Subscribe to Updates
Get the latest creative news from FooBar about art, design and business.
Author: kannadanewsnow09
ಶಿವಮೊಗ್ಗ: ಜಿಲ್ಲೆಯ ಹೊಸನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರಾಗಿ ನಿಟ್ಟೂರು ಗ್ರಾಮ ಪಂಚಾಯ್ತಿ ಸದಸ್ಯ, ಯುವ ಮುಖಂಡ ನಾಗೋಡಿ ವಿಶ್ವನಾಥ್ ಅವರನ್ನು ನೇಮಕ ಮಾಡಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ( KPCC) ಆದೇಶಿಸಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಬ್ಲಾಕ್ ಕಾಂಗ್ರೆಸ್ ಸಮಿತಿಗೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆದೇಶಿಸಿದ್ದಾರೆ. ಶಾಸಕ ಗೋಪಾಲಕೃಷ್ಣ ಬೇಳೂರು ಅವರ ಶಿಫಾರಸ್ಸಿನ ಮೇರೆಗೆ ಹೊಸನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರನ್ನಾಗಿ ನಾಗೋಡಿ ವಿಶ್ವನಾಥ್ ಅವರನ್ನು ನೇಮಿಸಿ ಅಧಿಕೃತ ಆದೇಶ ಮಾಡಲಾಗಿದೆ. ಹೊಸನಗರ ಯುವ ಸಂಘಟಕನಿಗೆ ಒಲಿದ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಸ್ಥಾನ ವಿದ್ಯಾರ್ಥಿ ದೆಸೆಯಿಂದಲೂ ನಿಟ್ಟೂರು ಭಾಗದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಗುರ್ತಿಸಿಕೊಂಡಿದ್ದವರು ನಾಗೋಡಿ ವಿಶ್ವನಾಥ್. ಕಾಂಗ್ರೆಸ್ ಪಕ್ಷ ಸಂಘಟನೆಯಲ್ಲಿ ತಮ್ಮ ಕಾಲೇಜು ದಿನಗಳಿಂದಲೇ ತೊಡಗಿಸಿಕೊಂಡಿದ್ದರು. ಕಾಂಗ್ರೆಸ್ ಹಿರಿಯ ಮುಖಂಡ ಕಾಗೋಡು ತಿಮ್ಮಪ್ಪ, ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರ ಅನುಯಾಯಿಯಾಗಿ, ಶಾಸಕ ಬೇಳೂರು ಗೋಪಾಲಕೃಷ್ಣ ಅವರ ಅಭಿಮಾನಿಯಾಗಿ, ಕಲಗೋಡು…
ಒಂದು ಮಂತ್ರ ಸಾಕು ಸಾಲ ತೀರುತ್ತೆ. ಈ ಮಂತ್ರ ಹೇಳಿದರೆ ಮೂವತ್ತು ದಿನಗಳಲ್ಲಿ ಸಾಲ ತೀರುತ್ತೆ ಅನ್ನೋ ಕುತೂಹಲಕಾರಿ ಮತ್ತು ರಹಸ್ಯ ಮಾಹಿತಿಯನ್ನು ಇಲ್ಲಿ ನಾವು ನಿಮಗೆ ತಿಳಿಸಿಕೊಡುತ್ತೇವೆ. ಕಾಲಭೈರವ ಅಂದ್ರೆ ಶಿವನ ಸ್ವರೂಪ. 64 ಭೈರವ ರೂಪದಲ್ಲಿ ಕಾಲಭೈರವನೇ ಪ್ರಮುಖವಾದವನು. ಕಾಲ ಅಂದ್ರೆ ಸಮಯವನ್ನು ಸೂಚಿಸುವವನು ಎಂದರ್ಥ. ಭೈರವನ ಪೂಜೆ ಮಾಡೋದ್ರಿಂದ ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ…
