Author: kannadanewsnow09

ಬೆಂಗಳೂರು: ಹಲವು ಪ್ರಖ್ಯಾತಿಗೆ ಪಾತ್ರವಾಗಿರುವ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯು ಮತ್ತೊಂದು ಸಾಧನೆ ಮಾಡಿದೆ. 14-ವರ್ಷದ ರೋಗಿಯೊಬ್ಬರಿಗೆ ಮೊದಲ ಪೀಡಿಯಾಟ್ರಿಕ್ ಮ್ಯಾಚಡ್ ಸಿಬ್ಲಿಂಗ್ ಡೋನರ್ ಅಲೋಜೆನಿಕ್ ಬೋನ್ ಮ್ಯಾರೊ ಟ್ರಾನ್ಸ್ ಪ್ಲಾಂಟ್ (ಬಿಎಂಟಿ) (ಅಸ್ತಿಮಜ್ಜೆ ಕಸಿ) ಚಿಕಿತ್ಸೆಯನ್ನು ಯಶಸ್ವಿಗೊಳಿಸುವ ಮೂಲಕ ರಾಜ್ಯ ಕಿದ್ವಾಯಿ ಆಸ್ಪತ್ರೆ ಹೊಸ ಮೈಲಿಗಲ್ಲು ಸೃಷ್ಟಿಸಿದೆ. ಅಲ್ಲದೇ ಬಡ ರೋಗಿಯ ಬದುಕಿಗೆ ಬೆಳಕಾದಂತೆ ಆಗಿದೆ. ಅಕ್ಯೂಟ್ ಮೈಲೋಯ್ಡ್ ಲ್ಯುಕೇಮಿಯಾ (ರಕ್ತದ ಕ್ಯಾನ್ಸರ್ ಪ್ರಕಾರ) ದಿಂದ ಬಳಲುತ್ತಿದ್ದ 14-ವರ್ಷದ ಅರ್ಚನಾ (ಹೆಸರು ಬದಲಾಯಿಸಲಾಗಿದೆ) ಎರಡು ತಿಂಗಳ ಹಿಂದೆ ನಗರದಲ್ಲಿರುವ ಕಿದ್ವಾಯಿ ಆಸ್ಪತ್ರೆಗೆ ದಾಖಲಾಗಿದ್ದರು. ರೋಗದ ಕ್ಯಾನ್ಸರ್ ವಕ್ರೀಕಾರಕವಾಗಿತ್ತು, ಅಂದರೆ ಇದು ಸಾಂಪ್ರದಾಯಿಕ ಕೀಮೋಥೆರಪಿಗೆ ನಿರೋಧಕವಾಗಿತ್ತು. ಬಿಎಂಟಿ ಮಕ್ಕಳ ವಿಭಾಗದ ವೈದ್ಯೆ ಡಾ ವಸುಂಧರಾ ಕೈಲಾಸನಾಥ್ ಹಾಗೂ ಅವರ ತಂಡವು ರೋಗಿಯ ಕಿರಿಯ ಸಹೋದರನ ಕಾಂಡಕೋಶಗಳನ್ನು ಬಳಸಿಕೊಂಡು ಅಲೋಜೆನಿಕ್ ನಂತರ ಹೆಚ್ಚಿನ ಪ್ರಮಾಣದ ಕೀಮೋಥೆರಪಿಯೊಂದಿಗೆ ಚಿಕಿತ್ಸೆ ನೀಡಲು ನಿರ್ಧರಿಸಿತು. ಆಕೆಯ ಕಿರಿಯ ಸಹೋದರ ಸಂಪೂರ್ಣ ಆನುವಂಶಿಕ ಹೊಂದಾಣಿಕೆ 12/12 ಎಚ್‌ಎಲ್‌ಎ ಹೊಂದಾಣಿಕೆಯಾಗಿದ್ದರಿಂದ…

