Author: kannadanewsnow09

ಬೆಂಗಳೂರು: ಹಾಸನ ಗಣೇಶೋತ್ಸವ ದುರಂತದಲ್ಲಿ ಮಡಿದವರಿಗೆ ಹೆಚ್ಚಿನ ಪರಿಹಾರ ನೀಡುವಲ್ಲಿಯೂ ಸಿಎಂ ಸಿದ್ದರಾಮಯ್ಯ ತುಷ್ಟೀಕರಣ ರಾಜಕೀಯ ಮಾಡುತ್ತಿದ್ದು, ಹೆಚ್ಚಿನ ಪರಿಹಾರ ನೀಡಿದರೆ ಓಲೈಕೆ ರಾಜಕೀಯಕ್ಕೆ ಏನಾದರೂ ಧಕ್ಕೆಯಾಗುತ್ತದೆಯಾ ಎಂದು ಆಲೋಚನೆ ಮಾಡುತ್ತಿದ್ದಾರೆ. ಅವರಲ್ಲಿ ಮಾನವೀಯತೆ ಸತ್ತು ಹೋಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಆಂಗ್ಲ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಅವರು, ಹಾಸನ ಗಣೇಶೋತ್ಸವ ಮೆರವಣಿಗೆಯಲ್ಲಿ ನಡೆದ ದುರಂತದಲ್ಲಿ ಜನರು ತಮ್ಮ ಕುಟುಂಬದವರ ಜೀವ ಕಳೆದುಕೊಂಡಿದ್ದಾರೆ. ಈ ಪ್ರಕರಣದಲ್ಲಿ ಅವರಿಗೆ ದೊಡ್ಡ ಪ್ರಮಾಣದ ನಷ್ಟವುಂಟಾಗಿದೆ. ತಮ್ಮ ಕೂಟುಂಬದ ಆದಾಯ ತರುವ ವ್ಯಕ್ತಿಗಳನ್ನು ಕಳೆದುಕೊಂಡಿದ್ದಾರೆ. ಹೀಗಾಗಿ ಅವರು ಹೆಚ್ಚಿನ ಪರಿಹಾರ ಕೇಳುತ್ತಿದ್ದಾರೆ. ಅವರು ಭಿಕ್ಷೆ ಬೇಡುತ್ತಿಲ್ಲ. ಸರ್ಕಾರ ಮಾನವೀಯತೆಯ ಆಧಾರದಲ್ಲಿ ಅವರಿಗೆ ಹೆಚ್ಚಿನ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು. ಇನ್ನೊಂದೆಡೆ ಸಿಎಂ ಸಿದ್ದರಾಮಯ್ಯ ಕೋಮು ಗಲಭೆಯಲ್ಲಿ ಮೃತರಾದವರಿಗೆ, ಪ್ರಚೋದನೆಯಲ್ಲಿ ಸಾವಿಗೀಡಾದವರಿಗೆ, ವೈನಾಡಿನ ದುರಂತಕ್ಕೆ ಈಗ ಹಿಮಾಚಲ ಪ್ರದೇಶಕ್ಕೆ ಹಣ ನೀಡಿದ್ದಾರೆ. ಹಾಸನದಲ್ಲಿ ಗಣೇಶ ಮೆರವಣೆಗೆಯ ಸಂದರ್ಭದಲ್ಲಿ ದುರಂತ…

Read More

ಬ್ರಾಹ್ಮಣರಿಗೆ ಭೋಜನ ಮಾಡಿಸಿದರೆ ಸಕಲ ದೇವತೆಗಳೂ ತೃಪ್ತ ರಾಗುತ್ತಾರೆ. ತುಂಬಾ ಜನ ಇದನ್ನು ಕೊಂಕು ಮಾತಾಗಿ ಉಪಯೋಗಿಸುತ್ತೀರಾ..! ಸರಿಯಾಗಿ ಅರ್ಥ ತಿಳಿದುಕೊಂಡು ಮಾತನಾಡುವುದು ಒಳಿತು.. TODAY ಯಾರೋ ಒಬ್ಬರು ದೇವಾಲಯದಲ್ಲಿ ಮಾತಾಡುತ್ತಿದ್ದನ್ನು ಕೇಳಿಸಿಕೊಂಡಿದಕ್ಕಾಗಿ ಹಾಕುತ್ತಿದ್ದೇನೆ..( ಬರೆದವರ ಹೆಸರು ಗೊತ್ತಿಲ್ಲ. ಅವರಿಗೆ ಧನ್ಯವಾದಗಳು) ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ…

Read More

ನವದೆಹಲಿ : ಆಧ್ಯಾತ್ಮಿಕ ಹಾಗೂ ಐತಿಹಾಸಿಕ ಪ್ರವಾಸಕ್ಕಾಗಿ, ಭಾರತೀಯ ರೈಲ್ವೆ ವಿಶೇಷ ಭಾರತ್ ಗೌರವ್ ಯಾತ್ರಾ ರೈಲುವನ್ನು ಪ್ರಾರಂಭಿಸಲಿದೆ. ಇದು ನಾಲ್ಕು ಜ್ಯೋತಿರ್ ಲಿಂಗ ಹಾಗೂ ಏಕತಾ ಪ್ರತಿಮೆಯನ್ನು ಒಳಗೊಂಡ ಒಂಬತ್ತು ದಿನಗಳ ಪ್ರವಾಸವಾಗಿದೆ. ಈ ರೈಲು ಯಾತ್ರೆಯಲ್ಲಿ ದೇಶದ ಅತ್ಯಂತ ಪವಿತ್ರ ದೇವಾಲಯಗಳು ಮತ್ತು ದೇಶದ ಅತಿ ಎತ್ತರದ ಆಧುನಿಕ ಸ್ಮಾರಕಗಳನ್ನು ನೋಡುವ ಅವಕಾಶ ದೊರೆಯುತ್ತದೆ. ಭಾರತೀಯ ರೈಲ್ವೆ ಕ್ಯಾಟರಿಂಗ್ ಮತ್ತು ಟೂರಿಸಂ ಕಾರ್ಪೊರೇಷನ್ (IRCTC) ಈ ಪ್ರವಾಸದ ನಿರ್ವಹಣೆಯನ್ನು ವಹಿಸಿಕೊಂಡಿದೆ. ಈ ಯಾತ್ರೆಯು ಅಕ್ಟೋಬರ್ 25ರಂದು ಅಮೃತಸರದಿಂದ ಪ್ರಾರಂಭವಾಗಲಿದೆ. ಪ್ರಯಾಣಿಕರು ಜಲಂಧರ್, ಲೂಧಿಯಾನ, ಚಂಡೀಗಢ, ಅಂಬಾಲ, ಕುರುಕ್ಷೇತ್ರ, ಪಾಣಿಪತ್, ಸೋನಿಪತ್, ದೆಹಲಿ ಕ್ಯಾಂಟ್ ಮತ್ತು ರೇವಾರಿ ನಿಲ್ದಾಣಗಳಲ್ಲಿ ರೈಲು ಹತ್ತಬಹುದು. ಈ ಪ್ರವಾಸದಲ್ಲಿ ಮಹಾಕಾಳೇಶ್ವರ ಮತ್ತು ಓಂಕಾರೇಶ್ವರ (ಉಜ್ಜಯಿನಿ), ನಾಗೇಶ್ವರ (ದ್ವಾರಕಾ ಸಮೀಪ), ಮತ್ತು ಸೋಮನಾಥ್ (ವೇರಾವಲ್) ಜ್ಯೋತಿರ್ಲಿಂಗ ದೇವಾಲಯಗಳು, ದ್ವಾರಕಾಧೀಶ ದೇವಾಲಯ ಮತ್ತು ಕೆವಾಡಿಯಾದಲ್ಲಿರುವ ಏಕತಾ ಪ್ರತಿಮೆಯನ್ನು (Statue of Unity) ಸಂದರ್ಶಿಸಲಾಗುತ್ತದೆ. ಈ ವಿಶೇಷ ರೈಲಿನಲ್ಲಿ…