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಲ್ಪಸಂಖ್ಯಾತರ ಓಲೈಕೆಯಲ್ಲಿ ನಿಂತಿದೆ. ಒಂದು ಕಡೆ ಓಲೈಕೆ ಮತ್ತೊಂದು ಕಡೆ ಅಲ್ಪಸಂಖ್ಯಾತರನ್ನು ಕಂಡರೆ ಭಯ ಹೆಚ್ಚಾಗಿ ರಣಹೇಡಿತನವನ್ನು ಕಾಂಗ್ರೆಸ್ ಸರ್ಕಾರ ಪ್ರದರ್ಶಿಸುತ್ತಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಟೀಕಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅಲ್ಪಸಂಖ್ಯಾತರ ಓಲೈಕೆಗಿಂತ ಹೆಚ್ಚು ಇವರಿಗೆ ಭಯ ಪ್ರಾರಂಭವಾಗಿದೆ. ಏಕೆಂದರೆ ಅಲ್ಪಸಂಖ್ಯಾತರನ್ನು ನಿಯಂತ್ರಣ ಮಾಡುವ ಶಕ್ತಿ ಈ ಸರ್ಕಾರಕ್ಕೆ ಇಲ್ಲ. ಆದ್ದರಿಂದ ರಾಜ್ಯ ಸರ್ಕಾರ ಗಣೇಶೋತ್ಸವಗಳನ್ನು ಮಾಡುವುದಕ್ಕೆ ಅವಕಾಶಕೊಡದೆ ದೊಡ್ಡ ದೊಡ್ಡ ರಾದ್ಧಾಂತಗಳನ್ನು ಸೃಷ್ಟಿ ಮಾಡುತ್ತಿದೆ ಎಂದು ದೂರಿದರು. ಹಿಂದಿನ ಪದ್ಧತಿಗಳಂತೆ ಗಣೇಶೋತ್ಸವಗಳು ಯಾವಾÀಗಲೂ ನಡೆದುಕೊಂಡು ಬರುತ್ತಿದೆ. ಎಂದೂ ಗಲಾಟೆಗಳು ಆಗಿರಲಿಲ್ಲ. ಸರ್ಕಾರ ಮತಬ್ಯಾಂಕಿನ ಕಾರಣಕ್ಕೆ ಅವರನ್ನು ಓಲೈಕೆ ಮಾಡುವ ನೆಪದಿಂದ ಮತ್ತು ಕ್ರಿಮಿನಲ್ ಪ್ರಕರಣಗಳಲ್ಲಿ ಸಿಕ್ಕಿಕೊಂಡಿರುವ ಅಲ್ಪಸಂಖ್ಯಾತರ ಕೇಸುಗಳನ್ನು ವಾಪಸ್ ಪಡೆದು ಅವರಿಗೆ ಶಾಂತಿದೂತ ಪಟ್ಟಕೊಡುವ ಕೆಲಸವನ್ನು ಮುಖ್ಯಮಂತ್ರಿಗಳು ಮಾಡಿದರು. ಆ ತಕ್ಷಣವೇ ಇಡೀ ರಾಜ್ಯದಲ್ಲಿ ನೆಮ್ಮದಿ ಕೆಡಸುವ…
ಹಾಸನ: ಜಿಲ್ಲೆಯಲ್ಲಿ ನಿನ್ನೆ ರಾತ್ರಿ ಗಣೇಶ ಮೆರವಣಿಗೆಯ ವೇಳೆಯಲ್ಲಿ ಮೊಸಳೆ ಹೊಸಳ್ಳಿಯಲ್ಲಿ ಘೋರ ದುರಂತವೇ ಸಂಭವಿಸಿತ್ತು. ಕ್ಯಾಂಟರ್ ಹರಿದು 8 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದರು. ಆ ಬಳಿಕ ಆಸ್ಪತ್ರೆಗೆ ದಾಖಲಾಗಿದ್ದ ಮತ್ತೊಬ್ಬ ಸಾವನ್ನಪ್ಪಿದ್ದರು. ಇದೀಗ ಮತ್ತೊಬ್ಬ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಹೀಗಾಗಿ ಮೃತರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ಹಾಸನದ ಮೊಸಳೆ ಹೊಸಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಕ್ಯಾಂಟರ್ ಹರಿದು 9 ಮಂದಿ ಸಾವನ್ನಪ್ಪಿದ್ದರು. 