Subscribe to Updates
Get the latest creative news from FooBar about art, design and business.
Author: kannadanewsnow09
ಹಾಸನ: ದೋಷ ನಿವಾರಣೆ ಮಾಡುವುದಾಗಿ ಕರೆಸಿಕೊಂಡಂತ ಪೂಜಾರಿಯೊಬ್ಬ, ಆ ಮಹಿಳೆಯ ಮೇಲೆಯೇ ಅತ್ಯಾಚಾರವೆಸಗಿದ್ದಾನೆ. ಈ ಸಂಬಂಧ ದಾಖಲಾಗಿದ್ದಂತ ದೂರಿನ ಅನ್ವಯ ಪೊಲೀಸರು ಪೂಜಾರಿಯನ್ನು ಬಂಧಿಸಿದ್ದಾರೆ. ಹಾಸನ ಜಿಲ್ಲೆಯ ಅರಸೀಕೆರೆಯ ಪುರದಮ್ಮ ದೇವಾಲಯದ ಪೂಜಾರಿ ದಯಾನಂದ್ ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ. ಮಹಿಳೆಯೊಬ್ಬರು ಪುರದಮ್ಮ ದೇಗುಲಕ್ಕೆ ತೆರಳಿದ್ದಂತ ವೇಳೆಯಲ್ಲಿ ದೋಷ ಇದೆ. ಪೂಜೆ ಮಾಡಬೇಕು ಅಂತ ಸೂಚಿಸಿದ್ದರು. ಪೂಜಾರಿಯ ಮಾತು ನಂಬಿ ದೇವಸ್ಥಾನಕ್ಕೆ ತೆರಳಿದ್ದಂತ ವೇಳೆಯಲ್ಲಿ ಪೂಜೆ ಮಾಡೋದಕ್ಕೆ ಹಣ ಪಡೆದಿದ್ದು ಅಲ್ಲದೇ, ಆಕೆಯ ಮೇಲೆ ಅತ್ಯಾಚಾರ ವೆಸಗಿದ್ದಾಗಿ, ಸಂತ್ರಸ್ತ ಮಹಿಳೆ ಬಾಗಲಗುಂಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರು ದಾಖಲಿಸಿಕೊಂಡ ಬಾಗಲಗುಂಟೆ ಠಾಣೆಯ ಪೊಲೀಸರು, ದೋಷ ನಿವಾರಣೆಗಾಗಿ ಕರೆಸಿಕೊಂಡು ಅತ್ಯಾಚಾರವೆಸಗಿದಂತ ಪುದಮ್ಮ ದೇಗುಲದ ಪೂಜಾರಿ ದಯಾನಂದ್ ಎಂಬಾತನ್ನು ಬಂಧಿಸಿದ್ದಾರೆ. https://kannadanewsnow.com/kannada/actor-darshan-writes-to-jail-authorities-requests-them-to-allow-home-cooked-meals/ https://kannadanewsnow.com/kannada/microsoft-365-users-face-access-issues-days-after-crowdstrike-outage/
ನವದೆಹಲಿ: ಕೆಲ ದಿನಗಳ ಹಿಂದಷ್ಟೇ ಮೈಕ್ರೋಸಾಫ್ಟ್ ಸೇವೆ ಸ್ಥಗಿತಗೊಂಡಿತ್ತು. ಈ ಬೆನ್ನಲ್ಲೇ ಇಂದು ಮೈಕ್ರೋಸಾಫ್ಟ್ 365 ಸೇವೆ ಸ್ಥಗಿತಗೊಂಡಿದೆ. ಹೀಗಾಗಿ ಬಳಕೆದಾರರು ಪರದಾಡುತ್ತಿರುವುದಾಗಿ ತಿಳಿದು ಬಂದಿದೆ. ನಾವು ಪ್ರಸ್ತುತ ಅನೇಕ ಮೈಕ್ರೋಸಾಫ್ಟ್ 365 ಸೇವೆಗಳು