Subscribe to Updates
Get the latest creative news from FooBar about art, design and business.
Author: kannadanewsnow09
ಮಂಡ್ಯ: ಜಿಲ್ಲೆಯಲ್ಲಿ ಕೈಗಾರಿಕೆ ಸ್ಥಾಪನೆ ಮಾಡುವುದಕ್ಕೆ ಜಾಗ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಬೃಹತ್ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ಇಬ್ಬರಿಗೂ ಪತ್ರ ಬರೆದಿದ್ದೇನೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದರು. ಮಂಡ್ಯದಲ್ಲಿ ದಿಶಾ ಸಮಿತಿ ಸಭೆಯ ನಂತರ ಮಾಧ್ಯಮಗೋಷ್ಟಿಯಲ್ಲಿ ಕೇಂದ್ರ ಸಚಿವರು; ಮಂಡ್ಯ ಜಿಲ್ಲೆಯಲ್ಲಿ ದೊಡ್ಡ ಕೈಗಾರಿಕೆ ಸ್ಥಾಪನೆ ಮಾಡಬೇಕೆನ್ನುವ ಬೇಡಿಕೆ ಇದೆ. ನಾನು ಸಂಸದನಾಗಿ ಒಂದೂವರೆ ವರ್ಷ ಆಯಿತು. ಕೈಗಾರಿಕೆಗೆ ಜಾಗ ಕೊಡಿ ಎಂದು ಡಿಸಿ ಅವರಿಗೆ ಪತ್ರ ಬರೆದಿದ್ದೇನೆ. ಪಾಪ.. ಅವರು ಜಾಗ ಹುಡುಕುತ್ತಲೇ ಇದ್ದಾರೆ. ಜಿಲ್ಲಾಧಿಕಾರಿಗಳು ಜಾಗ ಹುಡುಕಿದ್ರು ಸಿಕ್ಕಿಲ್ಲ ಎಂದರು. ರಾಜ್ಯದಲ್ಲಿ ಕೇಂದ್ರದಿಂದ ಏನೇ ಕೆಲಸ ಆಗಬೇಕಿದ್ದರೂ ರಾಜ್ಯದ ಸಹಕಾರ ಬೇಕಿದೆ. ಸಹಕಾರ ಸಿಗುತ್ತದೆ ಎಂಬ ನಂಬಿಕೆ ಇದೆ ಎಂದು ಸಚಿವರು ಹೇಳಿದರು. ಮಂಡ್ಯ ಶಾಸಕರು ಜಾಗ ಕೊಡುವುದಾದರೆ ಕೊಡಲಿ. ಸರಕಾರದಿಂದ ಸ್ವಾಧೀನ ಮಾಡಿಸಿ ನಮಗೆ ಕೊಡಲಿ. ಎಲ್ಲರೂ ಸೇರಿ ಕೈಗಾರಿಕೆ ತಂದು ಉದ್ಯೋಗ ಸೃಷ್ಟಿ ಮಾಡೋಣ. ಮಂಡ್ಯಕ್ಕೆ ಏನು ತಂದ್ರಿ…
ಬೆಂಗಳೂರು: ಕರ್ನಾಟಕ ಲೋಕಾಯುಕ್ತಕ್ಕೆ ಆಸ್ತಿ ವಿವರ ಸಲ್ಲಿಸಿದಂತ ಸಚಿವರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಸಚಿವ ಕೆ.ಹೆಚ್ ಮುನಿಯಪ್ಪ ಸೇರಿದಂತೆ ಹಲವು ಸಚಿವರು ತಮ್ಮ ಆಸ್ತಿವವರವನ್ನು ಸಲ್ಲಿಸಿದ್ದಾರೆ. ಈ ಬಗ್ಗೆ ಕರ್ನಾಟಕ ಲೋಕಾಯುಕ್ತದಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಸಚಿವರಾದಂತ ಕೆ.ಹೆಚ್ ಮುನಿಯಪ್ಪ, ದಿನೇಶ್ ಗುಂಡೂರಾವ್, ಜಮೀರ್ ಅಹ್ಮದ್, ರಹೀಂ ಖಾನ್, ಕೆ.