Read More

ಬೆಂಗಳೂರು : ವನ್ಯಜೀವಿ ವಿಭಾಗಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮುಂಚೂಣಿ ಸಿಬ್ಬಂದಿಗಳಿಗೆ ಕಠಿಣ ಕೆಲಸದ ಭತ್ಯೆ (ಹಾರ್ಡ್ ಶಿಪ್ ಅಲೋಯನ್ಸ್)ಯನ್ನು ಮಂಜೂರು ಮಾಡಿದ್ದು, ಈ ಸಿಬ್ಬಂದಿಯ ಬಹು ದಿನಗಳ ಬೇಡಿಕೆ ಈಡೇರಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ವಲಯ ಅರಣ್ಯಾಧಿಕಾರಿ ಮತ್ತು ಉಪ ವಲಯ ಅರಣ್ಯಾಧಿಕಾರಿಗಳಿಗೆ ತಲಾ 3500, ಅರಣ್ಯ ರಕ್ಷಕರಿಗೆ 2700 ಹಾಗೂ ಡಿ ದರ್ಜೆ ನೌಕರರಿಗೆ 2000 ರೂ.ಗಳನ್ನು ಮಾಸಿಕ ನೀಡಲು ತೀರ್ಮಾನಿಸಿ ಆದೇಶ ಹೊರಡಿಸಲಾಗಿದೆ ಎಂದು ಅರಣ್ಯ ಸಚಿವರು ತಿಳಿಸಿದ್ದಾರೆ. ರಾಜ್ಯದ ಚಿಕ್ಕಮಗಳೂರು, ಹಾಸನ, ಮೈಸೂರು, ಕೊಡಗು, ಚಾಮರಾಜನಗರ, ರಾಮನಗರ, ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನ ಹಾಗೂ ಬಂಡೀಪುರ ವ್ಯಾಪ್ತಿಯಲ್ಲಿ ಆನೆ ಹಾವಳಿ ಹೆಚ್ಚಾಗಿದ್ದು, ಇದರ ನಿಗ್ರಹಕ್ಕಾಗಿ ಆನೆ ಕಾರ್ಯಪಡೆ ರಚಿಸಲಾಗಿದ್ದು, ಇದರಲ್ಲಿ ಕಾರ್ಯ ನಿರ್ವಹಿಸುವ ಹೊರಗುತ್ತಿಗೆ ಸಿಬ್ಬಂದಿಯೂ ಸೇರಿದಂತೆ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಮಾಸಿಕ ಕರ್ತವ್ಯ ನಿರ್ವಹಿಸಿದ 6 ದಿನಗಳಿಗೆ 500 ರೂ. ಆಧಾರದಲ್ಲಿ ತಿಂಗಳಿಗೆ ಗರಿಷ್ಠ 2000 ರೂ.…

Read More

ಶಿವಮೊಗ್ಗ: ಶಿವಮೊಗ್ಗ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯು 2024-25ನೇ ಸಾಲಿನ ಜಿಲ್ಲಾ ವಲಯ ಯೋಜನೆಯಡಿ ಬಂಡಾವಳ ಹೂಡಿಕೆ ಸಹಾಯಧನ, ತರಬೇತಿ ಹಾಗೂ ತರಬೇತಿ ಪಡೆದ ಫಲಾನುಭವಿಗಳಿಗೆ ಸುಧಾರಿತ ಉಪಕರಣ ವಿತರಣೆ, ವೃತ್ತಿಪರ/ವೃತ್ತಿ ನಿರತ ಕುಶಲಕರ್ಮಿಗಳಿಗೆ ಉಚಿತವಾಗಿ ಸುಧಾರಿತ ಸಲಕರಣೆ ಸರಬರಾಜು ಮತ್ತು ಬಡ್ಡಿ ಸಹಾಯಧನ ಸೌಲಭ್ಯ ನೀಡಲು ಆಸಕ್ತ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. ಆಸಕ್ತರು ಇಲಾಖೆಯ https://shimoga.nic.in ಪೊರ್ಟಲ್ ಮೂಲಕ ದಿ: 30/08/2024 ರೊಳಗಾಗಿ ಸೂಕ್ತ ದಾಖಲೆಗಳೊಂದಿಗೆ ಸಲ್ಲಿಸುವಂತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂ.ಸಂ.: 08182-223376, ಶಿವಮೊಗ್ಗ, ಭದ್ರಾವತಿ ಮತ್ತು ತೀರ್ಥಹಳ್ಳಿ ಕೈಗಾರಿಕಾ ವಿಸ್ತರಣಾಧಿಕಾರಿ ದೂ.ಸಂ.: 9380561275, ಸೊರಬ, ಶಿಕಾರಿಪುರ, ಹೊಸನಗರ ಕೈಗಾರಿಕಾ ವಿಸ್ತರಣಾಧಿಕಾರಿ ದೂ.ಸಂ.: 9481743640 ಹಾಗೂ ಸಾಗರ ಕೈಗಾರಿಕಾ ವಿಸ್ತರಣಾಧಿಕಾರಿ ದೂ.ಸಂ.: 9448401714 ಇವರುಗಳನ್ನು ಸಂಪರ್ಕಿಸುವುದು. https://kannadanewsnow.com/kannada/tushar-girinath-warns-of-fir-if-unauthorised-flexes-banners-are-installed-in-bbmp-limits/ https://kannadanewsnow.com/kannada/breaking-hc-asks-baba-ramdev-to-withdraw-cure-statement-of-coronil-for-covid-19/

