Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಹಿರಿಯ ಪತ್ರಕರ್ತ, ಸಾಮಾಜಿಕ ಹೋರಾಟಗಾರ, ಲೇಖಕ, ಮಾನವ ಬಂಧುತ್ವ ವೇದಿಕೆಯ ಬೆಂಗಳೂರು ವಿಭಾಗೀಯ ಸಂಚಾಲಕ ಆರ್.ಜಯಕುಮಾರ್ (65) ನಿಧನರಾಗಿದ್ದಾರೆ. ಅವರು ಪತ್ನಿ ಡಾ.ಲೀಲಾ ಸಂಪಿಗೆ ಮತ್ತು ಪುತ್ರಿ, ಅಳಿಯ, ಮೊಮ್ಮಗುವನ್ನು ಅಗಲಿದ್ದಾರೆ. ವಿದ್ಯಾರ್ಥಿ ದೆಸೆಯಿಂದಲೇ ಸಾಮಾಜಿಕ ಹೋರಾಟ, ಸಂಘಟನೆ, ಭ್ರಷ್ಟಾಚಾರ ವಿರೋಧಿ ಹೋರಾಟಗಳಲ್ಲಿ ಗುರುತಿಸಿಕೊಂಡಿದ್ದ ಜಯಕುಮಾರ್, ಬಿ.ಕಾಂ. ಪದವಿ ನಂತರ ಸಂಯುಕ್ತ ಕರ್ನಾಟಕ ಪತ್ರಿಕೆಯ ಮೂಲಕ ಪತ್ರಿಕೋದ್ಯಮಕ್ಕೆ ಪಾದಾರ್ಪಣೆ ಮಾಡಿದ್ದರು. ನಂತರ ವಿಜಯ ಕರ್ನಾಟಕ, ಉದಯ ಟಿವಿ, ಟೈಮ್ಸ್ ಆಫ್ ಕರ್ನಾಟಕ ಪತ್ರಿಕೆಗಳಲ್ಲಿ ಸೇವೆ ಸಲ್ಲಿಸಿದ್ದರು. ಇದಕ್ಕೂ ಮುನ್ನ ವಿದ್ಯಾರ್ಥಿಯಲ್ಲಿ ಸಕ್ರಿಯವಾಗಿದ್ದ ಅವರು, ಭಾರತ ವಿದ್ಯಾರ್ಥಿ ಫೆಡರೇಷನ್(SFI) ರಾಜ್ಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ನಿವೃತ್ತಿಯ ನಂತರ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಯವರು ಸ್ಥಾಪಿಸಿರುವ ಮಾನವ ಬಂಧುತ್ವ ವೇದಿಕೆಯ ಬೆಂಗಳೂರು ವಿಭಾಗೀಯ ಸಂಚಾಲಕರಾಗಿ ಸೇವೆ ಸಲ್ಲಿಸುತ್ತ, ಬುದ್ಧ, ಬಸವ, ಅಂಬೇಡ್ಕರ್, ಸಂವಿಧಾನ ವಿಷಯಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಕೆಲಸದಲ್ಲಿ ನಿರತರಾಗಿದ್ದರು. ಇವರ ಆತ್ಮ ಕಥನ ‘ಕಾಡು ಹಾದಿಯ ಬೆಳಕಿನ ಜಾಡು’…
ನವದೆಹಲಿ: ಮುಕ್ತಾಯಗೊಂಡ ಐದು ಹಂತಗಳಲ್ಲಿ ಚಲಾವಣೆಯಾದ ಮತಗಳ ಸಂಪೂರ್ಣ ಸಂಖ್ಯೆಯನ್ನು ಭಾರತದ ಚುನಾವಣಾ ಆಯೋಗ ಶನಿವಾರ ಬಿಡುಗಡೆ ಮಾಡಿದೆ. ಮುಕ್ತಾಯಗೊಂಡ ಹಂತಗಳಲ್ಲಿ ಚಲಾವಣೆಯಾದ ಮತಗಳ ಡೇಟಾವನ್ನು ಯಾರೂ ಬದಲಾಯಿಸಲು ಸಾಧ್ಯವಿಲ್ಲ ಎಂದು ಹೇಳಿದೆ. ವಿವರವಾದ ಮತದಾನದ ದತ್ತಾಂಶವನ್ನು ಬಿಡುಗಡೆ ಮಾಡುವಾಗ, ಚುನಾವಣಾ ಆಯೋಗವು ಸುಪ್ರೀಂ ಕೋರ್ಟ್ ಅವಲೋಕನಗಳನ್ನು ಉಲ್ಲೇಖಿಸಿದೆ. ಚುನಾವಣಾ ಆಯೋಗವು ಮತದಾನದ ದತ್ತಾಂಶವನ್ನು ಬಿಡುಗಡೆ ಮಾಡಿದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅರ್ಜಿದಾರರ ವಿರುದ್ಧ ಅವಲೋಕನಗಳನ್ನು ಮಾಡಿದೆ. ಆಯೋಗವು ತನ್ನ ಸ್ವಂತ ಸಂಸದೀಯ ಕ್ಷೇತ್ರವಾರು ಪೂರ್ಣಗೊಂಡ ಎಲ್ಲಾ ಹಂತಗಳಿಗೆ ಸಂಪೂರ್ಣ ಸಂಖ್ಯೆಯ ಮತದಾರರನ್ನು ಬಿಡುಗಡೆ ಮಾಡಿತು, ಇಲ್ಲದಿದ್ದರೆ ಮತದಾನದ ಶೇಕಡಾವಾರು ಪ್ರಮಾಣವನ್ನು ಒಟ್ಟು ಮತದಾರರಿಗೆ ಅನ್ವಯಿಸುವ ಮೂಲಕ ಎಲ್ಲಾ ಪಾಲುದಾರರು ಸ್ವತಃ ಗುರುತಿಸಬಹುದು. ಇವೆರಡೂ ಈಗಾಗಲೇ ಸಾರ್ವಜನಿಕ ವಲಯದಲ್ಲಿ ಲಭ್ಯವಿವೆ. ಏಪ್ರಿಲ್ 19 ರಂದು ಲೋಕಸಭಾ ಚುನಾವಣೆ ಪ್ರಾರಂಭವಾದಾಗಿನಿಂದ ಚುನಾವಣಾ ಮತದಾನದ ದತ್ತಾಂಶವನ್ನು ಬಿಡುಗಡೆ ಮಾಡಿದ್ದು, ನಿಖರ, ಸ್ಥಿರ ಮತ್ತು ಚುನಾವಣಾ ಕಾನೂನುಗಳಿಗೆ ಅನುಗುಣವಾಗಿದೆ ಮತ್ತು ಯಾವುದೇ ವ್ಯತ್ಯಾಸವಿಲ್ಲ ಎಂದು ಚುನಾವಣಾ…
ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಕಾನೂನು ಸುವ್ಯವಸ್ಥೆ ಹದಗೆಡುತ್ತಿದೆ. ಈ ಪರಿಣಾಮ ಹಲ್ಲೆ, ಹತ್ಯೆ, ಗ್ಯಾಂಗ್ ವಾರ್ ಗಳು ಹೆಚ್ಚಾಗುತ್ತಿವೆ. ಇದಕ್ಕೆ ರಾಜ್ಯ ಸರ್ಕಾರ ಪೊಲೀಸರನ್ನು ತಮ್ಮ ಕೈಗೊಂಬೆ ಮಾಡಿಕೊಂಡು ಆಟ ಆಡ್ತಿರೋದೇ ಆಗಿದೆ ಅಂತ ಕರ್ನಾಟಕ ಬಿಜೆಪಿ ವಾಗ್ಧಾಳಿ ನಡೆಸಿದೆ. ಇಂದು ಈ ಬಗ್ಗೆ ವೀಡಿಯೋ ಸಹಿತ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಕರ್ನಾಟಕ ಬಿಜೆಪಿಯು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದಿಂದಾಗಿ ಸಂಪೂರ್ಣವಾಗಿ ಕಾನೂನು ಸುವ್ಯವಸ್ಥೆ ಹದಗೆಟ್ಟು ಹೋಗಿದೆ. ಪರಿಣಾಮ ಅರಾಜಕತೆ ತಾಂಡವವಾಡುತ್ತಿದೆ ಅಂತ ಕಿಡಿಕಾರಿದೆ. ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರನ್ನು ಬಂಧಿಸುವುದಕ್ಕೆ ಹತ್ತಾರು ಪೊಲೀಸರನ್ನು ಸಿದ್ಧರಾಮಯ್ಯ ಸರ್ಕಾರ ಕಳುಹಿಸಿಕೊಡುತ್ತೆ. ಮತ್ತೊಂದೆಡೆ ಚೆನ್ನಗರಿ ಪೊಲೀಸ್ ಠಾಣೆ ಮೇಲೆ ದಾಳಿ ಮಾಡಿದ ಮತಾಂಧರ ಪರ ನಿಲ್ಲುತ್ತಾ ಪೊಲೀಸ್ ಅಧಿಕಾರಿಗಳನ್ನೇ ಅಮಾನತು ಮಾಡುತ್ತೆ ಅಂತ ಹೇಳಿದೆ. ಪೊಲೀಸರನ್ನು ತಮ್ಮ ಕೈಗೊಂಬೆ ಮಾಡಿಕೊಂಡು ಆಟ ಆಡಿಸುತ್ತಿರುವ ಪರಿಣಾಮ ಕಾನೂನು ಮತಾಂಧರ ತಾಳಕ್ಕೆ ಕುಣಿಯುತ್ತಿದೆ. ಹೀಗಾಗಿ ಯುವತಿಯರ ಮೇಲೆ ಅತ್ಯಾಚಾರ, ಕೊಲೆ, ಹಲ್ಲೆ, ನಡೆಯುತ್ತಿದೆ. ಭಯೋತ್ಫಾದನೆ,…
ಪುರಾಣಗಳ ಪ್ರಕಾರ ಮಹಾಲಕ್ಷ್ಮಿಯು ಕ್ಷೀರಸಾಗರದಲ್ಲಿ ಸಮುದ್ರ ಮಂತನದಲ್ಲಿ ಕಾಣಿಸಿಕೊಂಡಳು. ತಾಯಿ ಮಹಾಲಕ್ಷ್ಮಿ ಸಮುದ್ರದಿಂದ ಹೊರಹೊಮ್ಮಿದ್ದರಿಂದ ಸಮುದ್ರದಿಂದ ಸಿಗುವ ಉತ್ಪನ್ನಗಳೂ ಮಹಾಲಕ್ಷ್ಮಿಯ ಅಂಶದಿಂದ ತುಂಬಿವೆ ಎಂದು ಹೇಳಲಾಗುತ್ತದೆ. ಅಂತಹ ಲಭ್ಯವಿರುವ ವಸ್ತುವೆಂದರೆ ಕಲ್ಲು ಉಪ್ಪು. ಈ ಆಧ್ಯಾತ್ಮಿಕ ಪೋಸ್ಟ್ನಲ್ಲಿ, ನಾವು ನಮ್ಮ ಅಡುಗೆಮನೆಯಲ್ಲಿ ಕಲ್ಲು ಉಪ್ಪನ್ನು ಇಟ್ಟರೆ, ಹಣವು ಹೆಚ್ಚಾಗುತ್ತದೆ ಎಂದು ನಾವು ನೋಡುತ್ತೇವೆ . ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ…
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ರೈತರ ಪಾಲಿಗೆ ಸತ್ತು ಹೋಗಿದೆ ಎಂದು ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಅವರು ಟೀಕಿಸಿದರು. ನಗರದ ಬಿಜೆಪಿ ರಾಜ್ಯ ಕಚೇರಿ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕಳೆದ ಸುಮಾರು ಒಂದು ವರ್ಷದಿಂದ ಬರಗಾಲದಿಂದ ತತ್ತರಿಸಿ ಹೋದ ರೈತರಿಗೆ ಸಹಾಯ ಮಾಡಲು ಕೇಂದ್ರ ಸರಕಾರವು ಸಾವಿರಾರು ಕೋಟಿ ರೂ. ಬರಗಾಲದ ಪರಿಹಾರಧನ ಕೊಟ್ಟಿದೆ. ಆದರೂ, ದೇವರು ಕೊಟ್ಟರೂ ಕೂಡ ಪೂಜಾರಿ ಕೊಡಲು ತಯಾರಿಲ್ಲ ಎಂಬಂತೆ ಕೇಂದ್ರ ಸರಕಾರ, ನರೇಂದ್ರ ಮೋದಿಯವರು ಬರಗಾಲದ ಮೊತ್ತವನ್ನು ಕೊಟ್ಟಿದ್ದರೂ ಅದನ್ನು ಸುಮಾರು 2 ಲಕ್ಷಕ್ಕಿಂತ ಹೆಚ್ಚು ರೈತರ ಖಾತೆಗಳಿಗೆ ಇವತ್ತಿಗೂ ನೀಡಿಲ್ಲ. ಇದು ರೈತರ ಪಾಲಿಗೆ ಸತ್ತು ಹೋದ ಸರಕಾರದಂತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಬರಗಾಲದಿಂದ ಬೆಂದಿರುವ ರೈತರಿಗೆ ಅತ್ಯಂತ ಕಡಿಮೆ ದರದಲ್ಲಿ ಬಿತ್ತನೆ ಬೀಜವನ್ನು ವಿತರಿಸುವ ಕೆಲಸವನ್ನು ಈ ಸರಕಾರ ಮಾಡಬೇಕಿತ್ತು. ಆದರೆ, ಕಾಂಗ್ರೆಸ್ ಸರಕಾರವು ಬಿತ್ತನೆ ಬೀಜಕ್ಕೂ ಅತಿ ಹೆಚ್ಚು…
ಬೆಂಗಳೂರು: ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಾಂಗ್ರೆಸ್ ಸರಕಾರ ಕೊಟ್ಟ ಬೆಲೆ ಏನು ಎಂದು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ಪ್ರಶ್ನಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಿಪಕ್ಷ, ವಿಪಕ್ಷದ ನಾಯಕರು ಒಂದು ವಿಚಾರದಲ್ಲಿ ಸರಕಾರದ ಗಮನ ಸೆಳೆಯುವ ಕೆಲಸ ಮಾಡಿದ ತಕ್ಷಣ ಎಚ್ಚತ್ತುಕೊಳ್ಳಬೇಕು; ಅದನ್ನು ಪರಿಹರಿಸಬೇಕು. ಆದರೆ, ಈ ಸರಕಾರ ಅತ್ತ ಗಮನ ಕೊಟ್ಟಿಲ್ಲ ಎಂದು ತಿಳಿಸಿದರು. ಕಾನೂನು- ಸುವ್ಯವಸ್ಥೆ ತೀವ್ರವಾಗಿ ಹದಗೆಟ್ಟ ಕುರಿತು ತಿಂಗಳುಗಟ್ಟಲೆ ಕಾಲ ಬಿಜೆಪಿ ತಿಳಿಸಿದ್ದರೂ ಈ ಮಾನಗೇಡಿ ಸರಕಾರ ಎಚ್ಚತ್ತುಕೊಂಡಿಲ್ಲ; ಅದನ್ನು ಸರಿಪಡಿಸುವ ಕೆಲಸ ಮಾಡಿಲ್ಲ ಎಂದು ಟೀಕಿಸಿದರು. ಅತ್ಯಾಚಾರ, ಲವ್ ಜಿಹಾದ್ ವಿಚಾರದಲ್ಲಿ ಸರಕಾರ ಗಮನ ಕೊಡುತ್ತಿಲ್ಲ. ಕೊಲೆಗಳೂ ಹೆಚ್ಚಾಗಿವೆ. ನಿನ್ನೆ ಕಸ್ಟಡಿ ಸಾವು ಸಂಭವಿಸಿದೆ. ಯಾರಾದರೂ ಇವುಗಳ ಕುರಿತು ಪ್ರಶ್ನಿಸಿದರೆ ಎಲ್ರೀ ಹದಗೆಟ್ಟಿದೆ ಎಂದು ಉಡಾಫೆ ಮಾತನಾಡುತ್ತಾರೆ ಎಂದು ದೂರಿದರು. ಗುಲ್ಬರ್ಗಕ್ಕೆ ಪಿಎಚ್ಡಿ ಮಾಡಲೆಂದು ಹೋಗಿದ್ದ ದಲಿತ…
