Author: kannadanewsnow09

ಬೆಂಗಳೂರು: ನಾಳೆ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಸಿಎಂ ಸಿದ್ಧರಾಮಯ್ಯ ಅವರು ಹೊರಗುಳಿಯಲಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಈ ವೇಳೆಯಲ್ಲೇ ಸಿಎಂ ಸಿದ್ಧರಾಮಯ್ಯ ವಿರುದ್ಧ ರಾಜ್ಯಪಾಲರು ಕ್ರಮ ಕೈಗೊಳ್ಳದಂತೆ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯವನ್ನು ಕೈಗೊಳ್ಳುವ ಸಾಧ್ಯತೆ ಇದೆ. ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಾಳೆ ರಾಜ್ಯ ಸಚಿವ ಸಂಪುಟ ಸಭೆ ನಿಗದಿಯಾಗಿತ್ತು. ಈ ಸಭೆಯಲ್ಲಿ ಸಿದ್ಧರಾಮಯ್ಯ ಭಾಗಿಯಾಗುತ್ತಿಲ್ಲ. ಅವರು ಹೊರಗೆ ಉಳಿಯಲಿದ್ದಾರೆ ಎನ್ನಲಾಗುತ್ತಿದೆ. ನಾಳೆಯ ಸಚಿವ ಸಂಪುಟ ಜವಾಬ್ದಾರಿಯನ್ನು ಡಿಸಿಎಂ ಡಿ.ಕೆ ಶಿವಕುಮಾರ್ ಅವರಿಗೆ ನೀಡಿದ್ದು, ಅವರ ನೇತೃತ್ವದಲ್ಲಿಯೇ ರಾಜ್ಯಪಾಲರು ಸಿಎಂ ಸಿದ್ಧರಾಮಯ್ಯ ವಿರುದ್ಧ ಯಾವುದೇ ಕ್ರಮವನ್ನು ಕೈಗೊಳ್ಳದಂತೆ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳುವ ಸಾಧ್ಯತೆ ಇದೆ. https://kannadanewsnow.com/kannada/breaking-congress-moves-adjournment-motion-against-pm-modi-for-praising-anurags-caste-remark/ https://kannadanewsnow.com/kannada/breaking-rs-2-5-lakh-compensation-to-those-who-lost-their-houses-in-floods-new-house-to-be-given-to-them-minister-krishna-byre-gowda/