Read More

ಕೊಪ್ಪಳ: ದೇಶದಲ್ಲಿ ಜಾತಿ, ಧರ್ಮಗಳ ಬಗ್ಗೆ ಚರ್ಚೆಯಾಗದೇ ಅಭಿವೃದ್ಧಿಗಳ ಬಗ್ಗೆ ಚರ್ಚೆಗಳಾಗಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರೂ ಆದ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್. ತಂಗಡಗಿ ಅವರು ಅಭಿಪ್ರಾಯಪಟ್ಟರು. ಸೋಮವಾರ ಕೊಪ್ಪಳ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಪ್ರಜಾಪ್ರಭುತ್ವದಲ್ಲಿ ಟೀಕೆ ಟಿಪ್ಪಣೆಗಳಿಗೆ ಅವಕಾಶವಿದೆ. ಆದರೆ, ಇಂದು ವೈಯಕ್ತಿಕವಾಗಿ ಟೀಕೆ ಟಿಪ್ಪಣೆಗಳಾಗುತ್ತಿದ್ದು, ಅರ್ಥಗರ್ಭಿತ ಮತ್ತು ಸಾಮರಸ್ಯವಾದಂತಹ ಟೀಕೆ ಟಿಪ್ಪಣೆಗಳು ಆಗಬೇಕಿವೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನಕ್ಕೆ ಅತ್ಯಂತ ಮಹತ್ವವಿದ್ದು, ಪ್ರತಿಯೊಬ್ಬರು ಹೆಚ್ಚಿನ ಪ್ರಮಾಣದಲ್ಲಿ ಶೇ.100 ರಷ್ಟು ಮತದಾನ ಮಾಡಿದಾಗ ನಾವು ಭಾರತ ಸಂವಿಧಾನಕ್ಕೆ ಗೌರವ ಕೊಟ್ಟಂತಾಗುತ್ತದೆ ಎಂದು ಹೇಳಿದರು. ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಪ್ರತಿ ವರ್ಷ ಒಂದೊಂದು ಶೀರ್ಷಿಕೆಯಲ್ಲಿ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗುತ್ತಿದೆ. “ನನ್ನ ಮತ ನನ್ನ ಹಕ್ಕು” ಎಂಬ ಘೋಷವಾಕ್ಯದೊಂದಿಗೆ…

Read More

ಬೆಂಗಳೂರು: ನಗರದಲ್ಲಿ ಗೂಡ್ಸ್ ವಾಹನವೊಂದು ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಗೂಡ್ಸ್ ವಾಹನ ಡಿಕ್ಕಿಯಾದ ಪರಿಣಾಮ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಬೆಂಗಳೂರಿನ ಕಾಮಾಕ್ಷಿಪಾಳ್ಯದ ತೋಟದ ರಸ್ತೆಯ ಸಣ್ಣಾಕ್ಕಿ ಬೈಲಿನಲ್ಲಿ ಈ ಅಪಘಾತ ಸಂಭವಿಸಿದೆ. ಗೂಡ್ಸ್ ವಾಹನ ಡಿಕ್ಕಿಯಾಗಿ ಶಶಾಂಕ್(12) ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ವೇಗವಾಗಿ ಬಂದು ಸೈಕಲ್ ಗೆ ಗೂಡ್ಸ್ ವಾಹನ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ. ಬಾಲಕ ಸಾವನ್ನಪ್ಪುತ್ತಿದ್ದಂತೆ ವಾಹನ ಚಾಲಕ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಕಾಮಾಕ್ಷಿಪಾಳ್ಯ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. https://kannadanewsnow.com/kannada/rs-4000-crore-investment-from-japanese-companies-in-karnataka-minister-m-b-patil/ https://kannadanewsnow.com/kannada/big-news-dasara-inauguration-is-taking-place-according-to-the-mullas-opposition-leader-r-ashoks-statement/

