Author: kannadanewsnow09

ಮೈಸೂರು:  ಮೈಸೂರು ರೈಲು ನಿಲ್ದಾಣದಲ್ಲಿ ಪ್ಲಾಟ್‌ಫಾರಂ ಸಂಖ್ಯೆ 2 ಮತ್ತು 3 ರ (ಎಫ್‌ಒಬಿ) ಮೆಟ್ಟಿಲುಗಳ ನವೀಕರಣ ಪ್ರಯಾಣಿಕರಿಗೆ ತಾತ್ಕಾಲಿಕ ಮಾರ್ಗ ಬದಲಾವಣೆ ಮಾಡಲಾಗಿದೆ. ಪ್ರಯಾಣಿಕರ ಸುರಕ್ಷತೆ ಮತ್ತು ಅನುಕೂಲತೆ ಹೆಚ್ಚಿಸಲು ನೈಋತ್ಯ ರೈಲ್ವೆ ಮೈಸೂರು ವಿಭಾಗವು ಮೈಸೂರು ರೈಲು ನಿಲ್ದಾಣದಲ್ಲಿ ಮೂಲಸೌಕರ್ಯಗಳ ನವೀಕರಣ ಕಾಮಗಾರಿಗಳನ್ನು ಕೈಗೊಂಡಿದ್ದು ಪ್ಲಾಟ್‌ಫಾರಂ ಸಂಖ್ಯೆ 2 ಮತ್ತು 3 ರಲ್ಲಿ ಇರುವ ಫುಟ್ ಓವರ್ ಬ್ರಿಜ್ (ಎಫ್‌ಒಬಿ) ಮೆಟ್ಟಿಲುಗಳು 60 ದಿನಗಳ ಕಾಲ ನವೀಕರಣ ಮತ್ತು ದುರಸ್ತಿ ಕೆಲಸಗಳಿಗೆ ಒಳಪಡಲಿವೆ. ಹಲವು ದಶಕಗಳ ಹಿಂದೆ ನಿರ್ಮಿಸಲಾಗಿದ್ದ ಈ ಮೆಟ್ಟಿಲುಗಳು ಹಳೆಯದಾಗಿರುವುದರಿಂದ, ಇಂದಿನ ಸುರಕ್ಷತಾ ಮಾನದಂಡಗಳನ್ನು ಪೂರೈಸಲು ಅವುಗಳನ್ನು ಬದಲಿಸಲಾಗುವುದು. ಈ ಅವಧಿಯಲ್ಲಿ ಪ್ರಯಾಣಿಕರ ಸುಲಭ ಸಂಚಾರಕ್ಕೆ ತಾತ್ಕಾಲಿಕ ಬದಲಿ ವ್ಯವಸ್ಥೆ ಮಾಡಲಾಗಿದೆ. ಪ್ರಯಾಣಿಕರಿಗೆ ಲಿಫ್ಟ್ ಮತ್ತು ಅಂಡರ್‌ಪಾಸ್ ಬಳಸುವಂತೆ ವಿನಂತಿಸಲಾಗಿದೆ. ಸ್ಪಷ್ಟ ಮಾರ್ಗಸೂಚಿ ಫಲಕಗಳು, ಘೋಷಣೆಗಳು ಹಾಗೂ ನಿಲ್ದಾಣ ಸಿಬ್ಬಂದಿಯಿಂದ ಸಹಾಯ ಲಭ್ಯವಿರುತ್ತದೆ. ಈ ಅವಧಿಯಲ್ಲಿ ಉಂಟಾಗುವ ತೊಂದರೆಗಾಗಿ ನೈಋತ್ಯ ರೈಲ್ವೆ ವಿಷಾದಿಸುತ್ತದೆ ಹಾಗೂ ಪ್ರಯಾಣಿಕರ…

