Author: kannadanewsnow09

ಹಾಸನ: ಈ ಬಾರಿ ಹಾಸನಾಂಬ ದೇವಿ ದರ್ಶನಕ್ಕೆ ವಿಐಪಿ ಸಂಸ್ಕೃತಿಗೆ ಬ್ರೇಕ್ ಹಾಕಲಾಗಿತ್ತು. ವಿಐಪಿಗಳು ಬರುವ ಮೊದಲು ಕೆಲ ಅಧಿಕಾರಿಗಳಿಗೆ ಮುಂಚಿತವಾಗಿಯೇ ತಿಳಿಸಿ, ದರ್ಶನ ಪಡೆಯಲು ವ್ಯವಸ್ಥೆ ಮಾಡಲಾಗಿತ್ತು. ಈ ಮಧ್ಯೆ ಜನರಿಗೆ ಹಾಸನಾಂಬ ದರ್ಶನ ಪಡೆಯಲು ತಮ್ಮ ಗುರುತಿನ ಚೀಟಿಯನ್ನೇ ನೀಡಿದಂತ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಿ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ. ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, “ಜೀರೋ ಟಾಲರೆನ್ಸ್.” ಹಾಸನಾಂಬ ದೇವಾಲಯದ ಆವರಣಕ್ಕೆ ಅನಧಿಕೃತ ಜನರಿಗೆ ಪ್ರವೇಶ ನೀಡಲು ತಮ್ಮ ಅಧಿಕೃತ ಗುರುತಿನ ಚೀಟಿಯನ್ನು ದುರುಪಯೋಗಪಡಿಸಿಕೊಂಡಿದ್ದಕ್ಕಾಗಿ ಮೊದಲ ದಿನವೇ ಇಬ್ಬರು ಸರ್ಕಾರಿ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಇದು ನಮ್ಮ ನಿರ್ದೇಶನಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದಿದ್ದಾರೆ. ಸರ್ಕಾರಿ ಗುರುತಿನ ಚೀಟಿಯನ್ನು ದುರುಪಯೋಗಪಡಿಸಿಕೊಳ್ಳುವುದು ಗಂಭೀರ ಅಪರಾಧ. ಈ ಇಬ್ಬರು ಅಧಿಕಾರಿಗಳು ತಮ್ಮ ಅಧಿಕೃತ ಗುರುತಿನ ಚೀಟಿಯನ್ನು ಅನಧಿಕೃತ ಜನರಿಗೆ ನೀಡಿ ದೇವಾಲಯ ಪ್ರವೇಶಕ್ಕೆ ಅವಕಾಶ ನೀಡಿದ್ದರು. ಇಂತಹ ಕೃತ್ಯಗಳು ಸರ್ಕಾರಿ ನೌಕರರಿಗೆ ತಕ್ಕುದಾದದ್ದಲ್ಲ ಮತ್ತು ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧವಾಗಿದೆ. ಇದು…

