Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು : ಕಳಪೆ ಗುಣಮಟ್ಟದ ಪ್ಯಾರಾ-ಮೆಡಿಕಲ್ ಕಾಲೇಜುಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕಳಪೆ ಮೂಲ ಸೌಕರ್ಯ ಹೊಂದಿರುವ ಸಂಸ್ಥೆಗಳು ಹಾಗೂ ಅಂಗಸಂಸ್ಥೆಗಳನ್ನು ಮುಚ್ಚಬೇಕು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್ ನಿರ್ದೇಶನ ನೀಡಿದ್ದಾರೆ. ಮೂಲಸೌಕರ್ಯ ಮತ್ತು ಬೋಧನಾ ಮಾನದಂಡಗಳನ್ನು ಪೂರೈಸಲು ವಿಫಲವಾದ ಸಂಸ್ಥೆಗಳನ್ನು ಕೂಡಲೇ ಮುಚ್ಚುವಂತೆ ಸೂಚನೆ ನೀಡಲಾಗಿದೆ. ಗುರುವಾರ ವಿಕಾಸಸೌಧದಲ್ಲಿ ನಡೆದ ರಾಜ್ಯ ಪ್ಯಾರಾ-ಮೆಡಿಕಲ್ ಮಂಡಳಿಯ ಪರಿಶೀಲನಾ ಸಭೆಯಲ್ಲಿ ಸಚಿವರು, ಹಲವಾರು ಖಾಸಗಿ ಕಾಲೇಜುಗಳಲ್ಲಿನ ನ್ಯೂನತೆಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಅಸಮರ್ಪಕ ಸೌಲಭ್ಯಗಳೊಂದಿಗೆ ಇಕ್ಕಟ್ಟಾದ ಸ್ಥಳಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾಲೇಜುಗಳಿವೆ. ಒಂದು ಸಂಸ್ಥೆಯು ನೂರಾರು ವಿದ್ಯಾರ್ಥಿಗಳಿಗೆ ಒಂದೇ ಸೂಕ್ಷ್ಮದರ್ಶಕವನ್ನು ನೀಡುತ್ತಿದೆ ಹಾಗೂ ಇನ್ನೊಂದು ಸರಿಯಾದ ಬೆಳಕಿಲ್ಲದೆ ಕಾರ್ಯನಿರ್ವಹಿಸುತ್ತಿದೆ ಎಂದು ಅಧಿಕಾರಿಗಳು ಸಚಿವರಿಗೆ ವರದಿ ನೀಡಿದ್ದಾರೆ. ಭಾರಿ ಶುಲ್ಕ ಪಡೆದರೂ ಕಳಪೆ ಬೋಧನೆ ಖಾಸಗಿ ಸಂಸ್ಥೆಗಳು ಅನುಮೋದನೆ ಪಡೆಯುವಾಗ ದಾರಿತಪ್ಪಿಸುವ ಮಾಹಿತಿ ನೀಡುತ್ತಿವೆ. ಭಾರಿ…
ನವದೆಹಲಿ: ಕೇಂದ್ರ ಲೋಕಸೇವಾ ಆಯೋಗ (Union Public Service Commission -UPSC) ತನ್ನ ವೆಬ್ಸೈಟ್ನಲ್ಲಿ ಕಂಬೈನ್ಡ್ ಡಿಫೆನ್ಸ್ ಸರ್ವೀಸಸ್ ( Combined Defence Services -CDS) 1 2025 ಪ್ರವೇಶ ಪತ್ರವನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ. ಅಭ್ಯರ್ಥಿಗಳು