Read More

ಪ್ಯಾರಿಸ್ : ಪ್ಯಾರಿಸ್ ಒಲಿಂಪಿಕ್ಸ್‌ ಶುರುವಾದ ಕೆಲವೇ ದಿನಗಳಲ್ಲಿ ಭಾರತವು ಎರಡು ಪದಕಗಳನ್ನು ಗೆಲ್ಲುವ ಮೂಲಕ ಉತ್ತಮ ಆರಂಭವನ್ನು ಮಾಡಿದೆ. ಭಾರತೀಯ ಆಟಗಾರರು ಹೆಚ್ಚಿನ ಸಂಖ್ಯೆಯಲ್ಲಿ ಡಿ ಲಾ ವಿಲೆಟ್ ಪಾರ್ಕ್‌ನಲ್ಲಿರುವ ಇಂಡಿಯಾ ಹೌಸ್‌ಗೆ ಆಗಮಿಸುತ್ತಿದ್ದು, ಅಲ್ಲಿ ಅವರಿಗೆ ಆತ್ಮೀಯ ಸ್ವಾಗತ ನೀಡಲಾಗುತ್ತಿದೆ. ಕಂಚಿನ ಪದಕ ವಿಜೇತ ಸರಬ್ಜೋತ್ ಸಿಂಗ್, ರೋಹನ್ ಬೋಪಣ್ಣ, ಶರತ್ ಕಮಲ್, ಮನಿಕಾ ಬಾತ್ರಾ ಮತ್ತು ಅರ್ಜುನ್ ಬಾಬುತಾ ಅವರಂತಹ ಭಾರತದ ಅಗ್ರಗಣ್ಯ ಕ್ರೀಡಾಪಟುಗಳನ್ನು ಇಂಡಿಯಾ ಹೌಸ್‌ನಲ್ಲಿ ಸನ್ಮಾನಿಸಲಾಯಿತು. ಅಥ್ಲೀಟ್‌ಗಳನ್ನು ಆತ್ಮೀಯವಾಗಿ ಭೇಟಿ ಮಾಡಿದ ಐಒಸಿ ಸದಸ್ಯೆ ಮತ್ತು ರಿಲಯನ್ಸ್ ಫೌಂಡೇಷನ್‌ನ ಸಂಸ್ಥಾಪಕಿ ಮತ್ತು ಅಧ್ಯಕ್ಷೆ ನೀತಾ ಅಂಬಾನಿ ಮಾತನಾಡಿ , “ಒಲಿಂಪಿಕ್ಸ್‌ನಲ್ಲಿ ಮೊದಲ ಬಾರಿಗೆ ನಿರ್ಮಿಸಲಾದ ಇಂಡಿಯಾ ಹೌಸ್‌ಗೆ ಸುಸ್ವಾಗತ. ಭಾರತವನ್ನು ಪ್ರತಿನಿಧಿಸುವ ಅನೇಕ ಭಾರತೀಯ ಕ್ರೀಡಾಪಟುಗಳು ಇಂದು ಇಲ್ಲಿದ್ದಾರೆ. ನಿಮ್ಮಲ್ಲಿನ ಪ್ರತಿಯೊಬ್ಬರೂ ನಮ್ಮ ತಲೆ ಗರ್ವದಿಂದ ಎತ್ತುವಂತೆ ಮಾಡಿದ್ದೀರಿ. ಪದಕ ಗೆದ್ದು, ನಮ್ಮನ್ನು ಗೌರವ ದೊರೆಯುವಂತೆ ಮಾಡಿದ ಮನು ಭಾಕರ್ ಮತ್ತು ಸರಬ್ಜೋತ್ ಸಿಂಗ್…

Read More

ಕೇರಳ: ವಯನಾಡಲ್ಲಿ ಭೀಕರ ಭೂ ಕುಸಿತಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ಇದೀಗ ಸಿಕ್ಕ ಅಂಕಿ ಅಂಶದಂತೆ ಕೇರಳದ ವಯನಾಡಲ್ಲಿ 246 ಮಂದಿ ಸಾವನ್ನಪ್ಪಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಕೇರಳದ ಚೂರಲ್ಮಾಲಾ ಮತ್ತು ಮುಂಡಕ್ಕೈನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 246ಕ್ಕೆ ತಲುಪಿದೆ. ಭೂಕುಸಿತದಲ್ಲಿ ಇಡೀ ಮುಂಡಕ್ಕೈ ಗ್ರಾಮ ಕೊಚ್ಚಿ ಹೋಗಿದೆ. ಇಂದು ಮುಂಜಾನೆ ಈ ಪ್ರದೇಶದಲ್ಲಿ ರಕ್ಷಣಾ ಕಾರ್ಯಾಚರಣೆಗಳು ಪ್ರಾರಂಭವಾದವು, ಆದರೆ ರಕ್ಷಣಾ ನಿರ್ವಾಹಕರು ತುರ್ತು ಸಮಯದಲ್ಲೂ ಚೂರಲ್ಮಾಲಾದಿಂದ ಮುಂಡಕ್ಕೈವರೆಗಿನ ಪ್ರದೇಶಗಳನ್ನು ತಲುಪಲು ಸಾಧ್ಯವಾಗಲಿಲ್ಲ. ಅಧಿಕಾರಿಗಳ ವಾಹನಗಳು ಸೇರಿದಂತೆ ಅನೇಕರ ವಾಹನಗಳನ್ನು ಇಲ್ಲಿಗೆ ಹೋಗುವ ರಸ್ತೆಯಲ್ಲಿ ನಿಲ್ಲಿಸಲಾಗಿದೆ. ಈ ರೀತಿ ವಾಹನಗಳನ್ನು ನಿಲ್ಲಿಸದಂತೆ ಜಿಲ್ಲಾಧಿಕಾರಿ ಡಿ.ಆರ್.ಮೇಘಶ್ರೀ ಸೂಚಿಸಿದ್ದಾರೆ. 14 ಕಿ.ಮೀ ದಾಟಲು ಸಾಕಷ್ಟು ಸಮಯ ತೆಗೆದುಕೊಳ್ಳುತ್ತದೆ. ಬುಧವಾರ ಬೆಳಿಗ್ಗೆ ಚೂರಲ್ಮಾಲಾದಿಂದ ಒಂಬತ್ತು ಶವಗಳನ್ನು ವಶಪಡಿಸಿಕೊಳ್ಳಲಾಗಿದೆ. ಮುಂಡಕ್ಕೈನಲ್ಲಿ ಈಗ ಕೇವಲ 30 ಮನೆಗಳು ಮಾತ್ರ ಉಳಿದಿವೆ. ವಿಪತ್ತು ಪ್ರದೇಶದಲ್ಲಿ ಸುಮಾರು 500 ಮನೆಗಳು ಇದ್ದವು. 225 ಜನರನ್ನು ಕಂಡುಹಿಡಿಯಬೇಕಾಗಿದೆ ಎಂದು ಕಂದಾಯ ಇಲಾಖೆ…

