Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಬೆಂಗಳೂರು: ಹೋಟೆಲ್ ಮಾಲೀಕರೊಬ್ಬರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ, ಕೋಮಾಗೆ ಜಾರುವಂತೆ ಹೊಡೆದಿರುವಂತ ಘಟನೆ ಎಲೆಕ್ಟ್ರಾನಿಕ್ ಸಿಟಿ ವ್ಯಾಪ್ತಿಯಲ್ಲಿ ನಡೆದಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿಜಯೇಂದ್ರ ಶೆಟ್ಟಿ ಎಂಬುವರು ಮಂಜುನಾಥ್ ಟಿಫನ್ ಸೆಂಟರ್ ಎಂಬಂತ ಹೋಟೆಲ್ ಒಂದನ್ನು ನಡೆಸುತ್ತಿದ್ದರು. ರಾತ್ರಿ ಮಲಗುವಾಗ ಕಿಟಕಿಯಲ್ಲಿ ಕೀ ಇಟ್ಟು, ಹೋಟೆಲ್ ಒಳಗೆ ಮಲಗುತ್ತಿದ್ದಂತ ಅವರು, ನಿನ್ನೆ ರಾತ್ರಿ ಕೂಡ ಎಂದಿನಂತೇ ಕಿಟಕಿಯಲ್ಲಿ ಕೀ ಇಟ್ಟು ಮಲಗಿದ್ದಾರೆ. ಈ ವಿಷಯ ತಿಳಿದಿದ್ದಂತ ಪರಿಚಯಸ್ಥರೇ, ಕೀ ತೆಗೆದು ಒಳಗೆ ನುಗ್ಗಿ, ವಿಜಯೇಂದ್ರ ಶೆಟ್ಟಿ ಮೇಲೆ ಹಲ್ಲೆ ಮಾಡಿದ್ದಾರೆ. ತೀವ್ರವಾಗಿ ಹಲ್ಲೆಯಿಂದಾಗಿ ವಿಯಜೇಂದ್ರ ಶೆಟ್ಟಿ ಕೋಮಾಗೆ ಹೋಗಿದ್ದಾರೆ. ಅವರನ್ನು ಹೋಟೆಲ್ ಕೆಲಸಕ್ಕೆ ಬೆಳಿಗ್ಗೆ ಬಂದಂತ ಸಿಬ್ಬಂದಿ, ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ. ಉಡುಪಿ ಜಿಲ್ಲೆಯ ಕುಂದಾಪುರ ಮೂಲಕ ವಿಜಯೇಂದ್ರ ಶೆಟ್ಟಿ ಅವರು ಕಳೆದ ಕೆಲ ವರ್ಷಗಳಿಂದ ಮಂಜುನಾಥ ಟಿಫನ್ ಸೆಂಟರ್ ನಡೆಸುತ್ತಿದ್ದರು. ಬೆಳಿಗ್ಗೆ ಹೋಟೆಲ್ ಕೆಲಸಕ್ಕೆ ಬರುವಂತ ಸಿಬ್ಬಂದಿಗಾಗಿ ಕಿಟಕಿಯಲ್ಲಿ ಕೀ ಇಟ್ಟು ಹೋಟೆಲ್…

