Subscribe to Updates
Get the latest creative news from FooBar about art, design and business.
Author: kannadanewsnow09
ಶಿವಮೊಗ್ಗ: ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ಕುಡಿಯುವ ಉದ್ದೇಶಕ್ಕಾಗಿ ನೀರನ್ನು ಏಪ್ರಿಲ್ 5ರಿಂದ 8ರವರೆಗೆ ಬಿಡುಗಡೆ ಮಾಡಲಾಗುತ್ತಿದೆ. ಈ ಸಂಬಂಧ ಸದಸ್ಯ ಕಾರ್ಯದರ್ಶಿಗಳು, ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ, ಹಾಗೂ ಅಧೀಕ್ಷಕ ಅಭಿಯಂತರರು, ಕ.ನೀ.ನಿ.ನಿ., ಭದ್ರಾ ಯೋಜನಾ ವೃತ್ತ, ಬಿ.ಆರ್.ಪ್ರಾಜೆಕ್ಟ್ ಆದೇಶ ಹೊರಡಿಸಿದ್ದು, ಹಾವೇರಿ ಜಿಲ್ಲಾ ವ್ಯಾಪ್ತಿಗೆ ಬರುವ ಗ್ರಾಮಗಳಲ್ಲಿ ಹಾವೇರಿ, ರಾಣೇಬೆನ್ನೂರು, ಬ್ಯಾಡಗಿ, ಮತ್ತು ಹಿರೇಕೆರೂರು ಪಟ್ಟಣಗಳಿಗೆ ಅಲ್ಲದೇ ನದಿಯ ಪಕ್ಕದಲ್ಲಿ ಬರುವ ಗ್ರಾಮಗಳಿಗೆ ಹಾಗೂ ಗದಗ ಜಿಲ್ಲೆಗೆ ಬರುವ ಗದಗ, ಲಕ್ಷ್ಮೀಶ್ವರ, ಮುಂಡರಗಿ ಮತ್ತು ಶಿರಹಟ್ಟಿ ತಾಲ್ಲೂಕುಗಳ ನಗರ ಮತ್ತು ಗ್ರಾಮೀಣ ಪ್ರದೇಶಗಳಿಗೆ ಕುಡಿಯುವ ಉದ್ದೇಶಕ್ಕಾಗಿ ದಿನಾಂಕ 05-04-2025 ರಿಂದ 08-04-2025 ರವರೆಗೆ ಪ್ರತಿ ನಿತ್ಯ 2000 ಕ್ಯೂಸೆಕ್ಸ್ ನಂತೆ ಒಟ್ಟು 4 ದಿನಗಳು 8000 ಕ್ಯೂಸೆಕ್ಸ್ ನೀರನ್ನು ತುಂಗಭದ್ರಾ ನದಿಗೆ ಹರಿಸಲಾಗುವುದು ಎಂದಿದ್ದಾರೆ. ನದಿ ಪಾತ್ರದಲ್ಲಿ ಸಾರ್ವಜನಿಕರು ತಿರುಗಾಡುವುದಾಗಲಿ, ರೈತರುಗಳು ಜಾನುವಾರು ತೊಳೆಯುವುದು ಮತ್ತು ದೈನಂದಿನ ಚಟುವಟಿಕೆಗಳನ್ನು ಮಾಡುವುನ್ನು ನಿಷೇಧಿಸಲಾಗಿದೆ. ನದಿಯಿಂದ ಅನಧಿಕೃತವಾಗಿ ವಿದ್ಯುತ್ ಪಂಪ್/ಡೀಸೆಲ್…
ನವದೆಹಲಿ: ಮ್ಯಾನ್ಮಾರ್, ಬ್ಯಾಂಕಾಕ್ ಬಳಿಕ ನೇಪಾಳದಲ್ಲಿ 5.0 ತೀವ್ರತೆಯಲ್ಲಿ ಭೂಕಂಪನ ಉಂಟಾಗಿದೆ. ಈ ಕಾರಣದಿಂದ ಭಾರತದ ದೆಹಲಿ-ಎನ್ ಸಿ ಆರ್ ವ್ಯಾಪ್ತಿಯಲ್ಲೂ ಭೂಮಿ ಕಂಪಿಸಿದಂತ ಅನುಭವ ಉಂಟಾಗಿದೆ. ನೇಪಾಳದಲ್ಲಿ ಶುಕ್ರವಾರ ಸಂಜೆ 5.0 ತೀವ್ರತೆಯ ಭೂಕಂಪ ಸಂಭವಿಸಿದ ನಂತರ ದೆಹಲಿ-ಎನ್ಸಿಆರ್ನಲ್ಲಿ ಕಂಪನದ ಅನುಭವವಾಗಿದೆ. ಇದರಿಂದಾಗಿ ಬೆಚ್ಚಿ ಬಿದ್ದಿರುವಂತ ಜನರು, ಮನೆಯಿಂದ ಹೊರ ಓಡಿ ಬಂದು ಕೆಲ ಕಾಲ ರಸ್ತೆಯಲ್ಲೇ ಕಾಲ ಕಳೆಯುವಂತೆ ಆಗಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ಭಾರತೀಯ ಪ್ರಕೃತಿ ವಿಕೋಪನ ಇಲಾಖೆಯು, ನೇಪಾಳದಲ್ಲಿ ರಿಕ್ಟರ್ ಮಾಪಕದಲ್ಲಿ 5.0 ತೀವ್ರತೆಯ ಭೂಕಂಪ ಸಂಭವಿಸಿದ್ದು, ಉತ್ತರ ಭಾರತದಲ್ಲಿ ಲಘು ಭೂಕಂಪನದ ಅನುಭವವಾಗಿದೆ ಎಂದಿದೆ. https://twitter.com/ANI/status/1908167249556332613 https://kannadanewsnow.com/kannada/bjp-worker-vinays-suicide-case-r-ashoka-demands-inclusion-of-mlas-name-in-fir/ https://kannadanewsnow.com/kannada/sc-refuses-to-quash-summons-issued-to-rahul-gandhi-for-derogatory-remarks-against-savarkar/
ಬೆಂಗಳೂರು: ‘ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಅವರ ಡೆತ್ನೋಟಿನಲ್ಲಿ ಇರುವ ಎಲ್ಲರ ಹೆಸರನ್ನೂ ಎಫ್ಐಆರ್ನಲ್ಲಿ ಸೇರಿಸಬೇಕು’ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಅವರು ಆಗ್ರಹಿಸಿದ್ದಾರೆ. ‘ನಾಳೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಕೊಡಗಿಗೆ ಭೇಟಿ ಕೊಡಲಿದ್ದು, ನಾಳೆ ಅಲ್ಲಿ ಧರಣಿ ಮುಂದುವರೆಸಲಿದ್ದೇವೆ’ ಎಂದು ಪ್ರಕಟಿಸಿದ್ದಾರೆ. ಅವರು ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದರು. ಎಫ್ಐಆರ್ನಲ್ಲಿ ಒಂದೇ ಒಂದು ಹೆಸರನ್ನು ಬರೆದಿದ್ದಾರೆ. ಇನ್ನೂ ಎರಡು ಹೆಸರು ಸೇರಿಸಲು ಒತ್ತಾಯಿಸಿದ್ದೇವೆ ಎಂದು ತಿಳಿಸಿದರು. ನ್ಯಾಯ ಸಿಗುವವರೆಗೆ ಹೋರಾಟ ಮುಂದುವರೆಯಲಿದೆ ಎಂದರು. ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಮಾತನಾಡಿ, ‘ಉದ್ದೇಶಪೂರ್ವಕವಾಗಿ ಶಾಸಕರಾದ ಪೊನ್ನಣ್ಣ, ಮಂಥರ್ ಗೌಡ ಇವರಿಬ್ಬರ ಹೆಸರನ್ನು ಎಫ್ಐಆರ್ನಲ್ಲಿ ಸೇರಿಸಿಲ್ಲ’ ಎಂದು ಆಕ್ಷೇಪಿಸಿದರು. ಮಾಜಿ ಡಿಸಿಎಂ ಡಾ.