Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಮಾಜಿ ಸಚಿವ ಹೆಚ್.ಡಿ ರೇವಣ್ಣ ಮಹಿಳೆ ಕಿಡ್ನ್ಯಾಪ್ ಪ್ರಕರಣದಲ್ಲಿ ಜೈಲು ಪಾಲಾಗಿದ್ದಾರೆ. ಅವರು ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಿಚಾರಣೆ ನಡೆಸಿದಂತ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಆದೇಶವನ್ನು ಕಾಯ್ದಿರಿಸಿದೆ. ಇಂದು ಜೆಡಿಎಸ್ ಶಾಸಕ ಹೆಚ್.ಡಿ ರೇವಣ್ಣ ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಿಚಾರಣೆಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ನಡೆಸಿತು. ವಾದ-ಪ್ರತಿವಾದವನ್ನು ಆಲಿಸಿದಂತ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು, ಜಾಮೀನು ಅರ್ಜಿಯ ಸಂಬಂಧದ ಆದೇಶವನ್ನು ಸಾಧ್ಯವಾದ್ರೆ ಇಂದು ಸಂಜೆ 5 ಗಂಟೆಯವರೆಗೆ ತೀರ್ಪು ಪ್ರಕಟಿಸೋದಾಗಿ ಆದೇಶವನ್ನು ಕಾಯ್ದಿರಿಸಿದರು. ಅಂದಹಾಗೇ ರೇವಣ್ಣ ಪುತ್ರ ಪ್ರಜ್ವಲ್ ತಲೆಮರೆಸಿಕೊಂಡಿದ್ದಾರೆ. ರೇಣ್ಣಗೆ ಜಾಮೀನು ನೀಡಿದ್ರೆ ಸಾಕ್ಷ್ಯಾಧಾರ ನಾಶಪಡಿಸಬಹುದು. ಆರೋಪಿ ಪ್ರಭಾವಿ ಎಂಬ ಅಂಶವನ್ನು ಪರಿಗಣಿಸಬೇಕು. ಇದು ಕೆವಲ ಬೆದರಿಕೆ ಹಾಕಿರುವ ಪ್ರಕರಣವಲ್ಲ. ಅಪಹರಣವಾದ ಮಹಿಳೆ ಅತ್ಯಾಚಾರದ ಸಂತ್ರಸ್ತೆ, ಮಹಿಳೆಯ ದೂರು ದಾಖಲಾಗಬಾರದೆಂದು ಅಪಹರಿಸಲಾಗಿತ್ತು. ಇತರೆ ಮಹಿಳೆಯರು ದೂರು ನೀಡದೆ ತಡೆಯುವ ಯತ್ನವಿದೆ. ಜಾಮೀನು ನೀಡಿದ್ರೆ ನ್ಯಾಯಾದಾನ ಹಾದಿಗೆ ತೊಡಕಾಗಬಹುದು ಎಂದು ವಾದವನ್ನು ಮಂಡಿಸಿದ್ರು. ಹೆಚ್. ಡಿ. ರೇವಣ್ಣ…
ಬೆಂಗಳೂರು : “ಲೋಕಸಭಾ ಚುನಾವಣೆ ಆದ ನಂತರ ಮಹಾರಾಷ್ಟ್ರದಲ್ಲಿ ಬಿಜೆಪಿ ಮೈತ್ರಿ ಸರ್ಕಾರ ಇರುವುದೇ ಅನುಮಾನ. ಅಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಮೈತ್ರಿ ಸರ್ಕಾರ ರಚನೆಯಾಗುತ್ತದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು. ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಶಾಂತಿನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಬಳಿಕ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಹೇಳಿಕೆ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಸಿದಂತೆ ಅವರು, “ಮೋದಿ ಅವರು ಉದ್ದವ್ ಠಾಕ್ರೆ ಬಗ್ಗೆ ಏಕೆ ಮಾತನಾಡಿದರು. ಅವರಿಗೆ ಶಕ್ತಿ ಇದೆ ಎನ್ನುವ ಕಾರಣಕ್ಕೆ. ಚುನಾವಣೆ ನಂತರ ಎನ್ ಸಿಪಿ ಮತ್ತು ಶಿವಸೇನೆ ಬಿಟ್ಟು ಹೋದವರು ಮರಳಿ ಬರುತ್ತಾರೆ. ಈ ಕಾರಣಕ್ಕೆ ಅವರು ಹೆದರಿದ್ದಾರೆ” ಎಂದು ತಿರುಗೇಟು ನೀಡಿದರು. ಕರ್ನಾಟಕದಲ್ಲಿ ಶಿಂಧೆ ತರದವರು ಇದ್ದಾರೆಯೇ ಎಂದು ಕೇಳಿದಾಗ, “ಅವರಲ್ಲಿ ಆ ತರದವರು ಇರಬಹುದು. ನಮ್ಮಲ್ಲಿ ಇಲ್ಲ. ನಮಗೆ ಯಾರ ಭಯವೂ ಇಲ್ಲ. ಅವರ ಸರ್ಕಾರ ಬೀಳುತ್ತದೆ, ಪಕ್ಷ ಬಿಟ್ಟು ಬಂದವರು ಮರಳಿ ಹೋಗುತ್ತಾರೆ ಎನ್ನುವ ಭಯದಿಂದ ಹೀಗೆ ಹೇಳುತ್ತಿದ್ದಾರೆ” ಎಂದರು. ಪರಿಷತ್…
ಬೆಂಗಳೂರು : ಇಂದು ಮಹಿಳೆ ಕಿಡ್ನ್ಯಾಪ್ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಿಚಾರಣೆಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ನಡೆಸಿತು. ವಾದ-ಪ್ರತಿವಾದ ಆಲಿಸಿದಂತ ನ್ಯಾಯಪೀಠವು, ಇಂದು ಸಂಜೆ 5 ಗಂಟೆಗೆ ಜಾಮೀನು ಅರ್ಜಿಯ ತೀರ್ಪು ಪ್ರಕಟಿಸೋದಾಗಿ ಆದೇಶವನ್ನು ಕಾಯ್ದಿರಿಸಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಇಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಿಚಾರಣೆ ಕೈಗೆತ್ತಿಕೊಳ್ಳಲಾಗಿದೆ. ಮಹಿಳೆ ಕಿಡ್ನ್ಯಾಪ್ ಪ್ರಕರಣದ ವಿಚಾರಣೆ ಆರಂಭವಾಗುತ್ತಿದ್ದಂತೆ, ಹೆಚ್.ಡಿ ರೇವಣ್ಣಗೆ ಸದ್ಯಕ್ಕೆ ಜಾಮೀನು ನೀಡದಂತೆ ಎಸ್ಐಟಿ ಪರ ಎಸ್ ಪಿಪಿ ಜಾಯ್ನಾ ಕೊಥಾರಿ ಅವರು ಆಕ್ಷೇಪಣೆ ಸಲ್ಲಿಸಿದರು. ರೇವಣ್ಣ ಪುತ್ರ ಪ್ರಜ್ವಲ್ ತಲೆಮರೆಸಿಕೊಂಡಿದ್ದಾರೆ. ರೇಣ್ಣಗೆ ಜಾಮೀನು ನೀಡಿದ್ರೆ ಸಾಕ್ಷ್ಯಾಧಾರ ನಾಶಪಡಿಸಬಹುದು. ಆರೋಪಿ ಪ್ರಭಾವಿ ಎಂಬ ಅಂಶವನ್ನು ಪರಿಗಣಿಸಬೇಕು. ಇದು ಕೆವಲ ಬೆದರಿಕೆ ಹಾಕಿರುವ ಪ್ರಕರಣವಲ್ಲ. ಅಪಹರಣವಾದ ಮಹಿಳೆ ಅತ್ಯಾಚಾರದ ಸಂತ್ರಸ್ತೆ, ಮಹಿಳೆಯ ದೂರು ದಾಖಲಾಗಬಾರದೆಂದು ಅಪಹರಿಸಲಾಗಿತ್ತು. ಇತರೆ ಮಹಿಳೆಯರು ದೂರು ನೀಡದೆ ತಡೆಯುವ ಯತ್ನವಿದೆ. ಜಾಮೀನು ನೀಡಿದ್ರೆ ನ್ಯಾಯಾದಾನ…
ಬೆಂಗಳೂರು: ಲೋಕಸಭೆ ಚುನಾವಣೆಯ ಬಳಿಕ ಕರ್ನಾಟಕ ಸರಕಾರ ಉರುಳಿ ಬೀಳಲಿದೆ ಎನ್ನುತ್ತಿರುವ ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ ಶಿಂದೆ ಮೊದಲು ಸಂವಿಧಾನ ಮತ್ತು ಪಕ್ಷಾಂತರ ನಿಷೇಧ ಕಾಯ್ದೆಯನ್ನು ಅರ್ಥ ಮಾಡಿಕೊಳ್ಳಲಿ ಎಂದು ಬೃಹತ್ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಸೋಮವಾರ ಈ ಬಗ್ಗೆ ತಮ್ಮನ್ನು ಭೇಟಿ ಮಾಡಿದ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೆ ಅವರು ಇಲ್ಲಿ ಉತ್ತರಿಸಿದರು. ಲೋಕಸಭಾ ಚುನಾವಣೆ ನಂತರ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ 20 ಶಾಸಕರು ಕಾಂಗ್ರೆಸ್ಸನ್ನು ಸೇರಲಿದ್ದು, ಅವರೆಲ್ಲರೂ ನಮ್ಮ ಸಂಪರ್ಕದಲ್ಲಿ ಇದ್ದಾರೆ. ಸರಕಾರ ಬೀಳಿಸಲು ಇದು ಮಹಾರಾಷ್ಟ್ರವಲ್ಲ. ಜೂನ್ ಮೊದಲ ವಾರದ ನಂತರ ಶಿಂದೆ ಅವರ ಸರಕಾರವೇ ಪತನವಾಗಿ, ಅವರೇ ಮಾಜಿ ಆಗಲಿದ್ದಾರೆ ಎಂದು ಅವರು ಭವಿಷ್ಯ ನುಡಿದರು. ರಾಜ್ಯದಲ್ಲಿ ನಾವು 136 ಶಾಸಕರಿದ್ದೇವೆ. ಪಕ್ಷಾಂತರ ನಿಷೇಧ ಕಾಯ್ದೆಯಿಂದ ಪಾರಾಗಲು ನಮ್ಮ 89 ಶಾಸಕರು ಬಿಜೆಪಿಗೆ ಹೋಗಬೇಕು. ಈಗ ಬೇರೆ ಪಕ್ಷಕ್ಕೆ ಹೋಗುವ ದಡ್ಡರು ಯಾರೂ ಇಲ್ಲ ಎಂದು ಅವರು ವಿವರಿಸಿದರು. ಏಕನಾಥ…
ಬೆಂಗಳೂರು: ವಿಪಕ್ಷ ನಾಯಕ ಆರ್.ಅಶೋಕ್ ಅವರು ಮಾತನಾಡಿ, ಸಿದ್ದರಾಮಯ್ಯ ಸೇರಿ ಯಾರೇ ಪ್ರಚಾರ ಮಾಡಿದರೂ ಕಾಂಗ್ರೆಸ್ಸಿಗೆ ಇಲ್ಲಿ ಉಳಿಗಾಲ ಇಲ್ಲ ಎಂದು ಅಭಿಪ್ರಾಯಪಟ್ಟರು. ವೈ.ಎ.ನಾರಾಯಣಸ್ವಾಮಿ ಮತ್ತು ಅ.ದೇವೇಗೌಡರ ಗೆಲುವು ನಿಶ್ಚಿತ. ವೈ.ಎ.ನಾರಾಯಣಸ್ವಾಮಿ ಅವರು ಮಾಡಿರುವ ಕೆಲಸ, ಅವರ ಸಂಪರ್ಕ, ನಿರಂತರ ಸೇವೆ ಗಮನಿಸಿ ಅವರ ಆಶೀರ್ವಾದ ಖಚಿತ; ಬೆಂಗಳೂರಿನಲ್ಲಿ ಅ.