Author: kannadanewsnow09

ಬೆಳಗಾವಿ ಸುವರ್ಣ ವಿಧಾನಸೌಧ : ಆಂಧ್ರಪ್ರದೇಶದ ತಿರುಮಲ ತಿರುಪತಿ ದೇವಸ್ಥಾನಕ್ಕೆ ರಾಜ್ಯದ ಶಾಸಕರುಗಳ ಶಿಫಾರಸ್ಸು ಪತ್ರಗಳನ್ನು ಪರಿಗಣಿಸಿ ಸ್ವಾಮಿಯ ದರ್ಶನಕ್ಕೆ ಅವಕಾಶ ಕಲ್ಪಿಸುವಂತೆ ಟಿ.ಟಿ.ಡಿಗೆ ಮನವಿ ಸಲ್ಲಿಸಲಾಗಿದೆ. ಎಸ್.ಆರ್.ವಿಶ್ವನಾಥ್ ಅವರು ಇಂದು ವಿಧಾನಸಭೆಯಲ್ಲಿ ಗಮನ ಸೆಳೆದ ಸೂಚನೆಗೆ ಉತ್ತರಿಸಿದ ಸಾರಿಗೆ ಮತ್ತು ಮುಜರಾಯಿ ಸಚಿವರು ಆಂಧ್ರಪ್ರದೇಶದ ತಿರುಮಲ ತಿರುಪತಿ ದೇವಸ್ಥಾನದ ಸನ್ನಿಧಾನದಲ್ಲಿ ನಿರ್ಮಾಣವಾಗಿರುವ ಕರ್ನಾಟಕ ಭವನ ಕಳಪೆ ಕಾಮಗಾರಿ ಕುರಿತು ಈಗಾಗಲೇ ಭೇಟಿ ನೀಡಿ ಪರಿಶೀಲಿಸಲಾಗಿದೆ. ಪ್ರಸ್ತುತ ನಿರ್ವಹಣೆ ಮಾಡುತ್ತಿರುವ ಸಂಸ್ಥೆ ಕನಿಷ್ಟ 3 ಸ್ಟಾರ್ ಮಾದರಿಯಲ್ಲಿ ಸೌಲಭ್ಯ ನೀಡುವಂತೆ ಕ್ರಮ ವಹಿಸಬೇಕಿದೆ. ರಾಜ್ಯದ ಶಾಸಕರುಗಳು ಶಿಫಾರಸ್ಸು ಪತ್ರವನ್ನು ಪರಿಗಣಿಸಿ ಸ್ವಾಮಿಯ ದರ್ಶನಕ್ಕೆ ಅವಕಾಶ ಕಲ್ಪಿಸುವ ಬಗ್ಗೆ ಟಿ.ಟಿ.ಡಿಯವರಿಗೆ ಹಾಗೂ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗಿದೆ.