Read More

ಬೆಂಗಳೂರು: ನಾನು ಯಾವುದೇ ಕಾರಣಕ್ಕೂ ಆಶ್ರಯ ಶಾಲೆಯ ಮಕ್ಕಳು, ಬಡವರು ಹಾಗೂ ದಲಿತ ಮಕ್ಕಳ ಶಿಕ್ಷಣದ ಬಗ್ಗೆ ನಿರ್ಲಕ್ಷ್ಯ ವಹಿಸುವುದನ್ನು ಸಹಿಸುವುದಿಲ್ಲ ಅಂತ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಸಿಎಂ ಸಿದ್ಧರಾಮಯ್ಯ ಎಚ್ಚರಿಸಿದ್ದಾರೆ. ಇಂದು ಸಿಎಂ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿದರು. ಈ ಸಭೆಯಲ್ಲಿ ಮಾತನಾಡಿದಂತ ಅವರು, ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ಆಶ್ರಮ ಶಾಲೆಯ ಮಕ್ಕಳು, ಬಡವರು, ದಲಿತ ಮಕ್ಕಳ ಶಿಕ್ಷಣದ ಬಗ್ಗೆ ನಿರ್ಲಕ್ಷ್ಯಕ್ಕೆ ಗರಂ ಆಗಿ ಅಧಿಕಾರಿಗಳನ್ನು ತೀವ್ರವಾಗಿ ಸಿಎಂ ಸಿದ್ಧರಾಮಯ್ಯ ತರಾಟೆಗೆ ತೆಗೆದುಕೊಂಡರು. ಅಲ್ಲದೇ ಆಶ್ರಮ ಶಾಲೆಗಳಿಗೆ ರಾತ್ರಿ ವೇಳೆ ಭೇಟಿ ನೀಡಿ ವ್ಯವಸ್ಥೆ ಗಮನಿಸದ್ದಕ್ಕೆ ಅಧಿಕಾರಿಗಳಿಗೆ ಫುಲ್ ಕ್ಲಾಸ್ ತೆಗೆದು ಕೊಂಡರು. ದಲಿತ, ಬುಡಕಟ್ಟು, ಬಡವರ ಮಕ್ಕಳ ಶಿಕ್ಷಣಕ್ಕೆ, ಹಾಸ್ಟೆಲ್ ಗಳಿಗೆ ಇಷ್ಟೆಲ್ಲಾ ಹಣ, ಸವಲತ್ತು ಕೊಡುತ್ತಿದ್ದರೂ ಮಕ್ಕಳ ಶೈಕ್ಷಣಿಕ ಮಟ್ಟ ಏಕೆ ಏರಿಕೆ ಆಗುತ್ತಿಲ್ಲ? ಈ ಬಗ್ಗೆ ನಿರಂತರ ನಿಗಾ…

Read More

ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿದರು. ಆ ಸಭೆಯ ಮುಖ್ಯಾಂಶಗಳನ್ನು ಮುಂದೆ ಓದಿ. • ಹೊಸಪೇಟೆ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಹಾಗೂ 120 ತಾಲ್ಲೂಕುಗಳಲ್ಲಿ ತಾಲ್ಲೂಕು ಕ್ರೀಡಾಂಗಣಗಳಿಲ್ಲ. ಕಳೆದ ಐದು ವರ್ಷಗಳಲ್ಲಿ ಶೇ. 95 ರಷ್ಟು ಕಾಮಗಾರಿಗಳನ್ನು ಕೆ.ಆರ್.ಐ.ಡಿ.ಎಲ್. ಮೂಲಕ ಮಾಡುತ್ತಿದ್ದಾರೆ. ಟೆಂಡರ್‌ ಕರೆಯದೆ ಮಾಡುತ್ತಿದ್ದಾರೆ. ಎರಡು ಕೋಟಿ ಮಿತಿಯಲ್ಲಿ ಕಾಮಗಾರಿಗಳನ್ನು ಸೀಮಿತಗೊಳಿಸಿ, ಅಪೂರ್ಣವಾಗಿರುವಂತಹ ಸ್ಥಿತಿ ಒದಗಿಸದೆ ಎಂದು ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳು ತಿಳಿಸಿದರು. ಇಲಾಖೆಯ ಕಾಮಗಾರಿಗಳ ಯೋಜನೆ ರೂಪಿಸಲು, ಮೇಲ್ವಿಚಾರಣೆಗೆ ಲೋಕೋಪಯೋಗಿ ಇಲಾಖೆಯಿಂದ ಇಬ್ಬರು ಎಂಜಿನಿಯರುಗಳ ಸೇವೆ ಪಡೆಯುವಂತೆ ಸೂಚಿಸಿದರು. ಎಲ್ಲ ಕಾಮಗಾರಿಗಳನ್ನು ಟೆಂಡರ್‌ ಆಹ್ವಾನಿಸಿಯೇ ಅನುಷ್ಠಾನಗೊಳಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು. • 174 ಕೋಚ್‌ಗಳ ನೇಮಕಕ್ಕೆ ಸರ್ಕಾರ ಅನುಮೋದನೆ ನೀಡಿದ್ದು, ವೃಂದ ಮತ್ತು ನೇಮಕಾತಿ ನಿಯಮ ಅಂತಿಮಗೊಳಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ತಿಳಿಸಿದರು. 1486 ಕ್ರೀಡಾಪಟುಗಳಿಗೆ ಕ್ರೀಡಾ ಪ್ರೋತ್ಸಾಹಧನ ನೀಡಲಾಗಿದೆ ಎಂದು ಆಯುಕ್ತರು ತಿಳಿಸಿದರು.…