ದಕ್ಷಿಣ ಕನ್ನಡ: ಸಿಎಂ ಸಿದ್ಧರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಇಂದು ಧರ್ಮಸ್ಥಳಕ್ಕೆ ಭೇಟಿ ನೀಡಿ, ಮಂಜುನಾಥನ ದರ್ಶನ ಪಡೆದರು. ಇದೇ ಸಂದರ್ಭದಲ್ಲಿ ಧರ್ಮಸ್ಥಳದಲ್ಲಿ ಭಕ್ತರು ಜೈ ಶ್ರೀರಾಮ್ ಘೋಷಣೆ ಕೂಗಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಒಂದು ವರ್ಷ ತುಂಬಿದ ಹಿನ್ನಲೆಯಲ್ಲಿ ಇಂದು ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಧರ್ಮಸ್ಥಳಕ್ಕೆ ಭೇಟಿ ನೀಡಿದರು. ಮೈಸೂರಿನಿಂದ ವಿಶೇಷ ವಿಮಾನದ ಮೂಲಕ ಮಂಗಳೂರು ವಿಮಾನ ನಿಲ್ದಣಕ್ಕೆ ತಲುಪಿದ ಮೂವರು, ಅಲ್ಲಿಂದ ರಸ್ತೆ ಮಾರ್ಗದ ಮೂಲಕ ಧರ್ಮಸ್ಥಳಕ್ಕೆ ತೆರಳಿದರು. ಧರ್ಮಸ್ಥಳ ಪ್ರವೇಶಿಸುತ್ತಿದ್ದಂತೆ, ಪ್ರವೇಶ ದ್ವಾರದ ಬಳಿಯೇ ವಾದ್ಯ ಘೋಷಗಳಿಂದ ಅದ್ಧೂರಿ ಸ್ವಾಗತವನ್ನು ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಗೆ ದೊರೆಯಿತು. ಧರ್ಮಸ್ಥಳದಲ್ಲಿ ಮಂಜುನಾಥನ ದರ್ಶನವನ್ನು ಸಿಎಂ, ಡಿಸಿಎಂ ಪಡೆದರು. ಈ ವೇಳೆ ಪ್ರವೇಶ ದ್ವಾರದಲ್ಲೇ ನೆರೆದಿದ್ದಂತ ಭಕ್ತರು ಜೈ ಶ್ರೀರಾಮ್ ಎಂಬುದಾಗಿ ಘೋಷಣೆ ಕೂಗಿದರು. ಮಂಜುನಾಥ ಸ್ವಾಮಿಯ ದರ್ಶನದ ಬಳಿಕ ಧರ್ಮಾಧಿಕಾರಿ ವೀರೇಂದ್ರ ಹೆಗ್ಡೆ…
ದಾವಣೆಗೆರೆ: ಜಿಲ್ಲೆಯ ಚೆನ್ನಗಿರಿ ವಿಧಾನಸಭಾ ಕ್ಷೇತ್ರದಲ್ಲಿ ನೈರುತ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಅಭ್ಯರ್ಥಿ ಡಾ.ಕೆ.ಕೆ ಮಂಜುನಾಥ್ ಪರವಾಗಿ ಭರ್ಜರಿ ಒಲವು ಮೂಡಿದೆ. ಕ್ಷೇತ್ರದ ಶಿಕ್ಷಕರು ಡಾ.ಕೆ.ಕೆ ಮಂಜುನಾಥ್ ಗೆ ಬೆಂಬಲ ನೀಡೋದಾಗಿ ಘೋಷಿಸಿದ್ದಾರೆ. ದಾವಣಗೆರೆ ಜಿಲ್ಲೆಯ ಚೆನ್ನಗಿರಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಸಭೆ ನಡೆಯಿತು. ಈ ಸಭೆಯಲ್ಲಿ ನೈರುತ್ಯ ಪದವೀಧರ ಕ್ಷೇತ್ರದ ಆಯನೂರು ಮಂಜುನಾಥ್, ಶಿಕ್ಷಕರ ಕ್ಷೇತ್ರದ ಡಾ.ಕೆ.ಕೆ ಮಂಜುನಾಥ್ ಕುಮಾರ್ ಕೂಡ ಭಾಗಿಯಾಗಿದ್ದರು. ಚೆನ್ನಗಿರಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ವಿಧಾನ ಪರಿಷತ್ ಚುನಾವಣಾ ಅಭ್ಯರ್ಥಿಗಳ ಪರವಾಗಿ ಶಿಕ್ಷಕರು ಭಾರೀ ಒಲವು ತೋರಿದ್ದಾರೆ. ನೈರುತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಡಾ.ಕೆ.ಕೆ ಮಂಜುನಾಥ್ ಕುಮಾರ್ ಗೆ ಶಿಕ್ಷಕರು ಬೆಂಬಲ ಘೋಷಿಸಿರೋದಾಗಿ ತಿಳಿದು ಬಂದಿದೆ. ಚನ್ನಗಿರಿ ವಿಧಾನಸಭಾ ಕ್ಷೇತ್ರ ವಾಪ್ತಿಯ ಮುಖಂಡರ, ಚುನಾಯಿತ ಪ್ರತಿನಿಧಿಗಳ, ಪದವೀಧರ, ಶಿಕ್ಷಕರ ಮತ್ತು ಚಿಂತಕರ ಸಭೆಯಲ್ಲಿ ನೈರುತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾದ ಡಾ.ಕೆ.ಕೆ ಮಂಜುನಾಥ್ ಕುಮಾರ್ ರವರು ಭಾಗವಹಿಸಿದರು. https://kannadanewsnow.com/kannada/in-which-section-is-there-that-the-video-should-not-go-viral-hdk-hits-back-at-cm-siddaramaiah/ https://kannadanewsnow.com/kannada/gautam-gambhir-interested-in-replacing-rahul-dravid-as-indias-new-head-coach-report/
ಬೆಂಗಳೂರು: ನೊಂದ ಮಹಿಳೆಯರ ವಿಡಿಯೋಗಳನ್ನು ಜಾಲತಾಣಗಳಲ್ಲಿ ಹಂಚುವುದು ಮುಖ್ಯವಲ್ಲ. ಅದು ಅಪರಾಧವೂ ಅಲ್ಲ! ಅಶ್ಲೀಲ ವಿಡಿಯೋಗಳನ್ನು ವೈರಲ್ ಮಾಡಿದ್ದು ದೊಡ್ಡ ಅಪರಾಧ ಎನ್ನುವುದು ಯಾವ ಸೆಕ್ಷನ್ನಲ್ಲಿದೆ? ಅದನ್ನು ಯಾವ ಸೆಕ್ಷನ್ನಲ್ಲಿ ಉಲ್ಲೇಖಿಸಿದ್ದಾರೆ? ಕುಮಾರಸ್ವಾಮಿ ಪ್ರಕಾರ ಯಾವುದಾದರೂ ಹೊಸ ಸೆಕ್ಷನ್ ಇದ್ದರೆ ಹೇಳಲಿ ಎಂದು ಪ್ರಶ್ನಿಸಿದ್ದ ಸಿಎಂ ಸಿದ್ದರಾಮಯ್ಯ ಅವರಿಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸೆಕ್ಷನ್ ಗಳ ಸಮೇತ ತಿರುಗೇಟು ಕೊಟ್ಟಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು; ಸೆಕ್ಷನ್ ಗಳ ಮಾಹಿತಿಯುಳ್ಳ ಎಸ್ ಐಟಿ ಪತ್ರಿಕಾ ಹೇಳಿಕೆಯನ್ನು ಟ್ಯಾಗ್ ಮಾಡಿ ಸಿಎಂ ಕಾಲೆಳೆದಿದ್ದಾರೆ. ಸಿಎಂ ಕುರ್ಚಿಯಲ್ಲಿ ಊಸರವಳ್ಳಿ!! ಕ್ಷಣಕ್ಕೊಂದು