Read More

ಬೆಂಗಳೂರು : ರಾಜ್ಯದಲ್ಲಿ ಅಪರಾಧಗಳ ಪ್ರಮಾಣ ಕಡಿಮೆ ಆಗಿರುವುದು ಸಮಾಧಾನದ ಸಂಗತಿಯಾದರೂ ಪೊಲೀಸರ ತನಿಖೆಯ ಗುಣಮಟ್ಟ ಕಡಿಮೆಯಾಗಿದ್ದು ಇದನ್ನು ಹೆಚ್ಚಿಸಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು. ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ಮತ್ತು ಪೊಲೀಸ್ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ ಈ ಸೂಚನೆಗಳನ್ನು ನೀಡಿದರು. ಬೀದರ್ ನಲ್ಲಿ ನಡೆದ ದರೋಡೆ ಪ್ರಕರಣದ ಆರೋಪಿ ಯಾರು ಎಂದು ಗೊತ್ತಾಗಿದ್ದರೂ 5 ತಿಂಗಳುಗಳಿಂದ ಆತನನ್ನು ಬಂಧಿಸದೇ ಇರುವುದನ್ನು ಉಲ್ಲೇಖಿಸಿ ಹೇಳಿದರು. ಬಿಡಿ ಬಿಡಿ ಪ್ರಕರಣಗಳಲ್ಲಿ ತನಿಖೆಯ ಗುಣಮಟ್ಟ ಹೆಚ್ಚಿದ್ದರೂ ಒಟ್ಟಾರೆಯಾಗಿ ಗಮನಿಸಿದಾಗ ತನಿಖೆಯ ಗುಣಮಟ್ಟ ಕುಸಿದಿರುವುದು ಸ್ಪಷ್ಟವಾಗುತ್ತಿದೆ ಎಂದು. ನಾನು 1983 ರಿಂದ ಶಾಸಕನಾಗಿ ಸಿಎಂ ಆಗಿದ್ದೀನಿ. ಬೆಂಗಳೂರಿನಲ್ಲಿ ನಡೆದ ಇಂಥಾ ಕಾಲ್ತುಳಿತ ಪ್ರಕರಣವನ್ನು ಹಿಂದೆಂದೂ ನಾನು ನೋಡಿರಲಿಲ್ಲ. ಗುಪ್ತಚರ ಇಲಾಖೆ ಇರುವುದು ಏಕೆ ? ಸರಿಯಾದ ಸಮಗ್ರ ಮಾಹಿತಿ ನೀಡಲಿಲ್ಲ. ಪರಿಣಾಮ 11 ಮಂದಿ ಮೃತಪಟ್ಟರು ಎಂದು ತಿಳಿಸಿದರು. ಕಾಲ್ತುಳಿತ ಘಟನೆ ನಡೆದ…

Read More

ಮುಂಬೈ : ಭಾರತದಲ್ಲಿ ಬ್ರೋಕರೇಜ್ ಸಂಸ್ಥೆಯಾಗಿ ಕಾರ್ಯಾಚರಣೆ ಪ್ರಾರಂಭಿಸಲು ಜಿಯೋ ಬ್ಲ್ಯಾಕ್‌ರಾಕ್ ಬ್ರೋಕಿಂಗ್ ಪ್ರೈವೇಟ್ ಲಿಮಿಟೆಡ್ (ಜಿಯೋಬ್ಲಾಕ್‌ರಾಕ್ ಬ್ರೋಕಿಂಗ್) ಸೆಬಿಯಿಂದ ಅನುಮೋದನೆ ಪಡೆದಿದೆ. ಅಂದಹಾಗೆ ಇದು ಜಿಯೋ ಬ್ಲ್ಯಾಕ್‌ರಾಕ್ ಇನ್ವೆಸ್ಟ್‌ಮೆಂಟ್ ಅಡ್ವೈಸರ್ಸ್ ಪ್ರೈವೇಟ್ ಲಿಮಿಟೆಡ್ (ಜಿಯೋಬ್ಲಾಕ್‌ರಾಕ್ ಇನ್ವೆಸ್ಟ್‌ಮೆಂಟ್ ಅಡ್ವೈಸರ್ಸ್)ನ ಸಂಪೂರ್ಣ ಸ್ವಾಮ್ಯದ ಅಂಗಸಂಸ್ಥೆ ಆಗಿದೆ. ಕೈಗೆಟುಕುವ, ಪಾರದರ್ಶಕ, ಹಾಗೂ ತಂತ್ರಜ್ಞಾನ ಚಾಲಿತ ಅನುಷ್ಠಾನ ಸಾಮರ್ಥ್ಯ ಇರುವಂಥದ್ದನ್ನು ಭಾರತೀಯ ಹೂಡಿಕೆದಾರರಿಗೆ ತರಬೇಕು ಎಂಬ ಗುರಿಯನ್ನು ಇರಿಸಿಕೊಂಡಿದೆ. ಜಿಯೋ ಬ್ಲ್ಯಾಕ್‌ರಾಕ್ ಇನ್ವೆಸ್ಟ್‌ಮೆಂಟ್ ಅಡ್ವೈಸರ್ಸ್ ಎಂಬುದು ಜಿಯೋ ಫೈನಾನ್ಷಿಯಲ್ ಸರ್ವೀಸಸ್ ಲಿಮಿಟೆಡ್ ಹಾಗೂ ಬ್ಲ್ಯಾಕ್‌ರಾಕ್ ಇಂಕ್ ಮಧ್ಯದ 50:50 ಜಂಟಿ ಉದ್ಯಮ. ಜಿಯೋ ಬ್ಲ್ಯಾಕ್‌ರಾಕ್ ಅಸೆಟ್ ಮ್ಯಾನೇಜ್‌ಮೆಂಟ್ ಪ್ರೈವೇಟ್ ಲಿಮಿಟೆಡ್ ಮತ್ತು ಜಿಯೋಬ್ಲಾಕ್‌ರಾಕ್ ಇನ್ವೆಸ್ಟ್‌ಮೆಂಟ್ ಅಡ್ವೈಸರ್ಸ್ ಕಾರ್ಯಾಚರಣೆ ಪ್ರಾರಂಭಿಸಲು ಇತ್ತೀಚೆಗೆ ಪಡೆದ ನಿಯಂತ್ರಕ ಅನುಮೋದನೆ ಜೊತೆಗೆ, ಬ್ರೋಕಿಂಗ್ ಪರವಾನಗಿಯನ್ನು ಪಡೆಯುವುದರಿಂದ ಜಿಯೋಬ್ಲಾಕ್‌ರಾಕ್ ಜಂಟಿ ಉದ್ಯಮವು ಭಾರತದಲ್ಲಿ ಸಮಗ್ರ ಹೂಡಿಕೆ ಪರಿಹಾರಗಳನ್ನು ನೀಡಲು ಸಾಧ್ಯವಾಗುತ್ತದೆ. ಜಿಯೋಬ್ಲ್ಯಾಕ್‌ರಾಕ್ ಇನ್ವೆಸ್ಟ್‌ಮೆಂಟ್ ಅಡ್ವೈಸರ್ಸ್ ಪ್ರೈವೇಟ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಐವರು ಸದಸ್ಯರನ್ನು ನೇಮಕ ಮಾಡಿ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. ಅದರಲ್ಲಿ ಮೈಸೂರಿನ ವಕೀಲ ಶಿವಣ್ಣಗೌಡ, ಧಾರವಾಡದ ನಿವೃತ್ತ ಪ್ರಾಂಶುಪಾಲ ಡಾ.ಸಿಎಂ ಕುಂದಗೋಳ ಅವರನ್ನು ಸದಸ್ಯರನ್ನಾಗಿ ನೇಮಿಸಲಾಗಿದೆ ಎಂದಿದ್ದಾರೆ. ಇನ್ನೂ ಕಲಬುರ್ಗಿಯ ವಕೀಲ ಚಂದ್ರಪ್ಪ, ಬೆಂಗಳೂರು ದಕ್ಷಿಣ ಜಿಲ್ಲೆಯ ನಿವೃತ್ತ ಐಎಫ್ಎಸ್ ಅಧಿಕಾರಿ ಡಾ.ಜಿಎನ್ ಶ್ರೀಕಂಠಯ್ಯ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿಭಾ ಕುಲಾಯಿ ಅವರನ್ನು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯರುಗಳನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಪದಧಾರಣ ಮಾಡಿದ ದಿನಾಂಕದಿಂದ ಮೂರು ವರ್ಷಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ನೇಮಿಸಿ ಆದೇಶಿಸಿದ್ದಾರೆ. https://kannadanewsnow.com/kannada/shock-for-the-rural-population-of-the-state-installation-of-smart-meters-mandatory-from-july-1/ https://kannadanewsnow.com/kannada/new-stadium-construction-in-bangalore-with-a-capacity-of-60000-spectators-deputy-chief-minister-d-k-shivakumar/

Read More

ಬೆಂಗಳೂರು: ನಾಡಪ್ರಭು ಕೆಂಪೇಗೌಡರ 516ನೇ ಜಯಂತ್ಯುತ್ಸವದ ಅಂಗವಾಗಿ ಚಿಲುಮೆ ರವಿಕುಮಾರ್ ಪ್ರತಿಷ್ಠಾನದ ವತಿಯಿಂದ ಹಮ್ಮಿಕೊಂಡಿದ್ದ ಮೂರು ದಿನಗಳ ಕಾರ್ಯಕ್ರಮ ಗುರುವಾರ ಸಂಪನ್ನಗೊಂಡಿತು. ಬೆಂಗಳೂರು ನಿರ್ಮಾಣಕ್ಕೆ ಕೆಂಪೇಗೌಡರು ಬುನಾದಿ ಹಾಕಿದ ಸ್ಥಳವಾದ ಅವಿನ್ಯೂ ರಸ್ತೆಯ ದೊಡ್ಡಪೇಟೆ ವೃತ್ತದಲ್ಲಿ ಇಂದು ಬೆಳಿಗ್ಗೆ ನಡೆದ ಕಾರ್ಯಕ್ರಮದಲ್ಲಿ, ಕೆಂಪೇಗೌಡರ ವೇಷಭೂಷಣ ಧರಿಸಿ ಕುದುರೆ ಏರಿ ಸೇನೆಯೊಂದಿಗೆ ಆಗಮಿಸುವ ದೃಶ್ಯವನ್ನು ಮರುಸೃಷ್ಟಿಸಲಾಗಿತ್ತು. ನಗರದ ನಿರ್ಮಾಣದ ಬಗ್ಗೆ ಕೆಂಪೇಗೌಡರು ಹೊಂದಿದ್ದ ಪರಿಕಲ್ಪನೆ ಆಧರಿಸಿ ಅಭಿನಯ ಪ್ರಸ್ತುತ ಪಡಿಸಲಾಯಿತು.. ಡೊಳ್ಳು ಕುಣಿತ, ನಗಾರಿ ವಿದ್ಯಾ, ತಾಳ ಅರೇವಾದ್ಯ, ಪೂಜಾ ಕುಣಿತ, ಕಹಳೆ ವಾದ್ಯಗಳು ಆಕರ್ಷಿಸಿದವು. ರಾಜಾಜಿನಗರದ ಇಎಸ್ಐ ಆಸ್ಪತ್ರೆಯಲ್ಲಿ ಹೊರರೋಗಿಗಳಿಗೆ ಹಣ್ಣುಹಂಪಲು, ಬ್ರೆಡ್, ಬಿಸ್ಕೆಟ್ ವಿತರಿಸಲಾಯಿತು. ಮಾಗಡಿ ಕೆಂಪಾಪುರದಲ್ಲಿಅಲಂಕೃತ ನಾಡಪ್ರಭು ಸಮಾಧಿ ಬಳಿ ಸಂಜೆ 165 ದೀಪಗಳನ್ನು ಬೆಳಗಿಸಲಾಯಿತು. ಇದೇ ವೇಳೆ ನೆರೆದವರು ಕೆಂಪೇಗೌಡರ ಮೌಲ್ಯಗಳನ್ನು ಎತ್ತಿಹಿಡಿಯುವ ಪ್ರತಿಜ್ಞಾವಿಧಿ ಸ್ವೀಕರಿಸಿದರು. ಜಯಂತ್ಯುತ್ಸವ ಪ್ರಯುಕ್ತ ಮಂಗಳವಾರ ಮಾಗಡಿ ಕೆಂಪಾಪುರದಲ್ಲಿ ‘ನಾಡಪ್ರಭು ಕೆಂಪೇಗೌಡ ಸಮಾಧಿ ಪರಿಸರ ಶುದ್ಧಿ ಅಭಿಯಾನ’ ಹಮ್ಮಿಕೊಳ್ಳಲಾಗಿತ್ತು. ಬುಧವಾರ ಕೆಂಪೇಗೌಡ ಅಂತಾರಾಷ್ಟ್ರೀಯ…

