Author: kannadanewsnow09

ಬೆಂಗಳೂರು: ಅಶ್ಲೀಲ ವೀಡಿಯೋ ಕೇಸ್ ಬಳಿಕ ವಿದೇಶಕ್ಕೆ ಹಾರಿದ್ದಂತ ಸಂಸದ ಪ್ರಜ್ವಲ್ ರೇವಣ್ಣ ಮೇ.31ರ ನಾಳೆ ಬೆಂಗಳೂರಿಗೆ ಬರಲಿದ್ದಾರೆ ಎನ್ನಲಾಗಿತ್ತು. ಆದ್ರೇ ಇಂದೇ ಬೆಂಗಳೂರಿಗೆ ಸಂಸದ ಪ್ರಜ್ವಲ್ ರೇವಣ್ಣ ಆಗಮಿಸುತ್ತಿದ್ದಾರೆ. ಈಗಾಗಲೇ ಮ್ಯೂನಿಚ್ ಏರ್ ಪೋರ್ಟ್ ಗೆ ಆಗಮಿಸಿದ್ದಾರೆ. ಹಾಸನ ಪೆನ್ ಡ್ರೈವ್ ವೈರಲ್ ಕೇಸ್, ಅಶ್ಲೀಲ ವೀಡಿಯೋ ಕೇಸ್, ಮಹಿಳೆ ಅಪಹರಣ ಪ್ರಕರಣಗಳನ್ನು ಎದುರಿಸುತ್ತಿರೋ ಸಂಸದ ಪ್ರಜ್ವಲ್ ರೇವಣ್ಣ ಅವರು, ನಿರೀಕ್ಷಣಾ ಜಾಮೀನು ಕೋರಿ ವಿದೇಶದಿಂದಲೇ ನಿನ್ನೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ನಾಳೆ ನಡೆಸಲಿದೆ. ಈ ಬೆನ್ನಲ್ಲೇ ಜರ್ಮನಿಯ ಮ್ಯೂನಿಜ್ ಏರ್ ಪೋರ್ಟ್ ಗೆ ಸಂಸದ ಪ್ರಜ್ವಲ್ ರೇವಣ್ಣ ಆಗಮಿಸಿದ್ದಾರೆ. ಅಲ್ಲಿ ಅವರು ಲಗೇಜ್ ಚೆಕ್ ಇನ್ ಮಾಡಿರೋದಾಗಿ ತಿಳಿದು ಬಂದಿದೆ. 2 ಟ್ರಾಲಿ ಬ್ಯಾಗ್ ಸಮೇತ ಮ್ಯೂನಿಜ್ ಏರ್ ಪೋರ್ಟ್ ಗೆ ಸಂಸದ ಪ್ರಜ್ವಲ್ ರೇವಣ್ಣ ಬಂದಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಜರ್ಮನಿಯ ಮ್ಯೂನಿಚ್ ನಿಂದ ಲುಫ್ತಾ ಏರ್ ಲೈನ್ಸ್…

