Subscribe to Updates
Get the latest creative news from FooBar about art, design and business.
Author: kannadanewsnow09
ಹಾಸನ: ಒಂದೆಡೆ ಇರಾನ್-ಇಸ್ರೇಲ್ ನಡುವೆ ಯುದ್ಧ ನಡೆಯುತ್ತಿದೆ. ಮತ್ತೊಂದೆಡೆ ಭಾರತ-ಪಾಕ್ ನಡುವೆ ಯುದ್ಧ ನಡೆದು ಕದನ ವಿರಾಮ ಏರ್ಪಟ್ಟಿದೆ. ಇದರ ನಡುವೆ ಕೋಡಿಮಠ ಶ್ರೀಗಳು ರಾಜ್ಯ, ದೇಶದ ಬಗ್ಗೆ ಆಘಾತಕಾರಿ ಭವಿಷ್ಯ ನುಡಿದ್ದಾರೆ. ಆ ಬಗ್ಗೆ ಮುಂದೆ ಓದಿ. ಇಂದು ಹಾಸನ ಜಿಲ್ಲೆಯ ಅರಸೀಕೆರೆಯ ಹಾರನಹಳ್ಳಿ ಕೋಡಿಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು, ಭಾರತಕ್ಕೆ ನಿರೀಕ್ಷೆಗೂ ಮೀರಿದಂತ ದುಃಖ ಬರಲಿದೆ ಎಂದರು. ಇನ್ನೂ ಮೇಘ ಸ್ಪೋಟ, ಯುದ್ಧದ ಜೊತೆಗೆ ಅರಸನಾಲಯಕ್ಕೆ ಕಾರ್ಮೋಡವು ಕಾದಿದೆ. ಇದು ರಾಜ್ಯ, ದೇಶಕ್ಕೂ ಕಾಲಿಡುವುದಾಗಿ ಆಘಾತಕಾರಿ ಭವಿಷ್ಯ ನುಡಿದರು. ಈ ಹಿಂದೆ ಎರಡು ಮೂರು ಪ್ರಧಾನ ಮಂತ್ರಿಗಳ ಕೊಲೆ ಆಗ್ತಾರೆ ಎಂಬುದಾಗಿ ಭವಿಷ್ಯ ನುಡಿದಿದ್ದೆನು. ಅದು ಈಗ ಆಗಿದೆ. ಸಾಗರದಲ್ಲಿ ಒಂದು ಜಲಸ್ಪೋಟ ಎದ್ದಿದೆ. ಅದು ಕೂಡ ಆಗಲಿದೆ ಎಂದು ತಿಳಿಸಿದರು. ವಿಶ್ವದಲ್ಲಿ ನಡೆಯುತ್ತಿರುವಂತ ಯುದ್ಧ ನಿಲ್ಲೋದು ಸಂವತ್ಸರ ಪರ್ವದಲ್ಲಿ ಕಷ್ಟವಾಗಿದೆ. ಈ ದ್ವೇಷ, ಅಸೂಯೆಗಳ ಮಧ್ಯದಲ್ಲಿ ಒಂದಿಬ್ಬರು ಬಲಿಯಾಗುತ್ತಾರೆ ಎಂಬುದಾಗಿ ಸ್ಪೋಟಕ…
ನವದೆಹಲಿ: ಇರಾನ್ ಹಾಗೂ ಇಸ್ರೇಲ್ ನಡುವೆ ಯುದ್ಧ ತೀವ್ರಗೊಂಡಿದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಗಲ್ಫ್ ದೇಶಗಳ ವಾಯುಪ್ರದೇಶ ಬಳಸದಿರಲು ಏರ್ ಇಂಡಿಯಾ ವಿಮಾನಯಾನ ಸಂಸ್ಥೆ ನಿರ್ಧರಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಏರ್ ಇಂಡಿಯಾವು, ವೈಡ್ಬಾಡಿ ಅಂತರರಾಷ್ಟ್ರೀಯ ಸೇವೆಗಳಲ್ಲಿ ತಾತ್ಕಾಲಿಕ ಕಡಿತದ ಹಿಂದಿನ ಘೋಷಣೆಗಳ ನಂತರ, ವಿಮಾನಯಾನ ಸಂಸ್ಥೆಯು ಇಂದು