Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: 5, 8, 9ನೇ ತರಗತಿಗಳ ಮೌಲ್ಯಮಾಪನ, ಬೋರ್ಡ್ ಎಕ್ಸಾಮ್ ಮಾಡುವುದಾಗಿ ಸರಕಾರ ಹೊರಟಿದೆ. ಮಕ್ಕಳು, ಪೋಷಕರು, ಶಾಲಾ ಮುಖ್ಯಸ್ಥರ ಜೊತೆ ಸಂವಾದ ಮಾಡಿ ಉದ್ದೇಶ ಸ್ಪಷ್ಟಗೊಳಿಸದೇ ನ್ಯಾಯಾಲಯದ ವರೆಗೆ ಪ್ರಕರಣ ಹೋಗಿತ್ತು. ವಿದ್ಯಾರ್ಥಿ ಜೀವನ ಮಸಕು ಮಾಡುವುದೂ ಒಂದು ಗ್ಯಾರಂಟಿ ಎಂದು ಈ ಸರಕಾರ ಭಾವಿಸಿದೆ ಎಂದು ಶಾಸಕ ಎಸ್. ಸುರೇಶ್ ಕುಮಾರ್ ಟೀಕಿಸಿದರು. ಈ ಕುರಿತು ಮಾತನಾಡಿದ ಅವರು, ನ್ಯಾಯಾಲಯದ ತಡೆಯಾಜ್ಞೆ, ಅದರ ತೆರವು, ಪರೀಕ್ಷೆ ದಿನ ಪ್ರಕಟಿಸುವುದು- ಹೀಗೆ ನಡೆದು ಈಗ ಫಲಿತಾಂಶ ಪ್ರಕಟಿಸಿಲ್ಲ. ಎಳೆ ಮಕ್ಕಳ ಮನಸ್ಥಿತಿ, ಪೋಷಕರ ಆತಂಕವನ್ನು ಗಣನೆಗೇ ತೆಗೆದುಕೊಂಡಿಲ್ಲ. ಈ ಮಕ್ಕಳಿಗೆ ಮತ ಇಲ್ಲದ ಕಾರಣ ಹೀಗೆ ಮಾಡುತ್ತಿದ್ದಾರೆ. ವಿದ್ಯಾರ್ಥಿಗಳ ಜೊತೆ ಚೆಲ್ಲಾಟ, ಅವರ ಜೀವನವನ್ನು ಅಂಧಕಾರಕ್ಕೆ ಒಯ್ಯುತ್ತಿದ್ದಾರೆ. ಮಕ್ಕಳ ಆತಂಕ ನಿವಾರಣೆ, ವಿಷಾದ ವ್ಯಕ್ತಪಡಿಸುವುದು, ಮಕ್ಕಳಲ್ಲಿ ಆತ್ಮವಿಶ್ವಾಸ ತುಂಬುವ ಕೆಲಸ ಈ ಸರಕಾರದ ಶಿಕ್ಷಣ ಸಚಿವರಿಂದ ಆಗಿಲ್ಲ ಎಂದ ಅವರು, ನಮ್ಮ ರಾಜ್ಯದ ಸಿಇಟಿ (ಸಾಮಾನ್ಯ ಪ್ರವೇಶ ಪರೀಕ್ಷೆ) ಅತ್ಯಂತ…
ಬೆಂಗಳೂರು: ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ಕೊಟ್ಟಿರುವಂತ ಗ್ರೇಸ್ ಮಾರ್ಕ್ಸ್ ನಲ್ಲಿ ಯಾವುದೇ ಬದಲಾವಣೆಯಿಲ್ಲ. ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಕೊಡುವುದನ್ನು ರದ್ದು ಪಡಿಸಲಾಗುತ್ತಿದೆ ಎಂಬುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಇಂದು ವಿಧಾನಸೌಧದಲ್ಲಿ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳ ಜೊತೆಗೆ ಮಹತ್ವದ ಸಭೆ ನಡೆಯಿತು. ಈ ಸಭೆಯಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ 20 ಗ್ರೇಸ್ ಮಾರ್ಕ್ಸ್ ನೀಡಿದ್ದರ ಬಗ್ಗೆ ಆಕ್ಷೇಪ ವ್ಯಕ್ತವಾಗಿರುವ ಬಗ್ಗೆ ಚರ್ಚೆ ನಡೆಯಿತು. ಈ ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಯಾವ ಕಾರಣ ಮತ್ತು ಉದ್ದೇಶದಿಂದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ 20 ಗ್ರೇಸ್ ಮಾರ್ಕ್ಸ್ ನೀಡಿದ್ದೀರಿ? ಗ್ರೇಸ್ ಮಾರ್ಕ್ಸ್ ನೀಡಲು ಯಾರು ಹೇಳಿದ್ದು ಎಂಬುದಾಗಿ ಶಿಕ್ಷಣ ಇಲಾಖೆಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಡಿಸಿಎಂ ಮಾತಿಗೆ ಸಿಎಂ ಸಿದ್ಧರಾಮಯ್ಯ ಕೂಡ ಸಹಮತ ವ್ಯಕ್ತ ಪಡಿಸಿದರು. ವಿದ್ಯಾರ್ಥಿಗಳು ಅವರ ಅರ್ಹತೆ…
ಧನ, ಹೆಸರು, ಕೀರ್ತಿ, ಅಂತಸ್ತು ಮುಂತಾದ ಸಕಲ ಭಾಗ್ಯಗಳನ್ನು ಪಡೆಯಲು ಬ್ರಾಹ್ಮೀ ಮುಹೂರ್ತದ ಸಮಯದಲ್ಲಿ ಮಾತ್ರ ಈ ಲಕ್ಷ್ಮೀ ಮಂತ್ರವನ್ನು 21 ದಿನಗಳ ಕಾಲ ಪಠಿಸಿ. ನೀವು ಎಂದಿಗೂ ನಿರೀಕ್ಷಿಸದ ಸಂಪತ್ತು ಮತ್ತು ಸಮೃದ್ಧಿಯ ಜೀವನವನ್ನು ನೀವು ಬದುಕಬಹುದು. ಜೀವನದಲ್ಲಿ ಪ್ರತಿಯೊಬ್ಬ ವ್ಯಕ್ತಿಯೂ ಹಣ, ಹೆಸರು, ಕೀರ್ತಿ, ಅಂತಸ್ತು ಹೀಗೆ ಎಲ್ಲರ ಮುಂದೆ ಗೌರವದಿಂದ ಬಾಳಲು ಬಯಸುತ್ತಾರೆ ಮತ್ತು ಅದಕ್ಕಾಗಿ ನಾವು ಪ್ರತಿದಿನ ಮಾಡಬಹುದಾದ ಎಲ್ಲಾ ಕೆಲಸಗಳು ಪ್ರಯತ್ನ ಮತ್ತು ಹೋರಾಟವಾಗಿದೆ. ಎಷ್ಟೇ ಪ್ರಯತ್ನ ಪಟ್ಟರೂ ಎಲ್ಲರೂ ಈ ರೀತಿ ಬದುಕಲು ಸಾಧ್ಯವಿಲ್ಲ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ…
ದಕ್ಷಿಣ ಕನ್ನಡ: ಜಿಲ್ಲೆಯ ಹೆಸರಾಂತ ಸ್ವ-ಉದ್ಯೋಗ ಸಂಸ್ಥೆ ಉಜಿರೆಯ ರುಡ್ ಸೆಟ್ ಸಂಸ್ಥೆಯಿಂದ ವಿವಿಧ ಉಚಿತ ತರಬೇತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಉಜಿರೆಯ ರುಡ್ ಸೆಟ್ ಸಂಸ್ಥೆಯಿಂದ ಮಾಹಿತಿ ನೀಡಿದ್ದು, ಮುಂದಿನ ದಿನಗಳಲ್ಲಿ ನಡೆಯಲಿರುವ ಉಚಿತ ಸ್ವ ಉದ್ಯೋಗ ತರಬೇತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ ಎಂದಿದೆ. ಈ ಉಚಿತ ತರಬೇತಿಗೆ ಅರ್ಜಿ ಆಹ್ವಾನ ಕಂಪ್ಯೂಟರ್ ಡಿಟಿಪಿ- ದಿನಾಂಕ 27-05-2024 ರಿಂದ 10-07-2024ರವರೆಗೆ 45 ದಿನಗಳು ಮಹಿಳೆಯರಿಗೆ ವಸ್ತ್ರ ವಿನ್ಯಾಸ ( ಟೈಲರಿಂಗ್)- ದಿನಾಂಕ 30-05-2024ರಿಂದ 28-06-2024ರವರೆಗೆ 30 ದಿನಗಳು. ಪೋಟೋಗ್ರಫಿ ಮತ್ತು ವೀಡಿಯೋಗ್ರಫಿ – ದಿನಾಂಕ 11-06-2024ರಿಂದ 10-07-2024ರವರೆಗೆ 30 ದಿನಗಳು. ಕಂಪ್ಯೂಟರ್ ಟ್ಯಾಲಿ ( ಅಕೌಂಟಿಂಗ್) – ದಿನಾಂಕ 11-07-2024ರಿಂದ 09-08-2024ರವರೆಗೆ 30 ದಿನಗಳು. ಊಟ ಮತ್ತು ವಸತಿ ಸಂಪೂರ್ಣ ಉಚಿತ ಈ ಮೇಲ್ಕಂಡ ತರಬೇತಿಗಳು ಉಚಿತವಾಗಿವೆ. ಈ ತರಬೇತಿಗೆ ಆಯ್ಕೆಯಾದಂತ ಅರ್ಹರಿಗೆ, ತರಬೇತಿಯ ಸಂದರ್ಭದಲ್ಲಿ ಊಟ ಮತ್ತು ವಸತಿ ಉಚಿತವಾಗಿರುತ್ತದೆ. ವಯೋಮಿತಿ ಈ ಸ್ವ ಉದ್ಯೋಗ…
ಬೆಂಗಳೂರು: ಬಿಬಿಎಂಪಿ ತೆರಿಗೆ ಬಾಕಿ ಉಳಿಸಿಕೊಂಡ ಮಲ್ಲೇಶ್ವರಂನಲ್ಲಿರುವಂತ ಮಂತ್ರಿಮಾಲ್ ಗೆ ಬೀಗ ಜಡಿಯಲಾಗಿದೆ. ಈ ಬಗ್ಗೆ ಕಿಡಿಕಾರಿರುವಂತ ಬಿಜೆಪಿ ವಕ್ತಾರ ಪ್ರಕಾಶ್ ಅವರು, BBMP ಕಂದಾಯ ಇಲಾಖೆಯ ಅಧಿಕಾರಿಗಳು ಉಪಮುಖ್ಯಮಂತ್ರಿಗಳ ಮನದಾಸೆಯನ್ನು ನೆರವೇರಿಸಿ ಲೂಲು ಮಾಲ್ ಸೇಲ್ಸ್ ಮನ್ ಗಳಾಗಿ ಸೇವೆ ಸಲ್ಲಿಸುತ್ತಿದ್ದಾರೆ ಎಂದಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಡಿ.ಕೆ.ಶಿವಕುಮಾರ್ ಗ್ಲೋಬಲ್ ಮಾಲ್ ವರ್ಸಸ್ ಮಂತ್ರಿ ಮಾಲ್ ಲುಲು ಮಾಲ್ ಎಂದೂ ಕರೆಯುವ ಡಿಕೆಶಿ ಮಾಲ್ ಓಕಳೀಪುರದ ಬಳಿ ಉದ್ಘಾಟನೆಯಾದ ತರುವಾಯ ಕಿಮೀ ದೂರದಲ್ಲಿರುವ ಮಂತ್ರಿ ಮಾಲ್ ಗೆ ಗ್ರಹಚಾರ ಕೆಟ್ಟಿತು. ಮಂತ್ರಿ ಮಾಲ್ ಕಂಪನಿಯು ನಾನಾ ಆರ್ಥಿಕ ಸಂಕಟಕ್ಕೆ ಸಿಲುಕಿಕೊಂಡು ಆಸ್ತಿ ತೆರಿಗೆ ಪಾವತಿ ಮಾಡುವುದಕ್ಕೆ ಪರದಾಡ ತೊಡಗಿತು ಎಂದಿದ್ದಾರೆ. ಲೂಲು ಮಾಲ್ ಬರುವ ಮೊದಲು ಕೂಡಾ ಆಸ್ತಿ ತೆರಿಗೆ ನೀಡಲು ಮಂತ್ರಿ ಮಾಲ್ ಬಾಕಿ ಉಳಿಸಿಕೊಂಡಿತ್ತು. ಆದರೆ ಆಗ ಡಿಕೆಶಿ ಒಡತನದ ಮಾಲ್ ತೆರದಿರಲಿಲ್ಲ ಹೀಗಾಗಿ ಬಿಬಿಎಂಪಿಗೆ ಅದೊಂದು ಬಾಗಿಲು ಮುಚ್ಚಿಸುವಷ್ಟು ಅಪರಾಧವೆನಿಸಲಿಲ್ಲ. ಕಳೆದ…
