Subscribe to Updates
Get the latest creative news from FooBar about art, design and business.
Author: ವಸಂತ ಬಿ ಈಶ್ವರಗೆರೆ
ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.
ಬೆಂಗಳೂರು : ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಕಳೆದ ಐದು ದಶಕಗಳಿಂದಲೂ ಪರಿಶುದ್ದ ರಾಜಕೀಯ ಜೀವನ ನಡೆಸಿಕೊಂಡು ಬರುತ್ತಿದ್ದಾರೆ. ನ್ಯಾಯಬದ್ದವಾಗಿ ಮಂಜೂರಾಗಿದ್ದ ಜಮೀನನ್ನು ಹಿಂದಿರುಗಿಸಿ ರಾಹುಲ್ ಖರ್ಗೆ ಮೇಲ್ಪಂಕ್ತಿ ಹಾಕಿದ್ದಾರೆ. ಬಿಜೆಪಿ ಹಾಗೂ ಆರ್ಎಸ್ಎಸ್ ನಾಯಕರು ಮಂಜೂರು ಮಾಡಿಸಿಕೊಂಡಿರುವ ಜಮೀನು/ನಿವೇಶನಗಳನ್ನು ಯಾವಾಗ ಹಿಂದಿರುಗಿಸುತ್ತೀರೀ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಭೋಸರಾಜು ಪ್ರಶ್ನಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನು ನೀಡಿರುವ ಅವರು, ಐದು ದಶಕಗಳಿಂದಲೂ ಪರಿಶುದ್ಧ ರಾಜಕೀಯ ಜೀವನ ನಡೆಸಿಕೊಂಡು ಬಂದಿರುವ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬದ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಿರುವುದು ಸರಿಯಲ್ಲ. ನಿರುದ್ಯೋಗಿಗಳಿಗೆ ತರಬೇತಿ ನೀಡಲು ಬಹುಕೌಶಲ ಅಭಿವೃದ್ಧಿ ಕೇಂದ್ರ ಸ್ಥಾಪಿಸಲು ನಿವೇಶನಕ್ಕೆ ಅರ್ಜಿ ಸಲ್ಲಿಸಲಾಗಿತ್ತು. ಇದಕ್ಕೆ ಕಾನೂನುಬದ್ದವಾಗಿ ನಿವೇಶನವೂ ಮಂಜೂರಾಗಿತ್ತು. ಬಿಜೆಪಿ ನಾಯಕರ ರಾಜಕೀಯ ಖಯಾಲಿಯ ಸುಳ್ಳು ಹಾಗೂ ಅಪಪ್ರಚಾರಕ್ಕೆ ಸಿಲುಕಬಾರದು ಎಂಬ ಕಾರಣಕ್ಕೆ ನ್ಯಾಯಬದ್ಧವಾಗಿ ಲಭ್ಯವಾಗಿದ್ದ ಜಮೀನನ್ನು ಹಿಂದಿರುಗಿಸಿ ರಾಹುಲ್ ಖರ್ಗೆ ಅವರು ಮೇಲ್ಪಂಕ್ತಿ ಹಾಕಿದ್ದಾರೆ. ಸಿದ್ಧಾರ್ಥ ವಿಹಾರ…