Read More

ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಲಾಯಿತು. ಆ ಸಭೆಯ ಮುಖ್ಯಾಂಶಗಳ ಬಗ್ಗೆ ಮುಂದೆ ಓದಿ. • ಇಲಾಖೆಯ ಒಟ್ಟಾರೆ ಆಯವ್ಯಯದಲ್ಲಿ ಬಿಡುಗಡೆಯಾದ ಮೊತ್ತ 1884.01 ಕೋಟಿ ರೂ. ನಲ್ಲಿ 1879.35 ಕೋಟಿ ವೆಚ್ಚವಾಗಿದ್ದು, 99.75 % ಸಾಧನೆಯಾಗಿದೆ. • ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯಡಿ 389 ವಿದ್ಯಾರ್ಥಿ ನಿಲಯಗಳು, ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಗಳು – 39,541 ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶ ಒದಗಿಸಿದ್ದು, 194.71 ಕೋಟಿ ರೂ. ಒದಗಿಸಲಾಗಿದೆ. ಎಸ್‌.ಎಸ್‌.ಎಲ್‌.ಸಿ. ಯಲ್ಲಿ ಶೇ. 77 ರಷ್ಟು ಫಲಿತಾಂಶ ಬಂದಿದ್ದು, ಫಲಿತಾಂಶ ಉತ್ತಮ ಪಡಿಸಲು ಸೂಚನೆ ನೀಡಿದರು. • 2,90,546 ವಿದ್ಯಾರ್ಥಿಗಳಿಗೆ 50.47 ಕೋಟಿ ರೂ. ಮೆಟ್ರಿಕ್‌ ಪೂರ್ವ ವಿದ್ಯಾರ್ಥಿ ವೇತನ ಪಾವತಿ ಮಾಡಲಾಗಿದೆ. 2,48,887 ವಿದ್ಯಾರ್ಥಿಗಳಿಗೆ 302.64 ಕೋಟಿ ರೂ. ಮೆಟ್ರಿಕ್‌ ನಂತರದ ವಿದ್ಯಾರ್ಥಿ ವೇತನ ಪಾವತಿ ಮಾಡಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು. • ಹಾಸ್ಟೆಲ್‌ಗಳಿಗೆ ಸಂಜೆ…