ಅಶ್ವತ್ಥನಾರಾಯಣ್, ಪಕ್ಷದ ಮುಖಂಡರು ಹಾಜರಿದ್ದರು. ನಾಳೆ ರಾಜ್ಯಾಧ್ಯಕ್ಷರು ಕೊಡಗಿನಲ್ಲಿ ಅಂತ್ಯಸಂಸ್ಕಾರದಲ್ಲಿ ಹಾಗೂ ಹೋರಾಟದಲ್ಲಿ ಪಾಲ್ಗೊಳ್ಳುವರು ಎಂದು ಮುಖ್ಯ ವಕ್ತಾರ ಅಶ್ವತ್ಥನಾರಾಯಣ್ ಅವರು ತಿಳಿಸಿದರು. https://kannadanewsnow.com/kannada/ishwar-khandre-meets-union-minister-bhupendra-yadav-seeks-funds-for-various-development-projects/ https://kannadanewsnow.com/kannada/sc-refuses-to-quash-summons-issued-to-rahul-gandhi-for-derogatory-remarks-against-savarkar/ https://kannadanewsnow.com/kannada/home-minister-g-parameshwara-says-action-will-be-taken-after-taking-information-on-mla-shivaraj-patils-location-track-allegations/
ನವದೆಹಲಿ : ಮಾನವ-ಆನೆ ಸಂಘರ್ಷ ತಡೆಗೆ ರೈಲ್ವೆ ಬ್ಯಾರಿಕೇಡ್ ನಿರ್ಮಿಸಲು, ಸ್ವಯಂ ಪ್ರೇರಿತವಾಗಿ ಮುಂದೆ ಬರುವ ಅರಣ್ಯವಾಸಿಗಳ ಸ್ಥಳಾಂತರಕ್ಕೆ ಕಾಂಪಾ ನಿಧಿಯಿಂದ 800 ಕೋಟಿ ರೂ. ಮಂಜೂರು ಮಾಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಕೇಂದ್ರಕ್ಕೆ ಬೇಡಿಕೆ ಸಲ್ಲಿಸಿದ್ದಾರೆ. ದೆಹಲಿಯಲ್ಲಿಂದು ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಖಾತೆ ಸಚಿವ ಭೂಪೇಂದ್ರ ಯಾದವ್ ಅವರನ್ನು ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಖಂಡ್ರೆ, ಪರಿಹಾರಾತ್ಮಕ ಅರಣ್ಯೀಕರಣ ನಿಧಿ ನಿರ್ವಹಣೆ ಮತ್ತು ಯೋಜನಾ ಪ್ರಾಧಿಕಾರ (ಕಾಂಪಾ)ದಡಿ ರಾಜ್ಯಕ್ಕೆ ಕೂಡಲೇ ಹಣ ಬಿಡುಗಡೆ ಮಾಡಬೇಕು ಎಂದು ಮನವಿ ಪತ್ರ ಸಲ್ಲಿಸಿದ್ದು, ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು. ರಾಜ್ಯದಲ್ಲಿ 6395 ಆನೆಗಳಿದ್ದು, ಕೊಡಗು, ಚಿಕ್ಕಮಗಳೂರು, ಹಾಸನ ಜಿಲ್ಲೆಯಲ್ಲಿ ಕಾಫಿ ತೋಟಗಳಲ್ಲಿ ನೂರಾರು ಆನೆಗಳಿವೆ. ಇವುಗಳ ದಾಳಿಯಿಂದ ಸಾವು ನೋವು ಸಂಭವಿಸುತ್ತಿದೆ. ಹೀಗಾಗಿ ಕಾಡಿನಿಂದ ನಾಡಿಗೆ ಆನೆಗಳು ಬಾರದಂತೆ ನಿಯಂತ್ರಿಸಲು ಈಗಾಗಲೇ .393 ಕಿ.