Read More

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಫ್ಲೆಕ್ಸ್/ಬ್ಯಾನರ್ ಅಳವಡಿಸುವವರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಮುಖ್ಯ ಆಯುಕ್ತರಾದ  ತುಷಾರ್ ಗಿರಿ ನಾಥ್ ರವರು ಎಲ್ಲಾ ವಲಯ ಆಯುಕ್ತರಿಗೆ ಸೂಚನೆ ನೀಡಿದರು. ಬಿಬಿಎಂಪಿ ವ್ಯಾಪ್ತಿಯ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಪಾಲಿಕೆ ಕೇಂದ್ರ ಕಛೇರಿಯಲ್ಲಿ ಇಂದು ನಡೆದ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಫ್ಲೆಕ್ಸ್/ಬ್ಯಾನರ್ ಗಳನ್ನು ಅಳವಡಿಸುತ್ತಿದ್ದು, ಅದನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಬೇಕಿದೆ. ಈ ನಿಟ್ಟಿನಲ್ಲಿ ಆಯಾ ವಲಯ ವ್ಯಾಪ್ತಿಯಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡು ಎಲ್ಲಿಯೂ ಅನಧಿಕೃತ ಜಾಹೀರಾತುಗಳನ್ನು ಅಳವಡಿಸದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು. ಅನಧಿಕೃತವಾಗಿ ಅಳವಡಿಸುತ್ತಿರುವ ಫ್ಲೆಕ್ಸ್/ಬ್ಯಾನರ್ ಗಳನ್ನು ಪಾಲಿಕೆಯಿಂದ ತೆರವುಗೊಳಿಸಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿ ಎಫ್.ಐ.ಆರ್ ದಾಖಲಿಸಲಾಗುತ್ತಿದೆ. ಆದರೂ ಸಾರ್ವಜನಿಕ ಸ್ಥಳ, ರಸ್ತೆ ಬದಿ ಫ್ಲೆಕ್ಸ್ ಅಳವಡಿಸುವುದು ಮಾತ್ರ ನಿಯಂತ್ರಣವಾಗುತ್ತಿಲ್ಲ. ಆದ್ದರಿಂದ ಪಾಲಿಕೆ ಹಾಗೂ ಪೊಲೀಸ್ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿ ಅನಧಿಕೃತ ಜಾಹೀರಾತು ಅಳವಡಿಕೆಗೆ ನಿಯಂತ್ರಣ ತರಬೇಕೆಂದು ಅಧಿಕಾರಿಗಳಿಗೆ ತಿಳಿಸಿದರು. ವಲಯವಾರು ಬರುವ ಫ್ರಿಂಟಿಂಗ್ ಯುನಿಟ್ಸ್…

