Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ರಾಮನಗರ: ರಾಜ್ಯ ಸರ್ಕಾರಕ್ಕೆ ಕೋಟ್ಯಂತರ ರೂ ವಂಚನೆ ಮಾಡಿರುವ ಆರೋಪ ಕೇಳಿ ಬಂದ ಹಿನ್ನಲೆಯಲ್ಲಿ ಇಂದು ಲೋಕಾಯುಕ್ತ ಪೊಲೀಸರು ರಾಮನಗರದ ಆರ್ ಟಿಓ ಕಚೇರಿ, ಬ್ರೋಕರ್ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆಯಲ್ಲಿ ಸಿಕ್ಕ ದಾಖಲೆಗಳನ್ನು ಆಧರಿಸಿ ಆರ್ ಟಿಓ, ಸಿಬ್ಬಂದಿ, ಬ್ರೋಕರ್ ಅರೆಸ್ಟ್ ಮಾಡಿದ್ದಾರೆ. ರಾಮನಗರ ಆರ್ ಟಿಓ ಅಧಿಕಾರಿ ಶಿವಕುಮಾರ್, ಎಸ್ ಡಿಎ ರಚಿತ್ ರಾಮ್ ಹಾಗೂ ಬ್ರೋಕರ್ ಸತೀಶ್ ಸೇರಿಕೊಂಡು ಸರ್ಕಾರಕ್ಕೆ ಕೋಟ್ಯಂತರ ರೂ ವಂಚನೆ ಮಾಡಿರೋ ಗಂಭೀರ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ಲೋಕಾಯುಕ್ತ ಪೊಲೀಸರಿಗೆ ದೂರು ಕೂಡ ನೀಡಲಾಗಿತ್ತು. ಇಂದು ರಾಮನಗರ ಆರ್ ಟಿ ಓ ಶಿವಕುಮಾರ್, ಎಸ್ ಡಿಎ ರಚಿತ್ ರಾಮ್ ಹಾಗೂ ಬ್ರೋಕರ್ ಸತೀಶ್ ನಿವಾಸದ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿರೋದಾಗಿ ತಿಳಿದು ಬಂದಿದೆ. ಅಂದಹಾಗೇ ಆರ್ ಟಿಓ ಶಿವಕುಮಾರ್, ಎಸ್ ಡಿಎ ರಚಿತ್ ರಾಮ್, ಬ್ರೋಕರ್ ಸತೀಶ್…

Read More

ರಾಮನಗರ: ಊಟ ಮಾಡುತ್ತಿದ್ದಾಗಲೇ ಹೃದಯಾಘಾತ ಉಂಟಾದ ಪರಿಣಾಮ, ಕುಸಿದು ಬಿದ್ದು ಸರ್ಕಾರಿ ನೌಕರರೊಬ್ಬ ಸಾವನ್ನಪ್ಪಿರೋ ಘಟನೆ ರಾಮನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದಿದೆ. ರಾಮನಗರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಊಟ ಮಾಡುತ್ತಿದ್ದಾಗಲೇ ಯೋಗೇಶ್ ಎಂಬುವರಿಗೆ ಹೃದಯಾಘಾತ ಉಂಟಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಅಂದಹಾಗೇ ಚನ್ನಪಟ್ಟಣ ಮೂಲದ ಯೋಗೇಶ್, ರಾಮನಗರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಡಿ ಗ್ರೂಪ್ ನೌಕರನಾಗಿ ಕೆಲಸ ನಿರ್ವಹಿಸುತ್ತಿದ್ದನು. ಅವರು ಇಂದು ಊಟ ಮಾಡುತ್ತಿದ್ದಾಗ ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿದ್ದಾರೆ. https://kannadanewsnow.com/kannada/shimoga-dcc-bank-mla-belur-gopalakrishna-wins-by-a-huge-margin/ https://kannadanewsnow.com/kannada/breaking-congress-mp-phulo-devis-health-deteriorates-during-protest-in-parliament-hospitalised/

Read More

ಶಿವಮೊಗ್ಗ: ಇಂದು ಶಿವಮೊಗ್ಗ ಡಿಸಿಸಿ ಬ್ಯಾಂಕ್ ಚುನಾವಣೆಗೆ ಮತದಾನ ನಡೆಯಿತು. ಈ ಚುನಾವಣೆಗೆ ನಿರ್ದೇಶಕರ ಸ್ಥಾನಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಕೂಡ ಸ್ಪರ್ಧಿಸಿದ್ದರು. ಇಂತಹ ಚುನಾವಣೆಯಲ್ಲಿ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಇಂದು ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ 12 ಕ್ಷೇತ್ರಗಳಿಗೆ ಬೆಳಗ್ಗೆ 9.00 ರಿಂದ ಸಂಜೆ 4.00 ರ ವರೆಗೆ ಮತದಾನ ನೆಡೆಯಿತು. ಆ ಬಳಿಕ ಮತಏಣಿಕೆ ಕೂಡ ನಡೆದು, ಫಲಿತಾಂಶ ಪ್ರಕಟವಾಗಿದೆ.  ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಸಾಗರ ತಾಲ್ಲೂಕು ಕ್ಷೇತ್ರದಿಂದ ಶಾಸಕ ಗೋಪಾಲಕೃಷ್ಣ ಬೇಳೂರು, ರತ್ನಾಕರ ಹೊನಗೋಡು ಕಣದಲ್ಲಿದ್ದರು. ತೀವ್ರ ಪೈಪೋಟಿಯ ನಡುವೆ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಭರ್ಜರಿ ಗೆಲುವು ಸಾಧಿಸಿರೋದಾಗಿ ತಿಳಿದು ಬಂದಿದೆ. ಅಂದಹಾಗೆ ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ 12 ಕ್ಷೇತ್ರಗಳಿಗೆ ಇಂದು…

Read More

ಬೆಂಗಳೂರು: ಬಳ್ಳಾರಿ ಉಸ್ತುವಾರಿ ಸಚಿವರಾಗಿದ್ದಂತ ಬಿ.ನಾಗೇಂದ್ರ ಅವರು ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮದ ಪ್ರಕರಣದ ಬಳಿಕ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಬಳಿಕ ಇಂದು ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಬಳ್ಳಾರಿ ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಪುಟ್ಟರಾಮು.ಆರ್ ಅವರು ಅಧಿಸೂಚನೆ ಹೊರಡಿಸಿದ್ದಾರೆ. ಅದರಲ್ಲಿ ಬಿ ಜೆಡ್ ಜಮೀರ್ ಅಹ್ಮದ್ ಖಾನ್, ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಮ ಸಚಿವರು ಹಾಗೂ ವಿಜಯನಗರ ಜಿಲ್ಲೆಯ ಉಸ್ತುವಾರಿ ಸಚಿವರು ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಬಳ್ಳಾರಿ ಜಿಲ್ಲೆಯ ಉಸ್ತುವಾರಿ ಸಚಿವರನ್ನಾಗಿ ನೇಮಿಸಿ ಆದೇಶಸಲಾಗಿದೆ ಎಂದಿದ್ದಾರೆ. https://kannadanewsnow.com/kannada/breaking-congress-mp-phulo-devis-health-deteriorates-during-protest-in-parliament-hospitalised/ https://kannadanewsnow.com/kannada/open-rowdy-sheet-against-rakesh-shetty-ex-police-officer-girish-mattannavara/

