Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಸಂಕಷ್ಟದಲ್ಲಿರುವ ದುರ್ಬಲ ಮಹಿಳೆಯರು ಮತ್ತು ಮಕ್ಕಳಿಗೆ ತಕ್ಷಣದ ರಕ್ಷಣೆ ನೀಡುವ ಸಲುವಾಗಿ ಅಕ್ಕ ಪಡೆಗೆ ತಂಡ ರಚಿಸಲು NCC “C” ಪ್ರಮಾಣ ಪತ್ರ ಹೊಂದಿರುವ ಮಹಿಳಾ ಅಭ್ಯರ್ಥಿಗಳಿಂದ ಸೇವಾ ಗುತ್ತಿಗೆ ಆಧಾರದ ಮೇಲೆ ಆಯ್ಕೆ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಯು 35 ರಿಂದ 45 ವಯೋಮಿತಿಯ ಮಹಿಳಾ ಅಭ್ಯರ್ಥಿ ಆಗಿರಬೇಕು. ದೈಹಿಕ ಸಧೃಡತೆ ಮತ್ತು ಸ್ಥಳೀಯ ನಿವಾಸಿ ಆಗಿರಬೇಕು. ಅಭ್ಯರ್ಥಿಗಳು ಬೆಳಿಗ್ಗೆ 7 ರಿಂದ ರಾತ್ರಿ 8 ಗಂಟೆಯವರೆಗೆ ಶಿಪ್ಟ್ನ ಲ್ಲಿ ಕೆಲಸ ನಿರ್ವಹಿಸಲು ಬದ್ದರಾಗಿರಬೇಕು. ಆಸಕ್ತರು ಉಪನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸುಧಾರಣಾ ಸಂಸ್ಥೆಗಳ ಸಂಕೀರ್ಣ, ಡಾ.ಎಂ.ಹೆಚ್ ಮರಿಗೌಡ ರಸ್ತೆ, ಬೆಂಗಳೂರು-560029. ಇಲ್ಲಿ ಅರ್ಜಿಗಳನ್ನು ಪಡೆದುಕೊಂಡು, ನವೆಂಬರ್ 13, 2025 ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 080-29578688 ಅಥವಾ ಇ-ಮೇಲ್ dwcd.dd@gmail.com ಗೆ ಭೇಟಿ ನೀಡಬಹುದು ಎಂದು ಬೆಂಗಳೂರು ನಗರ…
ಬೆಂಗಳೂರು: ನಗರದಲ್ಲಿ ಕುಡಿದು ಬರುತ್ತಿದ್ದಂತ ಚಾಲಕರಿಂದ ಲಂಚ ಪಡೆದು ಡ್ಯೂಟಿ ನೀಡುತ್ತಿದ್ದರು ಎನ್ನುವ ಕಾರಣಕ್ಕಾಗಿ ಬಿಎಂಟಿಸಿಯ ಅಧಿಕಾರಿಗಳು ಸೇರಿದಂತೆ 9 ಮಂದಿಯನ್ನು ಅಮಾನತುಗೊಳಿಸಲಾಗಿತ್ತು. ಆದರೇ ತನಿಖಾಧಿಕಾರಿಯ ತಪ್ಪು ವರದಿಯಿಂದ ಬಿಎಂಟಿಸಿ ಚಾಲಕರು, ಈಗ ಕುಡಿದು ಬಸ್ ಚಾಲನೆ ಮಾಡುತ್ತಿದ್ದಾರೆ ಎಂಬ ತಪ್ಪು ಸಂದೇಶ ಸಾರ್ವಜನಿಕರಲ್ಲಿ ಮೂಡುವಂತೆ ಆಗಿದೆ. ಆ ಮೂಲಕ ಬಿಎಂಟಿಸಿ ಸಂಸ್ಥೆಗೂ ಕೆಟ್ಟ ಹೆಸರು ಬಂದಂತೆ ಆಗಿದೆ. ಆ ಬಗ್ಗೆ ಸಂಪೂರ್ಣ ವರದಿ ಇಲ್ಲಿದೆ ಓದಿ… ಬಿಎಂಟಿಸಿ ಡಿಪೋದಲ್ಲಿ ಚಾಲಕರಿಗೆ ಡ್ಯೂಟಿಗೆ ಮುನ್ನ ಕುಡಿತ ತಪಾಸಣೆ ಬಿಎಂಟಿಸಿ ಪ್ರತಿ ಡಿಪೋಗಳಲ್ಲಿಯೂ ಡ್ಯೂಟಿಗೆ ಹಾಜರಾಗುವಂತ ಚಾಲಕರನ್ನು ಕುಡಿತದ ತಪಾಸಣೆಗೆ ಒಳಪಡಿಸಿ, ಕುಡಿದ ಪ್ರಮಾಣವನ್ನು ಪತ್ತೆ ಹಚ್ಚುವ ಪರಿಪಾಟವಿದೆ. ಒಂದು ವೇಳೆ ತಪಾಸಣೆಯ ಸಂದರ್ಭದಲ್ಲಿ ಕುಡಿದು ಬಂದಿರೋದು ಪತ್ತೆಯಾದರೇ ಅಂತವರಿಗೆ ಡ್ಯೂಟಿಯನ್ನು ನೀಡೋದಿಲ್ಲ. ಕುಡಿದು ಡ್ಯೂಟಿಗೆ ಹಾಜರಾಗೋದಕ್ಕೆ ಬಂದಂತ ಚಾಲಕರ ಕುಡಿತರ ಪ್ರಮಾಣವನ್ನು ವರದಿ ಮಾಡಿಕೊಳ್ಳುವಂತ ಡಿಪೋದಲ್ಲಿನ ಅಧಿಕಾರಿಗಳು, ಅವರಿಗೆ ದಂಡವನ್ನು ವಿಧಿಸುವ ನಿಯಮವಿದೆ. 10ಎಂಜಿ/100ಎಂಎಲ್ ಪ್ರಮಾಣದಲ್ಲಿ ಕುಡಿದಿದ್ದರೂ ಡ್ಯೂಟಿ ನೀಡಿಲ್ಲ ಈ…
ಬೆಂಗಳೂರು: ರಾಜ್ಯ ಸರ್ಕಾರದಿಂದ 42 ನಗರಸಭೆ, 53 ಪುರಸಭೆ, 23 ಪಟ್ಟಣ ಪಂಚಾಯ್ತಿಗಳಿಗೆ ಆಡಳಿತಾಧಿಕಾರಿಯನ್ನಾಗಿ ಜಿಲ್ಲಾಧಿಕಾರಿ, ಉಪ ವಿಭಾಗಾಧಿಕಾರಿ, ತಹಶೀಲ್ದಾರ್ ನೇಮಕ ಮಾಡಿ ಅಧಿಕೃತ ಆದೇಶ ಹೊರಡಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ಗೆಜೆಟ್ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಕರ್ನಾಟಕ ಪೌರಸಭೆಗಳ ಅಧಿನಿಯಮದ ಕಲಂ 11ರ ಉಪ ಕಲಂ (2) (3) (4) ಹಾಗೂ ಕಲಂ 42 (2ಎ) ರನ್ವಯ ಮತ್ತು ಸರ್ಕಾರದ ಮಾರ್ಗಸೂಚಿ ಸಂಖ್ಯೆ: ನಅಇ 65 ಎಂಎಲ್ಆರ್ 2020, ದಿನಾಂಕ 11-09-2020 ರಲ್ಲಿ ಸ್ಪಷ್ಟಪಡಿಸಿರುವಂತೆ ರಾಜ್ಯದಲ್ಲಿರುವ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಸ್ಥಾನಗಳಿಗೆ ವಿವಿಧ ಪ್ರವರ್ಗಗಳ ಮೀಸಲಾತಿಯನ್ನು 9ನೇ ಅವಧಿಗೆ ನಿಗದಿಪಡಿಸಿ ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 107 ಎಂಎಲ್ಆರ್ 2020 ನ್ನು ದಿನಾಂಕ: 08-10-2020 ರಂದು ಹೊರಡಿಸಲಾಗಿದೆ. ಈ ಆದೇಶವನ್ನು ಪ್ರಶ್ನಿಸಿ ಶ್ರೀ ಅರ್.ಬಸವರಾಜು ಚನ್ನಗಿರಿ ರವರು ಮಾನ್ಯ ಉಚ್ಚ ನ್ಯಾಯಾಲಯದಲ್ಲಿ ರಿಟ್ ಅರ್ಜಿ ಸಂಖ್ಯೆ: 11566/2020 ನ್ನು ದಾಖಲಿಸಿದ್ದು, ಮಾನ್ಯ ನ್ಯಾಯಾಲಯವು…