Read More

ಬೆಳಗಾವಿ ಸುವರ್ಣಸೌಧ: ಬರುವ 2026ರ ಜನವರಿಯಿಂದ ಕಪ್ಪುತಲೆ ಹುಳುವಿನ ಸಮೀಕ್ಷೆಯನ್ನು ಪುನಾರಂಭಿಸಿ ಬೇಗನೇ ಪೂರ್ಣಗೊಳಿಸಿ ಪರಿಹಾರ ಕಲ್ಪಿಸುವುದಾಗಿ ಗಣಿ ಮತ್ತು ಭೂವಿಜ್ಞಾನ ಹಾಗೂ ತೋಟಗಾರಿಕಾ ಸಚಿವರಾದ ಎಸ್ ಎಸ್ ಮಲ್ಲಿಕಾರ್ಜುನ ಅವರು ಭರವಸೆ ನೀಡಿದರು. ಪರಿಷತ್ತಿನಲ್ಲಿ ಡಿ.09ರಂದು ಸದಸ್ಯರಾದ ಮಧು ಜಿ ಮಾದೇಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ 30 (235)ರ ಮೇಲಿನ ಚರ್ಚೆಯಲ್ಲಿ ಮಾತನಾಡಿದ ಸಚಿವರು, ಕಪ್ಪುತಲೆಹುಳು ಬಾಧಿತ ತೆಂಗಿನ ಬೆಳೆಯ ವೈಜ್ಞಾನಿಕ ಸಮೀಕ್ಷೆಯನ್ನು ಜುಲೈ-2025ರ ಮಾಹೆಯ ಅವಧಿಯಲ್ಲಿಯೇ ಪೂರ್ಣಗೊಳಿಸಬೇಕಿತ್ತು. ಆದರೆ, ಮಳೆ ಹಾಗೂ ಇನ್ನಿತರ ಕಾರಣದಿಂದ ಸಮೀಕ್ಷೆ ಅಪೂರ್ಣವಾಗಿದೆ. ಸಮೀಕ್ಷೆ ಕೈಗೊಳ್ಳಲು ಅನುದಾನದ ಅವಶ್ಯಕತೆ ಇರುವುದರಿಂದ ಸಮೀಕ್ಷೆಗೆ ಅಂದಾಜು 1.94 ಕೋಟಿ ರೂ ಬೇಕಿದೆ ಎಂದು ಪ್ರಸ್ತಾವನೆಯನ್ನು ಆರ್ಥಿಕ ಇಲಾಖೆಯ ಸಹಮತಿಗೆ ಕಳುಹಿಸಿದ್ದೇವೆ. ಜನವರಿಯಿಂದ ಮೇ ವರೆಗೂ ಹೆಚ್ಚಿನ ಉಷ್ಣಾಂಶದಿAದ ಕಪ್ಪುತಲೆ ಹಾಗೂ ಬಿಳಿನೊಣದ ಹಾನಿ ಹೆಚ್ಚಾಗಲಿದ್ದು, ಈ ಅವಧಿಯಲ್ಲಿ ಸಮೀಕ್ಷೆ ಕೈಗೊಂಡಲ್ಲಿ ನಿಖರವಾದ ಮಾಹಿತಿ ಲಭ್ಯವಾಗಲಿದೆ. ಸಮೀಕ್ಷೆಗೆ ಸರ್ವೇಯರ್‌ಗಳನ್ನು ನಿಯೋಜಿಸಲಾಗಿದೆ. ಪ್ರತಿ ತಾಕಿಗೆ ರೂ. 10…

Read More

ಬೆಳಗಾವಿ ಸುವರ್ಣ ವಿಧಾನಸೌಧ : ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ ಇ-ಖಾತಾ ಮತ್ತು ಹೊಸ ಖಾತೆಗಾಗಿ ಸ್ವೀಕರಿಸಲಾದ ಒಟ್ಟು 31,274 ಅರ್ಜಿಗಳನ್ನು ವಿಲೇವಾರಿ ಮಾಡಲು ಕ್ರಮ ಜರುಗಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ಇಂದು ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದಲ್ಲಿ ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ಗೋಪಾಲಯ್ಯ ಕೆ ಇವರ ಚುಕ್ಕೆ ಗುರುತಿನ ಪ್ರಶ್ನೆಗೆ ಅವರು ಉತ್ತರಿಸಿದರು. ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ ಇ-ಖಾತಾ ಮತ್ತು ಹೊಸ ಖಾತಾ ಅರ್ಜಿಗಳನ್ನು ಕೆಲಸದ ಹೊರೆ ಮತ್ತು ವಿಳಂಬವನ್ನು ಕಡಿಮೆ ಮಾಡಲು ಹಾಗೂ ಡಿಜಿಟಲ್ ದಾಖಲೆಯಿಂದಾಗಿ ನಾಗರೀಕರಿಗೆ ಟ್ರ್ಯಾಕ್ ಮಾಡುವ ಹಾಗೂ ಭ್ರಷ್ಟಾಚಾರ ರಹಿತವಾಗಿ ಇ-ಖಾತಾ ನೀಡಲು ಸಕ್ಷಮ ಕಂದಾಯ ಅಧಿಕಾರಿ ಮತ್ತ ಸಿಬ್ಬಂದಿಯವರಿಗೆ ಒಂದೇ ಸಂಖ್ಯಾ ಪ್ರಮಾಣದಲ್ಲಿ ಸ್ವಯಂ ಚಾಲಿತ ಮತ್ತು ಖಚಿಟಿಜom ಹಂಚಿಕೆ ಮಾಡುವ ವ್ಯವಸ್ಥೆಯಲ್ಲಿ ಅರ್ಜಿಗಳನ್ನು ವಿಲೇವಾರಿ ಮಾಡಲಾಗುತ್ತಿತ್ತು. ಹೊಸ ಮಾದರಿಯಲ್ಲಿ ಇ-ಖಾತಾ ನೀಡುತ್ತಿರುವುದು ಸಾರ್ವಜನಿಕರಿಗೆ ಕೆಲವೊಂದು ಸಮಸ್ಯೆಗಳು ಎದುರಾಗುತ್ತಿವೆ ಎಂದು ವಿಧಾನಸಭೆಯ ಇನ್ನಿತರ ಸದಸ್ಯರು ಈ ಬಗ್ಗೆ…

