Author: kannadanewsnow09

ಮಂಡ್ಯ: ಹಣ, ಅಧಿಕಾರ, ಹುದ್ದೆ ಬಂದು ಹೋಗ್ತಾವೆ. ಆದರೇ ಗಳಿಸೋ ಸ್ನೇಹ, ಉಳಿಸಿಕೊಳ್ಳುವ ಗೌರವ, ತೋರುವ ನಡೆ ಮಾತ್ರ ನೀವು ಎಷ್ಟು ಸರಳ, ಸಜ್ಜನ ಎಂಬುದನ್ನು ನಿರ್ಧರಿಸುತ್ತದೆ. ಇದಕ್ಕೆ ಸಾಕ್ಷಿ ಎನ್ನುವಂತೆ ಸಿಎಂ ಸಿದ್ಧರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದರೂ, ಅವರು ಎಷ್ಟು ಸರಳ ಎನ್ನುವುದಕ್ಕೆ ಈ ಘಟನೆಯೊಂದು ಸಾಕ್ಷಿಯಾಗಿದೆ. ಅದೇನು.? ಸಿಎಂ ಸಿದ್ಧರಾಮಯ್ಯ ( CM Siddaramaiah ) ಆ ಸರಳತೆಯ ನಡೆಯೇನು ಅಂತ ಮುಂದೆ ಓದಿ. ಅನೇಕರು ಅಧಿಕಾರ, ಹುದ್ದೆಗೇರಿದ್ದೇ ತಡ ತಮ್ಮ ಲೈಫ್ ಸ್ಟೈಲ್ ( Life Style ) ಅನ್ನೇ ಬದಲಿಸಿ ಬಿಡುತ್ತಾರೆ. ಜನಸಾಮಾನ್ಯರಿಗೆ ಸಿಗೋದು ಡೌಟೇ ಆಗಿ ಬಿಡುತ್ತೆ. ಇನ್ನೂ ಊಟೋಪಚಾರವಂತೂ ತ್ರೀ ಸ್ಟಾರ್, ಫೈವ್ ಸ್ಟಾರ್ ಹೋಟೆಲ್ ನಲ್ಲೇ ( Five Star Hotel ) ನಡೆಯಬೇಕು ಬೇಕು ಅನ್ನೋರು ಇದ್ದಾರೆ. ಇಂತವರ ನಡುವೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಮಾತ್ರ ಇಂದು ದಾರಿಯ ಮಧ್ಯದಲ್ಲೇ ಸಿಕ್ಕ ಸಣ್ಣ ಹೋಟೆಲ್ ಒಂದರಲ್ಲೇ ಬೆಳಗಿನ ಉಪಹಾರ ಸೇರಿವಿಸಿ ಸರಳತೆ ಮರೆದಿದ್ದಾರೆ.…

Read More

ಬೆಂಗಳೂರು: ನಾನು ಎಷ್ಟು ದಿನ ಸಚಿವನಾಗಿರುತ್ತೇನೋ ಗೊತ್ತಿಲ್ಲ. ನಾನು ಜೀವಂತವಾಗಿ ಇರುತ್ತೇನೋ ಇಲ್ಲವೋ ಗೊತ್ತಿಲ್ಲ ಎಂಬುದಾಗಿ ಅಳಲು ತೋಡಿಕೊಳ್ಳುತ್ತಲೇ, ಸಚಿವ ಜಮೀರ್ ಅಹ್ಮದ್ ಖಾನ್, ಸಚಿವ ಸಂಪುಟ ಸರ್ಜರಿಯ ಸುಳಿವನ್ನು ನೀಡಿದ್ದಾರೆ. ಇಂದು ನಗರದಲ್ಲಿ ನಡೆಯುತ್ತಿರುವಂತ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿ ಮಾತನಾಡಿದಂತ ಅವರು, ನಾನು ಎಷ್ಟು ದಿನ ಸಚಿವನಾಗಿ ಇರುತ್ತೇನೋ ಗೊತ್ತಿಲ್ಲ. ಜೀವಂತವಾಗಿ ಇರುತ್ತೇನೋ ಇಲ್ಲವೋ ಗೊತ್ತಿಲ್ಲ. ಯಾಕೆಂದ್ರೆ ದೇವರು ಹಣೆ ಬರಹ ಬರೆದಿರುತ್ತಾನಲ್ಲ ಎಂದರು. ಈಗ ನನ್ನನ್ನು ಅಲ್ಪಸಂಖ್ಯಾತ ಸಚಿವರಾಗಿ ಮಾಡಿದ್ದಾರೆ. ರಾಜ್ಯದಲ್ಲಿ ಮುಂದಿನ 4 ವರ್ಷ ನಮ್ಮದೇ ಸರ್ಕಾರವೇ ಇರುತ್ತದೆ. ನಾನೇ ಅಲ್ಪ ಸಂಖ್ಯಾತ ಕಲ್ಯಾಣ ಸಚಿವನಾಗಿ ಇರುತ್ತೇನೆ ಎಂಬ ವಿಶ್ವಾಸವಿದೆ ಎಂದರು. https://kannadanewsnow.com/kannada/bjp-leaders-stage-protest-against-kota-srinivas-poojary-over-corruption-allegations/ https://kannadanewsnow.com/kannada/breaking-hc-asks-baba-ramdev-to-withdraw-cure-statement-of-coronil-for-covid-19/