Read More

ಬೆಂಗಳೂರು: ಕಳೆದ ವಾರ ತಾವು ಕೈಗೊಂಡ ಜಪಾನ್‌ ಭೇಟಿಯಿಂದಾಗಿ ಆ ದೇಶದ ವಿವಿಧ ಉದ್ಯಮಗಳು ರಾಜ್ಯದಲ್ಲಿ 4,000 ಕೋಟಿ ರೂ.ಗಳಿಗೂ ಹೆಚ್ಚು ಬಂಡವಾಳ ಹೂಡಿಕೆ ಮಾಡುವುದು ಖಾತ್ರಿಯಾಗಿದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ. ಅವರು ಸೋಮವಾರ ತಮ್ಮ ನಿವಾಸದಲ್ಲಿ ಭೇಟಿಯಾದ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದರು. ಹೂಡಿಕೆ ಆಕರ್ಷಿಸುವ ದೃಷ್ಟಿಯಿಂದ ಜಪಾನ್‌ಗೆ ಇದು ತಮ್ಮ ಎರಡನೇ ಭೇಟಿಯಾಗಿದೆ. ಜಪಾನಿನ ಉದ್ಯಮಗಳ ಪ್ರಮುಖರು ಸಾಂಪ್ರದಾಯಿಕ ಆಲೋಚನೆ ಉಳ್ಳವರಾಗಿದ್ದು, ಸಾಕಷ್ಟು ದೀರ್ಘವಾಗಿ ಯೋಚಿಸಿ ನಿರ್ಧಾರಕ್ಕೆ ಬರುತ್ತಾರೆ. ಇವತ್ತು ದೇಶದಲ್ಲಿರುವ ಜಪಾನಿ ಉದ್ದಿಮೆಗಳಲ್ಲಿ ಶೇಕಡ ೫೦ರಷ್ಟು ಕಂಪನಿಗಳು ಕರ್ನಾಟಕದಲ್ಲೇ ಇವೆ. ಹಿಂದೆ ತಾವು ಜಪಾನ್‌ ಮತ್ತು ದಕ್ಷಿಣ ಕೊರಿಯಾಗೆ ಭೇಟಿ ನೀಡಿದ್ದಾಗ 6,500 ಕೋಟಿ ರೂ. ಹೂಡಿಕೆಯನ್ನು ಸೆಳೆಯಲಾಗಿತ್ತು ಎಂದು ಅವರು ವಿವರಿಸಿದ್ದಾರೆ. ಈ ಸಲದ ಭೇಟಿಯಲ್ಲಿ ಹೋಂಡಾ ಮುಂತಾದ ಕಂಪನಿಗಳು ರಾಜ್ಯದಲ್ಲಿ ವಿಸ್ತರಣೆ, ಮುಕುಂದ್‌ ಸುಮಿ ಸ್ಟೀಲ್ಸ್‌ ಕಂಪನಿ ಜತೆ ಸಹಭಾಗಿತ್ವ ಮುಂತಾದ ವಿಚಾರ ಕುರಿತು…

Read More

ನವದೆಹಲಿ : ಗುಜರಾತ್‌ನ ಜಾಮ್‌ನಗರದಲ್ಲಿ ಇರುವ ವನ್ಯಪ್ರಾಣಿ ರಕ್ಷಣೆ ಮತ್ತು ಪುನರ್ವಸತಿ ಕೇಂದ್ರವಾದ ವಂತಾರದ ಕಾರ್ಯವೈಖರಿ ಬಗ್ಗೆ ತನಿಖೆ ನಡೆಸುತ್ತಿರುವ ಎಸ್‌ಐಟಿ ಕ್ಲೀನ್ ಚಿಟ್ ನೀಡಿದೆ. ಅಂದಹಾಗೆ ಸುಪ್ರೀಂ ಕೋರ್ಟ್ ನಿಂದ ಎಸ್ಐಟಿ ನೇಮಕ ಮಾಡಲಾಗಿತ್ತು. ನ್ಯಾಯಮೂರ್ತಿಗಳಾದ ಪಂಕಜ್ ಮಿಥಲ್ ಮತ್ತು ಪಿ ಬಿ ವರಾಳೆ ಅವರ ಪೀಠವು ವರದಿಯನ್ನು ದಾಖಲೆಯಾಗಿ ಸ್ವೀಕರಿಸಿ, ವಂತಾರದಲ್ಲಿನ ನಿಯಮದ ಅನುಸರಣೆ ಮತ್ತು ನಿಯಂತ್ರಕ ಕ್ರಮಗಳ ವಿಷಯದ ಬಗ್ಗೆ ಅಧಿಕಾರಿಗಳು ತೃಪ್ತಿ ವ್ಯಕ್ತಪಡಿಸಿದ್ದಾರೆ ಎಂಬ ವಿಷಯವನ್ನು ಗಮನಕ್ಕೆ ತೆಗೆದುಕೊಂಡಿದೆ. ಎಸ್ಐಟಿಯಿಂದ ವರದಿಯನ್ನು ಶುಕ್ರವಾರ ಸಲ್ಲಿಸಲಾಯಿತು ಮತ್ತು ಸೋಮವಾರ ಸುಪ್ರೀಂ ಕೋರ್ಟ್ ಅದನ್ನು ಪರಿಶೀಲಿಸಿತು. ವರದಿಯನ್ನು ಪರಿಶೀಲಿಸಿದ ನಂತರ ವಿವರವಾದ ಆದೇಶವನ್ನು ನೀಡುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ. ಕಾನೂನುಗಳನ್ನು ಪಾಲನೆ ಮಾಡುತ್ತಿಲ್ಲ ಮತ್ತು ಭಾರತ ಹಾಗೂ ವಿದೇಶಗಳಿಂದ ಪ್ರಾಣಿಗಳನ್ನು, ಅದರಲ್ಲೂ ವಿಶೇಷವಾಗಿ ಆನೆಗಳನ್ನು ಸುಪರ್ದಿಗೆ ತೆಗೆದುಕೊಳ್ಳಲಾಗುತ್ತಿದೆ ಎಂದು ಆರೋಪ ಮಾಡಲಾಗಿತ್ತು. ಈ ಆರೋಪಗಳ ಹಿನ್ನೆಲೆಯಲ್ಲಿ ವಂತಾರ ವಿರುದ್ಧ ಸತ್ಯಶೋಧನಾ ವಿಚಾರಣೆ ನಡೆಸಲು ಆಗಸ್ಟ್ 25ನೇ ತಾರೀಕಿನಂದು ಸುಪ್ರೀಂಕೋರ್ಟ್…

Read More

ಬೆಂಗಳೂರು: ಅಮೇರಿಕನ್ ಸೊಸೈಟಿ ಆಫ್ ಮೆಕ್ಯಾನಿಕಲ್ ಎಂಜಿನಿಯರ್ಸ್ (ASME) ಮೊದಲ ಬಾರಿಗೆ ಆಯೋಜಿಸಿದ್ದ ವಿಶ್ವದ ಅತಿದೊಡ್ಡ ಮೆಕ್ಯಾನಿಕಲ್ ಎಂಜಿನಿಯರಿಂಗ್ ಕಾಂಗ್ರೆಸ್, ಅಂತಾರಾಷ್ಟ್ರೀಯ ಮೆಕ್ಯಾನಿಕಲ್ ಎಂಜಿನಿಯರಿಂಗ್ ಕಾಂಗ್ರೆಸ್ ಮತ್ತು ಎಕ್ಸ್‌ಪೋಸಿಷನ್ (IMECE) ಇಂಡಿಯಾ 2025 ಯಶಸ್ವಿಗೊಂಡಿದೆ. ಈ ಕಾರ್ಯಕ್ರಮವು ಚಿಂತನೆಗೆ ಹಚ್ಚುವ ಪ್ರಮುಖ ಭಾಷಣಗಳು, ನೀತಿ ಸಂವಾದಗಳೊಂದಿಗೆ ಎಂಜಿನಿಯರಿಂಗ್ ಮತ್ತು ನಾವೀನ್ಯತೆಯಲ್ಲಿ ಭಾರತದ ನಾಯಕತ್ವವನ್ನು ಎತ್ತಿ ತೋರಿಸಿದೆ. ಈ ಕಾರ್ಯಕ್ರಮವು ಸಂಶೋಧನೆ, ಶಿಕ್ಷಣ ಮತ್ತು ಮುಂದುವರಿದ ಉತ್ಪಾದನೆಯಲ್ಲಿ ಸಹಯೋಗವನ್ನು ಬಲಪಡಿಸುವ ಗುರಿಯನ್ನು ಹೊಂದಿರುವ ASME ಮತ್ತು ICT ಅಕಾಡೆಮಿ ಆಫ್ ಕೇರಳದ ನಡುವಿನ ತಿಳುವಳಿಕೆ ಒಪ್ಪಂದಕ್ಕೆ ಸಹಿ ಹಾಕಿತು. ಆಂಧ್ರಪ್ರದೇಶ ಸರ್ಕಾರದ MSME ಸಚಿವ ಶ್ರೀನಿವಾಸ್ ಕೊಂಡಪಲ್ಲಿ ಮಾತನಾಡಿ, ಮೆಕ್ಯಾನಿಕಲ್‌ ಇಂಜಿನಿಯರ್ಸ್‌ ಸಮಾವೇಶವು ಇಡೀ ದೇಶದಲ್ಲಿ ಇಂಜಿನಿಯರ್ಸ್‌ಗಳಿಗೆ ಇರುವ ಅವಕಾಶಗಳ ಬಗ್ಗೆ ಎತ್ತಿ ಹಿಡಿಯುತ್ತದೆ. ಮೂಲಸೌಕರ್ಯ, ವಲಯ ಉದ್ಯಾನವನ ಮತ್ತು ನಾವೀನ್ಯತೆ ಕೇಂದ್ರಗಳನ್ನು ಹೊಂದಿರುವ ಆಂಧ್ರಪ್ರದೇಶವು ಉತ್ಪಾದನೆ, MSME ಗಳು ಮತ್ತು ರಫ್ತುಗಳಿಗೆ ಕೇಂದ್ರವಾಗಿ ವೇಗವಾಗಿ ಹೊರಹೊಮ್ಮುತ್ತಿದೆ – ಭಾರತದ ಒಟ್ಟು ರಫ್ತಿಗೆ…

