Subscribe to Updates
Get the latest creative news from FooBar about art, design and business.
Author: kannadanewsnow09
ನಾಳೆ ಗುರುವಾರ 2025 ಜುಲೈ 24 ರಂದು ಭೀಮನ ಅಮಾವಾಸ್ಯೆ ಇದೆ. ಈ ದಿನ ಪಿತೃಗಳಿಗೆ ತರ್ಪಣ ಅರ್ಪಿಸಲು ಸೂಕ್ತವಾಗಿದೆ. ಭೀಮನ ಅಮಾವಾಸ್ಯೆಯಂದು ಪಿತೃಗಳು ಭೂಮಿಗೆ ಬರುತ್ತಾರೆಂದು ನಂಬಲಾಗುವುದು. ಈ ಸಮಯದಲ್ಲಿ ತಿಥಿ, ತರ್ಪಣ ಮಾಡಿದರೆ ಆತ್ಮಗಳು ಶಾಂತಿಯುತವಾಗಿ ಸ್ವರ್ಗಕ್ಕೆ ಹೋಗುತ್ತವೆ. ಜೊತೆಗೆ ಪೂರ್ವಜರ ಆಶೀರ್ವಾದದಿಂದ ಜೀವನದಲ್ಲಿ ಸಮಸ್ಯೆಗಳು ದೂರವಾಗಿ ಸಂತೋಷ ನೆಲೆಸಲಿದೆ. ಅಲ್ಲದೇ ಪಿತೃ ದೋಷವಿರುವ ಜನರು ಕೆಲವು ವಸ್ತುಗಳನ್ನು ಈ ದಿನ ದಾನ ಮಾಡಿದರೆ ಪಿತೃ ದೋಷದಿಂದ ಮುಕ್ತರಾಗಬಹುದು. ಜುಲೈ 24 ಗುರುವಾರ ಅಮಾವಾಸ್ಯೆ ತಿಥಿ ಮಧ್ಯ ರಾತ್ರಿ 2.29ಕ್ಕೆ ಪ್ರಾರಂಭವಾಗಿ ಮರುದಿನ ಮಧ್ಯರಾತ್ರಿ 12.40ಕ್ಕೆ ಕೊನೆಗೊಳ್ಳುತ್ತದೆ . ಇದು ಪಿತೃ ದೋಷ ನಿವಾರಣೆಗೆ ಸೂಕ್ತವಾದ ಸಮಯ. ಪಿತೃ ದೋಷ ಮರಣದ ನಂತರ ಪೂರ್ವಜರಿಗೆ ಅಗತ್ಯವಿರುವ ಆಚರಣೆಗಳನ್ನು ಸರಿಯಾಗಿ ಮಾಡದಿದ್ದಾಗ ಅಥವಾ ಅವರ ಆತ್ಮಗಳು ಶಾಂತಿಯಿಂದ ಇಲ್ಲದಿದ್ದಾಗ ಕುಟುಂಬದಲ್ಲಿ ಸಂಭವಿಸುವ ಸಮಸ್ಯೆಯಾಗಿದೆ. ಈ ದೋಷದಿಂದ ಮುಕ್ತರಾಗಲು ಭೀಮನ ಅಮವಾಸ್ಯೆಯಂದು ತಿಥಿ, ತರ್ಪಣ, ಆಚರಣೆಯಲ್ಲದೆ ದಾನದ ಮೂಲಕವೂ ಮುಕ್ತರಾಗಬಹುದು. ಹಾಗಾದರೆ…
ಬೆಂಗಳೂರು: 2024 – 25ನೇ ಸಾಲಿನ ಆಯವ್ಯಯ ಘೋಷಣೆಯಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ರಾಜ್ಯದಲ್ಲಿ ಮೊದಲ ಬಾರಿಗೆ ಪ್ರಸ್ತುತ ಸಾಲಿನಲ್ಲಿ ರಾಜ್ಯದ 31 ಜಿಲ್ಲೆಗಳ ಗ್ರಾಮ ಪಂಚಾಯತಿಗಳ ಕಾರ್ಯದರ್ಶಿ ಗ್ರೇಡ್ – 1 ಮತ್ತು ಗ್ರೇಡ್ -2 ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ವರ್ಗಾವಣೆಯನ್ನು ಕೌನ್ಸೆಲಿಂಗ್ ಮೂಲಕ ಕೈಗೊಳ್ಳುವ ಪ್ರಕ್ರಿಯೆಯನ್ನು ಜುಲೈ 22ರಂದು ಆರಂಭಿಸಲಾಯಿತು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಕೌನ್ಸೆಲಿಂಗ್ ವರ್ಗಾವಣೆಗೆ ಅರ್ಜಿ ಸಲ್ಲಿಸಿದ ನೌಕರರುಗಳಿಗೆ ಆನ್ ಲೈನ್ ಮೂಲಕ ತಮ್ಮ ಆದ್ಯತೆಯ ಸ್ಥಳಗಳನ್ನು ಆಯ್ಕೆ ಮಾಡುವ ಅವಕಾಶ ಇರಲಿದೆ, ಕನಿಷ್ಠ ಮೂರು ವರ್ಷ ಸೇವೆ ಸಲ್ಲಿಸಿದ ನೌಕರರು ವರ್ಗಾವಣೆಗೆ ಅರ್ಹರಾಗಿದ್ದು, ವಿಶೇಷಚೇತನರು ಹಾಗೂ ಗಂಭೀರ ಅನಾರೋಗ್ಯದಿಂದ ಬಳಲುತ್ತಿರುವವರಿಗೆ ನಿಯಮಗಳಲ್ಲಿ ವಿನಾಯತಿ ನೀಡಲಾಗಿದೆ, 31 ಜಿಲ್ಲೆಗಳಿಂದ ಒಟ್ಟು 2697 ನೌಕರರು ವರ್ಗಾವಣೆಗಾಗಿ ಅರ್ಜಿಗಳು ಸಲ್ಲಿಸಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದ್ದಾರೆ. ನೌಕರರು ಸಲ್ಲಿಸಿದ…
ಬೆಂಗಳೂರು: ಕೆಲ ದಿನಗಳ ಹಿಂದಷ್ಟೇ ಐಎಎಸ್ ಅಧಿಕಾರಿ ವಾಸಂತಿ ಅಮರ್ ವಿರುದ್ಧ ಸರ್ಕಾರಿ ಜಮೀನಿಗೆ ನಿಯಮ ಬಾಹಿರ ಆದೇಶ ಮಾಡಿದ ಪ್ರಕರಣದಲ್ಲಿ ಎಫ್ಐಆರ್ ದಾಖಲಾಗಿತ್ತು. ಇಂದು ಐಎಎಸ್ ಅಧಿಕಾರಿ ವಾಸಂತಿ ಅಮರ್ ಅವರ ಕಚೇರಿ, ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಮತ್ತೊಂದು ಶಾಕ್ ನೀಡಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಲೋಕಾಯುಕ್ತ ಪೊಲೀಸರು ಐಎಎಸ್ ಅಧಿಕಾರಿ ವಾಸಂತಿ ಅಮರ್ ಹಾಗೂ ಟೌನ್ ಪ್ಲಾನಿಂಗ್ ಇಲಾಖೆಯ ಸಹಾಯಕ ನಿರ್ದೇಶಕ ಬಾಗ್ಲಿ ಮಾರುತಿ ಹಾಗೂ ಬಿಬಿಎಂಪಿಯ ಕಾರ್ಯ ನಿರ್ವಾಹಕ ಅಭಿಯಂತರ ಎರ್ರಪ್ಪ ರೆಡ್ಡಿ ಅವರ ನಿವಾಸಗಳ ಮೇಲೆ ದಾಳಿ ನಡೆಸಲಾಗಿದೆ. ಲೋಕಾಯುಕ್ತ ಎಸ್ಪಿ ವಂಶಿಕೃಷ್ಣ ನೇತೃತ್ವದ ತಂಡವು ಇಂದು ಮುಂಜಾನೆಯೇ ಮೂರು ಅಧಿಕಾರಿಗಳ ಮನೆ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಅಲ್ಲದೇ ಪ್ರಮುಖ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಲಾಗುತ್ತಿದೆ. ಈ ಮೂವರು ಅಧಿಕಾರಿಗಳ ವಿರುದ್ಧ ಗುರುತರ ಆರೋಪ ಕೇಳಿ ಬಂದಿತ್ತು. ಬೆಂಗಳೂರು ನಗರ ಜಿಲ್ಲೆಯ ವಿಶೇಷ ಜಿಲ್ಲಾಧಿಕಾರಿಯಾಗಿ…
