Author: kannadanewsnow09

ಬೆಂಗಳೂರು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮುಡಾ ಹಗರಣ ಸಂಬಂಧ ನೀಡಿರುವಂತ ನೋಟಿಸ್ ಬಗ್ಗೆ ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯವನ್ನು ಕೈಗೊಳ್ಳಲಾಗಿದೆ. ಅದೇ ಸಿಎಂಗೆ ನೀಡಿರುವಂತ ನೋಟಿಸ್ ಹಿಂಪಡೆಯುವಂತೆ ರಾಜ್ಯಪಾಲರಿಗೆ ಮನವಿ ಮಾಡುವ ನಿರ್ಣಯವನ್ನು ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ. ಈ ಬಗ್ಗೆ ವಿಧಾನಸೌಧದಲ್ಲಿ ಇಂದು ರಾಜ್ಯ ಸಚಿವ ಸಂಪುಟ ಸಭೆ ಮುಕ್ತಾಯದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಡಿಸಿಎಂ ಡಿ.ಕೆ ಶಿವಕುಮಾರ್ ಅವರು, ರಾಜ್ಯಪಾಲರು ಸಿಎಂ ಸಿದ್ಧರಾಮಯ್ಯ ಅವರಿಗೆ ನೀಡಿರುವಂತ ನೋಟಿಸ್ ಬಗ್ಗೆ ಚರ್ಚಿಸಲಾಗಿದೆ.  ರಾಜ್ಯಪಾಲರು ಸಿಎಂಗೆ ನೋಟಿಸ್ ನೀಡುವ ಮೂಲಕ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದ್ದಾರೆ ಎಂದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸಿಎಂ ಸಿದ್ಧರಾಮಯ್ಯ ಅವರಿಗೆ ನೋಟಿಸ್ ನೀಡಿದ್ದು ಸರಿಯಲ್ಲ. ಇಂದಿನ ಸಚಿವ ಸಂಪುಟ ಸಭೆಯಲ್ಲಿ ಈ ವಿಷಯವಾಗಿಯೇ ಎಲ್ಲರೂ ಸೇರಿ ನಿರ್ಣಯ ಮಾಡಿದ್ದೇವೆ. ಅದೇ ಸಿಎಂ ಸಿದ್ಧರಾಮಯ್ಯ ಅವರಿಗೆ ರಾಜ್ಯಪಾಲರು ನೀಡಿರುವಂತ ನೋಟಿಸ್ ಹಿಂಪಡೆಯುವಂತೆ ಮನವಿ ಮಾಡುವಂತ ನಿರ್ಣಯವಾಗಿದೆ ಎಂದು ಅವರು ಹೇಳಿದರು.…

Read More

ನವದೆಹಲಿ: 2000 ರೂಪಾಯಿ ಮುಖಬೆಲೆಯ ನೋಟುಗಳಲ್ಲಿ ( Rs 2000 denomination banknotes ) ಶೇಕಡಾ 97.92 ರಷ್ಟು ಬ್ಯಾಂಕಿಂಗ್ ವ್ಯವಸ್ಥೆಗೆ ಮರಳಿದೆ. ಹಿಂತೆಗೆದುಕೊಂಡ 7,409 ಕೋಟಿ ರೂ.ಗಳ ನೋಟುಗಳು ಮಾತ್ರ ಇನ್ನೂ ಸಾರ್ವಜನಿಕರ ಬಳಿ ಇವೆ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (Reserve Bank of India -RBI)  ಗುರುವಾರ ತಿಳಿಸಿದೆ. ಮೇ 19, 2023 ರಂದು ಆರ್ಬಿಐ 2000 ರೂ ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂತೆಗೆದುಕೊಳ್ಳುವುದಾಗಿ ಘೋಷಿಸಿತು. ಮೇ 19, 2023 ರಂದು ವ್ಯವಹಾರದ ಕೊನೆಯಲ್ಲಿ 3.56 ಲಕ್ಷ ಕೋಟಿ ರೂ.ಗಳಷ್ಟಿದ್ದ ಚಲಾವಣೆಯಲ್ಲಿರುವ 2000 ರೂ.ಗಳ ನೋಟುಗಳ ಒಟ್ಟು ಮೌಲ್ಯವು ಜುಲೈ 31, 2024 ರಂದು ವ್ಯವಹಾರದ ಕೊನೆಯಲ್ಲಿ 7,409 ಕೋಟಿ ರೂ.ಗೆ ಇಳಿದಿದೆ. ಹೀಗಾಗಿ, ಮೇ 19, 2023 ರ ವೇಳೆಗೆ ಚಲಾವಣೆಯಲ್ಲಿದ್ದ 2000 ರೂ.ಗಳ ನೋಟುಗಳಲ್ಲಿ ಶೇಕಡಾ 97.92 ರಷ್ಟು ಹಿಂತಿರುಗಿದೆ ಎಂದು ಆರ್ಬಿಐ ಹೇಳಿಕೆಯಲ್ಲಿ ತಿಳಿಸಿದೆ. ಅಕ್ಟೋಬರ್ 7, 2023 ರವರೆಗೆ ದೇಶದ…

Read More

ವಾಲ್ ಸ್ಟ್ರೀಟ್ ಜರ್ನಲ್ ವರದಿಗಾರ ಇವಾನ್ ಗೆರ್ಶ್ಕೋವಿಚ್ ಮತ್ತು ಅಮೆರಿಕದ ಮಾಜಿ ನೌಕಾಪಡೆಯ ಪಾಲ್ ವೀಲನ್ ಅವರನ್ನು ರಷ್ಯಾ ಬಿಡುಗಡೆ ಮಾಡಲಿದೆ ಎಂದು ಸುದ್ದಿ ಸಂಸ್ಥೆ ಬ್ಲೂಮ್ಬರ್ಗ್ ಗುರುವಾರ ವರದಿ ಮಾಡಿದೆ. ಬೇಹುಗಾರಿಕೆ ಆರೋಪದ ಮೇಲೆ ಅಮೆರಿಕದ ಮಾಜಿ ಮೆರೈನ್ ಪಾಲ್ ವೀಲನ್ ಮತ್ತು ವಾಲ್ ಸ್ಟ್ರೀಟ್ ಜರ್ನಲ್ ವರದಿಗಾರ ಇವಾನ್ ಗೆರ್ಶ್ಕೋವಿಚ್ ಅವರನ್ನು ರಷ್ಯಾದಲ್ಲಿ ಬಂಧಿಸಲಾಗಿತ್ತು. ಇಂತಹ ಅವರನ್ನು ಇಂದು ರಷ್ಯಾ ಬಿಡುಗಡೆ ಮಾಡಿದೆ. https://kannadanewsnow.com/kannada/democracy-in-the-state-is-dangerous-attempts-are-being-made-to-trouble-cm-dy-cm-dk-shivakumar/ https://kannadanewsnow.com/kannada/beware-of-booking-hsrp-number-plate-rs-95000-seized-from-cyber-fraudsters-the-lost-man/

Read More

ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ಕಿರುಕುಳ ನೀಡುವ ಕೆಲಸ ಮಾಡುತ್ತಿದೆ. ಪ್ರಜಾಪ್ರಭುತ್ವಕ್ಕೆ ಮಾರಕವಾಗುವಂತ ಪರಿಸ್ಥಿತಿ ರಾಜ್ಯದಲ್ಲಿದೆ. ಸಿಎಂ ಸಿದ್ಧರಾಮಯ್ಯಗೆ ತೊಂದರೆ ಕೊಡಲು ಯತ್ನ ನಡೆಯುತ್ತಿದೆ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಕಿಡಿಕಾರಿದರು. ಇಂದು ವಿಧಾನಸೌಧದಲ್ಲಿ ರಾಜ್ಯ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಕಾನೂನು, ಸಂವಿಧಾನಕ್ಕೆ ನಾವು ಗೌರವ ಕೊಡುತ್ತೇವೆ. ಗೌರವಾನ್ವಿತ ರಾಜ್ಯಪಾಲರು ನೋಟಿಸ್ ನೀಡಿದ್ದಾರೆ. ಪ್ರಜಾಪ್ರಭುತ್ವಕ್ಕೆ ಮಾರಕವಾಗುವಂತ ಪರಿಸ್ಥಿತಿ ಇದೆ ಎಂದರು. ಬಹುಮತದಿಂದ ಆಯ್ಕೆಯಾದ ಸಿಎಂಗೆ ತೊಂದರೆ ಕೊಡಲು ಯತ್ನಿಸುತ್ತಿದ್ದಾರೆ. ಸಿದ್ದರಾಮಯ್ಯ ಅವರು ಸಿಎಂ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದಾರೆ. ಕೇಂದ್ರ ಸರ್ಕಾರ ಪ್ರಜಾಪ್ರಭುತ್ವದ ಕಗ್ಗೊಲೆಯನ್ನು ಮಾಡುತ್ತಿದೆ. ರಾಜ್ಯಪಾಲರ ಪತ್ರಕ್ಕೆ ಸಿಎಸ್ ಉತ್ತರಿಸಿದ್ದಾರೆ. ಸಿದ್ಧರಾಮಯ್ಯ ಕೂಡ ಗೌರವ ಕೊಟ್ಟಿದ್ದಾರೆ ಎಂದರು. https://kannadanewsnow.com/kannada/bangladesh-bans-radical-islamist-group-jamaat-e-islami/ https://kannadanewsnow.com/kannada/beware-of-booking-hsrp-number-plate-rs-95000-seized-from-cyber-fraudsters-the-lost-man/

