Subscribe to Updates
Get the latest creative news from FooBar about art, design and business.
Author: ವಸಂತ ಬಿ ಈಶ್ವರಗೆರೆ
ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.
ಬೆಂಗಳೂರು; ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪತ್ನಿ ಪಾರ್ವತಿ ಅವರು ತಮಗೆ ನೀಡಿದ್ದಂತ 14 ಮುಡಾ ಸೈಟ್ ಹಿಂದಿರುಗಿಸಿದ್ದರು. ಇಂತಹ ಸೈಟುಗಳ ಖಾತೆಯನ್ನು ಮುಡಾ ರದ್ದುಗೊಳಿಸಿ ಆದೇಶಿಸಿದೆ. ನಿನ್ನೆ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿಯವರು ನನ್ನ ಪತಿಯಾಗಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ 40 ವರ್ಷದ ಸುದೀರ್ಘ ರಾಜಕಾರಣದಲ್ಲಿ ಯಾವುದೇ ಸಣ್ಣ ಕಳಂಕವೂ ಅಂಟಿಕೊಳ್ಳದಂತಹ ನೈತಿಕತೆಯನ್ನು ವ್ರತದಂತೆ ಪಾಲಿಸಿಕೊಂಡು ಬಂದವರು. ರಾಜಕೀಯವೂ ಸೇರಿದಂತೆ ಸಾರ್ವಜನಿಕ ಜೀವನದಲ್ಲಿ ಕಾಣಿಸಿಕೊಂಡು ಅವರಿಗೆ ಮುಜುಗರ ಉಂಟು ಮಾಡಬಾರದು ಎಂಬ ನಿರ್ಧಾರಕ್ಕೆ ಬದ್ಧಳಾಗಿ ಬದುಕಿದವಳು ಎಂದಿದ್ದರು. ನಾನೆಂದೂ ಮನೆ, ಆಸ್ತಿ, ಚಿನ್ನ, ಸಂಪತ್ತನ್ನು ಬಯಸಿದವಳಲ್ಲ. ಯಾವುದೇ ಕಾರಣಕ್ಕೂ ನನ್ನಿಂದ ಅವರ ರಾಜಕೀಯ ಜೀವನಕ್ಕೆ ಒಂದು ಸಣ್ಣ ಹನಿಯಷ್ಟೂ ಕಳಂಕ ತಟ್ಟಬಾರದೆಂದು ಎಚ್ಚರಿಕೆಯಿಂದ ನಡೆದುಕೊಂಡವಳು ಎಂದು ತಿಳಿಸಿದ್ದರು. ನನ್ನ ಪತಿಗೆ ರಾಜ್ಯದ ಜನತೆ ಹರಿಸುತ್ತಾ ಬಂದ ಪ್ರೀತಿ ಅಭಿಮಾನಗಳನ್ನು ದೂರದಿಂದಲೇ ಕಂಡು ಸಂತೋಷ ಮತ್ತು ಹೆಮ್ಮೆ ಪಟ್ಟವಳು. ಹೀಗಿದ್ದರೂ ಮೈಸೂರಿನ ಮುಡಾ ನಿವೇಶನಕ್ಕೆ ಸಂಬಂಧಿಸಿದಂತೆ ಕೇಳಿಬಂದ ಆರೋಪಗಳಿಂದ ನಾನು ಘಾಸಿಗೊಂಡಿದ್ದೇನೆ.…
ಬೆಂಗಳೂರು: ಉದ್ಯೋಗ ನಗರಿಯ ಮುಟುಕ ಹೊತ್ತಿದ್ದಂತ ಬೆಂಗಳೂರಿಗೆ ಈಗ ಮತ್ತೊಂದು ಗರಿಮೆ ಸಂದಿದೆ. ಅದೇ ಇವಿ ಚಾರ್ಜಿಂಗ್ ಕೇಂದ್ರಗಳ ಸಂಖ್ಯೆಯಲ್ಲಿ ಬೆಂಗಳೂರಿಗೆ ಮೊದಲ ಸ್ಥಾನ ಲಭಿಸಿದೆ. ಹೌದು ಉದ್ಯಾನ ನಗರಿ, ಸಿಲಿಕಾನ್ ಸಿಟಿ ಬೆಂಗಳೂರಿನ ಮುಕುಟಕ್ಕೆ ʼಇವಿ ಚಾರ್ಜಿಂಗ್ ಹಬ್ʼ ಎಂಬ ಹೊಸ ಗರಿಯೊಂದು ಸೇರ್ಪಡೆಯಾಗಿದೆ. ಕೇಂದ್ರ ಇಂಧನ ಸಚಿವಾಲಯದ ಬ್ಯೂರೊ ಆಫ್ ಎನರ್ಜಿ ಎಫಿಷಿಯೆನ್ಸಿ ಸಂಸ್ಥೆ ಇತ್ತೀಚೆಗೆ ಬಿಡುಗಡೆ ಮಾಡಿದ ವರದಿ ಪ್ರಕಾರ, ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ಕೇಂದ್ರಗಳನ್ನು ಹೊಂದಿರುವ ನಗರಗಳಲ್ಲಿ ಬೆಂಗಳೂರು ಅಗ್ರ ಸ್ಥಾನದಲ್ಲಿದೆ. ಬೆಂಗಳೂರಿನ ಬೆಸ್ಕಾಂ ವ್ಯಾಪ್ತಿಯಲ್ಲಿ 5,337 ಚಾರ್ಜಿಂಗ್ ಸ್ಟೇಷನ್ ಗಳಿದ್ದರೇ, 6,676 ಒಟ್ಟು ಚಾರ್ಜಿಂಗ್ ಘಟಕಗಳಿದ್ದಾವೆ. ಇವುಗಳಲ್ಲಿ 195 ಬೆಸ್ಕಾಂ ಇವಿ ಚಾರ್ಜಿಂಗ್ ಕೇಂದ್ರಗಳು ಸೇರಿದ್ದಾವೆ. https://kannadanewsnow.com/kannada/one-killed-four-members-of-a-family-injured-in-bee-attack-in-kolar/ https://kannadanewsnow.com/kannada/breaking-in-a-heart-rending-incident-in-belagavi-mother-commits-suicide-by-jumping-into-well-with-17-month-old-baby/ https://kannadanewsnow.com/kannada/bengaluru-police-inspector-booked-for-misappropriating-seized-goods-without-returning-them/
ಬೆಂಗಳೂರು: ನಾನು ಅತ್ಮಸಾಕ್ಷಿಯಾಗಿ ಕೆಲಸ ಮಾಡುತ್ತೇನೆ ರಾಜಿನಾಮೆ ನೀಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ್ತೊಮ್ಮೆ ಸ್ಪಷ್ಟಪಡಿಸಿ ಘೋಷಿಸಿದ್ದಾರೆ. ಮುಖ್ಯಮಂತ್ರಿಯವರು ಇಂದು ರವೀಂದ್ರ ಕಲಾ ಕ್ಷೇತ್ರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ಪತ್ನಿ ಸ್ವತಂತ್ರವಾಗಿ ತೀರ್ಮಾನ ತೆಗೆದುಕೊಂಡಿದ್ದಾರೆ. ಪತ್ರ ಬರೆದಿರುವ ಕುರಿತು ನನಗೆ ಯಾವುದೇ ಮಾಹಿತಿಯಿಲ್ಲ ಎಂದರು. ಅವರ ಸಹೋದರ ಮಲ್ಲಿಕಾರ್ಜುನ ಸ್ವಾಮಿಯವರು ಜಮೀನಿನ ಮಾಲೀಕರಾಗಿದ್ದರು. ಉಡುಗೊರೆ ರೂಪದಲ್ಲಿ ನನ್ನ ಪತ್ನಿಗೆ 3 ಎಕರೆ 16 ಗುಂಟೆ ಜಮೀನು ನೀಡಿದ್ದರು. ಅದನ್ನು ಮುಡಾದವರು ಒತ್ತುವರಿ ಮಾಡಿಕೊಂಡು ನಿವೇಶನಗಳನ್ನು