Subscribe to Updates
Get the latest creative news from FooBar about art, design and business.
Author: kannadanewsnow09
ಮಂಡ್ಯ: ಜಿಲ್ಲೆಯಲ್ಲಿ ಟ್ಯಾಂಕರ್ ಹಾಗೂ ಬೈಕ್ ನಡುವೆ ಡಿಕ್ಕಿ, ಸ್ಥಳದಲ್ಲೇ ಬೈಕ್ ಸವಾರ ಸಾವನ್ನಪ್ಪಿರುವಂತ ಘಟನೆ ನಡೆದಿದೆ. ಮಂಡ್ಯಸ ಮದ್ದೂರಿನ ಎಳೆನೀರು ಮಾರುಕಟ್ಟೆ ಬಳಿಯ ಬೆಂ-ಮೈ ಹೆದ್ದಾರಿಯಲ್ಲಿ ಹಿಂಬದಿಯಿಂದ ಹಾಲಿನ ಟ್ಯಾಂಕರ್ ಭೈಕ್ ಗೆ ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ ಕೆ.ಆರ್.ಪೇಟೆ ತಾಲೂಕಿನ ಗೊಲ್ಲರಕೊಪ್ಪಲು ಗ್ರಾಮದ ದೀಪಕ್ (21) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸೋಮನಹಳ್ಳಿ ಎಸ್.ಸಿ.ಎಂ.ಎಂ ಕಾಲೇಜು ಆವರಣದಲ್ಲಿ ನಡೆಯುತ್ತಿದ್ದ ಕ್ರೀಡೆಗೆ ತಂಗಿ ಬಿಡಲು ಬಂದಿದ್ದ ದೀಪಕ್. ತಂಗಿಯನ್ನು ಬಿಟ್ಟು ಮಂಡ್ಯ ಕಡೆ ಬೈಕ್ ಚಾಲಕ ದೀಪಕ್ ಹೊರಟಿದ್ದರು. ಎಳೆನೀರು ಮಾರುಕಟ್ಟೆ ಬಳಿ ಹೋಗುತ್ತಿದ್ದ ವೇಳೆ ದುರ್ಘಘಟನೆ ಸಂಭವಿಸಿದೆ. ಈ ವಿಷಯ ತಿಳಿದು ಸ್ಥಳಕ್ಕೆ ಪೊಲೀಸರ ಭೇಟಿ ಪರಿಶೀಲನೆ ನಡೆಸಿದರು. ಮೃತ ಚಾಲಕನ ಶವವನ್ನು ಮದ್ದೂರು ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ. ಮದ್ದೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವರದಿ: ಗಿರೀಶ್ ರಾಜ್, ಮಂಡ್ಯ https://kannadanewsnow.com/kannada/invitation-to-apply-for-opening-a-new-fair-price-shop/ https://kannadanewsnow.com/kannada/judge-shows-humanity-in-front-of-the-public-he-goes-to-the-elderly-man-and-gives-a-verdict-providing-relief-on-the-spot/