Read More

ಬೆಂಗಳೂರು : “ಸಿಎಂ ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ, ಕೆಲವು ಮಾಧ್ಯಮಗಳು ಸುದ್ದಿ ತಿರುಚಿ ವಿವಾದ ಸೃಷ್ಟಿಸುತ್ತಿವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬೇಸರ ವ್ಯಕ್ತಪಡಿಸಿದರು. ಲಾಲ್ ಬಾಗ್ ಉದ್ಯಾನದಲ್ಲಿ ಶನಿವಾರ ಬೆಂಗಳೂರು ನಡಿಗೆ ಕಾರ್ಯಕ್ರಮದ ಅಂಗವಾಗಿ ಸಾರ್ವಜನಿಕರೊಂದಿಗೆ ಸಂವಾದದ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. “ನಾನು ಸಾರ್ವಜನಿಕರ ಭೇಟಿಗೆ ಬಂದಾಗ ಕೆಲವರು ನೀವು ಮುಖ್ಯಮಂತ್ರಿ ಆಗಬೇಕು, ಅ ಸಮಯ ಹತ್ತಿರ ಬರುತ್ತಿದೆಯೇ ಎಂದು ಕೇಳಿದರು. ಆದರೆ ಸಿಎಂ ಆಗುವ ಕಾಲ ಹತ್ತಿರ ಬರುತ್ತಿದೆ ಎಂದು ನಾನೇ ಹೇಳಿದ್ದೇನೆ ಎಂದು ಕೆಲವು ಮಾಧ್ಯಮಗಳು ಸುದ್ದಿ ತಿದ್ದಿ ಪ್ರಸಾರ ಮಾಡುತ್ತಿವೆ. ನೀವು ಹಾಗೆಲ್ಲ ಸುದ್ದಿ ತಿರುಚಿ ತೋರಿಸಬೇಡಿ” ಎಂದು ತಿಳಿಸಿದರು. “ನಾನು ಸಿಎಂ ಹುದ್ದೆ ಅಲಂಕರಿಸಲು ಆತುರದಲ್ಲಿ ಇಲ್ಲ. ನಾನು ಇಲ್ಲಿಗೆ ಬಂದಿರುವುದು ಸಾರ್ವಜನಿಕರ ಸೇವೆ ಮಾಡಲು. ರಾಜಕಾರಣ ಮಾಡಲು ಅಲ್ಲ. ಜನರ ಸೇವೆ ಮಾಡಲು ಹಗಲು ರಾತ್ರಿ ತಿರುಗುತ್ತಿದ್ದೇನೆ. ನೀವು ಇದೇ ರೀತಿ ಸುದ್ದಿ…

Read More

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ಜೋರಾಗಿ ಸುದ್ದಿ ಹರಿದಾಡುತ್ತಿದೆ. ಡಿಸಿಎಂ ಡಿ.ಕೆ ಶಿವಕುಮಾರ್ ಸಂಪುಟ ವಿಸ್ತರಣೆ ಬಗ್ಗೆ ಏನು ಹೇಳಿದ್ರು ಅಂತ ಮುಂದೆ ಓದಿ. ಲಾಲ್ ಬಾಗ್ ಉದ್ಯಾನದಲ್ಲಿ ಶನಿವಾರ ಬೆಂಗಳೂರು ನಡಿಗೆ ಕಾರ್ಯಕ್ರಮದ ಅಂಗವಾಗಿ ಸಾರ್ವಜನಿಕರೊಂದಿಗೆ ಸಂವಾದದ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಸಚಿವ ಸಂಪುಟ ವಿಸ್ತರಣೆ ಬಗ್ಗೆ ಕೇಳಿದಾಗ, “ಯಾವ ಸಂಪುಟ ವಿಸ್ತರಣೆಯೂ ಇಲ್ಲ, ಅಧಿಕಾರವೂ ಇಲ್ಲ. ಮಾಧ್ಯಮಗಳು ಗಾಳಿ ಸುದ್ದಿ ಪ್ರಕಟಿಸುತ್ತಿವೆ. ಈ ಬಗ್ಗೆ ಮುಖ್ಯಮಂತ್ರಿಗಳು ಅಥವಾ ನಾನು ಪ್ರಸ್ತಾವನೆ ಮಾಡಬೇಕು. ನಾವಿಬ್ಬರೂ ಪ್ರಸ್ತಾಪ ಮಾಡಲಿಲ್ಲವಾದರೆ ಅದು ಗಾಳಿ ಸುದ್ದಿ. ಆತುರದಲ್ಲಿರುವವರು, ಮಾಧ್ಯಮಗಳ ಮುಂದೆ ಮಾತನಾಡುತ್ತಾರೆ. ಏನೇ ಇದ್ದರೂ ಹೈಕಮಾಂಡ್ ತೀರ್ಮಾನ ಮಾಡುತ್ತದೆ” ಎಂದು ತಿಳಿಸಿದರು. ಸಿಎಂ ಸಭೆ ಬಗ್ಗೆ ಕೇಳಿದಾಗ, “ಮುಂದೆ ಪಾಲಿಕೆಗಳು, ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯ್ತಿ ಚುನಾವಣೆ ಬಗ್ಗೆ ಚರ್ಚೆ ಮಾಡುತ್ತಾರೆ. ನಾನು ಕೂಡ ಇಂದು ಜಿಬಿಎ ಪಾಲಿಕೆಗಳ ಚುನಾವಣೆ ಸಂಬಂಧಿಸಿದಂತೆ ಪಕ್ಷದ ಕಾರ್ಯಕರ್ತರ…