Read More

ಬೆಂಗಳೂರು: ಸ್ಯಾಂಡಲ್ ವುಡ್ ನಟ ಪ್ರಜ್ವಲ್ ದೇವರಾಜ್ ( Actor Prajwal Devaraj ) ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ನಟ ಪ್ರಜ್ವಲ್ ದೇವರಾಜ್ ಇನ್ನಿಲ್ಲ ಅನ್ನೋ ಪೋಸ್ಟ್ ಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದವು. ಆದ್ರೇ ವೈರಲ್ ಸುದ್ದಿಯ ಅಸಲಿ ಸತ್ಯ ಏನು ಅಂತ ಮುಂದೆ ಓದಿ. ಸ್ಯಾಂಡಲ್ ವುಡ್ ಯುವ ನಟ ಪ್ರಜ್ವಲ್ ದೇವರಾಜ್ ಅವರು ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ಅನಾರೋಗ್ಯದ ಕಾರಣದಿಂದ ಅವರು ನಿಧನರಾಗಿದ್ದಾರೆ. ಸ್ಯಾಂಡಲ್ ವುಡ್ ನಟ ಪ್ರಜ್ವಲ್ ದೇವರಾಜ್ ಇನ್ನಿಲ್ಲ ಅನ್ನೋ ಪೋಸ್ಟ್ ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದರು. ಈ ವೈರಲ್ ಸುದ್ದಿಯನ್ನು ಗಮನಿಸಿದಂತ ನಟ ಪ್ರಜ್ವಲ್ ದೇವರಾಜ್ ಅವರ ಕುಟುಂಬದ ಮೂಲಗಳು, ಹೀಗೆ ಹರಿದಾಡುತ್ತಿರೋ ಸುದ್ದಿ ಸುಳ್ಳು. ಅವರು ಕ್ಷೇಮವಾಗಿದ್ದಾರೆ. ಆರೋಗ್ಯವಾಗಿರೋರ ಬಗ್ಗೆ ಹೀಗೆ ಸುಳ್ಳು ಸುದ್ದಿ ಹಬ್ಬಿಸಬೇಡಿ ಅಂತ ಗರಂ ಆಗೇ ಹೇಳಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ನಟ ಪ್ರಜ್ವಲ್ ದೇವರಾಜ್ ಇನ್ನಿಲ್ಲ ಎಂಬ ವರದಿಗಳೆಲ್ಲ ಸತ್ಯಕ್ಕೆ ದೂರವಾದದ್ದಾಗಿವೆ. ಅವರು ಆರೋಗ್ಯವಾಗಿದ್ದಾರೆ. ಅವರು ಅನಾರೋಗ್ಯಕ್ಕೂ ಒಳಗಾಗಿಲ್ಲ,…

Read More

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿ ಇಬ್ಬರೋ ಮೂವರೋ ಅಧಿಕಾರಿಗಳ ಅಮಾನತು ಮಾಡಿದರೆ ಸಾಲದು; ಸಮಯ ವ್ಯರ್ಥ ಮಾಡದೇ ಸಚಿವರ ರಾಜೀನಾಮೆ ಪಡೆಯಬೇಕು. ಇದರ ತನಿಖೆಯನ್ನು ಸಿಬಿಐಗೆ ಕೊಡಲೇಬೇಕು. ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ. ಶಿವಮೊಗ್ಗದಲ್ಲಿ ಇಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, ನಿಜವಾಗಲೂ ನೀವು ಪ್ರಾಮಾಣಿಕರಿದ್ದರೆ ಇದನ್ನು ಸಿಬಿಐ ತನಿಖೆಗೆ ಕೊಡಿ ಎಂದು ಒತ್ತಾಯಿಸಿದರು. ಮೃತರ ಪತ್ನಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದಾರೆ. ಇಬ್ಬರು ಗಂಡುಮಕ್ಕಳಿದ್ದು, ಸಂಸಾರ ನಡೆಸಲು ಕಷ್ಟ. ಇಂಥ ಸಂದರ್ಭದಲ್ಲಿ ರಾಜ್ಯ ಸರಕಾರ ಕನಿಷ್ಠ 25 ಲಕ್ಷ ಪರಿಹಾರವನ್ನು ಘೋಷಿಸಬೇಕು ಎಂದರು. ಮಾನವೀಯತೆ ದೃಷ್ಟಿಯಿಂದ ಕುಟುಂಬಕ್ಕೆ ಈ ಮೊತ್ತ ಕೊಡಬೇಕೆಂದು ತಿಳಿಸಿದರು. ಈ ಪ್ರಕರಣದ ನಿಷ್ಪಕ್ಷಪಾತ ತನಿಖೆ ಮಾಡಲು ಸಿಐಡಿ ಅಥವಾ ಸ್ಥಳೀಯ ಅಧಿಕಾರಿಗಳಿಂದ ಅಸಾಧ್ಯ. ಅಧಿಕಾರಿಗಳು ಮನೆಯಿಂದ ಪೆನ್ ಡ್ರೈವ್, ಲ್ಯಾಪ್ ಟಾಪ್ ತೆಗೆದುಕೊಂಡು ಹೋಗಿದ್ದಾರೆ. ಇದು ಯಾವ ರೀತಿ ದುರುಪಯೋಗ ಆಗಲಿದೆ ಎಂಬುದು ನನಗಂತೂ ಗೊತ್ತಿಲ್ಲ…