ರಚಿಸಿ ಮಾರಿಕೊಂಡಿದ್ದರು. ಅದಕ್ಕೆ ಬದಲಿ ನಿವೇಶನ ಕೋರಿದ್ದು, ವಿಜಯನಗರದ 3 ಮತ್ತು 4 ನೇ ಹಂತದಲ್ಲಿ ನಿವೇಶನ ಮಂಜೂರು ಮಾಡಿತ್ತು. ನನ್ನ ಪತ್ನಿಯವರು ವಿಜಯನಗರದಲ್ಲೇ ನೀಡುವಂತೆ ಕೇಳಿರಲಿಲ್ಲ. ಈಗ ಅದು ದೊಡ್ಡ ವಿವಾದವಾಗಿದೆ. ಇದರಿಂದ ನನ್ನ ಪತಿಯ ತೇಜೋವಧೆಯಾಗುತ್ತಿರುವುದು ಹಾಗೂ ರಾಜಕೀಯ ದ್ವೇಷ ಹಾಗೂ ಸೇಡನ್ನು ತೀರಿಸಿಕೊಳ್ಳತ್ತಿರುವ ಕೆಲಸವನ್ನು ವಿರೋಧಿಗಳು ಮತ್ತು ವಿರೋಧ ಪಕ್ಷಗಳು ಮಾಡುತ್ತಿರುವುದರಿಂದ ಮನನೊಂದು ನಿವೇಶನಗಳನ್ನು ಮರಳಿ ನೀಡಲು ತೀರ್ಮಾನಿಸಿದ್ದಾರೆ…
ಕಲಬುರಗಿ : ಹೈಕೋರ್ಟ್ ತೀರ್ಪು, ಜನಪ್ರತಿನಿಧಿಗಳ ಕೋರ್ಟಿನ ಆದೇಶದ ಬಳಿಕ ನಿನ್ನೆ ಇ.ಡಿ. ಕೇಸು ದಾಖಲಾಗಿದೆ. ರಾಜ್ಯಪಾಲರು ದೆಹಲಿಯ ಕೈಗೊಂಬೆ ಎನ್ನುತ್ತಿದ್ದ ಸಿದ್ದರಾಮಯ್ಯನವರು ನಿವೇಶನ ವಾಪಸ್ ನೀಡುತ್ತಿರುವುದು ಕಾನೂನಿನ ಕುಣಿಕೆಯಿಂದ ಪಾರಾಗುವ ಉದ್ದೇಶದಿಂದ ಎಂದು ರಾಜಕುಮಾರ ಪಾಟೀಲ ತೇಲ್ಕೂರ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿರುವ ಅವರು ಸಿದ್ದರಾಮಯ್ಯನವರು ತಪ್ಪು ಮಾಡಿದ್ದನ್ನು ಅಧಿಕೃತವಾಗಿ ಒಪ್ಪಿಕೊಂಡಂತಾಗಿದೆ. 2011ರಲ್ಲಿ ಅಂದಿನ ಸಿಎಂ ಆಗಿದ್ದ ಯಡಿಯೂರಪ್ಪ ಅವರ ವಿರುದ್ಧ ಆರೋಪ ಬಂದಿತ್ತು. ಆಗ, ತಪ್ಪು ಮಾಡದಿದ್ದರೆ ಯಾಕೆ ಸೈಟ್ ಸರೆಂಡರ್ ಮಾಡಿದ್ದಾರೆ ಎಂದು ಸಿದ್ದರಾಮಯ್ಯನವರು ಪ್ರಶ್ನಿಸಿದ್ದರು .ಕಳಂಕ, ಆರೋಪಿ ಸ್ಥಾನದಲ್ಲಿರುವ ಸಿದ್ದರಾಮಯ್ಯನವರು ಇನ್ನಾದರೂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಅಲ್ಲದೆ, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುವ ಮೊದಲು ಗೌರವಾನ್ವಿತ ರಾಜ್ಯಪಾಲರ ಬಳಿ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದ್ದಾರೆ. ಸಿಎಂ ತಮ್ಮ ಸ್ಥಾನದಿಂದ ಇಳಿಯುವುದನ್ನೇ ಕಾಂಗ್ರೆಸ್ ಪಕ್ಷದ ಕೆಲವರು ಕಾಯುತ್ತಿದ್ದಾರೆ ಎಂದು ಮುಖ್ಯಮಂತ್ರಿಗಳ ಆಪ್ತರಾದ ಮಹದೇವಪ್ಪ ಅವರು ಹೇಳಿದ್ದಾರೆ. ಡಿಸಿಎಂ ಶಿವಕುಮಾರ್ ಅವರು ಗೌಪ್ಯವಾಗಿ ಪರಮೇಶ್ವರರನ್ನು…
ಬೆಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ನಡೆಯುವ ಉಪಚುನಾವಣೆಗೆ ಬಿಜೆಪಿ (ಎನ್.ಡಿ.ಎ) ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಕಿಶೋರ್ ಕುಮಾರ್ ಪುತ್ತೂರು ಅವರಿಗೆ ಅಭಿನಂದನೆಗಳನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತಿಳಿಸಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಭಾರತೀಯ ಜನತಾ ಪಾರ್ಟಿ ಸಾಮಾಜಿಕ ನ್ಯಾಯಕ್ಕೆ ನಿರಂತರ ಒತ್ತುಕೊಡುತ್ತಾ ಬಂದಿದೆ. ಈ ನಿಟ್ಟಿನಲ್ಲಿ ಅತಿ ಹಿಂದುಳಿದ ಸಮಾಜಕ್ಕೆ ಸೇರಿದ ಕಿಶೋರ್ ಕುಮಾರ್ ಪುತ್ತೂರು ಅವರನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡುವ ಮೂಲಕ ಪಕ್ಷದ ವರಿಷ್ಠರು ಸಾಮಾಜಿಕ ನ್ಯಾಯ ಹಾಗೂ ಅವಕಾಶ ವಂಚಿತ ಸಮುದಾಯಗಳಿಗೆ ರಾಜಕೀಯ ಪ್ರಾತಿನಿಧ್ಯ ಕೊಡುವ ಬದ್ಧತೆ ತೋರಿದ್ದಾರೆ ಎಂದಿದ್ದಾರೆ. ಇದಕ್ಕಾಗಿ ಪಕ್ಷದ ವರಿಷ್ಠರಾದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಜೀ ಅವರು, ರಾಷ್ಟ್ರೀಯ ಅಧ್ಯಕ್ಷರು ಹಾಗೂ ಕೇಂದ್ರ ಸಚಿವರಾದ ಜೆಪಿ ನಡ್ಡಾ ಜೀ ಅವರು ಹಾಗೂ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಜೀ ಅವರು ಸೇರಿದಂತೆ ಪಕ್ಷದ ವರಿಷ್ಠರಿಗೆ ನಾನು ಕೃತಜ್ಞತಾಪೂರ್ವಕವಾಗಿ ಅಭಿನಂದಿಸಿದ್ದಾರೆ. ಕಿಶೋರ್…
ಬೆಂಗಳೂರು: ಸಿಎಂ ಸಿದ್ಧರಾಮಯ್ಯ ಅವರು ಮೂಡಾ ಹಗರಣದ ನೈತಿಕ ಹೊಣೆ ಹೊತ್ತು, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ನೈತಿಕತೆಯ ಪ್ರಜ್ಞೆಯನ್ನು ಪ್ರದರ್ಶಿಸುವ ಅಗತ್ಯವಿದೆ ಎಂಬುದಾಗಿ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು ನೀತಿ ಮತ್ತು ನ್ಯಾಯದ ಹಾದಿಯನ್ನು ಬಿಟ್ಟು ಎಷ್ಟು ದೂರ ಹೋದರೂ, ಒಂದು ದಿನ ಬಂದು ಸತ್ಯದ ಎದುರು ಶರಣಾಗಬೇಕಾಗುತ್ತದೆ. ಸಿದ್ದರಾಮಯ್ಯ ಅವರ ನಿವೇಶನ ಹಿಂದಿರುಗಿಸುವ ನಿರ್ಧಾರಕ್ಕೆ “ಕತ್ತಲು ಕಟ್ಟಿ ಹೋದ ಮೇಲೆ ದೀಪ ಹಚ್ಚಿದಂತೆ” ಎಂಬ ಗಾದೆ ನಿಖರವಾಗಿ ಅನ್ವಯಿಸುತ್ತದೆ ಎಂದಿದ್ದಾರೆ. ಒಳ್ಳೆಯದ್ದನ್ನು ಮಾಡಬೇಕಾದ ಸಮಯವು ಕಳೆದುಹೋದ ಮೇಲೆ ಬಂದ ಜ್ಞಾನ, ಅನಿವಾರ್ಯವಾಗಿ ಪಶ್ಚಾತ್ತಾಪವನ್ನೇ ತರುತ್ತದೆ ಎಂಬುದು ಮಾನ್ಯ ಸಿದ್ದರಾಮಯ್ಯ ರವರ ನಡೆಯಿಂದ ಸ್ಪಷ್ಟವಾಗಿದೆ ಎಂದು ತಿಳಿಸಿದ್ದಾರೆ. ಅವರ ತಪ್ಪುಗಳನ್ನು ಒಪ್ಪಿಕೊಳ್ಳದೆ, ಬಿಜೆಪಿ ಮೇಲೆ ನಿರಂತರ ಆರೋಪ ಮಾಡಿ, ಗೌರವಾನ್ವಿತ ರಾಜ್ಯಪಾಲರನ್ನು ಮತ್ತು ಅವರ ಹುದ್ದೆಯನ್ನು ಅಪಮಾನಿಸುವಂತ ಹೇಳಿಕೆಗಳನ್ನು ನೀಡುತ್ತಾ ಕಾಲಹರಣ ಮಾಡಿ, ನಮ್ಮ ಪಕ್ಷದ ಮೈಸೂರು…
ಶಿವಮೊಗ್ಗ : ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ದೈಹಿಕ ಮತ್ತು ಬೌದ್ಧಿಕ ಸಾಮರ್ಥ್ಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರ ಮಹತ್ವದ ನಿರ್ಣಯಗಳನ್ನು ಕೈಗೊಂಡು ಅನುಷ್ಠಾನಗೊಳಿಸಿದೆ. ಈ ಕಾರ್ಯಕ್ರಮದ ಭಾಗವಾಗಿ ರಾಜ್ಯದ ಎಲ್ಲಾ ಶಾಲೆಗಳಲ್ಲಿ 01 ರಿಂದ 10ನೇ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ವಾರದ 06 dinagala kaala ಮಧ್ಯಾಹ್ನದ ಬಿಸಿ ಊಟದ ಜೊತೆಗೆ ಮೊಟ್ಟೆಯನ್ನು ವಿತರಿಸಲಾಗುತ್ತಿದೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್ ಬಂಗಾರಪ್ಪ ಅವರು ಹೇಳಿದರು. ಅವರು ಇಂದು ಅನವಟ್ಟಿಯ ಸರ್ಕಾರಿ ಶಾಲಾ ಆವರಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಈ ಕಾರ್ಯಕ್ರಮದ ವ್ಯವಸ್ಥಿತ ಅನುಷ್ಠಾನಕ್ಕಾಗಿ ವಿಪ್ರೊ ಮುಖ್ಯಸ್ಥ ಹಾಗೂ ಪ್ರತಿಸ್ಥಿತ ಅಜೀಮ್ ಪ್ರೇಮ್ ಜಿ ಫೌಂಡೇಶನ್ ನ್ನೊಂದಿಗೆ ಮೂರು ವರ್ಷಗಳ ಅವಧಿಗೆ ಒಡಂಬಡಿಕೆ ಮಾಡಿಕೊಳ್ಳಲಾಗಿದ್ದು,1591ರೂ. ಗಳ ಆರ್ಥಿಕ ನೆರವನ್ನು ಪಡೆದುಕೊಳ್ಳಲಾಗುತ್ತಿದೆ ಎಂದರು. ಶಿಕ್ಷಣ ಕ್ಷೇತ್ರದಲ್ಲಿ ಅನೇಕ ಮಹತ್ವದ ಬದಲಾವಣೆಗಳನ್ನು ತರಲಾಗುತ್ತಿದ್ದು…