Read More

ಬೆಂಗಳೂರು: ಮಾಜಿ ಶಾಸಕ ಪ್ರೀತಂ ಗೌಡ ಅವರು ಹೈಕೋರ್ಟ್ ಗೆ ಅಶ್ಲೀಲ ವೀಡಿಯೋ ಹಂಚಿಕೆ ಪ್ರಕರಣವನ್ನು ರದ್ದುಗೊಳಿಸುವಂತೆ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆ ನಡೆಸಿತು. ಈ ಬಳಿಕ ಮಾಜಿ ಶಾಸಕ ಪ್ರೀತಂ ಗೌಡ ಅವರನ್ನು ಬಂಧಿಸದಂತೆ ಕೋರ್ಟ್ ಆದೇಶಿಸಿದೆ. ಇಂದು ಹೈಕೋರ್ಟ್ ಗೆ ಮಾಜಿ ಶಾಸಕ ಪ್ರೀತಂ ಗೌಡ ಅವರು ಅಶ್ಲೀಲ ವೀಡಿಯೋ ದೃಶ್ಯ ಹಂಚಿಕೆ ಪ್ರಕರಣವನ್ನು ರದ್ದುಗೊಳಿಸುವಂತೆ ಸಲ್ಲಿಸಲಾಗಿದ್ದಂತ ಅರ್ಜಿಯ ವಿಚಾರಣೆ ನಡೆಸಿತು. ಈ ಅರ್ಜಿಯ ವಾದ-ಪ್ರತಿವಾದ ಆಲಿಸಿದಂತ ಹೈಕೋರ್ಟ್ ನ್ಯಾಯಪೀಠವು, ಮಾಜಿ ಶಾಸಕ ಪ್ರೀತಂ ಗೌಡ ಅವರನ್ನು ಬಂಧಿಸದಂತೆ ಆದೇಶಿಸಿದೆ. ಅಲ್ಲದೇ ತನಿಖೆಯನ್ನು ಮುಂದುವರೆಸಲು ಎಸ್ಐಟಿಗೆ ಸೂಚಿಸಿದೆ. ಇನ್ನೂ ಅಶ್ಲೀಲ ದೃಶ್ಯ ಹಂಚಿಕೆ ಪ್ರಕರಣ ಸಂಬಂಧ ಮಾಜಿ ಶಾಸಕ ಪ್ರೀತಂ ಗೌಡ ಅವರು ತನಿಖೆಗೆ ಸಹಕರಿಸುವಂತೆ ಅರ್ಜಿದಾರರಿಗೆ ಹೈಕೋರ್ಟ್ ಸೂಚನೆ ನೀಡಿದೆ. https://kannadanewsnow.com/kannada/delhi-airport-forms-committee-to-probe-terminal-1-roof-collapse/ https://kannadanewsnow.com/kannada/note-temporary-ban-on-movement-of-heavy-vehicles-at-agumbe-ghat-till-september-15/

Read More

ನವದೆಹಲಿ: ವಿಮಾನ ನಿಲ್ದಾಣದ ಟರ್ಮಿನಲ್ 1 ರಲ್ಲಿ ಮೇಲ್ಛಾವಣಿ ಕುಸಿದು ಒಬ್ಬ ವ್ಯಕ್ತಿಯ ಸಾವು ಮತ್ತು ಎಂಟು ಜನರು ಗಾಯಗೊಂಡ ಬಗ್ಗೆ ತನಿಖೆ ನಡೆಸಲು ದೆಹಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಆಡಳಿತ ಮಂಡಳಿ ಶುಕ್ರವಾರ ಸಮಿತಿಯನ್ನು ರಚಿಸಿದೆ. ದೆಹಲಿಯಲ್ಲಿ ರಾತ್ರಿಯಿಡೀ ಭಾರಿ ಮಳೆ ಮತ್ತು ಗಾಳಿಯಿಂದಾಗಿ, ಟರ್ಮಿನಲ್ 1 (ಟಿ 1) ನ ಹಳೆಯ ನಿರ್ಗಮನ ಮುಂಭಾಗದ ಛಾವಣಿ ಇಂದು ಬೆಳಿಗ್ಗೆ 5 ಗಂಟೆ ಸುಮಾರಿಗೆ ಭಾಗಶಃ ಕುಸಿದಿದೆ. ಕುಸಿತಕ್ಕೆ ಕಾರಣವನ್ನು ನಿರ್ಣಯಿಸಲಾಗುತ್ತಿದ್ದರೂ, ಕಳೆದ ಕೆಲವು ಗಂಟೆಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯೇ ಪ್ರಾಥಮಿಕ ಕಾರಣವೆಂದು ತೋರುತ್ತದೆ” ಎಂದು ಡಿಐಎಎಲ್ ವಕ್ತಾರರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಭಾರಿ ಮಳೆಯಿಂದಾಗಿ ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ 1 ರ ಮೇಲ್ಛಾವಣಿಯ ಒಂದು ಭಾಗವು ಇಂದು ಮುಂಜಾನೆ ಕುಸಿದ ನಂತರ ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ. “ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ದೆಹಲಿ ಸಫ್ದರ್ಜಂಗ್ನಲ್ಲಿ ಕಳೆದ 24 ಗಂಟೆಗಳಲ್ಲಿ (ಮುಖ್ಯವಾಗಿ ಇಂದು ಮುಂಜಾನೆ) 228.1 ಮಿ.ಮೀ ಮಳೆಯಾಗಿದೆ.…

