Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಬೆಂಗಳೂರು: ಮಂಗನ ಕಾಯಿಲೆ (ಕೆಎಫ್‌ಡಿ) ಲಸಿಕೆ ಕುರಿತಂತೆ ಮೊದಲ ಹಂತದ ಪ್ರಯೋಗವು ಭರವಸೆ ಮೂಡಿಸಿದ್ದು, ಕಾಲಮಿತಿಯೊಳಗೆ ಲಸಿಕೆ ಲಭ್ಯತೆ ಪ್ರಯತ್ನಗಳು ನಡೆದಿದೆ. ಲಸಿಕೆಯ ಎರಡನೇ ಹಂತವನ್ನು ಶೀಘ್ರದಲ್ಲಿ ಪ್ರಾರಂಭಿಸಲಾಗುವುದು. 2025ರ ಏಪ್ರಿಲ್ ತಿಂಗಳಲ್ಲಿ ಲಸಿಕೆಯ ಮಾನವ ಪ್ರಯೋಗಗಳನ್ನು ನಡೆಸಲು ಯೋಜಿಸಲಾಗಿದ್ದು, 2026ರಲ್ಲಿ ಲಸಿಕೆ ಬಳಕೆಗೆ ಲಭ್ಯವಿರಲಿದೆ ಎಂದು ಆರೋಗ್ಯ ಸಚಿವರಾದ ದಿನೇಶ್‌ ಗುಂಡೂರಾವ್‌ ಅವರು ತಿಳಿಸಿದ್ದಾರೆ. ಕೆಎಫ್.ಡಿ ಲಸಿಕೆ ಕುರಿತಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ದೆಹಲಿಯಲ್ಲಿ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ನಿರ್ದೇಶಕರನ್ನ ಭೇಟಿ ಮಾಡಿ ಚೆರ್ಚೆ ನಡೆಸಿದ್ದಾರೆ. ಆರೋಗ್ಯ ಇಲಾಖೆ ಹಿರಿಯ ಅಧಿಕಾರಿಗಳ ಜೊತೆ ಇಲಾಖೆಯ ಅಭಿವೃದ್ಧಿ ಕಾರ್ಯಕ್ರಮಗಳ ಕುರಿತು ದೆಹಲಿ ಪ್ರವಾಸದಲ್ಲಿರುವ ಸಚಿವರು, ICMR DG ಅವರನ್ನ ಭೇಟಿ ಮಾಡಿ, ಕೆಎಫ್.ಡಿ ಲಸಿಕೆ ದೊರಕಿಸಿಕೊಡುವ ನಿಟ್ಟಿನಲ್ಲಿ ಅಗತ್ಯ ವೀತ್ತಿಯ ನೆರವು ಒದಗಿಸುವಂತೆ ಕೋರಿದರು. ಮೊದಲ ಹಂತದ ಪ್ರಯೋಗದಲ್ಲಿ ಕೆ.ಎಫ್.ಡಿ ಲಸಿಕೆ ಭರವಸೆ ಮೂಡಿಸಿದ್ದು, ಕಾಲಮಿತಿಯೊಳಗೆ ಲಸಿಕೆ ಲಭ್ಯತೆ ಅಗತ್ಯವಾಗಿದೆ. ಲಸಿಕೆಯ ಎರಡನೇ ಹಂತವನ್ನ ಶೀಘ್ರದಲ್ಲಿ ಪ್ರಾರಂಭಿಸಲಾಗುವುದು. 2025ರ…