Read More

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣ ಸಂಬಂಧ ಸಿಬಿಐ ಕೇಸಲ್ಲಿ ದೆಹಲಿ ಸಿಎಂ ಅರವಿದ್ ಕೇಜ್ರಿವಾಲ್ ಜಾಮೀನು ಕೋರಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದಂತ ನ್ಯಾಯಾಲಯವು ತೀರ್ಪು ಕಾಯ್ದಿರಿಸಿದೆ. ಹೀಗಾಗಿ ಇಂದು ಕೂಡ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ರಿಲೀಫ್ ಸಿಕ್ಕಿಲ್ಲ. ದೆಹಲಿ ಅಬಕಾರಿ ನೀತಿ ‘ಹಗರಣ’ಕ್ಕೆ ಸಂಬಂಧಿಸಿದ ಸಿಬಿಐ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಜಾಮೀನು ಅರ್ಜಿಯ ತೀರ್ಪನ್ನು ದೆಹಲಿ ಹೈಕೋರ್ಟ್ ಸೋಮವಾರ ಕಾಯ್ದಿರಿಸಿದೆ. ಇದಕ್ಕೂ ಮುನ್ನ ಸಿಬಿಐ ಈ ಪ್ರಕರಣದಲ್ಲಿ ತನ್ನ ಅಂತಿಮ ಚಾರ್ಜ್ಶೀಟ್ ಸಲ್ಲಿಸಿತ್ತು. https://kannadanewsnow.com/kannada/cm-siddaramaiah-pays-tribute-to-krs-in-ashada/ https://kannadanewsnow.com/kannada/breaking-hc-asks-baba-ramdev-to-withdraw-cure-statement-of-coronil-for-covid-19/

Read More

ಮಂಡ್ಯ: ಬಹುತೇಕ ಶುಭ ಕಾರ್ಯಗಳನ್ನು ಪ್ರಾರಂಭಿಸೋದು, ಅಣಿಯಾಗೋದು ಆಷಾಡ ಮುಗಿದ ಮೇಲೆಯೇ ಆಗಿದೆ. ಆದರೇ ಸಿಎಂ ಸಿದ್ಧರಾಮಯ್ಯ ಆಷಾಡದಲ್ಲೂ ಕೆ ಆರ್ ಎಸ್ ಡ್ಯಾಂಗೆ ಬಾಗಿನ ಅರ್ಪಿಸುವ ಮೂಲಕ ಸಂಪ್ರದಾಯವನ್ನು ಮುರಿದಿದ್ದಾರೆ. ಇದಷ್ಟೇ ಅಲ್ಲದೇ ಇದೇ ಮೊದಲ ಬಾರಿಗೆ ಬಾಗಿನ ಅರ್ಪಿಸಿದ ಬಳಿಕ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಬರ್ಜರಿ ಬಾಡೂಟದ ವ್ಯವಸ್ಥೆ ಮಾಡಿ, ಸಂಪ್ರದಾಯಕ್ಕೂ ತಿಲಾಂಜಲಿ ಇಟ್ಟಿದ್ದಾರೆ. ಇಂದು ಮಂಡ್ಯ ಜಿಲ್ಲೆಯ ಕೆ ಆರ್ ಎಸ್ ಜಲಾಶಯ ಭರ್ತಿಯಾದ ಹಿನ್ನಲೆಯಲ್ಲಿ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಬಾಗಿನ ಅರ್ಪಿಸಿದರು. ಆದರೇ ಸಂಪ್ರದಾಯ ಮುರಿಯುವಂತೆ ಆಷಾಡದಲ್ಲಿ ಬಾಗಿನ ಅರ್ಪಿಸಿದ್ದು ವಿಶೇಷವಾಗಿತ್ತು. ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್, ಸಚಿವರು ಕಾವೇರಿಗೆ ಬಾಗಿನ ಅರ್ಪಿಸಿದ ಬಳಿಕ ಅತ್ತ ತೆರಳುತ್ತಲೇ ಕಾವೇರಿ ನಿರಾವರಿ ನಿಗಮದ ಅಧಿಕಾರಿಗಳ ಯಡವಟ್ಟೋ ಅಥವಾ ಸಂಪ್ರದಾಯ ಮುರಿಯುವಂತೆಯೋ, ಅಧಿಕಾರಿಗಳಿಗೆ ಭರ್ಜರಿ ಬಾಡೂಟದ ವ್ಯವಸ್ಥೆ ಮಾಡಲಾಗಿತ್ತು. ಕೆ ಆರ್ ಎಸ್ ನ ಖಾಸಗೀ ಹೋಟೆಲ್ ನಲ್ಲಿ ಕಾವೇರಿ ನೀರಾವರಿ…

