Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ಮಂಗಳವಾರ ಆದಾಯ ತೆರಿಗೆ ಇಲಾಖೆಯು 2025-26ರ ಮೌಲ್ಯಮಾಪನ ವರ್ಷ (AY) ಗಾಗಿ ಐಟಿಆರ್ಗಳನ್ನು ಸಲ್ಲಿಸುವ ದಿನಾಂಕವನ್ನು ಜುಲೈ 31 ರಿಂದ ಸೆಪ್ಟೆಂಬರ್ 15 ಕ್ಕೆ ವಿಸ್ತರಿಸಿದೆ. ತಮ್ಮ ಖಾತೆಗಳನ್ನು ಲೆಕ್ಕಪರಿಶೋಧನೆ ಮಾಡಬೇಕಾಗಿಲ್ಲದ ವ್ಯಕ್ತಿಗಳು ಮತ್ತು ಸಂಸ್ಥೆಗಳು ಜುಲೈ 31 ರೊಳಗೆ ಆದಾಯ ತೆರಿಗೆ ರಿಟರ್ನ್ಸ್ (ITR) ಸಲ್ಲಿಸಬೇಕಾಗುತ್ತದೆ. ಅಧಿಸೂಚಿತ ಐಟಿಆರ್ಗಳಲ್ಲಿ ಪರಿಚಯಿಸಲಾದ ವ್ಯಾಪಕ ಬದಲಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಮತ್ತು 2025-26ರ ವರ್ಷಕ್ಕೆ ಐಟಿಆರ್ ಉಪಯುಕ್ತತೆಗಳ ವ್ಯವಸ್ಥೆಯ ಸಿದ್ಧತೆ ಮತ್ತು ಬಿಡುಗಡೆಗೆ ಬೇಕಾದ ಸಮಯವನ್ನು ಪರಿಗಣಿಸಿ, ರಿಟರ್ನ್ಸ್ ಸಲ್ಲಿಸುವ ದಿನಾಂಕವನ್ನು ವಿಸ್ತರಿಸಲಾಗಿದೆ ಎಂದು ಕೇಂದ್ರೀಯ ನೇರ ತೆರಿಗೆ ಮಂಡಳಿ (CBDT) ಹೇಳಿಕೆಯಲ್ಲಿ ತಿಳಿಸಿದೆ. https://twitter.com/IncomeTaxIndia/status/1927323353251012645 “ತೆರಿಗೆದಾರರಿಗೆ ಸುಗಮ ಮತ್ತು ಅನುಕೂಲಕರ ಫೈಲಿಂಗ್ ಅನುಭವವನ್ನು ಸುಗಮಗೊಳಿಸಲು, ಜುಲೈ 31 ರಂದು ಮೂಲತಃ ನಿಗದಿಯಾಗಿದ್ದ ಐಟಿಆರ್ ಸಲ್ಲಿಸುವ ದಿನಾಂಕವನ್ನು ಸೆಪ್ಟೆಂಬರ್ 15, 2025 ರವರೆಗೆ ವಿಸ್ತರಿಸಲು ನಿರ್ಧರಿಸಲಾಗಿದೆ” ಎಂದು CBDT ತಿಳಿಸಿದೆ.