Read More

ನವದೆಹಲಿ: ಮೂರು ಭಾರತೀಯ ವಿಮಾನಗಳನ್ನು ಗುರಿಯಾಗಿಸಿಕೊಂಡು ಬಾಂಬ್ ಬೆದರಿಕೆ ಹಾಕಿದ ಅಪ್ರಾಪ್ತ ವಯಸ್ಕನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ ಎಂದು ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಕಿಂಜರಾಪು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಭಾರತೀಯ ವಾಹಕಗಳ ದೇಶೀಯ ಮತ್ತು ಅಂತರರಾಷ್ಟ್ರೀಯ ಕಾರ್ಯಾಚರಣೆಗಳ ಮೇಲೆ ಪರಿಣಾಮ ಬೀರಿದ ಇತ್ತೀಚಿನ ವಿಧ್ವಂಸಕ ಕೃತ್ಯಗಳ ಬಗ್ಗೆ ಅವರು ತೀವ್ರ ಕಳವಳ ವ್ಯಕ್ತಪಡಿಸಿದರು. “ನಾನು ಅಕ್ಟೋಬರ್ 14 ರಂದು ಡಿಜಿಸಿಎ, ಬಿಸಿಎಎಸ್, ಸಿಐಎಸ್ಎಫ್, ಎಂಎಚ್ಎ ಮತ್ತು ಎಂಒಸಿಎ ಅಧಿಕಾರಿಗಳನ್ನು ಒಳಗೊಂಡ ಉನ್ನತ ಮಟ್ಟದ ಸಮಿತಿಯ ಅಧ್ಯಕ್ಷತೆ ವಹಿಸಿದ್ದೆ. ನಾನು ನಿಯಮಿತವಾಗಿ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದೇನೆ ಮತ್ತು ನಮ್ಮ ಕಾನೂನು ಜಾರಿ ಸಂಸ್ಥೆಗಳು ಎಲ್ಲಾ ಪ್ರಕರಣಗಳನ್ನು ಸಕ್ರಿಯವಾಗಿ ಅನುಸರಿಸುತ್ತಿವೆ” ಎಂದು ಅವರು ಹೇಳಿದರು. ಕಳೆದ ಮೂರು ದಿನಗಳಲ್ಲಿ ಭಾರತೀಯ ವಿಮಾನಯಾನ ಸಂಸ್ಥೆಗಳಿಗೆ 19 ಬಾಂಬ್ ಬೆದರಿಕೆಗಳು ಬಂದಿವೆ. https://kannadanewsnow.com/kannada/47-trees-57-branches-uprooted-due-to-heavy-rains-in-bengaluru-bbmp/ https://kannadanewsnow.com/kannada/heavy-rains-in-bengaluru-whats-going-on-in-trouble-here-are-the-pull-details/

Read More

ಬೆಂಗಳೂರು: ನಗರದಲ್ಲಿ ಭಾರೀ ಮಳೆಯಿಂದಾಗಿ ಅವಾಂತರವೇ ಉಂಟಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಗಾಳಿ, ಮಳೆಗೆ 47 ಮರಗಳು ಧರೆಗುರುಳಿದ್ದರೇ, 57 ರೆಂಬೆ ಕೊಂಬೆಗಳು ಮುರಿದು ಬಿದ್ದಿದ್ದಾವೆ. ಈ ಕುರಿತಂತೆ ಬಿಬಿಎಂಪಿಯಿಂದ ಮಾಹಿತಿ ನೀಡಲಾಗಿದ್ದು, ಬೆಂಗಳೂರಿನ ದಕ್ಷಿಣ ವಲಯದಲ್ಲಿ 40 ಮರಗಳು, ರಾಜರಾಜೇಶ್ವರಿ ನಗರದ ವ್ಯಾಪ್ತಿಯಲ್ಲಿ 4, ಬೊಮ್ಮನಹಳ್ಳಿಯಲ್ಲಿ 6, ಪಶ್ಚಿಮ ವಲಯದಲ್ಲಿ 5, ಮಹದೇವಪುರ ವಲಯದಲ್ಲಿ 6, ಯಲಹಂತ ಮತ್ತು ಪೂರ್ವ ವಲಯದಲ್ಲಿ ತಲಾ 7 ಮತ್ತು ದಾಸರಹಳ್ಳಿ ವಲಯದಲ್ಲಿ 2 ಸೇರಿದಂತೆ 47 ಮರಗಳು ಮಳೆಯಿಂದಾಗಿ ಧರೆಗೆ ಉರುಳಿದ್ದಾವೆ. ಇವುಗಳನ್ನು ತೆರವುಗೊಳಿಸಲಾಗಿದೆ ಎಂದು ಹೇಳಿದೆ. ಇನ್ನೂ ಬೆಂಗಳೂರಿನ ಬಿಬಿಎಂಪಿ ವ್ಯಾಪ್ತಿಯ ದಕ್ಷಿಣ ವಲಯದಲ್ಲಿ 20 ಮರದ ರೆಂಬೆ-ಕೊಂಬೆಗಳನ್ನು ತೆರವುಗೊಳಿಸಲಾಗಿದೆ. ರಾಜರಾಜೇಶ್ವರಿ ನಗರ ವಲಯದಲ್ಲಿ 1, ಬೊಮ್ಮನಹಳ್ಳಿಯಲ್ಲಿ 8, ಪಶ್ಚಿಮದಲ್ಲಿ 7, ಮಹದೇವಪುರದಲ್ಲಿ 2, ಯಲಹಂಕ 5, ಪೂರ್ವ ವಲಯದಲ್ಲಿ 12 ಹಾಗೂ ದಾಸರಹಳ್ಳಿ ವಲಯದಲ್ಲಿ 2 ಸೇರಿದಂತೆ 57 ರೆಂಬೆ-ಕೊಂಬೆಗಳು ಮಳೆಯಿಂದ ಮುರಿದು ಬಿದ್ದಿದ್ದು, ಬಿಬಿಎಂಪಿ ಸಿಬ್ಬಂದಿಗಳು ತೆರವುಗೊಳಿಸಿದ್ದಾರೆ. https://kannadanewsnow.com/kannada/railway-passengers-attention-temporary-stoppage-of-trains-continues-at-ramagiri-birur-stations/ https://kannadanewsnow.com/kannada/heavy-rains-in-bengaluru-whats-going-on-in-trouble-here-are-the-pull-details/