ಬೆಂಗಳೂರು: ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ವತಿಯಿಂದ ಕರ್ನಾಟಕ ಅಗತ್ಯ ವಸ್ತುಗಳ ಸಾರ್ವಜನಿಕ ವಿತರಣಾ ಪದ್ಧತಿ ನಿಯಂತ್ರಣದ ಆದೇಶದನ್ವಯ ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಹ ಸಂಘಗಳು ಹಾಗೂ ವ್ಯಕ್ತಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಬೆಂಗಳೂರು ನಗರ ಜಿಲ್ಲೆಯ ಯಲಹಂಕ ತಾಲ್ಲೂಕು ವ್ಯಾಪ್ತಿಯ ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಪ್ರಸ್ತಾಪಿಸಿರುವ ಪ್ರದೇಶವಾದ ಸಿಂಗಪುರ ಒಟ್ಟು ಪಡಿತರ ಚೀಟಿ- 843 ಗಳನ್ನು ಹೊಸ ನ್ಯಾಯಬೆಲೆ ಅಂಗಡಿಗಳಿಗೆ ನಿಯೋಜಿಸಲಾಗಿದೆ. ಹೊಸ ನ್ಯಾಯಬೆಲೆ ಅಂಗಡಿ ಪ್ರಾಧಿಕಾರ ಪಡೆಯಲು ತಾಲ್ಲೂಕು ಕೃಷಿ ಪ್ರಾಥಮಿಕ ಪತ್ತಿನ ಮಾರಾಟ ಸರ್ಕಾರ ಸಂಘ, ಪ್ರಾಥಮಿಕ ಕೃಷಿ ಸಹಕಾರ ಸಂಘ ಅಥವಾ ವ್ಯವಸಾಯೋತ್ಪನ್ನ ಸಹಕಾರ ಸಂಘ, ತೋಟಗಾರಿಕಾ ಉತ್ಪನ್ನಗಳ ಬಳಕೆದಾರರ ಸಹಕಾರ ಸಂಘ, ನೊಂದಾಯಿತ ಸಹಕಾರ ಸಂಘಗಳು, ನೊಂದಾಯಿತ ಪ್ರಾಥಮಿಕ ಬಳಕೆದಾರರ ಸಹಕಾರ ಸಂಘಗಳು, ಬೃಹತ್ ಪ್ರಮಾಣದ ಆದಿವಾಸಿ ವಿವಿದ್ದೋದ್ದೇಶ ಸಹಕಾರ ಸಂಘಗಳು, ನೊಂದಾಯಿತ ನೇಕಾರರ ಸಹಕಾರ ಸಂಘಗಳು, ನೊಂದಾಯಿತ ಮಹಿಳಾ ವಿವಿದೋದ್ದೇಶ ಸಹಕಾರ ಸಂಘಗಳು, ನೊಂದಾಯಿತ ವಿವಿದೋದ್ದೇಶ ಸಹಕಾರ…
ನವದೆಹಲಿ: ಜಾರಿ ನಿರ್ದೇಶನಾಲಯದಿಂದ ದಾಖಲಿಸಲಾದಂತ 53 ಪ್ರಕರಣದಲ್ಲಿ 50 ಕೇಸಲ್ಲಿ ಶಿಕ್ಷೆಯಾಗಿದೆ. ಇನ್ನೂ ಪಿಎಂಎಲ್ಎ ಪ್ರಕರಣಗಳ ತನಿಖೆ, ವಿಚಾರಣೆಗಳ ತ್ವರಿತಕ್ಕೆ ಇಡಿ ನಿರ್ದೇಶಕರು ಖಡಕ್ ಸೂಚನೆ ನೀಡಿದ್ದಾರೆ. ಪಿಎಂಎಲ್ಎ ತನಿಖೆಗಳು ಮತ್ತು ವಿಚಾರಣೆಗಳನ್ನು ತ್ವರಿತಗೊಳಿಸುವಂತೆ ಇಡಿ ನಿರ್ದೇಶಕರು ಕರೆ ನೀಡಿದ್ದಾರೆ. ಇಡಿ 53 ಪ್ರಕರಣಗಳಲ್ಲಿ 50 ಪ್ರಕರಣಗಳಲ್ಲಿ ಶಿಕ್ಷೆ ವಿಧಿಸಿದೆ, ಶೇಕಡಾ 94ಕ್ಕಿಂತ ಹೆಚ್ಚು ಶಿಕ್ಷೆಯ ಪ್ರಮಾಣದೊಂದಿಗೆ, ಇದು ಜಾಗತಿಕವಾಗಿ ಅತ್ಯಧಿಕವಾಗಿದೆ ಎಂದು ಗಮನಿಸಲಾಗಿದೆ. ₹34,000 ಕೋಟಿಗೂ ಹೆಚ್ಚು ಮೌಲ್ಯದ ಆಸ್ತಿಯನ್ನು