ತನ್ನ ಒಟ್ಟಾರೆ ಕಿರಿದಾದ ದೇಹದ ಜಾಲಕ್ಕೆ 5% ಕ್ಕಿಂತ ಕಡಿಮೆ ತಾತ್ಕಾಲಿಕ ಕಡಿತವನ್ನು ಘೋಷಿಸಿದೆ. ಈ ಸ್ವಯಂಪ್ರೇರಿತ ನಿರ್ಧಾರವು ಮೂರು ಮಾರ್ಗಗಳಲ್ಲಿ ಏರ್ ಇಂಡಿಯಾದ ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಮತ್ತು 19 ಮಾರ್ಗಗಳಲ್ಲಿ ಆವರ್ತನವನ್ನು ಕಡಿಮೆ ಮಾಡಲು ಕಾರಣವಾಗುತ್ತದೆ. ಈ ಬದಲಾವಣೆಗಳು ಕನಿಷ್ಠ 15 ಜುಲೈ 2025 ರವರೆಗೆ ಜಾರಿಯಲ್ಲಿರುತ್ತವೆ. ಈ ಕಡಿತಗಳು ಏರ್ ಇಂಡಿಯಾದ ನೆಟ್ವರ್ಕ್-ವೈಡ್ ಕಾರ್ಯಾಚರಣೆಯ ಸ್ಥಿರತೆಯನ್ನು ಬಲಪಡಿಸುವ ಮತ್ತು ಪ್ರಯಾಣಿಕರಿಗೆ ಕೊನೆಯ ಕ್ಷಣದ ಅನಾನುಕೂಲತೆಯನ್ನು ಕಡಿಮೆ ಮಾಡುವ ಗುರಿಯನ್ನು ಹೊಂದಿವೆ. ಈ ತಾತ್ಕಾಲಿಕ ಕಡಿತಗಳ ಹೊರತಾಗಿಯೂ, ಏರ್ ಇಂಡಿಯಾ 120 ದೇಶೀಯ…
ಬೆಂಗಳೂರು: ನಗರದ ಎಲಿಟ ಪ್ರೋಮೆನೇಡ್ ಮತ್ತು ಅರೆಹಳ್ಳಿ ಉಪಕೇಂದ್ರ ನಿವðಹಣಾ ಕಾಮಗಾರಿ ನಿಮಿತ್ತ ಜೂನ್ 23ರ ಸೋಮವಾರ ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 4.00 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಎಲಿಟ ಪ್ರೋಮೆನೇಡ್ ಅಪಾಟ್ðಮೆಂಟ್, ಕೆ.ಆರ್. ಲೇಔಟ್, ಶಾರದನಗರ, ಚುಂಚಗಟ್ಟ ಮತ್ತು ಸುತ್ತಮುತ್ತಲ ಪ್ರದೇಶಗಳು, ಅರೇಹಳ್ಳಿ, ಇಟ್ಟಮಡು, ಏಜಿಎಸ್ ಲೇಔಟ್, ಚಿಕ್ಕಲಸಂದ್ರ, ಟಿ.ಜಿ. ಲೇಔಟ್, ಭುವನೇಶ್ವರಿನಗರ ಇಸ್ರೋ ಲೇಔಟ್, ಇಸ್ರೋ ಲೇಔಟ್ ಇಂಡಸ್ರ್ಟಿಯಲ್ ಏರಿಯಾ, ಕುಮಾರಸ್ವಾಮಿ ಬಡಾವಣೆ, ವಿಠ್ಠಲ ನಗರ, ವಿಕ್ರಮ್ ನಗರ, ಯೆಲಚೇನಹಳ್ಳಿ, ಸುತ್ತಮುತ್ತಲ ಪ್ರದೇಶ, ಚಿಕ್ಕಲಸಂದ್ರ ವಿಲೇಜ್, ಕದಿರೇನಹಳ್ಳಿ, ಅಬ್ಬಯ್ಯ ನಾಯ್ಡು ಸ್ಟುಡಿಯೋ ಸುತ್ತಮುತ್ತಲ ಪ್ರದೇಶ, ನಾಯ್ಡು ಲೇಔಟ್, ಎಜಿಎಸ್ ಲೇಔಟ್ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ. https://kannadanewsnow.com/kannada/bushehr-airport-hit-by-israel/ https://kannadanewsnow.com/kannada/minister-ramalinga-reddy-inaugurated-the-renovated-primary-health-center-in-btm-layout-bangalore/
