Author: kannadanewsnow09

ಹಾಸನ: ಜಿಲ್ಲೆಯ ಪ್ರಸಿದ್ಧ ಜಾತ್ರೆಗಳಲ್ಲಿ ಹಾಸನಾಂಬೆ ದೇವಿಯ ಜಾತ್ರಾಮಹೋತ್ಸವವು ಒಂದಾಗಿದೆ. ಈ ಹಾಸನಾಂಬ ಹಾಗೂ ಶ್ರೀ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವಕ್ಕೆ ಭಕ್ತ ಸಾಗರವೇ ಹರಿದು ಬರುತ್ತಿದೆ. ಶುಕ್ರವಾರದ ಎರಡೇ ದಿನಗಳಲ್ಲಿ ದೇವಾಲಯಕ್ಕೆ ಕೋಟಿ ಕೋಟಿ ಆದಾಯ ಹರಿದು ಬಂದಿದೆ. ಹಾಸನಾಂಬೆ ದೇವಿ ಹಾಗೂ ಶ್ರೀ ಸಿದ್ದೇಶ್ವರಸ್ವಾಮಿ ಜಾತ್ರಾ ಮಹೋತ್ಸವವು ಗುರುವಾರದಿಂದ ಆರಂಭಗೊಂಡಿದೆ. ಶುಕ್ರವಾರಕ್ಕೆ ಎರಡನೇ ದಿನವಾಗಿದ್ದು, ಭಾನುವಾರ ಬೆಳಗ್ಗೆ 8 ಗಂಟೆಯವರೆಗೆ 300 ರೂಪಾಯಿಯ ವಿಶೇಷ ದರ್ಶನದ ಆನ್ ಲೈನ್ ಟಿಕೆಟ್ 4,499 ಸೇಲ್ ಆಗಿದ್ದರೇ, ದೇವಸ್ಥಾನದ ಬಳಿಯಲ್ಲೇ 23,260 ಸೇಲ್ ಆಗಿದೆ. ಒಟ್ಟು 300 ರೂಪಾಯಿಗಳ 27,759 ಟಿಕೆಟ್ ಮಾರಾಟವಾಗಿದೆ. ಇನ್ನೂ 1000 ರೂಪಾಯಿಯ ಟಿಕೆಟ್ ಗಳು ಆನ್ ಲೈನ್ ಮೂಲಕ 3,912 ಮಾರಾಟವಾಗಿದ್ದರೇ, ಭೌತಿಕವಾಗಿ 8,484 ಮಾರಾಟವಾಗಿದ್ದಾವೆ. ಒಟ್ಟು 12,396 ಟಿಕೆಟ್ 1000 ರೂಪಾಯಿಗಳದ್ದು ಮಾರಾಟವಾಗಿದ್ದಾವೆ. ಇದಲ್ಲದೇ ಮಾರಾಟವಾದ ಲಡ್ಡು ಪ್ರಸಾದ 17,337 ಆಗಿದೆ. ಹೀಗಿದೆ ಹಾಸನಾಂಬ, ಸಿದ್ದೇಶ್ವರ ದೇವಾಲಯದ ಜಾತ್ರಾ ಮಹೋತ್ಸವದಲ್ಲಿ ಮಾರಾಟವಾದ ಟಿಕೆಟ್ ಹಾಗೂ…