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಗಾಯಾಳುಗಳನ್ನು ವಿವಿಧ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಇದೀಗ ಹಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ವಯ್ಯನ ಕೊಪ್ಪಲು ಗ್ರಾಮದ ಚಂದನ್ (26) ಸಾವನ್ನಪ್ಪಿದ್ದಾರೆ. ಹೀಗಾಗಿ ಮೃತರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. https://kannadanewsnow.com/kannada/a-corrupt-excise-deputy-commissioner-in-the-state-a-complaint-to-the-governor-and-the-lokayukta-for-appropriate-action/ https://kannadanewsnow.com/kannada/hassan-ganesh-procession-tragedy-jds-announces-compensation-for-the-deceased/
ಬೆಂಗಳೂರು: ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆಯಲ್ಲಿ ಟ್ರಕ್ ಹರಿದು 9 ಮಂದಿ ಸಾವನ್ನಪ್ಪಿದ್ದರು. ಈ ದುರ್ಘಟನೆಯಲ್ಲಿ ಸಾವನ್ನಪ್ಪಿದವರ ಕುಟುಂಬಸ್ಥರಿಗೆ ಜೆಡಿಎಸ್ ಕೂಡ ಪರಿಹಾರ ಘೋಷಿಸಿದೆ. ಬೆಂಗಳೂರಲ್ಲಿ ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡ ಮಾತನಾಡಿ, ಹಾಸನದ ಮೊಸಳೆಹೊಸಳ್ಳಿಯಲ್ಲಿ ಟ್ರಕ್ ಹರಿದು 9 ಮಂದಿ ಸಾವನ್ನಪ್ಪಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ. ಕುಟುಂಬಸ್ಥರಿಗೆ ಈ ದುಃಖ ಭರಿಸುವಂತ ಶಕ್ತಿ ನೀಡಲಿದೆ ಎಂದರು. ಹಾಸನ ಗಣೇಶ ಮೆರವಣಿಗೆ ದರಂತದಲ್ಲಿ ಮೃತರಾದಂತ ಕುಟುಂಬಸ್ಥರಿಗೆ ಜೆಡಿಎಸ್ ಪಕ್ಷದಿಂದಲೂ ಪರಿಹಾರ ನೀಡಲಾಗುತ್ತದೆ. ಮೃತರಿಗೆ ತಲಾ 1 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದರು. ಅಲ್ಲದೇ ಗಂಭೀರವಾಗಿ ಗಾಯಗೊಂಡಿರುವವರಿಗೆ ತಲಾ 25 ಸಾವಿರ ಪರಿಹಾರ ನೀಡುವುದಾಗಿ ತಿಳಿಸಿದರು. ಜೊತೆಗೆ ಸ್ವಲ್ಪ ಪ್ರಮಾಣದಲ್ಲಿ ಗಾಯಗೊಂಡವರಿಗೆ ತಲಾ 20 ಸಾವಿರ ಪರಿಹಾರ ನೀಡಲಾಗುತ್ತದೆ ಎಂದರು. https://kannadanewsnow.com/kannada/during-the-ganesh-procession-in-maddur-chaos-erupted-a-clash-of-words-between-the-police-and-the-public/