ಶಿವಮೊಗ್ಗ : ರಾಜ್ಯ ಕಾಂಗ್ರೆಸ್ ಸರ್ಕಾರದ ಎರಡು ವರ್ಷದ ಸಾಧನೆ ಅಂದ್ರೆ ಅದು ಜನರಿಗೆ ಬೆಲೆ ಏರಿಕೆಯ ಬಿಸಿ ನೀಡಿದ್ದಾಗಿದೆ. ಸಾಗರ ಶಾಸಕರದ್ದು ಹಿಂದಿನ ಶಾಸಕರ ಅವಧಿಯಲ್ಲಿ ಬಿಡುಗಡೆ ಮಾಡಲಾಗಿದ್ದಂತ ಅನುದಾನದಲ್ಲಿ ಗುದ್ದಲಿಪೂಜೆ ನೆರವೇರಿಸುತ್ತಿರೋದಾಗಿ ಸಾಗರ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ದೇವೇಂದ್ರಪ್ಪ ಯಲಕುಂದ್ಲಿ ಹೇಳಿದ್ದಾರೆ. ಇಂದು ಸಾಗರ ನಗರದ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಕೇಂದ್ರ ಸರ್ಕಾರ ಮಂಜೂರು ಮಾಡಿದಂತ ಅನುದಾನದಲ್ಲಿನ ತುಮರಿ ಸೇತುವೆ ಕಾಮಗಾರಿ ಮುಕ್ತಾಯದ ಹಂತಕ್ಕೆ ಬಂದಿದೆ. ಅದೇ ಹಸಿರುಮಕ್ಕಿ ಸೇತುವೆ ಮಾತ್ರ ಕಾಡೋಡು ತಿಮ್ಮಪ್ಪ ಅವಧಿಯಲ್ಲಿ ಮಂಜೂರಾಗಿ, ಹಾಲಿ ಶಾಸಕರು ಎರಡು ವರ್ಷ ಪೂರೈಸಿದರೂ ಮುಗಿಯುತ್ತಿಲ್ಲ ಏಕೆ ಎಂಬುದಾಗಿ ಪ್ರಶ್ನಿಸಿದರು. ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ಎರಡು ವರ್ಷದ ಸಾಧನೆ ಅಂದ್ರೆ ಅದು ಜನರಿಗೆ ಬೆಲೆ ಏರಿಕೆ ಶಾಕ್ ಕೊಟ್ಟಿದ್ದೇ ಆಗಿದೆ. ಜನನ-ಮರಣ ಪ್ರಮಾಣ ಪತ್ರ 10 ರೂಪಾಯಿ ಇದ್ದದ್ದು 50 ರೂಪಾಯಿಗೆ ಏರಿಕೆ ಮಾಡಿದ್ದು, ರೈತರ ಪಹಣಿ ಬೆಲೆ ಏರಿಸಿದ್ರು.…
ಬೆಂಗಳೂರು: ರಾಜ್ಯ ಸರ್ಕಾರವು ಕನ್ನಡ ಭಾಷೆಯನ್ನು ನಿರ್ಲಕ್ಷಿಸಿ, ಉರ್ದು ಭಾಷೆಗೆ ಹೆಚ್ಚಿನ ಅನುದಾನ ನೀಡುತ್ತಿದೆ ಎಂಬುದಾಗಿ ಬಿಜೆಪಿ ಆರೋಪಿಸಲಾಗಿತ್ತು. ಈ ಆರೋಪಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಈ ಕೆಳಗಿನಂತೆ ಸ್ಪಷ್ಟನೆ ಕೊಟ್ಟಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದ್ದು, ಕನ್ನಡ ಭಾಷೆಯನ್ನು ನಿರ್ಲಕ್ಷಿಸಿ ಉರ್ದು ಭಾಷೆಗೆ ರಾಜ್ಯ ಸರ್ಕಾರ ಹೆಚ್ಚಿನ ಅನುದಾನ ನೀಡುತ್ತಿದೆ ಎಂದು ರಾಜ್ಯ ಬಿಜೆಪಿ ಮಾಡುತ್ತಿರುವ ಅಪಪ್ರಚಾರ ಸಂಪೂರ್ಣ ಸತ್ಯಕ್ಕೆ ದೂರವಾಗಿದ್ದು, ಕೋಮುವೈಷಮ್ಯ ಹುಟ್ಟಿಸುವ ದುರುದ್ದೇಶದಿಂದ ಕೂಡಿದ್ದಾಗಿದೆ. ಒಂದು ರಾಷ್ಟ್ರೀಯ ಪಕ್ಷ ಇಷ್ಟೊಂದು ಬೇಜವಾಬ್ದಾರಿತನದಿಂದ ಕಿಡಿಗೇಡಿ ಟ್ರೋಲರ್ ಗಳ ರೀತಿ ಸುಳ್ಳು ಸುದ್ದಿಯನ್ನು ಪ್ರಚಾರ ಮಾಡುತ್ತಿರುವುದು ವಿಷಾದನೀಯ ಎಂದಿದ್ದಾರೆ. 