Read More

ಬೆಂಗಳೂರು: ರಾಜ್ಯದಲ್ಲಿ ಅಪಾರ ಪ್ರಮಾಣದಲ್ಲಿ ಬಂಡವಾಳ ಹೂಡಿ, 30 ವರ್ಷಗಳಿಂದಲೂ ಇಲ್ಲಿ ನೆಲೆಯೂರಿರುವ ಟೊಯೋಟಾ ಕಂಪನಿಯ ಹೂಡಿಕೆ ಎಂದಿನಂತೆ ಮುಂದುವರಿಯಲಿದೆ. ಅದು ಮಹಾರಾಷ್ಟ್ರದಲ್ಲೂ ಹೂಡಿಕೆ ಮಾಡುತ್ತಿರುವುದನ್ನು ಬೇರೆ ದೃಷ್ಟಿಯಿಂದ ನೋಡುವ ಅಗತ್ಯವಿಲ್ಲ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಪ್ರಕಟಣೆ ನೀಡಿರುವ ಅವರು, ‘ಟೊಯೋಟಾ ಕಂಪನಿಯು ಮಹಾರಾಷ್ಟ್ರದಲ್ಲಿ ಹೆಚ್ಚುವರಿ ಹೂಡಿಕೆ ಮಾಡಬಹುದು. ನಮ್ಮಲ್ಲಿ ಹೂಡಿಕೆ ಮಾಡಿದ ಮಾತ್ರಕ್ಕೆ ಅವರು ಇನ್ನೊಂದು ಕಡೆ ಬಂಡವಾಳ ಹೂಡಬಾರದು ಎಂದೇನಿಲ್ಲ. ಆದರೆ ರಾಜ್ಯದಲ್ಲಿ ಆ ಕಂಪನಿಯ ಹೂಡಿಕೆ ಎಂದಿನಂತೆಯೇ ಮುಂದುವರಿದುಕೊಂಡು ಹೋಗಲಿದೆ’ ಎಂದಿದ್ದಾರೆ. ಟೊಯೋಟಾ ಕಂಪನಿಯು 2023ರಲ್ಲಿ 3,300 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಬಿಡದಿಯಲ್ಲಿ ತನ್ನ ಮೂರನೇ ಕಾರು ತಯಾರಿಕೆ ಘಟಕ ತೆರೆಯಲು ರಾಜ್ಯ ಸರಕಾರದೊಂದಿಗೆ ಒಪ್ಪಂದ ಮಾಡಿಕೊಂಡಿದೆ. 2022ರಲ್ಲಿ ಅದು ನಮ್ಮಲ್ಲಿ 4,100 ಕೋಟಿ ರೂಪಾಯಿ ಹೂಡಿದೆ. ಅದರ ಕೇಂದ್ರ ಕಚೇರಿ ಮತ್ತು ಸಂಶೋಧನಾ ಕೇಂದ್ರಗಳು ನಮ್ಮಲ್ಲೇ ಇವೆ ಎಂದು ಅವರು ಹೇಳಿದ್ದಾರೆ.…

