Subscribe to Updates
Get the latest creative news from FooBar about art, design and business.
Author: kannadanewsnow09
ಹುಬ್ಬಳ್ಳಿ: ಜಿಲ್ಲೆಯಲ್ಲಿ ಕಾರ್ಪೋರೇಟರ್ ಪುತ್ರಿ ನೇಹಾ ಹಿರೇಮಠ ಹತ್ಯೆ ಪ್ರಕರಣದ ಬಗ್ಗೆ ಪ್ರಧಾನಿ ಮೋದಿ ಧ್ವನಿ ಎತ್ತಿದ್ದಾರೆ. ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹತ್ಯೆ ಪ್ರಕರಣ ಅಮಾನವೀಯವಾದದ್ದು ಎಂಬುದಾಗಿ ವಾಗ್ಧಾಳಿ ನಡೆಸಿದ್ದಾರೆ. ಈ ಬಗ್ಗೆ ಕರ್ನಾಟಕ ಬಿಜೆಪಿ ಪ್ರಧಾನಿ ಮೋದಿ ಅವರ ಮಾತನ್ನು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹತ್ಯೆ ಅಮಾನವೀಯವಾದುದು. ಕುಟುಂಬ ನ್ಯಾಯಕ್ಕಾಗಿ ಆಗ್ರಹಿಸಿದರೂ ಕಾಂಗ್ರೆಸ್ ಸರ್ಕಾರ ತುಷ್ಟೀಕರಣದ ನೀತಿ ಅನುಸರಿಸಿ ಘಟನೆಯನ್ನು ಗಂಭೀರವಾಗಿ ತೆಗದುಕೊಳ್ಳಲೇ ಇಲ್ಲ ಎಂದು ತಿಳಿಸಿದ್ದಾರೆ. https://twitter.com/BJP4Karnataka/status/1784492272048070988?s=19 ಅಂದಹಾಗೇ ಕೆಲ ದಿನಗಳ ಹಿಂದೆ ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ ಅವರ ಹತ್ಯೆಯಾಗಿತ್ತು. ಫಯಾಜ್ ಎಂಬಾತ ಚಾಕುವಿನಿಂದ 14 ಬಾರಿ ಹಿರಿದು ಹತ್ಯೆಗೈದಿದ್ದನು. ಈ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿದೆ. ಈಗಾಗಲೇ ಸಿಐಡಿ ಅಧಿಕಾರಿಗಳು ಪ್ರಕರಣದ ಕುರಿತಂತೆ ತನಿಖೆ ಕೂಡ ನಡೆಸುತ್ತಿದ್ದಾರೆ. https://kannadanewsnow.com/kannada/arvinder-singh-lovely-resigns-as-delhi-congress-chief/ https://kannadanewsnow.com/kannada/lok-sabha-elections-2024-voter-turnout-drops-in-3-constituencies-of-bengaluru/