ಮತ್ತು ವೈಶಿಷ್ಟ್ಯಗಳೊಂದಿಗೆ ಪ್ರವೇಶ ಸಮಸ್ಯೆಗಳು ಮತ್ತು ಕಳಪೆ ಕಾರ್ಯಕ್ಷಮತೆಯ ಬಗ್ಗೆ ತನಿಖೆ ನಡೆಸುತ್ತಿದ್ದೇವೆ. ಹೆಚ್ಚಿನ ಮಾಹಿತಿಯನ್ನು ಅಡ್ಮಿನ್ ಸೆಂಟರ್ನಲ್ಲಿ MO842351 ಅಡಿಯಲ್ಲಿ ಕಾಣಬಹುದು ಎಂದು ಜಾಗತಿಕ ಟೆಕ್ ಮೇಜರ್ ಎಕ್ಸ್ನಲ್ಲಿ ಪೋಸ್ಟ್ನಲ್ಲಿ ತಿಳಿಸಿದ್ದಾರೆ. ನಾವು ತಗ್ಗಿಸುವಿಕೆಗಳನ್ನು ಅನ್ವಯಿಸಿದ್ದೇವೆ ಮತ್ತು ಪರಿಹಾರವನ್ನು ಒದಗಿಸಲು ಬಳಕೆದಾರರ ವಿನಂತಿಗಳನ್ನು ಮರುಹೊಂದಿಸಿದ್ದೇವೆ. ರೆಸಲ್ಯೂಶನ್ ಅನ್ನು ದೃಢೀಕರಿಸಲು ನಾವು ಸೇವೆಯನ್ನು ಮೇಲ್ವಿಚಾರಣೆ ಮಾಡುತ್ತಿದ್ದೇವೆ. ಹೆಚ್ಚಿನ ಮಾಹಿತಿಯನ್ನು ಆಡಳಿತ ಕೇಂದ್ರದಲ್ಲಿ https://status.cloud.microsoft ಅಥವಾ MO842351 ಕೆಳಗೆ ಕಾಣಬಹುದು ಎಂದಿದೆ. ಆದಾಗ್ಯೂ, ಟೆಕ್ ಸಂಸ್ಥೆ ಒದಗಿಸಿದ ಲಿಂಕ್ ಹಲವಾರು ಬಳಕೆದಾರರಿಗೆ ಪ್ರವೇಶಿಸಲು ಸಾಧ್ಯವಾಗಲಿಲ್ಲ. ಇದಕ್ಕೆ ಪ್ರತಿಕ್ರಿಯಿಸಿದ ಮೈಕ್ರೋಸಾಫ್ಟ್, “ಅಜುರೆ ಸೇವೆಗಳ ಮೇಲೆ ಪರಿಣಾಮ ಬೀರುವ ಸಮಸ್ಯೆಯ” ಬಗ್ಗೆಯೂ ತನಿಖೆ ನಡೆಸುತ್ತಿದೆ ಎಂದು ಹೇಳಿದೆ. ಇದನ್ನು ಆದಷ್ಟು…
ಬೆಂಗಳೂರು: ನಟ ದರ್ಶನ್ ಅವರು ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಜೈಲಿನ ಊಟದಿಂದಾಗಿ ದೇಹದ ತೂಕ ಇಳಿಕೆಯಾಗುತ್ತಿದೆ. ಮನೆಯ ಊಟಕ್ಕೆ ಅವಕಾಶ ಮಾಡಿಕೊಡುವಂತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದ ಬೆನ್ನಲ್ಲೇ, ಜೈಲು ಮಹಾನಿರ್ದೇಶಕರಿಗೆ ಪತ್ರ ಬರೆದು, ಮನೆಯೂಟಕ್ಕೆ ಅವಕಾಶ ಮಾಡಿಕೊಡುವಂತೆ ನಟ ದರ್ಶನ್ ಮನವಿ ಮಾಡಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವಂತ ನಟ ದರ್ಶನ್ ಅವರು ಮನೆಯೂಟ, ಹಾಸಿಗಾಗಿ ಕೋರ್ಟ್ ಮೊರೆ ಹೋಗಿದ್ದರು. ಆದ್ರೇ ಕೋರ್ಟ್ ಈ ಅರ್ಜಿಯನ್ನು ವಜಾಗೊಳಿಸಿತ್ತು. ಆ ಬಳಿಕ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿ, ತಾಂತ್ರಿಕ ಕಾರಣದಿಂದ ವಾಪಾಸ್ ಪಡೆಯಲಾಗಿತ್ತು. ಆ ನಂತ್ರ ಹೈಕೋರ್ಟ್ ಗೆ ಮೇಲ್ಮನವಿಯನ್ನು ನಟ ದರ್ಶನ್ ಪರ ವಕೀಲರು ಮನೆಯೂಟಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ. ಈ ಬೆನ್ನಲ್ಲೇ ನನಗೆ ಮನೆಯೂಟಕ್ಕೆ ಅವಕಾಶ ನೀಡುವಂತೆ ನಟ ದರ್ಶನ್ ಅವರು ಜೈಲು ಮಹಾನಿರ್ದೇಶಕರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ನಟ ದರ್ಶನ್ ಜೈಲು ಅಧಿಕಾರಿಗಳಿಗೆ ಬರೆದಿರುವಂತ ಪತ್ರದಲ್ಲಿ ಜೈಲೂಟದಲ್ಲಿ ನನಗೆ…
ಬೆಂಗಳೂರು: ನಗರದ ಬಿಬಿಎಂಪಿ ಕಂದಾಯ ಕಚೇರಿಗಳು ನಾಳೆ ರಾತ್ರಿ.9 ಗಂಟೆಯವರೆಗೆ ತೆರೆದಿರಲಿದ್ದಾವೆ. ಇದಕ್ಕೆ ಕಾರಣ ಒಂದು ಬಾರಿಗೆ ನಗರದ ಜನರು ತೆರಿಗೆ ಪಾವತಿಗೆ ಕೊನೆಯ ದಿನವಾಗಿರೋದಕ್ಕೆ ಆಗಿದೆ. ಈ ಬಗ್ಗೆ ಬಿಬಿಎಂಪಿಯ ಕಂದಾಯ ವಿಭಾಗದ ವಿಶೇಷ ಆಯುಕ್ತರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ ಒಂದು ಬಾರಿ ಪರಿಹಾರ(OTS) ಯೋಜನೆಯು ನಾಳೆ ಮುಕ್ತಾಯಗೊಳ್ಳುವ ಹಿನ್ನಲೆಯಲ್ಲಿ ಆಯಾ ವಲಯ ಕಛೇರಿಗಳು ಮತ್ತು ಸಹಾಯಕ ಕಂದಾಯ ಅಧಿಕಾರಿ ಕಛೇರಿಗಳು ನಾಳೆ ರಾತ್ರಿ 09.00 ಗಂಟೆಯವರೆಗೆ ಕಾರ್ಯನಿರ್ವಹಿಸಲಿವೆ ಎಂದಿದ್ದಾರೆ. ಒಂದು ಬಾರಿ ಪರಿಹಾರ ಯೋಜನೆಯಡಿ ಆಸ್ತಿ ತೆರಿಗೆ ತಂತ್ರಾಂಶದ ಮೂಲಕ ಪಾವತಿಸುವಲ್ಲಿ ಯಾವುದೇ ಸಮಸ್ಯೆ ಇದ್ದಲ್ಲಿ, ಪಾಲಿಕೆ ದಾಖಲೆಯಲ್ಲಿ ಅಸ್ತಿತ್ವದಲ್ಲಿರುವ ಸ್ವತ್ತುಗಳು ಎಸ್.ಎ.ಎಸ್ ಅರ್ಜಿ ಸಂಖ್ಯೆಯನ್ನು ನಮೂದಿಸಿ ಭಾಗಶಃ ಪಾವತಿ ಅಥವಾ ಪೂರ್ಣ ಪಾವತಿಯನ್ನು ವಲಯ ಕಛೇರಿಯಲ್ಲಿ ಡಿಮ್ಯಾಂಡ್ ಡ್ರಾಫ್ಟ್ ಅನ್ನು ಸ್ವೀಕರಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ಈ ಮೂಲಕ ಸ್ವೀಕರಿಸಲಾಗುವ ಡಿಮ್ಯಾಂಡ್ ಡ್ರಾಫ್ಟ್ ಅನ್ನು ಸ್ವಯಂ ಮೌಲ್ಯಮಾಪನ ಪರಿಗಣಿಸಲಾಗುತ್ತದೆ. ನಂತರ ಪಾಲಿಕೆಯಿಂದ ಪರಿಶೀಲನೆಗೆ ಒಳಪಡಿಸಲಾಗುತ್ತದೆ ಎಂದಿದ್ದಾರೆ.…
