Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಅಧಿಕಾರಿ ಹಾಗೂ ನೌಕರರ ಗಮನಕ್ಕೆ ಎನ್ನುವಂತೆ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. 2024 ಮತ್ತು 2025ನೇ ಸಾಲಿನ ಎರಡು ವರ್ಷಗಳ ರಾಜ್ಯ ಹಾಗೂ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಪಡೆಯಲು ತಮ್ಮ ನಾಮನಿರ್ದೇಶನಗಳನ್ನು ದಿನಾಂಕ 14-04-2025ರೊಳಗಾಗಿ ಆನ್ ಲೈನ್ ಮೂಲಕ ಸಲ್ಲಿಸಲು ಸರ್ಕಾರ ಕೋರಿದೆ. ಅರ್ಜಿಯನ್ನು ಆನ್ ಲೈನ್ ಮೂಲಕ ಮಾತ್ರವೇ ಸಲ್ಲಿಸಬಹುದಾಗಿದೆ. Https://sarvothamaawards.karnataka.gov.in ಮೂಲಕ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಕನ್ನಡ ಹಾಗೂ ಇಂಗ್ಲೀಷ್ ಭಾಷೆಯನ್ನು ಬಳಸಬಹುದಾಗಿದ್ದು, ಕನ್ನಡದಲ್ಲಿ ಸಲ್ಲಿಸಲು ನುಡಿ 6.0 ಆವೃತ್ತಿಯನ್ನು ಮಾತ್ರ ಬಳಸಬಹುದು. 2024 ಹಾಗೂ 2025ನೇ ಸಾಲಿನ ಪ್ರಶಸ್ತಿಗಳಿಗಾಗಿ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಬೇಕು. ರಾಜ್ಯ ಹಾಗೂ ಜಿಲ್ಲಾ ಮಟ್ಟದ ಪ್ರಶಸ್ತಿಗಳಿಗಾಗಿ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ. ಈ ಸಂಬಂಧ ಸರ್ಕಾರಿ ಆದೇಶವನ್ನು https://dparar.karnataka.gov.in ನಲ್ಲಿ ವೀಕ್ಷಿಸಿ ಪರಿಶೀಲಿಸಬಹುದಾಗಿದೆ. https://kannadanewsnow.com/kannada/in-yet-another-shock-to-the-people-of-the-state-the-government-has-increased-the-sales-tax-on-diesel-to-21-17-per-cent/ https://kannadanewsnow.com/kannada/doctors-at-fortis-hospital-in-bengaluru-successfully-operate-on-man-who-had-pots-puffy-tumour-on-his-forehead/ https://kannadanewsnow.com/kannada/south-indias-largest-organ-recovery-centre-to-be-set-up-in-bengaluru/
ಬೆಂಗಳೂರು: ರಾಜ್ಯ ಸರ್ಕಾರದಿಂದ ಜನತೆಗೆ ಮತ್ತೊಂದು ಬರೆ ಎಳೆಯಲಾಗಿದೆ. ಇಂದಿನಿಂದಲೇ ಜಾರಿಗೆ ಬರುವಂತೆ ಡೀಸೆಲ್ ಮೇಲಿನ ಮಾರಾಟ ತೆರಿಗೆ ದರ ಶೇ.21.17ರಷ್ಟು ಏರಿಕೆ ಮಾಡಲಾಗಿದೆ. ಹೀಗಾಗಿ ಡೀಸೆಲ್ ದರ ಪ್ರತಿ ಲೀಟರ್ ಗೆ ರೂ.2ರಷ್ಟು ಹೆಚ್ಚಳ ಆದಂತೆ ಆಗಲಿದೆ. ಈ ಸಂಬಂಧ ರಾಜ್ಯ ಸರ್ಕಾರದಿಂದ ಗೆಜೆಟ್ ಅಧಿಸೂಚನೆ ಹೊರಡಿಸಲಾಗಿದ್ದು, ದಿನಾಂಕ: 04-11-2021 ರ ಹಿಂದೆ ಡೀಸೆಲ್ ಮೇಲೆ ವಿಧಿಸಲಾಗುತ್ತಿದ್ದ ಕರ್ನಾಟಕ ಮಾರಾಟ ತೆರಿಗೆ ದರ ಶೇ 24ರಷ್ಟು ಇದ್ದು, ಅಂದಿನ ಮಾರಾಟ ದರ ಪ್ರತಿ ಲೀಟರಿಗೆ ರೂ. 92.03 ಇತ್ತು. ದಿನಾಂಕ: 15-06-2024 ರಂದು ಕರ್ನಾಟಕ ರಾಜ್ಯ ಸರ್ಕಾರವು ಡೀಸೆಲ್ ಮೇಲೆ ವಿಧಿಸಲಾಗುತ್ತಿದ್ದ ಕರ್ನಾಟಕ ಮಾರಾಟ ತೆರಿಗೆ ದರವನ್ನು ಶೇ.18.44ಗೆ ಅಧಿಸೂಚನೆಯನ್ನು ನೀಡಿರುತ್ತದೆ ಎಂದಿದೆ. ದಿನಾಂಕ: 31-03-2025 ರಂತೆ ಪ್ರತಿ ಲೀಟರಿಗೆ ಡೀಸೆಲ್ ಮಾರಾಟ ದರವು ನೆರೆಯ ರಾಜ್ಯಗಳಲ್ಲಿ ಈ ಕೆಳಕಂಡಂತೆ ಇರುತ್ತದೆ ಎಂದು ತಿಳಿಸಿದೆ. ಬೆಂಗಳೂರು – ರೂ.89.02 ಹೊಸೂರು (ತಮಿಳುನಾಡು)- ರೂ. 94.42 ಕಾಸರಗೋಡು (ಕೇರಳ)- ರೂ.95.66 ಅನಂತಪುರ…
ವಾಸ್ತು, ಇತ್ತೀಚೆಗೆ ನಾವು ಈ ವಾಸ್ತು ಬಗ್ಗೆ ಹೆಚ್ಚು ಮಾತನಾಡುತ್ತಿದ್ದೇವೆ. ಆದರೆ ವಾಸ್ತು ಇಂದು ನಿನ್ನೆಯದಲ್ಲ. ವಾಸ್ತು ರಾಜರ ಕಾಲದಿಂದಲೂ ಇದೆ. ವಾಸ್ತುವನ್ನು ನಂಬುವವರು ಈ ಪರಿಹಾರವನ್ನು ಅನುಸರಿಸಬಹುದು. ಅನೇಕರ ಮನೆಯಲ್ಲಿ ವಾಸ್ತು ಸರಿಯಾಗಿ ಹೊಂದಿಸದೇ ಇರುವುದರಿಂದ ಕುಟುಂಬದಲ್ಲಿ ಕೆಲವು ಸಮಸ್ಯೆಗಳು ಉದ್ಭವಿಸುತ್ತವೆ. ಕೆಲವರಿಗೆ ಮನೆಯಲ್ಲಿ ನೆಮ್ಮದಿ ಕಳೆದುಕೊಳ್ಳಬಹುದು, ವ್ಯಾಪಾರದಲ್ಲಿ ನಷ್ಟ ಉಂಟಾಗಬಹುದು, ಕೆಲವರಿಗೆ ಮನೆಯಲ್ಲಿ ಜಗಳಗಳು ಕೂಡ ಬರಬಹುದು. ಕೆಲವು ಮನೆಗಳಲ್ಲಿ ವಾಸ್ತು ಸರಿಯಿಲ್ಲದ ಕಾರಣ ಕುಟುಂಬ ಎರಡು ಹೋಳಾಗುತ್ತದೆ. ಸಣ್ಣಪುಟ್ಟ ವಾಸ್ತು ಸಮಸ್ಯೆಯಾಗಿದ್ದರೆ ಅದನ್ನು ಸುಲಭವಾಗಿ ಸರಿಪಡಿಸಬಹುದು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ…