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬಗ್ಗೆ ಅವಹೇಳನಕಾರಿ, ಅಸಭ್ಯವಾದಂತ ವೀಡಿಯೋ ಹರಿಬಿಟ್ಟವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈ ಸಂಬಂಧ ವಕೀಲರಾದಂತ ದೀಪು ಸಿ.ಆರ್ ಎಂಬುವರು ಸದಾಶಿವನಗರ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದರು. ದೂರಿನಲ್ಲಿ ದಿನಾಂಕ 07-11-2025ರಂದು ಬೆಳಗ್ಗೆ 9 ಗಂಟೆಗೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮನೆ ಹತ್ತಿರ ಇದ್ದಾಗ ನನ್ನ ಇನ್ ಸ್ಟಾಗ್ರಾಂ ನಲ್ಲಿ ಉಪ ಮುಖ್ಯಮಂತ್ರಿ ಹಾಗೂ ಮುಖ್ಯಮಂತ್ರಿಗಳ ಬಗ್ಗೆ ಅವಹೇಳನಕಾರಿ ಮತ್ತು ಅಸಭ್ಯವಾಗಿ ವೀಡಿಯೋ ಭಿತ್ತರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಡಲಾಗಿತ್ತು ಎಂದಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದಂತ ವೀಡಿಯೋದಲ್ಲಿ ಟಿವಿ9 ಬ್ರೇಕಿಂಗ್ ನ್ಯೂಸ್ ಪ್ರಸಾರವಾಗುತ್ತಿದೆ ಎನ್ನುವ ರೀತಿಯಲ್ಲಿ ಎ1 ಟೆಕ್ನಾಲಜಿ ಬಳಸಿ ಎಡಿಟ್ ಮಾಡಿ ಸುಳ್ಳು ವೀಡಿಯೋ ಸೃಷ್ಠಿಸಿ ಮತ್ತು ಸಾಮಾಜಿಕ ಜಾಲತಾಣದಲ್ಲಿ ವೀಡಿಯೋವನ್ನು ಭಿತ್ತರಿಸಲಾಗಿದೆ ಎಂದಿದ್ದಾರೆ. ಈ ವೀಡಿಯೋ ಪೋಸ್ಟ್ ಗಳನ್ನು ಹಾಕಿರುವುದರಿಂದ ಸಮಾಜದಲ್ಲಿ ಅವರಿಬ್ಬರ ಬಗ್ಗೆ ಕೆಟ್ಟ ಅಭಿಪ್ರಾಯ ಬರುವ ದುರುದ್ದೇಶದಿಂದ, ಡಿಸಿಎಂ ಡಿ.ಕೆ ಶಿವಕುಮಾರ್…
ಶಿವಮೊಗ್ಗ: ಸಾಗರ ತಾಲ್ಲೂಕಿನ ಜನತೆಯ ಸಮಸ್ಯೆ ನಿವಾರಿಸಲು ಶಾಸಕ ಗೋಪಾಲಕೃಷ್ಣ ಬೇಳೂರು ಮಹತ್ವದ ಹೆಜ್ಜೆ ಇರಿಸಿದ್ದಾರೆ. ಇದೇ ನವೆಂಬರ್.12ರಂದು ಬೆಳಗ್ಗೆ 11 ಗಂಟೆಯಿಂದ ಕಲ್ಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಎದುರು ಜನಸಂಪರ್ಕ ಸಭೆಯನ್ನು ನಡೆಸಲಿದ್ದಾರೆ. ಈ ಬಗ್ಗೆ ಶಾಸಕ ಗೋಪಾಲಕೃಷ್ಣ ಬೇಳೂರು ಅವರ ಕಚೇರಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ದಿನಾಂಕ: 12-11-2025 ಬುಧವಾರದಂದು ಬೆಳಿಗ್ಗೆ 11-00 ಗಂಟೆಗೆ ಕಲ್ಮನೆ ಗ್ರಾಮ ಪಾಂಚಾಯಿತಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಎದುರು ಜನಸಂಪರ್ಕ ಸಭೆಯನ್ನು ಹಮ್ಮಿಕೊಳ್ಳಲಾಗಿರುತ್ತದೆ ಎಂದು ತಿಳಿಸಿದೆ. ಕಂದಾಯ ಇಲಾಖೆಯಿಂದ ಪೌತಿ ಖಾತೆ ಆಂದೋಲನ ಮಾಡಿ, ಪೌತಿ ಖಾತೆ ಅರ್ಜಿ ಸ್ವೀಕೃತಿ ಹಾಗೂ ಕಡತಗಳ ತಯಾರಿಕೆ ಕಾರ್ಯ ಮಾಡಲಾಗುತ್ತದೆ. 