Read More

ಬೆಂಗಳೂರು: ಹೈಕೋರ್ಟ್ ನಿಂದ ಕನ್ನದ ಖಾಸಗಿ ಸುದ್ದಿ ವಾಹಿನಿ ಪವರ್ ಟಿವಿಯನ್ನು ಬಂದ್ ಮಾಡುವಂತೆ ಆದೇಶ ಮಾಡಲಾಗಿತ್ತು. ಈ ನಂತ್ರ ಮಾಲೀಕ ರಾಕೇಶ್ ಶೆಟ್ಟಿ ವಿರುದ್ಧ ರೌಡಿ ಶೀಟರ್ ಓಪನ್ ಮಾಡುವಂತೆ ಮಾಜಿ ಪೊಲೀಸ್ ಅಧಿಕಾರಿ ಗಿರೀಶ್ ಮಟ್ಟೆಣ್ಣವರ ಆಗ್ರಹಿಸಿದ್ದಾರೆ. ಇಂದು ಬೆಂಗಳೂರಿನ ಪ್ರೆಸ್ ಕ್ಲಪ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, Power Tv ಚಾನೆಲ್ ನ ಮುಖ್ಯಸ್ಥ ಎಂದು ಹೇಳಿಕೊಂಡಿದ್ದ ರಾಕೇಶ ಶೆಟ್ಟಿ ಎಂಬ ವ್ಯಕ್ತಿ ದೃಶ್ಯ ಮಾಧ್ಯಮ ದುರುಪಯೋಗ ಪಡಿಸಿಕೊಂಡು ಕಾನೂನು ಬಾಹಿರ ಚಟುವಟಿಕೆ ನಡೆಸುತ್ತಿದ್ದ ಮತ್ತು ಪರವಾನಿಗೆ ಇಲ್ಲದೇ ಒಂದು satellite ಚಾನೆಲ್ ನಡೆಸುತ್ತಿದ್ದ ಕಾರಣ ದಿ : 25-06-2024 ರಂದು ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯ Power Tv ಪ್ರಸರವನ್ನು ತಾತ್ಕಾಲಿಕವಾಗಿ ನಿಷೇಧಸಿದೆ ಎಂದರು. ಪತ್ರಿಕೋದ್ಯಮವನ್ನು ಕೇವಲ ತನ್ನ ಅನೈತಿಕ ಚಟುವಟಿಕೆಗಳಿಗೆ ಬಳಸಿಕೊಂಡು ಅನೇಕ ಕಾನೂನು ಬಾಹಿರ, ಬ್ಲಾಕ್ ಮೆಲ್, ವಸೂಲಿ ದಂದೆಗೆ ಇಳಿದ ರಾಕೇಶ್ ಶೆಟ್ಟಿಯ ಮೇಲೆ ತಕ್ಷಣ ಕೇಂದ್ರ ಮತ್ತು ರಾಜ್ಯ…