ವೆಂಕಟೇಶ್ ಅವರುಗಳು ತಮ್ಮ ಆಸ್ತಿ ವಿವರಗಳನ್ನು ಸಲ್ಲಿಸಿರುವುದಾಗಿ ತಿಳಿಸಿದೆ. 2024-25ನೇ ಸಾಲಿನಲ್ಲಿ ಆಸ್ತಿ ವವರ ಸಲ್ಲಿಸಿದವರ ಸಚಿವರ ಪಟ್ಟಿಯನ್ನು ರಿಲೀಸ್ ಮಾಡಲಾಗಿದೆ. ಆಸ್ತಿ ವಿವರ ಸಲ್ಲಿಸಿದ ಸಚಿವರ ಪಟ್ಟಿಯನ್ನು ಕರ್ನಾಟಕ ಲೋಕಾಯುಕ್ತದಿಂದ ಬಿಡುಗಡೆ ಮಾಡಲಾಗಿದೆ. https://kannadanewsnow.com/kannada/cm-siddaramaiah-announces-decision-to-pay-rs-3200-per-tonne-of-sugarcane/ https://kannadanewsnow.com/kannada/transport-minister-ramalinga-reddys-sudden-visit-to-kempegowda-bus-station-in-bengaluru/
ಬೆಂಗಳೂರು: 3,500 ಪ್ರತಿ ಟನ್ ಕಬ್ಬಿಗೆ ನೀಡಬೇಕು ಎಂಬುದಾಗಿ ರೈತರು ಒತ್ತಾಯಿಸುತ್ತಿದ್ದಾರೆ. ನಾನು ವಿವಿಧ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ. ನಾವು 3,200 ರೂಪಾಯಿ ಪ್ರತಿ ಟನ್ ಕಬ್ಬಿಗೆ ನೀಡಲು ನಿರ್ಧರಿಸಿದ್ದೇವೆ. 11.25 ರಿಕವರಿ ಬಂದರೇ 3,500 ರೂಪಾಯಿ, 10.25 ರಿಕವರಿ ಬಂದರೇ 3,100 ರೂಪಾಯಿ ಪ್ರತಿ ಟನ್ ಗೆ ನೀಡಲಾಗುತ್ತದೆ. ಇದನ್ನು ರೈತರಿಗೆ ಈಗಾಗಲೇ ಮುಟ್ಟಿಸಲಾಗಿದೆ. ನಾಳೆ ಸಮಸ್ಯೆ ಕುರಿತಂತೆ ಬೆಳಗ್ಗೆ 11 ಗಂಟೆಗೆ ಸಕ್ಕರೆ ಕಾರ್ಖಾನೆ ಮಾಲೀಕರು, ಆ ಬಳಿಕ 1 ಗಂಟೆಗೆ ರೈತರೊಂದಿಗೆ ಸಭೆ ನಡೆಸಿ, ಚರ್ಚಿಸಿವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಕಬ್ಬು ಬೆಳೆಗಾರರ ಪ್ರತಿಭಟನೆ ಕುರಿತಂತೆ ಇಂದಿನ ಸಭೆಯಲ್ಲಿ ಚರ್ಚಿಸಲಾಗಿದೆ. ಬೆಳಗಾವಿ, ಬಾಗಲಕೋಟೆ, ಬಿಜಾಪುರದಲ್ಲಿ ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಬಹಳ ಸುದೀರ್ಘವಾಗಿ ಚರ್ಚಿಸಲಾಯಿತು. ನಾನು ಸಚಿವ ಹೆಚ್.ಕೆ ಪಾಟೀಲ್ ಅವರಿಗೂ ರೈತರೊಂದಿಗೆ ಚರ್ಚಿಸುವಂತೆ ಸೂಚಿಸಿದ್ದೆನು. ಅವರು ಹೋಗಿ ರೈತರೊಂದಿಗೆ ಚರ್ಚಿಸಿದ್ದಾರೆ ಎಂದರು. ನಿನ್ನೆ ರೈತರೊಂದಿಗೆ ಸಚಿವ ಹೆಚ್.ಕೆ ಪಾಟೀಲ್, ಎಂ.ಬಿ ಪಾಟೀಲ್ ಮಾತನಾಡಿದ್ದಾರೆ. ನಾವು…
ಬೆಂಗಳೂರು : 2011-12ನೇ ಸಾಲಿನಿಂದ ನಿವೃತ್ತಿಯಾಗಿರುವ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ನೀಡುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಸಂಯುಕ್ತ ಸಂಘರ್ಷ ಸಮಿತಿ ವತಿಯಿಂದ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಸಂಘಟನೆಗಳ ವತಿಯಿಂದ 2011-12 ನೇ ಸಾಲಿನಿಂದ ನಿವೃತ್ತಿಯಾಗಿರುವ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ನೀಡುವಂತೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದ ಸಚಿವರು, ಈ ಸಂಬಂಧ ಶೀಘ್ರವೇ ನಿಯೋಗದೊಂದಿಗೆ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಲಾಗುವುದು ಎಂದರು. ಇಲಾಖೆಯಲ್ಲಿ ಕೆಲ ಅಧಿಕಾರಿಗಳ ಅಚಾತುರ್ಯದಿಂದ 2011ನೇ ಸಾಲಿನ ಬದಲಾಗಿ 2023ನೇ ಸಾಲಿನಿಂದ ಗ್ರ್ಯಾಚುಟಿ ಜಾರಿಗೆ ಬಂದಿದೆ. ಈ ಸಮಸ್ಯೆಯನ್ನು ಶೀಘ್ರವೇ ಬಗೆಹರಿಸಲಾಗುವುದು. ಈಗಾಗಲೇ 3-4 ಬಾರಿ ಹಣಕಾಸು ಇಲಾಖೆಯವರ ಜೊತೆ ಮಾತುಕತೆ ನಡೆಸಲಾಗಿದೆ. ಮುಖ್ಯಮಂತ್ರಿ ಅವರ…
ಬೆಂಗಳೂರು: 3,500 ಪ್ರತಿ ಟನ್ ಕಬ್ಬಿಗೆ ನೀಡಬೇಕು ಎಂಬುದಾಗಿ ರೈತರು ಒತ್ತಾಯಿಸುತ್ತಿದ್ದಾರೆ. ನಾನು ವಿವಿಧ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ. ನಾವು 3,200 ರೂಪಾಯಿ ಪ್ರತಿ ಟನ್ ಕಬ್ಬಿಗೆ ನೀಡಲು ನಿರ್ಧರಿಸಿದ್ದೇವೆ. 11.25 ರಿಕವರಿ ಬಂದರೇ 3,500 ರೂಪಾಯಿ, 10.25 ರಿಕವರಿ ಬಂದರೇ 3,100 ರೂಪಾಯಿ ಪ್ರತಿ ಟನ್ ಗೆ ನೀಡಲಾಗುತ್ತದೆ. ಇದನ್ನು ರೈತರಿಗೆ ಈಗಾಗಲೇ ಮುಟ್ಟಿಸಲಾಗಿದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಿಸಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಕಬ್ಬು