ನಾವೆಲ್ಲರೂ ದೇವಸ್ಥಾನಗಳಿಗೆ ಹೋಗುತ್ತೇವೆ, ಮನೆಯಲ್ಲಿ ಪೂಜೆ ಮಾಡುತ್ತೇವೆ, ದಾನಧರ್ಮ ಮಾಡುತ್ತೇವೆ, ಇದೆಲ್ಲವೂ ನಾವು ಬಡತನವಿಲ್ಲದೆ ಸಮೃದ್ಧಿಯಿಂದ ಬದುಕಲು, ಆದರೆ ಇದೆಲ್ಲವೂ ನಮಗೆ ಸಿಗಬೇಕಾದರೆ ಮೊದಲು ದೇವರ ಅನುಗ್ರಹವನ್ನು ಪಡೆಯಬೇಕು. ಆಗ ಮಾತ್ರ ನಮ್ಮೆಲ್ಲರ ಪ್ರಾರ್ಥನೆಗಳು ಫಲಪ್ರದವಾಗುತ್ತವೆ. ನಾವು ದೇವರ ಅನುಗ್ರಹವನ್ನು ಸಂಪೂರ್ಣವಾಗಿ ಪಡೆಯಬೇಕಾದರೆ, ನಾವು ಮಾಡುವ ಸಣ್ಣ ತಪ್ಪುಗಳನ್ನು ಸರಿಪಡಿಸಬೇಕು. ಅದರಲ್ಲಿ ಪ್ರಮುಖವಾದುದೆಂದರೆ ಈ ತಲವಿರಿ ಕೋಲಂ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ,…
ನವದೆಹಲಿ: ದೆಹಲಿ ಕಾಂಗ್ರೆಸ್ ಅಧ್ಯಕ್ಷ ಅರವಿಂದರ್ ಸಿಂಗ್ ಲವ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಪಕ್ಷದ ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. “ಕಾಂಗ್ರೆಸ್ ಪಕ್ಷದ ವಿರುದ್ಧ ಸುಳ್ಳು, ಕಪೋಲಕಲ್ಪಿತ ಮತ್ತು ದುರುದ್ದೇಶಪೂರಿತ ಭ್ರಷ್ಟಾಚಾರದ ಆರೋಪಗಳನ್ನು ಹೊರಿಸುವ ಏಕೈಕ ಆಧಾರದ ಮೇಲೆ ರಚಿಸಲಾದ ಪಕ್ಷದೊಂದಿಗಿನ ಮೈತ್ರಿಯನ್ನು ದೆಹಲಿ ಕಾಂಗ್ರೆಸ್ ಘಟಕ ವಿರೋಧಿಸಿತ್ತು. ಅದರ ಹೊರತಾಗಿಯೂ, ದೆಹಲಿಯಲ್ಲಿ ಎಎಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ನಿರ್ಧಾರವನ್ನು ಪಕ್ಷ ತೆಗೆದುಕೊಂಡಿತು ” ಎಂದು ಅರವಿಂದರ್ ಸಿಂಗ್ ಲವ್ಲಿ ತಮ್ಮ ರಾಜೀನಾಮೆ ಪತ್ರದಲ್ಲಿ ಬರೆದಿದ್ದಾರೆ.
ಬೆಂಗಳೂರು: ಕೇಂದ್ರ ಸರ್ಕಾರ ಆನೆ ಹೊಟ್ಟೆಗೆ ಅರೆ ಕಾಸಿನ ಮಜ್ಜಿಗೆ ನೀಡಿದಂತೆ ಇಂದು ಬರ ಪರಿಹಾರವನ್ನು ನೀಡಿದೆ. ಈ ಮೂಲಕ ಮತ್ತೆ ಕರ್ನಾಟಕ ದ್ವೇಷ ಮುಂದುವರೆಸಿದೆ ಎಂಬುದಾಗಿ ಕರ್ನಾಟಕ ಕಾಂಗ್ರೆಸ್ ಕಿಡಿಕಾರಿದೆ. ಇಂದು ಈ ಬಗ್ಗೆ ಎಕ್ಸ್ ಮಾಡಿರುವಂತ ಕಾಂಗ್ರೆಸ್, ಬರ ಪರಿಹಾರದಲ್ಲಿ ಕೇಂದ್ರ ಸರ್ಕಾರದ ಮೋಸದ ಕಣ್ಣಾಮುಚ್ಚಾಲೆ ಆಟ ಮುಂದುವರೆದಿದೆ, ಸುಪ್ರೀಂ ಕೋರ್ಟಿನ ಆದೇಶವನ್ನು ಪಾಲಿಸಿದಂತೆಯೂ ಇರಬೇಕು, ಕರ್ನಾಟಕಕ್ಕೆ ಅನ್ಯಾಯ ಆಗುವಂತೆಯೂ ಇರಬೇಕು ಎಂಬ ಚಾಣಾಕ್ಷತನ ತೋರಿದೆ ಎಂದು ವಾಗ್ಧಾಳಿ ನಡೆಸಿದೆ. ಕರ್ನಾಟಕ ಬೇಡಿಕೆ ಇಟ್ಟಿದ್ದು 18,172 ಕೋಟಿ, ಆದರೆ ಆನೆ ಹೊಟ್ಟೆಗೆ ಅರೆ ಕಾಸಿನ ಮಜ್ಜಿಗೆ ಎನ್ನುವಂತೆ ಕೇವಲ 3,454 ಕೋಟಿ ಮಾತ್ರ ಬಿಡುಗಡೆ ಮಾಡಿ ತನ್ನ ಕರ್ನಾಟಕ ದ್ವೇಷ ಮುಂದುವರೆಸಿದೆ ಎಂಬುದಾಕಿ ಕಿಡಿಕಾರಿದೆ. https://kannadanewsnow.com/kannada/raichur-rs-2000-bribe-demanded-for-post-mortem/ https://kannadanewsnow.com/kannada/3-indians-killed-as-car-skips-us-us-highway-flies-over-bridge-to-land-in-trees/
ಅಮೇರಿಕಾ: ಅಮೆರಿಕದಲ್ಲಿ ನಡೆದ ಭೀಕರ ಕಾರು ಅಪಘಾತದಲ್ಲಿ ಗುಜರಾತ್ ಮೂಲದ ಮೂವರು ಮಹಿಳೆಯರು ಸಾವನ್ನಪ್ಪಿದ್ದಾರೆ. ಗುಜರಾತ್ನ ಆನಂದ್ ಜಿಲ್ಲೆಯ ನಿವಾಸಿಗಳಾದ ರೇಖಾಬೆನ್ ಪಟೇಲ್, ಸಂಗೀತಾಬೆನ್ ಪಟೇಲ್ ಮತ್ತು ಮನೀಷಾಬೆನ್ ಪಟೇಲ್ ಅವರು ದಕ್ಷಿಣ ಕೆರೊಲಿನಾದ ಗ್ರೀನ್ವಿಲ್ಲೆ ಕೌಂಟಿಯಲ್ಲಿ ಸೇತುವೆಯ ಮೇಲಿನಿಂದ ಕೆಳಗೆ ಎಸ್ ಯುವಿ ಕಾರು ಬಿದ್ದ ಪರಿಣಾಮ ಸಾವನ್ನಪ್ಪಿದ್ದಾರೆ. ಗ್ರೀನ್ವಿಲ್ಲೆ ಕೌಂಟಿ ಕರೋನರ್ ಕಚೇರಿಯ ವರದಿಗಳ ಪ್ರಕಾರ, ಐ -85 ನಲ್ಲಿ ಉತ್ತರಕ್ಕೆ ಪ್ರಯಾಣಿಸುತ್ತಿದ್ದ ಎಸ್ಯುವಿ ಎಲ್ಲಾ ಪಥಗಳನ್ನು ದಾಟಿ, ಒಡ್ಡನ್ನು ಏರಿತು ಮತ್ತು ಸೇತುವೆಯ ಎದುರು ಬದಿಯಲ್ಲಿರುವ ಮರಗಳಿಗೆ ಡಿಕ್ಕಿ ಹೊಡೆಯುವ ಮೊದಲು ಕನಿಷ್ಠ 20 ಅಡಿ ಎತ್ತರಕ್ಕೆ ಹಾರಿತು. “ಅವರು ನಿಗದಿತ ವೇಗದ ಮಿತಿಯನ್ನು ಮೀರಿ ಪ್ರಯಾಣಿಸುತ್ತಿದ್ದರು ಎಂಬುದು ಸ್ಪಷ್ಟವಾಗಿದೆ” ಎಂದು ಮುಖ್ಯ ಡೆಪ್ಯೂಟಿ ಕೊರೋನರ್ ಮೈಕ್ ಎಲ್ಲಿಸ್ ಸುದ್ದಿ ಚಾನೆಲ್ ಡಬ್ಲ್ಯುಎಸ್ಪಿಎಗೆ ತಿಳಿಸಿದರು. ಬೇರೆ ಯಾವುದೇ ಕಾರುಗಳು ಇದರಲ್ಲಿ ಭಾಗಿಯಾಗಿಲ್ಲ ಎಂದು ಅವರು ಸ್ಪಷ್ಟಪಡಿಸಿದರು. ಕಾರು ಮರದ ಮೇಲೆ ಸಿಲುಕಿಕೊಂಡಿದ್ದು, ಅನೇಕ ತುಂಡುಗಳಾಗಿ ಛಿದ್ರಗೊಂಡಿದೆ. ಇದು…