ಬೆಂಗಳೂರು: 54 ವರ್ಷದ ವ್ಯಕ್ತಿಯೊಬ್ಬರ ಹಣೆಯ ಮೇಲೆ ನಿಂಬೆ ಗಾತ್ರದ “ ಟ್ಯೂಮರ್” ಹೊಂದಿದ್ದ ವ್ಯಕ್ತಿಗೆ ಯಶಸ್ವಿ ಸಂಕೀರ್ಣ ಶಸ್ತ್ರಚಿಕಿತ್ಸೆ ಮೂಲಕ ಫೋರ್ಟಿಸ್ ಆಸ್ಪತ್ರೆ ವೈದ್ಯರ ತಂಡ ತೆಗೆದು ಹಾಕಲಾಗಿದೆ. ಮುಂಭಾಗದ ಸೈನಸ್ನ ಸೋಂಕನ್ನು ಒಳಗೊಂಡಿರುವ ಅಪರೂಪದ ಮತ್ತು ಆಕ್ರಮಣಕಾರಿ ಸ್ಥಿತಿಯಾಗಿರುವ ಪಾಟ್ನ ಪಫಿ ಟ್ಯೂಮರ್ ಇದಾಗಿತ್ತು. ಬನ್ನೇರುಘಟ್ಟ ರಸ್ತೆ ಫೋರ್ಟಿಸ್ ಆಸ್ಪತ್ರೆಯ ಇಎನ್ಟಿ, ಕಾಕ್ಲಿಯರ್ ಇಂಪ್ಲಾಂಟ್ ಮತ್ತು ಸ್ಕಲ್ ಬೇಸ್ ಸರ್ಜನ್ ಡಾ. ಸುಶೀನ್ ದತ್ ಮತ್ತು ಓಟೋರಿನೋಲಾರಿಂಗೋಲಜಿ ಸಲಹೆಗಾರ ಡಾ ಅಭಿಷೇಕ್ ಎಸ್. ಅವರ ತಜ್ಞರ ಆರೈಕೆಯಡಿ ಶಸ್ತ್ರಚಿಕಿತ್ಸೆ ನಡೆಸಿ, ಐದು ದಿನಗಳ ನಂತರ ಬಿಡುಗಡೆ ಮಾಡಲಾಯಿತು. ಡಾ. ಸುಶೀನ್ ಮಾತನಾಡಿ, ಅನಂತಪುರದ ನಿವಾಸಿಯಾದ ಶಾಮ್ (ಹೆಸರು ಬದಲಾಗಿದೆ), ಹಣೆಯ ಮೇಲೆ ದೊಡ್ಡ ಗಾತ್ರದ ಊತ ಕಾಣಿಸಿಕೊಂಡಿದೆ. ಕೇವಲ ಮೂರೂವರೆ ವಾರದಲ್ಲೇ ನಿಂಬೆ ಗಾತ್ರಕ್ಕೂ ಹೆಚ್ಚು ದೊಡ್ಡದಾಗಿ ಬೆಳೆದುಕೊಂಡಿತು. ಆರಂಭದಲ್ಲಿ, ಅವರು ತಮ್ಮ ಹುಬ್ಬುಗಳ ನಡುವೆ ಸಾಮಾನ್ಯ ಊತ ಎಂದು ಭಾವಿಸಿದ್ದರು. ಆದರೆ, ಆ ಊತದಿಂದ ವಿಪರೀತ ನೋವು…
ಬೆಂಗಳೂರು: ವಿಜಯನಗರ ಹಾಗೂ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರಗಳಲ್ಲಿ ಮಹಿಳಾ ಸುರಕ್ಷತೆ ಕುರಿತು ಬಿ.ಪ್ಯಾಕ್ ಮತ್ತು ಸಿಜಿಐ ಸಂಸ್ಥೆ ನಡೆಸಿದ “ಬಿ.ಸೇಫ್” ಸಮೀಕ್ಷಾ ವರದಿಯನ್ನು ಬಿಡುಗಡೆ ಮಾಡಲಾಯಿತು. ಭಾರತೀಯ ವಿದ್ಯಾಭವನದಲ್ಲಿ ನಡೆದ ಸಮಾರಂಭದಲ್ಲಿ ನಟಿ ಆಶಾಭಟ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ವೈಷ್ಣವಿ ಹಾಗೂ ಸಿಜಿಐ ಉಪಾಧ್ಯಕ್ಷೆ ಶ್ರೀವಿದ್ಯಾ ನಟರಾಜ್ ಸಮೀಕ್ಷಾ ವರದಿಯನ್ನು ಬಿಡುಗಡೆ ಮಾಡಿದರು. ಈ ವೇಳೆ ಮಾತನಾಡಿದ ನಟಿ ಆಶಾಭಟ್, ಇಂದು ಮಹಿಳೆ ಸಬಲೀಕರಣಕ್ಕೆ ಆದ್ಯತೆ ಹೆಚ್ಚಾಗಿದ್ದು, ಮಹಿಳಾ ಸುರಕ್ಷತೆಯೂ ಅಷ್ಟೇ ಮುಖ್ಯ. ಈ ನಿಟ್ಟಿನಲ್ಲಿ ಬಿಪ್ಯಾಕ್ ಸಮೀಕ್ಷೆ ನಡೆಸಿ, ಮಹಿಳಾ ಸುರಕ್ಷತೆಯ ಕುರಿತು ಸರ್ಕಾರದ ಗಮನ ಸೆಳೆಯುತ್ತಿರುವುದು ಶ್ಲಾಘನೀಯ ಎಂದರು. ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿ ಡಾ.ಕೆ. ವೈಷ್ಣವಿ ಮಾತನಾಡಿ, ಬಿ.ಪ್ಯಾಕ್ ಅವರ ನಿಸ್ವಾರ್ಥ ಕಾರ್ಯವನ್ನು ಶ್ಲಾಘಿಸುವೆ, ಸರ್ಕಾರವನ್ನು ಬೆಂಬಲಿಸುವ ಮತ್ತು ನಮ್ಮ ಕೆಲಸವನ್ನು ಸರಳಗೊಳಿಸುವ ಬಿ.ಪ್ಯಾಕ್ ನಂತಹ ಹೆಚ್ಚಿನ ಸಂಸ್ಥೆಗಳು ನಮಗೆ ಅಗತ್ಯವಿದೆ. ಅಂತಹ ಸಂಸ್ಥೆಗಳೊಂದಿಗೆ ಹೆಚ್ಚಿನ ಅಭಿವೃದ್ಧಿ ಕಾರ್ಯಗಳನ್ನು ಮಾಡಲು ಮತ್ತು ಸುರಕ್ಷಿತ ನಗರವನ್ನು ರೂಪಿಸಲು ನಾವು ಬದ್ಧರಾಗಿದ್ದೇವೆ ಎಂದು…
ನವದೆಹಲಿ: ಬಹು ಚರ್ಚಿತ ವಕ್ಫ್ ತಿದ್ದುಪಡಿ ಮಸೂದೆ 2024, ನಾಳೆ ಲೋಕಸಭೆಯಲ್ಲಿ ಮಂಡನೆಯಾಗಲಿದ್ದು, ವಿವಿಧ ರಾಜಕೀಯ ಗುಂಪುಗಳಿಂದ ನಿರೀಕ್ಷಿತ ಚರ್ಚೆ ಮತ್ತು ವಿರೋಧಕ್ಕೆ ಕಾರಣವಾಗಿದೆ. ಭಾರತದಲ್ಲಿ ವಕ್ಫ್ ಆಸ್ತಿಗಳ ನಿರ್ವಹಣೆಯನ್ನು ನಿಯಂತ್ರಿಸುವ 1995 ರ ವಕ್ಫ್ ಕಾಯ್ದೆಯನ್ನು ತಿದ್ದುಪಡಿ ಮಾಡಲು ಮಸೂದೆ ಪ್ರಯತ್ನಿಸುತ್ತಿದೆ. ಈ ಕ್ರಮವು ಗಮನಾರ್ಹ ಪ್ರತಿರೋಧವನ್ನು ಎದುರಿಸಿದೆ. ವಿಶೇಷವಾಗಿ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯಿಂದ (AIMPLB), ಇದು ಬದಲಾವಣೆಗಳನ್ನು ವಿರೋಧಿಸುತ್ತದೆ. ಮುಸ್ಲಿಂ ಕಾನೂನಿನಡಿಯಲ್ಲಿ ಧಾರ್ಮಿಕ, ದತ್ತಿ ಅಥವಾ ಧಾರ್ಮಿಕ ಉದ್ದೇಶಗಳಿಗಾಗಿ ಮೀಸಲಾಗಿರುವ ಭೂಮಿಯನ್ನು ಒಳಗೊಂಡಂತೆ ವಕ್ಫ್ ಆಸ್ತಿಗಳ ನಿಯಂತ್ರಣ ಮತ್ತು ಬಳಕೆಯ ಸುತ್ತ ಸಾಕಷ್ಟು ವಿವಾದಗಳಿರುವ ಸಮಯದಲ್ಲಿ ಪ್ರಸ್ತಾವಿತ ತಿದ್ದುಪಡಿಗಳು ಬಂದಿವೆ. ಪ್ರಸ್ತುತ ಶಾಸನವು ಈ ಆಸ್ತಿಗಳನ್ನು ಹೇಗೆ ನಿರ್ವಹಿಸಲಾಗುತ್ತದೆ ಎಂಬುದನ್ನು ನಿಯಂತ್ರಿಸುತ್ತದೆ ಮತ್ತು ಸುಮಾರು 9 ಲಕ್ಷ ಎಕರೆಗಳನ್ನು ವ್ಯಾಪಿಸಿರುವ ವಕ್ಫ್ ಭೂಮಿಯನ್ನು ಅಸಮರ್ಥವಾಗಿ ನಿರ್ವಹಿಸಲಾಗುತ್ತಿದೆ ಎಂದು ಸರ್ಕಾರ ಪ್ರತಿಪಾದಿಸುತ್ತದೆ. ಇದು ಸುಧಾರಣೆಗಳ ಅಗತ್ಯವನ್ನು ಹೊಂದಿದೆ. ಈ ತಿದ್ದುಪಡಿ ವಿರೋಧವನ್ನು ಹುಟ್ಟುಹಾಕಿದೆ. ಕಾಂಗ್ರೆಸ್ ನೇತೃತ್ವದ…
ಬೆಂಗಳೂರು: ರಾಜ್ಯದ ಸಾರಿಗೆ ಇಲಾಖೆಯಲ್ಲಿ ಮೋಟಾರು ವಾಹನ ನಿರೀಕ್ಷಕರ ಹುದ್ದೆಗೆ ಆಡಳಿತ ಇಲಾಖೆಯವರ ಪ್ರವೇಶ ಮತ್ತು ಭ್ರಷ್ಟಾಚಾರ ವಿಚಾರವಾಗಿ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ಇಲಾಖೆಯ ಕಾರ್ಯದರ್ಶಿಗೆ ತನಿಖೆ ನಡೆಸಿ, ವರದಿ ನೀಡುವಂತೆ ಸೂಚಿಸಿದ್ದಾರೆ. ಈ ಕುರಿತಂತೆ ಟಿಪ್ಪಣಿ ಹೊರಡಿಸಿರುವಂತ ಅವರು, ಸಾರಿಗೆ ಇಲಾಖೆಯಲ್ಲಿನ ಮೋಟಾರು ವಾಹನ ನಿರೀಕ್ಷಕರ ಹುದ್ದೆಗೆ ಆಡಳಿತ ವಿಭಾಗದ ಹುದ್ದೆಗಳಲ್ಲಿರುವವರು ಮುಂಬಡ್ತಿ ಪಡೆಯಲು ಅಸ್ತಿತ್ವದಲ್ಲೇ ಇಲ್ಲದ ಕಾಲೇಜುಗಳ ಹೆಸರಿನಲ್ಲಿ ರೂ. 10 ರಿಂದ 15 ಸಾವಿರ ಗಳಿಗೆ ನಕಲಿ ಅಂಕಪಟ್ಟಿ ಪಡೆದು ಮೋಟಾರು ವಾಹನ ನಿರೀಕ್ಷಕರ ಹುದ್ದೆಗೆ ಪ್ರಮಾಣ ಪತ್ರಗಳನ್ನು ಸಲ್ಲಿಸಿ, ಹಲವಾರು ಹುದ್ದೆ ಗಿಟ್ಟಿಸಿಕೊಂಡಿದ್ದು ಬಡ್ತಿಯಲ್ಲಿ ಭ್ರಷ್ಟಾಚಾರವಾಗಿದೆ ಎಂದು ದಿನ ಪತ್ರಿಕೆಗಳಲ್ಲಿ ಪ್ರಕಟವಾಗಿರುತ್ತದೆ ಎಂದಿದ್ದಾರೆ. ಕರ್ನಾಟಕ ನಾಗರೀಕ ಸೇವಾ (ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು 2021, ದಿನಾಂಕ 12- 10-2022 ರ ಕರ್ನಾಟಕ ರಾಜ್ಯಪತ್ರ No. SARIE 40 SAESE 2021(P-1) ರನ್ವಯ ಶೇಕಡ 95 ರಷ್ಟು ಹುದ್ದೆಗಳನ್ನು ನೇರ ನೇಮಕಾತಿ ಮೂಲಕ, ಶೇಕಡ 5 ರಷ್ಟು…
ಬೆಂಗಳೂರು: ಕ್ರಿಕೆಟ್ ಪ್ರೇಮಿಗಳಿಗೆ ಸಿಹಿಸುದ್ದಿ ಎನ್ನುವಂತೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ ಪಂದ್ಯಾವಳಿ ನಿಮಿತ್ತ ವೀಕ್ಷಕರ ಅನುಕೂಲಕ್ಕಾಗಿ ನಮ್ಮ ಮೆಟ್ರೋ ಸಂಚಾರ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ಈ ಕುರಿತಂತೆ ಬಿಎಂಆರ್ ಸಿಎಲ್ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಬೆಂಗಳೂರಿನಲ್ಲಿ ನಡೆಯಲಿರುವ TATA IPL T-20 ಕ್ರಿಕೆಟ್ ಪಂದ್ಯಗಳ ವೀಕ್ಷಣೆಗಾಗಿ, ನಮ್ಮ ಮೆಟ್ರೋ ದಿನಾಂಕ 02, 10, 18, ಹಾಗೂ 24ನೇ ಏಪ್ರಿಲ್ ಮತ್ತು 03, 13 ಹಾಗೂ 17ನೇ ಮೇ, 2025 ರಂದು ಎಲ್ಲಾ ನಾಲ್ಕು ಟರ್ಮಿನಲ್ ಅಂದರೆ ವೈಟ್ಫೀಲ್ಡ್ (ಕಾಡುಗೋಡಿ), ಚಲ್ಲಘಟ್ಟ, ರೇಷ್ಮೆ ಸಂಸ್ಥೆ ಮತ್ತು ಮಾದವರ ಮೆಟ್ರೋ ನಿಲ್ದಾಣಗಳಿಂದ ಕೊನೆಯ ಮೆಟ್ರೋ ರೈಲು ಸೇವೆಯನ್ನು ಮರುದಿನ ಮುಂಜಾನೆ 12.30ರ ವರೆಗೆ ವಿಸ್ತರಿಸಿದೆ. ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್ನಿಂದ ಎಲ್ಲಾ ನಾಲ್ಕು ದಿಕ್ಕುಗಳ ಕಡೆಗೆ ಕೊನೆಯ ರೈಲು ಮಧ್ಯರಾತ್ರಿ 01.15 ಕ್ಕೆ ಹೊರಡಲಿದೆ ಎಂಬುದಾಗಿ ಬಿ ಎಂ ಆರ್ ಸಿ ಎಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. https://twitter.com/KarnatakaVarthe/status/1907054129308110857 https://kannadanewsnow.com/kannada/chitradurga-district-police-register-154-cases-in-connection-with-card-gambling-seize-rs-10-80-lakh/ https://kannadanewsnow.com/kannada/chitradurga-nursing-officer-sj-somashekar-of-yelladakere-primary-health-centre-suspended/
ಚಿತ್ರದುರ್ಗ: ಯುಗಾದಿ ಹಬ್ಬದ ಪ್ರಯುಕ್ತ ಜಿಲ್ಲೆಯಲ್ಲಿ ಜೂಜಾಟದಲ್ಲಿ ತೊಡಗಿದ್ದಂತವರ ಮೇಲೆ ದಾಳಿ ನಡೆಸಿರುವಂತ ಪೊಲೀಸರು, ಬರೋಬ್ಬರಿ 154 ಕೇಸ್ ದಾಖಲಿಸಿದ್ದಾರೆ. ಜೊತೆಗೆ 10.80 ಲಕ್ಷ ಹಣವನ್ನು ಜಪ್ತಿ ಮಾಡಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಚಿತ್ರದುರ್ಗ ಜಿಲ್ಲಾ ಪೊಲೀಸ್ ಇಲಾಖೆ ಮಾಹಿತಿ ನೀಡಿದ್ದು, ಜಿಲ್ಲೆಯಾಧ್ಯಂತ ಯುಗಾದಿ ಹಬ್ಬದ ಪ್ರಯುಕ್ತ ಇಸ್ಪೀಟ್ ಜೂಜಾಟದ ಅಡ್ಡೆಯ ಮೇಲೆ ದಿನಾಂಕ 29-03-2025ರಿಂದ 31-03-2025ರವರೆಗೆ ವಿಶೇಷ ದಾಳಿ ನಡೆಸಲಾಗಿದೆ. ಕಾನೂನು ಬಾಹಿರವಾಗಿ ಇಸ್ಪೀಟ್ ಜೂಜಾಟದಲ್ಲಿ ಭಾಗಿಯಾಗಿದ್ದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದೆ. ಚಿತ್ರದುರ್ಗ ಉಪ ವಿಭಾಗದ ವ್ಯಾಪ್ತಿಯಲ್ಲಿ 47 ಕೇಸ್ ದಾಖಲಿಸಿ, 246 ಮಂದಿ ಬಂಧಿಸಲಾಗಿದೆ. ಅವರಿಂದ 3,94,270 ಹಣ ಜಪ್ತಿ ಮಾಡಲಾಗಿದೆ. ಚಳ್ಳಕೆರೆ ಉಪ ವಿಭಾಗದಲ್ಲಿ 51 ಕೋಸ್ ದಾಖಲಿಸಿ, 329 ಮಂದಿ ಬಂಧಿಸಲಾಗಿದೆ. 1,73,420 ಹಣವನ್ನು ಜಪ್ತಿ ಮಾಡಲಾಗಿದೆ ಎಂಬುದಾಗಿ ತಿಳಿಸಿದೆ. ಹಿರಿಯೂರು ಉಪ ವಿಭಾಗದ ವ್ಯಾಪ್ತಿಯಲ್ಲಿ 56 ಪ್ರಕರಣಗಳನ್ನು ದಾಖಲಿಸಲಾಗಿದ್ದು 275 ಆರೋಪಿಗಳಾಗಿದ್ದಾರೆ. ಇವರಿಂದ 5,12,540 ಹಣವನ್ನು ಜಪ್ತಿ ಮಾಡಲಾಗಿದೆ. ಒಟ್ಟಾರೆ…