ಗುಜರಾತ್: ಅಹಮದಾಬಾದ್ನಿಂದ 60 ಜನರನ್ನು ಹೊತ್ತುಕೊಂಡು ದಿಯುಗೆ ಹೊರಟಿದ್ದ ಇಂಡಿಗೋ ವಿಮಾನವು ಎರಡು ಎಂಜಿನ್ಗಳಲ್ಲಿ ಒಂದಕ್ಕೆ ಬೆಂಕಿ ಹೊತ್ತಿಕೊಂಡ ನಂತರ ಟೇಕ್ಆಫ್ ಅನ್ನು ಸ್ಥಗಿತಗೊಳಿಸಿದೆ ಎಂದು ವರದಿಯೊಂದು ತಿಳಿಸಿದೆ. ಟೇಕ್ಆಫ್ಗೆ ಕೆಲವೇ ಕ್ಷಣಗಳ ಮೊದಲು ಈ ಘಟನೆ ಬೆಳಕಿಗೆ ಬಂದಿದ್ದು, ಪೈಲಟ್ಗಳು ಪ್ರಯಾಣವನ್ನು ಸ್ಥಗಿತಗೊಳಿಸಿ ಪ್ರಯಾಣಿಕರನ್ನು ತಕ್ಷಣವೇ ಇಳಿಸುವಂತೆ ಸೂಚಿಸಿದರು. ಪೈಲಟ್ ವಾಯು ಸಂಚಾರ ನಿಯಂತ್ರಣಕ್ಕೆ “ಮೇಡೇ” ಕರೆ ಕಳುಹಿಸಿದಾಗ ವಿಮಾನವು ಟೇಕ್ಆಫ್ಗಾಗಿ ರನ್ವೇಯಿಂದ ಚಲಿಸಲು ಪ್ರಾರಂಭಿಸಿತ್ತು. ಬೆಳಿಗ್ಗೆ 11 ಗಂಟೆಗೆ ಅಹಮದಾಬಾದ್ ವಿಮಾನ ನಿಲ್ದಾಣದಿಂದ ವಿಮಾನ ಹೊರಡುವ ಮೊದಲೇ ATR76 ವಿಮಾನದ ಎಂಜಿನ್ ಬೆಂಕಿಗೆ ಆಹುತಿಯಾಯಿತು. https://kannadanewsnow.com/kannada/transfer-of-municipal-commissioners-for-a-single-day-state-government-order/ https://kannadanewsnow.com/kannada/explosive-found-at-the-private-bus-station-in-kalasipalyam-bangalore/
ಬೆಂಗಳೂರು: ನಗರದ ಜನರು ಬೆಚ್ಚಿ ಬೀಳುವಂತೆ ಬೆಂಗಳೂರಿನ ಕಲಾಸಿಪಾಳ್ಯ ಖಾಸಗಿ ಬಸ್ ನಿಲ್ದಾಣದಲ್ಲಿ ಸ್ಪೋಟಕ ಪತ್ತೆಯಾಗಿದೆ. ಈ ಮೂಲಕ ಜನರನ್ನು ಆತಂಕಕಕ್ಕೆ ದೂಡಿದೆ. ಬೆಂಗಳೂರಿನ ಕಲಾಸಿಪಾಳ್ಯದಲ್ಲಿರುವಂತ ಖಾಸಗಿ ಬಸ್ ನಿಲ್ದಾಣದಲ್ಲಿ ಮಧ್ಯಾಹ್ನ 2 ಗಂಟೆ ಸುಮಾರಿಗೆ ಸ್ಪೋಟಕ ವಸ್ತುಗಳು ಪತ್ತೆಯಾಗಿದ್ದಾವೆ. ಸ್ಥಳಕ್ಕೆ ಪೊಲೀಸರು, ಶ್ವಾನನದಳ, ಬಾಂಬ್ ನಿಷ್ಕ್ರೀಯ ದಳ ದೌಡಾಯಿಸಿ, ಪರಿಶೀಲನೆ ನಡೆಸುತ್ತಿದೆ. ಬೆಂಗಳೂರಿನ ಕಲಾಸಿಪಾಳ್ಯ ಬಸ್ ನಿಲ್ದಾಣದಲ್ಲಿ ಪತ್ತೆಯಾದಂತ ಸ್ಪೋಟಕಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪತ್ತೆಯಾದಂತ ಒಂದು ಬ್ಯಾಗ್ ನಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿರುವ ಮಾಹಿತಿ ಇದೆ. ಸ್ಪೋಟಕ ವಸ್ತು ಪತ್ತೆಯಾದ ಹಿನ್ನಲೆಯಲ್ಲಿ ಬೆಂಗಳೂರಿನ ಕಲಾಸಿಪಾಳ್ಯ ಬಸ್ ನಿಲ್ದಾಣದ ಮೂಲೆ ಮೂಲೆಯಲ್ಲೂ ತಪಾಸಣೆಯನ್ನು ಪೊಲೀಸರು ಮಾಡುತ್ತಿದ್ದಾರೆ. ಸದ್ಯ ಪೊಲೀಸರು ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿದ್ದು, ಸ್ಪೋಟ ವಸ್ತುಗಳನ್ನು ಬಸ್ ನಿಲ್ದಾಣದಲ್ಲಿ ಬ್ಯಾಗ್ ನಲ್ಲಿ ಇರಿಸಿ ತೆರಳಿದವರು ಯಾರು ಎನ್ನುವ ಬಗ್ಗೆ ತನಿಖೆಯ ನಂತ್ರ ಮತ್ತಷ್ಟು ಮಾಹಿತಿ ಲಭ್ಯವಾಗಬೇಕಿದೆ. ಈ ಸಂಬಂಧ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/transfer-of-municipal-commissioners-for-a-single-day-state-government-order/ https://kannadanewsnow.com/kannada/breaking-the-government-has-made-an-important-decision-to-conduct-re-census-in-the-state-from-september-22-to-october-7/
ನವದೆಹಲಿ: ಪೇಪಾಲ್ ಯುಪಿಐ ಬಳಸಿ ದಿನಸಿಗಳಿಗೆ ಪಾವತಿಸುವಷ್ಟು ಗಡಿಗಳಲ್ಲಿ ಹಣವನ್ನು ಕಳುಹಿಸುವುದನ್ನು ಸುಲಭಗೊಳಿಸಲು ಬಯಸುತ್ತದೆ. ಬುಧವಾರ, ಕಂಪನಿಯು “ಪೇಪಾಲ್ ವರ್ಲ್ಡ್” ಅನ್ನು ಪ್ರಾರಂಭಿಸುವ ಮೂಲಕ ಆ ದಿಕ್ಕಿನಲ್ಲಿ ಪ್ರಮುಖ ಹೆಜ್ಜೆ ಇಟ್ಟಿತು. ಇದು ಭಾರತದ ಯುಪಿಐ ಸೇರಿದಂತೆ ವಿಶ್ವದ ಕೆಲವು ದೊಡ್ಡ ಡಿಜಿಟಲ್ ವ್ಯಾಲೆಟ್ಗಳು ಮತ್ತು ಪಾವತಿ ವ್ಯವಸ್ಥೆಗಳನ್ನು ಸಂಪರ್ಕಿಸುವ ಜಾಗತಿಕ ಪಾವತಿ ವೇದಿಕೆಯಾಗಿದೆ. ಈ ಕ್ರಮವು ಸುಮಾರು ಎರಡು ಬಿಲಿಯನ್ ಬಳಕೆದಾರರಿಗೆ ತಡೆರಹಿತ ಪಾವತಿಗಳನ್ನು ತರಬಹುದು. ಈ ಶರತ್ಕಾಲದಿಂದ, ಯುಪಿಐನಂತಹ ದೇಶೀಯ ವ್ಯಾಲೆಟ್ಗಳ ಬಳಕೆದಾರರು ತಮ್ಮ ಅಸ್ತಿತ್ವದಲ್ಲಿರುವ ಅಪ್ಲಿಕೇಶನ್ಗಳನ್ನು ಬಳಸಿಕೊಂಡು ಶಾಪಿಂಗ್ ಮಾಡಲು, ಪಾವತಿಸಲು ಮತ್ತು ಅಂತರರಾಷ್ಟ್ರೀಯವಾಗಿ ಹಣವನ್ನು ಕಳುಹಿಸಲು ಸಾಧ್ಯವಾಗುತ್ತದೆ. ವೇದಿಕೆಯು ಆರಂಭದಲ್ಲಿ ಪೇಪಾಲ್, ವೆನ್ಮೊ, ಯುಪಿಐ, ಮರ್ಕಾಡೊ ಪಾಗೊ ಮತ್ತು ಟೆನ್ಸೆಂಟ್ನ ಟೆನ್ಪೇ ಗ್ಲೋಬಲ್ ಅನ್ನು ಸಂಪರ್ಕಿಸುತ್ತದೆ. ಪೇಪಾಲ್ ವರ್ಲ್ಡ್ನೊಂದಿಗೆ ಯುಪಿಐ ಜಾಗತಿಕವಾಗಿ ಹೋಗುತ್ತದೆ ಭಾರತದ ಏಕೀಕೃತ ಪಾವತಿ ಇಂಟರ್ಫೇಸ್ (ಯುಪಿಐ) ಈಗ ಈ ಜಾಗತಿಕ ಮಿಶ್ರಣದ ಭಾಗವಾಗಲಿದೆ. ಎನ್ಪಿಸಿಐ ಇಂಟರ್ನ್ಯಾಷನಲ್ ಪೇಮೆಂಟ್ಸ್ ಲಿಮಿಟೆಡ್ನ ಸಿಇಒ ರಿತೇಶ್…
ಬೆಂಗಳೂರು: ರಾಜ್ಯ ಸರ್ಕಾರದಿಂದ 66 ಪೌರಾಯುಕ್ತರನ್ನು ವರ್ಗಾವಣೆ ಮಾಡಿ ಆದೇಶಿಸಲಾಗಿದೆ. ಆದರೆ ಶಾಕಿಂಗ್ ಎನ್ನುವಂತೆ ಕೇವಲ ಒಂದು ದಿನದ ಮಟ್ಟಿಗೆ 50 ಪೌರಾಯುಕ್ತರನ್ನು ವರ್ಗಾವಣೆ ಮಾಡಿದೆ. ಆ ಬಳಿಕ ಹಾಲಿ ಕರ್ತವ್ಯ ನಿರ್ವಹಿಸುತ್ತಿರುವಂತ ಹುದ್ದೆಯಲ್ಲೇ ಮುಂದುವರೆಸುವಂತೆ ಆದೇಶಿಸಿದೆ. ಈ ರೀತಿಯಾಗಿ ಒಂದು ದಿನದ ಮಟ್ಟಿಗೆ ಪೌರಾಯುಕ್ತರನ್ನು ವರ್ಗಾವಣೆ ಮಾಡಿರುವುದು ಹಲವು ಅನುಮಾನ, ಗೊಂದಲಕ್ಕೂ ಕಾರಣವಾಗಿದೆ. ಈ ಕುರಿತಂತೆ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಟಿ.ಮಂಜುನಾಥ್ ಎಂಬುವರು ಅಧಿಸೂಚನೆ ಹೊರಡಿಸಿದ್ದಾರೆ. ಕರ್ನಾಟಕ ಪೌರಾಡಳಿತ ಸೇವೆಗೆ ಸೇರಿದ ಈ ಕೆಳಕಂಡ ಅಧಿಕಾರಿಗಳಿಗೆ ಮುಖ್ಯಾಧಿಕಾರಿ ಶ್ರೇಣಿ-1 (ವೇತನ ಶ್ರೇಣಿ ರೂ. 65950-124900) ವೃಂದದಿಂದ ಪೌರಾಯುಕ್ತರು ಶ್ರೇಣಿ-2 (ವೇತನ ಶ್ರೇಣಿ ರೂ.83700-155200) ವೃಂದಕ್ಕೆ ಕರ್ನಾಟಕ ನಾಗರಿಕ ಸೇವಾ ನಿಯಮಗಳು 1958ರ ನಿಯಮ 42ರಡಿ ತಕ್ಷಣದಿಂದ ಜಾರಿಗೆ ಬರುವಂತೆ ಸ್ಥಾನಪನ್ನ ಆಧಾರದ ಮೇಲೆ ಮುಂಬಡ್ತಿ ನೀಡಿ ಸ್ಥಳನಿಯುಕ್ತಿಗೊಳಿಸಿ ಆದೇಶಿಸಿದ್ದಾರೆ. ಮುಂದುವರೆದು, ಮುಖ್ಯಾಧಿಕಾರಿ ಶ್ರೇಣಿ-1 (ವೇತನ ಶ್ರೇಣಿ ರೂ. 65950-124900) ವೃಂದದಿಂದ ಪೌರಾಯುಕ್ತರು ಶ್ರೇಣಿ-2 (ವೇತನ ಶ್ರೇಣಿ ರೂ.83700-155200)…