ಬುಶೆಹರ್: ಇಸ್ರೇಲ್ ಭಾನುವಾರ ಇರಾನ್ನ ಬುಶೆಹರ್ ಪ್ರಾಂತ್ಯವನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ. ಅಲ್ಲಿ ಪರಮಾಣು ರಿಯಾಕ್ಟರ್ ಇದೆ. ಇರಾನ್ನ ಏಕೈಕ ನಾಗರಿಕ ಕಾರ್ಯಾಚರಣೆ ಸೌಲಭ್ಯವಾದ ಬುಶೆಹರ್ ಪರಮಾಣು ವಿದ್ಯುತ್ ಸ್ಥಾವರವು ದಕ್ಷಿಣ ಗಲ್ಫ್ ಕರಾವಳಿಯಲ್ಲಿದೆ, ಟೆಹ್ರಾನ್ನಿಂದ ಸುಮಾರು 1,200 ಕಿ.ಮೀ ದೂರದಲ್ಲಿದೆ. ರಷ್ಯಾದ ಬೆಂಬಲದೊಂದಿಗೆ ನಿರ್ಮಿಸಲಾದ ಮತ್ತು ರಷ್ಯಾ ಪೂರೈಸುವ ಯುರೇನಿಯಂನಿಂದ ನಡೆಸಲ್ಪಡುವ ಬುಶೆಹರ್, ರಷ್ಯಾ ಖರ್ಚು ಮಾಡಿದ ಇಂಧನವನ್ನು ಹಿಂಪಡೆಯುವುದರಿಂದ ಶಸ್ತ್ರಾಸ್ತ್ರ ಪ್ರಸರಣಕ್ಕೆ ಕಡಿಮೆ ಅಪಾಯವನ್ನುಂಟುಮಾಡುತ್ತದೆ ಎಂದು ಪರಿಗಣಿಸಲಾಗಿದೆ. ಈ ವಾರದ ಆರಂಭದಲ್ಲಿ, ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಬುಶೆಹರ್ನಲ್ಲಿ 250 ಖಾಯಂ ಕಾರ್ಮಿಕರು ಮತ್ತು ತಾತ್ಕಾಲಿಕ ನಿಯೋಜನೆಯಲ್ಲಿರುವ ಇತರರು ಸೇರಿದಂತೆ 600 ರಷ್ಯಾದ ಕಾರ್ಮಿಕರಿದ್ದಾರೆ ಎಂದು ಹೇಳಿದರು. ಅವರ ಸುರಕ್ಷತೆಯ ಬಗ್ಗೆ ಇಸ್ರೇಲ್ ರಷ್ಯಾಕ್ಕೆ ಭರವಸೆ ನೀಡಿದೆ ಎಂದು ಅವರು ಹೇಳಿದರು. ಏತನ್ಮಧ್ಯೆ, ಮಾರ್ಚ್ 2025 ರಲ್ಲಿ, ಬುಶೆಹರ್ ಮೇಲಿನ ದಾಳಿಯು ಗಲ್ಫ್ ನೀರನ್ನು ಸಂಪೂರ್ಣವಾಗಿ ಕಲುಷಿತಗೊಳಿಸಬಹುದು. ಕತಾರ್, ಯುಎಇ ಮತ್ತು ಕುವೈತ್ನಲ್ಲಿ ಜೀವಗಳಿಗೆ ಅಪಾಯವನ್ನುಂಟುಮಾಡಬಹುದು ಎಂದು…