Read More

ನವದೆಹಲಿ: 2025 ರ ಪುರುಷರ ಏಷ್ಯಾ ಕಪ್  ( Men’s Asia Cup in 2025 ) ಆವೃತ್ತಿಗೆ ಭಾರತ ಆತಿಥ್ಯ ವಹಿಸಲಿದೆ ಎಂದು ಏಷ್ಯನ್ ಕ್ರಿಕೆಟ್ ಕೌನ್ಸಿಲ್ (Asian Cricket Council -ACC)  ದೃಢಪಡಿಸಿದೆ. ಮಹಿಳಾ ಏಷ್ಯಾ ಕಪ್ 2024 ರ ಫೈನಲ್ಗೆ ಒಂದು ದಿನ ಮುಂಚಿತವಾಗಿ ಜುಲೈ 27 ರ ಶನಿವಾರ ಎಸಿಸಿ ಆಸಕ್ತಿಗಳ ಅಭಿವ್ಯಕ್ತಿಗಾಗಿ ಆಹ್ವಾನ (ಐಇಒಐ) ದಾಖಲೆಯನ್ನು ಬಿಡುಗಡೆ ಮಾಡಿದ ನಂತರ ಈ ಸುದ್ದಿಯನ್ನು ದೃಢಪಡಿಸಲಾಗಿದೆ. 2024 ರಿಂದ 2027 ರ ಅವಧಿಗೆ ಎಸಿಸಿ ಪ್ರಾಯೋಜಕತ್ವ ಹಕ್ಕುಗಳಿಗಾಗಿ ತಮ್ಮ ಐಇಒಐ ಸಲ್ಲಿಸಲು ಆಸಕ್ತ ಪಕ್ಷಗಳನ್ನು ಡಾಕ್ಯುಮೆಂಟ್ ಆಹ್ವಾನಿಸಿದೆ. “ಕೆಳಗೆ ನೀಡಲಾದ ಎಸಿಸಿ ಪಂದ್ಯಾವಳಿಗಳಿಗೆ ಸಂಬಂಧಿಸಿದಂತೆ ವೇಳಾಪಟ್ಟಿಗಳು, ದಿನಾಂಕಗಳು, ವರ್ಷಗಳು, ಸ್ವರೂಪಗಳು ಮತ್ತು / ಅಥವಾ ಸ್ಥಳಗಳು ಸೇರಿದಂತೆ ಆದರೆ ಸೀಮಿತವಾಗಿಲ್ಲದ ವಿವರಗಳು ತಾತ್ಕಾಲಿಕವಾಗಿವೆ ಮತ್ತು ಎಸಿಸಿಯ ಸಂಪೂರ್ಣ ವಿವೇಚನೆಯ ಮೇರೆಗೆ ಮತ್ತು ಎಸಿಸಿಗೆ ಯಾವುದೇ ಹೊಣೆಗಾರಿಕೆಯಿಲ್ಲದೆ ಯಾವುದೇ ಸಮಯದಲ್ಲಿ ಬದಲಾವಣೆಗೆ ಒಳಪಟ್ಟಿರಬಹುದು” ಎಂದು ಡಾಕ್ಯುಮೆಂಟ್ ಹೇಳಿದೆ.…