94ಸಿ ಮನೆ ಹಕ್ಕುಪತ್ರ ಅರ್ಜಿಗಳ ಪರಿಶೀಲನೆ ಮಾಡಲಾಗುವುದು. ಸಾಗರ ಉಪವಿಭಾಗಾಧಿಕಾರಿಗಳು, ತಹಶೀಲ್ದಾರ್ ಹಾಗೂ ಕಂದಾಯ ಇಲಾಖಾ ಸಿಬ್ಬಂದಿಗಳು ಹಾಜರಿರಲಿದ್ದಾರೆ ಎಂದಿದೆ. ತಾಲ್ಲೂಕು ಪಂಚಾಯಿತಿ ಇಲಾಖೆಯಡಿಯಲ್ಲಿ ಸಾರ್ವಜನಿಕ ಅಹವಾಲುಗಳನ್ನು ಸ್ವೀಕರಿಸಿ ಸ್ಥಳದಲ್ಲಿ ಪರಿಹಾರವನ್ನು ಕೈಗೊಳ್ಳಲಾಗುವುದು. ತಾಲ್ಲೂಕು ಕಾರ್ಯನಿರ್ವಹಣಾಧಿಕಾರಿಯವರು…
ಬೆಂಗಳೂರು: ಸೊರಬ ಪುರಸಭೆಯ ಸದಸ್ಯರ ಅವಧಿಯು ಮುಕ್ತಾಯಗೊಂಡ ಹಿನ್ನಲೆಯಲ್ಲಿ ದಿನಾಂಕ 24-10-2025ರಿಂದ ಜಾರಿಗೆ ಬರುವಂತೆ ಸಾಗರದ ಉಪ ವಿಭಾಗಾಧಿಕಾರಿಯನ್ನು ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ವಿಶೇಷ ರಾಜ್ಯ ಪತ್ರ ಪ್ರಕಟಿಸಿದ್ದು, ದಿನಾಂಕ 24-10-2025ರಿಂದ ಜಾರಿಗೆ ಬರುವಂತೆ ಸೊರಬ ಪುರಸಭೆಗೆ ಅಡಳಿತಾಧಿಕಾರಿಯನ್ನಾಗಿ ಸಾಗರದ ಉಪ ವಿಭಾಗಾಧಿಕಾರಿಯನ್ನು ನೇಮಕ ಮಾಡಿರುವುದಾಗಿ ತಿಳಿಸಿದ್ದಾರೆ. ಇದಲ್ಲದೇ ಸಾಗರ ನಗರಸಭೆಗೂ ದಿನಾಂಕ 30-10-2025ರಿಂದ ಜಾರಿಗೆ ಬರುವಂತೆ ಶಿವಮೊಗ್ಗ ಜಿಲ್ಲಾಧಿಕಾರಿಯನ್ನು ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಿ ಆದೇಶಿಸಲಾಗಿದೆ. ಅಲ್ಲದೇ ಹೊಸನಗರ ಪಟ್ಟಣ ಪಂಚಾಯ್ತಿಗೆ ದಿನಾಂಕ 04-11-2025ರಿಂದ ಜಾರಿಗೆ ಬರುವಂತೆ ಹೊಸನಗರ ತಹಶೀಲ್ದಾರ್ ಅವರನ್ನು ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಿ ಆದೇಶಿಸಲಾಗಿದೆ. ಜೋಗ-ಕಾರ್ಗಲ್ ಪಟ್ಟಣ ಪಂಚಾಯ್ತಿಗೆ ದಿನಾಂಕ 05-11-2025ರಿಂದ ಜಾರಿಗೆ ಬರುವಂತೆ ಸಾಗರ ತಹಶೀಲ್ದಾರ್ ಅವರನ್ನು ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ. ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು https://kannadanewsnow.com/kannada/government-orders-appointment-of-administrative-officers-for-42-municipal-councils-53-municipalities-and-23-town-panchayats-in-the-state/ https://kannadanewsnow.com/kannada/cm-siddaramaiah-is-shirking-responsibility-for-not-resolving-the-problems-of-sugarcane-farmers-hdk/
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ( KUWJ) ತುಮಕೂರು, ಚಿತ್ರದುರ್ಗ ಜಿಲ್ಲಾ ಘಟಕಗಳ ಕಾರ್ಯಕಾರಿ ಸಮಿತಿ ಚುನಾವಣೆಗೆ ತಡೆಯಾಜ್ಞೆ ನೀಡಲು ಹೈಕೋರ್ಟ್ ನಿರಾಕರಿಸಿದೆ. ಅದೇ ರೀತಿ ಮಂಡ್ಯ ಜಿಲ್ಲಾ ಘಟದ ಚುನಾವಣೆಗೂ ತಡೆಯಾಜ್ಞೆ ನೀಡಬೇಕೆಂಬ ಮನವಿಯನ್ನು ಸ್ಥಳೀಯ ಸಿವಿಲ್ ನ್ಯಾಯಾಲಯ ತಿರಸ್ಕರಿಸಿದ್ದು, ರಾಜ್ಯದ 20 ಜಿಲ್ಲೆಗಳಿಗೆ ನವಂಬರ್ 9ರಂದು ಭಾನುವಾರ ನಿಗದಿಯಂತೆ ಚುನಾವಣೆ ನಡೆಯಲಿದೆ. ತುಮಕೂರು,ಚಿತ್ರದುರ್ಗ ಜಿಲ್ಲಾ ಘಟಕಗಳ ಚುನಾವಣೆಯಲ್ಲಿ ಅರ್ಜಿದಾರರು ಸದಸ್ಯತ್ವ, ಮತದಾನದ ಹಕ್ಕು ಮತ್ತು ನಾಮಪತ್ರ ತಿರಸ್ಕೃತ ಸಂಬಂಧ ಹೈಕೋರ್ಟ್ ನಲ್ಲಿ ರಿಟ್ ಪಿಟಿಶನ್ ಸಲ್ಲಿಸಿದ್ದು, ಚುನಾವಣೆಗೆ ತಡೆಯಾಜ್ಞೆ ನೀಡುವಂತೆ ಮನವಿ ಮಾಡಿಕೊಂಡಿದ್ದರು. ಆದರೆ ಹೈಕೋರ್ಟ್ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರ ಪೀಠ ಮತದಾನಕ್ಕೆ ಇನ್ನೆರೆಡು ದಿನಗಳು ಉಳಿದಿದ್ದು,ಎಲ್ಲಾ ಪ್ರಕ್ರಿಯೆ ಮುಗಿಯುವ ಹಂತದಲ್ಲಿರುವುದನ್ನು ಪರಿಗಣಿಸಿ ತಡೆಯಾಜ್ಞೆ ನೀಡಲು ನಿರಾಕರಿಸಿ, ವಿಚಾರಣೆಯನ್ನು ಮುಂದೂಡಿದ್ದಾರೆ. ಇದರಿಂದ ತುಮಕೂರು ,ಚಿತ್ರದುರ್ಗದ KUWJ ಜಿಲ್ಲಾಘಟಕಗಳ ಚುನಾವಣೆಗೆ ನಿಗದಿಯಂತೆ ನ. 9 ರಂದು ನಡೆಯಲಿದೆ. Kuwj ಬೆಂಗಳೂರು ನಗರ ಘಟಕದ ಚುನಾವಣೆಗೆ ಸಿವಿಲ್ ನ್ಯಾಯಾಲಯ ಎಕ್ಸ್…