Read More

ವಾರಣಾಸಿ: ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸದಂತೆ ಅನರ್ಹಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ. ನ್ಯಾಯಮೂರ್ತಿ ಸಚಿನ್ ದತ್ತಾ ನೇತೃತ್ವದ ದೆಹಲಿ ಹೈಕೋರ್ಟ್ ಪೀಠವು ಅರ್ಜಿಯನ್ನು ‘ದುರುದ್ದೇಶಪೂರಿತ’ ಎಂದು ಕರೆದಿದೆ ಮತ್ತು ಅದನ್ನು ವಜಾಗೊಳಿಸಿದೆ. ಭಾರತದ ಸಂವಿಧಾನಕ್ಕೆ ನಿಜವಾದ ನಂಬಿಕೆ ಮತ್ತು ನಿಷ್ಠೆಯನ್ನು ಹೊಂದಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಸುಳ್ಳು ಪ್ರಮಾಣ ವಚನ ನೀಡಿದ್ದಾರೆ ಎಂದು ಆರೋಪಿಸಿ ಪೈಲಟ್ ಕ್ಯಾಪ್ಟನ್ ದೀಪಕ್ ಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅರ್ಜಿ ಸಲ್ಲಿಸಿದ್ದರು. “2024 ರ ಸಾರ್ವತ್ರಿಕ ಚುನಾವಣೆಗೆ ವಾರಣಾಸಿ ಕ್ಷೇತ್ರದ ಅಭ್ಯರ್ಥಿ ನರೇಂದ್ರ ಮೋದಿ ಅವರು ಭಾರತದ ಸಂವಿಧಾನಕ್ಕೆ ನಿಜವಾದ ನಂಬಿಕೆ ಮತ್ತು ನಿಷ್ಠೆಯನ್ನು ಹೊಂದಿರುವುದಾಗಿ ಸುಳ್ಳು ಪ್ರಮಾಣ ಅಥವಾ ದೃಢೀಕರಣವನ್ನು ಚುನಾವಣಾಧಿಕಾರಿಗೆ ಸಲ್ಲಿಸಿದ್ದಾರೆ” ಎಂದು ಕುಮಾರ್ ಅರ್ಜಿಯಲ್ಲಿ ತಿಳಿಸಿದ್ದಾರೆ. ಇದಲ್ಲದೆ, ಪ್ರಧಾನಿ ಮೋದಿ ಭಯೋತ್ಪಾದಕ ಕೃತ್ಯದಲ್ಲಿ ಭಾಗಿಯಾಗಿದ್ದಾರೆ. ಅವರ ವಿರುದ್ಧ ಪಿತೂರಿ ನಡೆಸುತ್ತಿದ್ದಾರೆ ಎಂದು ಅರ್ಜಿದಾರರು ಹೇಳಿದ್ದಾರೆ. ಮೋದಿ…