Read More

ಬೆಂಗಳೂರು: ಕರ್ನಾಟಕದ ಸರ್ಕಾರಿ ಸ್ಥಳದಲ್ಲಿ RSS ಸಂಘಟನೆಯ ಚಟುವಟಿಕೆಯನ್ನು ನಿಷೇಧಿಸುವ ಸಂಬಂಧ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಿಎಂ ಸಿದ್ಧರಾಮಯ್ಯಗೆ ಪತ್ರ ಬರೆದಿದ್ದರು. ಈ ಪತ್ರವನ್ನು ಪರಿಶೀಲಿಸಿರುವಂತ ಅವರು, ಕೂಡಲೇ ಅಗತ್ಯ ಕ್ರಮಮವಹಿಸುವಂತೆ ಸೂಚಿಸಿದ್ದಾರೆ. ಹೀಗಾಗಿ ರಾಜ್ಯದ ಸರ್ಕಾರಿ ಸ್ಥಳಗಳಲ್ಲಿ ಆರ್ ಎಸ್ ಎಸ್ ಸಂಘಟನೆ ನಿಷೇಧದ ಹೇರಲಿದ್ಯಾ ಎಂಬ ಅನುಮಾನಕ್ಕೆ ಎಡೆಮಾಡಿಕೊಟ್ಟಂತೆ ಆಗಿದೆ. ರಾಜ್ಯದಲ್ಲಿನ ಸರ್ಕಾರಿ ಸ್ಥಳದಲ್ಲಿ ಆರ್ ಎಸ್ ಎಸ್ ಸಂಘಟನೆಯ ಚಟುವಟಿಕೆಯನ್ನು ನಿಷೇಧಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಸಿಎಂ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಪ್ರಿಯಾಂಕ್ ಖರ್ಗೆ ಅವರು ಸಿಎಂ ಸಿದ್ಧರಾಮಯ್ಯಗೆ ಬರೆದಿರುವಂತ ಪತ್ರದಲ್ಲಿ ಜನ ಸಮುದಾಯದಲ್ಲಿ ದ್ವೇಷ ಬಿತ್ತುವ ವಿಭಜಕ ಶಕ್ತಿಗಳು ತಲೆ ಎತ್ತಿದಾಗ ಅವುಗಳನ್ನು ನಿಗ್ರಹಿಸುವುಕ್ಕಾಗಿ ಹಾಗೂ ದೇಶದ ಜಾತ್ಯತೀತ ಮೌಲ್ಯಗಳನ್ನು ಎತ್ತಿ ಹಿಡಿಯುವುದಕ್ಕಾಗಿ ಸಮಗ್ರತೆ, ಸಮಾನತೆ ಮತ್ತು ಏಕತೆಯ ಮೂಲಭೂತ ತತ್ತ್ವಗಳನ್ನೊಳಗೊಂಡ ಸಂವಿಧಾನವು ನಮಗೆ ಅಧಿಕಾರವನ್ನು ನೀಡಿರುತ್ತದೆ ಎಂದಿದ್ದಾರೆ.…

Read More

ಬೆಂಗಳೂರು: ಬೆಂಗಳೂರು ದಕ್ಷಿಣ ಸಂಸದ ತೇಜಸ್ವೀ ಸೂರ್ಯ ಅವರು ಭಾನುವಾರ ಲಾಲ್‌ಬಾಗ್ ಬೊಟಾನಿಕಲ್ ಗಾರ್ಡನ್‌ನಲ್ಲಿ ಪ್ರಸ್ತಾವಿತ ಸುರಂಗ ಮಾರ್ಗದ ರ‍್ಯಾಂಪ್ ಜಾಗವನ್ನು ಪರಿಶೀಲಿಸಿದ್ದು, ಈ ಯೋಜನೆಯಿಂದ ಲಾಲ್‌ಬಾಗ್‌ನ ಯಾವುದೇ ಭಾಗದ ಭೂಸ್ವಾಧೀನಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುತ್ತಾರೆ. ಪರಿಶೀಲನೆ ವೇಳೆ, ಸೂರ್ಯ ಅವರು ಭಾರತೀಯ ಭೂವೈಜ್ಞಾನಿಕ ಸರ್ವೇಕ್ಷಣಾ ಇಲಾಖೆ (GSI) ಗೆ ಈ ಯೋಜನೆಯಿಂದ 300 ದಶಲಕ್ಷ ವರ್ಷಗಳಷ್ಟು ಹಳೆಯದಾದ ರಾಷ್ಟ್ರೀಯ ಭೂವೈಜ್ಞಾನಿಕ ಸ್ಮಾರಕವಾದ ಲಾಲ್‌ಬಾಗ್ ಬಂಡೆಗಳ ರಚನೆಯ ಮೇಲೆ ಉಂಟಾಗುವ ಭೂವೈಜ್ಞಾನಿಕ ಪರಿಣಾಮಗಳ ಕುರಿತು ಅಧ್ಯಯನ ನಡೆಸಲು ನಿರ್ದೇಶನ ನೀಡಿದರು. ಯೋಜನೆಗಾಗಿ ಕರ್ನಾಟಕ ಸರ್ಕಾರದಿಂದ ರಚಿಸಲಾದ, ಬಿ-ಸ್ಮೈಲ್ (B-SMILE) ಅಧಿಕಾರಿಗಳು, ಪರಿಸರ ಪರಿಣಾಮ ಮೌಲ್ಯಮಾಪನ (EIA) ಕೈಗೊಳ್ಳದ ಕಾರಣ ಮತ್ತು ಸುರಂಗ ರ‍್ಯಾಂಪ್‌ಗಾಗಿ, ಉದ್ಯಾನವನದ ಭಾಗವನ್ನು ಗುರುತಿಸುವ ಮೊದಲು ಸಾರ್ವಜನಿಕರು ಮತ್ತು ಲಾಲ್‌ಬಾಗ್‌ನ ನಿಯಮಿತ ವಾಕಿಂಗ್ ಮಾಡುವವರೊಂದಿಗೆ ಸಮಾಲೋಚನೆ ನಡೆಸದೇ ಇರುವುದರ ಬಗ್ಗೆ ಸಂಸದ ಸೂರ್ಯ ಅವರು ಆಕ್ಷೇಪ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದರು, “ಕರ್ನಾಟಕ ಸರ್ಕಾರವು ಸುರಂಗ ಮಾರ್ಗದ ನಿರ್ಗಮನ…

Read More

ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ತಾಲ್ಲೂಕು ಮಟ್ಟದ ಪತ್ರಕರ್ತರು ತಮ್ಮ ವೃತ್ತಿ ನಿರತ ಚಟುವಟಿಕೆಗಳ ಸಂಬಂಧ ತಮ್ಮ ಜಿಲ್ಲಾದ್ಯಂತ ಉಚಿತವಾಗಿ ಸಂಚರಿಸಲು ಅನುಕೂಲವಾಗುವಂತೆ ಉಚಿತ ಬಸ್ ಪಾಸ್ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪತ್ರಕರ್ತರು ತಾವು ಕಾರ್ಯನಿರ್ವಹಿಸುತ್ತಿರುವ ಮಾಧ್ಯಮ ಸಂಸ್ಥೆಗಳಿಂದ ಸೇವಾ ಪ್ರಮಾಣಪತ್ರ, ಶಿಫಾರಸ್ಸು ಪತ್ರ ಮತ್ತು 11 ತಿಂಗಳುಗಳ ವೇತನಪತ್ರ (ಲೈನೇಜ್/ಸಂಭಾವನೆ/ಕಮೀಷನ್ ಪಡೆದಿರುವ ದಾಖಲೆ)ಗಳನ್ನು ಅಥವಾ ವೇತನ ಜಮಾ‌ ಆಗಿರುವ ಮಾಹಿತಿ ಇರುವಂತಹ ಬ್ಯಾಂಕ್ ಸ್ಟೇಟಮೆಂಟ್ ಲಗತ್ತಿಸಿ “ಸೇವಾಸಿಂಧು” ಪೋರ್ಟಲ್ https://sevasindhu.karnataka.gov.in ಮೂಲಕ ಆನ್ ಲೈನ್ ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು. ಆನ್ ಲೈನ್ ನಲ್ಲಿ ಸಲ್ಲಿಸಲಾದ ಅರ್ಜಿ ಮತ್ತು ಲಗತ್ತಿಸಲಾಗಿರುವ ದಾಖಲೆಗಳ ಒಂದು ಪ್ರತಿಯನ್ನು ಆಯಾ ಜಿಲ್ಲೆಯ ವಾರ್ತಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು. ಸ್ವೀಕೃತ ಅರ್ಜಿಗಳನ್ನು ಆಯ್ಕೆ ಸಮಿತಿಯ ಸಭೆಯಲ್ಲಿ ಪರಿಶೀಲಿಸಿ ಬಸ್ ಪಾಸ್ ಮಂಜೂರು ಮಾಡಲಾಗುತ್ತದೆ. ರಾಜ್ಯದ ಎಲ್ಲ ತಾಲ್ಲೂಕುಗಳ ಅರ್ಹ ಪತ್ರಕರ್ತರು ಕೂಡಲೇ “ಸೇವಾಸಿಂಧು” ಪೋರ್ಟಲ್ ಮೂಲಕ ಅರ್ಜಿಗಳನ್ನು ಸಲ್ಲಿಸುವುದರ ಮೂಲಕ…