ಬೆಂಗಳೂರು: ನಿನ್ನೆ ಮಾಜಿ ಸಚಿವ ಹೆಚ್.ಡಿ ರೇವಣ್ಣಗೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು. ಇಂದು ಮಧ್ಯಂತರ ಜಾಮೀನು ಅವಧಿ ಮುಕ್ತಾಯಗೊಂಡ ಹಿನ್ನಲೆಯಲ್ಲಿ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯವು ಜಾಮೀನು ಅರ್ಜಿಯ ವಿಚಾರಣೆ ನಡೆಸಿತು. ವಾದ-ಪ್ರತಿವಾದ ಆಲಿಸಿದ ನಂತ್ರ, ಮೇ.20ಕ್ಕೆ ಹೆಚ್.ಡಿ ರೇವಣ್ಣ ಅವರ ಜಾಮೀನು ಅರ್ಜಿಯ ಆದೇಶ ಕಾಯ್ದಿರಿಸಿದೆ. ಅಲ್ಲದೇ ಮೇ.20ರ ಸೋಮವಾರದವರೆಗೆ ಮಧ್ಯಂತರ ಜಾಮೀನು ಮುಂದುವರಿಸಿದೆ. ಜೆಡಿಎಸ್ ಶಾಸಕ ಹೆಚ್.ಡಿ ರೇವಣ್ಣ ವಿರುದ್ಧ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ನಿನ್ನೆ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ಒಂದು ದಿನದ ಮಟ್ಟಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು. ಇಂದು ಜಾಮೀನು ಅವಧಿ ಮುಕ್ತಾಯಗೊಂಡ ಹಿನ್ನಲೆಯಲ್ಲಿ ನ್ಯಾಯಪೀಠವು, ಅರ್ಜಿಯ ವಿಚಾರಣೆ ನಡೆಸಿತು. ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ನ ನ್ಯಾಯಪೀಠದ ಮುಂದೆ ಎಸ್ಐಟಿ ಪರ ಎಸ್ ಪಿಪಿ ಜಾಯ್ನಾ ಕೊಥಾರಿ ಅವರು ಆರಂಭದಲ್ಲಿ ವಾದ ಮಂಡಿಸಿದರು. ಅವರು ಐಪಿಸಿ ಸೆಕ್ಷನ್ 436ರಡಿ…
ಶಿವಮೊಗ್ಗ : ಎಂ.ಆರ್.ಎಸ್. ಶಿವಮೊಗ್ಗದ 220 ಕೆವಿ ವಿವಿ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಇರುವುದರಿಂದ ಮೇ 19 ರಂದು ಬೆಳಗ್ಗೆ 09.00 ರಿಂದ ಸಂಜೆ 5.00ರವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಈ ಕುರಿತಂತೆ ಮೆಸ್ಕಾಂ ಮಾಹಿತಿ ಹಂಚಿಕೊಂಡಿದ್ದು, ಮೇ.19ರಂದು ಹೊಳೆಬೆನವಳ್ಳಿ, ದೊಡ್ಡತಾಂಡ, ಹೊಸಮನೆತಾಂಡ, ಪಿಳ್ಳಂಗಿರಿ, ಜಾವಳ್ಳಿ, ತಿರುವಳ್ಳಿ, ಅಬ್ಬರಘಟ್ಟ, ತರಗನಹಳ್ಳಿ ಕ್ರಾಸ್, ಹಾರೋಬೆನವಳ್ಳಿ, ಹಾರೋಬೆನವಳ್ಳಿ ತಾಂಡ, ಗೌಡನಾಯ್ಕನಹಳ್ಳಿ, ಬಿ.