ರಾಯಚೂರು: ಜಿಲ್ಲೆಯಲ್ಲಿ ಕೂಲಿ ಕಾರ್ಮಿಕ ಬಡ ಕುಟುಂಬದ ಮಹಿಳೆಯೊಬ್ಬರ ಮೃತದೇಹದ ಮರಣೋತ್ತರ ಪರೀಕ್ಷೆಗಾಗಿ 2000 ರೂ ಲಂಚಕ್ಕೆ ಬೇಡಿಕೆಯಿಟ್ಟಂತ ಘಟನೆ ನಡೆದಿದೆ. ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಕೆಂಗಲ್ ಗ್ರಾಮದ ಅಂಬಮ್ಮ ಎಂಬುವರು ಮೂರ್ಛೆ ರೋಗದಿಂದ ಬಳಲುತ್ತಿದ್ದರು. ಅವರನ್ನು ಸಿಂಧನೂರು ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದರು. ಆಸ್ಪತ್ರೆಯಲ್ಲಿ ಮೂರ್ಛೆ ರೋಗದಿಂದ ಬಳಲುತ್ತಿದ್ದಂತ ಅವರು ಸಾವನ್ನಪ್ಪಿದ ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿತ್ತು. ಹೀಗೆ ಮರಣೋತ್ತರ ಪರೀಕ್ಷೆಗಾಗಿ ಕೊಂಡೊಯ್ಯ ಪಾರ್ಥೀವ ಶರೀರದ ಮರಣೋತ್ತರ ಪರೀಕ್ಷೆಗೆ ಅಲ್ಲಿನ ಸಿಬ್ಬಂದಿಯಾಗಿದ್ದಂತ ಮಂಜುನಾಥ್ ಎಂಬುವರು 2000 ರೂ ಲಂಚಕ್ಕೆ ಬೇಡಿಕೆಯಿಟ್ಟಿದ್ದಾರೆ. ಕೂಲಿ ಕಾರ್ಮಿಕರಾಗಿದ್ದಂತ ಬಡ ಕಾರ್ಮಿಕ ಕುಟುಂಬದವರು ರೂ.1500 ಲಂಚವನ್ನು ನೀಡಿದ್ದಾರೆ. ಆದರೇ ಹಾಕಿ ರೂ.500 ಕೊಡದ ಕಾರಣ, ಮರಣೋತ್ತರ ಪರೀಕ್ಷೆ ಮಾಡೋದಕ್ಕೆ ನಿರಾಕರಿಸಲಾಗಿದೆ. ಅಲ್ಲದೇ ಶವಾಗಾರದ ಬಾಗಿಲು ಹಾಕಿಕೊಂಡು ಹೋಗಿದ್ದಾರೆ. ಸಿಂಧನೂರು ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿ ಮಂಜುನಾಥ್ ಅವರ ಲಂಚಗುಳಿ ತನಕ್ಕೆ ಬೇಸತ್ತಂತ ಮೃತರ ಕುಟುಂಬಸ್ಥರು ಸೇರಿದಂತೆ ಕರ್ನಾಟಕ ಪ್ರಾಂತ ಕೂಲಿ…
ಬೆಂಗಳೂರು: ನಗರದಲ್ಲಿ ಆಂಬುಲೆನ್ಸ್ ಚಾಲಕನ ಯಡವಟ್ಟಿನಿಂದಾಗಿ ಸರಣಿ ಅಪಘಾತ ನಡೆದು, ಕಾರುಗಳು ಜಖಂಗೊಂಡಿರುವಂತ ಘಟನೆ ನಡೆದಿದೆ. ಆಂಬುಲೆನ್ಸ್ ಚಾಲಕ ಬ್ರೇಕ್ ಬದಲು ಆಸ್ಸಿಲೇಟರ್ ಒತ್ತಿದ ಪರಿಣಾಮ ಸರಣಿ ಅಪಘಾತ ನಡೆದು, ಮೂರು ಕಾರು, ಬೈಕ್ ಜಖಂ ಗೊಂಡಿದ್ದಾವೆ. ಈ ಸರಣಿ ಅಪಘಾತದಲ್ಲಿ ಬೈಕ್ ಸವಾರನ ಕಾಲಿಗೆ ಗಾಯವಾಗಿದ್ದರೇ, ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯವಾಗಿದೆ. ಮಾರ್ಕೆಟ್ ನಿಂದ ಗುಡ್ಡದಹಳ್ಳಿ ಮಾರ್ಗವಾಗಿ ಆಂಬುಲೆನ್ಸ್ ಚಾಲಕ ಸುಮಂತ್ ಬರುತ್ತಿದ್ದರು, ಈ ವೇಳೆಯಲ್ಲಿ ನಿಯಂತ್ರಣ ಸಿಗದೇ ಕಾರಿಗೆ ಡಿಕ್ಕಿ ಹೊಡೆ ಪರಿಣಾಮ ಈ ಅಪಘಾತ ಸಂಭವಿಸಿದೆ. ಇದಷ್ಟೇ ಅಲ್ಲದೇ ಸರಣಿ ಅಪಘಾತದ ನಂತ್ರ ಟೆನ್ಷನ್ನಲ್ಲಿ ಆಂಬುಲೆನ್ಸ್ ಚಾಲಕ ಸುಮಂತ್ ಬ್ರೇಕ್ ಬದಲು ಎಕ್ಸಲೇಟರ್ ಕೊಟ್ಟ ಪರಿಣಾಮ ಸರಣಿ ಅಪಘಾತಕ್ಕೂ ಕಾರಣವಾಗಿದೆ. ಕಾರಿನಲ್ಲಿದ್ದಂತ ನಾಲ್ಕು ತಿಂಗಳ ಗರ್ಭಿಣಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಸಂಬಂಧ ಬ್ಯಾಟರಾಯನಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/10k-marathon-in-bengaluru-metro-to-run-from-335-am-tomorrow/ https://kannadanewsnow.com/kannada/tyre-burst-of-vehicle-carrying-evm-in-kolar-repairs-on-the-road-tight-security-tightened/
ಬೆಂಗಳೂರು: ನಾಳೆ ಫೀಲ್ಡ್ ಮಾರ್ಷಲ್ ಸ್ಯಾಮ್ ಮಾಣೆಕ್ಷಾ ಪರೇಡ್ ಮೈದಾನದಿಂದ ಬೆಂಗಳೂರಿನಲ್ಲಿ ನಡೆಯಲಿರುವ TCS ವರ್ಲ್ಡ್ 10K ರನ್ ಪ್ರಯುಕ್ತ ಸಾರ್ವಜನಿಕರಿಗೆ ಭಾಗವಹಿಸಲು ಅನುಕೂಲವಾಗುವಂತೆ ನಮ್ಮ ಮೆಟ್ರೋ ರೈಲು ಸೇವೆಯನ್ನು 07:00 ಗಂಟೆಗೆ ಬದಲಾಗಿ ಮುಂಜಾನೆ 03:35 ಗಂಟೆಗೆ ಎಲ್ಲಾ ನಾಲ್ಕು ಟರ್ಮಿನಲ್ ಅಂದರೆ, ನಾಗಸಂದ್ರ, ರೇಷ್ಮೆ ಸಂಸ್ಥೆ, ಚಲ್ಲಘಟ್ಟ, ವೈಟ್ ಫೀಲ್ಡ್ (ಕಾಡುಗೋಡಿ) ನಿಲ್ದಾಣಗಳಿಂದ ಪ್ರಾರಂಭವಾಗುತ್ತದೆ. ರೈಲುಗಳು ಮುಂಜಾನೆ 03.35 ರಿಂದ 04.25 ಗಂಟೆಯ ಸಮಯದಲ್ಲಿ 10 ನಿಮಿಷಗಳ ಆವರ್ತನದಲ್ಲಿ ಚಲಿಸುತ್ತವೆ. ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್ನಿಂದ ಎಂ.ಜಿ ರಸ್ತೆ ಕಡೆಗೆ ಮೊದಲ ರೈಲು ಸೇವೆಯು ಬೆಳಿಗ್ಗೆ 04.10 ಗಂಟೆಗೆ ಪ್ರಾರಂಭವಾಗಿ ತದನಂತರ 10 ನಿಮಿಷಗಳ ಆವರ್ತನದಲ್ಲಿ ಬೆಳಿಗ್ಗೆ 5.00 ಗಂಟೆಯವರೆಗೆ ಚಲಿಸುತ್ತವೆ. ತರುವಾಯ ರೈಲುಗಳು ಜನರ ದಟ್ಟಣೆಯ ಅನುಗುಣವಾಗಿ ಚಲಿಸುತ್ತವೆ. ವರ್ಲ್ಡ್ಸ್ ಪ್ರೀಮಿಯರ್ 10K ಓಟದಲ್ಲಿ ಭಾಗವಹಿಸಲು ಮೇಲಿನ ಸೌಲಭ್ಯವನ್ನು ಬಳಸಿಕೊಳ್ಳುವಂತೆ ವಿನಂತಿಸಲಾಗಿದೆ. ಸಾರ್ವಜನಿಕರು ನಗದು ರಹಿತ QR ಟಿಕೆಟ್ಗಳನ್ನು ಖರೀದಿಸಿ ಪ್ರಯಾಣಿಸುವಂತೆ ಬಿ.ಎಂ.ಆರ್.ಸಿ.ಎಲ್ ಕೋರಿದೆ. https://kannadanewsnow.com/kannada/tesla-is-set-to-layoff-693-employees/ https://kannadanewsnow.com/kannada/tyre-burst-of-vehicle-carrying-evm-in-kolar-repairs-on-the-road-tight-security-tightened/
ನೆವಾಡಾ: ಎಲೋನ್ ಮಸ್ಕ್ ಅವರ ಟೆಸ್ಲಾ ಕಂಪನಿಯು ನೆವಾಡಾದ ಸ್ಪಾರ್ಕ್ಸ್ನಲ್ಲಿರುವ ತನ್ನ ಘಟಕಗಳಲ್ಲಿ 693 ಉದ್ಯೋಗಿಗಳನ್ನು ವಜಾಗೊಳಿಸಲು ಸಜ್ಜಾಗಿದೆ. ಮಾರಾಟ ಕುಸಿತ ಮತ್ತು ಹೆಚ್ಚುತ್ತಿರುವ ಸ್ಪರ್ಧೆಯಿಂದಾಗಿ ತನ್ನ ವಿಶ್ವಾದ್ಯಂತದ ಉದ್ಯೋಗಿಗಳಲ್ಲಿ ಶೇಕಡಾ 10 ಕ್ಕಿಂತ ಹೆಚ್ಚು ಕಡಿಮೆ ಮಾಡುವ ಉಪಕ್ರಮದ ಭಾಗವಾಗಿದೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ಶನಿವಾರ ಬಿಡುಗಡೆ ಮಾಡಿದ ಸರ್ಕಾರಿ ನೋಟಿಸ್ ತಿಳಿಸಿದೆ. ಯುಎಸ್ ಕಾರ್ಮಿಕ ಕಾನೂನಿನ ಪ್ರಕಾರ ಈ ವಾರದ ಆರಂಭದಲ್ಲಿ ನೆವಾಡಾ ಉದ್ಯೋಗ, ತರಬೇತಿ ಮತ್ತು ಪುನರ್ವಸತಿ ಇಲಾಖೆಗೆ ನೋಟಿಸ್ ಸಲ್ಲಿಸಲಾಗಿದೆ. ವರದಿಯ ಪ್ರಕಾರ, 100 ಅಥವಾ ಅದಕ್ಕಿಂತ ಹೆಚ್ಚಿನ ಉದ್ಯೋಗಿಗಳನ್ನು ಹೊಂದಿರುವ ಕಂಪನಿಗಳು ಯೋಜಿತ ಮುಚ್ಚುವಿಕೆ ಅಥವಾ ಗಮನಾರ್ಹ ವಜಾಗಳ ಬಗ್ಗೆ 60 ದಿನಗಳ ಮುಂಚಿತವಾಗಿ ಅಧಿಕಾರಿಗಳಿಗೆ ತಿಳಿಸಬೇಕು. ಟೆಕ್ಸಾಸ್ ಮತ್ತು ಕ್ಯಾಲಿಫೋರ್ನಿಯಾದಲ್ಲಿ ಟೆಸ್ಲಾ ಇತ್ತೀಚೆಗೆ ಗಮನಾರ್ಹ ವಜಾಗೊಳಿಸಿದ ನಂತರ ಈ ಪ್ರಕಟಣೆ ಹೊರಬಿದ್ದಿದೆ. ಇದು 6,020 ಉದ್ಯೋಗಿಗಳ ಮೇಲೆ ಪರಿಣಾಮ ಬೀರಿದೆ. ಈ ಕ್ರಮಗಳು ಎಲೆಕ್ಟ್ರಿಕ್ ಕಾರು ಉದ್ಯಮದಲ್ಲಿ ವಿಕಸನಗೊಳ್ಳುತ್ತಿರುವ ಮಾರುಕಟ್ಟೆ ಡೈನಾಮಿಕ್ಸ್ಗೆ…