Read More

ಬೆಂಗಳೂರು: ಸಂಸದ ಕೋಟಾ ಶ್ರೀನಿವಾಸ ಪೂಜಾರಿ ವಿರುದ್ಧ ಕಾಂಗ್ರೆಸ್ ನಾಯಕರಿಂದ ಭ್ರಷ್ಟಾಚಾರ ಆರೋಪ ಮಾಡಲಾಗಿತ್ತು. ಇದನ್ನು ವಿರೋಧಿಸಿ, ಖಂಡಿಸಿ ಬಿಜೆಪಿ ನಾಯಕರಿಂದ ವಿಧಾನಸೌಧದ ಬಳಿಯ ಗಾಂಧಿ ಪ್ರತಿಮೆಯ ಬಳಿಯಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಸದರಾದ ಕೋಟಾ ಶ್ರೀನಿವಾಸ ಪೂಜಾರಿ ಅವರ ಮೇಲೆ ಸುಳ್ಳು ಭ್ರಷ್ಟಾಚಾರ ಆರೋಪ ಮಾಡಿರುವುದನ್ನು ಖಂಡಿಸಿ ಆರೋಪವನ್ನು ವಾಪಸ್ ಪಡೆಯಬೇಕು, ಸಿಬಿಐ ತನಿಖೆಗೆ ಆದೇಶಿಸಬೇಕೆಂದು ವಿಧಾನಸೌಧದ ಗಾಂಧಿಪ್ರತಿಮೆ ಬಳಿ ಮೌನ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷ ನಾಯಕರಾದ ಛಲವಾದಿ ನಾರಾಯಣ ಸ್ವಾಮಿ ಅವರು ಹಾಗೂ ಪಕ್ಷದ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರು ಭಾಗವಹಿಸಿ ನೈತಿಕವಾಗಿ ಬೆಂಬಲ ಸೂಚಿಸಿದರು. ಈ ಸಂದರ್ಭದಲ್ಲಿ ಪರಿಷತ್ ಸದಸ್ಯ ಎನ್ ರವಿಕುಮಾರ್, ಎಸ್ ಸುರೇಶ್ ಕುಮಾರ್ ಸೇರಿದಂತೆ ಇತರರು ಭಾಗಿಯಾಗಿದ್ದರು. https://kannadanewsnow.com/kannada/chief-minister-siddaramaiah-to-chair-cabinet-meeting-on-august-1/ https://kannadanewsnow.com/kannada/breaking-hc-asks-baba-ramdev-to-withdraw-cure-statement-of-coronil-for-covid-19/