ಬೀರನಹಳ್ಳಿ, ಹೊಯ್ಸನಹಳ್ಳಿ, ಯಲವಟ್ಟಿ, ಹಸೂಡಿ, ಹಸೂಡಿ ಫಾರಂ, ವೀರಭದ್ರಕಾಲೋನಿ, ಹಕ್ಕಿಪಿಕ್ಕಿ ಕ್ಯಾಂಪ್, ಚಿಕ್ಕಮಟ್ಟಿ, ಅಬ್ಬರಘಟ್ಟ ಪವರ್ ಕಟ್ ಆಗಲಿದೆ ಎಂದಿದೆ. ಇನ್ನೂ ಬಂಗಾಪ್ಪ ಕಾಲೋನಿ, ಜಿ.ಜಿ.ಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ, ಜಯಂತಿಗ್ರಾಮ, ಹೊನ್ನವಿಲೆ, ಮೆ|| ರಾಮಮೂರ್ತಿ ಮಿನರಲ್ಸ್, ಜಿಲ್ಲಾ ಕೇಂದ್ರ ಕಾರಾಗೃಹ, ಕಿಯೋನಿಕ್ಸ್ ಐಟಿಪಾರ್ಕ್, ಮಲ್ನಾಡ್ ಆಸ್ಪತ್ರೆ, ಕೆ.ಎಸ್.ಆರ್.ಪಿ.ಕಾಲೋನಿ, ನವುಲೆಬಸವಾಪುರ, ಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರಕೊಪ್ಪ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. https://kannadanewsnow.com/kannada/good-news-for-cancer-patients-from-state-government-now-treatment-under-yashaswini-scheme/…
ಬೆಂಗಳೂರು: ರಾಜ್ಯದ ಬಡವರ್ಗದವರಿಗೆ ಉಚಿತ ಚಿಕಿತ್ಸಾ ಸೌಲಭ್ಯಕ್ಕಾಗಿ ಯಶಸ್ವಿನಿಯ ಯೋಜನೆಯನ್ನು ಸರ್ಕಾರ ಜಾರಿಗೆ ತಂದಿದೆ. ಈ ಯೋಜನೆಯಡಿ ಈಗಾಗಲೇ ಹಲವು ರೋಗಗಳಿಗೆ ಚಿಕಿತ್ಸೆಯನ್ನು ಉಚಿತವಾಗಿ ನೀಡುವ ಸೌಲಭ್ಯವನ್ನು ಒದಗಿಸುತ್ತಿದೆ. ಈಗ ಮುಂದುವರೆದು ರಾಜ್ಯದ ಕ್ಯಾನ್ಸರ್ ಪೀಡಿತರಿಗೆ ಗುಡ್ ನ್ಯೂಸ್ ಎನ್ನುವಂತೆ ಯಶಸ್ವಿನಿ ಯೋಜನೆಯಡಿ ಕ್ಯಾನ್ಸರ್ ರೋಗಿಗಳಿಗೆ ಕಿಮೋಥೆರಪಿ ಚಿಕಿತ್ಸೆ ನೀಡಲು ಸೇರ್ಪಡೆ ಮಾಡಿದೆ. ಕ್ಯಾನ್ಸರ್ ಬಂದಿದೆ ಅಂದ್ರೆ ಸಾವೇ ಮುಂದಿನ ದಾರಿ ಅನ್ನೋ ಮಾತಿದೆ. ಈ ರೋಗಕ್ಕೆ ಚಿಕಿತ್ಸೆ ಪಡೆಯುವುದಂತೂ ಬಡ ವರ್ಗದ ಜನರಿಗೆ ಕನಸಿನ, ಆರ್ಥಿಕ ಹೊರೆಯ ಮಾತೇ ಸರಿ. ಆದ್ರೇ ರಾಜ್ಯ ಸರ್ಕಾರ ಯಶಸ್ವಿನಿ ಯೋಜನೆಯಡಿ ಕ್ಯಾನ್ಸರ್ ರೋಗಿಗಳಿಗೆ ನೀಡುವಂತ ಕಿಮೋಥೆರಪಿ ಚಿಕಿತ್ಸೆಯನ್ನು ನೀಡಲು, ಈ ಯೋಜನೆಗೆ ಸೇರ್ಪಡೆ ಮಾಡಿದೆ. ಈಗಾಗಲೇ ರಾಜ್ಯದಲ್ಲಿ 474 ಆಸ್ಪತ್ರೆಗಳಲ್ಲಿ ಬಡ ರೋಗಿಗಳಿಗೆ ಯಶಸ್ವಿನಿ ನೆಟ್ವರ್ಕ್ ಅಡಿಯಲ್ಲಿ ವಿವಿಧ ರೋಗಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಬಡವರ ಆರ್ಥಿಕ ಹೊರೆ ನೀಗಿಸೋ ನಿಟ್ಟಿನಲ್ಲಿ ಈಗ ಕ್ಯಾನ್ಸರ್ ರೋಗದ ಚಿಕಿತ್ಸೆಯಾಗಿರುವಂತ ಕಿಮೋಥೆರಪಿಯನ್ನು ಯಶಸ್ವಿನಿ ಯೋಜನೆಯಡಿ ಉಚಿತವಾಗಿ ನೀಡೋದಕ್ಕೆ…
BREAKING: ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೇನ್ ಸಲ್ಲಿಸಿದ್ದ ಜಾಮೀನು ಅರ್ಜಿ ಸುಪ್ರೀಂ ಕೋರ್ಟ್ ವಜಾ | Hemant Soren
ನವದೆಹಲಿ: ಚುನಾವಣಾ ಪ್ರಚಾರದ ಉದ್ದೇಶಗಳಿಗಾಗಿ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಕೋರಿ ಜಾರ್ಖಂಡ್ನ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಸಲ್ಲಿಸಿದ್ದ ಮನವಿಯನ್ನು ಪರಿಗಣಿಸಲು ಸುಪ್ರೀಂ ಕೋರ್ಟ್ ಶುಕ್ರವಾರ (ಮೇ 17) ನಿರಾಕರಿಸಿದೆ. ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರನ್ನೊಳಗೊಂಡ ನ್ಯಾಯಪೀಠವು ಮುಂದಿನ ಮಂಗಳವಾರ (ಮೇ 21) ಸುಪ್ರೀಂ ಕೋರ್ಟ್ನ ರಜಾಕಾಲದ ಪೀಠದ ಮುಂದೆ ಈ ವಿಷಯವನ್ನು ಪಟ್ಟಿ ಮಾಡಲು ನಿರ್ದೇಶನ ನೀಡಿತು. ಭೂ ಹಗರಣಕ್ಕೆ ಸಂಬಂಧಿಸಿದಂತೆ ಜನವರಿ 31 ರಂದು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಜಾರ್ಖಂಡ್ ಹೈಕೋರ್ಟ್ ವಜಾಗೊಳಿಸಿದ್ದನ್ನು ಪ್ರಶ್ನಿಸಿ ಸೊರೆನ್ ಸುಪ್ರೀಂ ಕೋರ್ಟ್ ಅನ್ನು ಸಂಪರ್ಕಿಸಿದ್ದಾರೆ. ಇಂದು ಈ ವಿಷಯವನ್ನು ಕೈಗೆತ್ತಿಕೊಂಡಾಗ, ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ.ರಾಜು (ಇಡಿ ಪ್ರತಿನಿಧಿ) ಸಮಯ ಕೋರಿದರು. ಮಧ್ಯಂತರ ಜಾಮೀನು ಅರ್ಜಿಯ ಬಗ್ಗೆ ನ್ಯಾಯಪೀಠ ಎಎಸ್ಜಿಯನ್ನು ಕೇಳಿತು. ಇದಕ್ಕೆ ಪ್ರತಿಕ್ರಿಯಿಸಿದ ಎಎಸ್ಜಿ, ಸೊರೆನ್ ಅವರನ್ನು ಬಹಳ ಹಿಂದೆಯೇ (ಜನವರಿ 31) ಬಂಧಿಸಲಾಯಿತು. ಅವರ ನಿಯಮಿತ…
