Subscribe to Updates
Get the latest creative news from FooBar about art, design and business.
Author: kannadanewsnow09
ದಾವಣಗೆರೆ: ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯ್ತಿ ಚುನಾವಣೆ ಕುರಿತಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಮಹತ್ವದ ಅಪ್ ಡೇಟ್ ನೀಡಿದ್ದಾರೆ. ಅದು ಏನು ಅಂತ ಮುಂದೆ ಓದಿ. ದಾವಣಗೆರೆಯ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದಂತ ಅವರು, ಬ್ರಿಟಿಷರ ಕಾಲದಲ್ಲಿಯೇ ಆರ್.ಎಸ್.ಎಸ್ ಇತ್ತು , ಆಗಲೇ ನೋಂದಣಿ ಮಾಡಿಕೊಳ್ಳಬೇಕಿತ್ತು ಎಂಬ ಬಗ್ಗೆ ಆರ್ ಎಸ್ ಎಸ್ ಮುಖಂಡ ಮೋಹನ್ ಭಾಗವತ್ ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಆರ್.ಎಸ್.ಎಸ್. ನ್ನು ಹೊರಗಿಡುವ ಬಗ್ಗೆ ಸರ್ಕಾರದ ಆದೇಶದಲ್ಲಿ ಹೇಳಿಲ್ಲ. ಯಾವುದೇ ಸಂಘ ಸಂಸ್ಥೆಗಳು ಆಯಾ ಜಿಲ್ಲಾಧಿಕಾರಿಗಳ ಬಳಿ ಅನುಮತಿ ಪಡೆಯಬೇಕು ಎಂದು ಹೇಳಿದೆ. ಅವರು ಹಾಗೆ ಭಾವಿಸಿಕೊಂಡಿದ್ದಾರೆ ಎಂದರು. ಭಾಗವತ್ ಹೇಳಿದ್ದಕ್ಕೆಲ್ಲ ನಾವು ಉತ್ತರಿಸಲಾಗುವುದಿಲ್ಲ ಎಂದರು. ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಯ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಪ್ರಕರಣ ನ್ಯಾಯಾಲಯದಲ್ಲಿದ್ದು, ಎಂದು ಮಾಡಬೇಕೆಂದು ಸೂಚಿಸಲಾಗುವುದೋ ಆಗ ಚುನಾವಣೆ ನಡೆಸಲಾಗುವುದು ಎಂದರು.
ಮಡಿಕೇರಿ: ರಾಜ್ಯದಲ್ಲಿ ಖಾಲಿ ಇರುವಂತ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ತೀರ್ಮಾನಿಸಲಾಗಿದೆ. 