Read More

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಆಗಸ್ಟ್.1ರಂದು ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದೆ. ಈ ಕುರಿತಂತೆ ಮಾಹಿತಿ ನೀಡಿರುವಂತ ಸಚಿವ ಸಂಪುಟದ ಸರ್ಕಾರದ ಜಂಟಿ ಕಾರ್ಯದರ್ಶಿ ಆರ್.ಚಂದ್ರಶೇಖರ್ ಅವರು, ದಿನಾಂಕ 01-08-2024ರಂದು ಗುರುವಾರ ಬೆಳಿಗ್ಗೆ 11 ಗಂಟೆಗೆ ಸಚಿವ ಸಂಪುಟ ಸಭೆ ನಡೆಯಲಿದೆ ಅಂತ ತಿಳಿಸಿದ್ದಾರೆ. ಆಗಸ್ಟ್.1ರಂದು ಸಚಿವ ಸಂಪುಟದ 15ನೇ ಸಭೆಯು ವಿಧಾನಸೌಧದ ಸಚಿವ ಸಂಪುಟ ಸಭಾ ಮಂದಿರದಲ್ಲಿ ಕರೆಯಲಾಗಿದೆ ಎಂದಿದ್ದಾರೆ. ಆ.1ರಂದು ನಡೆಯಲಿರುವಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ಅಭಿವೃದ್ಧಿ ಕಾರ್ಯಗಳಿಗೆ ಅನುಮೋದನೆ ದೊರೆಯುವ ಸಾಧ್ಯತೆ ಇದೆ. ಆ ಬಗ್ಗೆ ಕಾದು ನೋಡಬೇಕಿದೆ. https://kannadanewsnow.com/kannada/mother-cauvery-will-give-congress-an-opportunity-to-offer-bhagina-for-10-years-dk-shivakumar/ https://kannadanewsnow.com/kannada/breaking-hc-asks-baba-ramdev-to-withdraw-cure-statement-of-coronil-for-covid-19/

Read More

ಮಂಡ್ಯ: ಈ ವರ್ಷದಿಂದ ಕೆರೆ-ಕಟ್ಟೆ ತುಂಬುವ ಸಂದರ್ಭದಲ್ಲಿ ರೈತರಿಗೆ ಸನ್ಮಾನಕ್ಕೆ ನಿರ್ಧಾರ ಮಾಡಲಾಗಿದೆ. ಸಾವಡೆಗಳು ಹಾಗು ಎಇಇ ಅಧಿಕಾರಿಗಳಿಗೆ ಅವರಿಗೆ ಪ್ರಶಸ್ತಿ ಕೊಡಲು ಸರ್ಕಾರ ನಿರ್ಧಾರ ಕೈಗೊಳ್ಳಲಾಗಿದೆ. ಕಾವೇರಿ ತಾಯಿ 10 ವರ್ಷ ಬಾಗಿನ ಅರ್ಪಿಸುವ ಅವಕಾಶವನ್ನು ಕಾಂಗ್ರೆಸ್ ಗೆ ನಿಡ್ತಾಳೆ ಅನ್ನೋ ಭರವಸೆ ಇದೆ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಇಂದು ಕೆ.ಆರ್.ಎಸ್ ಡ್ಯಾಂಗೆ ಬಾಗಿನ ಅರ್ಪಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಇಂದು ಸಂಭ್ರಮದ ದಿನ ಕನ್ನಂಬಾಡಿ ಕಟ್ಟೆ ನಮ್ಮೆಲ್ಲರ ಅನ್ನದ ತಟ್ಟೆ. ನಮ್ಮ ಬದುಕಿನ ಜೀವನದಿ. 92 ವರ್ಷವಾದ್ರು ಸಂಭ್ರಮದಿಂದ ಈ ತಾಯಿಗೆ ನಮನ ಸಲ್ಲಿಸುತ್ತಿದೇವೆ ಎಂದರು. ಚಾಮುಂಡೇಶ್ವರಿಯಲ್ಲಿ ಮಳೆಗಾಗಿ ಪ್ರಾರ್ಥನೆ ಮಾಡಿದ್ದೇನೆ. ಮೇಲಿರುವ ತಾಯಿಗೆ ಯಾರು ಅಧಿಕಾರದಲ್ಲಿದ್ದಾರೆ ಅನ್ನೋದು ಗೊತ್ತಿಲ್ಲ. ನಮ್ಮ ಪ್ರಾರ್ಥನೆಗೆ ತಾಯಿ ಕರುಣಿಸಿ ಅಣೆಕಟ್ಟು ತುಂಬಿ ಕಾವೇರಿ ಹರಿಯುತ್ತಿದ್ದಾಳೆ‌ ಎಂದರು. ಜಿಲ್ಲೆಯಲ್ಲಿ ಕೃಷಿ ವಿವಿ ಪ್ರಾರಂಭವಾಗುತ್ತಿದೆ ರೈತರ ಬದುಕಿಗೆ ಮಾರ್ಗದರ್ಶನ ಸಿಗುತ್ತೆ. ಜನರ ಬದುಕಿಗೆ, ಕೈಗಾರಿಕೆಗೆ ನೀರು ಬಳಕೆಯಾಗಲಿದೆ.  82 ಲಕ್ಷ ಎಕ್ಟೆರ್…