Read More

ಬೆಂಗಳೂರು: ದೇಶದಲ್ಲೇ ಇದೇ ಮೊದಲು ಎನ್ನುವಂತೆ ನಮ್ಮ ಮೆಟ್ರೋ ಕಾಮಗಾರಿ ವೇಳೆಯಲ್ಲಿ ಬಿಎಂಆರ್ ಸಿಎಲ್ ಮಹತ್ವದ ಸಾಧನೆ ಮಾಡಿದೆ. ಅದೇ ಬಾಕ್ಸ್ ಆಕಾರದಲ್ಲಿ ಮೆಟ್ರೋ ಸುರಂಗ ಮಾರ್ಗ ಕಾಮಗಾರಿಯನ್ನು ಯಶಸ್ವಿಯಾಗಿ ನಡೆಸಿದ್ದಾಗಿದೆ. ಈ ಬಗ್ಗೆ ಬಿಎಂಆರ್ ಸಿಎಲ್ ಮಾಹಿತಿ ಹಂಚಿಕೊಂಡಿದ್ದು, ಹೊಸ ತಂತ್ರಜ್ಞಾನ ಬಳಸಿ ವೃತ್ತಾಕಾರದ ಮಾರ್ಗವಾಗಿ ಅಂಡರ್ ಗ್ರೌಂಡ್ ಕಾಮಾಗಿರಿ ಮಾಡಿ ಯಶಸ್ವಿಯಾಗಿದ್ದೆವು. ಈಗ ಬಾಕ್ಸ್ ಆಕಾರದಲ್ಲಿ ಕಾಮಾಗಿರಿ ಮಾಡಿ ಸಕ್ಸಸ್ ಆಗಿದ್ದೇವೆ ಅಂತ ಹೇಳಿದೆ. ಇದೇ ಮೊದಲ ಬಾರಿಗೆ ಬಿಎಂಆರ್ ಸಿಎಲ್ ಸುಮಾರು 77 ಮೀಟರ್ ಉದ್ದದ ಒಆರ್ ಆರ್ ನ ಕೆಳಗಿರುವ ಸುರಂಗ ಕಾಮಗಾರಿಗಾಗಿ ಬಾಕ್ಸ್ ಪುಷಿಂಗ್ ತಂತ್ರಜ್ಞಾನವನ್ನು ಬಳಸಿದೆ. ಇದನ್ನು ನಾಗವಾರ ಯುಜಿ ನಿಲ್ದಾಣದ ದಕ್ಷಿಣ ಭಾಗದಲ್ಲಿ ಸರ್ವಿಸ್ ರಸ್ತೆ ಮತ್ತು ಒಆರ್ ಆರ್ ನ ಫ್ಲೈಓವರ್ ಕೆಳಗೆ ಮಾಡಲಾಗುತ್ತದೆ. ಕಾಮಗಾರಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ ಎಂದಿದೆ. https://twitter.com/srivasrbmrccoi1/status/1795824474526548395 ಇನ್ನು ಕಾಳೇನ ಅಗ್ರಹಾರದಿಂದ ನಾಗವಾರದವರೆಗೆ 21.26 ಕಿ.ಮೀ. ಉದ್ದದ ಹೊಸ ಮಾರ್ಗವನ್ನು ಮಾರ್ಚ್‌ 2025ರ ಒಳಗೆ ಪೂರ್ಣಗೊಳಿಸಲು…

Read More

ಕೇರಳ : ಕೆಎಸ್ಆರ್ಟಿಸಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಗರ್ಭಿಣಿಗೆ ಹೆರಿಗೆ ನೋವು ಕಾಣಿಸಿಕೊಂಡ ಘಟನೆ ಕೇರಳದಲ್ಲಿ ನಡೆದಿದೆ. ತ್ರಿಶೂರ್ ನಿಂದ ಕೋಯಿಕ್ಕೋಡ್ ಗೆ ಪ್ರಯಾಣಿಸುತ್ತಿದ್ದ ಬಸ್ ನಲ್ಲಿ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದರು. 37 ವರ್ಷದ ಮಹಿಳೆಗೆ ಸಾರಿಗೆ ಸಿಬ್ಬಂದಿ, ವೈದ್ಯರು ಮತ್ತು ಸ್ಥಳೀಯರು ಸಕಾಲದಲ್ಲಿ ಸಹಾಯ ಮಾಡಿ ಮಗುವನ್ನು ಸುರಕ್ಷಿತವಾಗಿ ಹೆರಿಗೆ ಮಾಡಿದ್ದಾರೆ. ಕೇರಳ ಬಸ್ಸಿನಲ್ಲಿಯೇ ಮಗುವಿಗೆ ಜನ್ಮ ನೀಡಿದ ಮಹಿಳೆ ಮಗುವಿನ ಜನನಕ್ಕೆ ಸಹಾಯ ಮಾಡುವ ವ್ಯವಸ್ಥೆಗಳನ್ನು ಮಹಿಳೆಗೆ ಒದಗಿಸಿರುವುದನ್ನು ತೋರಿಸುವ ಘಟನೆಯ ವೀಡಿಯೊ ಆನ್ ಲೈನ್ ನಲ್ಲಿ ವೈರಲ್ ಆಗಿದೆ. https://twitter.com/fpjindia/status/1796085620839764231 ವೈದ್ಯರು ಆಕೆಗೆ ಚಿಕಿತ್ಸೆ ನೀಡಿದ ಬಸ್ಸಿನ ಮೆಟ್ಟಿಲುಗಳ ಮೇಲೆ ಆಕೆಯನ್ನು ವಿಶ್ರಾಂತಿ ಪಡೆಯುವಂತೆ ಮಾಡಲಾಯಿತು. ನಂತರ ಮಹಿಳಾ ಸಿಬ್ಬಂದಿ ನವಜಾತ ಶಿಶುವಿನೊಂದಿಗೆ ಬಸ್ಸಿನ ಹೊರಗೆ ಹೆಜ್ಜೆ ಹಾಕಿದರು. ಈ ಎಲ್ಲಾ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಬಸ್ಸಿನಲ್ಲಿಯೇ ಪ್ರಯಾಣದ ವೇಳೆ ಮಗು ಯಶಸ್ವಿಯಾಗಿ ಹೆರಿಗೆಯಾಗಿ, ತಾಯಿ-ಮಗು ಸುರಕ್ಷಿತವಾಗಿದ್ದಕ್ಕೆ ಪ್ರಯಾಣಿಕರು, ಬಸ್ ಸಿಬ್ಬಂದಿ ಸಂತಸ…

Read More

ಬೆಂಗಳೂರು: ನಗರದಲ್ಲಿ ಸಿಬಿಐ ಪೊಲೀಸರೆಂದು ವಿದ್ಯಾರ್ಥಿಗಳನ್ನು ಹೆದರಿಸಿ, ಹಣ ಸುಲಿಗೆ ಮಾಡುತ್ತಿದ್ದಂತ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಬೆಂಗಳೂರು ನಗರ ಪೊಲೀಸರು ಮಾಹಿತಿ ಹಂಚಿಕೊಂಡಿದ್ದು, ದಿನಾಂಕ 27-05-2024 ರಂದು ಪಿರಾದುದಾರರು ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಹೆಸರಘಟ್ಟ ಮುಖ್ಯರಸ್ತೆ, ಎ.ಜಿ.ಬಿ ಲೇಔಟ್‌ನ ತಮ್ಮ ನಿವಾಸದಲ್ಲಿ ರಾತ್ರಿ ತನ್ನ ಸ್ನೇಹಿತರೊಂದಿಗೆ ಮನೆಯಲ್ಲಿದ್ದಾಗ ಯಾರೋ 3 ಜನ ಅಪರಿಚಿತರು ಏಕಾಏಕಿ ನಮ್ಮ ರೂಮಿಗೆ ನುಗ್ಗಿ ಸಿಬಿಐ ಪೊಲೀಸರೆಂದು ಹೇಳಿ, ತಮ್ಮ ಬಳಿಯಿದ್ದ ಪಿಸ್ತೂಲ್, ಐ.ಡಿ.ಕಾರ್ಡ್, ಲಾಟಿಗಳನ್ನು ತೋರಿಸಿ ಕೈಗಳಿಂದ ಹೊಡೆದು ಅವರು ತಂದಿದ್ದ ಗಾಂಜಾವನ್ನು ತಮ್ಮಗಳ ಕೈಗೆ ಕೊಟ್ಟು ವಿಡಿಯೋ ಮಾಡಿಕೊಂಡು 3 ಲಕ್ಷ ಹಣವನ್ನು ಕೊಡಿ ಇಲ್ಲವಾದರೆ ವಿಡಿಯೋ ಮಾಡುತ್ತೇವೆಂದು ಹೆದರಿಸಿರುತ್ತಾರೆ ಎಂದು ದೂರು ನೀಡಿದ್ದಾರೆ. ದೂರಿನಲ್ಲಿ ಪಿದ್ಯಾದಿಯಿಂದ ಮೊಬೈಲ್ ಕಿತ್ತುಕೊಂಡು ಬಂದಿದ್ದ ಅಪರಿಚಿತ ವ್ಯಕ್ತಿಯೊಬ್ಬನ ಯುಪಿಐ ಐಡಿಗೆ ಸುಮಾರು 90,000/- ಗಳ ಹಣವನ್ನು ವರ್ಗಾಹಿಸಿಕೊಂಡು ನಂತರ ಮೊಬೈಲ್ ಫೋನ್‌ಅನ್ನು ಕೊಟ್ಟು ಉಳಿದ ಹಣವನ್ನು ನಾಳೆ ಸಂಜೆಯೊಳಗೆ ನೀಡಬೇಕೆಂದು…