18,000 ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆಸಲು ಸರ್ಕಾರ ತೀರ್ಮಾನ ಕೈಗೊಂಡಿದೆ ಎಂಬುದಾಗಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಈ ಮೂಲಕ ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಜ್ಯದಲ್ಲಿ 900 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಪ್ರಾರಂಭಿಸಲಾಗುವುದು. ಹೀಗಾಗಿಯೇ 18,000 ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ಸರ್ಕಾರ ತೀರ್ಮಾನಿಸಿದೆ ಎಂದರು. ರಾಜ್ಯದಲ್ಲಿ ಶಾಲೆಗಳಲ್ಲಿ ಶಿಕ್ಷಕರ ಕೊರತೆಯಾಗದಂತೆ 51,000 ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಸರ್ಕಾರ ಕ್ರಮವಹಿಸಿದೆ. ರಾಜ್ಯದಲ್ಲಿ ಎಲ್ ಕೆಜಿಯಿಂದ ಪಿಯುಸಿಯವರೆಗೆ 1.16 ಕೋಟಿ ಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ. ಅವರಿಗೆ ಸರ್ಕಾರ ಎಲ್ಲಾ ರೀತಿಯ ಸೌಲಭ್ಯ ಒದಗಿಸಿರುವುದಾಗಿ ತಿಳಿಸಿದರು.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ವಾರ್ತಾಭಾರತಿ ಪತ್ರಿಕೆಯ ಹಿರಿಯ ಪತ್ರಕರ್ತ ಪುಷ್ಪರಾಜ್ ಶೆಟ್ಟಿ ಭರ್ಜರಿ ಗೆಲುವು ಸಾಧಿಸಿ, ಚುನಾಯಿತರಾಗಿದ್ದಾರೆ. ಇಂದು ರಾಜ್ಯದ 20 ಜಿಲ್ಲೆಗಳಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕಗಳಿಗೆ ಪದಾಧಿಕಾರಿಗಳ ಆಯ್ಕೆಗಾಗಿ ಮತದಾನ ನಡೆಯಿತು. ಅದರಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಜಿಲ್ಲಾ ಘಟಕಕ್ಕೂ ಮತದಾನ ನಡೆಯಿತು. ಇಂದು ನಡೆದಂತ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಪುಷ್ಪರಾಜ್ ಬಿಎನ್ ಹಾಗೂ ಶ್ರವಣ್ ಕುಮಾರ್.ಕೆ ಸ್ಪರ್ಧಿಸಿದ್ದರು. ಇವರಲ್ಲಿ ಪುಷ್ಪರಾಜ್ ಬಿಎನ್ ಅವರು 187 ಮತಗಳನ್ನು ಪಡೆಯುವ ಮೂಲಕ ಗೆಲುವು ಸಾಧಿಸಿದರೇ, ಶ್ರವಣ್ ಕುಮಾರ್ ಕೆ. 144 ಮತಗಳನ್ನು ಪಡೆಯುವ ಮೂಲಕ ಸೋಲು ಕಂಡಿದ್ದಾರೆ. ಹೀಗಿದೆ ದಕ್ಷಿಣ ಕನ್ನಡ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆಯಲ್ಲಿ ಆಯ್ಕೆಗೊಂಡವರ ವಿವರ ಅಧ್ಯಕ್ಷರಾಗಿ ಪುಷ್ಪರಾಜ್ ಬಿಎನ್ ಆಯ್ಕೆ ಉಪಾಧ್ಯಕ್ಷರಾಗಿ ವಿಲ್ ಫ್ರೆಡ್ ಡಿಸೋಜಾ, ಮುಹಮ್ಮದ್ ಆರೀಫ್, ರಾಜೇಶ್ ಶೆಟ್ಟಿ ಆಯ್ಕೆ ಕಾರ್ಯದರ್ಶಿ ಸ್ಥಾನಕ್ಕೆ ಎ.ಸಿದ್ಧಿಕ್ ನೀರಾಜೆ, ಸುರೇಶ್ ಡಿ…
ಮಂಡ್ಯ: ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಿರುನಾಲೆಗೆ ಕಾರೊಂದು ಉರುಳಿ ಬಿದ್ದಿದೆ. ಈ ಪರಿಣಾಮ ಓರ್ವ ನೀರಲ್ಲಿ ಕೊಚ್ಚಿ ಹೋಗಿ ನಾಪತ್ತೆಯಾಗಿದ್ದರೇ, ಮೂವರು ಗಾಯಗೊಂಡಿದ್ದಾರೆ. ಮಂಡ್ಯ-ಮೇಲುಕೋಟೆ ಮುಖ್ಯರಸ್ತೆಯ ಮಾಡಲ ಗೇಟ್ ಬಳಿಯಲ್ಲಿ ಈ ಘಟನೆ ನಡೆದಿದೆ. ಮೇಲುಕೋಟೆಯಿಂದ ಮಂಡ್ಯ ಕಡೆಗೆ ಸ್ವಿಫ್ಟ್ ಕಾರು ಹೊರಟಿತ್ತು. ಚಾಲಕನ ನಿಯಂತ್ರಣ ತಪ್ಪಿ ನಾಲೆಗೆ ಉರುಳಿಬಿದ್ದರಿಂದ ಈ ದುರ್ಘಟನೆ ಸಂಭವಿಸಿದೆ. ಈ ವಿಷಯ ತಿಳಿದು ಸ್ಥಳಕ್ಕೆ ಶಿವಳ್ಳಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಾಪತ್ತೆಯಾಗಿರುವಂತ ವ್ಯಕ್ತಿಯ ಪತ್ತೆಗಾಗಿ ಪೊಲೀಸರು ಹುಡುಕಾಟ ಮುಂದುವರೆಸಿದ್ದಾರೆ. ಶಿವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/one-in-9-students-who-commit-suicide-worldwide-is-in-india-study/ https://kannadanewsnow.com/kannada/centers-ban-on-sharavati-pumped-storage-project-victory-for-environmentalists-fight/
ಬೆಂಗಳೂರು: ಲೋಕಾಯುಕ್ತರ ಆಸ್ತಿ ಬಹಿರಂಗಕ್ಕೂ ಕಾಯ್ದೆ ತಿದ್ದುಪಡಿಯ ಅತ್ಯಗತ್ಯವಿದೆ. ಆ ನಿಟ್ಟಿನಲ್ಲಿಯೂ ಸರ್ಕಾರ ಕ್ರಮವಹಿಸುವಂತೆ ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಅವರು ಕಾನೂನು ಮತ್ತು ಸಂಸದೀಯ ಇಲಾಖಾ ಸಚಿವ ಹೆಚ್.ಕೆ ಪಾಟೀಲ್ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಈ ಕುರಿತಂತೆ ಪತ್ರ ಬರೆದಿರುವಂತ ಅವರು, ಕರ್ನಾಟಕ ಲೋಕಾಯುಕ್ತ ಕಾಯಿದೆ ಅನ್ವಯ ಪ್ರತಿ ವರ್ಷ ಕರ್ನಾಟಕ ರಾಜ್ಯ ವಿಧಾನ ಮಂಡಲದ ಸದಸ್ಯರು ತಮ್ಮ ಆಸ್ತಿಯ ವಿವರಗಳನ್ನು ಲೋಕಾಯುಕ್ತ ಸಂಸ್ಥೆಗೆ ಸಲ್ಲಿಕೆ ಮಾಡಬೇಕಾಗಿರುತ್ತದೆ. ತಮ್ಮ ಆಸ್ತಿ ವಿವರಗಳನ್ನು ಜೂನ್ 30ರ ಒಳಗೆ ಸಲ್ಲಿಸದ ಶಾಸಕರ ಪಟ್ಟಿಯನ್ನು ಲೋಕಾಯುಕ್ತ ಕಾಯಿದೆಯ ಪ್ರಕಾರ ಬಿಡುಗಡೆ ಮಾಡಿರುತ್ತದೆ . ಸಾರ್ವಜನಿಕ ಹಿತ ದೃಷ್ಟಿಯಿಂದ ಇದು ಅವಶ್ಯಕತೆ ಇರುತ್ತದೆ. ಅದೇ ರೀತಿ ಲೋಕಾಯುಕ್ತ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುವ ಲೋಕಾಯುಕ್ತರು/ ಉಪ ಲೋಕಾಯುಕ್ತರು ತಮ್ಮ ಆಸ್ತಿ ಪಟ್ಟಿಯನ್ನು ಪ್ರಕಟಿಸುವುದು ಸಾರ್ವಜನಿಕ ಹಿತದೃಷ್ಟಿಯಿಂದ ಅವಶ್ಯಕವಾಗಿರುತ್ತದೆ ಎಂದಿದ್ದಾರೆ. ಜುಲೈ 12, 2021 ರಲ್ಲಿ ಕರ್ನಾಟಕ ರಾಜ್ಯ…
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಂತ ಕೈದಿಗಳು ಮೊಬೈಲ್ ಬಳಕೆ ಮಾಡಿದ್ದು, ಅದರಲ್ಲಿ ವೀಡಿಯೋ ಚಿತ್ರೀಕರಣ ಮಾಡಿಕೊಂಡು ವೈರಲ್ ಮಾಡಲಾಗಿತ್ತು. ಈ ಹಿನ್ನಲೆಯಲ್ಲಿ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿಷೇಧ ಇದ್ದರೂ ಮೊಬೈಲ್ ಬಳಕೆ ಮಾಡಿ ವೀಡಿಯೋ ಚಿತ್ರೀಕರಣವನ್ನು ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳು ಮಾಡಿದ್ದರು. ಪರಪ್ಪನ ಅಗ್ರಹಾರ ಜೈಲಿನಲ್ಲಿನ ವೀಡಿಯೋ ಚಿತ್ರೀಕರಣವು ವೈರಲ್ ಕೂಡ ಆಗಿತ್ತು. ಅನುಮತಿ ಇಲ್ಲದೇ ಮೊಬೈಲ್ ಬಳಕೆ, ವೀಡಿಯೋ ಚಿತ್ರೀಕರಣದ ಹಿನ್ನಲೆಯಲ್ಲಿ ಈ ಬಗ್ಗೆ ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ದೂರು ನೀಡಲಾಗಿತ್ತು. ಜೈಲು ಅಧಿಕಾರಿಗಳ ದೂರಿನ ಅನ್ವಯ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಎನ್ ಸಿ ಆರ್ ದಾಖಲಾಗಿದೆ. ಎನ್ ಸಿ ಆರ್ ದಾಖಲಿಸಿಕೊಂಡಿರುವಂತ ಪರಪ್ಪನ ಅಗ್ರಹಾರ ಪೊಲೀಸರು, ತನಿಖೆಯನ್ನು ಕೈಗೊಂಡಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೂವರು ಕೈದಿಗಳು ಮೊಬೈಲ್ ಬಳಸಿದ್ದರು. ಐಸಿಸ್ ಸಂಘಟನೆಯ ಉಗ್ರ ಜುಹಾದ್ ಹಮೀದ್ ಶಕೀಲ್ ಮುನ್ನಾ, ಸರಣಿ ಕೊಲೆ ಪ್ರಕರಣದ ಅಪರಾಧಿ ಉಮೇಶ್ ರೆಡ್ಡಿ, ಸ್ಮಗ್ಲಿಂಗ್…
ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಶರಾವತಿ ನದಿಯ ಬಳಿಯಲ್ಲಿ ನಿರ್ಮಿಸುತ್ತಿರುವಂತ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ಕೇಂದ್ರ ಸರ್ಕಾರವು ತಡೆ ನೀಡಿಲ್ಲ. ಬದಲಾಗಿ ವರದಿಯೊಂದನ್ನು ಸಲ್ಲಿಸಬೇಕಿರುವ ಕಾರಣ ಮುಂದೂಡಿಕೆ ಮಾಡಿರುವುದಾಗಿ ಕೆಪಿಸಿಎಲ್ ಇಇ ವಿಜಯ್ ಕುಮಾರ್ ಸ್ಪಷ್ಟ ಪಡಿಸಿದ್ದಾರೆ. ಇಂದು ಕನ್ನಡ ನ್ಯೂಸ್ ನೌ ಜೊತೆಗೆ ಮಾತನಾಡಿದಂತ ಅವರು ನ್ಯಾಷನಲ್ ಬೋರ್ಡ್ ಫಾರ್ ವೈಲ್ಡ್ ಲೈಫ್ ಉಪ ಕಮಿಟಿಯು ಸ್ಥಳ ಪರಿಶೀಲನೆ ಮಾಡಿ ವರದಿಯನ್ನು ನೀಡಬೇಕಿದೆ. ಆದರೇ ಅನಿವಾರ್ಯ ಕಾರಣದಿಂದಾಗಿ Sub-comittee of NBWL ಸ್ಥಳ ಪರಿಶೀಲನೆ ಮಾಡಲು ಸಾಧ್ಯವಾಗಿಲ್ಲ. ಹೀಗಾಗಿ ತಾತ್ಕಾಲಿಕವಾಗಿ ಯೋಜನೆ ಮುಂದೂಡಿಕೆಗೆ ಕೇಂದ್ರ ಸರ್ಕಾರ ಸೂಚಿಸಿದೆ ಎಂದರು. ನ್ಯಾಷನಲ್ ಬೋರ್ಡ್ ಫಾರ್ ವೈಲ್ಡ್ ಲೈಫ್ ಉಪ ಕಮಿಟಿಯು ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯ ಪ್ರದೇಶಕ್ಕೆ ಭೇಟಿ ನೀಡಿ, ವರದಿಯನ್ನು ತಯಾರಿಸಿ MoEF ಗೆ ಸಲ್ಲಿಸಿದರೇ, ಯೋಜನೆ ಗೆ ಅಗತ್ಯವಿರುವ ಅನುಮತಿ ಪ್ರಕ್ರಿಯೆ ಮತ್ತೆ ಪ್ರಾರಂಭವಾಗಲಿದೆ. ಎಂಓಎಫ್ ಗೆ ವರದಿಯನ್ನು ಸಲ್ಲಿಸಿದರೇ ಸದ್ಯ ತಾತ್ಕಾಲಿಕವಾಗಿ ಮುಂದೂಡಿರುವಂತ ಯೋಜನೆಯು, ಮತ್ತೆ…