Read More

ಬೆಂಗಳೂರು: ನಟ ದರ್ಶನ್ ಅಂಡ್ ಗ್ಯಾಂಗ್ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನವಾಗಿದೆ. ಈ ಪ್ರಕರಣದ ಬಗ್ಗೆ ಹಲವು ದಿನಗಳ ಬಳಿಕ ನಟಿ ರಚಿತಾ ರಾಮ್ ಮೌನ್ ಮುರಿದಿದ್ದಾರೆ. ಏನು ಅಂತ ಹೇಳಿದ್ದಾರೆ ಎನ್ನುವ ಬಗ್ಗೆ ಮುಂದೆ ಓದಿ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಹಲವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣ ಸಂಬಂಧ ತನಿಖೆಯನ್ನು ತೀವ್ರಗೊಳಿಸಿ ಸ್ಛಳ ಮಹಜರು ಕೂಡ ಮನಡೆಸುತ್ತಿದ್ದಾರೆ. ಇತ್ತ ನಟಿ ರಚಿತಾ ರಾಮ್ ಕೂಡ ನಟ ದರ್ಶನ್ ಅರೆಸ್ಟ್ ಬಗ್ಗೆ ಮೌನ ಮುರಿದು ಮಾತನಾಡಿದ್ದಾರೆ. ಇನ್ ಸ್ಟಾಗ್ರಾಂನಲ್ಲಿ ಪೋಸ್ಟ್ ಹಾಕಿರುವಂತ ಅವರು, ಏನು ಬರೆದಿದ್ದಾರೆ ಅಂತ ಮುಂದೆ ಓದಿ. ನಮಸ್ಕಾರ ಈ ನೋಟ್‌ನ ನಾನು ನಟಿಯಾಗಿ ಅಲ್ಲ ಸಾಮಾನ್ಯ ಪ್ರಜೆಯಾಗಿ ಬರೆಯುತ್ತಿದ್ದೇನೆ. ಇತ್ತೀಚಿಗೆ ನಡೆದ ಪ್ರಕರಣದ ಬಗ್ಗೆ ನನ್ನ ಮಾತು! ಮೊದಲನೇಯಾದಗಿ ರೇಣುಕಾಸ್ವಾಮಿ ಅವರ ಆತ್ಮಕ್ಕೆ ಶಾಂತಿ ಸಿಗಲಿ ಅವರ ಕುಟುಂಬಕ್ಕೆ ಭಗವಂತ ಧೈರ್ಯ ಭರಿಸುವ ಶಕ್ತಿ ನೀಡಲಿ ಎಂಬ…

Read More

ನವದೆಹಲಿ: ರಿಲಯನ್ಸ್ ಜಿಯೋ ಅವರ ಮೊಬೈಲ್ ಸೇವೆ ಡೌನ್ ಆಗಿದೆ. ಈ ಹಿನ್ನಲೆಯಲ್ಲಿ ಜೀಯೋ ಸೇವೆ ಬಳಸುತ್ತಿರುವಂತ ಸಾವಿರಾರು ಬಳಕೆದಾರರಿಗೆ ಮೊಬೈಲ್ ಇಂಟರ್ನೆಟ್ ಪ್ರವೇಶಿಸಲು ಸಾಧ್ಯವಾಗುತ್ತಿಲ್ಲ ಎಂಬುದಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಅಳಲು ತೋಡಿಕೊಂಡಿದ್ದಾರೆ. ವಾಟ್ಸಾಪ್, ಇನ್ಸ್ಟಾಗ್ರಾಮ್, ಎಕ್ಸ್, ಸ್ನ್ಯಾಪ್ಚಾಟ್, ಯೂಟ್ಯೂಬ್ ಮತ್ತು ಗೂಗಲ್ ಸೇರಿದಂತೆ ಎಲ್ಲಾ ದೈನಂದಿನ ಬಳಕೆಯ ಅಪ್ಲಿಕೇಶನ್ಗಳನ್ನು ಪ್ರವೇಶಿಸಲು ಸಾಧ್ಯವಾಗದ ಕಾರಣ ದೇಶಾದ್ಯಂತ ಬಳಕೆದಾರರು ಜಿಯೋ ಸೇವೆಗಳು ಕಾರ್ಯನಿರ್ವಹಿಸುತ್ತಿಲ್ಲ ಎಂದು ದೂರುತ್ತಿದ್ದಾರೆ. ಡೌನ್ಡೆಟೆಕ್ಟರ್ ಪ್ರಕಾರ, ಶೇಕಡಾ 54 ಕ್ಕೂ ಹೆಚ್ಚು ದೂರುದಾರರು ಮೊಬೈಲ್ ಇಂಟರ್ನೆಟ್, 38 ಪ್ರತಿಶತದಷ್ಟು ಜಿಯೋ ಫೈಬರ್ ಮತ್ತು 7 ಪ್ರತಿಶತದಷ್ಟು ಮೊಬೈಲ್ ನೆಟ್ವರ್ಕ್ಗಳೊಂದಿಗೆ ಅಡೆತಡೆಗಳನ್ನು ಎದುರಿಸುತ್ತಿದ್ದಾರೆ. ಪ್ರಮುಖ ಟೆಲಿಕಾಂ ಪೂರೈಕೆದಾರ ಜಿಯೋ ಮಂಗಳವಾರ ದೇಶಾದ್ಯಂತ ಸಾವಿರಾರು ಬಳಕೆದಾರರ ಮೇಲೆ ಪರಿಣಾಮ ಬೀರಿದ್ದು, ಭಾರಿ ನೆಟ್ವರ್ಕ್ ಸ್ಥಗಿತವನ್ನು ಅನುಭವಿಸಿದೆ. ನೈಜ-ಸಮಯದ ಸ್ಥಗಿತಗಳನ್ನು ಮೇಲ್ವಿಚಾರಣೆ ಮಾಡುವ ಪ್ಲಾಟ್ಫಾರ್ಮ್ ಡೌನ್ಡೆಟೆಕ್ಟರ್, ತಮ್ಮ ಜಿಯೋ ಸೇವೆಗಳೊಂದಿಗೆ ಸಂಪರ್ಕ ಸಮಸ್ಯೆಗಳನ್ನು ಎದುರಿಸುತ್ತಿರುವ 2,437 ವ್ಯಕ್ತಿಗಳಿಂದ ದೂರುಗಳನ್ನು ದಾಖಲಿಸಿದೆ. ಮಧ್ಯಾಹ್ನ 1:42 ರ…