ಬೆಂಗಳೂರು: ಈಗಾಗಲೇ ಒಂದು ಬಾರಿ 384 ಕೆ ಎಎಸ್ ಹುದ್ದೆಗಳ ಪೂರ್ವಭಾವಿ ಪರೀಕ್ಷೆ ಮುಂದೂಡಿಕೆ ಮಾಡಲಾಗಿತ್ತು. ಮತ್ತೆಯೂ ಮುಂದೂಡಲಾಗುತ್ತದೆ ಎಂಬುದಾಗಿ ಹೇಳಲಾಗುತ್ತಿತ್ತು. ಆದರೇ 384 ಕೆಎಎಸ್ ಹುದ್ದೆಗಳ ನೇಮಕಾತಿಗೆ ಪೂರ್ವಭಾವಿ ಪರೀಕ್ಷೆಯನ್ನು ಆಗಸ್ಟ್.25ರಂದೇ ನಡೆಸಲಾಗುತ್ತದೆ. ಆ ದಿನಾಂಕದಲ್ಲಿ ಬದಲಾವಣೆ ಇಲ್ಲ ಅಂತ ಕೆಪಿಎಸ್ಸಿ ಕಾರ್ಯದರ್ಶಿ ಕೆ.ರಾಕೇಶ್ ಕುಮಾರ್ ಸ್ಪಷ್ಟ ಪಡಿಸಿದ್ದಾರೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿರುವಂತ ಅವರು, ಈಗಾಗಲೇ ಆಯೋಗದ ಸಭೆಯಲ್ಲಿ ಚರ್ಚೆ ನಡೆಸಿ, ಕೆಎಎಸ್ ಪೂರ್ವಭಾವಿ ಪರೀಕ್ಷೆಯ ದಿನಾಂಕವನ್ನು ಫೈನಲ್ ಮಾಡಲಾಗಿದೆ. ಆಗಸ್ಟ್.25ರಂದೇ ಪೂರ್ವಭಾವಿ ಪರೀಕ್ಷೆಯನ್ನು 384 ಕೆಎಎಸ್ ಹುದ್ದೆ ನೇಮಕ ಸಂಬಂಧ ನಡೆಸಲಾಗುತ್ತದೆ. ಪರೀಕ್ಷೆ ದಿನಾಂಕದಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದರು. ಅಂದಹಾಗೇ ಆಗಸ್ಟ್.25ರಂದು ವಿವಿಧ ಬ್ಯಾಂಕುಗಳ ನೇಮಕಾತಿಗೆ ಸಂಬಂಧಿಸಿದಂತೆ 6,128 ಗುಮಾಸ್ತ ಹುದ್ದೆಗಳಿಗೆ ಬ್ಯಾಂಕಿಂಗ್ ಪರೀಕ್ಷೆಯನ್ನು ಐಬಿಪಿಎಸ್ ನಡೆಸಲಿದೆ. ಇವುಗಳಲ್ಲಿ 457 ಹುದ್ದೆಗಳು ಕರ್ನಾಟಕದಲ್ಲಿ ಖಾಲಿ ಇದ್ದಾವೆ. ಈ ಪರೀಕ್ಷೆಯನ್ನು ಕನ್ನಡದಲ್ಲೂ ಬರೆಯಲು ಅವಕಾಶ ಕಲ್ಪಿಸಲಾಗಿದೆ. ಈ ಹುದ್ದೆಗಳಿಗೂ ಅರ್ಜಿಯನ್ನು ಅಭ್ಯರ್ಥಿಗಳು ಹಾಕಿರುವ ಕಾರಣ, ಕೆಎಎಸ್ ಪೂರ್ವಭಾವಿ ಪರೀಕ್ಷೆ ಮುಂದೂಡುವಂತೆ…
ಬೆಂಗಳೂರು: ನೆರೆಯ ಕೇರಳದಲ್ಲಿ ಸಂಭವಿಸಿರುವ ಭಾರೀ ಭೂ ಕುಸಿತದಿಂದ ಕರ್ನಾಟಕದಲ್ಲಿ ಕಟ್ಟೆಚ್ಚರ ವಹಿಸುವ ತುರ್ತು ಅಗತ್ಯವಿದೆ. ಅಪಾಯದ ಪ್ರದೇಶಗಳಿಂದ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ತುರ್ತು ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಎಲ್ಲಾ ಉಸ್ತುವಾರಿ ಸಚಿವರನ್ನು ಜಿಲ್ಲಾ ಕೇಂದ್ರಗಳಲ್ಲಿ ಮೊಕ್ಕಂ ಹೂಡಲು ನಿರ್ದೇಶಿಸಬೇಕು. ಜಿಲ್ಲಾಧಿಕಾರಿಗಳು ಸೇರಿ ಎಲ್ಲಾ ಅಧಿಕಾರಿಗಳು, ರಕ್ಷಣಾ ಸಿಬ್ಬಂದಿ 24/7 ಸನ್ನದ್ಧವಾಗಿರಬೇಕು. ಅಪಾಯದ ಸ್ಥಳಗಳಿಂದ ಜನರನ್ನು ತಕ್ಷಣವೇ ಸುರಕ್ಷತ ಸ್ಥಳಗಳಿಗೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ. ಕೊಡಗು ಜಿಲ್ಲೆಯು ದುರಂತ ಸ್ಥಳ ವಯನಾಡಿನ ಪಕ್ಕದಲ್ಲೇ ಇದೆ. ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಅತಿ ಅಪಾಯದ ಸ್ಥಿತಿ ಇದೆ. ಅನೇಕ ಕಡೆ ರೆಟ್ ಅಲರ್ಟ್ ಘೋಷಿಸಲಾಗಿದ್ದು, ಭಾರೀ ಮಳೆಯ ಮುನ್ಸೂಚನೆ ಇದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ. ಕೊಡಗು, ಉತ್ತರ ಕನ್ನಡ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಸೇರಿ…
ಶಿವಮೊಗ್ಗ: ಪುತ್ರಿಯ ಮನೆಗೆ ಬೆಲ್ಜಿಯಂಗೆ ತೆರಳಿದ್ದಂತ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಬೆಂಗಳೂರಿಗೆ ಇಂದು ವಾಪಾಸ್ ಆಗಿದ್ದರು. ಈ ಬೆನ್ನಲ್ಲೇ ಸಾಗರದ ಸ್ವ ಕ್ಷೇತ್ರಕ್ಕೆ ಆಗಮಿಸುತ್ತಿರುವಂತ ಆವರು, ನಾಳೆ ಇಡೀ ದಿನ ಸಾಗರ ನಗರದ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ. ಮಳೆಯಿಂದ ಬಿದ್ದಂತ ಮನೆಗಳನ್ನು ವೀಕ್ಷಣೆ ಮಾಡಲಿದ್ದಾರೆ. ವಿದೇಶಕ್ಕೆ ತೆರಳಿದ್ದಂತ ಶಾಸಕ ಬೇಳೂರು ಗೋಪಾಲಕೃಷ್ಣ ಬೆಂಗಳೂರಿಗೆ ಮರಳಿದ್ದು, ಇಂದು ಮಧ್ಯರಾತ್ರಿ ಸಾಗರಕ್ಕೆ ಆಗಮಿಸಲಿದ್ದಾರೆ. ಆ ನಂತ್ರ ದಿನಾಂಕ 31-07-2024ರ ನಾಳೆ ಬೆಳಿಗ್ಗೆ 8 ಗಂಟೆಯಿಂದಲೇ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ. ನಾಳೆ ಬೆಳಿಗ್ಗೆ 8 ಗಂಟೆಯಿಂದ ಚಂದ್ರಮಾವಿನ ಕೊಪ್ಪಲು, ಜೆಪಿ ನಗರ, ಸುಭಾಷ್ ನಗರ, ಅರಮನೆಕೇರಿ, ಎಲ್ ಬಿ ನಗರ, ರೈಲ್ವೆ ಸ್ಟೇಷನ್ ರಸ್ತೆ, ಸೊರಬ ರಸ್ತೆ ಹಾಗೂ ಮಾರಿಕಾಂಬ ರಸ್ತೆಗಳಲ್ಲಿ ಮಳೆಯಿಂದ ಹಾನಿಗೊಂಡ ಮನೆಗಳನ್ನು ವೀಕ್ಷಿಸಲಿದ್ದಾರೆ. ಈ ಬಳಿಕ ಅಣಲೇಕೊಪ್ಪದ ಸ್ತ್ರೀ ಶಕ್ತಿ ಭವನದಲ್ಲಿ ಸಾಗರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಆಯೋಜಿಸಿರುವಂತ ಪತ್ರಿಕಾ ದಿನಾಚಕರಣೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಇದಾದ ಬಳಿಕ ಮತ್ತೆ…
ಬೆಂಗಳೂರು: ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ಯಾದಗಿರಿ ನಿಲ್ದಾಣದಲ್ಲಿ ವಂದೇ ಭಾರತ್ ಎಕ್ಸ್ ಪ್ರೆಸ್ ಹೆಚ್ಚುವರಿ ನಿಲುಗಡೆಗೆ ಅವಕಾಶ ನೀಡಲಾಗಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಕಲಬುರಗಿ ನಿಲ್ದಾಣಗಳ ನಡುವೆ ಸಂಚರಿಸುವ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳನ್ನು ಯಾದಗಿರಿ ರೈಲ್ವೆ ನಿಲ್ದಾಣದಲ್ಲಿ ಹೆಚ್ಚುವರಿ ನಿಲುಗಡೆಗೆ ಅವಕಾಶ ಕಲ್ಪಿಸಲಾಗುತ್ತಿದೆ ಎಂದು ದಕ್ಷಿಣ ಮಧ್ಯ ರೈಲ್ವೆಯು ಸೂಚಿಸಿದೆ. ಯಾದಗಿರಿ ರೈಲ್ವೆ ನಿಲ್ದಾಣದಲ್ಲಿ ಈ ರೈಲುಗಳ (22232/22231) ಆಗಮನ/ನಿರ್ಗಮನದ ವೇಳಾಪಟ್ಟಿ ಈ ಕೆಳಗಿನಂತಿವೆ: 1. ಆಗಸ್ಟ್ 3 ರಿಂದ ಜಾರಿಗೆ ಬರುವಂತೆ, ರೈಲು ಸಂಖ್ಯೆ 22232 ಎಸ್ಎಂವಿಟಿ ಬೆಂಗಳೂರು-ಕಲಬುರಗಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಯಾದಗಿರಿ ನಿಲ್ದಾಣಕ್ಕೆ ರಾತ್ರಿ 9:44 ಗಂಟೆಗೆ ಆಗಮಿಸಿ, 9:45 ಕ್ಕೆ ಹೊರಡಲಿದೆ. 2. ಆಗಸ್ಟ್ 4 ರಿಂದ ಜಾರಿಗೆ ಬರುವಂತೆ, ರೈಲು ಸಂಖ್ಯೆ 22231 ಕಲಬುರಗಿ-ಎಸ್ಎಂವಿಟಿ ಬೆಂಗಳೂರು ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಯಾದಗಿರಿ ನಿಲ್ದಾಣಕ್ಕೆ ಬೆಳಿಗ್ಗೆ 5:54…
ಯಾವುದೇ ಶುಭ ಕಾರ್ಯ ಮಾಡಲು ಶುಭಗಳಿಗೆ, ಶುಭ ನಕ್ಷತ್ರವನ್ನು ನೋಡುವುದು ಹಿಂದೂ ಸಂಪ್ರದಾಯ. ಉತ್ತಮ ನಕ್ಷತ್ರದಲ್ಲಿ ಕೆಲಸ ಆರಂಭಿಸಿದರೆ ಯಶಸ್ವಿಯಾಗುತ್ತದೆ ಎಂದು ಜ್ಯೋತಿಶಾಸ್ತ್ರ ಹೇಳುತ್ತದೆ. ಇನ್ನು ನಿಮ್ಮ ಜನನ ದಿನಾಂಕ, ಗ್ರಹಗಳು, ಹುಟ್ಟಿದ ಸಮಯ, ಗಳಿಗೆ, ದಿನ ವಾರ, ತಿಂಗಳು ಇದೆಲ್ಲವನ್ನೂ ಆಧರಿಸಿ ಜನ್ಮ ಪತ್ರಿಕೆಯನ್ನು ಸಿದ್ಧಪಡಿಸಲಾಗುತ್ತದೆ. ಈ ಜನ್ಮ ಪತ್ರಿಕೆಯಲ್ಲಿ ಅತಿ ಮುಖ್ಯ ಪಾತ್ರವನ್ನು ವಹಿಸುವಂತಹವು ನಕ್ಷತ್ರಗಳಾಗಿವೆ. ಆದರೆ ನಕ್ಷತ್ರ ಎಂದರೇನು, ಒಟ್ಟು ಎಷ್ಟು ನಕ್ಷತ್ರಗಳಿವೆ, ಯಾವ ನಕ್ಷತ್ರದ ಏನನ್ನು ಸೂಚಿಸುತ್ತದೆ, ಪ್ರತಿ ನಕ್ಷತ್ರಗಳ ವಿಶೇಷತೆ ಏನು ಎಂಬುದರ ಬಗ್ಗೆ ಮುಂದೆ ಲೇಖನದಲ್ಲಿ ತಿಳಿಯೋಣ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ…
ಶಿವಮೊಗ್ಗ: ಜಿಲ್ಲೆಯಲ್ಲಿ ಕೆಲ ದಿನಗಳಿಂದ ಭಾರೀ ಮಳೆಯಾಗುತ್ತಿದೆ. ನಾಳೆ ಕೂಡ ಭಾರೀ ಮಳೆಯಾಗುವ ಮುನ್ಸೂಚನೆಯಿರುವ ಕಾರಣ ಹೊಸನಗರ, ಸಾಗರ ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ. ನಾಳೆ ಸಾಗರ ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಈ ಕುರಿತಂತೆ ಸಾಗರ ತಹಶೀಲ್ದಾರ್ ಆದೇಶ ಹೊರಡಿಸಿದ್ದು, ಸಾಗರ ತಾಲ್ಲೂಕಿನಲ್ಲಿ ತೀವ್ರ ಮಳೆಯಾಗುತ್ತಿದ್ದು ನಾಳೆಯೂ ಸಹ ಹೆಚ್ಚಿನ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಸಾಗರ ತಾಲ್ಲೂಕಿನಾದ್ಯಂತ ಎಲ್ಲಾ ಅಂಗನವಾಡಿಗಳು, ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ದಿನಾಂಕ: 31/07/2024 ರಂದು ರಜೆಯನ್ನು ಘೋಷಿಸಿದೆ. ಸದರಿ ದಿನದಂದು ನೀಡಿದ ರಜೆಯನ್ನು ಮುಂದಿನ ದಿನದಲ್ಲಿ ಹೊಂದಾಣಿಕೆ ಮಾಡಿ ಮಕ್ಕಳಿಗೆ ಪಾಠ ಪ್ರವಚನ ಮಾಡಲು ಸೂಚಿಸಿದ್ದಾರೆ. ನಾಳೆ ಹೊಸನಗರ ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಹೊಸನಗರ ತಾಲ್ಲೂಕಿನಲ್ಲಿ ಮಳೆಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಮುನ್ಸೂಚನೆಯಿರುವುದರಿಂದ ಮುಂಜಾಗ್ರಣ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹೊಸನಗರ ತಾಲೂಕಿನಾದ್ಯಂತ ದಿನಾಂಕ: 31-07-2024ರಂದು ಎಲ್ಲಾ ಅಂಗನವಾಡಿ ಕೇಂದ್ರಗಳು, ಶಾಲೆಗಳು ಹಾಗೂ ಪದವಿ ಪೂರ್ವ…