ಬೆಂಗಳೂರು: ಮಿಕೊ ಎಫ್ಎಂಎಸ್ಸಿಐ ರಾಷ್ಟ್ರೀಯ ರೊಟಾಕ್ಸ್ ಕಾರ್ಟಿಂಗ್ ಚಾಂಪಿಯನ್ಶಿಪ್ನ 5 ಹಾಗೂ 6ನೇ ಸುತ್ತು ಬೆಂಗಳೂರಿನಲ್ಲಿ ಯಶಸ್ವಿಯಾಗಿ ನಡೆಯಿತು. ಬೆಂಗಳೂರಿನವರೇ ಆದ ಇಶಾನ್ ಮಾದೇಶ್ ಹಿರಿಯರ ವಿಭಾಗದಲ್ಲಿ ಅಮೋಘ ಗೆಲುವು ಸಾಧಿಸಿದರು. ಇನ್ನು, ಮುಂಬೈನ ಕಿಯಾನ್ ಶಾ (ರಾಯೊ ರೇಸಿಂಗ್) ಕಿರಿಯರ ವಿಭಾಗದಲ್ಲಿ ಅಮೋಘ ಪ್ರದರ್ಶನ ತೋರಿ ಗಮನ ಸೆಳೆದರು. ರಾಯೊ ರೇಸಿಂಗ್ ತಂಡವನ್ನು ಪ್ರತಿನಿಧಿಸುವ, ಮುಂಬೈನವರೇ ಆದ ಕೃಷ್ ಗುಪ್ತಾ ಆಕರ್ಷಕ ಪ್ರದರ್ಶನದೊಂದಿಗೆ ಹಿರಿಯರ ವಿಭಾಗದ ಕೊನೆ 2 ಸುತ್ತುಗಳಲ್ಲಿ ಕ್ರಮವಾಗಿ 3 ಹಾಗೂ 2ನೇ ಸ್ಥಾನ ಗಳಿಸಿದರು. ಈ ಫಲಿತಾಂಶಗಳ ಸಹಾಯದಿಂದ ಕಿಯಾನ್ ಹಾಗೂ ಕೃಷ್ ಇಬ್ಬರೂ, ತಮ್ಮ ತಮ್ಮ ವಿಭಾಗಗಳಲ್ಲಿ ಒಟ್ಟಾರೆ 2ನೇ ಸ್ಥಾನ ಗಳಿಸಿ ಸಂಭ್ರಮಿಸಿದರು. 5 ಹಾಗೂ 6ನೇ ಸುತ್ತುಗಳನ್ನು ಒಟ್ಟಿಗೆ ನಡೆಸಿದ ಕಾರಣ, ರೇಸರ್ಗಳ ಫಿಟ್ನೆಸ್ ಹಾಗೂ ಮಾನಸಿಕ ಸದೃಢತೆ ತೀವ್ರ ಪರೀಕ್ಷೆಗೆ ಒಳಪಟ್ಟಿತು. ಕಿರಿಯರ ವಿಭಾಗದ ಅರ್ಹತಾ ಸುತ್ತು, ಕಿಯಾನ್ ಪಾಲಿಗೆ ನಿರೀಕ್ಷಿತ ಫಲಿತಾಂಶ ತಂದುಕೊಡಲಿಲ್ಲ. ಪೋಲ್ ಪೊಸಿಷನ್ ಪಡೆದ ಚೆನ್ನೈನ…
ಹರಿಯಾಣ: ಕರ್ನಾಟಕದ ಹೆಮ್ಮೆಯ ಕೆ ಎಸ್ ಆರ್ ಟಿ ಸಿಗೆ ಪ್ರತಿಷ್ಠಿತ ರಾಷ್ಡ್ರೀಯ ಪ್ರಶಸ್ತಿ -2025 ರ ಹೆಗ್ಗಳಿಕೆಗೆ ಪಾತ್ರವಾಗಿದೆ. ಭಾರತ ಸರ್ಕಾರದ ವಸತಿ ಮತ್ರು ನಗರಾಭಿವೃದ್ಧಿ ಸಚಿವಾಲಯದ Award of Excellence in Urban Transport ಪ್ರಶಸ್ತಿಯ ಗೌರವ ಸಂದಿದೆ. ಈ ಮೂಲಕ ಕೆ ಎಸ್ ಆರ್ ಟಿ ಸಿಗೆ ಮತ್ತೊಂದು ರಾಷ್ಟ್ರೀಯ ಪ್ರಶಸ್ತಿ ಬಂದಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ನಿಗಮ ಮಾಹಿತಿ ನೀಡಿದ್ದು, THE STATE, WHICH HAS IMPLEMENTED BEST URBAN TRANSPORT PROJECTS DURING THE PREVIOUS YEAR ವರ್ಗದಲ್ಲಿ ನಿಗಮದ ಮೈಸೂರು ನಗರ ಸಾರಿಗೆಯ ಧ್ವನಿಸ್ಪಂದನ ಉಪಕ್ರಮಕ್ಕೆ ಭಾರತ ಸರ್ಕಾರದ ಪ್ರಶಸ್ತಿ ಲಭಿಸಿದೆ ಎಂದಿದೆ. ಕೆಎಸ್ಆರ್ಟಿಸಿಯ ಮೈಸೂರು ನಗರ ಸಾರಿಗೆಯ 200 ಬಸ್ಸುಗಳಲ್ಲಿ ಧ್ವನಿ ಸ್ಪಂದನ’ – ಆನ್ಬೋರ್ಡ್ ಬಸ್ ಐಡೆಂಟಿಫಿಕೇಶನ್ ಮತ್ತು ನ್ಯಾವಿಗೇಶನ್ ಸಿಸ್ಟಮ್* ಎಂಬ ದೇಶದ ಮೊದಲ ಯೋಜನೆಯನ್ನು ಯಶಸ್ವಿಯಾಗಿ ಜಾರಿಗೆ ತರಲಾಗಿದ್ದು, ದೃಷ್ಟಿ ವಿಕಲ ಚೇತನ ಪ್ರಯಾಣಿಕರ ಪ್ರಯಾಣ ಅವಲಂಬನೆ…
ಇಸ್ಲಾಮಾಬಾದ್: ಪಾಕಿಸ್ತಾನ ಸರ್ಕಾರವು ಸೆನೆಟ್ನಲ್ಲಿ 27 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ಪರಿಚಯಿಸಿದೆ, ಇದು ದೇಶದ ಮಿಲಿಟರಿ ಕಮಾಂಡ್ ರಚನೆ ಮತ್ತು ಸಾಂವಿಧಾನಿಕ ಚೌಕಟ್ಟಿನಲ್ಲಿ ಪ್ರಮುಖ ಬದಲಾವಣೆಗಳನ್ನು ಪ್ರಸ್ತಾಪಿಸುತ್ತದೆ. ಮಸೂದೆಯ ಬಗ್ಗೆ ಡಾನ್ ಪ್ರಕಾರ, ಶನಿವಾರ ಮಂಡಿಸಲಾದ ವ್ಯಾಪಕ ಶ್ರೇಣಿಯ ಮಸೂದೆಯು ಜಂಟಿ ಮುಖ್ಯಸ್ಥರ ಸಮಿತಿ (CJCSC) ಅಧ್ಯಕ್ಷರ ಕಚೇರಿಯನ್ನು ರದ್ದುಗೊಳಿಸಲು ಮತ್ತು ರಕ್ಷಣಾ ಪಡೆಗಳ ಮುಖ್ಯಸ್ಥರ (CDF) ಹೊಸ ಹುದ್ದೆಯನ್ನು ಪರಿಚಯಿಸಲು ಪ್ರಯತ್ನಿಸುತ್ತದೆ, ಇದು ಸೇನಾ ಮುಖ್ಯಸ್ಥರನ್ನು ಪಾಕಿಸ್ತಾನದ ಸಶಸ್ತ್ರ ಪಡೆಗಳ ಮೇಲ್ಭಾಗದಲ್ಲಿ ಪರಿಣಾಮಕಾರಿಯಾಗಿ ಇರಿಸುತ್ತದೆ. ಪ್ರಸ್ತಾವಿತ ತಿದ್ದುಪಡಿಯು ಸಶಸ್ತ್ರ ಪಡೆಗಳ ನಿಯಂತ್ರಣ ಮತ್ತು ಆಜ್ಞೆಯನ್ನು ನಿಯಂತ್ರಿಸುವ ಪಾಕಿಸ್ತಾನದ ಸಂವಿಧಾನದ 243 ನೇ ವಿಧಿಯನ್ನು ಪುನಃ ಬರೆಯುತ್ತದೆ. ಹೊಸ ವ್ಯವಸ್ಥೆಯಡಿಯಲ್ಲಿ, ಪಾಕಿಸ್ತಾನದ ಸೇನಾ ಮುಖ್ಯಸ್ಥರು (COAS) ಏಕಕಾಲದಲ್ಲಿ ರಕ್ಷಣಾ ಪಡೆಗಳ ಮುಖ್ಯಸ್ಥರಾಗಿಯೂ ಸೇವೆ ಸಲ್ಲಿಸುತ್ತಾರೆ, ಸೇನಾ ಮುಖ್ಯಸ್ಥರನ್ನು ಮೂರು ಸೇವೆಗಳ ಸಾಂವಿಧಾನಿಕವಾಗಿ ಗುರುತಿಸಲ್ಪಟ್ಟ ಮುಖ್ಯಸ್ಥರನ್ನಾಗಿ ಮಾಡುತ್ತಾರೆ – ಸೈನ್ಯ, ನೌಕಾಪಡೆ ಮತ್ತು ವಾಯುಪಡೆ, ಡಾನ್ ವರದಿ ಮಾಡಿದೆ. ದೇಶದ ರಾಷ್ಟ್ರಪತಿಗಳು…