2025-26ನೇ ಸಾಲಿನಲ್ಲಿ ರಾಜ್ಯ ಸರ್ಕಾರವು ಪ್ರಾಥಮಿಕ ಮತ್ತು ಪ್ರೌಡ ಶಿಕ್ಷಣ ಇಲಾಖೆಗೆ ₹34,438 ಕೋಟಿ ಮತ್ತು ಸಮಾಜ ಕಲ್ಯಾಣ ಮತ್ತಿತರ ಇಲಾಖೆಗಳಿಗೆ ಸೇರಿದ ಶಾಲೆಗಳಿಗೆ ₹4,150 ಕೋಟಿ ಹೀಗೆ ಕನ್ನಡ ಭಾಷೆಯ ಶಾಲೆಗಳಿಗಾಗಿಯೇ ರಾಜ್ಯ ಸರ್ಕಾರ ಒಟ್ಟು 38,688 ಕೋಟಿ ರೂ.ಗಳನ್ನು ನೀಡಿದೆ. ಇದರ…
ದಕ್ಷಿಣ ಕನ್ನಡ: ಜಿಲ್ಲೆಯ ಬಂಟ್ವಾಳದಲ್ಲಿ ಪಿಕಪ್ ವಾಹನ ಚಾಲಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿ ಕೊಲೆಗೆ ಯತ್ನಿಸಿರುವಂತ ಘಟನೆ ನಡೆದಿದೆ. ಈ ಯತ್ನದಲ್ಲಿ ಚಾಲಕ ತಪ್ಪಿಸಿಕೊಂಡು ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎನ್ನಲಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಇರಾಕೋಡಿಯಲ್ಲಿ ಪಿಕಪ್ ವಾಹನ ಚಾಲಕ ಹನೀಫ್ ತನ್ನ ವಾಹನ ನಿಲ್ಲಿಸಿ ಮರಳು ಅನ್ ಲೋಡ್ ಮಾಡುತ್ತಿದ್ದ ವೇಳೆ ಬೈಕ್ ನಲ್ಲಿ ಬಂದಂತ ಇಬ್ಬರು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ. ಕೊಳತ್ತಮಜಲು ನಿವಾಸಿ ಹನೀಫ್ ಹತ್ಯೆ ಮಾಡೋದಕ್ಕೆ ಯತ್ನಿಸಿದಂತ ವೇಳೆಯಲ್ಲಿ ಅವರಿಂದ ಪಾರಾಗಲು ಓಡಿ ಹೋಗಿದ್ದಾನೆ. ಈ ಸಂದರ್ಭದಲ್ಲಿ ಹನೀಫ್ ಜೊತೆಗಿದ್ದ ರಹೀಮ್ ಎಂಬಾತನ ಮೇಲೂ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾರೆ. ಪಿಕಪ್ ವಾಹನ ಚಾಲಕನ ಮೇಲೆ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದಂತ ವಿಷಯ ತಿಳಿದು ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ. https://kannadanewsnow.com/kannada/good-news-for-job-aspirants-applications-are-invited-for-the-recruitment-of-9499-guest-teachers/ https://kannadanewsnow.com/kannada/big-news-party-opposition-activities-have-been-expelled-by-vijayendras-first-reaction/