Read More

ಉತ್ತರ ಕನ್ನಡ: ಜಿಲ್ಲೆಯ ಬನವಾಸಿಯಲ್ಲಿ ಉಗ್ರರ ಜೊತೆಗೆ ನಂಟು ಹೊಂದಿದ್ದಂತ ಆರೋಪಿಯ ನಿವಾಸದ ಮೇಲೆ ಎನ್ಐಎ ಹಾಗೂ ರಾಜ್ಯ ಗುಪ್ತಚರ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಬನವಾಸಿಯ ದಾಸನಕೊಪ್ಪದಲ್ಲಿನ ಅಬ್ದುಲ್ ಶುಕ್ಕೂರ್ ಎಂಬಾತನ ನಿವಾಸದ ಮೇಲೆ ಎನ್ಐಎ, ರಾಜ್ಯ ಗುಪ್ತಚರ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಂದು ಬೆಳಿಗ್ಗೆ ಐವರು ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಅಬ್ದುಲ್ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಪಾಸ್ ಪೋರ್ಟ್ ಗೆ ನಕಲಿ ದಾಖಲೆ ನೀಡಿದ್ದು ದೃಢಪಟ್ಟಿರೋದಾಗಿ ತಿಳಿದು ಬಂದಿದೆ. ಅಬ್ದುಲ್ ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಪೋಟಕ ಪ್ರಕರಣ, ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿಗಳಿಗೆ ಪ್ರಚೋದನೆ ನೀಡುತ್ತಿದ್ದನು ಎನ್ನಲಾಗಿದೆ. ಅಲ್ಲದೇ ನಿಷೇಧಿತ ಪಿಎಫ್ಐ ಸಂಘಟನೆ ಸದಸ್ಯ ಕೂಡ ಆಗಿದ್ದನಂತೆ. ಬಕ್ರಿದ್ ಹಬ್ಬಕ್ಕಾಗಿ ಬನಸವಾಸಿಯ ದಾಸನಕೊಪ್ಪಕ್ಕೆ ಅಬ್ದುಲ್ ಬಂದಿದ್ದನು. ದುಬೈನಲ್ಲಿ ಕೆಲಸ ಮಾಡುತ್ತಿದ್ದಂತ ಅಬ್ದುಲ್ ಉಗ್ರ ಸಂಘಟನೆಯೊಂದಿಗೆ ಸಂಪರ್ಕವನ್ನು ಆನ್ ಲೈನ್ ಮೂಲಕ ಹೊಂದಿದ್ದ ಎನ್ನಲಾಗುತ್ತಿದೆ. ಈ ಬಗ್ಗೆ ತನಿಖೆ ಮುಂದುವರೆದಿದ್ದು,…