ಬೆಂಗಳೂರು : ಕರ್ನಾಟಕ ವಿಧಾನ ಪರಿಷತ್ ಅಪರ ಕಾರ್ಯದರ್ಶಿಗಳಾಗಿ ಕಾರ್ಯನಿರ್ವಹಿಸುತ್ತಿರುವ ಎಸ್.ನಿರ್ಮಲಾ ಅವರಿಗೆ ಹೊಸದಾಗಿ ಸೃಜನೆಯಾಗಿರುವ ಕಾರ್ಯದರ್ಶಿ-2ಹುದ್ದೆಗೆ ಬಡ್ತಿ ನೀಡಿ ಸರಕಾರ ಆದೇಶಿಸಿದೆ. ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದ (ಅಧಿಕಾರಿ ಮತ್ತು ನೌಕರರುಗಳ ನೇಮಕಾತಿ ಹಾಗೂ ಸೇವಾ ಷರತ್ತುಗಳು)ನಿಯಮಗಳು, 2021ರ ನಿಯಮ 6(i)ರ ಪ್ರಕಾರ ಮಾನ್ಯ ವಿಶೇಷ ಮಂಡಳಿಗೆ ಪ್ರದತ್ತವಾಗಿರುವ ಅಧಿಕಾರದ ರೀತ್ಯಾ ಹಾಗೂ ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದ (ಅಧಿಕಾರಿ ಮತ್ತು ನೌಕರರುಗಳ ನೇಮಕಾತಿ ಹಾಗೂ ಸೇವಾ ಷರತ್ತುಗಳು)ನಿಯಮಗಳು, 2024ರ (2ನೇ ತಿದ್ದುಪಡಿ) ಅನ್ವಯ ಅಪರ ಕಾರ್ಯದರ್ಶಿ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಸ್.ನಿರ್ಮಲಾ ಇವರನ್ನು ಹೊಸದಾಗಿ ಸೃಜನೆಯಾಗಿರುವ ಕಾರ್ಯದರ್ಶಿ-2 ಹುದ್ದೆಗೆ ಸ್ಥಾನಪನ್ನ ಬಡ್ತಿ ನೀಡಿ ನೇಮಕ ಮಾಡಲಾಗಿದೆ ಎಂದು ವಿಧಾನ ಪರಿಷತ್ ಕಾರ್ಯದರ್ಶಿ ಕೆ.ಆರ್.ಮಹಾಲಕ್ಷ್ಮೀ ಅವರು ತಿಳಿಸಿದ್ದಾರೆ. https://kannadanewsnow.com/kannada/good-news-for-job-seekers-kpsc-relaxes-3-year-age-limit-for-group-c-posts/ https://kannadanewsnow.com/kannada/chitradurga-man-commits-suicide-by-hanging-himself-after-wifes-death/
ಬೆಂಗಳೂರು: ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ ಎನ್ನುವಂತೆ ಕರ್ನಾಟಕ ಲೋಕಸೇವಾ ಆಯೋಗದಿಂದ ಗ್ರೂಪ್-ಸಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಎಲ್ಲಾ ಅಭ್ಯರ್ಥಿಗಳಿಗೆ ವಯೋಮಿತಿಯನ್ನು 3 ವರ್ಷ ಸಡಿಲಿಕೆ ಮಾಡಿ ಅಧಿಕೃತ ಆದೇಶ ಹೊರಡಿಸಲಾಗಿದೆ. ಈ ಕುರಿತು ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಡಾ.ರಾಕೇಶ್ ಕುಮಾರ್.ಕೆ ತಿದ್ದುಪಡಿ ಅಧಿಸೂಚನೆ ಹೊರಡಿಸಿದ್ದಾರೆ. ಆಯೋಗವು 2023-24ನೇ ಸಾಲಿನಲ್ಲಿ ಉಲ್ಲೇಖ(01)ರ ಅಧಿಸೂಚನೆಯಲ್ಲಿ ವಿವಿಧ ಇಲಾಖೆಗಳಲ್ಲಿನ ಗ್ರೂಪ್-ಸಿ ವೃಂದದ 60 (ಉಳಿಕೆ ಮೂಲ ವೃಂದದ) ಹುದ್ದೆಗಳಿಗೆ ಅಧಿಸೂಚನೆ ಜಾರಿ ಮಾಡಲಾಗಿರುತ್ತದೆ. ಸದರಿ ಅಧಿಸೂಚನೆಯಲ್ಲಿ ಗರಿಷ್ಠ ವಯೋಮಿತಿಯನ್ನು ಸಾಮಾನ್ಯ ಅರ್ಹತೆ- 35 ವರ್ಷಗಳು, ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ- 38 ವರ್ಷಗಳು ಮತ್ತು ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1- 40 ವರ್ಷಗಳು ಎಂದು ನಿಗದಿಪಡಿಸಲಾಗಿತ್ತು ಎಂದಿದ್ದಾರೆ. ಪ್ರಸ್ತುತ ಸರ್ಕಾರದ ಆದೇಶ ಸಂಖ್ಯೆ: ಸಿಆಸುಇ 166 ಸೆನ 2024, ದಿನಾಂಕ:10,09,2024ರಲ್ಲಿ, ಈ ಕೆಳಕಂಡಂತೆ ಆದೇಶ ಹೊರಡಿಸಲಾಗಿರುತ್ತದೆ. ರಾಜ್ಯ ಸಿವಿಲ್ ಸೇವೆಗಳಲ್ಲಿನ ವಿವಿಧ ಇಲಾಖೆಗಳ ಗ್ರೂಪ್ -ಸಿ ಮತ್ತು ಗ್ರೂಪ್-1 ಹುದ್ದೆಗಳಿಗೆ ನೇರ…
ನಾವು ಮುರುಗನ್ ಚಿತ್ರದ ಕೆಳಗೆ ಅಥವಾ ಮೇಲೆ “ಯಮಿರುಕ ಪಯಮನ್” ಪದಗಳನ್ನು ನೋಡಿದ್ದೇವೆ ಮತ್ತು ಓದಿದ್ದೇವೆ. ಆ ಮಾತಿಗೆ ತಕ್ಕಂತೆ ಮುರುಗನು ತನ್ನ ಭಕ್ತರನ್ನು ಕಾಪಾಡುತ್ತಿದ್ದಾನೆ. ಅದಕ್ಕಾಗಿಯೇ ಅನೇಕರು ಮುರುಗನನ್ನು ಪೂಜಿಸುತ್ತಾರೆ. ಇಂತಹ ಮುರುಗ ದೇವರಿಗೆ ಮಂತ್ರಗಳು ಹಲವು ಇದ್ದರೂ ಸಿದ್ಧರು ಅನುಗ್ರಹಿಸಿದ ಮಂತ್ರಗಳಿಗೆ ಹೆಚ್ಚಿನ ಮಹಿಮೆಯಿದೆ. ಆ ರೀತಿಯಲ್ಲಿ ನಾವು ಈ ಮಂತ್ರವನ್ನು ಮನಃಪೂರ್ವಕವಾಗಿ ಪಠಿಸಿದಾಗ ಮುರುಗನ ಕೃಪೆಯಿಂದ ಕಳೆದುಹೋದ ಎಲ್ಲವನ್ನೂ ಪಡೆಯಬಹುದು. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರು ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9686268564 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ…
ಬೆಂಗಳೂರು : “ಚುನಾವಣಾ ಆಯೋಗ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ದಿನಾಂಕ ಘೋಷಿಸಿದ್ದು, ಉಪಚುನಾವಣೆ ಸೇರಿದಂತೆ ಎಲ್ಲಾ ಚುನಾವಣೆಗೂ ಕಾಂಗ್ರೆಸ್ ಪಕ್ಷ ಸಜ್ಜಾಗಿದ್ದು, ಮೂರು ಕ್ಷೇತ್ರಗಳಲ್ಲೂ ನಾವು ಗೆದ್ದೇ ಗೆಲ್ಲುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಿಶ್ವಾಸ ವ್ಯಕ್ತಪಡಿಸಿದರು. ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯಿಸಿದರು. ಉಪಚುನಾವಣೆ ಘೋಷಣೆಯಾಗಿದ್ದು, ಪಕ್ಷದ ತಯಾರಿ ಹೇಗಿದೆ ಎಂದು ಕೇಳಿದಾಗ, “ಆಯೋಗ ಚುನಾವಣಾ ದಿನಾಂಕ ಘೋಷಣೆ ಮಾಡಿರುವುದನ್ನು ನಾನು ಸ್ವಾಗತಿಸುತ್ತೇನೆ. ಈ ಕ್ಷೇತ್ರಗಳಲ್ಲಿ ಶಾಸಕ ಸ್ಥಾನ ಖಾಲಿಯಾದಾಗಿನಿಂದಲೇ ನಮ್ಮ ತಯಾರಿ ಆರಂಭವಾಗಿದೆ. ನಮ್ಮ ಕೆಲಸ ನಾವು ಮಾಡುತ್ತಿದ್ದೇವೆ” ಎಂದು ತಿಳಿಸಿದರು. ಚನ್ನಪಟ್ಟಣ ಅಭ್ಯರ್ಥಿ ಆಯ್ಕೆ ಬಗ್ಗೆ ಕೇಳಿದಾಗ, “ಈ ಚುನಾವಣೆಗಳಲ್ಲಿ ನಾವೇ ಅಭ್ಯರ್ಥಿಗಳು” ಎಂದು ತಿಳಿಸಿದರು. ಚನ್ನಪಟ್ಟಣದಲ್ಲಿ ಯೋಗೇಶ್ವರ್ ಬಂಡಾಯ ಎದ್ದಿರುವ ಬಗ್ಗೆ ಕೇಳಿದಾಗ, “ಈ ವಿಚಾರವಾಗಿ ನಾನು ಮಾಧ್ಯಮಗಳ ಮಾತನ್ನು ಕೇಳುವುದಿಲ್ಲ. ಅವರ ಪಕ್ಷಗಳಿಂದ ಅಭ್ಯರ್ಥಿ ಅಂತಿಮ ಆಯ್ಕೆಯಾಗಲಿ. ಅವರು ಕೈಗೊಳ್ಳುವ ನಿರ್ಧಾರದ ಬಗ್ಗೆ ಅಧಿಕೃತವಾಗಿ ಪ್ರಕಟಿಸಲಿ, ಆಗ ನಾನು…
ಬೆಂಗಳೂರು: ನಗರದಲ್ಲಿ ಭಾರೀ ಮಳೆಯಾಗುತ್ತಿದೆ. ನಾಳೆ ಕೂಡ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಾಳೆ ಬೆಂಗಳೂರು ನಗರದ ಎಲ್ಲಾ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆಯನ್ನು ಘೋಷಿಸಿ ಡಿಸಿ ಆದೇಶಿಸಿದ್ದಾರೆ. ಈ ಕುರಿತಂತೆ ಆದೇಶ ಹೊರಡಿಸಿರುವಂತ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ಅವರು, ಬೆಂಗಳೂರು ನಗರ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ದಿನಾಂಕ:16.10.2024 ಮತ್ತು 17-10- 2024ರಂದು ಹವಾಮಾನ ಇಲಾಖೆಯ ಆರೆಂಜ್ ಅಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಿನಾಂಕ:16.10.2024 ರಂದು ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ, ಹಾಗೂ ಖಾಸಗಿ/ಅನುದಾನಿತ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆಯನ್ನು ಘೋಷಿಸಿ ಆದೇಶಿಸಿದ್ದಾರೆ. ಉಳಿದಂತೆ ಎಲ್ಲಾ ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್, ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ. ಕಾಲೇಜುಗಳಲ್ಲಿ ಪಾಠ ಪ್ರವಚನಗಳನ್ನು ನಡೆಸುವಾಗ ಈ ಕೆಳಕಂಡ ಅಂಶಗಳನ್ನು ಪರಿಗಣಿಸುವಂತೆ ಕಾಲೇಜುಗಳ ಮುಖ್ಯಸ್ಮರಿಗೆ ಹಾಗೂ ಸಂಬಂಧ ಪಟ್ಟವರಿಗೆ ಸಾಮಾನ್ಯ…
ನವದೆಹಲಿ: ಕರ್ನಾಟಕ ಸರ್ಕಾರ ರಾಜ್ಯದ ಗ್ರಾಮ ಪಂಚಾಯತಿಗಳಲ್ಲಿ ತಂತ್ರಜ್ಞಾನವನ್ನು ರೈತರ ಹತ್ತಿರಕ್ಕೆ ತೆಗೆದುಕೊಂಡು ಹೋಗುವಲ್ಲಿ ಸಫಲವಾಗಿದೆ. ಪಂಚಮಿತ್ರ 2.0 ಗ್ರಾಮ ಪಂಚಾಯತ್ಗಳ ಎಲ್ಲಾ ಪ್ರಮುಖ ಚಟುವಟಿಕೆಗಳನ್ನು ಸಕ್ರಿಯಗೊಳಿಸಲು ಮತ್ತು ಡಿಜಿಟಲೀಕರಣಗೊಳಿಸಲು ಪರಿಹಾರವಾಗಿದೆ. ಕರ್ನಾಟಕದಲ್ಲಿ ಸುಮಾರು 6000 ಗ್ರಾಮ ಪಂಚಾಯತಿಗಳಿದ್ದು ಆಯಾ ಗ್ರಾಮ ಪಂಚಾಯತಿ ಕೇಂದ್ರಗಳಲ್ಲಿ ರೈತರು ಆನ್ಲೈನ್ ಮೂಲಕ ದಾಖಲೆಗಳನ್ನು ಪಡೆದುಕೊಳ್ಳುವ ಅನುಕೂಲ ಕಲ್ಪಸಿಕೊಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ನವದೆಹಲಿಯ ಪ್ರಗತಿ ಮೈದಾನದಲ್ಲಿನ ಏಷ್ಯಾದ ಪ್ರಮುಖ ತಂತ್ರಜ್ಞಾನ ಪ್ರದರ್ಶನವಾದ ಇಂಡಿಯಾ ಮೊಬೈಲ್ ಕಾಂಗ್ರೆಸ್ (ಐಎಂಸಿ) ನಲ್ಲಿ ಮಂಗಳವಾರ ನಡೆದ ರಾಜ್ಯ ಐಟಿ ಮಂತ್ರಿಗಳ ದುಂಡುಮೇಜಿನ ಸಭೆಯಲ್ಲಿ ಐಟಿ-ಬಿಟಿ ವಲಯದ ಅಭಿವೃದ್ಧಿಗೆ ಅವಶ್ಯವಿರುವ ಯೋಜನೆಗಳ ಕುರಿತು ರಾಜ್ಯ ಐಟಿ ಮಂತ್ರಿಗಳು ಕೂಲಂಕಷವಾಗಿ ಚರ್ಚಿಸಿದರು. ಈ ಸಭೆಯಲ್ಲಿ ಭಾಗವಹಿಸಿದ್ದ ಕೇಂದ್ರ ಸಚಿವ ಜ್ಯೋತಿರಾಧಿತ್ಯ ಸಿಂದಿಯಾ ಅವರು ಮಾತನಾಡಿ, ಐಟಿ ವಲಯದ ಅಭಿವೃದ್ಧಿ ನಿಟ್ಟಿನಲ್ಲಿ ನೂತನ ಆವಿಷ್ಕಾರ ಹಾಗೂ ಪಾಲಿಸಿಗಳ ಜಾರಿಯಲ್ಲಿ ಆಯಾ…