Read More

ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣದಲ್ಲಿ ಕೋರ್ಟ್ ಮತ್ತೆ ರಿಲೀಫ್ ನೀಡಿದೆ. ಪೋಕ್ಸೋ ಪ್ರಕರಣದಲ್ಲಿ ಮಧ್ಯಂತರ ಜಾಮೀನು ವಿಸ್ತರಣೆ ಮಾಡಿ ಆದೇಶಿಸಿದೆ. ನಿನ್ನೆಯಷ್ಟೇ ಪೊಲೀಸರು ಪೋಕ್ಸ್ ಪ್ರಕರಣ ಸಂಬಂಧ ಕೋರ್ಟ್ ಗೆ ಬಿಎಸ್ ಯಡಿಯೂರಪ್ಪ ವಿರುದ್ಧದ ಆರೋಪ ಪಟ್ಟಿಯನ್ನು ಸಲ್ಲಿಸಿದ್ದರು. ಇಂದು ಹೈಕೋರ್ಟ್ ಮತ್ತೆ ಮಧ್ಯಂತರ ಜಾಮೀನು ವಿಸ್ತರಣೆ ಮಾಡಿ ಆದೇಶಿಸಿದೆ. ಪೋಕ್ಸೋ ಪ್ರಕರಣ ಸಂಬಂಧ ಬಿಎಸ್ ಯಡಿಯೂರಪ್ಪ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆ ನಡೆಸಿದಂತ ಕೋರ್ಟ್, ವಿಚಾರಣೆ ಎರಡು ವಾರಗಳ ಕಾಲ ಮುಂದೂಡಿದೆ. ಅಲ್ಲದೋ ಪೋಕ್ಸೋ ಪ್ರಕರಣದಲ್ಲಿ ಆಕ್ಷೇಪಣೆಯಲ್ಲಿ ಸಲ್ಲಿಸುವಂತೆ ಎಸ್ ಪಿಪಿಗೆ ಹೈಕೋರ್ಟ್ ಸೂಚಿಸಿದೆ. https://kannadanewsnow.com/kannada/note-temporary-ban-on-movement-of-heavy-vehicles-at-agumbe-ghat-till-september-15/ https://kannadanewsnow.com/kannada/breaking-congress-mp-phulo-devis-health-deteriorates-during-protest-in-parliament-hospitalised/

Read More

ನವದೆಹಲಿ: ಕೇಂದ್ರ ಸರ್ಕಾರದಿಂದ 1989ರ ಬ್ಯಾಚ್ ನ ಐಎಫ್ ಎಸ್ ಅಧಿಕಾರಿ ವಿಕ್ರಮ್ ಮಿಸ್ರಿ ನೂತನ ವಿದೇಶಾಂಗ ಕಾರ್ಯದರ್ಶಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ. 1989ರ ಬ್ಯಾಚ್ನ ಭಾರತೀಯ ವಿದೇಶಾಂಗ ಸೇವೆ (ಐಎಫ್ಎಸ್) ಅಧಿಕಾರಿಯಾಗಿರುವ ಅವರು, ಮೂವರು ಪ್ರಧಾನ ಮಂತ್ರಿಗಳ ಖಾಸಗಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ ಅಪರೂಪದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಮಿಸ್ರಿ ಅವರು 1997ರಲ್ಲಿ ಇಂದರ್ ಕುಮಾರ್ ಗುಜ್ರಾಲ್, 2012ರಲ್ಲಿ ಮನಮೋಹನ್ ಸಿಂಗ್ ಮತ್ತು 2014ರಲ್ಲಿ ನರೇಂದ್ರ ಮೋದಿ ಅವರ ಖಾಸಗಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. 1964 ರಲ್ಲಿ ಶ್ರೀನಗರದಲ್ಲಿ ಜನಿಸಿದ ಮಿಸ್ರಿ ತಮ್ಮ ಆರಂಭಿಕ ಶಿಕ್ಷಣವನ್ನು ಗ್ವಾಲಿಯರ್ನಲ್ಲಿ ಪೂರ್ಣಗೊಳಿಸಿದರು. ಅವರು ದೆಹಲಿ ವಿಶ್ವವಿದ್ಯಾಲಯದ ಹಿಂದೂ ಕಾಲೇಜಿನಿಂದ ಇತಿಹಾಸದಲ್ಲಿ ಪದವಿ ಪದವಿ ಮತ್ತು ಎಕ್ಸ್ಎಲ್ಆರ್ಐನಿಂದ ಎಂಬಿಎ ಪದವಿ ಪಡೆದಿದ್ದಾರೆ. ಮಿಸ್ರಿ ಅವರು ಭಾರತೀಯ ವಿದೇಶಾಂಗ ಸೇವೆಯ 1989 ರ ಬ್ಯಾಚ್ನಿಂದ ರಾಜತಾಂತ್ರಿಕರಾಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು. ತಮ್ಮ ಆರಂಭಿಕ ವರ್ಷಗಳಲ್ಲಿ, ಅವರು ಬ್ರಸೆಲ್ಸ್ ಮತ್ತು ಟ್ಯುನಿಸ್ನಲ್ಲಿನ ಭಾರತೀಯ ಮಿಷನ್ಗಳಲ್ಲಿ ಸೇವೆ ಸಲ್ಲಿಸಿದರು.…