Read More

ಬೆಂಗಳೂರು : “ಹುಟ್ಟಿದಾಗ ಭೂಮಿ ಮೇಲಿರುತ್ತೇವೆ. ಸತ್ತಾಗ ಭೂಮಿ ಕೆಳಗಿರುತ್ತೇವೆ. ಆದರೆ ನಮ್ಮ ಸಾಧನೆಗಳು ಮೇಲಿರುತ್ತವೆ. ಅದೇ ರೀತಿ ಕೆಂಪೇಗೌಡರ ಸಾಧನೆಗಳು ಶಾಶ್ವತ. ಕೆಂಪೇಗೌಡರು ಹುಟ್ಟಿದ್ದು ಒಕ್ಕಲಿಗರಾಗಿ ಆದರೆ ಬದುಕು ನಡೆಸಿದ್ದು, ಸಮಾಜಕ್ಕೆ ಸಂದೇಶ ನೀಡಿದ್ದು ವಿಶ್ವಮಾನವರಾಗಿ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಬಾಬು ಜಗಜೀವನ್ ರಾಮ್ ಭವನದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ನಾಡಪ್ರಭು ಕೆಂಪೇಗೌಡರ 516ನೇ ಜಯಂತಿಯ ಅಂಗವಾಗಿ ನಡೆದ ನೂತನ ʼಕೆಂಪೇಗೌಡ ಭವನʼ ಭೂಮಿಪೂಜೆ ಹಾಗೂ ಕೆಂಪೇಗೌಡ ಅಂತಾರಾಷ್ಟ್ರೀಯ ಪ್ರಶಸ್ತಿ ವಿತರಣೆ ಕಾರ್ಯಕ್ರಮದಲ್ಲಿ ಶಿವಕುಮಾರ್ ಅವರು ಮಾತನಾಡಿದರು. “ವಿಶ್ವದೆಲ್ಲೆಡೆ ಬೆಂಗಳೂರಿನ ಕೀರ್ತಿ ಹರಡಿದೆ. ಈ ನಗರದ ಅಭಿವೃದ್ಧಿಗೆ ಕೆಂಪೇಗೌಡರೇ ಸ್ಫೂರ್ತಿ ಎಂಬುದನ್ನು ನಾವು ಮರೆಯಬಾರದು. 500 ವರ್ಷಗಳ ಹಿಂದೆಯೇ ಮಾದರಿ ಆಡಳಿತಕ್ಕೆ ಅಡಿಪಾಯ ಹಾಕಿದವರು. ಎಲ್ಲಾ ಜಾತಿ, ಧರ್ಮಗಳಿಗೆ ಅವಕಾಶ ನೀಡಿ ಸಮಾಜಕ್ಕೆ ಸಂದೇಶ ನೀಡಿದವರು” ಎಂದು ತಿಳಿಸಿದರು. “ನಮ್ಮ ಸಮುದಾಯದವರಿಗೆ ಒಂದು ಸಂದೇಶ ನೀಡಲು ಬಯಸುತ್ತೇನೆ. ನಾವುಗಳು ಯಾರೂ ಸಹ ಇಂತಹದ್ದೇ ಜಾತಿಯಲ್ಲಿ ಹುಟ್ಟಬೇಕು…