Read More

ಒಬ್ಬನು ಏನನ್ನಾದರೂ ಮಾಡಲು ಪ್ರಯತ್ನಿಸಿದಾಗ, ಆ ವಿಷಯದಲ್ಲಿ ಯಶಸ್ವಿಯಾಗುವ ಸಂಪೂರ್ಣ ಉದ್ದೇಶದಿಂದ ಅವನು ಅದನ್ನು ಮಾಡಲು ಪ್ರಾರಂಭಿಸುತ್ತಾನೆ. ಅದರಲ್ಲಿ ಏನಾದರೂ ಅಡೆತಡೆಗಳು ಎದುರಾದರೆ ಅಥವಾ ವೈಫಲ್ಯ ಕಂಡರೆ ಬಿಡದೆ ಮತ್ತೆ ಬರಲು ಪ್ರಯತ್ನಿಸುತ್ತಲೇ ಇರುತ್ತಾರೆ. ತಮ್ಮ ಪ್ರಯತ್ನವನ್ನು ಬಿಡದೆ ಮುರುಗ ದೇವರ ಈ ಏಕಸಾರಿ ಮಂತ್ರವನ್ನು ಜಪಿಸಿದರೆ ಆ ಕಾರ್ಯದಲ್ಲಿ ಯಶಸ್ವಿಯಾಗುತ್ತಾರೆ. ಆ ಒನ್ ಲೈನ್ ಮಂತ್ರ ಯಾವುದು ಎಂಬುದನ್ನು ಈ ಮಂತ್ರ ಪೋಸ್ಟ್ ನಲ್ಲಿ ನೋಡಲಿದ್ದೇವೆ . ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಇಲ್ಲಿ ಪರಿಹಾರ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ…

