆಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/gold-price-hike-what-is-the-price-of-gold-today-here-are-the-details/ https://kannadanewsnow.com/kannada/breaking-commissioner-orders-ccb-probe-into-allegations-of-royalty-against-inmates-in-kalaburagi-jail/

Read More

ನವದೆಹಲಿ: ಅಕ್ಟೋಬರ್.18 ರಂದು ಭಾರತದಲ್ಲಿ ಚಿನ್ನದ ಬೆಲೆ 10 ಗ್ರಾಂಗೆ 77,000 ರೂ. 24 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 78,100 ರೂಪಾಯಿ ದಾಖಲಾಗಿದೆ. ಆಭರಣ ಖರೀದಿದಾರರಿಗೆ, ಅದರ ಮಿಶ್ರಲೋಹ ಸಂಯೋಜನೆಯಿಂದಾಗಿ ಹೆಚ್ಚು ಬಾಳಿಕೆ ಬರುವ 22 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 71,610 ರೂ. ಇನ್ನು ಬೆಳ್ಳಿ ಬೆಲೆ ಪ್ರತಿ ಕೆ.ಜಿ.ಗೆ 96,900 ರೂ. ಎಲ್ಲೆಲ್ಲಿ ಎಷ್ಟು ಚಿನ್ನದ ಬೆಲೆ ಇದೆ..? ಇಲ್ಲಿದೆ ಡೀಟೆಲ್ಸ್ ದೆಹಲಿ 22 ಕ್ಯಾರೇಟ್ 10 ಗ್ರಾಂ ಚಿನ್ನದ ಬೆಲೆ ರೂ.71,760, 24 ಕ್ಯಾರೆಟ್ ಚಿನ್ನದ ಬೆಲೆ ರೂ.78,270 ಮುಂಬೈ 22 ಕ್ಯಾರೇಟ್ 10 ಗ್ರಾಂ ಚಿನ್ನದ ಬೆಲೆ ರೂ. 71,610. 24 ಕ್ಯಾರೆಟ್ ಚಿನ್ನದ ಬೆಲೆ ರೂ.78,120 ಅಹಮದಾಬಾದ್ 22 ಕ್ಯಾರೇಟ್ 10 ಗ್ರಾಂ ಚಿನ್ನದ ಬೆಲೆ ರೂ. 71,660. 24 ಕ್ಯಾರೆಟ್ ಚಿನ್ನದ ಬೆಲೆ ರೂ.78,170 ಚೆನ್ನೈ 22 ಕ್ಯಾರೇಟ್ 10 ಗ್ರಾಂ ಚಿನ್ನದ ಬೆಲೆ ರೂ. 71,610. 24 ಕ್ಯಾರೆಟ್…

Read More

ಶಿವಮೊಗ್ಗ: ಕನ್ನಡದ ಬಿಗ್ ಬಾಸ್ ಸೀಜನ್ 11ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಇಂದಿಗೆ 19 ದಿನ ಬಿಗ್ ಬಾಸ್ ಕನ್ನಡ ಆರಂಭಗೊಂಡ ಬಳಿಕ, ಈಗ ದೊಡ್ಡ ಸಂಕಷ್ಟವೇ ಎದುರಾಗಿದೆ. ಬಿಗ್ ಬಾಸ್ ಶೋಗೆ ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಕೋರ್ಟ್ ತುರ್ತು ನೋಟಿಸ್ ಜಾರಿಗೊಳಿಸಿದೆ. ಹೀಗಾಗಿ ಕನ್ನಡದ ಬಿಗ್​ಬಾಸ್ ಸೀಸನ್ 11ಗೆ ದೊಡ್ಡ ಸಂಕಷ್ಟ ಎದುರಾಗಿದೆ.  ಶಿವಮೊಗ್ಗ ಜಿಲ್ಲೆಯ ಸಾಗರ ನ್ಯಾಯಾಲಯಕ್ಕೆ ವಕೀಲ ಕೆ.ಎಲ್ ಭೋಜರಾಜ್ ಅವರು ಕನ್ನಡದ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ 11 ಕುರಿತಂತೆ ಅರ್ಜಿಯನ್ನು ಸಲ್ಲಿಸಿದ್ದರು. ಅದರಲ್ಲಿ ದಿನಾಂಕ: 29-ಸೆಪ್ಟೆಂಬರ್-2024 ರಿಂದ Colors ಕನ್ನಡ ವಾಹಿನಿ ಹಾಗೂ voot app ನಲ್ಲಿ ಬಿಗ್ ಬಾಸ್ ಸೀಸನ್ 11 ಕಾರ್ಯಕ್ರಮವು ಪ್ರಸಾರವಾಗಿರುತ್ತದೆ. ಇದರಲ್ಲಿ ಕನ್ನಡದ ಖ್ಯಾತ ನಟರಾದ ಸುದೀಪ್ ಅವರು 17 ಸ್ಪರ್ಧಿಗಳನ್ನು ಘೋಷಣೆ ಮಾಡಿ, ಸಾರ್ವಜನಿಕರಿಗೆ ಸ್ಪರ್ಧಿಗಳನ್ನು ಪರಿಚಯಿಸಿರುತ್ತಾರೆ. ಈ 17 ಜನ ಸ್ಪರ್ಧಿಗಳ ಪೈಕಿ, ಅಪರಾಧ ಹಿನ್ನೆಲೆಯುಳ್ಳ ಚೈತ್ರ ಕುಂದಾಪುರ ಇವರನ್ನೂ ಸಹ ಸ್ಪರ್ಧಿಯಾಗಿ…

Read More