Read More

ಬೆಂಗಳೂರು: ನಗರದಲ್ಲಿ ಕಸದ ಮಾಫಿಯಾವನ್ನು ತಡೆಗಟ್ಟಲು ಪ್ರಯತ್ನ ಮಾಡಲಾಗುತ್ತಿದೆ. ನಗರದಲ್ಲಿ ಏನೂ ಕೊರತೆಯಾಗದಂತೆ ಯೋಜನೆ ರೂಪಿಸಲಾಗುತ್ತಿದೆ. 60 ಸಾವಿರ ಪ್ರೇಕ್ಷಕರು ಕುಳಿತುಕೊಳ್ಳುವಂತಹ ನೂತನ ಸ್ಟೇಡಿಯಂ ನಿರ್ಮಾಣ ಮಾಡಲಾಗುವುದು ಇದಕ್ಕಾಗಿ 50 ಎಕರೆ ಜಾಗ ಗುರುತಿಸಲಾಗಿದೆ. ಕಾವೇರಿ 5ನೇ ಹಂತದ ಯೋಜನೆ ಪೂರ್ಣಗೊಳಿಸಿ 110 ಹಳ್ಳಿಗಳಿಗೆ ನೀರು ನೀಡುತ್ತಿದ್ದೇವೆ. 6ನೇ ಹಂತದ ಕಾವೇರಿ ಕುಡಿಯುವ ನೀರಿನ ಯೋಜನೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಬೆಂಗಳೂರಿನ ಅಭಿವೃದ್ಧಿಗೆ ಬೇಕಾದಷ್ಟು ಶ್ರಮ ಪಡುತ್ತಿದ್ದೇವೆ. ಸಿಕ್ಕಿರುವ ಅವಕಾಶದಲ್ಲಿ ಸಾಕ್ಷಿಗುಡ್ಡೆ ನಿರ್ಮಾಣ ಮಾಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ಬಾಬು ಜಗಜೀವನ್ ರಾಮ್ ಭವನದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ನಾಡಪ್ರಭು ಕೆಂಪೇಗೌಡರ 516ನೇ ಜಯಂತಿಯ ಅಂಗವಾಗಿ ನಡೆದ ನೂತನ ʼಕೆಂಪೇಗೌಡ ಭವನʼ ಭೂಮಿಪೂಜೆ ಹಾಗೂ ಕೆಂಪೇಗೌಡ ಅಂತಾರಾಷ್ಟ್ರೀಯ ಪ್ರಶಸ್ತಿ ವಿತರಣೆ ಕಾರ್ಯಕ್ರಮದಲ್ಲಿ ಶಿವಕುಮಾರ್ ಅವರು ಮಾತನಾಡಿದರು. “ನಾವು ಮೂರು ʼಕೆʼಗಳನ್ನು ಮರೆಯಬಾರದು ಬೆಂಗಳೂರು ಕಟ್ಟಿದ ಕೆಂಪೇಗೌಡರು, ವಿಧಾನಸೌಧ ಕಟ್ಟಿದ ಕೆಂಗಲ್ ಹನುಮಂತಯ್ಯ ಅವರು, ವಿಕಾಸ ಸೌಧ ಕಟ್ಟಿದ ಎಸ್.ಎಂ.ಕೃಷ್ಣ ಅವರು.…

