Subscribe to Updates
Get the latest creative news from FooBar about art, design and business.
Author: kannadanewsnow09
ನಾಗ್ಪುರ: ನಾನು ಬ್ರೋಕರ್ ಅಲ್ಲ. ನನ್ನ ಬುದ್ಧಿವಂತಿಕೆಯಿಂದ ಪ್ರತಿ ತಿಂಗಳು 200 ಕೋಟಿ ರೂಪಾಯಿ ಸಂಪಾದಿಸುವುದಾಗಿ ಕೇಂದ್ರ ರಸ್ತೆ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ. ಹೀಗೆ ಏಕೆ ಹೇಳಿದ್ದು ಅಂತ ಮುಂದೆ ಓದಿ. ಕಳೆದ ಕೆಲವು ತಿಂಗಳುಗಳಲ್ಲಿ, ದೇಶದಲ್ಲಿ ಎಥೆನಾಲ್ ಬಗ್ಗೆ ವಿವಾದವೊಂದು ಕಂಡುಬಂದಿದೆ. ಎಥೆನಾಲ್ ನಿಂದಾಗಿ ತಮ್ಮ ವಾಹನಗಳು ಹಾನಿಗೊಳಗಾಗುತ್ತಿವೆ ಎಂದು ಜನರು ಹೇಳುತ್ತಿದ್ದರು. ಈ ಇಡೀ ವಿಷಯ ಸುಪ್ರೀಂ ಕೋರ್ಟ್ನ ಮೆಟ್ಟಿಲೇರಿತ್ತು. ಇದಕ್ಕೆ ಕೇಂದ್ರ ರಸ್ತೆ ಸಚಿವ ನಿತಿನ್ ಗಡ್ಕರಿ ಅವರೇ ಕಾರಣ. ಆದರೆ, ನ್ಯಾಯಾಲಯ ಅದನ್ನು ತಿರಸ್ಕರಿಸಿತು. ಈ ವಿಷಯದ ಬಗ್ಗೆ ಗಡ್ಕರಿ ಮಾತನಾಡಿ, ಈ ಸಂಪೂರ್ಣ ವಿವಾದ ಸಾಮಾಜಿಕ ಮಾಧ್ಯಮದ ಪರಿಣಾಮವಾಗಿದೆ ಎಂದು ಹೇಳಿದರು. ಅವರು ನನ್ನ ಬುದ್ಧಿವಂತಿಕೆಯಿಂದ ಪ್ರತಿ ತಿಂಗಳು 200 ಕೋಟಿ ರೂ. ಗಳಿಸುತ್ತದೆ. ನನಗೆ ಹಣದ ಕೊರತೆಯಿಲ್ಲ ಮತ್ತು ನಾನು ಕುಗ್ಗುವುದಿಲ್ಲ ಎಂದರು. ತಮ್ಮ ಕೆಲಸ ಮತ್ತು ಪ್ರಯೋಗಗಳು ರೈತರ ಹಿತಕ್ಕಾಗಿಯೇ ಹೊರತು ಹೆಚ್ಚು ಗಳಿಸುವ ಅಗತ್ಯದಿಂದಲ್ಲ ಎಂದು ಅವರು ಹೇಳಿದರು.…
ಅಸ್ಸಾಂ: ಯುನೈಟೆಡ್ ಸ್ಟೇಟ್ಸ್ ಜಿಯೋಲಾಜಿಕಲ್ ಸರ್ವೇ ಪ್ರಕಾರ ಭಾನುವಾರ ಸಂಜೆ ಅಸ್ಸಾಂನಲ್ಲಿ 5.9 ತೀವ್ರತೆಯ ಭೂಕಂಪ ಸಂಭವಿಸಿದೆ. ತಕ್ಷಣಕ್ಕೆ ಯಾವುದೇ ಜೀವಹಾನಿ ಅಥವಾ ಆಸ್ತಿಪಾಸ್ತಿಗೆ ಹಾನಿಯಾದ ವರದಿಯಾಗಿಲ್ಲ ಎಂದು ಅಧಿಕಾರಿಗಳು ಪಿಟಿಐಗೆ ತಿಳಿಸಿದ್ದಾರೆ. https://twitter.com/USGSted/status/1967189308604866913 ಗುವಾಹಟಿಯಲ್ಲಿ ಕಂಪನದ ಅನುಭವವಾಗಿದ್ದು, ಅನೇಕ ನಿವಾಸಿಗಳು ಭಯಭೀತರಾಗಿ ತಮ್ಮ ಮನೆಗಳಿಂದ ಹೊರಗೆ ಓಡಿಬಂದರು. “ಇದು ಎಂದಿಗೂ ನಿಲ್ಲುವುದಿಲ್ಲ ಎಂಬಂತೆ ಭಾಸವಾಯಿತು” ಎಂದು ಗುವಾಹಟಿ ನಿವಾಸಿಯೊಬ್ಬರು HT ಗೆ ತಿಳಿಸಿದರು. “ಒಂದು ನಿಮಿಷ, ನಾನು ಸತ್ತಿದ್ದೇನೆ ಎಂದು ಭಾವಿಸಿದೆ. ಛಾವಣಿ ಕುಸಿಯುತ್ತದೆ ಎಂದು ನಾನು ನಿಜವಾಗಿಯೂ ನಂಬಿದ್ದೆ” ಎಂದು ಮತ್ತೊಬ್ಬ ನಿವಾಸಿ ಹೇಳಿದರು. ಅಸ್ಸಾಂನ ಮಾಜಿ ಮುಖ್ಯಮಂತ್ರಿ ಸರ್ಬಾನಂದ ಸೋನೋವಾಲ್ ಕೂಡ X ಗೆ ಕರೆದರು: “ಅಸ್ಸಾಂನಲ್ಲಿ ದೊಡ್ಡ ಭೂಕಂಪ. ಎಲ್ಲರ ಸುರಕ್ಷತೆ ಮತ್ತು ಯೋಗಕ್ಷೇಮಕ್ಕಾಗಿ ನನ್ನ ಪ್ರಾರ್ಥನೆಗಳು ಎಂದಿದ್ದಾರೆ. https://kannadanewsnow.com/kannada/mother-in-law-harassing-daughter-in-law-to-maintain-an-illegal-relationship-with-the-uncle-fir-registered/
ಅಸ್ಸಾಂ: ಭಾನುವಾರ ಅಸ್ಸಾಂನ ತೇಜ್ಪುರ ಬಳಿ 5.8 ತೀವ್ರತೆಯ ಭೂಕಂಪ ಸಂಭವಿಸಿದ್ದು, ಮೇಘಾಲಯ, ನಾಗಾಲ್ಯಾಂಡ್ ಮತ್ತು ತ್ರಿಪುರ ಸೇರಿದಂತೆ ಹಲವಾರು ಈಶಾನ್ಯ ರಾಜ್ಯಗಳಲ್ಲಿ ಕಂಪನ ಉಂಟಾಗಿದೆ. ಪ್ರಾಥಮಿಕ ವರದಿಗಳ ಪ್ರಕಾರ, ಅಸ್ಸಾಂನ ಸೋನಿತ್ಪುರ ಜಿಲ್ಲೆಯ ತೇಜ್ಪುರ ಪಟ್ಟಣದ ಬಳಿ ಭೂಕಂಪದ ಕೇಂದ್ರಬಿಂದು ಇತ್ತು. ಸಾವುನೋವುಗಳು ಅಥವಾ ದೊಡ್ಡ ಹಾನಿಯ ಬಗ್ಗೆ ತಕ್ಷಣದ ವರದಿಗಳಿಲ್ಲ. https://twitter.com/RT_India_news/status/1967191487223074919 ಯುನೈಟೆಡ್ ಸ್ಟೇಟ್ಸ್ ಜಿಯೋಲಾಜಿಕಲ್ ಸರ್ವೇ ಪ್ರಕಾರ ಭಾನುವಾರ ಸಂಜೆ ಅಸ್ಸಾಂನಲ್ಲಿ 5.8 ತೀವ್ರತೆಯ ಭೂಕಂಪ ಸಂಭವಿಸಿದೆ. ತಕ್ಷಣಕ್ಕೆ ಯಾವುದೇ ಜೀವಹಾನಿ ಅಥವಾ ಆಸ್ತಿಪಾಸ್ತಿಗೆ ಹಾನಿಯಾದ ವರದಿಯಾಗಿಲ್ಲ ಎಂದು ಅಧಿಕಾರಿಗಳು ಪಿಟಿಐಗೆ ತಿಳಿಸಿದ್ದಾರೆ. ಗುವಾಹಟಿಯಲ್ಲಿ ಕಂಪನದ ಅನುಭವವಾಗಿದ್ದು, ಅನೇಕ ನಿವಾಸಿಗಳು ಭಯಭೀತರಾಗಿ ತಮ್ಮ ಮನೆಗಳಿಂದ ಹೊರಗೆ ಓಡಿಬಂದರು. “ಇದು ಎಂದಿಗೂ ನಿಲ್ಲುವುದಿಲ್ಲ ಎಂಬಂತೆ ಭಾಸವಾಯಿತು” ಎಂದು ಗುವಾಹಟಿ ನಿವಾಸಿಯೊಬ್ಬರು HT ಗೆ ತಿಳಿಸಿದರು. “ಒಂದು ನಿಮಿಷ, ನಾನು ಸತ್ತಿದ್ದೇನೆ ಎಂದು ಭಾವಿಸಿದೆ. ಛಾವಣಿ ಕುಸಿಯುತ್ತದೆ ಎಂದು ನಾನು ನಿಜವಾಗಿಯೂ ನಂಬಿದ್ದೆ” ಎಂದು ಮತ್ತೊಬ್ಬ ನಿವಾಸಿ ಹೇಳಿದರು.
ಬೆಂಗಳೂರು: ಮಾವನ ಜೊತೆಗೆ ಅಕ್ರಮ ಸಂಬಂಧ ಹೊಂದುವಂತೆ ಸೊಸೆಗೆ ಕಿರುಕುಳ ನೀಡಲಾಗಿದೆ. ಈ ಸಂಬಂಧ ಸೊಸೆ ನೀಡಿದಂತ ದೂರಿನ ಹಿನ್ನಲೆಯಲ್ಲಿ ಅತ್ತೆ-ಮಾವರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಬೆಂಗಳೂರಿ ಬಿಟಿಎಂ ಲೇಔಟ್ ನಿವಾಸಿ ಯಾಸೀನ್ ಪಾಷಾ ಮತ್ತು ಪತ್ನಿ ಶಾಸೀಯಾರಿಂದ ಸುದ್ದಗುಂಟೆಪಾಳ್ಯ ಪೊಲೀಸ್ ಠಾಣೆಯಲ್ಲಿ ಬಿಎನ್ಎಸ್ ಸೆಕ್ಷನ್ 351(2), 352,2(5) ರಡಿ ಪ್ರಕರಣ ದಾಖಲಾಗಿದೆ. ಯಾಸೀನ್ ಪಾಷಾ ಹಾಗೂ ಶಾಸೀಯಾ ಜೊತೆಗೆ ಕಳೆದ ಮೇ ತಿಂಗಳಿನಲ್ಲಿ ನಿಶ್ಚಿತಾರ್ಥವಾಗಿತ್ತು. ಆದರೇ ನಂತ್ರ ದಿನಗಳಲ್ಲಿ ಮದುವೆ ಮಾಡಲು ಹುಡುಗನ ಪೋಷಕರು ನಿರಾಕಸಿದ್ದರು. ಯಾಸಿನ್ ನಿಶ್ಚಿತಾರ್ಥದ ಬಳಿಕ ಪೋಷಕರ ವಿರೋಧದ ನಡುವೆ ಮೈಸೂರಲ್ಲಿ ಮದುವೆಯಾಗಿ, ಮನೆಗೆ ಬಂದಿದ್ದರು. ಇದರಿಂದ ಕೋಪಗೊಂಡಿದ್ದಂತ ಅತ್ತೆ ಹುಮೇದಾ ಹಾಗೂ ಮಲತಂದೆ ಅಕ್ಬರ್ ಸೊಸೆಗೆ ಕಿರುಕುಳ ನೀಡುತ್ತಿದ್ದರು. ಇದಷ್ಟೇ ಅಲ್ಲದೇ ಮಾವನ ಜೊತೆಗೆ ಅನೈತಿಕ ಸಂಬಂಧ ಹೊಂದುವಂತೆಯೂ ಕಿರುಕುಳ ನೀಡುತ್ತಿದ್ದರು. ಇದಕ್ಕೆ ಒಪ್ಪದಿದ್ದಾಗ ಸೊಸೆ ಶಾಸೀಯಾನನ್ನು ಆತ್ಮಹತ್ಯೆ ಮಾಡಿಕೊಳ್ಳುವಂತೆಯೂ ಬೆದರಿಕೆ ಹಾಕಿದ್ದರು ಎಂಬುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ದೂರು ಆಧರಿಸಿ ಎಫ್ಐಆರ್ ದಾಖಲಾಗಿದೆ.…
ಅಸ್ಸಾಂ: ಭಾನುವಾರ ಅಸ್ಸಾಂನ ದರ್ರಾಂಗ್ನಲ್ಲಿ ನಡೆದ ರ್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ಪಕ್ಷದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು. ಅದು ರಾಷ್ಟ್ರವಿರೋಧಿ ಶಕ್ತಿಗಳ ಜೊತೆ ಸೇರುತ್ತಿದೆ ಮತ್ತು ಪಾಕಿಸ್ತಾನದಿಂದ ಪೋಷಿಸಲ್ಪಟ್ಟ ಭಯೋತ್ಪಾದಕರನ್ನು ಬೆಂಬಲಿಸುತ್ತಿದೆ ಎಂದು ಆರೋಪಿಸಿದರು. ನಮ್ಮ ಧೈರ್ಯಶಾಲಿ ಸೈನಿಕರೊಂದಿಗೆ ನಿಲ್ಲುವ ಬದಲು, ಕಾಂಗ್ರೆಸ್ ಒಳನುಸುಳುವವರು ಮತ್ತು ಭಾರತದ ಏಕತೆಗೆ ಬೆದರಿಕೆ ಹಾಕುವವರನ್ನು ಬೆಂಬಲಿಸಲು ಆಯ್ಕೆ ಮಾಡಿದೆ. ಈ ಪಕ್ಷವು ಪದೇ ಪದೇ ರಾಷ್ಟ್ರವಿರೋಧಿ ಶಕ್ತಿಗಳಿಗೆ ರಕ್ಷಣೆ ನೀಡಿದೆ ಎಂದು ಪ್ರಧಾನಿ ಮೋದಿ ಆರೋಪಿಸಿದರು. ಆಪರೇಷನ್ ಸಿಂಧೂರ್ ಯಶಸ್ಸು ಆಪರೇಷನ್ ಸಿಂಧೂರ್ ಮುಗಿದ ನಂತರ ಪ್ರಧಾನಿಯವರ ಮೊದಲ ಭೇಟಿ ಇದಾಗಿದ್ದು, ಇದನ್ನು ಅವರು “ದೊಡ್ಡ ಯಶಸ್ಸು” ಎಂದು ಬಣ್ಣಿಸಿದರು, ಇದನ್ನು ಮಾ ಕಾಮಾಕ್ಯ ಮತ್ತು ಶ್ರೀಕೃಷ್ಣನಿಗೆ ಅರ್ಪಿಸಿದರು. “ಆಪರೇಷನ್ ಸಿಂಧೂರ್ ನಂತರ ನಿನ್ನೆ ಅಸ್ಸಾಂಗೆ ನನ್ನ ಮೊದಲ ಭೇಟಿಯಾಗಿತ್ತು. ಮಾ ಕಾಮಾಕ್ಯಳ ಆಶೀರ್ವಾದದೊಂದಿಗೆ, ಕಾರ್ಯಾಚರಣೆ ಯಶಸ್ವಿಯಾಯಿತು. ಇಂದು, ಈ ಪವಿತ್ರ ಭೂಮಿಯಲ್ಲಿ ದೈವಿಕ ಸಂಪರ್ಕವಿದೆ ಎಂದು ನಾನು ಭಾವಿಸುತ್ತೇನೆ” ಎಂದು ಅವರು…
ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅಂದರೆ ಕೇವಲ ಒಬ್ಬ ವ್ಯಕ್ತಿಯಲ್ಲ. ಒಂದು ಸಿದ್ದಾಂತ. ಬೆವರಿನ ಸಂಸ್ಕೃತಿಗೆ ಮೌಲ್ಯ ಮತ್ತು ಘನತೆ ತಂದು ಕೊಡುವ ಸಿದ್ಧಾಂತ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಜಿಲ್ಲಾ ಶಾಖೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಪತ್ರಕರ್ತನಾಗಿ ಎರಡು ಕಣ್ಣುಗಳಿಂದ ಸಮಾಜವನ್ನು ನೋಡುತ್ತಿದ್ದ ನನಗೆ, ಸಮಾಜದ ಲಕ್ಷಾಂತರ ಕಣ್ಣುಗಳು ನನ್ನೊಬ್ಬನನ್ನು ಗಮನಿಸುತ್ತಿರುತ್ತದೆ ಎನ್ನುವ ಸಾಮಾಜಿಕ ಎಚ್ಚರವನ್ನು ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೆರಳಲ್ಲಿ ಕಲಿತುಕೊಂಡೆ. ಒಂದು ಬಲಿಷ್ಠವಾದ ವ್ಯವಸ್ಥೆ ಏಕಲವ್ಯರ ಬೆರಳುಗಳನ್ನು, ಅವಕಾಶ ಮತ್ತು ಪ್ರತಿಭೆಗಳನ್ನು ಹೇಗೆ ಕಿತ್ತುಕೊಳ್ಳುತ್ತದೆ ಎನ್ನುವುದನ್ನು ನಾನು ಪತ್ರಕರ್ತನಾಗಿ ಕಲಿತಿದ್ದೆ. ಆದರೆ, ಏಕಲವ್ಯರ ಬೆರಳುಗಳಿಗೆ ಶಕ್ತಿ ತುಂಬಿ ಬೆವರಿನ ಸಂಸ್ಕೃತಿಗೆ ಘನತೆ ತರುವುದು ಹೇಗೆ ಎನ್ನುವುದನ್ನು ನಾನು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಕಲಿತೆ. ನಾನು ಮಾನ್ಯ ಮುಖ್ಯಮಂತ್ರಿಗಳ ನೆರಳಿಗೆ ಬಂದು ಒಂದು ಡಜನ್ ವರ್ಷಗಳೇ ಕಳೆದವು. ಈ ಅವಧಿಯಲ್ಲಿ ನಾನು ಗ್ರಹಿಸಿದ್ದು ಏನೆಂದರೆ,…
ಶಿವಮೊಗ್ಗ: ಕಮಿಷನ್ ದರದಲ್ಲಿ ಆದ ಹಿನ್ನೆಡೆ, ಪೌತಿ ಸದಸ್ಯರು ಹಾಗೂ ಸುಸ್ತಿಯಾಗಿ ದೀರ್ಘ ಕಾಲ ಸಂದ ಸಾಲದ ಮೇಲಿನ ಬಡ್ಡಿ ರಿಯಾಯ್ತಿ ಮೊದಲಾದ ಸವಾಲುಗಳ ಹೊರತಾಗಿಯೂ ಸಂಸ್ಥೆ ಹಿಂದಿನ ಸಾಲಿನಲ್ಲಿ 64.47 ಲಕ್ಷ ರೂ. ಲಾಭವನ್ನು ಸಂಪಾದಿಸಿದೆ ಎಂದು ಸಾಗರದ ತೋಟಗರ್ಸ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಕೆ.ಸಿ. ದೇವಪ್ಪ ಹೇಳಿದರು. ಶಿವಮೊಗ್ಗ ಜಿಲ್ಲೆಯ ಸಾಗರದ ಭದ್ರಕಾಳಿ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ 2024-25ನೇ ಸಾಲಿನ ಸರ್ವಸದಸ್ಯರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಕಳೆದ ಚುನಾವಣೆಯಲ್ಲಿ ಈ ಹಿಂದೆ ಸಹಕಾರಿಯಲ್ಲಿ ನಿರ್ದೇಶಕರಾಗಿ ಸೇವೆ ಸಲ್ಲಿಸಿದವರು ವಿಶ್ರಮಿಸಿ ಹೊಸಬರಿಗೆ ಅವಕಾಶ ಕಲ್ಪಿಸುವ ಪ್ರಕ್ರಿಯೆ ನಡೆದಿದೆ. ಹೀಗೆ ನಿರ್ಗಮಿಸಿದವರು ಸಂಸ್ಥೆಯ ಕಟ್ಟಡ ನಿಧಿಗೆ ತಮ್ಮದೇ ಆದ ದೇಣಿಗೆಯನ್ನೂ ನೀಡಿದರು ಎಂಬುದನ್ನು ಇಲ್ಲಿ ಉಲ್ಲೇಖಿಸಬೇಕಾಗುತ್ತದೆ. ಇದೇ ಕಾರಣದಿಂದ ಈ ಬಾರಿ 8 ಜನ ಹೊಸ ನಿರ್ದೇಶಕರ ಜೊತೆ ಆಡಳಿತ ಮಂಡಳಿ ಕೆಲಸ ಮಾಡುತ್ತಿದೆ ಎಂದರು. ಸಂಸ್ಥೆ ಬರುವ ವರ್ಷ ಸುವರ್ಣ ಮಹೋತ್ಸವವನ್ನು ಆಚರಿಸಲಿದೆ. ಈ…
ಮಂಡ್ಯ: ಜಿಲ್ಲೆಯಲ್ಲಿ ದಸರಾ ಉದ್ಘಾಟಕರಾಗಿ ಬಾನು ಮುಷ್ತಾಕ್ ಆಯ್ಕೆಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಇದನ್ನು ವಿರೋಧಿಸಿ ಚಾಮುಂಡಿ ಬೆಟ್ಟ ಚಲೋ ನಡೆಸಲು ಹಿಂದೂ ಕಾರ್ಯಕರ್ತರು ಮುಂದಾಗಿದ್ದರು. ಇಂತಹ ಹಿಂದೂ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಮೈಸೂರು ದಸರಾ ದಸರಾ ಉದ್ಘಾಟರ ಬದಲಾವಣೆಗೆ ಹಿಂದೂ ಕಾರ್ಯಕರ್ತರ ಪಟ್ಟು ಹಿಡಿದ್ದಾರೆ. ಬಜರಂಗ ಸೇನೆಯಿಂದ ಚಾಮುಂಡಿ ಬೆಟ್ಟ ಚಲೋ ಕೈಗೊಳ್ಳಲಾಗಿತ್ತು. ಮಂಡ್ಯದಲ್ಲಿ ಬಜರಂಗಸೇನೆ ಕರ್ನಾಟಕದ ರಾಜ್ಯಾಧ್ಯಕ್ಷ ಬಿ.