Read More

ಬೆಂಗಳೂರು: ವಿಪಕ್ಷಗಳಿಗೆ ಗೊಡ್ಡು ಬೆದರಿಕೆ ಹಾಕುವ ಮೂಲಕ ನಮ್ಮ ಹೋರಾಟವನ್ನು, ಪಾದಯಾತ್ರೆಯನ್ನು ಹತ್ತಿಕ್ಕಲು ಸಾಧ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಸವಾಲು ಹಾಕಿದರು. ನಗರದಲ್ಲಿ ಇಂದು ನಡೆದ ಮೈಸೂರು ಪಾದಯಾತ್ರೆಯ ಪೂರ್ವ ತಯಾರಿ ಸಭೆಯ ಸಂದರ್ಭದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರೇ, ಉಪ ಮುಖ್ಯಮಂತ್ರಿ ಶಿವಕುಮಾರರೇ ನಿಮ್ಮ ಗೊಡ್ಡು ಬೆದರಿಕೆಗೆ ನಮ್ಮ ಕಾರ್ಯಕರ್ತರು ಅಂಜುವುದಿಲ್ಲ ಎಂದು ಎಚ್ಚರಿಕೆ ನೀಡಿದರು. ಇಡೀ ರಾಜ್ಯದ ಪರಿಶಿಷ್ಟ ಜಾತಿ, ಪಂಗಡಗಳ ಪರವಾಗಿ ನಮ್ಮ ಹೋರಾಟ ನಿರಂತರವಾಗಿ ಇರಲಿದೆ. ಪರಿಶಿಷ್ಟರ ಸಮುದಾಯದ ಹಣ ಲೂಟಿ ಮಾಡಿದ್ದಾರೆ. ಸಾವಿರಾರು ಕೋಟಿಯ ಭ್ರಷ್ಟಾಚಾರ ನಡೆಸಿದ್ದಾರೆ. ಇವುಗಳ ವಿರುದ್ಧ ಹೋರಾಟ ನಡೆಸದೆ ಇದ್ದರೆ ಭಗವಂತನೂ ನಮ್ಮನ್ನು ಕ್ಷಮಿಸುವುದಿಲ್ಲ ಎಂದು ನುಡಿದರು. ವಾಲ್ಮೀಕಿ ನಿಗಮದ ನೂರಾರು ಕೋಟಿ ಹಣವನ್ನು ಅಸ್ತಿತ್ವದಲ್ಲೇ ಇಲ್ಲದ ಕಂಪೆನಿಗಳ ಖಾತೆಗಳಿಗೆ ವರ್ಗಾಯಿಸಲಾಗಿತ್ತು. ಪರಿಶಿಷ್ಟ ಪಂಗಡಗಳಿಗೆ ಸೇರಿದ ಈ ಹಣವನ್ನು ಬಳಿಕ ಅದನ್ನು ಲೋಕಸಭಾ ಚುನಾವಣೆಯಲ್ಲಿ ದುರ್ಬಳಕೆ ಮಾಡಿದ್ದರು. ಹೆಂಡ ಖರೀದಿಯೂ ಮಾಡಿದ್ದನ್ನು ಇ.ಡಿ.…