ಮಾತು, ಘಳಿಗೆಗೊಂದು ಹೇಳಿಕೆ! ಕರ್ನಾಟಕದ ಮುಖ್ಯಮಂತ್ರಿ ಕುರ್ಚಿಯ ಮೇಲೆ ನೀವು ಕೂತಿದ್ದಿರೋ ಅಥವಾ ಊಸರವಳ್ಳಿ ಏನಾದರೂ ಕೂತಿದೆಯೋ? ನನಗಂತೂ ಅನುಮಾನ!! ಇಷ್ಟು ಬಣ್ಣಗೇಡಿ ವರ್ತನೆಯನ್ನು ನಿಮ್ಮಿಂದ ನಿರೀಕ್ಷೆ ಮಾಡಿರಲಿಲ್ಲ ನಾನು. ಅತೀವ ವಿಷಾದ ಮತ್ತು ನೋವಿನಿಂದಲೇ ಈ ಮಾತು ಹೇಳುತ್ತಿದ್ದೇನೆ ಸಿದ್ದರಾಮಯ್ಯನವರೇ ಎಂದು ಕುಮಾರಸ್ವಾಮಿ ಕೇಳಿದ್ದಾರೆ.…
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಿಂದ ( BMTC) ಸಂಪೂರ್ಣ ಸಮವಸ್ತ್ರ ಹಾಗೂ ಸಮರ್ಪಕವಾದ ಮಾರ್ಗಫಲಕ ಪ್ರದರ್ಶಿಸುವ ಚಾಲಕನಿರ್ವಾಹಕರ ಗೆ ಪ್ರಶಂಸನಾ ಪ್ರೊತ್ಸಾಹಿಸಲಾಗಿದೆ. ಬೆಂ.ಮ.ಸಾ.ಸಂಸ್ಥೆ ಪೂರ್ವ ವಲಯದ ವ್ಯಾಪ್ತಿಯಲ್ಲಿ ಒಟ್ಟು 8 ಘಟಕಗಳು ಕಾರ್ಯಾಚರಣೆಯಲ್ಲಿದ್ದು ದಿನಾಂಕ:25.05.24, ಶನಿವಾರದಂದು ಎಲ್ಲಾ ಘಟಕಗಳ ಅರ್ಹ ಚಾಲಕ ಮತ್ತು ನಿರ್ವಾಹಕರನ್ನು ಗುರುತಿಸಿ, ಪ್ರಶಂಸನಾ ಪತ್ರ ಮತ್ತು ನಗದು ಬಹುಮಾನಗಳನ್ನು ನೀಡಿ ಗೌರವಿಸಲಾಯಿತು. ಸಂಸ್ಥೆಯು ಜನವರಿ’2024 ತಿಂಗಳನ್ನು “ಸಂಪೂರ್ಣ ಸಮವಸ್ತ್ರ ಹಾಗೂ ಸಮರ್ಪಕವಾದ ಮಾರ್ಗಫಲಕ ಪ್ರದರ್ಶಿಸುವ” ಮಾಹೆ” ಯನ್ನಾಗಿ ಆಚರಿಸಿದ್ದು, ವಲಯದ ಸುಮಾರು 3000 ಚಾಲನಾ ಸಿಬ್ಬಂದಿಗಳಲ್ಲಿ ಉತ್ತಮ ಶಿಸ್ತು, ಹಾಜರಾತಿ, ಪ್ರಯಾಣಿಕರೊಂದಿಗೆ ಸೌಜನ್ಯಯುತ ವರ್ತನೆ ಹೊಂದಿ, ಸಂಪೂರ್ಣ ಸಮವಸ್ತ್ರ ಮತ್ತು ನಿಗದಿತ ಮಾರ್ಗಫಲಕಗಳನ್ನು ಪ್ರದರ್ಶಿಸಿ ಕರ್ತವ್ಯ ನಿರ್ವಹಿಸಿದ ಒಟ್ಟು 235 ಸಿಬ್ಬಂದಿಗಳನ್ನು ಆಯ್ಕೆ ಮಾಡಲಾಗಿರುತ್ತದೆ. ಪೂರ್ವ ವಲಯದ ಇಂದಿರಾನಗರ, ಕೋರಮಂಗಲ, ಎಲೆಕ್ಟ್ರಾನಿಕ್ಸ್ ಸಿಟಿ, ಚಂದಾಪುರ, ಹುಸ್ಕೂರು, ಗುಂಜೂರು, ಸರ್ಜಾಪುರ ರಸ್ತೆ ಮತ್ತು ಹೂಡಿ ಘಟಕಗಳಲ್ಲಿ ಸರಳವಾದ ಕಾರ್ಯಕ್ರಮಗಳನ್ನು ಆಯೋಜಿಸಲಾಗಿರುತ್ತು. ವಲಯದ ವಿಭಾಗೀಯ ನಿಯಂತ್ರಣಾಧಿಕಾರಿ ಶ್ರೀನಾಥ್, ವಿಭಾಗೀಯ…