ಮಂಜುನಾಥ್ ನೇತೃತ್ವದಲ್ಲಿ ಚಾಮುಂಡಿ ಬೆಟ್ಟ ಚಲೋ ನಡೆಸಲು ಮುಂದಾಗಿತ್ತು. ಲೇಖಕಿ ಬಾನು ಮುಷ್ತಾಕ ಆಯ್ಕೆಗೆ ವಿರೋಧ ವ್ಯಕ್ತವಾಗಿತ್ತು. ಮಂಡ್ಯದ ಶಕ್ತಿ ದೇವತೆ ಕಾಳೀಕಾಂಭ ದೇವಾಲಯದಿಂದ ತೆರಳಲು ಸಿದ್ದತೆ ನಡೆಸಲಾಗಿತ್ತು. ಚಾಮುಂಡಿ ಬೆಟ್ಟ ಚಲೋಗೆ ತೆರಳುತ್ತಿರುವ ಸುಮಾರು 50 ಕಾರುಗಳಲ್ಲಿ 300 ಜನರು ಹೊರಟಿದ್ದರು. ಭುವನೇಶ್ವರಿ ತಾಯಿಯನ್ನ ಮುಸ್ಲಿಂ ವಿರೋಧಿ ರೀತಿ ಮಾತನಾಡಿದ್ದಾರೆ. ಕನ್ನಡದ ಧ್ವಜದ ಬಗ್ಗೆ ಮಾತನಾಡಿರುವ ಮಾತು ಮತಾಂಧ ಮಾನಸಿಕತೆ ತೋರುತ್ತದೆ. ಅಂತಹ ವ್ಯಕ್ತಿ ಚಾಮುಂಡೇಶ್ವರಿಯ ಆರಾಧನೆ ಮಾಡಲು ಹೇಗೆ ಸಾಧ್ಯ. ರಾಜ್ಯ ಸರ್ಕಾರದ ಹಿಂದೂಗಳ ಭಾವನೆಗಳಿಗೆ ದಕ್ಕೆ…
ಬಳ್ಳಾರಿ: ಜಿಲ್ಲೆಯಲ್ಲಿ ಒಂದೂವರೆ ತಿಂಗಳ ಮಗುವೊಂದು ಕಳ್ಳತನವಾಗಿತ್ತು. ಈ ಪ್ರಕರಣವನ್ನು ಗಂಭೀರವಾಗಿಯೇ ಪರಿಗಣಿಸಿದಂತ ಪೊಲೀಸರು, ಒಂದೇ ದಿನದಲ್ಲಿ ಬೇಧಿಸಿ, ತಾಯಿಯ ಮಡಿಲಿಗೆ ಒಪ್ಪಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಳ್ಳಾರಿಯ ಬ್ರೂಸಪೇಟೆ ಠಾಣೆ ವ್ಯಾಪ್ತಿಯಲ್ಲಿ ಒಂದೂವರೆ ತಿಂಗಳ ಮಗು ಕಳ್ಳತನ ಪ್ರಕರಣ ದಾಖಲಾಗಿತ್ತು. ಈ ಪ್ರಕರಣವನ್ನು ಬೇಧಿಸಿರುವಂತ ಪೊಲೀಸರು, ಕಳ್ಳತನ ನಡೆ ಕೇವಲ 12 ಗಂಟೆಯ ಒಳಗಾಗಿ ಮಗುವನ್ನು ಪತ್ತೆ ಹಚ್ಚಿ, ರಕ್ಷಿಸಿದ್ದಾರೆ. ಆ ಬಳಿಕ ಮಗುವನ್ನು ತಾಯಿಯ ಮಡಿಲು ಸೇರಿಸಿ್ದದಾರೆ. ಈ ಪ್ರಕರಣ ಸಂಬಂಧ ಆರೋಪಿಗಳಾದಂತ ಶಮೀಮ್(25), ಹೆಚ್.ಎಂ ಇಸ್ಮಾಯಿಲ್ ಸಾಬ್(65), ಭಾಷಾ (55) ಮತ್ತು ಬಸವರಾಜ ಮಹಾಂತಪ್ಪ (43) ಎಂಬುವರನ್ನು ಬಂಧಿಸಿದ್ದಾರೆ. ಬ್ರೂಸ್ ಪೇಟೆ ಠಾಣೆಯ ಪೊಲೀಸರ ಈ ಕಾರ್ಯವನ್ನು ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ಶ್ಲಾಘಿಸಿದ್ದಾರೆ. https://kannadanewsnow.com/kannada/kpcc-in-full-swing-for-greater-bengaluru-authority-elections-dk-orders-formation-of-preparatory-committee/