Read More

ಮಂಡ್ಯ : “ಈ ಬಾರಿ ಉತ್ತಮ ಮಳೆಯಾಗಿರುವ ಪರಿಣಾಮ ಈಗಾಗಲೇ ತಮಿಳುನಾಡಿಗೆ 84 ಟಿಎಂಸಿಯಷ್ಟು ನೀರು ತಲುಪಿದೆ. ಮುಂದಿನ 10 ವರ್ಷವೂ ಬಾಗಿನ ಅರ್ಪಿಸುವಂತಹ ಆಶೀರ್ವಾದವನ್ನು ಕಾವೇರಿ ತಾಯಿ ನಮ್ಮ ಸರ್ಕಾರಕ್ಕೆ ಮಾಡುತ್ತಾಳೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹರ್ಷ ವ್ಯಕ್ತಪಡಿಸಿದರು. ಕೆಆರ್ ಎಸ್ ಅಣೆಕಟ್ಟಿಗೆ ಬಾಗಿನ ಸಮರ್ಪಿಸಿದ ನಂತರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು “ಜುಲೈ ತಿಂಗಳಿನಲ್ಲಿ ಪ್ರತಿ ದಿನ 1 ಟಿಎಂಸಿಯಂತೆ ತಮಿಳುನಾಡಿಗೆ 40 ಟಿಎಂಸಿ ನೀರು ಹರಿಸಬೇಕಿತ್ತು. ಅದಕ್ಕಿಂತ ಹೆಚ್ಚಿನ ನೀರು ಹರಿದು ತಾಯಿ ಕಾವೇರಿ ನೆಮ್ಮದಿ ಶಾಂತಿ ತಂದಿದ್ದಾಳೆ” ಎಂದು ಹೇಳಿದರು. “ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಹೆಚ್ಚಿನ ಪ್ರಯೋಜನವಿದೆ. ಸಂಕಷ್ಟ ಕಾಲದಲ್ಲಿ ಅವರ ಪಾಲಿನ 177 ಟಿಎಂಸಿ ನೀರನ್ನು ಅವರಿಗೆ ಹರಿಸಬಹುದು. ಸುಮಾರು 400 ಮೆ.ವ್ಯಾ ವಿದ್ಯುತ್ ತಯಾರಿಸಬಹುದು. ಈ ಅಣೆಕಟ್ಟು ಕಟ್ಟಲು ನ್ಯಾಯಲಯ ಅನುವು ಮಾಡಿಕೊಡುತ್ತದೆ ಎಂದು ನಂಬಿದ್ದೇವೆ. ತಮಿಳುನಾಡಿನ ಜನತೆಗೆ ಭಗವಂತನ ಕೃಪೆಯಿಂದ ಜ್ಞಾನೋದಯವಾಗುತ್ತದೆ. ನಮ್ಮ ಕಾಲದಲ್ಲಿ ಅಣೆಕಟ್ಟು ನಿರ್ಮಾಣಕ್ಕೆ ಅನುವು ಮಾಡಿಕೊಡುತ್ತಾರೆ ಎಂದು…

Read More

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ಜೈಲು ಪಾಲಾಗಿದ್ದಾರೆ. ಜೈಲಿನಲ್ಲಿ ಇರುವಂತ ಅವರು ಮನೆ ಊಟಕ್ಕೆ ಅನುಮತಿ ನೀಡುವಂತೆ ಕೋರಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇಂತಹ ಅರ್ಜಿಯನ್ನು ಇಂದು ವಾಪಾಸ್ ಪಡೆದಿದ್ದಾರೆ. ನಟ ದರ್ಶನ್ ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೊಲೆ ಕೇಸಲ್ಲಿ ಇದ್ದಾರೆ. ತಮ್ಮ ಪರ ವಕೀಲರ ಮೂಲಕ ಜೈಲು ಊಟ ಬೇಡ, ಮನೆಯೂಟಕ್ಕೆ ಅವಕಾಶ ಮಾಡಿಕೊಡುವಂತೆ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದ್ದಂತ ಕೋರ್ಟ್ ಮನೆ ಊಟಕ್ಕೆ ಅನುಮತಿಸುವುದಕ್ಕೆ ನಿರಾಕರಿಸಿ, ಅರ್ಜಿ ವಜಾಗೊಳಿಸಿತ್ತು. ಈ ಹಿನ್ನಲೆಯಲ್ಲಿ ಮತ್ತೆ ಮೇಲ್ಮನವಿಯನ್ನು ಕೋರ್ಟ್ ಗೆ ಸಲ್ಲಿಸಲಾಗಿತ್ತು. ಆದ್ರೇ ಇಂದು ತಾಂತ್ರಿಕ ಕಾರಣದಿಂದಾಗಿ ನಟ ದರ್ಶನ್ ಪರ ವಕೀಲ ಅರುಣ್ ಅವರು ಮನೆ ಊಟ ಕೋರಿ ಸಲ್ಲಿಸಲಾಗಿದ್ದಂತ ಅರ್ಜಿಯನ್ನು ವಾಪಾಸ್ ಪಡೆದಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/do-you-know-how-simple-cm-siddaramaiah-is-read-this-news/ https://kannadanewsnow.com/kannada/breaking-hc-asks-baba-ramdev-to-withdraw-cure-statement-of-coronil-for-covid-19/

Read More