ಬೆಂಗಳೂರು: ಪ್ರಯಾಣಿಕರ ಅನುಕೂಲಕ್ಕಾಗಿ ಮತ್ತು ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ಕೆಳಗಿನ ರೈಲುಗಳಿಗೆ ಹೆಚ್ಚುವರಿ ಬೋಗಿಗಳನ್ನು ತಾತ್ಕಾಲಿಕ ಜೋಡಣೆಯನ್ನು ವಿಸ್ತರಿಸಲು ನೈಋತ್ಯ ರೈಲ್ವೆ ನಿರ್ಧರಿಸಿದೆ. ವಿವರಗಳು ಈ ಕೆಳಗಿನಂತಿವೆ: 1. ರೈಲು ಸಂಖ್ಯೆ 16227/16228 ಮೈಸೂರು – ತಾಳಗುಪ್ಪ – ಮೈಸೂರು ದೈನಂದಿನ ಎಕ್ಸ್ಪ್ರೆಸ್ಗೆ ತಾತ್ಕಾಲಿಕವಾಗಿ ಒಂದು ಹೆಚ್ಚುವರಿ ಸಾಮಾನ್ಯ ದ್ವಿತೀಯ ದರ್ಜೆ (GS) ಕೋಚ್ ಅಳವಡಿಸಲಾಗುವುದು. * ರೈಲು ಸಂಖ್ಯೆ 16227 (ಮೈಸೂರು-ತಾಳಗುಪ್ಪ): ಜೂನ್ 2 ರಿಂದ ಜುಲೈ 1, 2025 ರವರೆಗೆ ವರ್ಧನೆ ಜಾರಿಯಲ್ಲಿರುತ್ತದೆ. * ರೈಲು ಸಂಖ್ಯೆ 16228 (ತಾಳಗುಪ್ಪ-ಮೈಸೂರು): ಜೂನ್ 3 ರಿಂದ ಜುಲೈ 2, 2025 ರವರೆಗೆ ವರ್ಧನೆ ಜಾರಿಯಲ್ಲಿರುತ್ತದೆ. 2. ರೈಲು ಸಂಖ್ಯೆ 16589/16590 ಕೆಎಸ್ಆರ್ ಬೆಂಗಳೂರು – ಮಿರಜ್ – ಕೆಎಸ್ಆರ್ ಬೆಂಗಳೂರು ಎಕ್ಸ್ಪ್ರೆಸ್ಗೆ ತಾತ್ಕಾಲಿಕವಾಗಿ ಒಂದು ಹೆಚ್ಚುವರಿ AC ಪ್ರಥಮ ದರ್ಜೆ ಕೋಚ್ ಅಳವಡಿಸಲಾಗುವುದು. * ರೈಲು ಸಂಖ್ಯೆ 16589 (ಕೆಎಸ್ಆರ್ ಬೆಂಗಳೂರು – ಮಿರಜ್): ಜೂನ್ 2 ರಿಂದ ಜುಲೈ 1,…
ಬೆಂಗಳೂರು: ಕನ್ನಡದ ಬಗ್ಗೆ ನಟ ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅದೇ ಕನ್ನಡ ಹುಟ್ಟಿದ್ದು ತಮಿಳಿನಿಂದ ಎಂಬುದಾಗಿದೆ. ಥಗ್ ಲೈಫ್ ಇವೆಂಟ್ ನಲ್ಲಿ ಭಾಗಿಯಾಗಿದ್ದಂತ ನಟ ಕಮಲ್ ಹಾಸನ್ ಅವರು, ನಟ ಶಿವರಾಜ್ ಕುಮಾರ್ ಎದುರೇ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನಟ ಕಮಲ್ ಹಾಸನ್ ಅವರು ಕನ್ನಡ ಹುಟ್ಟಿದ್ದು ತಮಿಳಿನಿಂದ ಎಂಬುದಾಗಿ ಹೇಳುವ ಮೂಲಕ ಈಗ ವಿವಾದ ಸೃಷ್ಠಿಸಿದ್ದಾರೆ. ಈ ಮೂಲಕ ಕನ್ನಡದ ಬಗ್ಗೆ ನಟ ಕಮಲ್ ಹಾಸನ್ ವಿವಾದಿತ ಹೇಳಿಕೆ ನೀಡಿದ್ದಾರೆ. ಕೆಲ ದಿನಗಳ ಹಿಂದೆ ಖ್ಯಾತ ಗಾಯಕ ಸೋನು ನಿಗಮ್ ಕನ್ನಡಿಗರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ, ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದರು. ಅವರನ್ನು ಸ್ಯಾಂಡಲ್ ವುಡ್ ನಿಂದ ನಿಷೇಧಿಸುವಂತ ನಿರ್ಧಾರವನ್ನು ಕೈಗೊಳ್ಳಲಾಗಿತ್ತು. ಆ ಬಳಿಕ ತಮ್ಮ ತಪ್ಪಿನ ಅರಿವಾಗಿ ಕ್ಷಮೆಯಾಚಿಸಿದ್ದರು. ಈಗ ನಟ ಕಮಲ್ ಹಾಸನ್ ಕನ್ನಡದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ, ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. https://kannadanewsnow.com/kannada/reopening-of-schools-across-the-state-on-may-29-celebration-program-for-two-years-in-education/ https://kannadanewsnow.com/kannada/breaking-former-cricketer-anil-kumble-appointed-as-state-forest-department-ambassador-minister-ishwar-khandre-announces/ https://kannadanewsnow.com/kannada/big-news-party-opposition-activities-have-been-expelled-by-vijayendras-first-reaction/
ಬೆಂಗಳೂರು: ರಾಜ್ಯಾಧ್ಯಂತ ಮೇ.29ರಿಂದ ಶಾಲೆಗಳು ಪುನರಾರಂಭಗೊಳ್ಳಲಿದ್ದಾವೆ. ಈ ಹಿನ್ನಲೆಯಲ್ಲಿ ಎರಡು ವರ್ಷ, ಶಿಕ್ಷಣದಲ್ಲಿ ಹರುಷ ಎನ್ನುವಂತ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಬಗ್ಗೆ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ ಹಂಚಿಕೊಂಡಿದ್ದು, 2025-26ನೇ ಶೈಕ್ಷಣಿಕ ವರ್ಷದ ಶಾಲೆಗಳ ಪ್ರಾರಂಭೋತ್ಸವವನ್ನು ಹಬ್ಬದ ರೀತಿ ಆಚರಿಸಬೇಕು. ಇದಕ್ಕಾಗಿ ರಾಜ್ಯಾದ್ಯಂತ ʼಎರಡು ವರುಷ; ಶಿಕ್ಷಣದಲ್ಲಿ ಹರುಷʼ ಎಂಬ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೇ 29ರಂದು ಚಾಲನೆ ನೀಡುವರು ಎಂದು ತಿಳಿಸಿದ್ದಾರೆ. https://twitter.com/KarnatakaVarthe/status/1926983558821818842 https://kannadanewsnow.com/kannada/bmtc-student-bus-pass-application-invitation/ https://kannadanewsnow.com/kannada/breaking-former-cricketer-anil-kumble-appointed-as-state-forest-department-ambassador-minister-ishwar-khandre-announces/