Read More

ಬೆಂಗಳೂರು: ಕಾಂಗ್ರೆಸ್ ಪಕ್ಷ ಸೇರಿದ್ದಂತ ಜಗದೀಶ್ ಶೆಟ್ಟರ್ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಲಾಗಿತ್ತು. ಆದ್ರೇ ಲೋಕಸಭಾ ಚುನಾವಣೆಯ ವೇಳೆಯಲ್ಲಿ ಆ ಸ್ಥಾನಕ್ಕೆ ರಾಜೀನಾಮೆ ನೀಡಿ, ಸಂಸದರಾಗಿದ್ದರು. ಈ ವಿಧಾನಪರಿಷತ್ತಿನ ಒಂದು ಸ್ಥಾನಕ್ಕೆ ಉಪ ಚುನಾವಣೆ ಘೋಷಣೆ ಮಾಡಲಾಗಿದೆ. ಈ ಕುರಿತಂತೆ ಚುನಾವಣಾಧಿಕಾರಿಗಳು ಮಾಹಿತಿ ನೀಡಿದ್ದು, ಜುಲೈ.12ರಂದು ವಿಧಾನಪರಿಷತ್ತಿನ ಒಂದು ಸ್ಥಾನಕ್ಕೆ ಉಪ ಚುನಾವಣೆ ನಡೆಯಲಿದೆ. ಜಗದೀಶ್ ಶೆಟ್ಟರ್ ಅವರ ರಾಜೀನಾಮೆಯಿಂದ ತೆರವಾದಂತ ಸ್ಥಾನಕ್ಕೆ ಉಪ ಚುನಾವಣೆ ನಡೆಸಲಾಗುತ್ತಿದೆ ಎಂದಿದ್ದಾರೆ. ವಿಧಾನಸಭೆಯಿಂದ ವಿಧಾನ ಪರಿಷತ್ ಸ್ಥಾನಕ್ಕೆ ಈ ಉಪ ಚುನಾವಣೆ ನಡೆಯಲಿದೆ. ಸಂಸದರಾಗುವ ಮೊದರು ಜಗದೀಶ್ ಶೆಟ್ಟರ್ ಅವರು ವಿಧಾನ ಪರಿಷತ್ ಸದಸ್ಯರಾಗಿದ್ದರು. ಕಾಂಗ್ರೆಸ್ ಪಕ್ಷ ಹಾಗೂ ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿ, ಲೋಕಸಭಾ ಚುನಾವಣೆಗೆ ಬಿಜೆಪಿ ಪಕ್ಷ ಸೇರಿ ಕಣಕ್ಕೆ ಇಳಿದು ಗೆಲುವು ಸಾಧಿಸಿದ್ದಾರೆ. ಈಗ ಸಂಸದರು ಕೂಡ ಆಗಿದ್ದಾರೆ. https://kannadanewsnow.com/kannada/renukaswamy-murder-case-police-seize-3-bikes-from-actor-darshans-house/ https://kannadanewsnow.com/kannada/market-cap-crosses-5-trillion-mark-after-modi-becomes-pm-pm-modi/