Read More

ಬೆಂಗಳೂರು: ನಗರದಲ್ಲಿ ಭಾರೀ ಮಳೆಯಿಂದಾಗಿ ಜನ ಜೀವನವೇ ಅಸ್ತವ್ಯಸ್ಥಗೊಂಡಿದೆ. ಬೆಂಗಳೂರಿನ ಅನೇಕ ಕಡೆಯಲ್ಲಿ ಭಾರೀ ಅವಾಂತರವೇ ಉಂಟಾಗಿದೆ. ಹಾಗಾದ್ರೇ ಬೆಂಗಳೂರಿನ ಯಾವ ಏರಿಯಾದಲ್ಲಿ ಏನೇನೋ ಮಳೆಯಿಂದ ಸಮಸ್ಯೆ ಆಗಿದೆ ಅಂತ ಮುಂದೆ ಓದಿ. ಈ ಕುರಿತಂತೆ ಬಿಬಿಎಂಪಿಯಿಂದ ಮಾಹಿತಿ ಹಂಚಿಕೊಳ್ಳಲಾಗಿದ್ದು, ನಗರದಲ್ಲಿ ನಿನ್ನೆಯಿಂದ ಮಳೆಯಾಗುತ್ತಿದ್ದು, ಅದರಿಂದ ಪಾಲಿಕೆಯ 8 ವಲಯಗಳಲ್ಲಿ ಪ್ರಮುಖ ಸಮಸ್ಯೆಗಳಾಗಿರುವ ಹಾಗೂ ಅದಕ್ಕೆ ತೆಗೆದುಕೊಂಡಿರುವ ಕ್ರಮಗಳನ್ನು ವಲಯವಾರು ಕೈಗೊಳ್ಳಲಾಗಿದೆ ಎಂದು ತಿಳಿಸಿದೆ. ಯಲಹಂಕ ವಲಯ: ಯಲಹಂಕ ವಲಯ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಮಳೆಯಾಗಿದ್ದು, ಇದರಿಂದ ಕೇಂದ್ರೀಯ ವಿಹಾರ ಅಪಾರ್ಟ್ಮೆಂಟ್ ನಲ್ಲಿ ನೀರು ನಿಂತಿದೆ. ಅಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ನೀರು ತೆರವುಗೊಳಿಸಲು 13 ಪಂಪ್ ಗಳನ್ನಿಟ್ಟು ತೆರವುಗೊಳಿಸುವ ಕಾರ್ಯ ನಿರಂತರವಾಗಿ ನಡೆಯುತ್ತಿದೆ. ಪಾಲಿಕೆ ಹಾಗೂ ಅಗ್ನಿಶಾಮಕ ಅಧಿಕಾರಿ/ಸಿಬ್ಬಂದಿಗಳು ಸ್ಥಳದಲ್ಲಿಯೇ ಇದ್ದು ಸಮಸ್ಯೆಯನ್ನು ಬಗೆಹರಿಸುವ ಕೆಲಸ ಮಾಡುತ್ತಿದ್ದಾರೆ. ರಮಣಶ್ರೀ ಕ್ಯಾಲಿಫೋರ್ನಿಯಾ ಲೇಔಟ್ ನಲ್ಲಿ ನಿಂತಿದ್ದ ನೀರನ್ನು ಪಂಪ್ ಮೂಲಕ ತೆರವುಗೊಳಿಸಲಾಗಿದೆ. ಇನ್ನು ನಿನ್ನೆ ಜೋರು ಮಳೆಯಿಂದಾಗಿ ಫಾತಿಮಾ ಲೇಔಟ್, ಬದ್ರಪ್ಪ ಲೇಔಟ್…