ನವದೆಹಲಿ: ಪೈಲಟ್ ಕರ್ತವ್ಯ ವೇಳಾಪಟ್ಟಿ ಮತ್ತು ಮೇಲ್ವಿಚಾರಣೆಗೆ ಸಂಬಂಧಿಸಿದ “ಪುನರಾವರ್ತಿತ ಮತ್ತು ಗಂಭೀರ ಉಲ್ಲಂಘನೆ”ಗಳಿಗಾಗಿ ನಿರ್ಣಾಯಕ ಕಾರ್ಯಾಚರಣೆಯ ಪಾತ್ರಗಳಿಂದ ಮೂವರು ಸಿಬ್ಬಂದಿಯನ್ನು ತೆಗೆದುಹಾಕುವಂತೆ ವಿಮಾನಯಾನ ಸಂಸ್ಥೆಗೆ ಆದೇಶಿಸಿದ ನಂತರ ನಾಗರಿಕ ವಿಮಾನಯಾನ ನಿರ್ದೇಶನಾಲಯ (DGCA) ಏರ್ ಇಂಡಿಯಾದ ಪರವಾನಗಿಯನ್ನು ಅಮಾನತುಗೊಳಿಸಬಹುದು ಅಥವಾ ಹಿಂತೆಗೆದುಕೊಳ್ಳಬಹುದು ಎಂದು ಎಚ್ಚರಿಸಿದೆ. ಇಂಟಿಗ್ರೇಟೆಡ್ ಆಪರೇಷನ್ಸ್ ಕಂಟ್ರೋಲ್ ಸೆಂಟರ್ (IOCC) ನ ವಿಭಾಗೀಯ ಉಪಾಧ್ಯಕ್ಷೆ ಚೂರ ಸಿಂಗ್, ಸಿಬ್ಬಂದಿ ವೇಳಾಪಟ್ಟಿಯ ಮುಖ್ಯ ವ್ಯವಸ್ಥಾಪಕಿ-DOPS ಪಿಂಕಿ ಮಿತ್ತಲ್; ಮತ್ತು ಸಿಬ್ಬಂದಿ ವೇಳಾಪಟ್ಟಿ-ಯೋಜನೆ ಪಾಯಲ್ ಅರೋರಾ ಅವರನ್ನು ಸಿಬ್ಬಂದಿ ವೇಳಾಪಟ್ಟಿ ಮತ್ತು ರೋಸ್ಟರಿಂಗ್ಗೆ ಸಂಬಂಧಿಸಿದ ಎಲ್ಲಾ ಪಾತ್ರಗಳಿಂದ ತಕ್ಷಣ ತೆಗೆದುಹಾಕುವಂತೆ DGCA ಆದೇಶಿಸಿದೆ. ನಿಯಂತ್ರಣ ಸಂಸ್ಥೆಯು ತನ್ನ ತ್ವರಿತ ಕ್ರಮಕ್ಕಾಗಿ “ಸಿಬ್ಬಂದಿ ವೇಳಾಪಟ್ಟಿ, ಅನುಸರಣೆ ಮೇಲ್ವಿಚಾರಣೆ ಮತ್ತು ಆಂತರಿಕ ಹೊಣೆಗಾರಿಕೆಯಲ್ಲಿ ವ್ಯವಸ್ಥಿತ ವೈಫಲ್ಯಗಳು” ಎಂದು ಉಲ್ಲೇಖಿಸಿದೆ. ಜೂನ್ 20 ರ ಜಾರಿ ಆದೇಶದಲ್ಲಿ, DGCA “ವ್ಯವಸ್ಥಿತ ದೋಷಗಳನ್ನು” ಎತ್ತಿ ತೋರಿಸಿದೆ, “ಈ ಕಾರ್ಯಾಚರಣೆಯ ದೋಷಗಳಿಗೆ ನೇರವಾಗಿ ಕಾರಣರಾದ ಪ್ರಮುಖ ಅಧಿಕಾರಿಗಳ ವಿರುದ್ಧ…
ಬೆಂಗಳೂರು: ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕರು ಬಿ.ಆರ್.ಪಾಟೀಲ್ ಗಂಭೀರವಾದ ರಾಜ್ಯದ ಪರಿಸ್ಥಿತಿ ಬಗ್ಗೆ ಬೆಳಕು ಚಲ್ಲಿದ್ದಾರೆ. ಬಡವರಿಗೆ ಮನೆಗಳನ್ನು ಕೊಡಬೇಕಿತ್ತು ಅಲ್ಲಿಯೂ ಸಹ ಭ್ರಷ್ಟಾಚಾರ ರಾಜ್ಯದ ಜನತೆ ಮುಂದೆ ಬಿಚ್ಚಿಟ್ಟಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕಾಂಗ್ರೆಸ್ ಹಿರಿಯ ನಾಯಕರಾದ ಬಿ.ಆರ್ ಪಾಟೀಲ್ ರವರನ್ನ ಆಡಳಿತ ಪಕ್ಷದ ನಾಯಕರು ಬೆದರಿಸುವ ಕೆಲಸ ಮಾಡುತ್ತಿದ್ದಾರೆ .