Read More

ಕೇರಳ: ವಯನಾಡಿನಲ್ಲಿ ಉಂಟಾದಂತ ಭೂ ಕುಸಿತದಿಂದಾಗಿ ಮೃತಪಟ್ಟವರ ಸಂಖ್ಯೆ 293ಕ್ಕೆ ಏರಿಕೆಯಾಗಿದೆ. ಅಲ್ಲದೇ 200ಕ್ಕೂ ಹೆಚ್ಚು ಜನರು ನಾಪತ್ತೆಯಾಗಿರುವುದಾಗಿ ತಿಳಿದು ಬಂದಿದೆ. ವಯನಾಡಿನಲ್ಲಿ ಸಂಭವಿಸಿದಂತ ಭೂ ಕುಸಿತದಲ್ಲಿ ಮೂರು ಊರುಗಳೇ ನಾಪತ್ತೆಯಾಗಿವೆ. ಈ ಹಳ್ಳಿಗಳಲ್ಲಿನ 293 ಮಂದಿ ಈವರೆಗೆ ಸಾವನ್ನಪ್ಪಿದ್ದಾರೆ. ಅಲ್ಲದೇ ಈವರೆಗೆ ಸಿಕ್ಕ ಮಾಹಿತಿಯಂತೆ 200ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ. ಅವರ ಪತ್ತೆಗಾಗಿ ಶೋಧಕಾರ್ಯಾಚರಣೆ ಮುಂದುವರೆದಿದೆ. ಇದೇ ಸಂದರ್ಭದಲ್ಲಿ ಇಂದು ವಯನಾಡಿನ ಭೂ ಕುಸಿತ ಸ್ಥಳಕ್ಕೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಅವರು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಈ ವೇಳೆ ಮಾತನಾಡಿದಂತ ರಾಹುಲ್ ಗಾಂಧಿ ಅವರು, ನಮ್ಮ ತಂದೆಯನ್ನು ಕಳೆದುಕೊಂಡಾಗಲೂ ಇಷ್ಟು ದುಃಖವಾಗಿರಲಿಲ್ಲ. ಅಷ್ಟು ದುಃಖ ನನಗೆ ಆಗುತ್ತಿದೆ. ಇಲ್ಲಿನ ಚಿತ್ರಣವನ್ನು ಕಂಡು ನಾನು ಭಾವುಕನಾಗಿದ್ದೇನೆ ಎಂದರು. https://kannadanewsnow.com/kannada/bangladesh-bans-radical-islamist-group-jamaat-e-islami/ https://kannadanewsnow.com/kannada/beware-of-booking-hsrp-number-plate-rs-95000-seized-from-cyber-fraudsters-the-lost-man/