Read More

ವಿಜಯಪುರ: ‘ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿಯ ಸದಸ್ಯನಾಗಿ ನನ್ನನ್ನು ನೇಮಿಸಿರುವುದಕ್ಕೂ ನಮ್ಮ‌ ತಂದೆಯವರ (ಎಂ ಬಿ ಪಾಟೀಲ) ರಾಜಕಾರಣಕ್ಕೂ ಸಂಬಂಧವಿಲ್ಲ. ವನ್ಯಜೀವಿ ಛಾಯಾಗ್ರಹಣ ಮತ್ತು ಸಂರಕ್ಷಣೆ ಕ್ಷೇತ್ರಗಳಲ್ಲಿ ನಾನು ಹನ್ನೊಂದು ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಇದನ್ನು ಗುರುತಿಸಿ ನನ್ನನ್ನು ಈಗ ಸದಸ್ಯನಾಗಿ ನೇಮಿಸಲಾಗಿದೆ’ ಎಂದು ಧ್ರುವ ಪಾಟೀಲ ಹೇಳಿದ್ದಾರೆ. ಇಲ್ಲಿನ ಮಮದಾಪುರ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಅರಣ್ಯ ಇಲಾಖೆ ಜತೆ ಸೇರಿ ತಮ್ಮ ನೇತೃತ್ವದ ಸೊಸೈಟಿ ಫಾರ್ ಪ್ರೊಟೆಕ್ಷನ್ ಆಫ್ ಪ್ಲಾಂಟ್ಸ್ ಆ್ಯಂಡ್ ಅನಿಮಲ್ಸ್ (ಎಸ್ ಪಿಪಿಎ) ಮೂಲಕ ಕೈಗೊಂಡಿರುವ ಕೋಟಿ ವೃಕ್ಷ ಆಂದೋಲನದ ಭಾಗವಾಗಿ ಎರಡು ವರ್ಷಗಳ ಹಿಂದೆ ನೆಟ್ಟಿದ್ದ 1.36 ಲಕ್ಷ ಸಸಿಗಳ ಬೆಳವಣಿಗೆ ವೀಕ್ಷಿಸಿದ ನಂತರ ಅವರು ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದರು. ಸಸಿಗಳು ಈಗ ಮರಗಳಾಗಿ ನಳನಳಿಸುತ್ತಿದ್ದು ಇದನ್ನು ನೋಡಿ ಅವರು ಹರ್ಷ ವ್ಯಕ್ತಪಡಿಸಿದರು. ‘ರಾಜ್ಯ ವನ್ಯಜೀವಿ ಮಂಡಲಿಗೆ ನಾನು ಸಚಿವರ ಪುತ್ರ ಎಂಬ ಕಾರಣಕ್ಕೆ ಸದಸ್ಯನಾಗಿ ನೇಮಿಸಲಾಗಿದೆ ಎನ್ನುವ ಆರೋಪ ಸರಿಯಲ್ಲ.…