Read More

ಬೆಂಗಳೂರು : ಸಾರ್ವಜನಿಕರು ಬಯಸಿದಂತೆ ಲಾಲ್ ಬಾಗ್ ಅಭಿವೃದ್ಧಿಗೆ ಜಿಬಿಎ ವತಿಯಿಂದ 10 ಕೋಟಿ ರೂ ಅನುದಾನ ನೀಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಘೋಷಿಸಿದ್ದಾರೆ. ಲಾಲ್ ಬಾಗ್ ನಲ್ಲಿ ನಾಗರೀಕರ ಜತೆ ನಡಿಗೆ ಹಾಗೂ ಸಂವಾದದ ನಂತರ ಟನಲ್ ರಸ್ತೆಗೆ ಪ್ರವೇಶ ಜಾಗ ಪರಿಶೀಲನೆ ನಡೆಸಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. “ಅನೇಕ ಸಾರ್ವಜನಿಕರ ಜೊತೆ ಚರ್ಚೆ ಮಾಡಿ ಅವರ ಸಲಹೆ, ದೂರು ಆಲಿಸಿದ್ದೇನೆ. ಅವರ ಸಮಸ್ಯೆ ಬಗೆಹರಿಸಲಾಗುವುದು. ಲಾಲ್ ಬಾಗ್ ಅಭಿವೃದ್ಧಿಗೆ ಜಿಬಿಎ ವತಿಯಿಂದ 10 ಕೋಟಿ ರೂ. ಅನುದಾನ ನೀಡಲು ತೀರ್ಮಾನಿಸಿದ್ದೇವೆ. ಹಿರಿಯರು ಹಾಗೂ ಮಹಿಳೆಯರಿಗೆ ಅನುಕೂಲವಾಗುವಂತೆ ಜಿಮ್ ಮಾಡಲಾಗುವುದು” ಎಂದು ಭರವಸೆ ನೀಡಿದರು. “ಬೆಂಗಳೂರಿನಲ್ಲಿ ಅವಕಾಶ ಇರುವೆಡೆ ಲಾಲ್ ಬಾಗ್ ಮಾದರಿಯಲ್ಲಿ ಟ್ರೀಪಾರ್ಕ್ ಮಾಡಲು ಅರಣ್ಯ ಇಲಾಖೆ ಜೊತೆ ಚರ್ಚೆ ಮಾಡುತ್ತೇನೆ. ಅದಕ್ಕೆ ಆರ್ಥಿಕ ಬೆಂಬಲವನ್ನು ನೀಡಲಾಗುವುದು” ಎಂದು ತಿಳಿಸಿದರು. “ಇಲ್ಲಿ ಬೆಳಗ್ಗೆಯಿಂದ ಸಂಜೆವರೆಗೂ ವೈದ್ಯರು ಹಾಗೂ ಆಂಬುಲೆನ್ಸ್ ಸೇವೆ ನಿಯೋಜನೆಗೆ ತೀರ್ಮಾನಿಸಿದ್ದೇವೆ.…