ಮೀ. ರೈಲ್ವೆ ಬ್ಯಾರಿಕೇಡ್ ನಿರ್ಮಾಣ ಮಾಡಿದ್ದು, ಪ್ರಸ್ತುತ 200 ಕೋಟಿ…
ಬೆಂಗಳೂರು: ‘ರಾಜ್ಯದಲ್ಲಿ ಇಂಥ ಪೊಲೀಸ್ ಬೇಜವಾಬ್ದಾರಿಯನ್ನು ನಾವು ಯಾವತ್ತೂ ಕಂಡಿಲ್ಲ’ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಟೀಕಿಸಿದ್ದಾರೆ. ‘ಶಾಸಕರಾದ ಪೊನ್ನಣ್ಣ, ಮಂಥರ್ ಗೌಡ ಇವರಿಬ್ಬರ ಹೆಸರನ್ನು ಎಫ್ಐಆರ್ನಲ್ಲಿ ಸೇರಿಸಬೇಕು’ ಎಂದು ಆಗ್ರಹಿಸಿದರು. ಇದರ ಹಿಂದೆ ಇರುವರೆನ್ನಲಾದ ಕೊಡಗಿನ ಎಸ್ಪಿಯನ್ನು ಸಸ್ಪೆಂಡ್ ಮಾಡಿ ಎಂದು ಒತ್ತಾಯಿಸಿದರು. ಮಾಧ್ಯಮಗಳ ಜೊತೆ ಇಂದು ಸಂಜೆ ಮಾತನಾಡಿದ ಅವರು, ‘ಮುಖ್ಯಮಂತ್ರಿಗಳೇ ನಮ್ಮ ಕಾರ್ಯಕರ್ತರನ್ನು ಈ ರೀತಿ ಮಾಡುವುದಾದರೆ ನಾವು ನಮ್ಮ ತೀರ್ಮಾನ ಮಾಡಬೇಕಾಗುತ್ತದೆ. ನಾವೂ ಅಧಿಕಾರ ನೋಡಿದ್ದೇವೆ. ಈ ಅಧಿಕಾರ ಕೊಟ್ಟವರು ಅದನ್ನು ಕಿತ್ತುಕೊಳ್ಳುವ ಕಾಲ ಬರುತ್ತದೆ’ ಎಂದು ಎಚ್ಚರಿಸಿದರು. ‘ದೂರಿನಲ್ಲಿ ಇರುವ ಇತರ ಹೆಸರುಗಳನ್ನು ಸೇರಿಸದಿದ್ದರೆ ಶವ ಮೇಲೆತ್ತಲು ಬಿಡುವುದಿಲ್ಲ’ ಎಂದು ತಿಳಿಸಿದರು. ರಾಜ್ಯಾಧ್ಯಕ್ಷ ವಿಜಯೇಂದ್ರ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರೂ ಆಸ್ಪತ್ರೆಗೆ ಬರಲಿದ್ದಾರೆ ಎಂದು ಪ್ರಕಟಿಸಿದರು. ‘ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಅವರ ಸಾವಿಗೆ ಕಾರಣವನ್ನು ಅವರು ಡೆತ್ ನೋಟಿನಲ್ಲಿ ಬರೆದಿದ್ದಾರೆ. ನಾವು ಬೆಳಿಗ್ಗೆಯಿಂದ ಕಾಯುತ್ತಿದ್ದೇವೆ. ವಿಪಕ್ಷ ನಾಯಕ…