Read More

ನಮ್ಮ ಪೂರ್ವಜರ ಕಾಲದಲ್ಲಿ ಅನೇಕ ಮಹಿಳೆಯರು ದಪ್ಪ, ಉದ್ದ, ಕಪ್ಪು ಕೂದಲನ್ನು ಹೊಂದಿದ್ದರು. ಆಗ ಪುರುಷರು ಸಹ ಉದ್ದ ಕೂದಲು ಬೆಳೆಸುತ್ತಿದ್ದರು. ಆದರೆ ಈಗ ನಮ್ಮ ಕೂದಲು ಕಡಿಮೆ ದಟ್ಟವಾಗಿದೆ, ಚಿಕ್ಕದಾಗಿದೆ ಮತ್ತು ಬೂದು ಬಣ್ಣಕ್ಕೆ ತಿರುಗುವ ಸಾಧ್ಯತೆ ಹೆಚ್ಚು. ಈ ಬ್ಯೂಟಿ ಟಿಪ್ ವಿಭಾಗದಲ್ಲಿ, ಇದೆಲ್ಲವನ್ನೂ ತೆಗೆದುಹಾಕಲು ಮತ್ತು ನಿಮ್ಮ ಕೂದಲು ನೈಸರ್ಗಿಕವಾಗಿ ದಪ್ಪವಾಗಿ ಬೆಳೆಯಲು ಬಳಸಬಹುದಾದ ಎಣ್ಣೆಯನ್ನು ನಾವು ನೋಡಲಿದ್ದೇವೆ . ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ,…

Read More

ಬೆಂಗಳೂರು: ಗೃಹ ಸಚಿವರಾದ ಡಾ. ಜಿ.ಪರಮೇಶ್ವರ ಅವರು ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದರು. ಅವರ ಭಾಷಣದ ಪ್ರಮುಖ ಹೈಲೈಟ್ಸ್ ಮುಂದಿದೆ ಓದಿ. ಸರ್ಕಾರಕ್ಕೆ ಪೊಲೀಸ್ ಇಲಾಖೆ ಬಹಳ ಮುಖ್ಯ. ಕಾನೂನು ಸುವ್ಯವಸ್ಥೆ ಕಾಪಾಡುವ ಜವಾಬ್ದಾರಿ ಸರಿಯಾಗಿ ಮಾಡದೆ ಹೋದರೆ, ಎಂತಹ ಸಮಾಜ ಆಗುತ್ತದೆ ಎಂಬುದರ ಬಗ್ಗೆಯೂ ಯೋಚಿಸಬೇಕು. ಎಲ್ಲ‌ ಇಲಾಖೆಗಳಿಗಿಂತಲೂ ಬಹಳ ದೊಡ್ಡ ಜವಾಬ್ದಾರಿ ಪೊಲೀಸ್ ಇಲಾಖೆ ಮೇಲಿದೆ. ಇದಙದು ಅರಿತುಕೊಳ್ಳಬೇಕಿದೆ ಇತ್ತೀಚೆಗೆ ಖಾಸಗಿ ಸಂಸ್ಥೆಯೊಂದರ ಸಮೀಕ್ಷೆ ವರದಿ ಪ್ರಕಾರ, ನ್ಯಾಯ ಒದಗಿಸುವುದರಲ್ಲಿ ಕರ್ನಾಟಕ‌ ಪೊಲೀಸ್ ಮೊದಲ ಸ್ಥಾನದಲ್ಲಿದೆ. ಇದು ಸಂತೋಷದ ವಿಚಾರ. ಆದರೆ, ಸಮೀಕ್ಷೆ ವರದಿಯಿಂದ ನಮ್ಮ ಬೆನ್ನು ನಾವೇ ತಟ್ಟಿಕೊಂಡು ಸಮಾದಾನಪಟ್ಟುಕೊಂಡು ಸುಮ್ಮನಿರಲು ಆಗುವುದಿಲ್ಲ. ಮತ್ತಷ್ಟು ಪರಿಣಾಮಕಾರಿಯಾಗಿ ಕೆಲಸ ಮಾಡಬೇಕಾದ ಜವಾಬ್ದಾರಿ ಪೊಲೀಸ್ ಇಲಾಖೆಯ ಮೇಲಿದೆ‌. ಉಡುಪಿ ಜಿಲ್ಲಾ ಪ್ರವಾಸದ ವೇಳೆ ಕೋಟ ಠಾಣೆಗೆ ಭೇಟಿ ನೀಡಿದ್ದೆ. ರಿಜಿಸ್ಟರ್ ಪರಿಶೀಲಿಸಿ ಠಾಣೆಗೆ ಭೇಟಿ ನೀಡಿದ ಇಬ್ಬರಿಗೆ ಕರೆ ಮಾಡಿ ಮಾತನಾಡಿದೆ. ಪೊಲೀಸರು ಸರಿಯಾಗಿ…