Read More

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಹಲವು ಆರೋಪಿಗಳನ್ನು ಬಂಧಿಸಲಾಗಿದೆ. ಈ ಪ್ರಕರಣ ಸಂಬಂಧ ಸ್ಥಳ ಮಹಜರನ್ನು ಪೊಲೀಸರು ನಡೆಸುತ್ತಿದ್ದಾರೆ. ಇದೇ ವೇಳೆಯಲ್ಲಿ ನಟ ದರ್ಶನ್ ಮನೆಯಲ್ಲಿದ್ದ 3 ಬೈಕ್ ಪೊಲೀಸರು ವಶಕ್ಕೆ ಪಡೆದಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಆರೋಪಿಗಳ ಸಮ್ಮುಖದಲ್ಲಿ ಕೃತ್ಯ ನಡೆದಂತ ವಿವಿಧ ಸ್ಥಳಗಳಲ್ಲಿ ಸ್ಥಳ ಮಹಜರು ನಡೆಸುತ್ತಿದ್ದಾರೆ. ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ವಿವಿಧ ಆರೋಪಿಗಳನ್ನು ಕರೆದೊಯ್ದು ಸ್ಥಳ ಮಹಜರು ನಡೆಸಿದ್ದಾರೆ. ಈಗಾಗಲೇ ರೇಣುಕಾಸ್ವಾಮಿ ಕಿನ್ನ್ಯಾಪ್ ಮಾಡೋದಕ್ಕೆ ಬಳಸಿದ್ದಂತ ಕಾರೊಂದನ್ನು ವಶಕ್ಕೆ ಪಡೆದಿದ್ದರು. ಈ ಬಳಿಕ ನಟ ದರ್ಶನ್ ನಿವಾಸದಲ್ಲಿದ್ದಂತ 3 ಬೈಕ್ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. https://kannadanewsnow.com/kannada/market-cap-crosses-5-trillion-mark-after-modi-becomes-pm-pm-modi/ https://kannadanewsnow.com/kannada/expensive-duniya-for-common-man-prices-of-essential-commodities-including-pulses-and-grains-rise-sharply/

Read More

ಬೆಂಗಳೂರು: ಪೆಟ್ರೋಲ್ ಮತ್ತು ಡೀಸೆಲ್‌ ಬೆಲೆಯನ್ನು ನಾವು ಕೇವಲ ಮೂರು ರೂ. ಏರಿಸಿದ್ದೇವೆ ಅಷ್ಟೇ.‌ ಮೋದಿ ಅಧಿಕಾರಕ್ಕೆ ಬಂದ ನಂತರ ಅಡುಗೆ ಅನಿಲ, ಪೆಟ್ರೋಲ್ ಮತ್ತು ಡೀಸೆಲ್‌ ‌ಬೆಲೆಗಳು ಕ್ರಮವಾಗಿ 400, 38 ಮತ್ತು 35 ರೂ. ದುಬಾರಿ ಆಗಿದೆ. ಆಗ ತೆಪ್ಪಗಿದ್ದ ಬಿಜೆಪಿಯ ಅಶೋಕ್ ಮತ್ತು ವಿಜಯೇಂದ್ರ ಗ್ಯಾಂಗ್ ಈಗ ಪ್ರತಿಭಟಿಸುತ್ತಿರುವುದು ಬರೀ ನಾಟಕ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಎದಿರೇಟು ನೀಡಿದ್ದಾರೆ. ಮಂಗಳವಾರ ಇಲ್ಲಿನ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ಬಿಜೆಪಿ ಅಧಿಕಾರದಲ್ಲಿ ಇರುವ ಮಹಾರಾಷ್ಟ್ರ, ಮಧ್ಯಪ್ರದೇಶ ಮುಂತಾದ ರಾಜ್ಯಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್‌ ಬೆಲೆಗಳು ನಮಗಿಂತ ಜಾಸ್ತಿ ಇದೆ. ಬಿಜೆಪಿ ಅಲ್ಲೇಕೆ ಪ್ರತಿಭಟಿಸುತ್ತಿಲ್ಲ ಎಂದು ಪ್ರಶ್ನಿಸಿದರು. ಲೋಕಸಭಾ ಚುನಾವಣೆ ಫಲಿತಾಂಶಕ್ಕೂ ಈಗಿನ ಬೆಲೆ ಏರಿಕೆಗೂ ಸಂಬಂಧ ಇಲ್ಲ. ಜೊತೆಗೆ ನಾವು ಕೊಟ್ಟಿರುವ ಗ್ಯಾರಂಟಿ ಗಳು ಕೂಡ ನಿಲ್ಲುವುದಿಲ್ಲ. ಅವುಗಳ ಜತೆಯಲ್ಲೇ ನಾವು ಅಭಿವೃದ್ಧಿ ಕೂಡ ಸಾಧಿಸುತ್ತೇವೆ ಎಂದು…

Read More