Read More

ಬೆಂಗಳೂರು: ನಗರದಲ್ಲಿ ಮತ್ತೊಂದು ಭೀಕರ ಅನಾಹುತ ಸಂಭವಿಸಿದೆ. ಗ್ಯಾಸ್ ಸಿಲಿಂಡರ್ ನಿಂದ ಗ್ಯಾಸ್ ಸೋರಿಕೆಯಾದ ಪರಿಣಾಮ, ಐವರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಬೆಂಗಳೂರಿನ ಸಂಪಿಗೆಹಳ್ಳಿ ಬಳಿಯ ಮನೆಯೊಂದರಲ್ಲಿ ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಈ ಘಟನೆಯಲ್ಲಿ ಮನೆಯಲ್ಲಿದ್ದಂತ ಐವರು ತೀವ್ರವಾಗಿ ಗಾಯಗೊಂಡಿರೋದಾಗಿ ತಿಳಿದು ಬಂದಿದೆ. ಗಾಯಗೊಂಡಿರುವಂತವರನ್ನು ನೇಪಾಳ ಮೂಲದ ಕುಟುಂಬದವರು ಎಂಬುದಾಗಿ ತಿಳಿದು ಬಂದಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/lok-sabha-elections-prohibitory-orders-under-section-144-imposed-across-the-state-from-june-4-to-05/ https://kannadanewsnow.com/kannada/google-to-invest-2-billion-in-malaysia-create-26000-jobs-by-2030/