Read More

ನವದೆಹಲಿ: ಮನಿ ಲಾಂಡರಿಂಗ್ ಆರೋಪದ ಮೇಲೆ ಬಂಧಿಸಲ್ಪಟ್ಟ ಆರು ತಿಂಗಳ ನಂತರ, ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರನ್ನು ಜಾರ್ಖಂಡ್ ಹೈಕೋರ್ಟ್ ಶುಕ್ರವಾರ ಜಾಮೀನು ನೀಡಿದ ನಂತರ ಜೈಲಿನಿಂದ ಬಿಡುಗಡೆ ಮಾಡಲಾಗಿದೆ. ಸೊರೆನ್ ಅವರು 8.36 ಎಕರೆ ಭೂಮಿಯನ್ನು ಅಕ್ರಮವಾಗಿ ಹೊಂದಿರುವುದಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಆರೋಪಗಳನ್ನು ಎದುರಿಸುತ್ತಿದ್ದಾರೆ. ಸೊರೆನ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ ನಂತರ ಜನವರಿ 31 ರಂದು ಅವರನ್ನು ಬಂಧಿಸಲಾಯಿತು. ನೀಟ್ ಸೋಲಿನಿಂದ ದೇಶವು ತಲ್ಲಣಗೊಂಡಿರುವ ಸಮಯದಲ್ಲಿ, ಪ್ರತಿಪಕ್ಷಗಳು ಇಂದು ಈ ವಿಷಯದ ಬಗ್ಗೆ ಚರ್ಚೆಯ ಬೇಡಿಕೆಯನ್ನು ಎತ್ತುವ ನಿರೀಕ್ಷೆಯಿತ್ತು. ಆದಾಗ್ಯೂ, ಲೋಕಸಭೆಯನ್ನು ಸೋಮವಾರಕ್ಕೆ ಮತ್ತು ರಾಜ್ಯಸಭೆಯನ್ನು ಇಂದು ಮಧ್ಯಾಹ್ನ 2 ಗಂಟೆಯವರೆಗೆ ಮುಂದೂಡಲಾಯಿತು. ವಿರೋಧ ಪಕ್ಷದ ಸಂಸದರು ಇಂದು ಉಭಯ ಸದನಗಳಲ್ಲಿ ಮುಂದೂಡಿಕೆ ನಿರ್ಣಯಗಳನ್ನು ಮಂಡಿಸಲು ನಿರ್ಧರಿಸಿದ್ದರು. ಗುರುವಾರ ಸಂಸತ್ತನ್ನುದ್ದೇಶಿಸಿ ಮಾತನಾಡಿದ ಅಧ್ಯಕ್ಷ ಮುರ್ಮು, ಪ್ರಕರಣದ ಬಗ್ಗೆ ನ್ಯಾಯಯುತ ತನಿಖೆಯನ್ನು ಖಚಿತಪಡಿಸಿದ್ದರು. ಏತನ್ಮಧ್ಯೆ, ಇಂದು ಬೆಳಿಗ್ಗೆ ದೆಹಲಿಯಲ್ಲಿ ಭಾರಿ ಮಳೆಯಾಗಿದ್ದು, ದೆಹಲಿ…

Read More