ಬೆಂಗಳೂರು: ರಾಜ್ಯ ಸರ್ಕಾರದಿಂದ 66 ಪೌರಾಯುಕ್ತರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಒಂದು ದಿನದ ಮಟ್ಟಿಗೆ ಸಾಗರ ನಗರಸಭೆ ಪೌರಾಯುಕ್ತರಾಗಿ ಧನಂಜಯ ಡಿ.ಬಿ ಅವರನ್ನು ನೇಮಕ ಮಾಡಿ ಆದೇಶಿಸಿದೆ. ಈ ಸಂಬಂಧ ಪೌರಾಡಳಿತ ಇಲಾಖೆಯಿಂದ ವರ್ಗಾವಣೆ ಅಧಿಸೂಚನೆ ಹೊರಡಿಸಲಾಗಿದ್ದು, ಉಡುಪಿ ಜಿಲ್ಲೆಯ ಯೋಜನಾ ನಿರ್ದೇಶಕರ ಕಚೇರಿಯ ಜಿಲ್ಲಾ ನಗರ ವ್ಯವಸ್ಥಾಪಕರಾಗಿದ್ದಂತ ಧನಂಜಯ ಡಿ.ಬಿ ಅವರನ್ನು ಒಂದು ದಿನದ ಮಟ್ಟಿಗೆ ಸಾಗರ ನಗರಸಭೆಯ ಪೌರಾಯುಕ್ತರ ಹುದ್ದೆಗೆ ಸ್ಥಳನಿಯುಕ್ತಿಗೊಳಿಸಿದೆ. ತದನಂತರ ಹಾಲಿ ಕಾರ್ಯನಿರ್ವಹಿಸುತ್ತಿರುವ ಹುದ್ದೆಯಲ್ಲಿ ಮುಂದುವರೆಸಿದೆ ಎಂಬುದಾಗಿ ಆದೇಶದಲ್ಲಿ ತಿಳಿಸಿದ್ದಾರೆ. ಸಾಗರ ನಗರಸಭೆಯ ಪೌರಾಯುಕ್ತರಾಗಿ ಧನಂಜಯ ಡಿ.ಬಿ ಅವರನ್ನು ಒಂದು ದಿನದ ಮಟ್ಟಿಗೆ ವರ್ಗಾವಣೆ ಮಾಡಿರುವ ಕಾರಣ, ಹಾಲಿ ನಗರಸಭೆಯ ಪೌರಾಯುಕ್ತ ಹೆಚ್.ಕೆ ನಾಗಪ್ಪ ಅವರು ಒಂದು ದಿನದ ಮಟ್ಟಿಗೆ ತಮ್ಮ ಹುದ್ದೆಯಿಂದ ವರ್ಗಾವಣೆಗೊಂಡಂತೆ ಆಗಿದೆ. ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು https://kannadanewsnow.com/kannada/state-government-order-to-transfer-66-municipal-commissioners-for-a-day/
ಬೆಂಗಳೂರು: ರಾಜ್ಯ ಸರ್ಕಾರದಿಂದ 66 ಪೌರಾಯುಕ್ತರನ್ನು ವರ್ಗಾವಣೆ ಮಾಡಿ ಆದೇಶಿಸಲಾಗಿದೆ. ಆದರೆ ಶಾಕಿಂಗ್ ಎನ್ನುವಂತೆ ಕೇವಲ ಒಂದು ದಿನದ ಮಟ್ಟಿಗೆ 50 ಪೌರಾಯುಕ್ತರನ್ನು ವರ್ಗಾವಣೆ ಮಾಡಿದೆ. ಆ ಬಳಿಕ ಹಾಲಿ ಕರ್ತವ್ಯ ನಿರ್ವಹಿಸುತ್ತಿರುವಂತ ಹುದ್ದೆಯಲ್ಲೇ ಮುಂದುವರೆಸುವಂತೆ ಆದೇಶಿಸಿದೆ. ಈ ರೀತಿಯಾಗಿ ಒಂದು ದಿನದ ಮಟ್ಟಿಗೆ ಪೌರಾಯುಕ್ತರನ್ನು ವರ್ಗಾವಣೆ ಮಾಡಿರುವುದು ಹಲವು ಅನುಮಾನ, ಗೊಂದಲಕ್ಕೂ ಕಾರಣವಾಗಿದೆ. ಈ ಕುರಿತಂತೆ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಟಿ.ಮಂಜುನಾಥ್ ಎಂಬುವರು ಅಧಿಸೂಚನೆ ಹೊರಡಿಸಿದ್ದಾರೆ. ಕರ್ನಾಟಕ ಪೌರಾಡಳಿತ ಸೇವೆಗೆ ಸೇರಿದ ಈ ಕೆಳಕಂಡ ಅಧಿಕಾರಿಗಳಿಗೆ ಮುಖ್ಯಾಧಿಕಾರಿ ಶ್ರೇಣಿ-1 (ವೇತನ ಶ್ರೇಣಿ ರೂ. 65950-124900) ವೃಂದದಿಂದ ಪೌರಾಯುಕ್ತರು ಶ್ರೇಣಿ-2 (ವೇತನ ಶ್ರೇಣಿ ರೂ.83700-155200) ವೃಂದಕ್ಕೆ ಕರ್ನಾಟಕ ನಾಗರಿಕ ಸೇವಾ ನಿಯಮಗಳು 1958ರ ನಿಯಮ 42ರಡಿ ತಕ್ಷಣದಿಂದ ಜಾರಿಗೆ ಬರುವಂತೆ ಸ್ಥಾನಪನ್ನ ಆಧಾರದ ಮೇಲೆ ಮುಂಬಡ್ತಿ ನೀಡಿ ಸ್ಥಳನಿಯುಕ್ತಿಗೊಳಿಸಿ ಆದೇಶಿಸಿದ್ದಾರೆ. ಮುಂದುವರೆದು, ಮುಖ್ಯಾಧಿಕಾರಿ ಶ್ರೇಣಿ-1 (ವೇತನ ಶ್ರೇಣಿ ರೂ. 65950-124900) ವೃಂದದಿಂದ ಪೌರಾಯುಕ್ತರು ಶ್ರೇಣಿ-2 (ವೇತನ ಶ್ರೇಣಿ ರೂ.83700-155200)…
ಬೆಂಗಳೂರು: ನಗರದಲ್ಲಿ ಬಿಕ್ಲು ಶಿವ ಆಲಿಯಾಸ್ ಶಿವಕುಮಾರ್ ನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಈಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಬಿಕ್ಲು ಶಿವ ಹತ್ಯೆಗೆ ಸುಪಾರಿ ಪಡೆದಿದ್ದಂತ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಲ್ಲಿ ರೌಡಿ ಶೀಟರ್ ಶಿವಕುಮಾರ್ ಬರ್ಬರ ಹತ್ಯೆ ಪ್ರಕರಣ ಸಂಬಂಧ ಈಗಾಗಲೇ ತಾವೇ ಮಾಡಿದ್ದಾಗಿ ಪೊಲೀಸರ ಮುಂದೆ ಆರೋಪಿಗಳು ಶರಣಾಗಿದ್ದಾರೆ. ಈ ಬೆನ್ನಲ್ಲೇ ಬಿಗ್ ಟ್ವಿಸ್ಟ್ ಎನ್ನುವಂತೆ ಬಿಕ್ಲು ಶಿವ ಹತ್ಯೆಗೆ ಸುಪಾರಿ ಪಡೆದಿದ್ದಂತ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಕೋಲಾರ ಜಿಲ್ಲೆಯ ಮಾಲೂರು ಮೂಲದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಎಸಿಪಿ ರಂಗಪ್ಪ ನೇತೃತ್ವದ ತಂಡದಿಂದ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.