Read More

ಬೆಂಗಳೂರು: ಎಸ್ ಎಸ್ ಎಲ್ ಸಿ ಪರೀಕ್ಷೆ-3ರಕ್ಕೆ ಹಾಜರಾಗುತ್ತಿರುವಂತ ವಿದ್ಯಾರ್ಥಿಗಳಿಗೆ ಕೆ ಎಸ್ ಆರ್ ಟಿಸಿ ಗುಡ್ ನ್ಯೂಸ್ ನೀಡಿದೆ. ಪರೀಕ್ಷೆಯಂದು ವಿದ್ಯಾರ್ಥಿಗಳು ಕೆ ಎಸ್ ಆರ್ ಟಿ ಸಿ ಬಸ್ಸಲ್ಲಿ ಉಚಿತವಾಗಿ ಪ್ರಯಾಣಿಸೋದಕ್ಕೆ ಅವಕಾಶ ಮಾಡಿಕೊಟ್ಟಿದೆ. ಇಂದು ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮುಖ್ಯ ಸಂಚಾರ ವ್ಯವಸ್ಥಾಪಕರು, ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ದಿನಾಂಕ: 02.08.2024 ರಿಂದ ಕರ್ನಾಟಕದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಗಳು ಪ್ರಾರಂಭವಾಗಲಿವೆ. ಈ ಸಂಬಂಧ ವಿದ್ಯಾರ್ಥಿಗಳಿಗೆ ಅವರ ವಿದ್ಯಾಸಂಸ್ಥೆಯ ಹೊರತಾಗಿ ಇತರೆ ವಿದ್ಯಾಸಂಸ್ಥೆಗಳಿಗೆ ಪರೀಕ್ಷಾ ಕೇಂದ್ರಗಳ ನಿಯೋಜನೆಯಾಗಿರುವುದರಿಂದ, ಪರೀಕ್ಷಾ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳವರೆಗೆ ನಿಗಮದ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿಸುವಂತೆ ಪತ್ರದಲ್ಲಿ ಅಧ್ಯಕ್ಷರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ರವರು ಕೋರಿರುತ್ತಾರೆ ಎಂದಿದ್ದಾರೆ. ಅದರನ್ವಯ ಕ.ರಾ.ರ.ಸಾ.ನಿಗಮವು, ಎಸ್‌ಎಸ್‌ಎಲ್ಸಿ ಪರೀಕ್ಷೆ-3 ನಡೆಯುವ ದಿನಾಂಕಗಳಂದು ಅಂದರೆ, ದಿನಾಂಕ 02.08.2024 ರಿಂದ 09.08.2024 ರವರೆಗೆ, ಪರೀಕ್ಷೆಗೆ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಉತ್ತರ ಕರ್ನಾಟಕ ಭಾಗದಲ್ಲಿ ಕೈಗಾರಿಕಾ ಕ್ರಾಂತಿಗೆ ಮುನ್ನುಡಿಯನ್ನು ಬರೆಯಲಾಗಿದೆ. ಬರೋಬ್ಬರಿ 6000 ಎಕರೆಯಲ್ಲಿ ಕೈಗಾರಿಕಾ ಕಾರಿಡಾರ್ ನಿರ್ಮಿಸಿ, ಲಕ್ಷಾಂತರ ಉದ್ಯೋಗವನ್ನು ಸೃಷ್ಠಿಸಲಿದೆ. ಈ ಬಗ್ಗೆ ರಾಜ್ಯ ಸರ್ಕಾರದಿಂದ ಮಾಹಿತಿ ನೀಡಲಾಗಿದ್ದು, ಉತ್ತರ ಕರ್ನಾಟಕದ ಧಾರವಾಡ ಸಮೀಪದಲ್ಲಿ 6000 ಎಕರೆಗಳಲ್ಲಿ ಬೃಹತ್ ಕೈಗಾರಿಕಾ ಕಾರಿಡಾರ್ ನಿರ್ಮಾಣ ಮಾಡಲಾಗುತ್ತಿದೆ ಅಂತ ತಿಳಿಸಿದೆ. ಒಟ್ಟಾರೆಯಾಗಿ ಉತ್ತರ ಕರ್ನಾಟಕ ಭಾಗದಲ್ಲಿ ಕೈಗಾರಿಕಾ ಕ್ರಾಂತಿಗೆ ಹೊಸ ಮುನ್ನುಡಿ ಬರೆದಿದ್ದು, ಧಾರವಾಡ ಸಮೀಪ 6,000 ಎಕರೆಯಲ್ಲಿ ಕೈಗಾರಿಕಾ ಕಾರಿಡಾರ್‌ ಸ್ಥಾಪನೆಗೆ ಸಿದ್ಧತೆ ನಡೆಯುತ್ತಿದೆ. ಇದರಿಂದಾಗಿ ಲಕ್ಷಾಂತರ ಉದ್ಯೋಗಗಳು ಸೃಷ್ಟಿಯಾಗಲಿದೆ ಎಂದು ಹೇಳಿದೆ. https://kannadanewsnow.com/kannada/shimoga-district-invites-applications-for-electricity-facility-for-agriculture-pump-sets/ https://kannadanewsnow.com/kannada/wayanad-landslide-death-toll-reaches-200/