Read More

ಇಂದು ಅಶ್ವಯುಜ ಮಾಸದ ಹುಣ್ಣಿಮೆಯ ತಿಥಿ. ಈ ದಿನ ಅಶ್ವಯುಜ ಅವಿತಂ ಕೂಡ ಸೇರುತ್ತದೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಇಲ್ಲಿ ಪರಿಹಾರ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ ಜ್ಯೋತಿಷ್ಯರು ವಿದ್ವಾನ್…

Read More

ಬೆಂಗಳೂರು: ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ರಾಮಗಿರಿ ಮತ್ತು ಬೀರೂರು ನಿಲ್ದಾಣಗಳಲ್ಲಿ ರೈಲುಗಳ ತಾತ್ಕಾಲಿಕ ನಿಲುಗಡೆ ಮುಂದುವರಿಕೆ ಮಾಡಲಾಗಿದೆ. ಇಂದು ಪತ್ರಿಕಾ ಪ್ರಕಟಣೆಯಲ್ಲಿ ನೈರುತ್ಯ ರೈಲ್ವೆಯಿಂದ ಮಾಹಿತಿ ನೀಡಲಾಗಿದ್ದು, ರಾಮಗಿರಿ ಮತ್ತು ಬೀರೂರು ನಿಲ್ದಾಣಗಳಲ್ಲಿ ಈ ಕೆಳಗಿನ ರೈಲುಗಳಿಗೆ ಇದ್ದ ತಾತ್ಕಾಲಿಕ ನಿಲುಗಡೆಯನ್ನು ಮುಂದುವರಿಸಲು ನೈಋತ್ಯ ರೈಲ್ವೆ ನಿರ್ಧರಿಸಿದೆ ಎಂದಿದೆ. ರೈಲು ಸಂಖ್ಯೆ 16545/16546 ಯಶವಂತಪುರ-ಸಿಂಧನೂರು-ಯಶವಂತಪುರ ಡೈಲಿ ಎಕ್ಸ್ ಪ್ರೆಸ್ ರೈಲುಗಳಿಗೆ ರಾಮಗಿರಿ ನಿಲ್ದಾಣದಲ್ಲಿ ಇರುವ ಒಂದು ನಿಮಿಷದ ತಾತ್ಕಾಲಿಕ ನಿಲುಗಡೆಯನ್ನು ಅಕ್ಟೋಬರ್ 17 ರಿಂದ ನವೆಂಬರ್ 15, 2024 ರವರೆಗೆ ಒಂದು ತಿಂಗಳ ಕಾಲ ಮುಂದುವರಿಸಲಾಗುತ್ತಿದೆ. ರೈಲು ಸಂಖ್ಯೆ 07377/07378 ವಿಜಯಪುರ-ಮಂಗಳೂರು-ವಿಜಯಪುರ ಡೈಲಿ ಸ್ಪೆಷಲ್ ಎಕ್ಸ್ ಪ್ರೆಸ್ ರೈಲುಗಳಿಗೆ ಬೀರೂರು ನಿಲ್ದಾಣದಲ್ಲಿ ಇರುವ ಎರಡು ನಿಮಿಷದ ತಾತ್ಕಾಲಿಕ ನಿಲುಗಡೆ ಅಕ್ಟೋಬರ್ 17 ರಿಂದ ಏಪ್ರಿಲ್ 16, 2025 ರವರೆಗೆ ಆರು ತಿಂಗಳು ಮುಂದುವರಿಸಲಾಗುತ್ತಿದೆ. https://kannadanewsnow.com/kannada/notification-for-admission-to-2-year-bed-course-for-the-year-2024-25-released/ https://kannadanewsnow.com/kannada/renukaswamy-murder-case-pavithra-gowda-moves-hc-seeking-bail/