ದೇವೇಗೌಡರು ಮತದಾರರ ಉತ್ತಮ ಒಲವನ್ನು ಹೊಂದಿದ್ದಾರೆ ಎಂದು ತಿಳಿಸಿದರು. ಎರಡೂ ಪಕ್ಷಗಳು ಸಮರ್ಥ ಅಭ್ಯರ್ಥಿಗಳನ್ನು ಕಣಕ್ಕಿಳಿಸಿವೆ ಎಂದು ಅವರು ನುಡಿದರು. ವೈ.ಎ.ನಾರಾಯಣಸ್ವಾಮಿ ಮತ್ತು ಅ.ದೇವೇಗೌಡ ಅವರು ನಾಮಪತ್ರ ಸಲ್ಲಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ್ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಡಿಸಿಎಂ ಗೋವಿಂದ ಕಾರಜೋಳ, ಡಾ.ಅಶ್ವತ್ಥನಾರಾಯಣ, ರಾಜ್ಯಸಭಾ ಸದಸ್ಯ ಲೆಹರ್ ಸಿಂಗ್, ಸಂಸದ ಪಿ.ಸಿ.ಮೋಹನ್, ಶಾಸಕ ಸುರೇಶ್ ಗೌಡ, ಮುಖಂಡ ಲಕ್ಷ್ಮೀನಾರಾಯಣ್, ಮಾಜಿ ಶಾಸಕ ಎಂ.ಕೃಷ್ಣರೆಡ್ಡಿ ಮತ್ತಿತರ ಮುಖಂಡರು ಹಾಜರಿದ್ದರು. https://kannadanewsnow.com/kannada/viral-video-voter-standing-in-queue-to-cast-his-vote-slapped-by-andhra-cm-jagans-party-mla/ https://kannadanewsnow.com/kannada/all-our-candidates-will-win-in-legislative-council-elections-by-vijayendra/
ಬೆಂಗಳೂರು: ವಿಧಾನಪರಿಷತ್ತಿಗೆ ನಡೆಯುವ ಚುನಾವಣೆಗೆ ಇಬ್ಬರು ಅಭ್ಯರ್ಥಿಗಳೂ ಇಂದು ನಾಮಪತ್ರ ಸಲ್ಲಿಸಿದ್ದಾರೆ. ನಮ್ಮೆಲ್ಲ ಅಭ್ಯರ್ಥಿಗಳು ಗೆಲುವು ಸಾಧಿಸುವುದು ಖಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ವಿಶ್ವಾಸದಿಂದ ನುಡಿದರು. ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಅವರು ಮಾತನಾಡಿದರು. ನಮ್ಮ ಪಕ್ಷದ ಎಲ್ಲ ಹಿರಿಯ ಮುಖಂಡರು, ಜೆಡಿಎಸ್ ಪಕ್ಷದ ಸಮ್ಮುಖದಲ್ಲಿ ನಮ್ಮ ಇಬ್ಬರು ಅಭ್ಯರ್ಥಿಗಳು ಶುಭಗಳಿಗೆಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ವಿಧಾನಪರಿಷತ್ನಲ್ಲಿ ಅಪಾರ ಅನುಭವ ಇರುವ ನಮ್ಮ ಇಬ್ಬರು ಅಭ್ಯರ್ಥಿಗಳು ಮತ್ತೊಮ್ಮೆ ದೊಡ್ಡ ಅಂತರದಲ್ಲಿ ವಿಜಯಶಾಲಿಯಾಗಿ ಬರಲಿದ್ದಾರೆ ಎಂದು ನುಡಿದರು. ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಒಟ್ಟಾಗಿ ಲೋಕಸಭಾ ಚುನಾವಣೆಯನ್ನು ಎದುರಿಸಿದ್ದೆವು. ಈ ಚುನಾವಣೆಯನ್ನೂ ಒಗ್ಗಟ್ಟಾಗಿ ಎದುರಿಸಿ ಎಲ್ಲ ಕ್ಷೇತ್ರಗಳಲ್ಲಿ ನಮ್ಮ ಅಭ್ಯರ್ಥಿಗಳು ಗೆಲುವು ಸಾಧಿಸುವ ವಿಶ್ವಾಸವಿದೆ ಎಂದು ತಿಳಿಸಿದರು. https://kannadanewsnow.com/kannada/neha-hiremath-murder-case-cid-to-file-chargesheet-soon/ https://kannadanewsnow.com/kannada/viral-video-voter-standing-in-queue-to-cast-his-vote-slapped-by-andhra-cm-jagans-party-mla/
ಬೆಂಗಳೂರು: ಹಲ್ಲೆಗೊಳಗಾಗಿರುವಂತ ಸ್ಯಾಂಡಲ್ ವುಡ್ ನಟ ಚೇತನ್ ಚಂದ್ರ ಸೇರಿದಂತೆ ಇಬ್ಬರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈ ಮೂಲಕ ಹಲ್ಲೆಗೊಳಗಾದಂತ ನಟ ಚೇತನ್ ಚಂದ್ರ ವಿರುದ್ಧವೂ ಎಫ್ಐಆರ್ ದಾಖಲಾಗಿದೆ. ನಟ ಚೇತನ್ ಚಂದ್ರ ಮೇಲೆ ಹಲ್ಲೆ ಮಾಡಿದಂತ ಆರೋಪದಲ್ಲಿ ಇಬ್ಬರನ್ನು ಕಗ್ಗಲೀಪುರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಕಿರಣ್ ಮತ್ತು ಹರೀಶ್ ಎಂಬ ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಮತ್ತೊಂದೆಡೆ ಐಶ್ವರ್ಯಾ ಹಾಗೂ ಪತಿ ಕಿರಣ್ ಮೇಲೆ ಹಲ್ಲೆ ಆರೋಪದಡಿ ಕಗ್ಗಲೀಪುರ ಪೊಲೀಸ್ ಠಾಣೆಗೆ ಐಶ್ವರ್ಯ ದೂರು ನೀಡಿದ್ದರು. ಈ ದೂರು ಆಧರಿಸಿ ನಟ ಚೇತನ್ ಚಂದ್ರ ಹಾಗೂ ಮತ್ತಿಬ್ಬರ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ನಟ ಚೇತನ್ ಚಂದ್ರ ವಿರುದ್ಧ ಐಪಿಸಿ ಸೆಕ್ಷನ್ 323, 354 ಹಾಗೂ 34ರಡಿ ಕಗ್ಗಲಿಪುರ ಠಾಣೆಯ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. https://kannadanewsnow.com/kannada/two-accused-arrested-in-actor-chetan-chandra-assault-case/ https://kannadanewsnow.com/kannada/neha-hiremath-murder-case-cid-to-file-chargesheet-soon/