ಹಿಂದಿರುಗಿಸಲಾಗಿದೆ ಎಂದು ಇಡಿ ತಿಳಿಸಿದೆ. https://twitter.com/dir_ed/status/1967578192514052210 https://kannadanewsnow.com/kannada/training-on-pest-management-and-value-addition-on-the-18th/ https://kannadanewsnow.com/kannada/judge-shows-humanity-in-front-of-the-public-he-goes-to-the-elderly-man-and-gives-a-verdict-providing-relief-on-the-spot/
ಚಿತ್ರದುರ್ಗ: ಹಿರಿಯೂರು ತಾಲ್ಲೂಕು ಬಬ್ಬೂರು ಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಇದೇ ಸೆ.18 ರಂದು ಬೆಳಿಗ್ಗೆ 10ಕ್ಕೆ ಚಿತ್ರದುರ್ಗ ಜಿಲ್ಲೆಯ ರೈತರಿಗೆ “ಅಣಬೆ ಬೇಸಾಯ ಹಾಗೂ ಮೌಲ್ಯವರ್ಧನೆ” ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ತರಬೇತಿ ಕಾರ್ಯಕ್ರಮದಲ್ಲಿ ಬಬ್ಬೂರು ಫಾರಂ ತೋಟಗಾರಿಕೆ ಮಹಾವಿದ್ಯಾಲಯ ಕೃಷಿ ಸೂಕ್ಷ್ಮಜೀವಿಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಪಕ ಗೊರಪ್ಪನವರ ಭರಮಪ್ಪ ಅವರು ಉತ್ತಮ ಅಣಬೆಯ ವಿವಿಧ ತಳಿಗಳ ಆಯ್ಕೆ, ಬೇಸಾಯ ಕ್ರಮ, ನಿರ್ವಹಣೆ ಬಗ್ಗೆ ವಿಷಯ ಮಂಡನೆ ಮತ್ತು ಅಣಬೆ ಬೆಳೆಯುವ ಪ್ರಾತ್ಯಕ್ಷಿಕೆ ಮಾಡಲಿದ್ದಾರೆ. ಹಿರಿಯೂರು ಕೃಷಿ ವಿಜ್ಞಾನ ಕೇಂದ್ರದ ಗೃಹ ವಿಜ್ಞಾನಿಗಳಾದ ಡಾ. ಸರಸ್ವತಿ ಜೆ ಎಂ ಅವರು ಅಣಬೆ ಮೌಲ್ಯವರ್ಧನೆ ಬಗ್ಗೆ ಉಪನ್ಯಾಸ ನೀಡಲಿದ್ದಾರೆ. ನಂತರ ಯಶಸ್ವಿಯಾಗಿ ಅಣಬೆ ಬೆಳೆದ ರೈತರು ತಮ್ಮ ಅಣಬೆ ಕೃಷಿಯ ಅನುಭವವನ್ನು ರೈತರೊಂದಿಗೆ ಹಂಚಿಕೊಳ್ಳುವರು. ಆದ ಪ್ರಯುಕ್ತ ಆಸಕ್ತ 50 ಜನ ರೈತಭಾಂದವರು ಈ ತರಬೇತಿಯಲ್ಲಿ ಭಾಗವಹಿಸಲು ಮೊಬೈಲ್ ಸಂಖ್ಯೆ 8277931058 ಗೆ ಕರೆಮಾಡಿ ತರಬೇತಿಯ ಸದುಪಯೋಗ ಪಡೆದುಕೊಳ್ಳಬೇಕು…
ದುಬೈ: ಏಷ್ಯಾ ಕಪ್ನಲ್ಲಿ ಭಾನುವಾರ ನಡೆದ ಏಕಪಕ್ಷೀಯ ಘರ್ಷಣೆಯ ನಂತರ ಪಾಕಿಸ್ತಾನವು ಹ್ಯಾಂಡ್ಶೇಕ್ ವಿವಾದದ ಬಗ್ಗೆ ಇನ್ನೂ ಅಸಮಾಧಾನ ವ್ಯಕ್ತಪಡಿಸಿದೆ. ಏಷ್ಯಾ ಕಪ್ನ ಉಳಿದ ಭಾಗಗಳಿಂದ ಮ್ಯಾಚ್ ರೆಫರಿ ಆಂಡಿ ಪೈಕ್ರಾಫ್ಟ್ ಅವರನ್ನು ತೆಗೆದುಹಾಕುವಂತೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಐಸಿಸಿಯನ್ನು ಕೇಳಿದೆ. ಈ ಮಧ್ಯೆ, ಈ ವಿಷಯದ ಬಗ್ಗೆ ಸಕಾಲಿಕ ಕ್ರಮ ಕೈಗೊಳ್ಳದ ಕಾರಣ ಮಂಡಳಿಯು ತನ್ನ ಉನ್ನತ ಅಧಿಕಾರಿ, ಅಂತರರಾಷ್ಟ್ರೀಯ ಕ್ರಿಕೆಟ್ ಕಾರ್ಯಾಚರಣೆಗಳ ನಿರ್ದೇಶಕ ಉಸ್ಮಾನ್ ವಾಹ್ಲಾ ಅವರನ್ನು ಅಮಾನತುಗೊಳಿಸಿದೆ ಎಂದು ವರದಿಯಾಗಿದೆ. ಪಾಕಿಸ್ತಾನ ಮಾಧ್ಯಮ ವರದಿಗಳ ಪ್ರಕಾರ, ಪಿಸಿಬಿ ಮುಖ್ಯಸ್ಥ ಮೊಹ್ಸಿನ್ ನಖ್ವಿ ಅವರು ಹ್ಯಾಂಡ್ಶೇಕ್ ವಿವಾದದ ಬಗ್ಗೆ ಕ್ರಮ ಕೈಗೊಳ್ಳಲು ವಿಫಲವಾದ ಕಾರಣ ಉಸ್ಮಾನ್ ವಾಹ್ಲಾ ವಿರುದ್ಧ ಶಿಸ್ತು ಕ್ರಮ ಕೈಗೊಂಡಿದ್ದಾರೆ. ಪಾಕಿಸ್ತಾನದ ನಾಯಕ ಸೂರ್ಯಕುಮಾರ್ ಯಾದವ್ ಪಂದ್ಯವನ್ನು ಸಿಕ್ಸರ್ನೊಂದಿಗೆ ಮುಗಿಸಿದರು ಮತ್ತು ಪಾಕಿಸ್ತಾನ ಆಟಗಾರರೊಂದಿಗೆ ಹ್ಯಾಂಡ್ಶೇಕ್ ಮಾಡದೆ ಶಿವಂ ದುಬೆ ಅವರೊಂದಿಗೆ ಹೊರನಡೆದರು. ಭಾರತೀಯ ಆಟಗಾರರು ಮತ್ತು ಸಹಾಯಕ ಸಿಬ್ಬಂದಿ ಸಹ ಅವರ ನಡುವೆ…
ಬೆಳಗಾವಿ: ರೈಲ್ವೆ ರಾಜ್ಯ ಸಚಿವರು ವಿ.ಸೋಮಣ್ಣ ಅವರು ಬೆಳಗಾವಿ ಮತ್ತು ಖಾನಾಪುರದಲ್ಲಿ ಎರಡು ರಸ್ತೆ ಕೆಳ ಸೇತುವೆಗಳು ಹಾಗೂ ಪ್ರಯಾಣಿಕರ ಸೌಲಭ್ಯಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಅಲ್ಲದೇ ಈ ರೈಲಿಗೆ ಹಸಿರು ನಿಶಾನೆ ತೋರಿದರು. ರೈಲ್ವೆ ಮತ್ತು ಜಲಶಕ್ತಿ ಇಲಾಖೆಯ ಕೇಂದ್ರ ರಾಜ್ಯ ಸಚಿವರಾದ ವಿ. ಸೋಮಣ್ಣ ಅವರು ಬೆಳಗಾವಿ ಮತ್ತು ಖಾನಾಪುರದಲ್ಲಿ ಎರಡು ಪ್ರಮುಖ ರಸ್ತೆ ಕೆಳ ಸೇತುವೆಗಳು ಹಾಗೂ ಖಾನಾಪುರ ರೈಲು ನಿಲ್ದಾಣದಲ್ಲಿ ಪ್ರಯಾಣಿಕರ ಸೌಲಭ್ಯಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಈ ಯೋಜನೆಗಳು ಈ ಪ್ರದೇಶಗಳ ಸಂಪರ್ಕ ಪ್ರಯಾಣದ ದಕ್ಷತೆ ಮತ್ತು ಪ್ರಯಾಣಿಕರ ಸೌಕರ್ಯವನ್ನು ಹೆಚ್ಚಿಸುವ ಗುರಿಯನ್ನು ಹೊಂದಿವೆ. ಇದೇ ಸಂದರ್ಭದಲ್ಲಿ, ಖಾನಾಪುರದಲ್ಲಿ ಹೆಚ್ಚುವರಿ ನಿಲುಗಡೆಗೆ ಅವಕಾಶ ಕಲ್ಪಿಸಿದ ಎಸ್ಎಸ್ಎಸ್ ಹುಬ್ಬಳ್ಳಿ – ದಾದರ್ ಸೆಂಟ್ರಲ್ ಎಕ್ಸ್ ಪ್ರೆಸ್ (17317) ರೈಲಿಗೆ ಅವರು ಹಸಿರು ನಿಶಾನೆ ತೋರಿದರು. ಅಂಗೋಲ್ ಗೇಟ್ (4ನೇ ಗೇಟ್) ನಲ್ಲಿರುವ ಎಲ್ಸಿ 380 ರಲ್ಲಿ, ರೂ. 26.05 ಕೋಟಿ ವೆಚ್ಚದಲ್ಲಿ ರಸ್ತೆ ಕೆಳ ಸೇತುವೆಯನ್ನು ನಿರ್ಮಿಸಲಾಗುತ್ತದೆ. ಹಾಗೆಯೇ,…
ಬಳ್ಳಾರಿ : ಜಿಲ್ಲೆಯಲ್ಲಿ ಪೌರರಕ್ಷಣಾ ದಳದ ಸ್ವಯಂ ಸೇವಕರಾಗಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಪೌರರಕ್ಷಣಾ ದಳದ ಉದ್ದೇಶ ಪ್ರಕೃತಿ ವಿಕೋಪ, ವಿಪತ್ತು ನಿರ್ವಹಣೆ ಮತ್ತು ಮಾನವ ನಿರ್ಮಿತ ವಿಕೋಪಗಳ ಸಮಯದಲ್ಲಿ ಸಾರ್ವಜನಿಕರ ಆಸ್ತಿ ಮತ್ತು ಪ್ರಾಣ ಕಾಪಾಡಲು ಪ್ರಮುಖ ಪಾತ್ರವಹಿಸುತ್ತಿದ್ದಾರೆ. ಇಂತಹ ಸಾಮಾಜಿಕ ಕಾರ್ಯವನ್ನು ಮಾಡಲು ಇಚ್ಛಿಸುವ ಬಳ್ಳಾರಿ ನಗರ ಮತ್ತು ಗ್ರಾಮೀಣ ಪ್ರದೇಶದ ಸಾರ್ವಜನಿಕರು ಮತ್ತು ಕಾಲೇಜು ವಿದ್ಯಾರ್ಥಿಗಳು ಸದಸ್ಯರಾಗುವ ಮೂಲಕ ಸೇವೆ ಸಲ್ಲಿಸಬಹುದಾಗಿದೆ. ಅರ್ಜಿಗಳನ್ನು ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರ ರಸ್ತೆಯ ದೇವರಾಜು ಅರಸು ಭವನ ಎದುರುಗಡೆಯ ಜಿಲ್ಲಾ ಪೌರರಕ್ಷಣಾ ಕಚೇರಿ ಅಥವಾ ಜಿಲ್ಲಾ ಗೃಹರಕ್ಷಕದಳ ಕಚೇರಿಯಲ್ಲಿ ಅಕ್ಟೋಬರ್ 04 ರವರೆಗೆ ಅರ್ಜಿ ಪಡೆಯಬಹುದಾಗಿದೆ. ಸೂಚನೆ: ಪೌರರಕ್ಷಣಾ ವಿಭಾಗದ ಸದಸ್ಯನಾಗಲು ಯಾವುದೇ ವಿದ್ಯಾರ್ಹತೆ ಇರುವುದಿಲ್ಲ. ಮಾಜಿ ಯೋಧರು ಮತ್ತು ನಿವೃತ್ತ ಸರ್ಕಾರಿ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಮುನ್ನಡೆಸಬಹುದು. ಈ ಸದಸ್ಯರು ಸಮಾಜ ಸೇವೆಯ ಭಾವನೆಯಿಂದ ಬರಬೇಕೆ ಹೊರತು ಅನ್ಯ ಭಾವನೆಗಳಿಂದ ಕೂಡಿರುವುದಿಲ್ಲ. ಸ್ವ-ಇಚ್ಛೆಯಿಂದ ಸ್ವಯಂ ಸೇವಕರಾಗಿ ಕಾರ್ಯ/ಕರ್ತವ್ಯ ನಿರ್ವಹಿಸಬೇಕು.