ಕರ್ನಾಟಕ ರಾಜ್ಯದಲ್ಲಿ ಈ ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಬಡವರಿಗೆ ರೈತರಿಗೆ ಶಾಪವಾಗಿ ಪರಿಣಮಿಸಿದೆ. ಕಾಂಗ್ರೆಸ್ ಸರ್ಕಾರ ಸಿದ್ದರಾಮಯ್ಯ ಸರ್ಕಾರದಿಂದ ಬಡವರಿಗೆ ಯಾವುದೇ ಅನುಕೂಲ ಇಲ್ಲ. ಹಿಂದೆ ಯಡಿಯೂರಪ್ಪನವರ ಸರ್ಕಾರ ಇದ್ದಾಗ ಅನೇಕ ಬಡವರಪರ ಯೋಜನೆ ನೀಡಿದ್ರು ಎಲ್ಲಾ ಯೋಜನೆ ಮರೆತಿದ್ದಾರೆ ಎಂದರು. ಭ್ರಷ್ಟಾಚಾರ ಭ್ರಷ್ಟಾಚಾರ ಭ್ರಷ್ಟಾಚಾರ ಬಿಟ್ರೆ ಈ ಸರ್ಕಾರದಲ್ಲಿ ಯಾವುದೇ ಯೋಜನೆ ಇಲ್ಲ . ಎಲ್ಲೊಒಂದು ಕಡೆ ಸ್ಟೇಟ್ ಸ್ಪಾನ್ಸರ್ ಕರೆಪ್ಷನ್ ರಾಜ್ಯ ಸರ್ಕಾರವೇ ಭ್ರಷ್ಟಾಚಾರಕ್ಕೆ ಉತ್ತೇಜನ ನೀಡುತ್ತಿದೆ . ಈ ಎಲ್ಲಾವನ್ನ ಬಿ.ಆರ್ ಪಾಟೀಲ್ ಹೇಳಿಕೆಯಿಂದ…
ಕನಕಪುರ : “ರೂರಲ್ ಎಜುಕೇಶನ್ ಸೊಸೈಟಿ ಉಳಿಸಿ, ಬೆಳೆಸುವುದು ನನ್ನ ಕೆಲಸ. ಜನಸಾಮಾನ್ಯರ ಮಕ್ಕಳಿಗಾಗಿ ಈ ಸಂಸ್ಥೆಯಿಂದ ಕೃಷಿ ಕಾಲೇಜು ನಿರ್ಮಾಣವಾಗಿದೆ. ಈ ಸಂಸ್ಥೆ ಬೆಂಗಳೂರು ದಕ್ಷಿಣ ಜಿಲ್ಲೆಯ ಹೆಮ್ಮೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಕನಕಪುರದ ಹಾರೋಹಳ್ಳಿಯ ಮರಳವಾಡಿಯಲ್ಲಿ ಸ್ಥಾಪನೆಯಾಗಿರುವ ನೂತನ ಕರಿಯಪ್ಪ ಕೃಷಿ ಮಹಾವಿದ್ಯಾಲಯದ ಕಟ್ಟಡಕ್ಕೆ ಶಿವಕುಮಾರ್ ಭಾನುವಾರದಂದು ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. “ನನಗೂ ಹಾಗೂ ಸಂಸ್ಥೆಯ ಅಧ್ಯಕ್ಷರಾದ ಶ್ರೀಕಂಠು ಅವರಿಗೆ ಸಂಸ್ಥೆಯ ಜಾಗ ಎಲ್ಲಿ ಒತ್ತುವರಿಯಾಗುತ್ತದೆಯೋ ಎನ್ನುವ ಆಂತಕವಿತ್ತು. ಈಗ ಸದರಿ ಜಾಗದಲ್ಲಿ ಕೃಷಿ ಕಾಲೇಜು ಸ್ಥಾಪನೆಯಾಗುತ್ತಿರುವುದು ಸಮಾಧಾನ ತಂದಿದೆ” ಎಂದರು. “ರೂರಲ್ ಎಜುಕೇಶನ್ ಸೊಸೈಟಿ ಅವರು ನನ್ನನ್ನು ಸರಿಯಾಗಿ ಉಪಯೋಗಿಸಿಕೊಳ್ಳುತ್ತಾ ಇರಲಿಲ್ಲ. ಈ ಹಿಂದೆ ಡಿ.ಲಿಂಗೇಗೌಡರು, ಚನ್ನಬಸವೇಗೌಡರ ಕಾಲದಿಂದಲೂ ಈ ಬಗ್ಗೆ ನಾನು ಹೇಳುತ್ತಾ ಬಂದಿದ್ದೇನೆ. ಚನ್ನಬಸವೇಗೌಡರ ಕಾಲದಲ್ಲಿಯೇ ನರ್ಸಿಂಗ್ ಕಾಲೇಜು ಮಂಜೂರು ಆಗಿದ್ದರು ನನ್ನನ್ನು ಭೇಟಿ ಮಾಡಲು ಅವಮಾನ ಎಂದುಕೊಂಡು ಬಂದಿರಲಿಲ್ಲ” ಎಂದು ಹೇಳಿದರು. ಜಿಲ್ಲೆಯ ಹೆಸರು ಬದಲಾವಣೆಯಿಂದ ಜನಜೀವನ ಬದಲಾವಣೆ “ಬೆಂಗಳೂರು…