Read More

ಶಿವಮೊಗ್ಗ : ಶಿವಮೊಗ್ಗ ತಾಲೂಕು ಕುಂಸಿ ಮೆಸ್ಕಾಂ ಉಪವಿಭಾಗ ವ್ಯಾಪ್ತಿಗೆ ಒಳಪಡುವ ಕುಂಸಿ, ಆಯನೂರು, ಹಾರ್ನಳ್ಳಿ ಮತ್ತು ಶ್ರೀರಾಂಪುರ ಶಾಖಾ ವ್ಯಾಪ್ತಿಗೆ ಒಳಪಡುವ ಪ.ಜಾ/ಪ.ಪಂ.ಕ್ಕೆ ಸೇರುವ ರೈತರು ಎಸ್‌ಸಿಪಿ ಮತ್ತು ಟಿಎಸ್‌ಪಿ ಯೋಜನೆಯಡಿ ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಸೌಲಭ್ಯ ಪಡೆಯಲು ಈ ಹಿಂದೆ ಗಂಗಾಕಲ್ಯಾಣ ಮತ್ತು ಎಸ್‌ಸಿಪಿ/ಟಿಎಸ್‌ಪಿ ಯೋಜನೆಯಡಿಲ್ಲಿ ವಿದ್ಯುತ್ ಸಂಪರ್ಕ ಪಡೆಯದ ರೈತರಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಗ್ರಾಮೀಣ ಉಪವಿಭಾಗ ಮೆಸ್ಕಾಂ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಆರ್‌ಟಿಸಿ, ಆಧಾರ್ ಕಾಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಫೋಟೋ, ಬಿಪಿಎಲ್ ರೇಷನ್ ಕಾರ್ಡ್, ಬ್ಯಾಂಕ್ ಪಾಸ್‌ಬುಕ್ ಜೇರಾಕ್ಸ್ ಮತ್ತು ಫೋನ್ ನಂ.ಗಳನ್ನು ಲಗತ್ತಿಸಿ ಆಗಸ್ಟ್ 14 ರೊಳಗಾಗಿ ಸಲ್ಲಿಸುವಂತೆ ಕುಂಸಿ ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. https://kannadanewsnow.com/kannada/good-news-for-those-who-lost-their-homes-in-floods-rs-2-5-lakh-from-state-govt-to-get-new-house/ https://kannadanewsnow.com/kannada/wayanad-landslide-death-toll-reaches-200/

Read More

ಕಲ್ಪೆಟ್ಟಾ: ಚೂರಲ್ಮಾಲಾ ಮತ್ತು ಮುಂಡಕ್ಕೈನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 200 ಕ್ಕೆ ತಲುಪಿದೆ. ಭೂಕುಸಿತದಲ್ಲಿ ಇಡೀ ಮುಂಡಕ್ಕೈ ಗ್ರಾಮ ಕೊಚ್ಚಿ ಹೋಗಿದೆ. ಇಂದು ಮುಂಜಾನೆ ಈ ಪ್ರದೇಶದಲ್ಲಿ ರಕ್ಷಣಾ ಕಾರ್ಯಾಚರಣೆಗಳು ಪ್ರಾರಂಭವಾದವು, ಆದರೆ ರಕ್ಷಣಾ ನಿರ್ವಾಹಕರು ತುರ್ತು ಸಮಯದಲ್ಲೂ ಚೂರಲ್ಮಾಲಾದಿಂದ ಮುಂಡಕ್ಕೈವರೆಗಿನ ಪ್ರದೇಶಗಳನ್ನು ತಲುಪಲು ಸಾಧ್ಯವಾಗಲಿಲ್ಲ. ಅಧಿಕಾರಿಗಳ ವಾಹನಗಳು ಸೇರಿದಂತೆ ಅನೇಕರ ವಾಹನಗಳನ್ನು ಇಲ್ಲಿಗೆ ಹೋಗುವ ರಸ್ತೆಯಲ್ಲಿ ನಿಲ್ಲಿಸಲಾಗಿದೆ. ಈ ರೀತಿ ವಾಹನಗಳನ್ನು ನಿಲ್ಲಿಸದಂತೆ ಜಿಲ್ಲಾಧಿಕಾರಿ ಡಿ.ಆರ್.ಮೇಘಶ್ರೀ ಸೂಚಿಸಿದ್ದಾರೆ. 14 ಕಿ.ಮೀ ದಾಟಲು ಸಾಕಷ್ಟು ಸಮಯ ತೆಗೆದುಕೊಳ್ಳುತ್ತದೆ. ಬುಧವಾರ ಬೆಳಿಗ್ಗೆ ಚೂರಲ್ಮಾಲಾದಿಂದ ಒಂಬತ್ತು ಶವಗಳನ್ನು ವಶಪಡಿಸಿಕೊಳ್ಳಲಾಗಿದೆ. ಮುಂಡಕ್ಕೈನಲ್ಲಿ ಈಗ ಕೇವಲ 30 ಮನೆಗಳು ಮಾತ್ರ ಉಳಿದಿವೆ. ವಿಪತ್ತು ಪ್ರದೇಶದಲ್ಲಿ ಸುಮಾರು 500 ಮನೆಗಳು ಇದ್ದವು. 225 ಜನರನ್ನು ಕಂಡುಹಿಡಿಯಬೇಕಾಗಿದೆ ಎಂದು ಕಂದಾಯ ಇಲಾಖೆ ಮಾಹಿತಿ ನೀಡಿತು. 7000 ಕ್ಕೂ ಹೆಚ್ಚು ಜನರು ಪರಿಹಾರ ಶಿಬಿರಗಳಲ್ಲಿದ್ದಾರೆ. ಮುಂಡಕ್ಕೈ ವಾರ್ಡ್ ಸದಸ್ಯ ಕೆ.ಬಾಬು ಮಾತನಾಡಿ, ಮನೆಗಳು ಮತ್ತು ಮನೆಗಳು ನಾಶವಾಗಿವೆ. ಜನರನ್ನು ರಕ್ಷಿಸಲು…