ಬೆಂಗಳೂರು: ಏಪ್ರಿಲ್ 6ರಂದು ಶ್ರೀರಾಮ ನವಮಿ ಹಬ್ಬ”ದ ಪ್ರಯುಕ್ತ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಿ ಬಿಬಿಎಂಪಿ ಆದೇಶಿಸಿದೆ. ದಿನಾಂಕ: 06-04-2025 ಭಾನುವಾರದಂದು “ಶ್ರೀರಾಮ ನವಮಿ ಹಬ್ಬ”ದ ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಬಿಬಿಎಂಪಿ ಪಶುಪಾಲನೆ ವಿಭಾಗದ ಜಂಟಿ ನಿರ್ದೇಶಕರು ರವರು ತಿಳಿಸಿದ್ದಾರೆ. ಹೀಗಾಗಿ ಬೆಂಗಳೂರು ನಗರದ ಬಿಬಿಎಂಪಿ ವ್ಯಾಪ್ತಿಯಲ್ಲಿ ಈ ವೀಕೆಂಡ್ ನಲ್ಲಿ ನಾನ್ ವೆಜ್ ಪ್ರಿಯರಿಗೆ ಮಟನ್, ಚಿಕನ್ ಸಿಗೋದಿಲ್ಲ. ಏಪ್ರಿಲ್.6ರ ನಂತ್ರ ಬೆಂಗಳೂರಲ್ಲಿ ಮಾಂಸ ಮಾರಾಟವಾಗಲಿದೆ. https://kannadanewsnow.com/kannada/important-information-for-those-who-applied-for-the-post-of-ksrtc-office-assistant/ https://kannadanewsnow.com/kannada/sc-refuses-to-quash-summons-issued-to-rahul-gandhi-for-derogatory-remarks-against-savarkar/
ಪತಿ ಉದ್ಧಾರವಾದಾಗ ಮಾತ್ರ, ಪತ್ನಿ ಮತ್ತು ಮಕ್ಕಳನ್ನು ಚೆನ್ನಾಗಿ ಸಾಕಲು ಸಾಧ್ಯವಾಗುತ್ತದೆ. ಅವರಿಗೆ ಬೇಕಾದ್ದನ್ನು ತೆಗೆದುಕೊಡಲು, ಒಳ್ಳೆಯ ಬಟ್ಟೆ, ಹೊಟ್ಟೆ ತುಂಬ ಊಟ ಹಾಕಲು ಸಾಧ್ಯವಾಗುತ್ತದೆ. ಇನ್ನು ಹಿಂದೂ ಧರ್ಮದ ಪ್ರಕಾರ, ಪತಿ ಉದ್ಧಾರವಾಗಬೇಕು, ಶ್ರೀಮಂತನಾಗಬೇಕು ಅಂದ್ರೆ, ಪತ್ನಿ ಕೆಲ ಕೆಲಸಗಳನ್ನು ಮಾಡಬೇಕಾಗುತ್ತದೆ. ಹಾಗಾದ್ರೆ ಏನು ಆ ಕೆಲಸ ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ವಾಕ್ಯ ಸಿದ್ದಿ, ಮಂತ್ರಸಿದ್ದಿ ಯಂತ್ರ ಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕ್ಕೈಕ ಜೋತಿಷ್ಯರು ವಿದ್ವಾನ್ ವಿದ್ಯಾಧರ್ 9686268564 ಇಷ್ಟ ಪಟ್ಟವರು ನೀಮ್ಮಂತೇ ಆಗಲು, ಪ್ರೀತಿಯಲ್ಲಿ ಮೋಸ ಹೋಗಿದ್ದರೆ ಮದುವೆ ವಿಳಂಬ, ಸತಿ ಪತಿ ಕಲಹ, ಸಂತಾನ, ಅತ್ತೆ ಸೋಸೆ ಕಲಹ, ಶತ್ರು ಭಾದೆ, ಅನಾರೋಗ್ಯ, ಸಾಲದ ಭಾದೆ, ಮನೆಯಲ್ಲಿ ಅಶಾಂತಿ, ಬೀಜೀನೇಸ್ಸ ನಲ್ಲಿ ನಷ್ಟ , ಕೋರ್ಟ್ ಕೇಸ್, ಎಷ್ಟೇ ಪ್ರಯತ್ನ ಜೀವನದಲ್ಲಿ ಏಳಿಗೆ ಅಭಿವೃದ್ಧಿ ಆಗದೆ ನೋಂದಿದ್ದರೆ ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಕೇವಲ 2 ದಿನದಲ್ಲಿ…