ಬೆಂಗಳೂರು: ನಟ ಚೇತನ್ ಚಂದ್ರ ಅವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿತ್ತು. ಈ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಕಗ್ಗಲಿಪುರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ನಟ ಚೇತನ್ ಚಂದ್ರ ಮೇಲೆ ಹಲ್ಲೆ ಮಾಡಿದ್ದ ಸಂಬಂಧ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕಿರಣ್ ಮತ್ತು ಹರೀಶ್ ಎಂಬುದಾಗಿ ತಿಳಿದು ಬಂದಿದೆ. ಮತ್ತೊಂದೆಡೆ ನಟ ಚೇತನ್ ಚಂದ್ರ ವಿರುದ್ಧವೂ ಎಫ್ಐಆರ್ ದಾಖಲಾಗಿದೆ. ಐಶ್ವರ್ಯಾ ಹಾಗೂ ಪತಿ ಕಿರಣ್ ಮೇಲೆ ಹಲ್ಲೆ ಆರೋಪದಡಿ ಕಗ್ಗಲೀಪುರ ಪೊಲೀಸ್ ಠಾಣೆಗೆ ಐಶ್ವರ್ಯ ದೂರು ನೀಡಿದ್ದರು. ಈ ದೂರು ಆಧರಿಸಿ ನಟ ಚೇತನ್ ಚಂದ್ರ ಹಾಗೂ ಮತ್ತಿಬ್ಬರ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ನಟ ಚೇತನ್ ಚಂದ್ರ ವಿರುದ್ಧ ಐಪಿಸಿ ಸೆಕ್ಷನ್ 323, 354 ಹಾಗೂ 34ರಡಿ ಕಗ್ಗಲಿಪುರ ಠಾಣೆಯ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಹಲ್ಲೆಗೊಳಗಾಗಿದ್ದಂತ ನಟ ಚೇತನ್ ಚಂದ್ರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. https://kannadanewsnow.com/kannada/i-have-not-done-anything-wrong-former-minister-hd-revanna/ https://kannadanewsnow.com/kannada/pornographic-video-case-sit-plans-to-issue-red-corner-notice-to-prajwal-revanna/
ಬೆಂಗಳೂರು: ಯಾವ ಕಾರಣಕ್ಕೂ ನಮ್ಮ ಸರ್ಕಾರವನ್ನು ಆಪರೇಷನ್ ಕಮಲ ಮಾಡಲು ಸಾಧ್ಯವಿಲ್ಲ. ಏಕೆಂದರೆ ಅವರು ಎನ್.ಡಿ. ಎ ಈ ಬಾರಿ ಸೋಲಲಿದೆ. ಆಪರೇಶನ್ ಕಮಲ ಬಿಜೆಪಿಯ ಹಗಲುಗನಸು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ನಮ್ಮ ಶಾಸಕರು ಯಾರೂ ಮಾರಾಟವಾಗಲು ತಯಾರಿಲ್ಲ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗುತ್ತದೆ, ಮಹಾರಾಷ್ಟ್ರದಲ್ಲಿ ಆದಂತೆ ಆಪರೇಶನ್ ಕಮಲ ನಡೆಯಲಿದೆ ಎಂದು ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ಹೇಳಿಕೆ ನೀಡಿರುವ ಬಗ್ಗೆ ಮಾತನಾಡಿದ ಅವರು ಅವರು, ಈಗಾಗಲೇ ಕಳೆದ ಒಂದು ವರ್ಷದಿಂದ ಇಂಥ ಪ್ರಯತ್ನ ಮಾಡಿ ವಿಫಲರಾಗಿದ್ದಾರೆ ಇನ್ನೊಂದು ಬಾರಿ ಏಕೆ ಪ್ರಯತ್ನಿಸುತ್ತಾರೆ. ನಮ್ಮ ಶಾಸಕರು ಯಾರೂ ಮಾರಾಟವಾಗಲು ತಯಾರಿಲ್ಲ. ಮಹಾರಾಷ್ಟ್ರದಲ್ಲಿ ಆದಂತೆ ಆಗಲೂ ಸಾಧ್ಯವಿಲ್ಲ ಎಂದರು. ರಾಜಕೀಯ ಧೃವೀ ಕಾರಣವಾಗಬಹುದೇ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಗೆಲ್ಲಲಿದ್ದು ನಮ್ಮವರೇ ಪ್ರಧಾನಮಂತ್ರಿಯಾಗಲಿದ್ದಾರೆ ಎಂದರು. ನಮ್ಮ ಅಭ್ಯರ್ಥಿಗಳು ಗೆಲ್ಲಲ್ಲಿದ್ದಾರೆ ಪದವೀಧರರ ಕ್ಷೇತ್ರದಿಂದ ರಾಮೋಜಿ ಗೌಡ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಹಾಗೂ ಶಿಕ್ಷಕರ ಕ್ಷೇತ್ರದಿಂದ ಬಿ. ಟಿ.ಶ್ರೀನಿವಾಸ್…
ಬೆಂಗಳೂರು: ನಾನು ತಪ್ಪು ಮಾಡಿಲ್ಲ. ತಪ್ಪು ಮಾಡದೇ ಇದ್ರೂ ನನ್ನ ಜೈಲಿಗೆ ಕಳುಹಿಸಲಾಗಿದೆ ಅಂತ ಮಾಜಿ ಸಚಿವ ಹೆಚ್.ಡಿ ರೇವಣ್ಣ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಹತ್ತು ನಿಮಿಷ ಕಣ್ಣೀರಿಟ್ಟಿದ್ದಾರೆ. ಇಂದು ಪರಪ್ಪನ ಅಗ್ರಹಾರದಲ್ಲಿ ಶಾಸಕ ಜಿ.ಟಿ ದೇವೇಗೌಡ ಅವರು, ಜೆಡಿಎಸ್ ಶಾಸಕ ಹೆಚ್.ಡಿ ರೇವಣ್ಣ ಅವರನ್ನು ಭೇಟಿಯಾಗಿ, ಚರ್ಚಿಸಿದರು. ಆ ಬಳಿಕ ಜೈಲಿನಿಂದ ಹೊರಬಂದಾಗ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಾನು ಭೇಟಿಯಾಗಿ ಹೆಚ್.ಡಿ ರೇವಣ್ಣ ಅವರ ಕುಶಲೋಪರಿ ಚರ್ಚೆ ಮಾಡಿದೆ. ಈ ವೇಳೆಯಲ್ಲಿ ನಾನು ತಪ್ಪು ಮಾಡದಿರುವ ವಿಚಾರಕ್ಕೆ ಸಿಲುಕಿಸಿದ್ರು ಅಂತ 10 ನಿಮಿಷ ಕಣ್ಣೀರಿಟ್ಟರು ಎಂದರು. ತಪ್ಪು ಮಾಡಿದ್ರೆ ಜೈಲಿಗೆ ಹಾಕಲಿ. ಮಾಡದೇ ಇರೋ ತಪ್ಪಿಗೆ ಜೈಲಿಗೆ ಹಾಕಿದ್ದಾರೆ. ಹಳೇ ವಿಚಾರ ಮೆಲುಕು ಹಾಕಿದ್ರು. ಅವರಿಗೆ ಹಾಸನ ಅಭಿವೃದ್ಧಿಯದ್ದೇ ಚಿಂತೆ ಎಂದರು. ತಪ್ಪು ಮಾಡದಿದ್ರೂ ಜೈಲಿಗೆ ಹಾಕಿದ್ದಾರಲ್ಲ ಅಂತ ಕೊರಗಿದೆ. ನನಗೆ ಈಗಲೂ ಅಭಿವೃದ್ಧಿ ಕಾರ್ಯಗಳ ಬಗ್ಗೆಯೇ ಚಿಂತೆ. ನಾನು ಮಹಿಳೆಯ ಜೊತೆಗೆ ಮಾತನಾಡಿಯೇ 6 ವರ್ಷಗಳಾಗಿವೆ ಎಂದು…