Read More

ಬಳ್ಳಾರಿ: ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ಗ್ರಾಮೀಣ ಪ್ರದೇಶದ 18 ರಿಂದ 45 ವಯೋಮಿತಿಯೊಳಗಿನ ನಿರುದ್ಯೋಗಿ ಯುವಕರಿಗೆ ಮೊಬೈಲ್ ರಿಪೇರಿ, ಸರ್ವಿಸ್, ಎಲೆಕ್ಟಿçಕ್ ಮೋಟರ್ ರಿವೈಂಡಿಂಗ್, ರಿಪೇರ್ ಸರ್ವಿಸ್ ತರಬೇತಿ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಆ.16 ರಿಂದ 30 ದಿನಗಳ ಕಾಲ ವಸತಿ ಸಹಿತವಾಗಿ ಉಚಿತ ತರಬೇತಿ ನೀಡಲಾಗುತ್ತದೆ. ಅರ್ಹತೆಗಳು ಬಿ.ಪಿ.ಏಲ್. ಕಾರ್ಡ ಹೊಂದಿರಬೇಕು ಕನ್ನಡವನ್ನು ಓದಲು ಹಾಗೂ ಬರೆಯಲು ಬರುವಂತಹ ನಿರುದ್ಯೋಗಿ ಸ್ವ-ಉದ್ಯೋಗ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳು ತರಬೇತಿಯಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ. ವಿದ್ಯಾರ್ಹತೆ ಕನಿಷ್ಟ 10ನೇ ತರಗತಿ ಪಾಸಾಗಿರಬೇಕು. ತರಬೇತಿಯ ಬಗ್ಗೆ ಪ್ರಾಥಮಿಕ ಅನುಭವ ಹೊಂದಿದವರಿಗೆ ಆದ್ಯತೆ ಕೊಡಲಾಗುವುದು. 35 ಜನರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು. ಈ ಮೊದಲು ತರಬೇತಿ ಪಡೆದವರು ಪುನಃ ತರಬೇತಿ ಪಡೆಯಲು ಅರ್ಹರಿರುವುದಿಲ್ಲ. ಆಸಕ್ತ ಅರ್ಹ ಅಭ್ಯರ್ಥಿಗಳು ತ್ವರಿತವಾಗಿ ತಮ್ಮ ಹೆಸರು, ವಿಳಾಸ, ಸಂಪರ್ಕಕ್ಕೆ ಲಭ್ಯವಿರುವ ದೂರವಾಣಿ ಸಂಖ್ಯೆ, ವಯಸ್ಸು, ವಿದ್ಯಾರ್ಹತೆ, ಪಡೆಯಲಿಚ್ಚಿಸಿರುವ ತರಬೇತಿ,…

Read More