ನವದೆಹಲಿ: ದೆಹಲಿಯಿಂದ ಚಿಕಾಗೋಗೆ ಪ್ರಯಾಣಿಸುತ್ತಿದ್ದ ಏರ್ ಇಂಡಿಯಾ ವಿಮಾನವನ್ನು ಮಂಗಳವಾರ ಬಾಂಬ್ ಬೆದರಿಕೆಯ ಹಿನ್ನೆಲೆಯಲ್ಲಿ ಕೆನಡಾದ ಇಕಾಲುಯಿಟ್ ವಿಮಾನ ನಿಲ್ದಾಣಕ್ಕೆ ತಿರುಗಿಸಲಾಗಿದೆ. ಸಂಭಾವ್ಯ ಬೆದರಿಕೆಯ ಬಗ್ಗೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ನಂತರ ಯುನೈಟೆಡ್ ಸ್ಟೇಟ್ಸ್ಗೆ ತೆರಳುತ್ತಿದ್ದ ವಿಮಾನವನ್ನು ತುರ್ತು ಲ್ಯಾಂಡಿಂಗ್ ಮಾಡಲು ಒತ್ತಾಯಿಸಲಾಯಿತು ಎಂದು ವಿಮಾನಯಾನ ಅಧಿಕಾರಿಯೊಬ್ಬರು ಘಟನೆಯನ್ನು ದೃಢಪಡಿಸಿದ್ದಾರೆ. “ಅಕ್ಟೋಬರ್ 15 ರಂದು ದೆಹಲಿಯಿಂದ ಚಿಕಾಗೋಗೆ ಕಾರ್ಯನಿರ್ವಹಿಸುತ್ತಿರುವ ಏರ್ ಇಂಡಿಯಾ ವಿಮಾನ ಎಐ 127 ಆನ್ಲೈನ್ನಲ್ಲಿ ಭದ್ರತಾ ಬೆದರಿಕೆಗೆ ಒಳಗಾಯಿತು ಮತ್ತು ಮುನ್ನೆಚ್ಚರಿಕೆ ಕ್ರಮವಾಗಿ ಕೆನಡಾದ ಇಕಾಲುಯಿಟ್ ವಿಮಾನ ನಿಲ್ದಾಣದಲ್ಲಿ ಇಳಿದಿದೆ” ಎಂದು ಏರ್ ಇಂಡಿಯಾ ಹೇಳಿಕೆಯಲ್ಲಿ ತಿಳಿಸಿದೆ. https://kannadanewsnow.com/kannada/air-india-express-flight-from-ayodhya-to-bengaluru-delayed-due-to-bomb-threat/ https://kannadanewsnow.com/kannada/kodimatha-sris-explosive-prediction-on-state-politics/
ನವದೆಹಲಿ: ಅಯೋಧ್ಯೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ಮಂಗಳವಾರ ವಿಳಂಬವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಯೋಧ್ಯೆ ಧಾಮದ ಮಹರ್ಷಿ ವಾಲ್ಮೀಕಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ದೇಶಕ ವಿನೋದ್ ಕುಮಾರ್ ಅವರು ವಿಮಾನ ನಿಲ್ದಾಣದಲ್ಲಿ ತುರ್ತು ಪರಿಸ್ಥಿತಿಯನ್ನು ದೃಢಪಡಿಸಿದರು, ವಿಮಾನವು ಜೈಪುರದಿಂದ ಬಂದಿದೆ ಎಂದು ಹೇಳಿದ್ದಾರೆ. ಪರಿಶೀಲಿಸದ ಸಾಮಾಜಿಕ ಮಾಧ್ಯಮ ಖಾತೆಯಿಂದ ಬೆದರಿಕೆ ಬಂದಿದೆ ಎಂದು ಏರ್ ಇಂಡಿಯಾ ಎಕ್ಸ್ಪ್ರೆಸ್ ಅಧಿಕಾರಿಗಳು ತಿಳಿಸಿದ್ದಾರೆ. “ಏರ್ ಇಂಡಿಯಾ ಎಕ್ಸ್ಪ್ರೆಸ್ ಮತ್ತು ಇತರ ಕೆಲವು ಆಪರೇಟರ್ಗಳಿಗೆ ಪರಿಶೀಲಿಸದ ಸಾಮಾಜಿಕ ಮಾಧ್ಯಮ ಹ್ಯಾಂಡಲ್ನಿಂದ ನಿರ್ದಿಷ್ಟ ಭದ್ರತಾ ಬೆದರಿಕೆ ಬಂದಿದೆ” ಎಂದು