ಚಿತ್ರದುರ್ಗ: ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರದ ಶುಶ್ರೂಷಾಧಿಕಾರಿಯೊಬ್ಬರು ಕೆಲಸಕ್ಕೆ ಅನಧಿಕೃತವಾಗಿ ಗೈರಾಗಿದ್ದಲ್ಲದೇ, ಅನುಚಿತವಾಗಿ ವರ್ತನೆ ತೋರಿದ ಆರೋಪದ ಮೇಲೆ ಅಮಾನತುಗೊಳಿಸಲಾಗಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಯಲ್ಲದಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದ ಶುಶ್ರೂಷಾಧಿಕಾರಿ ಎಸ್.ಜೆ ಸೋಮಶೇಖರ್ ಎಂಬುವರೇ ಅಮಾನತುಗೊಂಡವರಾಗಿದ್ದಾರೆ. ಎಸ್.ಜೆ ಸೋಮಶೇಖರ್ ಯಲ್ಲದಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶುಶ್ರೂಷಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಕೆಲಸಕ್ಕೆ ಗೈರು ಹಾಜರಾಗಿದ್ದಲ್ಲದೇ, ಕರ್ತವ್ಯದ ವೇಳೆ ಪಾನಮತ್ತರಾಗಿ ಮೇಲಧಿಕಾರಿಗಳೊಂದಿಗೆ ಅನುಚಿತವಾದಂತ ವರ್ತನೆ ತೋರಿದಂತ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ಟಿಹೆಚ್ಓ ಅವರು ಚಿತ್ರದುರ್ಗ ಜಿಲ್ಲಾ ಪಂಚಾಯ್ತಿ ಸಿಇಓಗೆ ವರದಿಯನ್ನು ಸಲ್ಲಿಸಿದ್ದರು. ಈ ವರದಿಯನ್ನು ಆಧರಿಸಿ ಯಲ್ಲದಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದ ನರ್ಸಿಂಗ್ ಆಫೀಸರ್ ಎಸ್ ಜೆ ಸೋಮಶೇಖರ್ ಅವರನ್ನು ಅಮಾನತುಗೊಳಿಸಿ ಆದೇಶಿಸಲಾಗಿದೆ. https://kannadanewsnow.com/kannada/new-addition-to-history-of-karnataka-now-a-new-copper-plate-inscription-has-come-to-light/ https://kannadanewsnow.com/kannada/good-news-for-those-waiting-for-court-case-to-be-resolved-national-lok-adalat-to-be-held-on-july-12/