Read More

ಬೆಂಗಳೂರು: ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದಾಗಲೇ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಮೂಗಿನಲ್ಲಿ ರಕ್ತಸ್ರಾವ ಉಂಟಾಗಿತ್ತು. ನನಗೆ ಕೆಲಸದ ಒತ್ತಡದಿಂದ ಒಮ್ಮೊಮ್ಮೆ ಹೀಗಾಗುತ್ತೆ ಅಂತ ಅವರು ಸ್ಪಷ್ಟ ಪಡಿಸಿದ್ದಾರೆ. ಬೆಂಗಳೂರು: ಮೂಗಿನಲ್ಲಿ ರಕ್ತಸ್ರಾವ ಉಂಟಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಚಿಕಿತ್ಸೆ ಪಡೆದ ನಂತರ ಜೆಪಿ ನಗರದ ತಮ್ಮ ನಿವಾಸಕ್ಕೆ ವಾಪಸ್ಸಾದರು. ನಗರ ಖಾಸಗಿ ಹೋಟೆಲ್ ನಲ್ಲಿ ಜೆಡಿಎಸ್ ಮತ್ತು ಜೆಡಿಎಸ್ ಸಮನ್ವಯ ಸಮಿತಿ ಸಭೆಯಲ್ಲಿ ಪಾಲ್ಗೊಂಡ ನಂತರ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರೊಂದಿಗೆ ಮಾಧ್ಯಮಗಳ ಜತೆ ಮಾತನಾಡುವ ಸಂದರ್ಭದಲ್ಲಿ ಸಚಿವರಿಗೆ ಮೂಗಿನಲ್ಲಿ ರಕ್ತಸ್ರಾವ ಉಂಟಾಯಿತು. ಕೂಡಲೇ ಖಾಸಗಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದ ಸಚಿವರನ್ನು ವೈದ್ಯರು ಕೆಲ ಗಂಟೆಗಳ ಕಾಲ ನಿಗಾದಲ್ಲಿ ಇರಿಸಿ ಅವಲೋಕನ ಮಾಡಿದರು. ಬಳಿಕ ಸೂಕ್ತ ಚಿಕಿತ್ಸೆ ನೀಡಿ ಅವರನ್ನು ಮನೆಗೆ ಕಳಿಸಿಕೊಟ್ಟರು. ಯಾರಿಗೂ ಆತಂಕ ಬೇಡ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ತಮ್ಮ ನಿವಾಸಕ್ಕೆ ಹೊರಡುವ ವೇಳೆ ಮಾಧ್ಯಮಗಳಿಗೆ…

Read More

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಗೆ ಮೂಗಿನಲ್ಲಿ ರಕ್ತಸ್ರಾವ ವಿಚಾರದವನ್ನು ತಿಳಿದಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ಶೀಘ್ರವೇ ಅವರು ಚೇತರಿಸಿಕೊಂಡು ಕರ್ತವ್ಯಕ್ಕೆ ಮರಳುವಂತೆ ಆಗಲಿ ಅಂತ ಆಶಿಸಿದ್ದಾರೆ. ಈ ಕುರಿತಂತೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ ಏರುಪೇರಾದ ಸುದ್ದಿ ಮಾಧ್ಯಮಗಳಲ್ಲಿ ನೋಡಿದೆ ಅಂತ ತಿಳಿಸಿದ್ದಾರೆ. ಚಿಕಿತ್ಸೆ ಪಡೆಯುತ್ತಿರುವ ಕುಮಾರಸ್ವಾಮಿ ಅವರು ಶೀಘ್ರ ಚೇತರಿಸಿಕೊಂಡು ಮತ್ತೆ ತಮ್ಮ ಕರ್ತವ್ಯದಲ್ಲಿ ತೊಡಗಿಸಿಕೊಳ್ಳುವಂತಾಗಲಿ ಎಂದು ಹಾರೈಸುತ್ತೇನೆ ಎಂದು ಹೇಳಿದ್ದಾರೆ. https://twitter.com/siddaramaiah/status/1817588615398281500 https://kannadanewsnow.com/kannada/hd-kumaraswamy-discharged-from-hospital-after-suffering-nose-bleeds/ https://kannadanewsnow.com/kannada/pm-modi-calls-manu-bhaker-to-congratulate-him-on-winning-bronze-medal-at-paris-olympics/

Read More

ನವದೆಹಲಿ: ಪ್ಯಾರೀಸ್ ಒಲಂಪಿಕ್ಸ್ ನಲ್ಲಿ ಭಾರತದ ಮನು ಬಾಕರ್ ಅವರು ಇಂದು ಮೊದಲ ಪದಕವನ್ನು ತಂದುಕೊಡುವ ಮೂಲಕ, ಭಾರತದ ಪದಕದ ಭೇಟೆಗೆ ಮುನ್ನುಡಿ ಬರೆದಿದ್ದರು. ಇಂತಹ ಅವರಿಗೆ ಪ್ರಧಾನಿ ನರೇಂದ್ರ ಮೋದಿಯವರು ಕರೆ ಮಾಡಿ, ಅಭಿನಂದನೆಯನ್ನು ತಿಳಿಸಿದ್ದಾರೆ. ಪ್ಯಾರೀಸ್ ಒಲಂಪಿಕ್ಸ್ 2024ರ ಇಂದಿನ ಪಂದ್ಯಾವಳಿಯ ವೇಳೆಯಲ್ಲಿ ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ನಲ್ಲಿ ಭಾರತದ ಮನು ಬಾಕರ್ ಅವರು ಕಂಚಿನ ಪದಕವನ್ನು ಗೆದ್ದಿದ್ದರು. ಇದು ಭಾರತದ ಮೊದಲ ಪದಕವಾಗಿದೆ. ಇಂದು ಪ್ಯಾರೀಸ್ ಒಲಂಪಿಕ್ಸ್ ನಲ್ಲಿ ಕಂಚಿನ ಪದಕ ಗೆದ್ದಿದ್ದಂತ ಮನು ಬಾಕರ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಕೂಡಲೇ ಅಭಿನಂದನೆಯನ್ನು ತಿಳಿಸಿದ್ದರು. https://twitter.com/narendramodi/status/1817511901355721186 ಈ ಬಳಿಕ ಪ್ರಧಾನಿ ನರೇಂದ್ರ ಮೋದಿಯವರು ಮನು ಬಾಕರ್ ಅವರಿಗೆ ದೂರವಾಣಿ ಕರೆ ಮಾಡಿ, ಪ್ಯಾರಿಸ್ ಒಲಿಂಪಿಕ್ಸ್ 2024 ರಲ್ಲಿ ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ನಲ್ಲಿ ಕಂಚಿನ ಪದಕ ಗೆದ್ದಿದ್ದಕ್ಕೆ ಅಭಿನಂದನೆಯನ್ನು ಸಲ್ಲಿಸಿದ್ದಾರೆ.…

Read More

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಇಂದು ಸುದ್ದಿಗೋಷ್ಠಿಯಲ್ಲೇ ಮೂಗಿನಲ್ಲಿ ರಕ್ತಸ್ರಾವ ಉಂಟಾಗಿತ್ತು. ಹೀಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಇಂತಹ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್ ನಾಯಕರಿಂದ ಬೆಂಗಳೂರಿನ ಖಾಸಗಿ ಹೋಟೆಲ್ ಒಂದರಲ್ಲಿ ಕಾಂಗ್ರೆಸ್ ಸರ್ಕಾರದ ಹಗರಣಗಳ ವಿರುದ್ಧ ಧ್ವನಿ ಎತ್ತೋ ಸಲುವಾಗಿ ಪಾದಯಾತ್ರೆ ನಡೆಸುವ ಸಂಬಂಧ ಸಭೆ ನಡೆಸಿದ್ದರು. ಈ ಸಭೆಯಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಕೂಡ ಹಾಜರಾಗಿದ್ದರು. ಈ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದಂತ ವೇಳೆಯಲ್ಲೇ ಹೆಚ್.ಡಿ ಕುಮಾರಸ್ವಾಮಿಗೆ ಮೂಗಿನಲ್ಲಿ ರಕ್ತಸ್ರಾವ ಉಂಟಾಗಿತ್ತು. ಕರ್ಚಿಪ್ ನಲ್ಲಿ ಒರೆಸಿಕೊಳ್ಳುತ್ತಲೇ ಮಾತನಾಡಿ, ಅಲ್ಲಿಂದ ತುರ್ತಾಗೆ ಅರ್ಧಕ್ಕೆ ಸುದ್ದಿಗೋಷ್ಠಿ ಮೊಟಕುಗೊಳಿಸಿ ಹೊರಟಿದ್ದರು. ಬೆಂಗಳೂರಿನ ಜಯನಗರದಲ್ಲಿರುವಂತ ಅಪೋಲೋ ಆಸ್ಪತ್ರೆಗೆ ಹೆಚ್.ಡಿ ಕುಮಾರಸ್ವಾಮಿ ದಾಖಲಾಗಿದ್ದರು. ಅವರನ್ನು ಪರೀಕ್ಷಿಸಿದಂತ ವೈದ್ಯರು ಚಿಕಿತ್ಸೆ ನೀಡಿದ್ದರು. ಇದೀಗ ಹೆಚ್.ಡಿ ಕುಮಾರಸ್ವಾಮಿ ಚಿಕಿತ್ಸೆ ಪಡೆದ ಬಳಿಕ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಬಳಿಕ ಆಸ್ಪತ್ರೆಯ ಬಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕೆಲಸದ ಒತ್ತಡದಿಂದ ಒಮ್ಮೊಮ್ಮೆ…

Read More