ಏರ್ ಇಂಡಿಯಾ ಎಕ್ಸ್ಪ್ರೆಸ್ ವಕ್ತಾರರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯೆಯಾಗಿ, ಸರ್ಕಾರ ನೇಮಿಸಿದ ಬಾಂಬ್ ಬೆದರಿಕೆ ಮೌಲ್ಯಮಾಪನ ಸಮಿತಿಯ ನಿರ್ದೇಶನದಂತೆ ಭದ್ರತಾ ಪ್ರೋಟೋಕಾಲ್ಗಳನ್ನು ತ್ವರಿತವಾಗಿ ಸಕ್ರಿಯಗೊಳಿಸಲಾಯಿತು. ವಿಮಾನವು ಸುರಕ್ಷಿತವಾಗಿ ಇಳಿಯಿತು ಮತ್ತು ಎಲ್ಲಾ ಕಡ್ಡಾಯ ಭದ್ರತಾ ಕಾರ್ಯವಿಧಾನಗಳನ್ನು ಅನುಸರಿಸಿ ವಿಮಾನವನ್ನು ಕಾರ್ಯಾಚರಣೆಗಾಗಿ ಬಿಡುಗಡೆ ಮಾಡಲಾಗುವುದು” ಎಂದು ವಕ್ತಾರರು…
ಚಿಕ್ಕಬಳ್ಳಾಪುರ: ಮುಡಾ ಹಗರಣ, ಹುಬ್ಬಳ್ಳಿಯ ಗಲಭೆ ಕೇಸ್ ಸೇರಿದಂತೆ ರಾಜ್ಯ ರಾಜಕಾರಣದಲ್ಲಿ ಹಲವು ರಾಜಕೀಯ ವಿದ್ಯಮಾನಗಳು ನಡೆಯುತ್ತಿವೆ. ಈ ನಡುವೆ ರಾಜ್ಯ ರಾಜಕಾರಣದ ಬಗ್ಗೆ ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯವನ್ನು ನುಡಿದಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕರ್ನಾಟಕ ರಾಜಕಾರಣದಲ್ಲಿ ದುರ್ಯೋಧನ ಗೆಲ್ಲುತ್ತಾನೆ. ಇನ್ನೂ ಸ್ವಲ್ಪ ದಿನ ರಾಜಕೀಯದಲ್ಲಿ ಏರುಪೇರು ನಡೆಯುತ್ತಾ ಇರಲಿವೆ ಎಂಬುದಾಗಿ ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಸ್ಪೋಟಕ ಭವಿಷ್ಯ ನುಡಿದಿದ್ದಾರೆ. ಇನ್ನೂ ಮುಖ್ಯಮಂತ್ರಿಯವರ ಪತ್ನಿ ರಂಗ ಪ್ರವೇಶ ಮಾಡಿಯಾಗಿದೆ. ಈ ಮಹಾಭಾರತದಲ್ಲಿ ಗೆಲ್ಲೋದು ರಾಜನೇ ಆಗಿದ್ದಾನೆ. ಆದೇ ಈಗ ದೈವಬಲ ಇಲ್ಲ. ಇನ್ನೂ ಸ್ವಲ್ಪದಿನ ರಾಜ್ಯ ರಾಜಕಾರಣದಲ್ಲಿ ಏರುಪೇರು ಮುಂದುವರೆಯಲಿದೆ ಎಂಬುದಾಗಿ ತಿಳಿಸಿದ್ದಾರೆ. https://kannadanewsnow.com/kannada/good-news-for-those-who-are-going-on-a-pilgrimage-to-karnataka-bharat-gaurav-south-constituencies-from-the-state-government/ https://kannadanewsnow.com/kannada/complete-ban-on-plastic-near-kalyani-holy-brahmakundike/