Read More

ಅಫ್ಘಾನಿಸ್ತಾನದ ಆಡಳಿತಾರೂಢ ತಾಲಿಬಾನ್ ಆಡಳಿತದ ವಕ್ತಾರ ಜಬಿಹುಲ್ಲಾ ಮುಜಾಹಿದ್ ಭಾನುವಾರ, ಡುರಾಂಡ್ ಲೈನ್ ಅಥವಾ ಅಫ್ಘಾನಿಸ್ತಾನ-ಪಾಕಿಸ್ತಾನ ಗಡಿಯಲ್ಲಿ ರಾತ್ರಿಯಿಡೀ ನಡೆದ ಘರ್ಷಣೆಗಳಲ್ಲಿ 58 ಪಾಕಿಸ್ತಾನಿ ಸೈನಿಕರು ಸಾವನ್ನಪ್ಪಿದ್ದಾರೆ ಮತ್ತು 30 ಮಂದಿ ಗಾಯಗೊಂಡಿದ್ದಾರೆ ಎಂದು ಘೋಷಿಸಿದರು.

Read More

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸಂಪುಟ ವಿಸ್ತರಣೆಯ ಸದ್ದು ಕೇಳಿ ಬರುತ್ತಿದೆ. ಹಾಲಿ ಸಚಿವರಲ್ಲಿ ಕೆಲವರಿಗೆ ಗೇಟ್ ಪಾಸ್ ನೀಡಲು ಸಿಎಂ ಸಿದ್ಧರಾಮಯ್ಯ ಮುಂದಾಗಿದ್ದಾರೆ ಎನ್ನಲಾಗುತ್ತಿದೆ. ಅಲ್ಲದೇ ಹೊಸಬರಿಗೆ ಅವಕಾಶವನ್ನು ನೀಡೋದಕ್ಕೆ ಲೀಸ್ಟ್ ಸಿದ್ಧವಾಗಿದೆ. ಈ ಪಟ್ಟಿಯಲ್ಲಿ ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಅವರ ಹೆಸರು ಕೂಡ ಇರುವುದಾಗಿ ಹೇಳಲಾಗುತ್ತಿದೆ. ಆ ಮೂಲಕ ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಗೆ ಸಚಿವ ಸ್ಥಾನ ಫಿಕ್ಸ್ ಎನ್ನಲಾಗುತ್ತಿದೆ. ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಮೂರನೇ ಬಾರಿ ಶಾಸಕರಾಗಿ ಪ್ರಸ್ತುತ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿರುವ ಗೋಪಾಲಕೃಷ್ಣ ಬೇಳೂರು ಮಂತ್ರಿಯಾಗುತ್ತಾರೆ ಎನ್ನುವ ವದಂತಿ ದಟ್ಟವಾಗಿ ಹರಡಿದೆ. ಸದಾ ಮಂತ್ರಿಮಂಡಲ ವಿಸ್ತರಣೆಯಾಗಬೇಕು ಎನ್ನುವ ಸಂದರ್ಭದಲ್ಲಿ ಗೋಪಾಲಕೃಷ್ಣ ಬೇಳೂರು ಹೆಸರು ಮುನ್ನೆಲೆಗೆ ಬರುತ್ತದೆ. ಮತ್ತೆ ಹಾಗೆಯೇ ಮಾಯವಾಗಿ ಬಿಡುತ್ತದೆ. ಆದರೇ ಈ ಬಾರಿ ಗೋಪಾಲಕೃಷ್ಣ ಬೇಳೂರು ಮಂತ್ರಿಯಾಗಿಯೇ ತೀರುತ್ತಾರೆ ಎನ್ನುವ ಮಾತ ದಟ್ಟವಾಗಿ ಹರಡಿದೆ. ಎರಡು ಬಾರಿ ಬಿಜೆಪಿಯಿಂದ ಶಾಸಕರಾಗಿದ್ದಂತ ಗೋಪಾಲಕೃಷ್ಣ…