Read More

ದುಡಿದ ಹಣ ಕುಟುಂಬದ ಖರ್ಚಿಗೆ ಸಾಕಾಗದೇ ಇದ್ದಾಗ ಮತ್ತು ಕೆಲವು ಅನಿವಾರ್ಯ ಬಿಕ್ಕಟ್ಟುಗಳು ಎದುರಾದಾಗ ಮಾತ್ರ ಸಾಲ ಮಾಡಬೇಕಾದ ಅನಿವಾರ್ಯತೆ ಎದುರಾಗುತ್ತದೆ. ಹಾಗಾಗಿ ಸಾಲ ಮಾಡುವುದು ಸಹಜ. ಅದನ್ನು ಹತೋಟಿಯಲ್ಲಿಟ್ಟುಕೊಂಡು ಸದ್ಬಳಕೆ ಮಾಡಿಕೊಳ್ಳಬೇಕು ಎಂಬುದು ಹಿರಿಯರ ಅಪ್ಪಣೆ. ನೀವು ಹಸಿವಿನಿಂದ ಮಲಗಬಹುದು ಮತ್ತು ಸಾಲದಿಂದ ಅಲ್ಲ ಎಂಬುದು ಆಧ್ಯಾತ್ಮಿಕತೆಯ ಸಲಹೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಇಲ್ಲಿ ಪರಿಹಾರ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ,…

Read More

ಬಾಂಗ್ಲಾದೇಶ: ಸರ್ಕಾರಿ ಉದ್ಯೋಗ ಕೋಟಾಗಳ ವಿರುದ್ಧ ಇತ್ತೀಚೆಗೆ ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಂದರ್ಭದಲ್ಲಿ ಅಶಾಂತಿಯನ್ನು ಸೃಷ್ಟಿಸಿದ್ದಕ್ಕಾಗಿ ಮತ್ತು ಹಿಂಸಾಚಾರದಲ್ಲಿ ಭಾಗವಹಿಸಿದ್ದಕ್ಕಾಗಿ ತೀವ್ರಗಾಮಿ ಇಸ್ಲಾಮಿಕ್ ಗುಂಪು ಜಮಾತ್-ಎ-ಇಸ್ಲಾಮಿ ಮತ್ತು ಅದರ ಯುವ ವಿಭಾಗ ಇಸ್ಲಾಮಿ ಛತ್ರ ಶಿಬಿರ್ ಅನ್ನು ಬಾಂಗ್ಲಾದೇಶ ಸರ್ಕಾರ ಗುರುವಾರ ನಿಷೇಧಿಸಿದೆ. ತಾರತಮ್ಯದ ವಿರುದ್ಧ ವಿದ್ಯಾರ್ಥಿಗಳು ಕಳೆದ ತಿಂಗಳು ರಾಷ್ಟ್ರವ್ಯಾಪಿ ರ್ಯಾಲಿಗಳನ್ನು ನಡೆಸಿದರು. ಇದು ಪೊಲೀಸ್ ದಬ್ಬಾಳಿಕೆ ಮತ್ತು ಕನಿಷ್ಠ 206 ಜನರ ಸಾವಿಗೆ ಕಾರಣವಾಯಿತು. ಬಾಂಗ್ಲಾದೇಶದ ಅತಿದೊಡ್ಡ ಇಸ್ಲಾಮಿಕ್ ಗುಂಪಾದ ತೀವ್ರಗಾಮಿ ಇಸ್ಲಾಮಿಕ್ ಗುಂಪು ಪ್ರತಿಭಟನೆಯನ್ನು ಹೈಜಾಕ್ ಮಾಡಿದೆ ಮತ್ತು ಲೂಟಿ, ಹಿಂಸಾಚಾರ ಮತ್ತು ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಮಾಡಿದೆ ಎಂದು ಶೇಖ್ ಹಸೀನಾ ನೇತೃತ್ವದ ಸರ್ಕಾರ ಆರೋಪಿಸಿದೆ. ಸರ್ಕಾರವು ಕಾರ್ಯನಿರ್ವಾಹಕ ಆದೇಶವನ್ನು ಹೊರಡಿಸಿದ ನಂತರ ಬಾಂಗ್ಲಾದೇಶದ ಭಯೋತ್ಪಾದನಾ ವಿರೋಧಿ ಕಾಯ್ದೆಯ ಸೆಕ್ಷನ್ 18 (1) ರ ಅಡಿಯಲ್ಲಿ ಈ ಗುಂಪು ಮತ್ತು ಅದರ ಯುವ ವಿಭಾಗವನ್ನು ನಿಷೇಧಿಸಲಾಯಿತು. “ಈ ಆದೇಶವನ್ನು ಅಂಗೀಕರಿಸಿದ ನಂತರ ಈ ಸಂಘಟನೆಗಳು ರಾಜಕೀಯ…