ಬೆಂಗಳೂರು: ವಸತಿ ಇಲಾಖೆಯಲ್ಲಿ ಕೇಳಿ ಬರುತ್ತಿರುವ ಆಕ್ರಮಗಳಿಂದ ಜನರ ಗಮನ ಬೇರೆಡೆಗೆ ಸೆಳೆಯಲು ಸಚಿವ ಹೆಚ್.ಕೆ. ಪಾಟೀಲ್ ಬರೆದಿರುವ ಪತ್ರವನ್ನು ತೇಲಿ ಬಿಡಲಾಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದರು. ಮಂಡ್ಯದಲ್ಲಿ ಸುಸಜ್ಜಿತ ಆಟೋ ನಿಲ್ದಾಣ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು. ವಸತಿ ಇಲಾಖೆಯಲ್ಲಿ ಏನೆಲ್ಲಾ ಅಕ್ರಮಗಳು ನಡೆದಿವೆ ಎಂಬುದನ್ನು ಜನರು ಹಾದಿಬೀದಿಗಳಲ್ಲಿ ಮಾತನಾಡುತ್ತಿದ್ದಾರೆ. ಹಣ ಕೊಟ್ಟವರಿಗೆ ಮನೆ ಹಂಚಿಕೆ ಮಾಡಲಾಗಿದೆ ಎಂದು ಸ್ವತಃ ಕಾಂಗ್ರೆಸ್ ಪಕ್ಷದ ಶಾಸಕರು, ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್.ಪಾಟೀಲ್ ಆಡಿಯೋದಲ್ಲಿ ಏನಿದೆ ಎಂಬುದನ್ನು ಎಲ್ಲರೂ ಕೇಳಿದ್ದಾರೆ. ವಸತಿ ಇಲಾಖೆಯ ಬಗ್ಗೆ ಕೇಳಿಬಂದಿರುವ ಈ ಆರೋಪದ ಬಗ್ಗೆ ನನಗೇನು ಅಚ್ಚರಿ ಆಗಿಲ್ಲ. ಪಾಟೀಲ್ ಅವರ ಆರೋಪಗಳ ಬಗ್ಗೆಯೂ ನನಗೆ ಅಚ್ಚರಿ ಆಗಿಲ್ಲ. ಇದು ಎಲ್ಲರಿಗೂ ಗೊತ್ತಿರುವ ವಿಚಾರವೇ ಆಗಿದೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿಯವರು ಹೇಳಿದರು. ಸರ್ಕಾರ ಬಹುತೇಕ ಎಲ್ಲಾ ಇಲಾಖೆಗಳಲ್ಲಿ ದುಡ್ಡು ಬಿಡುಗಡೆ ಆಗಲು…
ಚಿತ್ರದುರ್ಗ: ಜಿಲ್ಲೆಯಲ್ಲಿ ರಾಜ್ಯದಲ್ಲೇ ಅಮಾನವೀಯ ಕೃತ್ಯ ಎನ್ನುವಂತೆ ವೃದ್ಧ ತಂದೆಯನ್ನೇ ಮನೆಯಿಂದ ಮಕ್ಕಳು ಹೊರ ಹಾಕಿದಂತ ಘಟನೆ ಮಾಳಪ್ಪನಹಟ್ಟಿಯಲ್ಲಿ ನಡೆದಿದೆ. ಚಿತ್ರದುರ್ಗದ ಮಾಳಪ್ಪನಹಟ್ಟಿಯಲ್ಲೇ ಇಂತಹ ಅಮಾನವೀಯ ಕೃತ್ಯ ನಡೆದಿದೆ. ಆಸ್ತಿ ವಿವಾದದ ಹಿನ್ನಲೆಯಲ್ಲಿ ತಂದೆಯನ್ನೇ ಮಕ್ಕಳು ಹೊರ ಹಾಕಿದ್ದಾರೆ. ಹೀಗಾಗಿ ನೆಲೆಯಿಲ್ಲದೇ 82 ವರ್ಷದ ವೃದ್ದ ಬಸಪ್ಪ ಪರದಾಟಿ, ದೇವಸ್ಥಾನದಲ್ಲೇ ಹಲವು ವರ್ಷಗಳಿಂದ ವಾಸ ಮಾಡುತ್ತಿದ್ದದ್ದು ಬೆಳಕಿಗೆ ಬಂದಿದೆ. ಬಸಪ್ಪ ಅವರು ತಮ್ಮ ಮಕ್ಕಳಾದಂತ ಹನುಮಂತಪ್ಪ, ಜಯಪ್ಪ ವಿರುದ್ಧ ಈ ಆರೋಪ ಮಾಡಿದ್ದಾರೆ. ಈ ವಿಷಯ ತಿಳಿದು ಉಪವಿಭಾಗಾಧಿಕಾರಿ ಜಿಲಾನಿ ಅವರು ಸ್ಥಳಕ್ಕೆ ಭೇಟಿ ನೀಡಿ ವೃದ್ಧನನ್ನು ಸಾಂತ್ವಾನ ಕೇಂದ್ರಕ್ಕೆ ಕರೆದೊಯ್ದು ಆಶ್ರಯ ನೀಡಿದ್ದಾರೆ. https://kannadanewsnow.com/kannada/minister-ramalinga-reddy-inaugurated-the-renovated-primary-health-center-in-btm-layout-bangalore/ https://kannadanewsnow.com/kannada/breaking-mother-daughter-body-found-in-farm-pond-in-bengaluru-alleges-husband-murder/ https://kannadanewsnow.com/kannada/minister-ramalinga-reddy-inaugurated-the-renovated-primary-health-center-in-btm-layout-bangalore/
ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಜಗನ್ ಅವರ ರ್ಯಾಲಿ ನಡೆಸುತ್ತಿದ್ದಂತ ವೇಳೆಯಲ್ಲಿ ಘೋರ ದುರಂತವೇ ಸಂಭವಿಸಿದೆ. ವೃದ್ಧನೊಬ್ಬ ಕಾರಿನ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿದ್ದಾನೆ. ಆಂಧ್ರಪ್ರದೇಶದ ಪಲ್ನಾಡು ಜಿಲ್ಲೆಯ ಸತ್ತೇನಪಲ್ಲಿಯಲ್ಲಿ ಈ ಘಟನೆ ನಡೆದಿದೆ. ಜಗನ್ ಕಾರಿನ ಚಕ್ರಕ್ಕೆ ಸಿಲುಕಿ 70 ವರ್ಷದ ವೃದ್ಧನೊಬ್ಬ ಸಾವನ್ನಪ್ಪಿದ್ದಾನೆ. ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಜಗನ್ ಅವರು ಪಲ್ನಾಡು ಜಿಲ್ಲೆಯ ಸತ್ತೇನಪಲ್ಲಿಯಲ್ಲಿ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ರ್ಯಾಲಿಯನ್ನು ಜಗನ್ ನಡೆಸಿದ್ದರು. ಈ ಸಂದರ್ಭದಲ್ಲಿ ಕಾರ್ಯಕರ್ತರು, ಮುಖಂಡರ ತಳ್ಳಾಟವೇ ಉಂಟಾಗಿ ಈ ದುರಂತ ಸಂಭವಿಸಿದೆ. https://twitter.com/Incognito_qfs/status/1936693731849040000