Read More

ಬೆಳಗಾವಿ: ಜಿಲ್ಲೆಯಲ್ಲಿ ವಿಚಿತ್ರ ಘಟನೆ ಎನ್ನುವಂತೆ ಪ್ರಿಯಕರನೊಂದಿಗೆ ಓಡಿ ಹೋದಂತ ಮಗಳನ್ನು ಸತ್ತು ಹೋಗಿದ್ದಾಳೆ ಅಂತ ಶ್ರದ್ಧಾಂಜಲಿ ಬ್ಯಾನರ್ ಅನ್ನು ತಂದೆಯೊಬ್ಬರು ಹಾಕಿದ್ದಾರೆ. ಇದಷ್ಟೇ ಅಲ್ಲದೇ ಇಡೀ ಊರಿಗೆ ಮಗಳು ಸತ್ತು ಹೋದಳು ಅಂತ ತಿಥಿ ಊಟ ಕೂಡ ಹಾಕಿಸಿರುವಂತ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ನಾಗರಾಳ ಗ್ರಾಮದಲ್ಲೇ ಇಂತಹ ವಿಚಿತ್ರ ಘಟನೆ ನಡೆದಿದೆ. ನಾಗರಾಳ ಗ್ರಾಮದ ಶಿವಗೌಡ ಪಾಟೀಲ್ ಅವರಿಗೆ ನಾಲ್ವರು ಪುತ್ರಿಯರು. ಇವರಲ್ಲಿ ಕೊನೆಯ ಮಗಳು ನಾಗರಾಳ ಗ್ರಾಮದ ಯುವಕನೊಬ್ಬನನ್ನು ಪ್ರೀತಿಸುತ್ತಿದ್ದಳು. ತಂದೆ ಎಷ್ಟೇ ಬುದ್ಧಿವಾದ ಹೇಳಿದರೂ ಬಿಡದೇ, ಆತನೊಂದಿಗೆ ಓಡಿ ಹೋಗಿದ್ದಾಳೆ. ಮಗಳು ಪ್ರಿಯಕರನೊಂದಿಗೆ ಹೋಗಿದ್ದರಿಂದ ಸಿಟ್ಟುಗೊಂಡಂತ ತಂದೆ ಶಿವಗೌಡ ಪಾಟೀಲ್ ಅವರು, ತಮ್ಮ ಮಗಳು ಸತ್ತು ಹೋಗಿದ್ದಾಳೆ ಅಂತ ಶ್ರದ್ಧಾಂಜಲಿ ಬ್ಯಾನರ್ ಅನ್ನು ಊರಲ್ಲಿ ಹಾಕಿಸಿದ್ದಾರೆ. ಇದಷ್ಟೇ ಅಲ್ಲದೇ ತನ್ನ ಮಗಳು ಸತ್ತು ಹೋಗಿದ್ದಾಳೆ ಎಂಬ ಕಾರಣಕ್ಕೆ ತಿಥಿ ಊಟವನ್ನು ಇಡೀ ಊರಿನ ಜನರನ್ನೇ ಕರೆದು ಹಾಕಿಸಿರುವುದಾಗಿ ತಿಳಿದು ಬಂದಿದೆ. ಅಂದಹಾಗೇ ಶಿವಗೌಡ ಪಾಟೀಲ್…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ 2025ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಆಯ್ಕೆಗೆ ಸಲಹಾ ಸಮಿತಿಯನ್ನು ರಚಿಸಿ ಆದೇಶಿಸಿದೆ. ಈ ಸಂಬಂಧ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, 2025ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಪುರಸ್ಕೃತರನ್ನು ಆಯ್ಕೆ ಮಾಡಲು ಈ ಕೆಳಕಂಡ ಆಯ್ಕೆ ಸಲಹಾ ಸಮಿತಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ರಚಿಸಿ ಆದೇಶಿಸಿದ್ದಾರೆ. 2025ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಆಯ್ಕೆಗೆ ರಚಿಸಿದಂತ ಸಲಹಾ ಸಮಿತಿಯ ಅಧ್ಯಕ್ಷರನ್ನಾಗಿ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಅವರನ್ನು ನೇಮಿಸಿದ್ದರೇ, ಸದಸ್ಯರನ್ನಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಕಾರ್ಯದರ್ಶಿ, ಸಮಾಜ ಸೇವೆ ಕ್ಷೇತ್ರದಿಂದ ಬೀದರಿನ ಮಾರುತಿ ಬೌದ್ಧೆ, ಉಡುಪಿಯ ಕೆ.ಪಿ ಸುರೇಶ್, ಕೊಪ್ಪಳದ ಇಟಿ ರತ್ನಕರ್ ತಳವಾರ ಅವರನ್ನು ನೇಮಕ ಮಾಡಲಾಗಿದೆ. ಸಾಹಿತ್ಯ ಕ್ಷೇತ್ರದಿಂದ ಸದಸ್ಯರನ್ನಾಗಿ ಧಾರವಾಡದ ಡಾ.ಮಾಲತಿ ಪಟ್ಟಣಶೆಟ್ಟಿ, ಬೆಂಗಳೂರಿನ ಪ್ರೊ.ಜಿ.ಅಬ್ದುಲ್ ಬಷೀರ್, ಕೋಲಾರದ ಚಂದ್ರಶೇಖರ ನಂಗ್ಲಿ,…