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಬಿಜೆಪಿಯ ಪ್ರಧಾನ ಕಾರ್ಯದರ್ಶಿಯಾಗಿರುವಂತ ಕಿಶೋರ್ ಕುಮಾರ್ ಪುತ್ತೂರ್ ಗೆ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಸವಿತಾ ಸಮಾಜದ ಮುಖಂಡರಾಗಿರುವಂತ ಕಿಶೋರ್ ಕುಮಾರ್ ಪುತ್ತೂರ್ ಅವರು, ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿಯ ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ಮಾಡುತ್ತಿದ್ದರು. ಇಂತಹ ಕಿಶೋರ್ ಕುಮಾರ್ ಅವರಿಗೆ ವಿಧಾನ ಪರಿಷತ್ ಉಪ ಚುನಾವಣೆಗೆ ಟಿಕೆಟ್ ನೀಡಲಾಗಿದೆ. ಕೋಟಾ ಶ್ರೀನಿವಾಸ ಪೂಜಾರಿ ಅವರ ರಾಜೀನಾಮೆಯಿಂದ ತೆರವಾದಂತ ಸ್ಥಾನಕ್ಕೆ ಉಪ ಚುನಾವಣೆ ಘೋಷಣೆಯಾಗಿತ್ತು. ಕೋಟಾ ಶ್ರೀನಿವಾಸ ಪೂಜಾರಿಯವರು ಸಂಸದರಾಗಿ ಆಯ್ಕೆಯಾದ ನಂತ್ರ ಅವರು ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಒಂದು ಸ್ಥಾನಕ್ಕೆ ಈಗ ಉಪ ಚುನಾವಣೆ ಘೋಷಣೆಯಾಗಿತ್ತು. ವಿಧಾನ ಪರಿಷತ್ ಒಂದು ಸ್ಥಾನಕ್ಕೆ ಉಪ ಚುನಾವಣೆಗಾಗಿ ಸೆ.26ರಂದು ಅಧಿಸೂಚನೆ ಹೊರಡಿಸಲಾಗಿತ್ತು. ಅಕ್ಟೋಬರ್.3 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಅಕ್ಟೋಬರ್.4ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಅಕ್ಟೋಬರ್.7 ನಾಮಪತ್ರ ವಾಪಾಸ್ ಪಡೆಯಲು ಕೊನೆಯ ದಿನಾಂಕವಾಗಿದೆ. ಇನ್ನೂ…
ಬೆಂಗಳೂರು: ರಾಜ್ಯದ ಒಂದು ವಿಧಾನಪರಿಷತ್ ಸ್ಥಾನಕ್ಕೆ ಉಪ ಚುನಾವಣೆ ಘೋಷಣೆ ಮಾಡಲಾಗಿದೆ. ಪ್ರಕಟಿತ ವೇಳಾಪಟ್ಟಿಯಂತೆ ಅಕ್ಟೋಬರ್ 21ರಂದು ಮತದಾನ ನಡೆದು, ಅಂದೇ ಮತ ಏಣಿಕೆಯ ನಂತ್ರ ಫಲಿತಾಂಶ ಪ್ರಕಟವಾಗಲಿದೆ. ಈ ದಕ್ಷಿಣ ಕನ್ನಡ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಬಿಜೆಪಿಯಿಂದ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಪುತ್ತೂರ್ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಉಪ ಚುನಾವಣೆ ನಿಗದಿ ಪಡಿಸಲಾಗಿದೆ. ಕೋಟಾ ಶ್ರೀನಿವಾಸ ಪೂಜಾರಿ ಅವರ ರಾಜೀನಾಮೆಯಿಂದ ತೆರವಾದಂತ ಸ್ಥಾನಕ್ಕೆ ಉಪ ಚುನಾವಣೆ ಘೋಷಣೆಯಾಗಿತ್ತು. ಕೋಟಾ ಶ್ರೀನಿವಾಸ ಪೂಜಾರಿಯವರು ಸಂಸದರಾಗಿ ಆಯ್ಕೆಯಾದ ನಂತ್ರ ಅವರು ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಒಂದು ಸ್ಥಾನಕ್ಕೆ ಈಗ ಉಪ ಚುನಾವಣೆ ಘೋಷಣೆಯಾಗಿತ್ತು. ವಿಧಾನ ಪರಿಷತ್ ಒಂದು ಸ್ಥಾನಕ್ಕೆ ಉಪ ಚುನಾವಣೆಗಾಗಿ ಸೆ.26ರಂದು ಅಧಿಸೂಚನೆ ಹೊರಡಿಸಲಾಗಿತ್ತು. ಅಕ್ಟೋಬರ್.3 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಅಕ್ಟೋಬರ್.4ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಅಕ್ಟೋಬರ್.7 ನಾಮಪತ್ರ ವಾಪಾಸ್…
ಬೆಂಗಳೂರು : ಹಿರಿಯ ನಾಗರಿಕರ ಸಾಧನೆಗಳು ಯುವಜನರಿಗೆ ಸ್ಪೂರ್ತಿ .ಹಿರಿಯರ ಬದುಕು ಕೇವಲ ಆದರ್ಶವಾಗಿಸದೇ, ಸಮಾಜಮುಖಿಯಾಗಿ ಕೆಲಸ ಮಾಡುವ ಮೂಲಕ ಅವರಿಗೆ ಗೌರವ ಸಲ್ಲಿಸಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರ ದಲ್ಲಿ ಆಯೋಜಿಸಲಾಗಿದ್ದ ವಿಶ್ವ ಹಿರಿಯ ನಾಗರೀಕರ ದಿನಾಚರಣೆ-2024 ಯನ್ನು ಉದ್ಘಾಟನೆ ಮಾಡಿ ನಂತರ ಕಾರ್ಯಕ್ರಮ ವನ್ನು ಉದ್ದೇಶಿಸಿ ಮಾತನಾಡಿದರು. ಈ ಬಾರಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು, ‘ಘನತೆಯ ಬಾಳಿನೊಂದಿಗೆ ವಯೋಪಕ್ವತೆ: ವಿಶ್ವದಾದ್ಯಂತ ಹಿರಿಯ ಜೀವಿಗಳಿಗೆ ಆರೈಕೆ ಮತ್ತು ಬೆಂಬಲ ವ್ಯವಸ್ಥೆಗಳನ್ನು ಸದೃಢಗೊಳಿಸುವುದರ ಮಹತ್ವ’ಎಂಬ ವಿಶ್ವಸಂಸ್ಥೆಯ ಘೋಷವಾಕ್ಯದೊಂದಿಗೆ ಆಚರಿಸಲಾಗುತ್ತಿದೆ ಎಂದರು. ವಿಶ್ವಮಾನವರಾಗಲು ಹಿರಿಯರ ಅನುಭವ ದಾರಿದೀಪ ಹಿರಿಯನ್ನು ಗೌರವದಿಂದ ಕಾಣಬೇಕು. ಅವರ ಅನುಭವಗಳನ್ನು ಗೌರವರಿಸಿ ಪಾಲಿಸುವ ಜವಾಬ್ದಾರಿ ಎಲ್ಲರ ಮೇಲಿದೆ. ಹಿರಿಯ ಕೊಡುಗೆಗಳು ಹಾಗೂ ಅವರ ಮಾರ್ಗದರ್ಶನದಿಂದ ಜೀವನದಲ್ಲಿ ಏಳಿಗೆಯನ್ನು ಕಾಣಬಹುದು. ಬಾಲ್ಯ , ಯೌವ್ವನ, ವೃದ್ಧಾಪ್ಯ, ಮಾನವನ ಜೀವನದ ಸಹಜ ಘಟ್ಟಗಳು. ಹಿರಿಯ ನಾಗರಿಕರ ಸಾಧನೆಗಳು ಯುವಜನರಿಗೆ ಸ್ಪೂರ್ತಿ ನೀಡಲೆಂಬ ಸದುದ್ಧೇಶದಿಂದ…