Read More

ಶಿವಮೊಗ್ಗ: ರಾಜ್ಯದ ಕಾರ್ಯನಿರತ ಪತ್ರಕರ್ತರ ಪ್ರತಿಷ್ಠಿತ ಪ್ರಾತಿನಿಧಿಕ ಸಂಘಟನೆಯಾದ “ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (Karnataka Union of Working Journalists-KUWJ)” ದ 2025-28 ನೆ ಅವಧಿಯ ಆಡಳಿತ ಮಂಡಳಿ ಆಯ್ಕೆಗೆ ಚುನಾವಣೆ ಘೋಷಣೆ ಆಗಿದೆ. ಶನಿವಾರದಂದು ಶಿವಮೊಗ್ಗದಲ್ಲಿ ಸುದ್ದಿಗೋಷ್ಟಿಯಲ್ಲಿ ಚುನಾವಣೆ ಕುರಿತು ಮಾಹಿತಿ ನೀಡಿದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮುಖ್ಯಚುನಾವಣಾಧಿಕಾರಿ ಎನ್ .ರವಿಕುಮಾರ್ ಟೆಲೆಕ್ಸ್ ಅವರು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು 9000 ಸಾವಿರಕ್ಕೂ ಹೆಚ್ಚು ಸಕ್ರೀಯ ಕಾರ್ಯನಿರತ ಪತ್ರಕರ್ತ ಸದಸ್ಯರುಗಳನ್ನೊಳಗೊಂಡ ಬೃಹತ್ ಸಂಘಟನೆಯಾಗಿದ್ದು, ಕಾರ್ಮಿಕ ಇಲಾಖೆಯ ಉಸ್ತುವಾರಿಯಲ್ಲಿ ಸಂಘದ ರಾಜ್ಯ ಘಟಕವೂ ಸೇರಿದಂತೆ ಎಲ್ಲಾ ಜಿಲ್ಲಾ ಘಟಕದ ಆಡಳಿತ ಮಂಡಳಿಗೆ ಏಕಕಾಲದಲ್ಲಿ ಚುನಾವಣೆ ನಡೆಯಲಿದೆ ಎಂದು ತಿಳಿಸಿದರು. ಅಕ್ಟೋಬರ್ 13 ರಂದು ಸೋಮವಾರ ಚುನಾವಣಾ ಅಧಿಸೂಚನೆ ಪ್ರಕಟಗೊಳ್ಳಲಿದ್ದು, ಅಂದೇ ವೇಳಾಪಟ್ಟಿ ಹಾಗೂ ಮತದಾರರ ಕರಡು ಪ್ರತಿಯನ್ನು ಪ್ರಕಟಿಸಲಾಗುವುದು. ಅಕ್ಟೋಬರ್ 19ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಅ.27 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ. ಅ.28 ನಾಮಪತ್ರಗಳ ಪರಿಶೀಲನೆ, ಅ.…