Read More

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ಇಲಾಖೆಗೆ ಸಂಬಂಧಿಸಿದ ಮಹತ್ವದ ವಿಷಯಗಳನ್ನು ಕೇಂದ್ರೀಕರಿಸಿ, ಅಭಿವೃದ್ಧಿ ಕಾರ್ಯಕ್ರಮಗಳ ಅನುಷ್ಟಾನದಲ್ಲಿ ಪಾರದರ್ಶಕತೆ, ಆಡಳಿತವನ್ನು ಜನಸ್ನೇಹಿಯಾಗಿಸುವ ಹಾಗೂ ಪ್ರಾಮಾಣಿಕ‌ ಪ್ರಯತ್ನದ ಭಾಗವಾಗಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಎಲ್ಲಾ ಸರ್ಕಾರಿ ಪತ್ರಗಳನ್ನು ಸಂಕ್ಷಿಪ್ತಗೊಳಿಸಿ, ಸರ್ಕಾರಿ ಪಾರಿಭಾಷಿಕ ಪದಗಳನ್ನು ಸರಳೀಕರಣ ಮಾಡಿ ಜನಸಾಮಾನ್ಯರಿಗೆ ಅರ್ಥೈಸುವ ನಿಟ್ಟಿನಲ್ಲಿ ‘ಗ್ರಾಮದನಿ’ ಪಾಡ್‌ಕಾಸ್ಟ್‌ ಕಾರ್ಯ ನಿರ್ವಹಿಸುತ್ತದೆ.  ಮಾಧ್ಯಮದ ಇಂದಿನ ಯುಗದಲ್ಲಿ, ಸಮುದಾಯಕ್ಕೆ ಮಾಹಿತಿ ಮತ್ತು ಅರಿವು ಮೂಡಿಸುವುದು, ಅತ್ಯಂತ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ,  ಗ್ರಾಮೀಣಾಭಿವೃದ್ಧಿ ಕ್ಷೇತ್ರದಲ್ಲಿ ಮಾಹಿತಿ ಕೊರತೆಯನ್ನು ನೀಗಿಸುವ ನಿಟ್ಟಿನಲ್ಲಿ, ತಂತ್ರಜ್ಞಾನದ ಸಮರ್ಪಕ ಬಳಕೆ ನೆರವಾಗಬಲ್ಲದು. ‘ಗ್ರಾಮದನಿ’ ಅಕ್ಷರಶಃ ‘ಗ್ರಾಮೀಣ ಕರ್ನಾಟಕದ ಧ್ವನಿ’ಯಾಗಲಿದ್ದು,  ಇದು ಕೇವಲ ಮಾಹಿತಿ ನೀಡುವ ವೇದಿಕೆಯಾಗಿರದೆ  ಶಕ್ತಿಯುತ ಅರಿವಿನ ಮಾಧ್ಯಮವಾಗಿದೆ. ಸಾಮರ್ಥ್ಯಾಭಿವೃದ್ಧಿ ಮತ್ತು ಜ್ಞಾನಾರ್ಜನೆ ಈ ಪಾಡ್‌ಕಾಸ್ಟ್ ನ ಪ್ರಮುಖ ಉದ್ದೇಶಗಳಾಗಿದ್ದು, ಪ್ರಮುಖವಾಗಿ ಚುನಾಯಿತ ಪ್ರತಿನಿಧಿಗಳು, ಕ್ಷೇತ್ರ ಸಿಬ್ಬಂದಿಗಳು/ ಅಧಿಕಾರಿಗಳು ಹಾಗೂ ಜನಸಾಮಾನ್ಯರ ಸಾಮರ್ಥ್ಯವನ್ನು ವೃದ್ಧಿಸಲು ಮತ್ತು ಅವರಿಗೆ ಅಗತ್ಯವಾದ ಜ್ಞಾನವನ್ನು ಸುಲಭವಾಗಿ ತಲುಪಿಸಲು…

Read More

ನವದೆಹಲಿ: ಜಿಯೋ ಅಧ್ಯಕ್ಷ ಆಕಾಶ್ ಅಂಬಾನಿ ಅವರು ಆನ್‌ಲೈನ್ ಗೇಮಿಂಗ್ ಉದ್ಯಮವನ್ನು ಸಂಪೂರ್ಣವಾಗಿ ಪರಿವರ್ತಿಸಲು ಮುಂದಾಗಿದ್ದಾರೆ. ಹೈ-ಅನಿಮೇಟೆಡ್ ಅಥವಾ ಹೈ-ಎಂಡ್, ಇಂಟರ್ ಆಕ್ಟಿವ್ ಗೇಮ್ ಗಳನ್ನು ಆಡಲು ಇನ್ನು ಮುಂದೆ ದುಬಾರಿ ಗ್ಯಾಜೆಟ್‌ಗಳು ಅಗತ್ಯ ಇರುವುದಿಲ್ಲ. ಜಿಯೋ ಕ್ಲೌಡ್ ಗೇಮಿಂಗ್ ತಂತ್ರಜ್ಞಾನದ ಮೂಲಕ ಆನ್‌ಲೈನ್‌ನಲ್ಲಿ ಕ್ಲೌಡ್ ಗೇಮ್ ಗಳನ್ನು ಆಡಲು, ಬಳಕೆದಾರರಿಗೆ ಉತ್ತಮ ಇಂಟರ್ನೆಟ್ ಸಂಪರ್ಕ ಮತ್ತು ಜಿಯೋಗೇಮ್ಸ್ ಅಪ್ಲಿಕೇಷನ್ ಇದ್ದರೆ ಸಾಕು. ಲ್ಯಾಪ್‌ಟಾಪ್‌ಗಳು, ಪಿಸಿಗಳು, ಸ್ಮಾರ್ಟ್‌ಫೋನ್‌ಗಳು, ಜಿಯೋ ಸೆಟ್-ಟಾಪ್ ಬಾಕ್ಸ್‌ಗಳು ಮತ್ತು ವೆಬ್ ಬ್ರೌಸರ್‌ಗಳಲ್ಲಿ ಗೇಮಿಂಗ್ ಮಾಡಬಹುದು ಮತ್ತು ಇವೆಲ್ಲಕ್ಕೂ ಏನನ್ನೂ ಡೌನ್‌ಲೋಡ್ ಮಾಡುವ ಅಗತ್ಯ ಇಲ್ಲ. ಕೇವಲ ಒಂದು ಗೇಮ್ ಆಯ್ಕೆ ಮಾಡಿ ಮತ್ತು ಆಡಲು ಪ್ರಾರಂಭಿಸಿ. ಟೆಕ್ಕನ್ 7, ಎಲ್ಡನ್ ಮತ್ತು ರಿಂಗ್‌ನಂತಹ ಟ್ರಿಪಲ್-ಎ ಟೈಟಲ್ ಗಳನ್ನು ಈಗ ಜಿಯೋ ಕ್ಲೌಡ್ ತಂತ್ರಜ್ಞಾನದ ಮೂಲಕ ಸುಲಭವಾಗಿ ಆಡಬಹುದು. ಗೇಮರ್ ಗಳು ರೂ. 298ಕ್ಕೆ ಜಿಯೋಗೇಮ್ಸ್ ಅಪ್ಲಿಕೇಷನ್ ಪ್ಲಾನ್ ಪಡೆಯಬಹುದು. 28 ದಿನಗಳ ಮಾನ್ಯತೆಯೊಂದಿಗೆ ಅವರು ಜಿಯೋಗೇಮ್ಸ್‌ನಲ್ಲಿ ಲಭ್ಯವಿರುವ…

Read More

ಬೆಂಗಳೂರು: ರಾಜ್ಯಾಧ್ಯಂತ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ನಡೆಯುತ್ತಿದೆ. ಇಂದಿನವರೆಗೆ ರಾಜ್ಯ ಹಾಗೂ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಸಮೀಕ್ಷೆಯ ಪ್ರಗತಿ ಎಷ್ಟು ಸಾಧಿಸಲಾಗಿದೆ ಎನ್ನುವಂತ ಅಂಕಿ-ಅಂಶದ ವಿವರ ಮುಂದಿದೆ ಓದಿ. ರಾಜ್ಯದ ಪ್ರಗತಿ: 10/10/2025 ಒಟ್ಟು ಮನೆಗಳ ಗುರಿ:1,47,88,831 ಮನೆಗಳ ಸಮೀಕ್ಷೆ ನೆನ್ನೆಯವರೆಗೆ ಪ್ರಗತಿ: 1,25,14,685 ಮನೆಗಳ ಸಮೀಕ್ಷೆ ಇಂದಿನ ಪ್ರಗತಿ: 2,09,824 ಒಟ್ಟು ಮನೆಗಳ ಸಮೀಕ್ಷೆ ಪ್ರಗತಿ: 1,27,24,509 ಶೇಕಡಾವಾರು ಪ್ರಗತಿ: 85.89% ಒಟ್ಟು ಜನಸಂಖ್ಯೆ: 4,73,03,431 GBA(ಗ್ರೇಟರ್ ಬೆಂಗಳೂರು)ಪ್ರಗತಿ ಒಟ್ಟು ಮನೆಗಳ ಗುರಿ:39,82,335 ಮನೆಗಳ ಸಮೀಕ್ಷೆ ನೆನ್ನೆಯವರೆಗೆ ಪ್ರಗತಿ: 7,67,807 ಮನೆಗಳ ಸಮೀಕ್ಷೆ ಇಂದಿನ ಪ್ರಗತಿ:1,47,431 ಒಟ್ಟು ಮನೆಗಳ ಸಮೀಕ್ಷೆ ಪ್ರಗತಿ: 9,15,238 ಒಟ್ಟು ಜನಸಂಖ್ಯೆ: 24,68,925 ಶೇಕಡಾವಾರು ಪ್ರಗತಿ: 19.62% https://kannadanewsnow.com/kannada/two-officials-assigned-to-hassanamba-jatra-mahotsavakka-suspended/ https://kannadanewsnow.com/kannada/mla-gopalakrishna-belur-inaugurated-the-new-royal-enfield-showroom-of-rbd-motors/

Read More

ಹಾಸನ: ಹಾಸನಾಂಬ ದೇವಿ ಜಾತ್ರಾ ಮಹೋತ್ಸವ ನಡೆಯುತ್ತಿದೆ. ಈ ಕಾರ್ಯಕ್ರಮಕ್ಕೆ ಹಲವು ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಹೀಗೆ ನಿಯೋಜಿಸಲಾಗಿದ್ದಂತ ಇಬ್ಬರು ಅಧಿಕಾರಿಗಳು ತಮಗೆ ನೀಡಿದ್ದಂತ ಐಡಿ ಕಾರ್ಡ್ ದುರ್ಬಳಕೆ ಮಾಡಿಕೊಂಡಿದ್ದರು. ಇಂತಹ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಿ ಹಾಸನ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಹಾಸನಾಂಬ ದೇವಿ ದರ್ಶನ, ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವಕ್ಕೆ ನಿಯೋಜಿಸಿದ್ದ ಅಧಿಕಾರಿಗಳು ಕರ್ತವ್ಯ ಲೋಪ ಎಸಗಿದ್ದರು. ಕರ್ತವ್ಯದ ಸಲುವಾಗಿ ನೀಡಿದ್ದ ಗುರುತಿನ ಚೀಟಿ ದುರ್ಬಳಕೆ ಮಾಡಿಕೊಂಡಿದ್ದಂತ ಆರೋಪ ಕೇಳಿ ಬಂದಿತ್ತು. ಈ ಹಿನ್ನಲೆಯಲ್ಲಿ ದೇವರ ದರ್ಶನಕ್ಕೆ ತಮ್ಮ ಐಡಿ ನೀಡಿದ್ದಂತ ಇಬ್ಬರು ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗಿದೆ. ಸಮಾಜ ಕಲ್ಯಾಣ ಇಲಾಖೆಯ ವಾರ್ಡನ್ ಗಳಾದಂತ ರಮೇಶ್, ಆನಂದ್ ಎಂಬುವರನ್ನು ಅಮಾನತುಗೊಳಿಸಿ ಹಾಸನ ಡಿಸಿ ಕೆ.ಎಸ್ ಲತಾ ಕುಮಾರಿ ಆದೇಶಿಸಿದ್ದಾರೆ. https://kannadanewsnow.com/kannada/mla-gopalakrishna-belur-inaugurated-the-new-royal-enfield-showroom-of-rbd-motors/ https://kannadanewsnow.com/kannada/survey-of-9-15-lakh-families-in-greater-bengaluru-authority/

Read More