Read More

ಶಿವಮೊಗ್ಗ: ಮಳಲಗದ್ದೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು 45 ವರ್ಷಗಳಿಂದ ನಿರಂತರವಾಗಿ ರೈತರಿಗೆ ಸೇವೆ ನೀಡುತ್ತಾ ಬಂದಿದೆ. ಇದರಿಂದಾಗಿ ರೈತರ ಉತ್ತಮ ಬೆಳವಣಿಗೆಯಾಗಿದೆ. ಕೃಷಿಯ ಜೊತೆಗೆ ಹೈನುಗಾರಿಕೆಗೂ ಉತ್ತೇಜನ ನೀಡಿದರೇ ರೈತರಿಗೆ ಅನುಕಾಲವಾಗಲಿದೆ ಎಂಬುದಾಗಿ ಶ್ರೀ ಕ್ಷೇತ್ರ ಸಿಂಗದೂರು ಚೌಡೇಶ್ವರಿ ದೇಗುಲದ ಧರ್ಮದರ್ಶಿ ಡಾ.ರಾಮಪ್ಪ ಅವರು ಅಭಿಪ್ರಾಯ ಪಟ್ಟರು. ಇಂದು ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಹೊಳೆಕೊಪ್ಪದ ಧನಾಂಜನೇಯ ದೇವಸ್ಥಾನದ ಸಭಾಭವನಲ್ಲಿ ನಡೆದಂತ ಮಳಲಗದ್ದೆ(ಉಳವಿ) ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತದ 2024-25ನೇ ಸಾಲಿನ ಆವಾರ್ಷಿಕ ಸರ್ವ ಸದಸ್ಯರ ಸಭೆಯಲ್ಲಿ ಭಾಗಿಯಾಗಿ ಮಾತನಾಡಿದರು. ಮಳಲಗದ್ದೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು 45 ವರ್ಷಗಳ ಕಾಲ ನಿರಂತರವಾಗಿ ರೈತರಿಗೆ ಸೇವೆ ನೀಡುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ. ರೈತರು ಸಾಲವನ್ನು ನಿಗದಿತ ಅವಧಿಯೊಳೆಗೆ ಮರುಪಾವತಿ ಮಾಡುವ ಮೂಲಕ ಸಂಘದ ಬೆಳವಣಿಗೆಗೆ ಸಹಕರಿಸಬೇಕೆಂದರು. ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಗಳು ಕೃಷಿ ಜೊತೆಗೆ ಹೈನುಗಾರಿಕೆಗೆ ಉತ್ತೇಜನ ನೀಡಬೇಕು. ಇದರಿಂದ ರೈತರ ಕುಟುಂಬಗಳು ಆರ್ಥಿಕವಾಗಿ…

Read More

ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಮತ್ತೊಂದು ಹಿನ್ನಡೆ ಎನ್ನುವಂತೆ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರ ವಿಧೇಯಕವನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ವಾಪಾಸ್ ಕಳುಹಿಸಿದ್ದಾರೆ. ರಾಜ್ಯ ಸರ್ಕಾರದಿಂದ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ವಿಧೇಯಕವನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗೆ ಅಂಕಿತಕ್ಕೆ ಕಳುಹಿಸಲಾಗಿತ್ತು. ಆದರೇ ಕೆರೆ ವಿಸ್ತೀರ್ಣಕ್ಕೆ ಅನುಗುಣವಾಗಿ ಬಫರ್ ಜೋನ್ ನಿಗದಿಗೊಳಿಸಿತ್ತು. ಇದನ್ನು ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಲಾಗಿತ್ತು. ಆದರೇ ಈ ವಿಧೇಯಕವನ್ನು ವಾಪಾಸ್ ಕಳುಹಿಸಲಾಗಿದೆ. https://kannadanewsnow.com/kannada/big-news-dasara-inauguration-is-taking-place-according-to-the-mullas-opposition-leader-r-ashoks-statement/ https://kannadanewsnow.com/kannada/judge-shows-humanity-in-front-of-the-public-he-goes-to-the-elderly-man-and-gives-a-verdict-providing-relief-on-the-spot/

Read More