ನವದೆಹಲಿ: ಒಡಿಶಾ ಮತ್ತು ಪಶ್ಚಿಮ ಬಂಗಾಳದಲ್ಲಿ ಮುಂದಿನ ಕೆಲವು ದಿನಗಳವರೆಗೆ ತೀವ್ರ ಶಾಖದ ಪರಿಸ್ಥಿತಿಗಳಿಗೆ ಭಾರತ ಹವಾಮಾನ ಇಲಾಖೆ (India Meteorological Department -IMD) ರೆಡ್ ಅಲರ್ಟ್ ಘೋಷಿಸಿದೆ. ಏಪ್ರಿಲ್ 27, ಶನಿವಾರ ಹೊರಡಿಸಲಾದ ಎಚ್ಚರಿಕೆಯು ಈ ಪ್ರದೇಶಗಳಲ್ಲಿ ಅತ್ಯಂತ ಹೆಚ್ಚಿನ ತಾಪಮಾನ ಮುಂದುವರಿಯುವ ಬಗ್ಗೆ ಎಚ್ಚರಿಸಿದೆ. ಐಎಂಡಿ ಮುನ್ಸೂಚನೆಗಳ ಪ್ರಕಾರ, ಗಂಗಾ ಪಶ್ಚಿಮ ಬಂಗಾಳದ ಅನೇಕ ಪ್ರದೇಶಗಳು ಮತ್ತು ಉಪ ಹಿಮಾಲಯನ್ ಪಶ್ಚಿಮ ಬಂಗಾಳದ ಪ್ರತ್ಯೇಕ ಪ್ರದೇಶಗಳು ಮತ್ತು ಉತ್ತರ ಒಡಿಶಾದ ಕೆಲವು ಭಾಗಗಳು ಬಿಸಿಗಾಳಿಯಿಂದ ತೀವ್ರವಾದ ಶಾಖದ ಪರಿಸ್ಥಿತಿಗಳನ್ನು ಅನುಭವಿಸುವ ನಿರೀಕ್ಷೆಯಿದೆ. ಇದಲ್ಲದೆ, ಪೂರ್ವ ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್, ರಾಯಲಸೀಮಾ, ತೆಲಂಗಾಣ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್, ಕೇರಳ ಮತ್ತು ಮಾಹೆ ಮತ್ತು ಕರ್ನಾಟಕದ ಒಳನಾಡಿನಲ್ಲಿ ಶನಿವಾರ ಬಿಸಿಗಾಳಿ ಪರಿಸ್ಥಿತಿಗಳು ಉಂಟಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ. https://twitter.com/airnewsalerts/status/1784047427718095138 https://kannadanewsnow.com/kannada/lok-sabha-elections-2019-2172-cases-registered-in-karnataka-in-a-single-day/ https://kannadanewsnow.com/kannada/tyre-burst-of-vehicle-carrying-evm-in-kolar-repairs-on-the-road-tight-security-tightened/