ರಾಮನಗರ: ಜಿಲ್ಲೆಯಲ್ಲಿ ಈಜಲು ಕಲ್ಲಿನ ಹೊಂಡಕ್ಕೆ ತೆರಳಿದ್ದಂತ ಮೂವರು ಮಕ್ಕಳು ನೀರುಪಾಲಾಗಿರೋ ಘಟನೆ ನಡೆದಿದೆ. ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ರಾಮನಗರ ತಾಲೂಕಿನ ಅಚ್ಚಲು ಗ್ರಾಮದ ಬೆಟ್ಟದ ಮೇಲಿರುವಂತ ತಗ್ಗು ಪ್ರದೇಶದಲ್ಲಿ ನೀರು ನಿಂತಿತ್ತು. ಈ ನೀರಿನಲ್ಲಿ ಈಜಾಡೋದಕ್ಕಾಗಿ ಮೂವರು ಮಕ್ಕಳು ತೆರಳಿದ್ದರು. ಹೀಗೆ ಈಜಲು ತೆರಳಿದ್ದಂತ ಮೂವರು ಮಕ್ಕಳು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಈ ವಿಷಯ ತಿಳಿದು ಸ್ಥಳಕ್ಕೆ ಆಗ್ನಿಶಾಮಕ ಸಿಬ್ಬಂದಿಗಳು ಆಗಮಿಸಿ, ಮೂವರು ಮಕ್ಕಳ ಮೃತದೇಹವನ್ನು ಹುಡುಕಿ ಹೊರ ತೆಗೆಯುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಈ ಸಂಬಂಧ ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಂದಹಾಗೇ ನಿನ್ನೆಯಷ್ಟೇ ಹಾಸನದ ಅಲೂರಿನ ಮುತ್ತಿಗೆ ಗ್ರಾಮದಲ್ಲಿ ಬೇಸಿಗೆ ರಜೆ ನಿಮಿತ ನಾಲ್ವರು ಮಕ್ಕಳು ಈಜಾಡುವ ಸಲುವಾಗಿ ಕೆರೆಗೆ ಹೋಗಿ, ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದರು. ಮೃತ ಮಕ್ಕಳನ್ನು ಜೀವನ್, ಸಾತ್ವೀಕ್, ವಿಶ್ವ, ಪೃಥ್ವಿ ಎಂಬುದಾಗಿ ಗುರುತಿಸಲಾಗಿತ್ತು. ಈ ಘಟನೆ ಬೆನ್ನಲ್ಲೇ ಇಂದು ರಾಮನಗರದಲ್ಲಿ ಮೂವರು ಮಕ್ಕಳು ನೀರುಪಾಲಾಗಿದ್ದಾರೆ. https://kannadanewsnow.com/kannada/students-who-have-registered-for-sslc-exam-ii-should-note-special-class-to-be-organized-till-june-05/ https://kannadanewsnow.com/kannada/cm-siddaramaiah-orders-cancellation-of-sslc-grace-marks-from-next-year/