ಬೆಂಗಳೂರು: ರಾಜ್ಯ ಸರ್ಕಾರದಿಂದ ಸಾಗರ ನಗರಸಭೆಗೆ ಶಿವಮೊಗ್ಗ ಜಿಲ್ಲಾಧಿಕಾರಿಯನ್ನು ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಿ ಗೆಜೆಟ್ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಈ ಸಂಬಂಧ ರಾಜ್ಯ ಸರ್ಕಾರವು ವಿಶೇಷ ರಾಜ್ಯ ಪತ್ರವನ್ನು ಹೊರಡಿಸಲಾಗಿದ್ದು, ಕರ್ನಾಟಕ ಪೌರಸಭೆಗಳ ಅಧಿನಿಯಮದ ಕಲಂ 11ರ ಉಪ ಕಲಂ (2) (3) (4) ಹಾಗೂ ಕಲಂ 42 (2ಎ) ರನ್ವಯ ಮತ್ತು ಸರ್ಕಾರದ ಮಾರ್ಗಸೂಚಿ ಸಂಖ್ಯೆ: ನಅಇ 65 ಎಂಎಲ್ಆರ್ 2020, ದಿನಾಂಕ 11-09-2020 ರಲ್ಲಿ ಸ್ಪಷ್ಟಪಡಿಸಿರುವಂತೆ ರಾಜ್ಯದಲ್ಲಿರುವ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಸ್ಥಾನಗಳಿಗೆ ವಿವಿಧ ಪ್ರವರ್ಗಗಳ ಮೀಸಲಾತಿಯನ್ನು 9ನೇ ಅವಧಿಗೆ ನಿಗದಿಪಡಿಸಿ ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 107 ಎಂಎಲ್ಆರ್ 2020 ನ್ನು ದಿನಾಂಕ: 08-10-2020 ರಂದು ಹೊರಡಿಸಲಾಗಿದೆ. ಈ ಆದೇಶವನ್ನು ಪ್ರಶ್ನಿಸಿ ಶ್ರೀ ಅರ್.ಬಸವರಾಜು ಚನ್ನಗಿರಿ ರವರು ಮಾನ್ಯ ಉಚ್ಚ ನ್ಯಾಯಾಲಯದಲ್ಲಿ ರಿಟ್ ಅರ್ಜಿ ಸಂಖ್ಯೆ: 11566/2020 ನ್ನು ದಾಖಲಿಸಿದ್ದು, ಮಾನ್ಯ ನ್ಯಾಯಾಲಯವು ಈ ರಿಟ್ ಅರ್ಜಿ ಹಾಗೂ ಇದೇ ರೀತಿ…
ಬೆಂಗಳೂರು: ಬಿ ಎಂ ಆರ್ ಸಿ ಎಲ್ ಅತ್ಯಾವಶ್ಯಕ ಸೇವೆ ವ್ಯಾಪ್ತಿಗೆ ಒಳಪಡಿಸುವಂತ ಅಧಿಕಾರವು ರಾಜ್ಯ ಸರ್ಕಾರಕ್ಕೆ ಇಲ್ಲ ಎಂಬುದಾಗಿ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಈ ಕುರಿತಂತೆ ಹಿಎಂ ಆರ್ ಸಿಎಲ್ ಉದ್ಯೋಗಿಗಳ ಸಂಘದಿಂದ ಸಲ್ಲಿಸಿದ್ದಂತ ರಿಟ್ ಅರ್ಜಿಯನ್ನು ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಮೂರ್ತಿ ಅನಂತ ರಾಮನಾಥ ಹೆಗಡೆ ಅವರಿದ್ದ ಹೈಕೋರ್ಟ್ ಪೀಠವು ಈ ತೀರ್ಪು ನೀಡಿದೆ. ಅಲ್ಲದೇ ಜುಲೈ 7, 2017ರಂದು ರಾಜ್ಯ ಸರ್ಕಾರ ಹೊರಡಿಸಿದ್ದಂತ ಆದೇಶವನ್ನು ರದ್ದುಪಡಿಸಿದೆ. ಸಾರ್ವಜನಿಕ ಉಪಯುಕ್ತ ಸೇವೆ ಎಂದು ರಾಜ್ಯ ಸರ್ಕಾರ ಆದೇಶಿಸುವಂತಿಲ್ಲ. ಬಿಎಂಆರ್ ಸಿಎಲ್ ಪ್ರತ್ಯೇಕ ಕಂಪನಿಯಲ್ಲ. ರೈಲ್ವೆ ಕಂಪನಿಯಾಗಿದೆ. ಹೀಗಾಗಿ ಕೇಂದ್ರ ಸರ್ಕಾರವೇ ಆಡಳಿತಾತ್ಮಕ ಅಧಿಕಾರ ಹೊಂದಿದೆ ಎಂಬುದಾಗಿ ನ್ಯಾಯಮೂರ್ತಿ ಅನಂತ ರಾಮನಾಥ ಹೆಗಡೆ ಅವರಿದ್ದ ಏಕಸದಸ್ಯ ನ್ಯಾಯಪೀಠವು ಮಹತ್ವದ ತೀರ್ಪು ನೀಡಿದೆ. https://kannadanewsnow.com/kannada/illegal-ore-transportation-case-interim-bail-granted-to-mla-satish-sail-cancelled/ https://kannadanewsnow.com/kannada/the-puja-rituals-of-the-new-dodda-ankanahalli-huchamma-devi-temple-begin-from-today/
ಮಂಡ್ಯ : 2025ರ ಜಿಲ್ಲಾ ಮಟ್ಟದ ಯುವ ಸಂಸತ್ ಸ್ಪರ್ಧೆಯಲ್ಲಿ ಮದ್ದೂರು ನಗರದ ಪೂರ್ಣಪ್ರಜ್ಞ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಸಾನಿಕ. ಟಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸಂಸದೀಯ ವ್ಯವಹಾರಗಳ ಇಲಾಖೆ, ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆ ಮಂಡ್ಯ ಇವರ ಸಹಯೋಗದಲ್ಲಿ ದಿ. 6-11-2025 ರಂದು ಏರ್ಪಡಿಸಿದ್ದ 2025 ರ ಜಿಲ್ಲಾ ಮಟ್ಟದ ಯುವ ಸಂಸತ್ ಸ್ಪರ್ಧೆಯಲ್ಲಿ ಮದ್ದೂರು ನಗರದ ಪೂರ್ಣಪ್ರಜ್ಞ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಟಿ. ಸಾನಿಕ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದು, ವಿದ್ಯಾರ್ಥಿನಿಯನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಬಿ. ಧನಂಜಯ, ಸಂಸ್ಥೆಯ ಅಧ್ಯಕ್ಷೆ ಪಿ.ಕಸ್ತೂರಿ, ಮುಖ್ಯ ಶಿಕ್ಷಕ ಹೆಚ್.ಆರ್.ಅನಂತೇಗೌಡ ಹಾಗೂ ಶಿಕ್ಷಕ ವೃಂದ ಅಭಿನಂದಿಸಿದರು. https://kannadanewsnow.com/kannada/the-puja-rituals-of-the-new-dodda-ankanahalli-huchamma-devi-temple-begin-from-today/ https://kannadanewsnow.com/kannada/illegal-ore-transportation-case-interim-bail-granted-to-mla-satish-sail-cancelled/