Read More

ಪಾದಚಾರಿ ಮಾರ್ಗದಲ್ಲಿ ವಾಸಿಸುವ ವ್ಯಕ್ತಿಯಿಂದ ಹಿಡಿದು ಬಂಗಲೆಯಲ್ಲಿ ವಾಸಿಸುವ ಶ್ರೀಮಂತ ಉದ್ಯಮಿಯವರೆಗೆ ಎಲ್ಲರಿಗೂ ಸಾಲದ ಸಮಸ್ಯೆ ಇದೆ. ಆ ಸಾಲದ ಸಮಸ್ಯೆಯು ಪ್ರಮಾಣದಲ್ಲಿ ಬದಲಾಗುತ್ತದೆ ಆದರೆ ಪ್ರತಿಯೊಬ್ಬರಿಗೂ ಒಂದಲ್ಲ ಒಂದು ರೂಪದಲ್ಲಿ ಉಳಿಯುತ್ತದೆ. ಕೆಲವು ಜನರು ಪಾವತಿಸದ ಸಾಲಕ್ಕೆ ಬಡ್ಡಿಯನ್ನು ಪಾವತಿಸುವ ಮೂಲಕ ಬಳಲುತ್ತಿದ್ದಾರೆ. ಈ ಸಂಧರ್ಭದಲ್ಲಿ ಎಂತಹ ಸಾಲದ ಹೊರೆಯಿದ್ದರೂ ಆ ಋಣ ತೀರಿಸಲು ನಾವು ಮಾಡಬಹುದಾದ ಉಪಾಯವೇ ಇಳನೇರ್ ದೀಪಂ. ಈ ಆಧ್ಯಾತ್ಮಿಕ ಪೋಸ್ಟ್‌ನಲ್ಲಿ, ಎಳನೀರನ್ನು ಬಳಸಿ ದೀಪವನ್ನು ಹೇಗೆ ಬೆಳಗಿಸಬೇಕು ಎಂದು ನಾವು ನೋಡಲಿದ್ದೇವೆ . ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ,…

Read More

ಮಂಡ್ಯ : ಶರಣರ ಸಂಘಟನಾ ವೇದಿಕೆ ( ಮದ್ದೂರು ಘಟಕ ) ಹಾಗೂ ಉದ್ಯೋಗ ವಿನಿಮಯ ಕಛೇರಿ ಮಂಡ್ಯ ಅವರ ಸಹಯೋಗದೊಂದಿಗೆ ಅ.13 ರಂದು ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ಶರಣರ ಸಂಘಟನಾ ವೇದಿಕೆ ತಾಲೂಕು ಅಧ್ಯಕ್ಷ ಎಸ್.ಎಂ.ಗಂಗಾಧರ್ ಹೇಳಿದರು‌. ಮದ್ದೂರು ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾಳೆಯ ಸೋಮವಾರದಂದು ನಗರದ ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಉದ್ಯೋಗ ಮೇಳವನ್ನು ಆಯೋಜಿಸಲಾಗಿದ್ದು, ಕಾರ್ಯಕ್ರಮವನ್ನು ಮದ್ದೂರು ಕ್ಷೇತ್ರದ ಶಾಸಕರಾದ ಕೆ.ಎಂ.ಉದಯ್ ಅವರು ಉದ್ಘಾಟಿಸಲಿದ್ದಾರೆ ಎಂದರು. ಉದ್ಯೋಗ ಮೇಳ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕ ಡಿ.ಸಿ.ತಮ್ಮಣ್ಣ, ಮನ್ ಮುಲ್ ನಿರ್ದೇಶಕ ಎಸ್.ಪಿ.ಸ್ವಾಮಿ, ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ, ಕೆ.ಬೆಳ್ಳೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ನಟರಾಜ್, ರೈತ ಮುಖಂಡ ಅಣ್ಣೂರು ಮಹೇಂದ್ರ, ನೈದಿಲೆ ಚಂದ್ರು ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಜಿಲ್ಲೆಯ ನಿರುದ್ಯೋಗಿ ಯುವಕ, ಯುವತಿಯರಿಗೆ…