Read More

ಬೆಂಗಳೂರು: 2024-25ನೇ ಸಾಲಿನ ಎರಡು ವರ್ಷದ ಬಿಇಡಿ ಕೋರ್ಸಿನ ದಾಖಲಾತಿಗೆ ಅಧಿಸೂಚನೆಯನ್ನು ಶಾಲಾ ಶಿಕ್ಷಣ ಇಲಾಖೆ ಹೊರಡಿಸಿದೆ. ಇಂದು ಪತ್ರಿಕಾ ಪ್ರಕಟಣೆಯಲ್ಲಿ ಕೇಂದ್ರೀಕೃತ ದಾಖಲಾತಿ ಘಟಕದ ಜಂಟಿ ನಿರ್ದೇಶಕರು ಮಾಹಿತಿ ಹಂಚಿಕೊಂಡಿದ್ದು, 2024-25ನೇ ಸಾಲಿಗೆ ಎರಡು ವರ್ಷದ ಬಿ.ಇಡಿ ಕೋರ್ಸಿನ ವ್ಯಾಸಂಗಕ್ಕಾಗಿ ರಾಜ್ಯದ ಸರ್ಕಾರಿ, ಮಾನ್ಯತೆ ಪಡೆದ ಅನುದಾನಿತ ಹಾಗೂ ಅನುದಾನ ರಹಿತ ಬಿಇಡಿ ಕಾಲೇಜುಗಳಲ್ಲಿನ ಸರ್ಕಾರಿ ಕೋಟಾದ ಸೀಟುಗಳ ದಾಖಲಾತಿಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ ಎಂದಿದೆ. ಶಾಲಾ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟ್ https://schooleducation.karnataka.gov.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕು. ಅಲ್ಲದೇ ದಾಖಲಾತಿ ವೇಳಾಪಟ್ಟಿ, ಅರ್ಹತೆ, ಮೀಸಲಾತಿ, ಶುಲ್ಕ ಇತ್ಯಾದಿ ವಿವರ ಮತ್ತು ಜಿಲ್ಲಾವಾರ ಬಿಇಡಿ ಶಿಕ್ಷಣ ಸಂಸ್ಥೆಗಳ ಪಟ್ಟಿಯನ್ನು ನೀಡಲಾಗಿದೆ ಎಂದು ಹೇಳಿದೆ. ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಿ ಅರ್ಥೈಸಿಕೊಂಡು ಆನ್ ಲೈನ್ ಮೂಲಕ ಅರ್ಜಿಯನ್ನು ಕ್ರಮಬದ್ಧವಾಗಿ ಭರ್ತಿ ಮಾಡಿ ಸಲ್ಲಿಸುವಂತೆ ತಿಳಿಸಿದೆ. https://kannadanewsnow.com/kannada/ksrtc-celebrates-63rd-foundation-day-minister-ramalinga-reddy-launches-airavata-club-class-buses/ https://kannadanewsnow.com/kannada/renukaswamy-murder-case-pavithra-gowda-moves-hc-seeking-bail/