ಬೆಳೆಗಾರರ ಪ್ರತಿಭಟನೆ ಕುರಿತಂತೆ ಇಂದಿನ ಸಭೆಯಲ್ಲಿ ಚರ್ಚಿಸಲಾಗಿದೆ. ಬೆಳಗಾವಿ, ಬಾಗಲಕೋಟೆ, ಬಿಜಾಪುರದಲ್ಲಿ ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಬಹಳ ಸುದೀರ್ಘವಾಗಿ ಚರ್ಚಿಸಲಾಯಿತು. ನಾನು ಸಚಿವ ಹೆಚ್.ಕೆ ಪಾಟೀಲ್ ಅವರಿಗೂ ರೈತರೊಂದಿಗೆ ಚರ್ಚಿಸುವಂತೆ ಸೂಚಿಸಿದ್ದೆನು. ಅವರು ಹೋಗಿ ರೈತರೊಂದಿಗೆ ಚರ್ಚಿಸಿದ್ದಾರೆ ಎಂದರು. ನಿನ್ನೆ ರೈತರೊಂದಿಗೆ ಸಚಿವ ಹೆಚ್.ಕೆ ಪಾಟೀಲ್, ಎಂ.ಬಿ ಪಾಟೀಲ್ ಮಾತನಾಡಿದ್ದಾರೆ. ನಾವು ಪ್ರತಿಭಟನೆಯನ್ನು ಬಹಳ ಗಂಭೀರವಾಗಿ ಪರಿಗಣಿಸುವಂತ ಕೆಲಸ ಮಾಡಿದೆ. ನಮ್ಮ ಸರ್ಕಾರ ಯಾವತ್ತೂ ರೈತರ ಪರವಾಗಿರುವಂತದ್ದಾಗಿದೆ. ಸಕ್ಕರೆ ಕಾರ್ಖನೆಯು ಸತೀಶ್ ಜಾರಕಿಹೊಳಿ, ಲಕ್ಷ್ಮೀ…
ನವದೆಹಲಿ: ಅಕ್ರಮ ಬೆಟ್ಟಿಂಗ್ ವೇದಿಕೆ 1xBet ನ ಕಾರ್ಯಾಚರಣೆಗಳಿಗೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಭಾರತದ ಮಾಜಿ ಕ್ರಿಕೆಟಿಗರಾದ ಸುರೇಶ್ ರೈನಾ ಮತ್ತು ಶಿಖರ್ ಧವನ್ ಅವರಿಗೆ ಸೇರಿದ ₹11.14 ಕೋಟಿ ಮೌಲ್ಯದ ಆಸ್ತಿಗಳನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ. ಅಧಿಕೃತ ಮೂಲಗಳ ಪ್ರಕಾರ, ಧವನ್ ಒಡೆತನದ ₹4.5 ಕೋಟಿ ಮೌಲ್ಯದ ಸ್ಥಿರ ಆಸ್ತಿ ಮತ್ತು ರೈನಾ ಹೊಂದಿದ್ದ ₹6.64 ಕೋಟಿ ಮೌಲ್ಯದ ಮ್ಯೂಚುವಲ್ ಫಂಡ್ ಹೂಡಿಕೆಗಳು ಲಗ್ಗೆ ಇಟ್ಟಿವೆ. ಹಣ ವರ್ಗಾವಣೆ ತಡೆ ಕಾಯ್ದೆ (PMLA) ಯ ನಿಬಂಧನೆಗಳ ಅಡಿಯಲ್ಲಿ ಸಂಸ್ಥೆ ಲಗ್ಗೆ ಇಟ್ಟ ಆದೇಶವನ್ನು ಹೊರಡಿಸಿದೆ. 1xBet ಮತ್ತು ಅದರ ಸಂಯೋಜಿತ ಬ್ರ್ಯಾಂಡ್ಗಳಿಗೆ ನೇರವಾಗಿ ಅಥವಾ ಪರೋಕ್ಷವಾಗಿ ಸಂಬಂಧ ಹೊಂದಿರುವ ವಿದೇಶಿ ಸಂಸ್ಥೆಗಳೊಂದಿಗೆ ಇಬ್ಬರೂ ಆಟಗಾರರು ಉದ್ದೇಶಪೂರ್ವಕವಾಗಿ ಅನುಮೋದನೆ ಒಪ್ಪಂದಗಳನ್ನು ಮಾಡಿಕೊಂಡಿದ್ದಾರೆ ಎಂದು ತನಿಖಾಧಿಕಾರಿಗಳು ಆರೋಪಿಸಿದ್ದಾರೆ. ಈ ಪ್ರಚಾರ ಒಪ್ಪಂದಗಳು ಭಾರತೀಯ ಬಳಕೆದಾರರಲ್ಲಿ ಅಕ್ರಮ ಬೆಟ್ಟಿಂಗ್ ವೇದಿಕೆಯ ವಿಸ್ತರಣೆಗೆ ಕಾರಣವಾಗಿರಬಹುದು ಎಂದು ED ಯ…
ಶಿವಮೊಗ್ಗ: ಬೆಳೆಗಾವಿ ಜಿಲ್ಲೆಯಲ್ಲಿ ಕಬ್ಬಿಗೆ ಬೆಂಬಲ ಬೆಲೆ ನಿಗದಿಗಾಗಿ ಹೋರಾಡುತ್ತಿದೆ. ಇಂದಿಗೆ 7ನೇ ದಿನಕ್ಕೆ ಹೋರಾಟ ಕಾಲಿಟ್ಟಿದೆ. ನಾಳೆ ಕಬ್ಬಿಗೆ ಬೆಲೆ ನಿಗದಿಗೆ ಆಗ್ರಹಿಸಿ ಕರ್ನಾಟಕ ರೈತ ಸಂಘವು ಎಲ್ಲಾ ಹೆದ್ದಾರಿಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿದೆ. ರೈತರ ಹೋರಾಟಕ್ಕೆ ಪೂರಕವಾಗಿ ಸಾಗರ ಮತ್ತು ಶಿಕಾರಿಪುರದಲ್ಲಿ ರಾಜ್ಯ, ರಾಷ್ಟ್ರೀಯ ಹೆದ್ದಾರಿಯನ್ನು ಬಂದ್ ಮಾಡಿ ಪ್ರತಿಭಟಿಸಲು ನಿರ್ಧರಿಸಲಾಗಿದೆ ಎಂಬುದಾಗಿ ರೈತ ಮುಖಂಡ ದಿನೇಶ್ ಶಿರವಾಳ ತಿಳಿಸಿದ್ದಾರೆ. ಇಂದು ವೀಡಿಯೋ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ನಾಳೆ ಬೆಳಗಾವಿಯಲ್ಲಿ ಕಬ್ಬಿಗೆ ಬೆಲೆ ನಿಗದಿಗಾಗಿ ಹೋರಾಟ ಮಾಡುತ್ತಿದ್ದಾರೆ. ಅವರ ಹೋರಾಟಕ್ಕೆ ಬೆಂಬಲಿಸಿ ನಾಳೆ ಸಾಗರದ ವರದಳ್ಳಿ ಕ್ರಾಸ್ ಬಳಿಯಲ್ಲಿ ಹೆದ್ದಾರಿಯಲ್ಲಿ ರಸ್ತೆ ತಡೆ ನಡೆಸಿ, ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರು ನಡೆಸುತ್ತಿರುವಂತ ಹೋರಾಟಕ್ಕೆ ಬೆಂಬಲ ಸೂಚಿಸಲಾಗುತ್ತಿದೆ. ಕಬ್ಬು ಬೆಳೆಗಾರರಿಗೆ ಬೆಲೆ ನಿಗದಿ ಪಡಿಸುವುದಕ್ಕೂ ಈ ಮೂಲಕ ಆಗ್ರಹಿಸಲಾಗುತ್ತದೆ ಎಂಬುದಾಗಿ ತಿಳಿಸಿದರು. ನಾಳೆ ರೈತರು, ರೈತ ಸಂಘಟನೆಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಹೋರಾಟವನ್ನು ಯಶಸ್ವಿಗೊಳಿಸಬೇಕು. ಇದು ಕರ್ನಾಟಕದ ಎಲ್ಲಾ…
ಶಿವಮೊಗ್ಗ: ರಾಜ್ಯದಲ್ಲಿ ಆ ಗ್ಯಾಂಗ್ ತುಂಬಾನೇ ಆ್ಯಕ್ಟೀವ್ ಆಗಿದೆ ಎನ್ನಲಾಗುತ್ತಿದೆ. ಅಲ್ಲಲ್ಲಿ ಕ್ರೈ ಕೇಸ್ ದಾಖಲಾಗುತ್ತಿದ್ದಂತೇ ಪೊಲೀಸರು ಅಷ್ಟೇ ತ್ವರಿತವಾಗಿ ಆರೋಪಿಗಳ ಪತ್ತೆಯ ಕೆಲಸ ಮಾಡುತ್ತಿದ್ದಾರೆ. ಇದರ ನಡುವೆಯೂ ಆ ಗ್ಯಾಂಗ್ ಕೃತ್ಯವೆಸಗುವುದು ನಿಂತಿಲ್ಲ. ಸೋ ಸಾರ್ವಜನಿಕರು ಆ ಗ್ಯಾಂಗ್ ಬಗ್ಗೆ ಎಚ್ಚರಿಕೆಯಿಂದ ಇರಬೇಕು. ಮೈಮರೆತ್ರೆ ಆಭರಣಗಳನ್ನು ಕದ್ದೊಯ್ಯುತ್ತಾರೆ ಎಂಬುದಾಗಿ ಸಾರ್ವಜನಿಕರಿಗೆ ಎಎಸ್ಪಿ ಮಾಹಿತಿ ಹಂಚಿಕೊಂಡಿದ್ದಾರೆ. ಹಾಗಾದ್ರೇ ಆ ಗ್ಯಾಂಗ್ ಯಾವುದು? ಏನೆಲ್ಲಾ ಎಚ್ಚರಿಕೆ ವಹಿಸಬೇಕು ಎಂಬ ಬಗ್ಗೆ ಮುಂದೆ ಓದಿ. ಶಿವಮೊಗ್ಗ ಜಿಲ್ಲೆಯ ಸಾಗರದ ಸಾಗರ ಪೇಟೆ ಠಾಣೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಈ ಮಾಹಿತಿಯನ್ನು ಸಹಾಯಕ ಪೊಲೀಸ್ ಅಧೀಕ್ಷಕರಾದಂತ ಡಾ.ಬೆನಕ ಪ್ರಸಾದ್ ಹಂಚಿಕೊಂಡಿದ್ದಾರೆ. ರಾಜ್ಯದಲ್ಲಿ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿರುವಂತ ಗ್ಯಾಂಗ್ ಅಂದ್ರೆ ಅದು ‘ಇರಾನಿ ಗ್ಯಾಂಗ್’ ಎಂಬುದಾಗಿ ಮಾಹಿತಿ ನೀಡಿದ್ದಾರೆ. ಈ ಇರಾನಿ ಗ್ಯಾಂಗ್ ಅಪರಾಧ ಕೃತ್ಯಗಳನ್ನು ಎಸಗುತ್ತಿದೆ. ಒಂದೊಂದು ಪ್ರದೇಶದಲ್ಲಿ ಒಂದೊಂದು ರೀತಿಯ ಕೃತ್ಯಗಳಲ್ಲಿ ಭಾಗಿಯಾಗಿರುವುದಾಗಿ ತಿಳಿಸಿದರು. ಇರಾನಿ ಗ್ಯಾಂಗ್ ಸಾರ್ವಜನಿಕರನ್ನು ಪೊಲೀಸರೆಂದು ನಂಬಿಸುತ್ತದೆ. ಮೈತುಂಬಾ ಒಡವೆ ಹಾಕಿಕೊಂಡು…
ತುಮಕೂರು: ರಾಜ್ಯದ ಕುರಿ ಹಾಗೂ ಮೇಕೆ ಸಾಕಾಣಿಕೆದಾರರಿಗೆ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ನೀಡಿದೆ. ಅದೇ ಕುರಿ, ಮೇಕೆ ಮಾಂಸ ಸಂಸ್ಕರಣೆ ಮಾಡುವ ಆಧುನಿಕ ವಧಾಗಾರವನ್ನು ಈ ತಿಂಗಳ ಅಂತ್ಯಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಉದ್ಘಾಟಿಸಲಿದ್ದಾರೆ. ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚೀಲನಹಳ್ಳಿಯಲ್ಲಿ 20 ಎಕರೆ ಜಮೀನಿನಲ್ಲಿ 45 ಕೋಟಿ ರೂ ವೆಚ್ಚದಲ್ಲಿ ಕುರಿ ಹಾಗೂ ಮೇಕೆ ಮಾಂಸ ಸಂಸ್ಕರಣೆ ಆಧುನಿಕ ವಧಾಗಾರವನ್ನು ನಿರ್ಮಾಣ ಮಾಡಲಾಗಿದೆ. ನವೆಂಬರ್ ತಿಂಗಳ ಅಂತ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಧುನಿಕ ವಧಾಗಾರ ಉದ್ಘಾಟನೆ ಮಾಡಲಿದ್ದಾರೆ. ಆಧುನಿಕ ವಧಾಗಾರ ಉದ್ಘಾಟನೆಗೆ ಸಂಬಂಧಿಸಿದಂತೆ ವಿಕಾಸ ಸೌಧದಲ್ಲಿ ಪಶುಸಂಗೋಪನೆ ಹಾಗೂ ರೇಷ್ಮೆ ಖಾತೆ ಸಚಿವ ವೆಂಕಟೇಶ್ ಹಾಗೂ ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ ಜಯಚಂದ್ರ ಅವರ ನೇತ್ರತ್ವದಲ್ಲಿ ಸಭೆ ನಡೆಯಿತು. ಈ. ಸಭೆಯಲ್ಲಿಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಪಶು ಸಂಗೋಪನೆ ಇಲಾಖೆ ಕಾರ್ಯದರ್ಶಿ ಶಮ್ಲಾ ಇಕ್ಬಾಲ್ ಸೇರಿದಂತೆ ಇದಕ್ಕೆ ಸಂಬಂಧಿಸಿದ ಇಲಾಖೆಯ ಹಿರಿಯ ಅಧಿಕಾರಿಗಳು ಸಭೆಯಲ್ಲಿ…
BIG NEWS: ಕುಡಿದು ಬರುತ್ತಿದ್ದ ಡ್ರೈವರ್ಗಳಿಗೆ ಲಂಚ ಪಡೆದು ಡ್ಯೂಟಿ: BMTC ಡಿಪೋ ಮ್ಯಾನೇಜರ್ ಸೇರಿ 9 ಮಂದಿ ಸಸ್ಪೆಂಡ್
ಬೆಂಗಳೂರು: ಕುಡಿದು ವಾಹನ ಚಾಲನೆ ಮಾಡುವುದು ಅಪರಾಧವಾಗಿದೆ. ಹೀಗಿದ್ದರೂ ಬೆಂಗಳೂರಲ್ಲಿ ಡಿಪೋ ಮ್ಯಾನೇರಜ್ ಒಬ್ಬ ಚಾಲಕರು ಕುಡಿದು ಬಂದರೂ ಲಂಚ ಪಡೆದು ಡ್ಯೂಟಿ ನೀಡಿದಂತ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿತ್ತು. ಈ ಹಿನ್ನಲೆಯಲ್ಲಿ ಬಿಎಂಟಿಸಿ ಡಿಪೋ ಮ್ಯಾನೇಜರ್ ಸಹಿತ 9 ಮಂದಿಯನ್ನು ಸಸ್ಪೆಂಡ್ ಮಾಡಲಾಗಿದೆ. ಹೌದು. ಕುಡಿದು ಬರುತ್ತಿದ್ದಂತ ಎಲೆಕ್ಟ್ರಿಕ್ ಬಸ್ ಡ್ರೈವರ್ ಗಳ ಬಳಿಯಲ್ಲಿ ಲಂಚ ಪಡೆದು ಡ್ಯೂಟಿ ನೀಡಿದ್ದ ಕಾರಣದಿಂದಾಗಿ ಬಿಎಂಟಿಸಿ ಘಟಕ ವ್ಯವಸ್ಥಾಪಕ ಎಂ.ಜಿ ಕೃಷ್ಣ, ಸಹಾಯಕ ಲೆಕ್ಕಿಗ ಅರುಣ್ ಕುಮಾರ್ ಇ.ಎಸ್, ಕಿರಿಯ ಸಹಾಯಕಿ ಪ್ರತಿಭಾ.ಕೆಎಸ್, ಕರ್ನಾಟಕ ರಾಜ್ಯ ಸಾರಿಗೆ ಹವಾಲ್ದಾರ್ ಮಂಜುನಾಥ.ಎಂ, ಪೇದೆ ಮಂಜುನಾಥ ಎಸ್.ಜಿ, ಚೇತನ್ ಕುಮಾರ್, ಪುನೀತ್ ಕುಮಾರ್, ಲಕ್ಷ್ಮೀ.ಕೆ ಸೇರಿದಂತೆ 9 ಮಂದಿಯನ್ನು ಅಮಾನತುಗೊಳಿಸಲಾಗಿದೆ. ಅಂದಹಾಗೇ ಬಿಎಂಟಿಸಿ ಚಾಲಕರು ಕುಡಿದು ಡ್ರೈವಿಂಗ್ ಮಾಡುತ್ತಿರುವಂತ ವೀಡಿಯೋ ವೈರಲ್ ಆಗಿತ್ತು. ಇಂತವರಿಗೆ ಲಂಚ ಪಡೆದು ಅಧಿಕಾರಿಗಳು ಡ್ಯೂಟಿ ನೀಡಿದ್ದಾಗಿ ಆರೋಪ ಕೇಳಿ ಬಂದಿತ್ತು. ಈ ಹಿನ್ನಲೆಯಲ್ಲಿ ಡಿಪೋ ಮ್ಯಾನೇಜರ್, ಚಾಲಕರು ಸೇರಿದಂತೆ 9…