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಚುನಾವಣೆಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯು ಭರ್ಜರಿ ತಯಾರಿ ನಡೆಸಿದೆ. ಇದಕ್ಕಾಗಿ ಬಂಗಳೂರು ಐದು ನಗರಪಾಲಿಕೆ ಚುನಾವಣೆ ಪೂರ್ವತಯಾರಿ ಸಮಿತಿ ರಚಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆದೇಶಿಸಿದ್ದಾರೆ. ಈ ಸಂಬಂಧ ಆದೇಶ ಹೊರಡಿಸಿರುವಂತ ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು, ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹಾಗೂ 5 ನಗರಪಾಲಿಕೆ ಅಸ್ತಿತ್ವಕ್ಕೆ ಬಂದ ನಂತರ, ಇದಕ್ಕೆ ಸಂಬಂಧಪಟ್ಟಂತೆ ಬೆಂಗಳೂರು ಮಹಾನಗರದ ವ್ಯಾಪ್ತಿಯಲ್ಲಿ ಬರುವ 5 ನಗರಪಾಲಿಕೆಗಳಲ್ಲಿ ಚುನಾವಣಾ ಪೂರ್ವತಯಾರಿ, ಪಕ್ಷ ಸಂಘಟನೆಗೆ ಸಂಬಂಧಪಟ್ಟ, ಇತರ ಪುಕ್ರಿಯೆಗಳನ್ನು ಪೂರ್ಣಗೊಳಿಸಿ ಪಕ್ಷವನ್ನು ಮುಂಬರುವ ನಗರಪಾಲಿಕೆ ಚುನಾವಣೆಗೆ ಸಜ್ಜುಗೊಳಿಸಲು “ಬೆಂಗಳೂರು 5 ನಗರಪಾಲಿಕೆ ಚುನಾವಣೆ ಪೂರ್ವತಯಾರಿ ಸಮಿತಿ” ರಚಿಸಲಾಗಿದೆ ಎಂದಿದ್ದಾರೆ. ಈ ಕೆಳಕಾಣಿಸಿದ ಸಮಿತಿಯ ಎಲ್ಲ ಸದಸ್ಯರುಗಳು ತಮಗೆ ನೀಡಲಾದ ಜವಾಬ್ದಾರಿಯನ್ನು ವಹಿಸಿಕೊಂಡು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬರುವ 5 ಬೆಂಗಳೂರು ನಗರಪಾಲಿಕೆಗಳಿ ನಡೆಸಲು ಉದ್ದೇಶಿಸಲಾದ ಚುನಾವಣೆಗೆ ಸಂಬಂಧಪಟ್ಟಂತೆ ಬೆಂಗಳೂರು ನಗರ ವ್ಯಾಪ್ತಿಯ ಪಕ್ಷದ ಎಲ್ಲ…