Read More

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು ನಡೆಸುವ ಪರೀಕ್ಷೆಗಳಉ ಮತ್ತು ಮೌಲ್ಯ ಮಾಪನಕ್ಕೆ ಸಂಬಂಧಿಸಿದಂತೆ ನಿಯೋಜಿತ ಸಿಬ್ಬಂದಿಗಳಿಗೆ ಅನ್ಯಕಾರ್ಯ ನಿಮಿತ್ತ ರಜೆ(OOD)ಯನ್ನು ಮಂಜೂರು ಮಾಡುವ ಬಗ್ಗೆ ಮಹತ್ವದ ಆದೇಶವನ್ನು ಸರ್ಕಾರ ಮಾಡಿದೆ. ಈ ಕುರಿತಂತೆ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ಕರ್ನಾಟಕ ಲೋಕಸೇವಾ ಆಯೋಗವು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಗೌಪ್ಯಕಾರ್ಯಗಳಿಗೆ ನಿಯೋಜಿತರಾಗಿರುವ ಕಾಲೇಜು ಶಿಕ್ಷಣ ಇಲಾಖಾ ವ್ಯಾಪ್ತಿಯ ಉನ್ನತ ಶಿಕ್ಷಣ ಸಂಸ್ಥೆಗಳ ವಿಷಯ ತಜ್ಞರುಗಳಿಗೆ ನೀಡಲಾಗುವ ಅನ್ಯ ಕಾರ್ಯ ನಿಮಿತ್ತ (ಓಓಡಿ) ಸೌಲಭ್ಯವನ್ನು ಉಲ್ಲೇಖ(1) ರಲ್ಲಿ ನೀಡಲಾಗಿರುವ ಮಾರ್ಗಸೂಚಿಗಳನ್ವಯ ಪುತಿ ಕೇವಲ ನಾಲ್ಕು ದಿನಗಳಿಗೆ ಸೆಮಿಸ್ಟರ್‌ಗೆ ಸೀಮಿತಗೊಳಿಸಲಾಗುತ್ತಿರುವುದನ್ನು ಪರಿಷ್ಕರಿಸುವಂತೆ ಉಲ್ಲೇಖ(2) ರಲ್ಲಿ ಕೋರಲಾಗಿರುತ್ತದೆ ಎಂದಿದ್ದಾರೆ. ಅದರಂತೆ ಪರಿಶೀಲಿಸಲಾಗಿ, ಉಲ್ಲೇಖ(1)ರ ಸುತ್ತೋಲೆಯಲ್ಲಿ ಪ್ರತಿ ಸೆಮಿಸೈರ್‌ಗೆ ನಾಲ್ಕು ದಿನಗಳಿಗೆ ಮಾತ್ರ ಅನ್ಯ ಕಾರ್ಯ ನಿಮಿತ್ತ ಸೌಲಭ್ಯವನ್ನು ಸೀಮಿತಗೊಳಿಸಿ ನೀಡಲಾಗಿರುವ ನಿರ್ದೇಶನವು, ಶೈಕ್ಷಣಿಕ ಸಭೆ-ಸಮಾರಂಭ, ಶೈಕ್ಷಣಿಕ ವಿಚಾರ ಸಂಕಿರಣ-ಸಮ್ಮೇಳನ, ಕಾರ್ಯಾಗಾರಗಳು ಇತ್ಯಾದಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಿಬ್ಬಂದಿಗಳಿಗೆ ಮಾತ್ರ ಅನ್ವಯವಾಗುತ್ತಿದ್ದು, ಕರ್ನಾಟಕ…

Read More