Read More

ನವದೆಹಲಿ: ಸಣ್ಣಪುಟ್ಟ ವೈಮನಸ್ಸುಗಳನ್ನು ಸರಿಪಡೆಸಿಕೊಂಡು ಶನಿವಾರ ಬೆಳಿಗ್ಗೆ 8.30ಕ್ಕೆ ಪಾದಯಾತ್ರೆಯನ್ನು ಬೆಂಗಳೂರಿನಿಂದ ಆರಂಭಿಸಲಾಗುತ್ತದೆ. ಈ ಪಾದಯಾತ್ರೆಯನ್ನು ಕೇಂದ್ರ ಸಚಿವ ಕುಮಾರಸ್ವಾಮಿಯೇ ಚಾಲನೆ ನೀಡಲಿದ್ದಾರೆ ಎಂಬುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತಿಳಿಸಿದ್ದಾರೆ. ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಶನಿವಾರ ಮೈಸೂರಿಗೆ ಬೆಂಗಳೂರಿನಿಂದ ಪಾದಯಾತ್ರೆ ಆರಂಭಗೊಳ್ಳಲಿದೆ. ಸಣ್ಣಪುಟ್ಟ ಗೊಂದಲ ಇದ್ದರೂ ಪಾದಯಾತ್ರೆ ನಡೆಯುತ್ತದೆ ಎಂಬುದಾಗಿ ಹೇಳಿದರು. ಶನಿವಾರ ಬೆಳಿಗ್ಗೆ 8.30ಕ್ಕೆ ಪಾದಯಾತ್ರೆ ಆರಂಭವಾಗಲಿದೆ. ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ನಡೆಯುತ್ತೆ. ಕುಮಾರಸ್ವಾಮಿಯೇ ಪಾದಯಾತ್ರೆಗೆ ಚಾಲನೆ ನೀಡುತ್ತಾರೆ ಎಂದರು. ಮುಡಾದಲ್ಲಿ ಭ್ರಷ್ಟಾಚಾರ ಆಗಿದ್ದನ್ನು ಸದನದಲ್ಲೇ ಸಿಎಂ ಸಿದ್ಧರಾಮಯ್ಯ ಒಪ್ಪಿಕೊಂಡಿದ್ದಾರೆ. 4 ಸಾವಿರ ಕೋಟಿ ರೂ ಬೆಲೆ ಬಾಳುವ ಸೈಟ್ ಕೊಟ್ಟಿದ್ದಾರೆ ಎಂಬುದಾಗಿ ದೆಹಲಿಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದರು. https://kannadanewsnow.com/kannada/kochi-rowdy-sheeter-hacked-to-death-in-bengaluru/ https://kannadanewsnow.com/kannada/beware-of-booking-hsrp-number-plate-rs-95000-seized-from-cyber-fraudsters-the-lost-man/

Read More

ಬೆಂಗಳೂರು: ನಗರದಲ್ಲಿ ರೌಡಿ ಶೀಟರ್ ಒಬ್ಬನನ್ನು ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿರುವಂತ ಘಟನೆ ಶೇಷಾದ್ರಿಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ರಶೀಲ್ಲಾ ಸ್ಟ್ರೀಟ್ ನಲ್ಲಿ ಇಂದು ಈ ಘಟನೆ ನಡೆದಿದೆ. ಶೇಷಾದ್ರಿಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರೌಡಿ ಶೀಟರ್ ಆಗಿದ್ದಂತ ಅಜಿತ್(27) ಎಂಬಾತನನ್ನು ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಸಂಜೆ 4.15ಕ್ಕೆ ಮನೆಯಿಂದ ಊಟ ಮಾಡಿಕೊಂಡು ಹೊರಗೆ ಬಂದಿದ್ದಂತ ರೌಡಿ ಶೀಟರ್ ಅಜಿತ್ ಮೇಲೆ ಮಾರಕಾಸ್ತ್ರಗಳಿಂದ ದುಷ್ಕರ್ಮಿಗಳು ದಾಳಿ ಮಾಡಿ, ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವುದಾಗಿ ಹೇಳಲಾಗುತ್ತಿದೆ. ಈ ವಿಷಯ ತಿಳಿದು ಕೇಂದ್ರ ವಿಭಾಗದ ಡಿಸಿಪಿ ಶೇಖರ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಕೊಲೆಯ ಹಿಂದಿನ ಕಾರಣ ಏನು ಎಂಬುದು ತಿಳಿದು ಬರಬೇಕಿದೆ. https://kannadanewsnow.com/kannada/beware-of-booking-hsrp-number-plate-rs-95000-seized-from-cyber-fraudsters-the-lost-man/ https://kannadanewsnow.com/kannada/breaking-court-extends-actor-darshans-judicial-custody-till-august-14/