ತಮ್ಮ ನೋಂದಣಿ ಸಂಖ್ಯೆ / ರೋಲ್ ಸಂಖ್ಯೆ ಮತ್ತು ಹುಟ್ಟಿದ ದಿನಾಂಕವನ್ನು ನಮೂದಿಸುವ ಮೂಲಕ ಅದನ್ನು ಡೌನ್ಲೋಡ್ ಮಾಡಬಹುದು. ಸಿಡಿಎಸ್ 1 ಪರೀಕ್ಷೆಯನ್ನು ಏಪ್ರಿಲ್ 13, 2025 ರಂದು ನಡೆಸಲಾಗುವುದು ಮತ್ತು ಪ್ರವೇಶಕ್ಕೆ ಪ್ರವೇಶ ಪತ್ರ ಕಡ್ಡಾಯ ದಾಖಲೆಯಾಗಿದೆ. ಪ್ರವೇಶ ಪತ್ರದಲ್ಲಿ ಅಭ್ಯರ್ಥಿಯ ಹೆಸರು, ರೋಲ್ ಸಂಖ್ಯೆ, ಪರೀಕ್ಷಾ ಕೇಂದ್ರ, ವರದಿ ಮಾಡುವ ಸಮಯ ಮತ್ತು ಪರೀಕ್ಷಾ ಸೂಚನೆಗಳಂತಹ ನಿರ್ಣಾಯಕ ವಿವರಗಳಿವೆ. ಯುಪಿಎಸ್ಸಿ ಅಭ್ಯರ್ಥಿಗಳಿಗೆ ಎಲ್ಲಾ ವಿವರಗಳನ್ನು ಪರಿಶೀಲಿಸಲು ಮತ್ತು ವ್ಯತ್ಯಾಸಗಳನ್ನು ತಕ್ಷಣ ವರದಿ ಮಾಡಲು ಸಲಹೆ ನೀಡುತ್ತದೆ. ಮುದ್ರಿತ ಪ್ರತಿಯನ್ನು ಮಾನ್ಯ ಫೋಟೋ ಐಡಿ ಪ್ರೂಫ್ ನೊಂದಿಗೆ ಪರೀಕ್ಷಾ ಕೊಠಡಿಗೆ ಕೊಂಡೊಯ್ಯಬೇಕು. ಯುಪಿಎಸ್ಸಿ ಸಿಡಿಎಸ್ 1 ಪ್ರವೇಶ ಪತ್ರದಲ್ಲಿ ಉಲ್ಲೇಖಿಸಲಾದ ವಿವರಗಳು…
ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ ಗೆ ರೂ.4 ಹೆಚ್ಚಳಕ್ಕೆ ಅನುಮೋದನೆ ನೀಡಲಾಯಿತು. ಇದಲ್ಲದೇ ವಿವಿಧ ಅಭಿವೃದ್ಧಿ ಕಾರ್ಯಗಳಿಗೂ ಅನುಮೋದಿಸಿದೆ. ಆ ಎಲ್ಲಾ ಪ್ರಮುಖ ಹೈಲೈಟ್ಸ್ ಮುಂದಿದೆ ಓದಿ. ಇಂದು ಸಿಎಂ ಸಿದ್ಧರಾಮಯ್ಯ ನೇೃತ್ವದಲ್ಲಿ ನಡೆದಂತ ರಾಜ್ಯ ಸಚಿವ ಸಂಪುಟ ಸಭೆ ಮುಕ್ತಾಯದ ಬಳಿಕ ಸುದ್ದಿಗೋಷ್ಠಿಯಲ್ಲಿ ಸಂಪುಟದ ನಿರ್ಣಯಗಳನ್ನು ಮಾದ್ಯಮಗೋಷ್ಠಿಯಲ್ಲಿ ಸಚಿವ ಹೆಚ್.ಕೆ ಪಾಟೀಲ್ ವಿವರಿಸಿದರು. ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ 34 ವಿಷಯಗಳ ಬಗ್ಗೆ ಚರ್ಚೆಯಾಗಿದೆ. ನ್ಯಾ.ನಾಗಮೋಹನ್ ದಾಸ್ ಆಯೋಗ ರಚನೆ ಬಗ್ಗೆಯೂ ಚರ್ಚಿಸಲಾಗಿದೆ. ಒಳಮೀಸಲಾತಿ ಬಗ್ಗೆ ಆಯೋಗ ರಚಿಸಿತ್ತು. ಅವರು ಮಧ್ಯಂತರ ವರದಿಯನ್ನ ಕೊಟ್ಟಿದ್ದಾರೆ. ಅದರಲ್ಲಿ 4 ಪ್ರಮುಖ ಶಿಫಾರಸು ಮಾಡಿದ್ದಾರೆ. ಉಪಜಾತಿಗಳ ವೈಜ್ಙಾನಿಕವರದಿಗೆ ಸಮೀಕ್ಷೆ ಮಾಡಬೇಕು. ದತ್ತಾಂಶವನ್ನ ಮಾಡಬೇಕು. 30 ರಿಂದ 40 ದಿನದೊಳಗೆ ಹೊಸದಾಗಿ ಸಮೀಕ್ಷೆ ಮಾಡಬಹುದು ಎಂದಿದ್ದಾರೆ ಎಂದರು. ಹೊಸ ಸಮೀಕ್ಷೆ ನಡೆಸಲು ಪ್ರಶ್ನೆಗಳ ಸಿದ್ಧತೆ, ಸಂಸ್ಥೆ, ಸಂಪನ್ಮೂಲ ಬೇಕಿದೆ. ಹೊಸ ಸಮೀಕ್ಷೆಯಿಂದ…
ಬೆಂಗಳೂರು: ನಟಿ ರನ್ಯಾ ರಾವ್ ಅವರು ಅಕ್ರಮ ಚಿನ್ನ ಸಾಗಾಟ ಪ್ರಕರಣದಲ್ಲಿ ಜೈಲುಪಾಲಾಗಿದ್ದಾರೆ. ಈ ಪ್ರಕರಣದಲ್ಲಿ ಜಾಮೀನು ಕೋರಿ ಸಲ್ಲಿಸಿದ್ದಂತ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ ಮೂಲಕ ನಟಿ ರನ್ಯಾ ರಾವ್ ಗೆ ಬಿಗ್ ಶಾಕ್ ನೀಡಲಾಗಿದೆ. ಈ ಸಂಬಂಧ ಬೆಂಗಳೂರಿನ 64ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ನಟಿ ರನ್ಯಾ ರಾವ್ ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಿಚಾರಣೆ ನಡೆಸಿತು. ಈ ಅರ್ಜಿಯ ವಿಚಾರಣೆ ಸಂದರ್ಭದಲ್ಲಿ ಅವರು ವಿಚಾರಣೆಯ ವೇಳೆ ಸರಿಯಾಗಿ ಸಹಕರಿಸಿಲ್ಲ. ತನಿಖೆ ಬಾಕಿ ಇದೆ. ಯಾವುದೇ ಕಾರಣಕ್ಕೂ ಜಾಮೀನು ನೀಡದಂತೆ ಡಿಆರ್ಐ ಪರ ವಕೀಲರು ವಾದಿಸಿದ್ದರು. ಈ ಎಲ್ಲಾ ವಾದ ಪ್ರತಿವಾದವನ್ನು ಆಲಿಸಿದಂತ ಬೆಂಗಳೂರಿನ 64ನೇ ಸಿಸಿಹೆಚ್ ನ್ಯಾಯಾಲಯವು ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. https://kannadanewsnow.com/kannada/breaking-mp-priyanka-gandhi-visits-sitadevi-love-kush-temple-in-kerala-watch-video/ https://kannadanewsnow.com/kannada/nandini-milk-price-hiked-by-rs-2-from-tomorrow-heres-the-revised-price-list/