ಬೆಂಗಳೂರು: ಕೆ ಎಸ್ ಆರ್ ಟಿಸಿ ಕಚೇರಿ ಸಹಾಯಕರ ಹುದ್ದೆಗೆ ಅರ್ಜಿ ಸಲ್ಲಿಸಿದ್ದವರಿಗೆ ಮಹತ್ವದ ಮಾಹಿತಿ ಎನ್ನುವಂತೆ, ಸಂಭವನೀಯ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಕುರಿತಂತೆ ಕರಾರಸಾ ನಿಗಮ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ನಿಗಮದ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಬಾಕಿ ಇದ್ದ ಕಛೇರಿ ಸಹಾಯಕ (ತೋಟಗಾರಿಕೆ– IV) ಪರಿಶಿಷ್ಟ ಜಾತಿ ಹಿಂಬಾಕಿ ಹುದ್ದೆಯ ಸಂಭವನೀಯ ಆಯ್ಕೆಪಟ್ಟಿ -2 ನ್ನು ದಿನಾಂಕ 02-04-2025 ರಂದು ನಿಗಮದ ಕೇಂದ್ರ ಕಛೇರಿಯ ಸೂಚನಾ ಫಲಕ ಮತ್ತು ಅಧಿಕೃತ ವೆಬ್-ಸೈಟ್ ksrtcjobs.karnataka.gov.in ನಲ್ಲಿ ಪ್ರಕಟಿಸಲಾಗಿದೆ ಎಂದು ತಿಳಿಸಿದೆ. ಯಾವುದಾದರೂ ಆಕ್ಷೇಪಣೆಗಳಿದ್ದಲ್ಲಿ ಸಂಭವನೀಯ ಆಯ್ಕೆಪಟ್ಟಿ ಪ್ರಕಟಿಸಿದ 15 ದಿನಗಳ ಒಳಗಾಗಿ ಪೂರಕ ದಾಖಲಾತಿಗಳೊಂದಿಗೆ ಆಕ್ಷೇಪಣೆಗಳನ್ನು ಅಧ್ಯಕ್ಷರು, ಆಯ್ಕೆ ಸಮಿತಿ, ಕರಾರಸಾ ನಿಗಮ, ಕೇಂದ್ರ ಕಛೇರಿ, ಕೆ.ಹೆಚ್. ರೋಡ್, ಶಾಂತಿನಗರ, ಬೆಂಗಳೂರು-27 ಇವರಿಗೆ ಸಲ್ಲಿಸುವುದು ಅಂತ ಹೇಳಿದೆ. https://kannadanewsnow.com/kannada/summer-special-trains-to-run-between-belagavi-mau-hubballi-katihar/ https://kannadanewsnow.com/kannada/sc-refuses-to-quash-summons-issued-to-rahul-gandhi-for-derogatory-remarks-against-savarkar/
ಬೆಂಗಳೂರು: ಬೇಸಿಗೆ ಅವಧಿಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ನೈಋತ್ಯ ರೈಲ್ವೆಯು ಬೆಳಗಾವಿ-ಮವೂ ನಡುವೆ 6 ಟ್ರಿಪ್ ಮತ್ತು ಹುಬ್ಬಳ್ಳಿ-ಕಟಿಹಾರ್ ನಡುವೆ 4 ಟ್ರಿಪ್ ಬೇಸಿಗೆ ವಿಶೇಷ ರೈಲುಗಳನ್ನು ಓಡಿಸಲಿದೆ. ಈ ವಿಶೇಷ ರೈಲುಗಳ ಸೇವೆ ಈ ಕೆಳಗಿನಂತಿವೆ: 