Read More

ಬೆಂಗಳೂರು: ಜುಲೈ.31ರವರೆಗೆ ಬಿಬಿಎಂಪಿಯಿಂದ ಒಂದು ಬಾರಿಗೆ ಪರಿಹಾರ ಯೋಜನೆಯನ್ನು ಜಾರಿಗೊಳಿಸಲಾಗಿತ್ತು. ತೆರಿಗೆಯಲ್ಲಿ ಒಂದು ಬಾರಿಗೆ ಕಟ್ಟಿದವರಿಗೆ ವಿನಾಯ್ತಿಯನ್ನು ಘೋಷಣೆ ಮಾಡಲಾಗಿತ್ತು. ಇದಕ್ಕೆ ಭರ್ಜರಿ ರೆಸ್ಪಾನ್ಸ್ ದೊರೆತಿದ್ದು, ಬೆಂಗಳೂರಲ್ಲಿ ದಾಖಲೆಯ ಮಟ್ಟದಲ್ಲಿ ತೆರಿಗೆ ಸಂಗ್ರವಾಗಿದೆ. ಈ ಕುರಿತಂತೆ ಮಾಹಿತಿ ನೀಡಿರುವಂತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು, ತನ್ನ ವ್ಯಾಪ್ತಿಯಲ್ಲಿ ಬೇ-ಬಾಕಿ ಆಸ್ತಿ ತೆರಿಗೆ ಹಾಗೂ ಪರಿಷ್ಕೃತ ಆಸ್ತಿ ತೆರಿಗೆ ಪ್ರಕರಣಗಳಿಗೆ ಒಂದು ಬಾರಿಗೆ ಪರಿಹಾರ ( OTS) ಯೋಜನೆಯನ್ನು ಜಾರಿಗೊಳಿಸಲಾಗಿತ್ತು. ಜುಲೈ.31, 2024ರವರೆಗೆ ಅವಕಾಶ ನೀಡಲಾಗಿತ್ತು ಎಂದಿದೆ. ಬಿಬಿಎಂಪಿಯ ಒಟಿಎಸ್ ಯೋಜನೆಗೆ ಸಿಲಿಕಾನ್ ಸಿಟಿಯ ಜನರಿಂದ ಭರ್ಜರಿ ರೆಸ್ಪಾನ್ಸ್ ಬಂದಿದೆ. ಬೊಮ್ಮನಹಳ್ಳಿ ವ್ಯಾಪ್ತಿಯಲ್ಲಿ ಏಪ್ರಿಲ್ 2024 ರಿಂದ ಜುಲೈ 2024ರವರೆಗೆ 316.10 ಕೋಟಿ ತೆರಿಗೆ ಸಂಗ್ರಹವಾಗಿದೆ. ದಾಸರಹಳ್ಳಿ ವ್ಯಾಪ್ತಿಯಲ್ಲಿ 96.21 ಕೋಟಿ ತೆರಿಗೆ ಸಂಗ್ರಹವಾಗಿದೆ. ಇದಲ್ಲದೇ ಬೆಂಗಳೂರು ಈಸ್ಟ್ ವ್ಯಾಪ್ತಿಯಲ್ಲಿ 544.46 ಕೋಟಿ, ಮಹದೇವಪುರ ವ್ಯಾಪ್ತಿಯಲ್ಲಿ 808.40 ಕೋಟಿ, ರಾಜರಾಜೇಶ್ವರಿನಗರ ವ್ಯಾಪ್ತಿಯಲ್ಲಿ 212.42 ಕೋಟಿ, ಬೆಂಗಳೂರು ಸೌತ್ ನಲ್ಲಿ 459.01 ಕೋಟಿ, ಬೆಂಗಳೂರು…

Read More