Read More

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಪೀಣ್ಯ ವಿಭಾಗದ 66/11ಕೆವಿ ನೆಲಗೆದರನಹಳ್ಳಿ, 66/11ಕೆವಿ ಕಟ್ಟಿಗೆಹಳ್ಳಿ, 220/66/11 ಕೆವಿ ಎಸ್ ಆರ್ ಎಸ್ ಪೀಣ್ಯ ಉಪಕೇಂದ್ರ ಮತ್ತು 66/11ಕೆ.ವಿ ‘ಎ’ ಸ್ಟೇಷನ್ ವ್ಯಾಪ್ತಿಯಲ್ಲಿ ವ್ಯಾಪ್ತಿಯಲ್ಲಿ ದಿನಾಂಕ 29.06.2025 (ಭಾನುವಾರ) ರಂದು ಬೆಳಗ್ಗೆ10:00 ಯಿಂದ ಸಂಜೆ 05:30 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಭಾನುವಾರದಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಪೀಣ್ಯ ವಿಭಾಗದ ಕೆಂಪಯ್ಯ ಗಾರ್ಡೆನ್, ಏ ಟೈಪ್ ಶೆಡ್ ತಿಗಳರಪಾಳ್ಯ ಮೆನ್ ರೋಡ್, ಪರ್ಲ್ ರೋಡ್, ಮಾರುತಿ ಇಂಡಸ್ಟ್ರಿಯಲ್ ಎಸ್ಟೇಟ್, ನೆಲಗೆದರನಹಳ್ಳಿ, ಹೆಚ್ ಎಮ್. ಟಿ ಲೇಔಟ್, ಶಿವಪುರ, ಗೃಹಲಕ್ಷ್ಮಿ ಲೇಔಟ್, ಶಿವಪುರ ಬೆಲಮಾರ್ ಲೇಔಟ್, ವಿನಾಯಕನಗರ, 8ನೇ ಮಿಲಿ ರೋಡ್, ಜಾಲಹಳ್ಳಿ ಕ್ರಾಸ್, ಶೋಭಾ ಅಪಾರ್ಟ್ ಮೆಂಟ್, ಅಮರಾವತಿ ಲೇಔಟ್, ಕೆ ಏ ಪಿಎಲ್, ಕರ್ನಾಟಕ ಪ್ರೈ ಲಿಮಿಟೆಡ್, ರುಕ್ಮಿಣಿನಗರ, ಪೀಣ್ಯ 10ನೇ ಮುಖ್ಯ ರಸ್ತೆ, 11ನೇ ಮುಖ್ಯರಸ್ತೆ, ಉ ಡುಪಿ ಹೋಟೆಲ್, ಐಆರ್ ಪಾಲಿಟೆಕ್ನಿಕ್ ರಸ್ತೆ,…

Read More