Read More

ಬೆಂಗಳೂರು: ಇಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಕೇಂದ್ರೀಯ ವಿಭಾಗದ ಘಟಕ – 2ರ ಆವರಣದಲ್ಲಿ ನಿಗಮದ 63ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಆಯೋಜಿಸಲಾಗಿದ್ದ, ಕಾರ್ಯಕ್ರಮದಲ್ಲಿ ಐರಾವತ ಕ್ಲಬ್ ಕ್ಲಾಸ್ ಬಸ್ಸು ಸೇರಿದಂತೆ ವಿವಿಧ ಕಾರ್ಯಕ್ರಮಗಳಿಗೆ ಸಾರಿಗೆ‌ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಮತ್ತು ಕೆ ಎಸ್ ಆರ್ ಟಿಸಿ ಅಧ್ಯಕ್ಷರಾದಂತ ಎಸ್.ಆರ್ ಶ್ರೀನಿವಾಸ್ ಅವರು ಚಾಲನೆ ನೀಡಿದರು. ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ನಿಗಮದಲ್ಲಿ ಪ್ರಪ್ರಥಮವಾಗಿ ಪುನಶ್ಚೇತನಗೊಳಿಸಿದ ಐರಾವತ ಕ್ಲಬ್ ಕ್ಲಾಸ್ ವಾಹನಗಳಿಗೆ ಚಾಲನೆ ನೀಡಿ ಮಾತನಾಡಿದರು. ನಿಗಮವು ಕಾರ್ಮಿಕರ ಕಲ್ಯಾಣಕ್ಕಾಗಿ ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದ್ದು ಇದರಿಂದ ಕಾರ್ಮಿಕರು ಸಂತೃಪ್ತಿಯಿಂದ ಕಾರ್ಯನಿರ್ವಹಿಸಲು ಸಹಕಾರಿಯಾಗಿರುವುದಾಗಿ ತಿಳಿಸಿದರು. ನಾಲ್ಕು ವರ್ಷಗಳಿಂದ ಯಾವುದೇ ಅನುಕಂಪದ ಆಧಾರದಲ್ಲಿ ನೇಮಕಾತಿ ನಡೆದಿರುವುದಿಲ್ಲ. ತಮ್ಮ ಸರ್ಕಾರ ಜಾರಿಗೆ ಬಂದ 18 ತಿಂಗಳು ಅವಧಿಯಲ್ಲಿ 1000 ಮೃತರ ಅವಲಂಬಿತರಿಗೆ ಅನುಕಂಪದ ಆಧಾರದ ಮೇಲೆ ನೌಕರಿಯನ್ನು ನೀಡಲಾಗಿದೆ. ಸರ್ಕಾರವು 5800 ನೂತನ ವಾಹನಗಳನ್ನು ಸೇರ್ಪಡೆ ಮಾಡಲು ಅನುಮತಿಸಿದ್ದು, ಇದುವರೆವಿಗೆ…