…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಎಂದರೆ ಮತಾಂತರದ ರಾಯಭಾರಿ. ಯಾರೂ ಯೋಚನೆ ಮಾಡದಂತಹ ಜಾತಿಗಳನ್ನು ಅವರು ಸೃಷ್ಟಿಸಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ದೂರಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಂವಿಧಾನದಲ್ಲಿ ಇಲ್ಲದ ಜಾತಿಗಳನ್ನು ಸಿಎಂ ಸಿದ್ದರಾಮಯ್ಯ ಹುಟ್ಟುಹಾಕಿದ್ದಾರೆ. ಇಂತಹ ಜಾತಿ ಸಮೀಕ್ಷೆ ರದ್ದಾಗಲಿದೆ. ಈ ಸಮೀಕ್ಷೆ ಮೂಲಕ ಮತಾಂತರಕ್ಕೆ ಪ್ರೇರಣೆ ನೀಡಿ, ಹಿಂದೂಗಳನ್ನು ತುಳಿಯಲಾಗುತ್ತಿದೆ. ಏನೇ ಮಾಡಿದರೂ ಸಂವಿಧಾನದ ಪ್ರಕಾರ ಮಾಡಲಿ. ಮೀಸಲಾತಿಗೆ ಸಂಬಂಧಿಸಿದಂತೆ ಕೋರ್ಟ್ ಆದೇಶವಿದೆ. ಅದರ ಪ್ರಕಾರ ಕ್ರಮ ವಹಿಸಲಿ ಎಂದರು. ಸಿಎಂ ಸಿದ್ದರಾಮಯ್ಯ ಎಲ್ಲದರಲ್ಲೂ ಮುಸ್ಲಿಂ ಓಲೈಕೆ ಮಾಡುತ್ತಾರೆ. ಹಿಂದೂಗಳ ಮತ ಮಾತ್ರ ಬೇಕು. ಮತ ಸಿಕ್ಕ ನಂತರ ಹಿಂದೂ ಧರ್ಮದಲ್ಲಿ ಲೋಪವಿದೆ ಎಂದಿದ್ದಾರೆ. ಮುಸ್ಲಿಮರಲ್ಲಿ ಮಹಿಳೆಯರು ಮಸೀದಿಗೆ ಹೋಗುವಂತಿಲ್ಲ. ಇದು ಕೂಡ ತಪ್ಪೆಂದು ಅವರಿಗೆ ಅನ್ನಿಸಲಿಲ್ಲ. ಅಂದರೆ ಹಿಂದೂ ಧರ್ಮದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ. ಕೇವಲ ಹಿಂದೂ ಧರ್ಮವನ್ನು ಟಾರ್ಗೆಟ್ ಮಾಡುವ ಬದಲು ಬೇರೆ ಧರ್ಮಗಳ ಬಗ್ಗೆ ಕೂಡ ಮಾತಾಡಲಿ ಎಂದರು. ದಸರಾ ಹಬ್ಬವನ್ನು ನಾಡಹಬ್ಬ, ಹಿಂದೂಗಳ ಹಬ್ಬ ಎನ್ನುತ್ತಾರೆ.…
ಶಿವಮೊಗ್ಗ: ಜಿಲ್ಲೆಯಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಮಾರಕಾಸ್ತ್ರವನ್ನು ವ್ಯಕ್ತಿಯೊಬ್ಬರು ಪ್ರದರ್ಶಿಸಿದ್ದಾರೆ ಎಂಬುದಾಗಿ ಹೇಳಲಾಗುತ್ತಿದೆ. ಇದೀಗ ಇದು ವಿವಾದಕ್ಕೆ ಕಾರಣವಾಗಿದೆ. ಶಿವಮೊಗ್ಗ ನಗರದ ಅಮೀರ್ ಅಹ್ಮದ್ ವೃತ್ತದಲ್ಲಿ ಈ ಘಟನೆ ನಡೆದಿದೆ. ಈದ್ ಮಿಲಾದ್ ಮೆರವಣಿಗೆ ವೇಳೆ ಮಾರಕಾಸ್ತ್ರ ಪ್ರದರ್ಶಿಸಿದಂತೆ ನಿರ್ಬಂಧವಿದ್ದರೂ, ಈ ನಿರ್ಬಂಧ ಮೀರಿ ವ್ಯಕ್ತಿಯೊಬ್ಬ ಮಾರಕಾಸ್ತ್ರಗಳನ್ನು ಪ್ರದರ್ಶಿಸಿದ್ದಾರೆ ಎಂಬುದಾಗಿ ಹೇಳಲಾಗುತ್ತಿದೆ. ಆ ಬಗ್ಗೆ ಖಚಿತ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ. https://kannadanewsnow.com/kannada/important-information-for-the-officials-and-staff-of-the-states-government-pu-college-district-deputy-directors-office/ https://kannadanewsnow.com/kannada/judge-shows-humanity-in-front-of-the-public-he-goes-to-the-elderly-man-and-gives-a-verdict-providing-relief-on-the-spot/
ಬೆಂಗಳೂರು: 2025-26 ನೇ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ತಾತ್ಕಾಲಿಕವಾಗಿ ನೇಮಕವಾದ ಅತಿಥಿ ಶಿಕ್ಷಕರ ಗೌರವ ಸಂಭಾವನೆ ಪಾವತಿಸಲು ಅನುದಾನ ಬಿಡುಗಡೆ ಮಾಡಿ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ತುರ್ತು ಆದೇಶ ಹೊರಡಿಸಿದ್ದು, 2025-26 ನೇ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಎದುರಾಗಿ ವರ್ಷದ ಅಂತ್ಯದವರೆಗೆ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಉಲ್ಲೇಖ 2 ರ ಪತ್ರದಲ್ಲಿ ಅನುಮತಿ ನೀಡಲಾಗಿದೆ. 2025-26 ನೇ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ನೇಮಕವಾದ ಅತಿಥಿ ಶಿಕ್ಷಕರ ಗೌರವ ಸಂಭಾವನೆಯನ್ನು ಪಾವತಿಸಲು ಉಲ್ಲೇಖ (1) ರ ಪತ್ರದಲ್ಲಿ 2025-26 ನೇ ಸಾಲಿನ ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರಿಗೆ ಜೂನ್-2025 ರಿಂದ ಸೆಪ್ಟೆಂಬರ್-2025 ರವರೆಗೆ ರೂ. 20416.20 ಲಕ್ಷಗಳು ಸರ್ಕಾರಿ ಪ್ರೌಢಶಾಲಾ ಅತಿಥಿ ಶಿಕ್ಷಕರಿಗೆ ಜೂನ್-2025…