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಸರ್ಕಾರದ ನಿರ್ದೇಶನದಂತೆ ಉಚಿತ/ರಿಯಾಯಿತಿ ದರದಲ್ಲಿ ವಿದ್ಯಾರ್ಥಿ ಪಾಸುಗಳನ್ನು ವಿತರಣೆ ಮಾಡುತ್ತಿದೆ. ಅದರಂತೆ 2025-26 ನೇ ಸಾಲಿನ ವಿದ್ಯಾರ್ಥಿ ಪಾಸಿಗಾಗಿ ದಿನಾಂಕ 26.05.2025 ರಿಂದ ಆನ್ಲೈನ್ ಮೂಲಕ ಅರ್ಜಿ ಸ್ವೀಕರಿಸಿ, ದಿನಾಂಕ 01.06.2025 ರಿಂದ ವಿದ್ಯಾರ್ಥಿ ಪಾಸುಗಳನ್ನು ಬೆಂಗಳೂರು ಒನ್ ಕೇಂದ್ರಗಳ ಮೂಲಕ ವಿತರಣೆ ಮಾಡಲಾಗುವುದು. 2025-26ನೇ ಸಾಲಿನ ವಿದ್ಯಾರ್ಥಿ ರಿಯಾಯಿತಿ ಪಾಸಿನ ಆನ್ಲೈನ್ ಅರ್ಜಿಯು ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ನಲ್ಲಿ ಲಭ್ಯವಿರುತ್ತದೆ. ವಿದ್ಯಾರ್ಥಿಗಳು ಬೆಂಗಳೂರು ಒನ್ ಕೇಂದ್ರಗಳ ಮೂಲಕವು ವಿದ್ಯಾರ್ಥಿ ಪಾಸಿಗಾಗಿ ಅರ್ಜಿಯನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ವಿದ್ಯಾರ್ಥಿ ಪಾಸುಗಳನ್ನು ಬೆಂಗಳೂರು ಒನ್ ಕೇಂದ್ರಗಳಲ್ಲಿ ಹಾಗೂ ಬೆಂ.ಮ.ಸಾ.ಸಂಸ್ಥೆಯ ಕೆಂಪೇಗೌಡ ಬಸ್ನಿಲ್ದಾಣ, ಕೆಂಗೇರಿ ಟಿಟಿಎಂಸಿ, ಹೊಸಕೋಟೆ, ಎಲೆಕ್ಟ್ರಾನಿಕ್ ಸಿಟಿ ಘಟಕ -19, ಶಾಂತಿನಗರ ಟಿಟಿಎಂಸಿ, ಕರಾರಸಾ ನಿಗಮದ ಆನೇಕಲ್ ಬಸ್ ನಿಲ್ದಾಣದಲ್ಲಿ ವಿತರಿಸಲಾಗುವುದು. ಮುಂದುವರೆದು, ಶಕ್ತಿ ಯೋಜನೆಯಡಿ ಕರ್ನಾಟಕ ರಾಜ್ಯದ ವಿದ್ಯಾರ್ಥಿನಿಯರಿಗೆ ಸಂಸ್ಥೆಯ ಸಾಮಾನ್ಯ ಸೇವೆಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಿದ್ದು, ಅದರಂತೆ ಕರ್ನಾಟಕ ರಾಜ್ಯದ…
ಬೆಂಗಳೂರು: ನಗರದಲ್ಲಿ ಟೋಯಿಂಗ್ ಹಗಲು ದರೋಡೆಯ ಕಾರಣಕ್ಕೆ ಸಾರ್ವಜನಿಕರು ತೀವ್ರ ಆಕ್ರೋಶ ಹೊರ ಹಾಕಿದ್ದರು. ಹೀಗಾಗಿ ಟೋಯಿಂದ್ ಸ್ಥಗಿತಗೊಳಿಸಲಾಗಿತ್ತು. ಇದೀಗ ಮತ್ತೆ ಬೆಂಗಳೂರಲ್ಲಿ ಟೋಯಿಂಗ್ ಪುನರಾರಂಭಗೊಳಿಸಲಾಗುತ್ತಿದೆ. ಈ ಬಗ್ಗೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅಧಿಕೃತ ಮಾಹಿತಿ ನೀಡಿದ್ದು, ಬಾಡಿಗೆ ಟೋಯಿಂಗ್ ವಾಹನ ಬಳಸದೇ ಪೊಲೀಸ್ ಇಲಾಖೆಯ ವಾಹನ ಬಳಸಿಕೊಂಡು ಬೆಂಗಳೂರಲ್ಲಿ ಟೋಯಿಂಗ್ ಪುನರಾರಂಭಿಸಲು ಹಿರಿಯ ಅಧಿಕಾರಿಗಳಿಗೆ ಸೂಚಿಸಿದ್ದಾಗಿ ತಿಳಿದು ಬಂದಿದೆ. ಅಂದಹಾಗೇ 2022ರಲ್ಲಿ ಬೆಂಗಳೂರಲ್ಲಿ ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದಂತ ಬಸವರಾಜ ಬೊಮ್ಮಾಯಿ ಅವರು ಟೋಯಿಂಗ್ ರದ್ದುಗೊಳಿಸಿದ್ದರು. ಪಾರ್ಕಿಂಗ್ ಅಲ್ಲದ ಜಾಗದಲ್ಲಿ ವಾಹನ ನಿಲುಗಡೆ ಮಾಡುತ್ತಿದ್ದದ್ದನ್ನು ಟೋಯಿಂಗ್ ಮಾಡುತ್ತಿದ್ದದ್ದು ನಿಲ್ಲಿಸಲಾಗಿತ್ತು. ಬದಲಾಗಿ ನೋ ಪಾರ್ಕಿಂಗ್ ಸ್ಥಳದಲ್ಲಿ ವಾಹನ ನಿಲ್ಲಿಸಿದ್ದರೇ ದಂಡಾಸ್ತ್ರ ಪ್ರಯೋಗದ ಆದೇಶ ಮಾಡಲಾಗಿತ್ತು. ಇದೀಗ ಮತ್ತೆ ಟೋಯಿಂಗ್ ಬೆಂಗಳೂರಲ್ಲಿ ಆರಂಭಗೊಳ್ಳಲಿದೆ. https://kannadanewsnow.com/kannada/good-news-for-airtel-prepaid-users-introduction-of-an-all-in-one-ott-entertainment-pack/ https://kannadanewsnow.com/kannada/breaking-former-cricketer-anil-kumble-appointed-as-state-forest-department-ambassador-minister-ishwar-khandre-announces/
ಬೆಂಗಳೂರು : ಭಾರತದ ಪ್ರಮುಖ ದೂರಸಂಪರ್ಕ ಸೇವಾ ಪೂರೈಕೆದಾರರಲ್ಲಿ ಒಬ್ಬರಾದ ಭಾರತಿ ಏರ್ಟೆಲ್ (“ಏರ್ಟೆಲ್”) ಇಂದು ಪ್ರಿಪೇಯ್ಡ್ ಗ್ರಾಹಕರಿಗೆ ಹೊಸದಾದ ಹಾಗೂ ಅದಕ್ಕೆ ಸಾಟಿಯಿಲ್ಲದ ಮನರಂಜನಾ ಪ್ಯಾಕ್ಗಳನ್ನು ಪ್ರಕಟಿಸಿದೆ. ನೆಟ್ಫ್ಲಿಕ್ಸ್, ಜಿಯೋಹಾಟ್ಸ್ಟಾರ್, Zee 5 ಮತ್ತು ಸೋನಿಲೈವ್ ಸೇರಿದಂತೆ 25 ಉನ್ನತ ಒಟಿಟಿ ಪ್ಲಾಟ್ಫಾರ್ಮ್ಗಳ ಉದ್ಯಮ-ಪ್ರಮುಖ ಪೋರ್ಟ್ಫೋಲಿಯೊಗೆ ಪ್ರವೇಶವನ್ನು ನೀಡುತ್ತಿದ್ದು – ಭಾರತದಲ್ಲಿನ ಏರ್ಟೆಲ್ ಹಾಗೆ ನೀಡುತ್ತಿರುವ ಏಕೈಕ ಟೆಲ್ಕೊ ಆಗಿದ್ದು, ವ್ಯಾಪಕ ಮನರಂಜನಾ ಅನುಭವವನ್ನು ನೀಡುತ್ತದೆ. 1 ತಿಂಗಳ ಸಿಂಧುತ್ವಕ್ಕೆ ₹ 279 ರ ಆಕರ್ಷಕ ಪರಿಚಯಾತ್ಮಕ ಬೆಲೆಯಲ್ಲಿ ಪ್ರಾರಂಭಿಸಿ, ಗ್ರಾಹಕರು ₹ 750 ಮೌಲ್ಯದ ಮೌಲ್ಯದ ವಿವಿಧ ರೀತಿಯ ಜನಪ್ರಿಯ ಸ್ಟ್ರೀಮಿಂಗ್ ಪ್ಲಾಟ್ಫಾರ್ಮ್ಗಳಿಗೆ ಪ್ರವೇಶವನ್ನು ಪಡೆಯುತ್ತಾರೆ, ಒಟಿಟಿ ಸ್ಟ್ರೀಮಿಂಗ್ ಆಯ್ಕೆಗಳ ಅಂತಹ ವಿಶಾಲವಾದ ಪುಷ್ಪಗುಚ್ಛಗಳಿಗೆ ಪ್ರವೇಶವನ್ನು ಸಕ್ರಿಯಗೊಳಿಸುವ ಏಕೈಕ ಟೆಲ್ಕೊ ಆಗಿರುತ್ತದೆ. ಕಂಪನಿಯು ಅನಿಯಮಿತ 5 ಜಿ ಡೇಟಾ ಮತ್ತು ಅನಿಯಮಿತ ಕರೆಗಳೊಂದಿಗೆ ₹ 598 ನಲ್ಲಿ ಅನಿಯಮಿತ ಮನರಂಜನೆಯನ್ನು ಸುಗಮಗೊಳಿಸುತ್ತದೆ. ಪ್ಯಾಕುಗಳು ಪ್ರಯೋಜನ ಸಿಂಧೂತ್ವ ಎಮ್ಆರ್ಪಿ…