Read More

ಬೆಂಗಳೂರು: ಸಾಮಾಜಿಕ ಜಾಲತಾಗಳಲ್ಲಿ ಹಂಚಿಗೊಂಡ ವೀಡಿಯೋದಲ್ಲಿ, ಕೆಲ ಇಲಾಖಾ ಅಧಿಕಾರಿಗಳು ದೇವಾಲಯಗಳಿಂದ ಅಕ್ರಮವಾಗಿ ಹಣ ವಸೂಲಿ ಮಾಡಿರುವ ಸಂಬಂದ ಬಂದ ದೂರಿಗೆ ಸಾರಿಗೆ ಹಾಗೂ ಮುಜರಾಯಿ ಸಚಿವರಾದ ರಾಮಲಿಂಗಾ ರೆಡ್ಡಿ ತ್ವರಿತಗತಿಯಲ್ಲಿ‌ ಕಠಿಣ ಕ್ರಮ ವಹಿಸಿದ್ದಾರೆ. ಬೆಂಗಳೂರಿನ ಜಯನಗರದ ವಿನಾಯಕ ದೇವಾಲಯದ ಹೆಸರಿನಲ್ಲಿ ಹಣ ದುರುಪಯೋಗ ಮಾಡಿಕೊಂಡ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾದ ಆಡಿಯೋ ಸಂಭಾಷಣೆಯಲ್ಲಿ, ಬೆಂಗಳೂರು ಜಯನಗರದ ಶ್ರೀ ವಿನಾಯಕ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಟಿ.ಎನ್. ಮಂಜುಳ ಅವರ ಹೆಸರು ಪ್ರಸ್ತಾಪವಾಗಿದೆ. ಅವರು ಸೋಮಶೇಖರ್ ಅವರ ಸೂಚನೆ ಮೇರೆಗೆ, ದೇವಾಲಯದಿಂದ ₹25,000 ಗಳನ್ನು ದೇವಾಲಯದ ಸ್ವಚ್ಛತೆ ಕಾರ್ಯ, ಬೀಗದ ಕೀಲಿ ರಿಪೇರಿ ಮತ್ತು ಹಬ್ಬದ ಖರೀದಿಗಳ ಹೆಸರಲ್ಲಿ ದುರುಪಯೋಗಪಡಿಸಿಕೊಂಡಿದ್ದಾರೆಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ, ಇಲಾಖಾ ವರ್ತನೆ ಮತ್ತು ಹಣಕಾಸು ವಹಿವಾಟನ್ನು ಕ್ರಮಬದ್ಧವಾಗಿ ನಿರ್ವಹಿಸದ ಕಾರಣ ಟಿ.ಎನ್. ಮಂಜುಳ ಮತ್ತು ಗಿರೀಶ್ ಅವರನ್ನು ಆಯುಕ್ತರು ಮುಜರಾಯಿ ಇಲಾಖೆರವರಾದ ಡಾ.ವೆಂಕಟೇಶ್ ಭಾಆಸೇ, ಅವರು ಸಾರಿಗೆ ಹಾಗೂ ಮುಜರಾಯಿ ಸಚಿವರ ಆದೇಶದಂತೆ…

Read More

ಬೆಂಗಳೂರು: ಚಿತ್ರದುರ್ಗ ಮೂಲಕ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಎ.1 ಆರೋಪಿಯಾಗಿರುವಂತ ಪವಿತ್ರಾ ಗೌಡ ಜಾಮೀನು ಅರ್ಜಿಯನ್ನು 57ನೇ ಸಿಸಿಹೆಚ್ ನ್ಯಾಯಾಲಯ ವಜಾಗೊಳಿಸಿತ್ತು. ಈ ಬೆನ್ನಲ್ಲೇ ಜಾಮೀನು ಕೋರಿ ಪವಿತ್ರಾ ಗೌಡ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಅಕ್ಟೋಬರ್.14ರಂದು ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯವು ಜಾಮೀನು ಕೋರಿ ಸಲ್ಲಿಸಿದ್ದಂತ ಎ.1 ಆರೋಪಿ ಪವಿತ್ರಾ ಗೌಡ ಅರ್ಜಿಯನ್ನು ವಜಾಗೊಳಿಸಿತ್ತು. ಜಾಮೀನು ಅರ್ಜಿ ವಜಾಗೊಂಡ ನಂತ್ರ, ಆರೋಪಿ ಪವಿತ್ರಾ ಗೌಡ ಕಣ್ಣೀರಿಟ್ಟಿದ್ದರು. ಈ ಪ್ರಕರಣದಲ್ಲಿ ನಟ ದರ್ಶನ್ ಜಾಮೀನು ಅರ್ಜಿಯನ್ನು ವಜಾಗೊಳಿಸಲಾಗಿತ್ತು. ಹೀಗಾಗಿ ಅವರು ಹೈಕೋರ್ಟ್ ಗೆ ಜಾಮೀನು ಕೋರಿ ವಕೀಲರ ಮೂಲಕ ಅರ್ಜಿ ಸಲ್ಲಿಸಿದ್ದರು. ಈ ಬಳಿಕ ಎ1 ಆರೋಪಿಯಾಗಿರುವಂತ ಪವಿತ್ರಾ ಗೌಡ ಕೂಡ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಜಾಮೀನು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. https://kannadanewsnow.com/kannada/over-90-killed-50-injured-after-fuel-tanker-explodes-in-nigeria/ https://kannadanewsnow.com/kannada/bengaluru-auto-rickshaw-damaged-driver-escapes-unhurt-as-tree-falls-on-him-due-to-heavy-rains/

Read More