ಬೆಂಗಳೂರು: ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆಯಲ್ಲಿ ಟ್ರಕ್ ಹರಿದು 9 ಮಂದಿ ಸಾವನ್ನಪ್ಪಿದ್ದರು. ಈ ದುರ್ಘಟನೆಯಲ್ಲಿ ಸಾವನ್ನಪ್ಪಿದವರ ಕುಟುಂಬಸ್ಥರಿಗೆ ಜೆಡಿಎಸ್ ಕೂಡ ಪರಿಹಾರ ಘೋಷಿಸಿದೆ. ಬೆಂಗಳೂರಲ್ಲಿ ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡ ಮಾತನಾಡಿ, ಹಾಸನದ ಮೊಸಳೆಹೊಸಳ್ಳಿಯಲ್ಲಿ ಟ್ರಕ್ ಹರಿದು 9 ಮಂದಿ ಸಾವನ್ನಪ್ಪಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ. ಕುಟುಂಬಸ್ಥರಿಗೆ ಈ ದುಃಖ ಭರಿಸುವಂತ ಶಕ್ತಿ ನೀಡಲಿದೆ ಎಂದರು. ಹಾಸನ ಗಣೇಶ ಮೆರವಣಿಗೆ ದರಂತದಲ್ಲಿ ಮೃತರಾದಂತ ಕುಟುಂಬಸ್ಥರಿಗೆ ಜೆಡಿಎಸ್ ಪಕ್ಷದಿಂದಲೂ ಪರಿಹಾರ ನೀಡಲಾಗುತ್ತದೆ. ಮೃತರಿಗೆ ತಲಾ 1 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದರು. ಅಲ್ಲದೇ ಗಂಭೀರವಾಗಿ ಗಾಯಗೊಂಡಿರುವವರಿಗೆ ತಲಾ 25 ಸಾವಿರ ಪರಿಹಾರ ನೀಡುವುದಾಗಿ ತಿಳಿಸಿದರು. ಜೊತೆಗೆ ಸ್ವಲ್ಪ ಪ್ರಮಾಣದಲ್ಲಿ ಗಾಯಗೊಂಡವರಿಗೆ ತಲಾ 20 ಸಾವಿರ ಪರಿಹಾರ ನೀಡಲಾಗುತ್ತದೆ ಎಂದರು. https://kannadanewsnow.com/kannada/during-the-ganesh-procession-in-maddur-chaos-erupted-a-clash-of-words-between-the-police-and-the-public/ https://kannadanewsnow.com/kannada/ballari-due-to-a-power-interruption-in-this-rural-area-of-the-district-on-the-14th/
ಮಂಡ್ಯ: ಮದ್ದೂರಲ್ಲಿ ಮತ್ತೆ ಕೆಲ ಕಾಲ ಗಣೇಶ ಮೆರವಣಿಗೆ ವೇಳೆ ಗೊಂದಲದ ವಾತಾವರಣ ನಿರ್ಮಾಣವಾಗಿದೆ. ರಾಮ್ ರಹೀಮ್ ನಗರದಲ್ಲಿ ಮಸೀದಿ ಬಳಿಯಲ್ಲಿ ಈ ಘಟನೆ ನಡೆದಿದೆ. ಮದ್ದೂರಿನ ಚನ್ನೇಗೌಡ ಬಡಾವಣೆಯಲ್ಲಿ ಕೂರಿಸಿದ್ದಂತ ಗಣೇಶ ಮೆರವಣಿಗೆ ವೇಳೆಯಲ್ಲಿ ಗೊಂದಲ ಸೃಷ್ಠಿಯಾಗಿ ಕೆಲ ಕಾಲ ಆತಂಕಕ್ಕೂ ಕಾರಣವಾಗಿತ್ತು. ಈ ವೇಳೆ ಗಣೇಶ ಮೆರವಣಿಗೆಯನ್ನು ಪೊಲೀಸರು ತಡೆದಂತ ಘಟನೆ ನಡೆದಿದೆ. ಮದ್ದೂರಲ್ಲಿ ಗಣೇಶ ಮೆರವಣಿಗೆಯನ್ನು ಪೊಲೀಸರು ತಡೆದಂತ ವೇಳೆಯಲ್ಲಿ ಕೆಲ ಕಾಲ ವಾಗ್ವಾದ ನಡೆದಿದೆ. ಮಸೀದಿ ಮುಂದಿ ಮೆರವಣಿಗೆ ಹೋಗಲು ನಿಮಗೆ ಅನುಮತಿ ನೀಡಲ್ಲ. ಮತ್ತೊಂದು ರಸ್ತೆಯಲ್ಲಿ ಗಣೇಶ ಮೆರವಣಿಗೆ ಹೋಗುವಂತೆ ಸೂಚಿಸಿದರು. ಈ ವೇಳೆ ನಾವು ಇದೇ ರಸ್ತೆಯಲ್ಲಿ ಹೋಗಬೇಕೆಂದು ಪಟ್ಟನ್ನು ಯುವಕರು ಹಿಡಿದರು. ಕೆಲ ಕಾಲ ಪೊಲೀಸರ ಜೊತೆಗೆ ಯುವಕರು ಮಾತಿನ ಚಕಮಕಿಯನ್ನು ನಡೆಸಿದರು. ಕೊನೆಗೆ ಯವಕನ್ನು ಮನವೊಲಿಸಲು ಯಶಸ್ವಿಯಾದಂತ ಪೊಲೀಸರು, ಮಸೀದಿ ದಾರಿ ಬಿಟ್ಟು ಬೇರೆಡೆಯಿಂದ ಗಣೇಶ ಮೆರವಣಿಗೆ ಸಾಗಲು ಅನುವು ಮಾಡಿಕೊಟ್ಟರು. https://kannadanewsnow.com/kannada/the-harassment-of-farmers-by-forest-officials-is-increasing-in-the-sagara-taluk-former-minister-haratala-halappa/ https://kannadanewsnow.com/kannada/ballari-due-to-a-power-interruption-in-this-rural-area-of-the-district-on-the-14th/
ಬಳ್ಳಾರಿ : ಬಳ್ಳಾರಿ ಗ್ರಾಮೀಣ ಜೆಸ್ಕಾಂ ವ್ಯಾಪ್ತಿಯ ಮೀನಹಳ್ಳಿ ಉಪ-ಕೇಂದ್ರದ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಮತ್ತು ದುರಸ್ತಿ ಕಾರ್ಯವನ್ನು ಕೈಗೊಂಡಿರುವುದರಿAದ 110/11ಕೆ.ವಿ ಮೀನಹಳ್ಳಿ ಉಪಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ ಎಲ್ಲಾ 11ಕೆ.ವಿ ಮಾರ್ಗಗಳಲ್ಲಿ ಸೆ.14 ರಂದು ಬೆಳಿಗ್ಗೆ 09 ರಿಂದ ಸಂಜೆ 05 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ. ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು ಎಫ್-2 ಚಾಗನೂರು ಐಪಿ ಫೀಡರ್ ಮಾರ್ಗದ ಮೀನಹಳ್ಳಿ, ಶಿಡಿಗಿನಮೋಳ, ಕೆ.ವೀರಾಪುರ, ಕಾರೆಕಲ್ಲು, ಚಾಗನೂರು ಚಾಗನೂರು ಕೃಷಿ ಪ್ರದೇಶಗಳು. ಎಫ್-1 ಮೀನಹಳ್ಳಿ/ ಕೆ.ವೀರಾಪುರ ಎನ್.ಜೆ.ವೈ ಮಾರ್ಗದ ಮೀನಹಳ್ಳಿ, ಶಿಡಿಗಿನಮೋಳ, ಕೆ.ವೀರಾಪುರ, ಕಾರೆಕಲ್ಲು ಗ್ರಾಮ. ಎಫ್-4 ಎ.ಟಿ.ಪಿ.ಎಸ್ ಚೆಳ್ಳಗುರ್ಕಿ ಮಾರ್ಗದ ಹಗರಿ, ಪಿ.ಡಿ.ಹಳ್ಳಿ, ಕಗ್ಗಲ್, ಲಿಂಗದೇವನಹಳ್ಳಿ, ಯಾಳ್ಪಿ, ಜೋಳದರಾಶಿ, ಚೆಳ್ಳಗುರ್ಕಿ ಗ್ರಾಮ. ಎಫ್-5 ಹಗರಿ ಐಪಿ ಫೀಡರ್ ಮಾರ್ಗದ ಹಗರಿ, ಪಿ.ಡಿ.ಹಳ್ಳಿ, ಕಗ್ಗಲ್, ಲಿಂಗದೇವನಹಳ್ಳಿ, ಯಳ್ಪಿ, ಜೋಳದರಾಶಿ, ಚೆಳ್ಳಗುರ್ಕಿ ಕೃಷಿ ಪ್ರದೇಶಗಳು. ಎಫ್-6 ಫೀಡರ್ ಮಾರ್ಗದ ಎ-ಒನ್ ಕೋಲ್ಡ್ ಸ್ಟೋರೆಜ್, ಮೆ.ಜಾನಕಿ…
ಶಿವಮೊಗ್ಗ : ರಾಜ್ಯದಲ್ಲಿ ಕಾಂಗ್ರೇಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಸಾಗರದಲ್ಲಿ ಗೋಪಾಲಕೃಷ್ಣ ಬೇಳೂರು ಶಾಸಕರಾದ ನಂತರದಲ್ಲಿ ತಾಲ್ಲೂಕಿನಲ್ಲಿ ರೈತರ ಮೇಲೆ ಕಿರುಕುಳ ಜಾಸ್ತಿಯಾಗುತ್ತಿದೆ. ರೈತರ ಮೇಲಿನ ಕಿರುಕುಳ ಇದೇ ರೀತಿ ಮುಂದುವರೆದರೆ ಬೀದಿಗಿಳಿದು ಹೋರಾಟ ಮಾಡುವುದು ಅನಿವಾರ್ಯವಾಗುತ್ತದೆ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ ಎಚ್ಚರಿಸಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಕಳೆದ ಎರಡೂವರೆ ವರ್ಷದಲ್ಲಿ ಹಲವು ರೈತರು ಶಾಸಕರ ಸೂಚನೆಯಂತೆ ಅಧಿಕಾರಿಗಳ ವಕ್ರ ದೃಷ್ಟಿ ಬಿದ್ದು ತಮ್ಮ ಜಮೀನು, ಫಸಲು ಕಳೆದುಕೊಂಡು ಬೀದಿಗೆ ಬಂದಿದ್ದಾರೆ. ರಾಜ್ಯ ಸರ್ಕಾರ ಭೂಕಾಯ್ದೆಗೆ ಯಾವುದೆ ಹೊಸ ತಿದ್ದುಪಡಿ ತಂದಿಲ್ಲ. ಆದರೂ ಸಾಗರ ಕ್ಷೇತ್ರವ್ಯಾಪ್ತಿಯಲ್ಲಿ ಅರಣ್ಯಾಧಿಕಾರಿಗಳು ರೈತರ ಫಸಲು ನಾಶಪಡಿಸಿ ಒಕ್ಕಲೆಬ್ಬಿಸುತ್ತಿದ್ದಾರೆ. ಹಿರಳೇ ತಿಮ್ಮಪ್ಪ ಎಂಬುವವರ ಶುಂಠಿ ಫಸಲು ನಾಶ ಮಾಡಿದ್ದು, ತಾಲೂಕಿನ ಕೋಗಾರಿನಲ್ಲಿ ಕಂದಾಯ ಭೂಮಿಯಲ್ಲಿ ಸಾಗುವಳಿ ಮಾಡಿದ ನಾಗರಾಜ್ ಎಂಬುವವರ ಫಸಲು ನಾಶ ಮಾಡಲಾಗಿದೆ ಎಂದು ಆರೋಪಿಸಿದರು. ಚನ್ನಶೆಟ್ಟಿಕೊಪ್ಪದ…
ಬೆಂಗಳೂರು: ಮುಖ್ಯಮಂತ್ರಿಗಳೇ ತಾವು ಮಾನವೀಯತೆ, ಹೃದಯ ವೈಶಾಲ್ಯತೆ ತೋರಿ ಮೃತರ ಕುಟುಂಬದರವರಿಗೆ ತಲಾ 20 ಲಕ್ಷ ರೂ. ಪರಿಹಾರ ಕೊಡಬೇಕು ಎಂದು JDS ಪಕ್ಷವು ಆಗ್ರಹಿಸಿದೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಮಾನವೀಯ ಮೌಲ್ಯ ಕಳೆದುಕೊಂಡಿರಾ ಸಿದ್ದರಾಮಯ್ಯ ಅವರೇ ? ಹಾಸನ ತಾಲ್ಲೂಕಿನ ಮೊಸಳೆಹೊಸಳ್ಳಿ ಗ್ರಾಮದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರಕ್ ಹರಿದು 9 ಅಮಾಯಕರು ಪ್ರಾಣ ಕಳೆದುಕೊಂಡಿದ್ದಾರೆ. ಈ ದುರ್ಘಟನೆಯಲ್ಲಿ ಬಹುತೇಕರು ಕಾಲೇಜು ವಿದ್ಯಾರ್ಥಿಗಳಾಗಿದ್ದು, ಕುಟುಂಬಕ್ಕೆ ಆಸರೆಯಾಗಬೇಕಾಗಿದ್ದರು ಬಲಿಯಾಗಿದ್ದಾರೆ ಎಂದಿದೆ. ಆರ್ಸಿಬಿ ಕಾಲ್ತುಳಿತ ಪ್ರಕರಣದಲ್ಲಿ ಕಾಂಗ್ರೆಸ್ ಸರ್ಕಾರ ತನ್ನ ವೈಫಲ್ಯವನ್ನು ಮುಚ್ಚಿಕೊಳ್ಳಲು 25 ಲಕ್ಷ ರೂ. ಪರಿಹಾರ ಘೋಷಿಸಿತ್ತು. ಪ್ರಿಯಾಂಕಾ ಗಾಂಧಿ ಮತ್ತು ರಾಹುಲ್ ಗಾಂಧಿಯನ್ನು ಮೆಚ್ಚಿಸಲು ಕೇರಳದ ವ್ಯಕ್ತಿ ಆನೆ ದಾಳಿಯಿಂದ ಮೃತಪಟ್ಟಾಗ 15 ಲಕ್ಷ ರೂ. ಪರಿಹಾರ ನೀಡಲಾಗಿತ್ತು. ವಯನಾಡಿನಲ್ಲಿ ದುರಂತವಾದಾಗ ಕರ್ನಾಟಕ ಸರ್ಕಾರದಿಂದ 10 ಕೋಟಿ ಪರಿಹಾರ ಘೋಷಿಸಲಾಗಿತ್ತು. ಸಿಎಂ ಸಿದ್ಧರಾಮಯ್ಯನವರೇ ಹಾಸನದ ದುರಂತದಲ್ಲಿ ಮೃತಪಟ್ಟವರ ಕುಟುಂಬದವರಿಗೂ ಮಾನವೀಯ ನೆಲೆಯಲ್ಲಿ ಇನ್ನೂ…