ಬೆಂಗಳೂರು: ಕರ್ನಾಟಕದ ಪರಿಶಿಷ್ಟ ಸಮುದಾಯದವರಿಗೆ ಒಳ ಮೀಸಲಾತಿ ಕಲ್ಪಿಸುವ ಕುರಿತು ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್ ನಾಗಮೋಹನ್ ದಾಸ್ ನೇತೃತ್ವದ ಸಮಿತಿಯು, ಸಿಎಂ ಸಿದ್ಧರಾಮಯ್ಯ ಅವರಿಗೆ ಮಧ್ಯಂತರ ವರದಿಯನ್ನು ಸಲ್ಲಿಸಿದೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿಯಾದಂತ್ತ ನಿವೃತ್ತ ನ್ಯಾಯಮೂರ್ತಿ ಹೆಚ್ ಎನ್ ನಾಗಮೋಹನ್ ದಾಸ್ ಅವರು, ಎಸ್ಸಿ ಸಮುದಾಯದವರಿಗೆ ಒಳ ಮೀಸಲಾತಿ ಕಲ್ಪಿಸುವ ಕುರಿತಂತೆ ತಮ್ಮ ಮಧ್ಯಂತರ ವರದಿಯನ್ನು ಸಲ್ಲಿಸಿದರು. ಮಧ್ಯಂತರ ವರದಿಯ ಶಿಫಾರಸ್ಸುಗಳು ಏನು.? ರಾಜ್ಯದಲ್ಲಿ ಎಸ್ಸಿಯಲ್ಲಿರುವಂತ ಉಪ ಜಾತಿಗಳ ವೈಜ್ಞಾನಿಕ ವರ್ಗೀಕರಣ ಮಾಡಲು ಹೊಸದಾದಂತ ಸಮೀಕ್ಷೆ ನಡೆಸಿ ದತ್ತಾಂಶವನ್ನು ಸಂಗ್ರಹಿಸಲು ಶಿಫಾರಸ್ಸು. ರಾಜ್ಯದಲ್ಲಿ ಪರಿಶಿಷ್ಟ ಜಾತಿಯಲ್ಲಿರುವ ಉಪ ಜಾತಿಗಳ ವೈಜ್ಞಾನಿಕ ಸಮೀಕ್ಷೆಯನ್ನು ಆಧುನಿಕ ತಂತ್ರಜ್ಞಾನದ ಸಾಧನಗಳನ್ನು ಬಳಸಿ 30 ರಿಂದ 40 ದಿನಗಳಲ್ಲಿ ಹೊಸದಾದ ಸಮೀಕ್ಷೆ ಮಾಡಬಹುದು ಎಂಬುದಾಗಿ ತಜ್ಞರ ಅಭಿಪ್ರಾಯ. ಹೊಸದಾದ ಸಮೀಕ್ಷೆ ನಡೆಸಲು ಅಗತ್ಯವಿರುವಂತ ಪ್ರಶ್ನಾವಳಿ ತಯಾರಿಸಲು ಶಿಫಾರಸ್ಸು ಪರಿಶಿಷ್ಟ ಜಾತಿಯಲ್ಲಿರುವ ಉಪಜಾತಿಗಳ ವೈಜ್ಞಾನಿಕ ವರ್ಗೀಕರಣದ ಕುರಿತು ಯಾವ ಸಂಸ್ಥೆಯಿಂದ ಸಮೀಕ್ಷೆ ನಡೆಸಬೇಕು. ಸಿಬ್ಬಂದಿಗೆ ತರಬೇತಿ,…
ಬೆಂಗಳೂರು: ರಾಜ್ಯದಲ್ಲಿ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ ಗೆ 4 ರೂ.ಗಳಷ್ಟು ಹೆಚ್ಚಳ ಮಾಡುವುದಕ್ಕೆ ರಾಜ್ಯ ಸಚಿವ ಸಂಪುಟ ಅನುಮೋದಿಸಿದೆ. ಹಾಗಾದ್ರೇ ಯಾವ ಪ್ಯಾಕೇಟ್ ಹಾಲು ಎಷ್ಟು ರೂಪಾಯಿ ಹೆಚ್ಚಳವಾಗಲಿದೆ ಅಂತ ಮಾಹಿತಿ ಮುಂದಿದೆ ಓದಿ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ ಗೆ ರೂ.4 ಹೆಚ್ಚಳ ಮಾಡುವುದಕ್ಕೆ ಅನುಮೋದಿಸಿದೆ. ಈ ಮೂಲಕ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಅನ್ನು ಕಾಂಗ್ರೆಸ್ ಸರ್ಕಾರ ನೀಡಿದೆ. ಹೀಗಿದೆ ನೂತನ ಪರಿಷ್ಕೃತ ದರಪಟ್ಟಿ ನೀಲಿ ಪ್ಯಾಕೇಟ್ ಹಾಲಿನ ದರ 44 ರೂಪಾಯಿಯಿಂದ 48 ರೂಪಾಯಿಗೆ ಏರಿಕೆ. ಆರೇಂಜ್ ಪ್ಯಾಕೇಟ್ ನಂದಿನಿ ಹಾಲಿನ ದರ ರೂ.54 ರಿಂದ 58 ರೂಗೆ ಏರಿಕೆ. ಸಮೃದ್ಧಿ ಪ್ಯಾಕೇಟ್ ನಂದಿನಿ ಹಾಲಿನ ದರ ರೂ.56 ರಿಂದ 60ಕ್ಕೆ ಏರಿಕೆ. ಗ್ರೀನ್ ಸ್ಪೆಷಲ್ ಹಾಲಿನ ದರ ರೂ.54 ರಿಂದ 58ಕ್ಕೆ ಏರಿಕೆ. ನಾರ್ಮಲ್ ಗ್ರೀನ್ ಹಾಲಿನ ದರ ರೂ.52ರಿಂದ…
ಶಿವ ಪರಿವಾರದ ಪೂಜೆಗೆ ಪ್ರದೋಷ ವ್ರತ ಮಂಗಳಕರ. ಈ ದಿನ ಭಕ್ತಿಯಿಂದ ಪರಶಿವನನ್ನು ಧ್ಯಾನಿಸಿದರೆ ಎಲ್ಲಾ ಕಷ್ಟಗಳು ದೂರವಾಗುತ್ತವೆ ಎಂಬುದು ನಂಬಿಕೆ. ಹಿಂದೂ ಧರ್ಮದಲ್ಲಿ ಪ್ರದೋಷ ವ್ರತಕ್ಕೆ ಬಹಳ ಮಹತ್ವವಿದೆ. ಶ್ರದ್ಧೆಯಿಂದ ಉಪವಾಸ ಕೈಗೊಂಡು ಈ ದಿನ ವ್ರತವನ್ನು ಎಲ್ಲರೂ ಆಚರಿಸುತ್ತಾರೆ. ಅಂತೆಯೇ, ಈ ಸಲ ಗುರುವಾರ ಪ್ರದೋಷ ವ್ರತ ಬಂದಿದೆ. ಹೀಗಾಗಿ, ಇದನ್ನು ಗುರು ಪ್ರದೋಷ ವ್ರತ ಎಂದೂ ಕರೆಯಲಾಗುತ್ತದೆ. ಗುರು ಪ್ರದೋಷ ವ್ರತದ ಮಹತ್ವ, ಮುಹೂರ್ತ, ಪೂಜಾ ವಿಧಿ ಮತ್ತು ಪರಿಹಾರಗಳ ಬಗ್ಗೆ ಇಲ್ಲಿ ನೋಡೋಣ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ.…
ಬೆಂಗಳೂರು: ಬಿಜೆಪಿ ಮತ್ತು ಬಿಜೆಪಿ ನಾಯಕರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇದ್ದರೆ ಸಂವಿಧಾನ ಬದಲಾಯಿಸುವುದ್ದಿಲ್ಲ ಎಂಬ ಘೋಷಣೆಯನ್ನು ಅಂಬೇಡ್ಕರ್ ರವರ ಹೆಸರಿನಲ್ಲಿ ಪ್ರಮಾಣ ಮಾಡಿ ಹೇಳಲು ಕಾಂಗ್ರೆಸ್ ಪಕ್ಷವು ಒತ್ತಾಯಿಸುತ್ತದೆ ಎಂಬುದಾಗಿ ಮಾಜಿ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಸವಾಲ್ ಹಾಕಿದ್ದಾರೆ. ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಸಂಘ ಪರಿವಾರದ ಮೂಲಭೂತ ಸಿದ್ಧಾಂತಗಳಿಗೆ ಅನುಗುಣವಾಗಿ ನಮ್ಮ ದೇಶದ ಸಂವಿಧಾನವನ್ನು ಬದಲಾಯಿಸುವ ಹಿಡನ್ ಅಜೆಂಡ ಹೊಂದಿರುವ ಬಿಜೆಪಿ, ಸಮಯಕ್ಕೆ ಅನುಗುಣವಾಗಿ ತನ್ನ ಬಣ್ಣ ಬದಲಾಯಿಸಿಕೊಂಡು ರಾಜಕೀಯ ಹೇಳಿಕೆಗಳನ್ನು ನೀಡುತ್ತಿದೆ ಜನಸಂಘದ ಕಾಲದಿಂದಲೂ ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿರುವ ಬಿಜೆಪಿ ಆಯಾ ಸಂದರ್ಭದಲ್ಲಿ ಸಂಘ ಪರಿವಾರದ ವೇದಿಕೆಗಳಲ್ಲಿ, ನಾಯಕರ ಹೇಳಿಕೆಗಳಲ್ಲಿ ನಿರಂತರವಾಗಿ ನಮ್ಮ ದೇಶದ ಸಂವಿಧಾನವನ್ನು ಮನುಸ್ಮೃತಿಗೆ ಅನುಗುಣವಾಗಿ ಮೂಲಭೂತವಾದಕ್ಕೆ ಪೂರಕವಾಗಿ ಬದಲಾವಣೆ ಮಾಡುವ ಹೇಳಿಕೆಗಳನ್ನು ನೀಡಿಕೊಂಡು ಬಂದಿರುತ್ತದೆ ಎಂದಿದ್ದಾರೆ. ದೆಹಲಿಯ ಖಾಸಗಿ ಮಾಧ್ಯಮದಲ್ಲಿ ಸಂದರ್ಶನ ಒಂದರಲ್ಲಿ ಮಾತನಾಡಿದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಅಧ್ಯಕ್ಷರು…
ಬೆಂಗಳೂರು: ಹನಿಟ್ರ್ಯಾಪ್ ಯತ್ನ ಆರೋಪಕ್ಕೆ ಈಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಹನಿಟ್ರ್ಯಾಪ್ ಯತ್ನ ಆರೋಪದ ಸಂಬಂಧ ದೂರು ನೀಡದಂತ ಎಂಎಲ್ಸಿ ರಾಜೇಂದ್ರ ಅವರು, ನನ್ನ ಕೊಲೆಗೆ ಯತ್ನ ನಡೆದಿದೆ ಎಂಬುದಾಗಿ ಡಿಜಿ-ಐಜಿಪಿಗೆ ದೂರು ನೀಡಿದ್ದಾರೆ. ಇಂದು ಬೆಂಗಳೂರಲ್ಲಿ ಡಿಜಿ-ಐಜಿಪಿ ಅಲೋಕ್ ಮೋಹನ್ ಅವರನ್ನು ಭೇಟಿಯಾಗಿರುವಂತ ವಿಧಾನ ಪರಿಷತ್ ಸದಸ್ಯ ರಾಜೇಂದ್ರ ರಾಜಣ್ಣ ಅವರು ನನ್ನ ಕೊಲೆಗೆ ಯತ್ನ ನಡೆದಿದೆ ಎಂಬುದಾಗಿ ದೂರು ನೀಡಿದ್ದಾರೆ. ದೂರಿನ ಜೊತೆಗೆ ಆಡಿಯೋ ಕ್ಲಿಪ್ ಗಳನ್ನು ನೀಡಿದ್ದಾರೆ. ಅಲ್ಲದೇ ನಮ್ಮ ಮನೆಗೆ ಶಾಮಿಯಾನ ಹಾಕಲು ಬಂದಿದ್ದವರು ನನ್ನ ಕೊಲೆಗೆ ಯತ್ನ ಮಾಡಿದ್ದಾರೆ ಎಂಬುದಾಗಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಎಂಎಲ್ಸಿ ರಾಜೇಂದ್ರ ಅವರಿಗೆ ತುಮಕೂರು ಎಸ್ಪಿಗೆ ದೂರು ನೀಡುವಂತೆ ಡಿಜಿ-ಐಜಿಪಿ ಅಲೋಕ್ ಮೋಹನ್ ಅವರು ಸೂಚಿಸಿದ್ದಾರೆ. ಹೀಗಾಗಿ ನಾಳೆ ತುಮಕೂರು ಎಸ್ಪಿ ಭೇಟಿಯಾಗಿ ಈ ಸಂಬಂಧ ದೂರು ನೀಡುವುದಾಗಿ ಎಂಎಲ್ಸಿ ರಾಜೇಂದ್ರ ತಿಳಿಸಿದ್ದಾರೆ. https://kannadanewsnow.com/kannada/nandini-milk-price-hiked-by-rs-4-per-litre-state-cabinet/ https://kannadanewsnow.com/kannada/breaking-mp-priyanka-gandhi-visits-sitadevi-love-kush-temple-in-kerala-watch-video/
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ಇಂದಿನ ರಾಜ್ಯ ಸಚಿವ ಸಂಪು ಸಭೆಯಲ್ಲಿ ರಾಜ್ಯದ ಜನತೆಗೆ ಮತ್ತೊಂದು ಶಾಕ್ ನೀಡುವಂತ ನಿರ್ಧಾರ ಕೈಗೊಳ್ಳಲಾಗಿದೆ. ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ ಗೆ ರೂ.4 ಹೆಚ್ಚಳ ಮಾಡುವುದಕ್ಕೆ ಅನುಮೋದನೆ ನೀಡಲಾಗಿದೆ. ಕೆಲ ದಿನಗಳ ಹಿಂದೆ ಕೆ ಎಂ ಎಫ್ ಜೊತೆಗೆ ಸಿಎಂ ಸಿದ್ಧರಾಮಯ್ಯ ಸಭೆ ನಡೆಸಿದ್ದರು. ಅಂದು ನಂದಿನಿ ಹಾಲಿನ ದರ ಹೆಚ್ಚಳದ ಬಗ್ಗೆ ಪ್ರಸ್ತಾಪಿಸಲಾಗಿತ್ತು. ಆ ಸಭೆಯ ಬಳಿಕ ಸಿಎಂ ಸಿದ್ಧರಾಮಯ್ಯ ಅವರು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳೋದಾಗಿ ತಿಳಿಸಿದ್ದರು. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ಗ್ರಾಹಕರಿಗೆ ಬಿಗ್ ಶಾಕ್ ಎನ್ನುವಂತೆ ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ 4 ರೂಪಾಯಿ ಹೆಚ್ಚಳಕ್ಕೆ ಅನುಮೋದನೆ ನೀಡಲಾಗಿದೆ. ದಿನೇ ದಿನೇ ರಾಜ್ಯದ ಜನರು ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿ ಹೋಗುವಂತೆ ಆಗಿದೆ. ಮೆಟ್ರೋ, ಬಿಎಂಟಿಸಿ, ಕೆ ಎಸ್…