1. ಬೆಳಗಾವಿ-ಮವೂ ನಡುವೆ 6 ಟ್ರಿಪ್ ವಿಶೇಷ ರೈಲು (07327/07328) ಸಂಚಾರ: ರೈಲು ಸಂಖ್ಯೆ 07327 ಏಪ್ರಿಲ್ 6 ರಿಂದ ಮೇ 11, 2025 ರವರೆಗೆ ಪ್ರತಿ ಭಾನುವಾರ ಬೆಳಗಾವಿಯಿಂದ ಬೆಳಿಗ್ಗೆ 11:30 ಗಂಟೆಗೆ ಹೊರಟು, ಮಂಗಳವಾರ ಬೆಳಿಗ್ಗೆ10:30 ಗಂಟೆಗೆ ಉತ್ತರ ಪ್ರದೇಶದ ಮವೂ ನಿಲ್ದಾಣ ತಲುಪಲಿದೆ. ಇದೇ ರೈಲು (07328) ಏಪ್ರಿಲ್ 9 ರಿಂದ ಮೇ 14, 2025 ರವರೆಗೆ ಪ್ರತಿ ಬುಧವಾರ ಮವೂ ನಿಲ್ದಾಣದಿಂದ ರಾತ್ರಿ 8:00 ಗಂಟೆಗೆ ಹೊರಟು, ಶುಕ್ರವಾರ ಸಾಯಂಕಾಲ 5:00 ಗಂಟೆಗೆ ಬೆಳಗಾವಿ ನಿಲ್ದಾಣಕ್ಕೆ ಆಗಮಿಸಲಿದೆ. ಈ ರೈಲು ಎರಡೂ ಮಾರ್ಗಗಳಲ್ಲಿ ಲೋಂಡಾ, ಧಾರವಾಡ, ಎಸ್ಎಸ್ಎಸ್ ಹುಬ್ಬಳ್ಳಿ, ಬದಾಮಿ, ಬಾಗಲಕೋಟ, ಆಲಮಟ್ಟಿ, ವಿಜಯಪುರ, ಸೋಲಾಪುರ, ಕುರ್ದುವಾಡಿ,…
ಬೆಂಗಳೂರು: ಪ್ರಸಕ್ತ ಸಾಲಿನ ಬೇಸಿಗೆಯಲ್ಲಿ ವಾಡಿಕೆಗಿಂತ ಹೆಚ್ಚು ತಾಪಮಾನ ಏರಿಕೆಯಾಗಿದ್ದು, ಹೆಚ್ಚಿನ ಬಿಸಿಲು ಇರುವ ಕಾರಣ, ಗ್ರಾಮೀಣ ಭಾಗದ ಜೀವನೋಪಾಯದ ಪ್ರಮುಖ ಭಾಗವಾದ ನರೇಗಾ ಯೋಜನೆಯಡಿ ಕೂಲಿ ಕೆಲಸ ಮಾಡುವ ಬೆಳಗಾವಿ ಮತ್ತು ಕಲಬುರಗಿ ಕಂದಾಯ ವಿಭಾಗದ ಕಾರ್ಮಿಕರಿಗೆ ಎಪ್ರಿಲ್ ಮತ್ತು ಮೇ ಮಾಹೆಗಳಲ್ಲಿ ಶೇ.30 ರಷ್ಟು ಹಾಗೂ ಜೂನ್ ಮಾಹೇಯಲ್ಲಿ ಶೇ.20 ರಷ್ಟು ಕೆಲಸದ ಪ್ರಮಾಣದಲ್ಲಿ ರಿಯಾಯಿತಿ ಘೋಷಿಸಿರುವುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಬೇಸಿಗೆ ದಿನಗಳಲ್ಲಿ ಕೂಲಿ ಕಾರ್ಮಿಕರು ಶಾಖಾಘಾತದಿಂದ, ತಮ್ಮ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮಗಳನ್ನು ತಪ್ಪಿಸಲು ಬಿಳಿಯ ಬಣ್ಣದ ಸಡಿಲವಾದ ಖಾದಿ ಬಟ್ಟೆಗಳನ್ನು ಹಾಗೂ ತಲೆಯ ಮೇಲೆ ಬಿಳಿ ಬಣ್ಣದ ರುಮಾಲು ಧರಿಸಿ ಕೆಲಸ ಮಾಡಬೇಕು, ಚಹಾ, ಕಾಫಿ , ತಂಪಾದ ಪಾನೀಯಗಳು, ಮಸಾಲೆ ಮತ್ತು ಎಣ್ಣೆಭರಿತ ಆಹಾರದ ಬದಲಾಗಿ ಹೆಚ್ಚು ತೇವಾಂಶವುಳ್ಳ ತರಕಾರಿ, ಅಂಬಲಿ, ಮಜ್ಜಿಗೆ, ಎಳೆನೀರು ಸೇವನೆ ಮಾಡಬೇಕು ಹಾಗೂ ನೀರನ್ನು ಯಥೇಚ್ಛವಾಗಿ ಕುಡಿಯಬೇಕು…