Read More

ಬೆಂಗಳೂರು: ಎರಡು ಹಂತಗಳಲ್ಲಿ ನಡೆದ ಸಾರ್ವತ್ರಿಕ ಲೋಕಸಭೆ ಚುನಾವಣೆ-2024 ರ ಹಿನ್ನೆಲೆಯಲ್ಲಿ ಮತ ಎಣಿಕೆಯು ಜೂನ್.4ರಂದು ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ನಡೆಯಲಿದೆ. ಈ ಹಿನ್ನಲೆಯಲ್ಲಿ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಸುಗಮವಾಗಿರುವಂತೆ ನೋಡಿಕೊಳ್ಳಲು ಜೂನ್.04 ರ ಬೆಳಗ್ಗೆ 6 ರಿಂದ ಜೂನ್.05 ರ ಬೆಳಗ್ಗೆ 6.00 ಗಂಟೆಯವರೆಗೆ 144 ಸೆಕ್ಷನ್ ಅಡಿಯಲ್ಲಿ ನಿಷೇದಾಜ್ಞೆ ಜಾರಿಗೊಳಿಸಿ ಆಯಾ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಈ ಸಂಬಂಧ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದು, ಅದರಲ್ಲಿ ನಿಷೇದಾಜ್ಞೆ ಜಾರಿ ಮಾಡಿದ ಅವಧಿಯಲ್ಲಿ 5 ಜನ ಮೇಲ್ಪಟ್ಟು ಗುಂಪುಗಾರಿಕೆ ಮಾಡುವುದಾಗಲಿ, ಇತರ ಕಾನೂನುಬಾಹಿರ ಚಟುವಟಿಕೆಗಳನ್ನು ನಡೆಸಲು ಅವಕಾಶವಿರುವುದಿಲ್ಲ ಎಂದಿದ್ದಾರೆ. ಯಾವುದೇ ಮೆರವಣಿಗೆ, ಸಭೆ, ಸಮಾರಂಭಗಳು, ವಿಜಯೋತ್ಸವ ಹಾಗೂ ಇತರೆ ಸಾರ್ವಜನಿಕ ಸಮಾವೇಶ ನಡೆಸುವಂತಿಲ್ಲ. ಶಸ್ತ್ರ, ಕುಡುಗೋಲು, ಖಡ್ಗ, ಚೂರಿ, ಬಂದೂಕು, ಕೋಲು ಅಥವಾ ದೇಹಕ್ಕೆ ಅಪಾಯ ಉಂಟು ಮಾಡಬಹುದಾದ ಮಾರಕಾಸ್ತ್ರಗಳನ್ನು ಒಯ್ಯುವಂತಿಲ್ಲ. ಯಾವುದೇ ವಿನಾಶಕಾರಿ ವಸ್ತು ಇಲ್ಲವೇ ಸ್ಪೋಟಕವಸ್ತು ಒಯ್ಯತಕ್ಕುದ್ದಲ್ಲ ಎಂದು ಆದೇಶದಲ್ಲಿ ತಿಳಿಸಿದ್ದಾರೆ. ಕಲ್ಲು ಅಥವಾ ಎಸೆಯುವ…

Read More

ಶಿವಮೊಗ್ಗ : ಭಾರತ ಚುನಾವಣಾ ಆಯೋಗವು ಜಿಲ್ಲೆಯಲ್ಲಿ ಜೂನ್ 03 ರಂದು ನಡೆಯುವ ಕರ್ನಾಟಕ ನೈರುತ್ಯ ಪದವೀಧರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ-2024 ರ ಹಿನ್ನೆಲೆ ಪದವೀಧರರು ಹಾಗೂ ಶಿಕ್ಷಕರು ಮತದಾನ ಮಾಡಲು ಅನುಕೂಲವಾಗುವಂತೆ ಅಂತಹ ಅರ್ಹ ಮತದಾರರಿಗೆ ಸೀಮಿತವಾದಂತೆ ಮತ ಚಲಾಯಿಸಲಿರುವ ಮತದಾರರಿಗೆ ಜೂ. 03 ರಂದು ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಿ ಆದೇಶಿಸಿದೆ. ಮತಕ್ಷೇತ್ರಗಳಲ್ಲಿನ ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ ಹಾಗೂ ಅನುದಾನ ರಹಿತ ವಿದ್ಯಾ ಸಂಸ್ಥೆಗಳು, ಎಲ್ಲಾ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಚೇರಿಗಳು, ರಾಷ್ಟ್ರೀಕೃತ ಹಾಗೂ ಇತರ ಬ್ಯಾಂಕುಗಳು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಖಾನೆಗಳು, ಉಳಿದ ಕೈಗಾರಿಕೆ ಸಂಸ್ಥೆಗಳು ಹಾಗೂ ಸಹಕರ ರಂಗದ ಸಂಘ ಸಂಸ್ಥೆಗಳಲ್ಲಿ ಎಲ್ಲಾ ವ್ಯವಹಾರಿಕ ಸಂಸ್ಥೆಗಳಲ್ಲಿ, ಔದ್ಯಮಿಕ ಸಂಸ್ಥೆಗಳಲ್ಲಿ ಮತ್ತು ಎತರ ಎಸ್ಟಾಬ್ಲಿಷ್‍ಮೆಂಟ್ ಗಳಲ್ಲಿ ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುವ ಪದವೀಧರರು ಹಾಗೂ ಶಿಕ್ಷಕರು ಮತದಾನ ಮಾಡಲು…

Read More