Read More

ಬೆಳಗಾವಿ :ಖಾತೆ ವಿಲೇವಾರಿಗೆ ತಂದಿದ್ದ ರೌಂಡ್‌ ರಾಬಿನ್‌ ಪದ್ಧತಿಯನ್ನು ರದ್ದು ಮಾಡಲಾಗಿದೆ. ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತೆ ಹಂಚಿಕೆಗೆ 6,450 ಅರ್ಜಿಗಳು ಮಾತ್ರ ಬಾಕಿಯಿರುವ ಕಾರಣಕ್ಕೆ ಹಳೆ ಪದ್ಧತಿಯಲ್ಲಿಯೇ ಅರ್ಜಿಗಳನ್ನು ವಿಲೇವಾರಿ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ತಿಳಿಸಿದರು. ವಿಧಾನಸಭೆ ಪ್ರಶ್ನೋತ್ತರ ಕಲಾಪದ ವೇಳೆ ಶಾಸಕ ಗೋಪಾಲಯ್ಯ ಅವರು ಜಿಬಿಎ ವ್ಯಾಪ್ತಿಯಲ್ಲಿ ಇ ಖಾತೆಗಳನ್ನು ನೀಡಲು ತಂದಿರುವ ರೌಂಡ್‌ ರಾಬಿನ್‌ ಪದ್ದತಿಯಿಂದ ಅನಾನುಕೂಲವಾಗುತ್ತಿರುವುದು ಗಮನಕ್ಕೆ ಬಂದಿದೆಯೇ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, “ಇ ಖಾತೆ ಯೋಜನೆಯಡಿ ಜಿಬಿಎ ವ್ಯಾಪ್ತಿಯಲ್ಲಿ ಒಟ್ಟು 43,382 ಅರ್ಜಿಗಳು ಸಲ್ಲಿಕೆಯಾಗಿದ್ದವು. ಇವುಗಳಲ್ಲಿ 31,274 ಅರ್ಜಿಗಳನ್ನು ವಿಲೇ ಮಾಡಲಾಗಿದೆ. 5,448 ಅರ್ಜಿಗಳನ್ನು ತಿರಸ್ಕರಿಸಲಾಗಿದೆ” ಎಂದರು. ಬೆಂಗಳೂರು ನಗರದ ಎರಡು ಕಡೆ ವೈಜ್ಞಾನಿಕ ಕಸ ವಿಲೇವಾರಿ ಘಟಕಗಳು “ಜಿಬಿಎ ವ್ಯಾಪ್ತಿಯಲ್ಲಿ ಸಂಗ್ರಹವಾಗುವ ಕಸವನ್ನು ಸಂಸ್ಕರಿಸಲು ನಗರದ ಉತ್ತರ ಹಾಗೂ ದಕ್ಷಿಣ ದಿಕ್ಕುಗಳಲ್ಲಿ ಎರಡು ಘಟಕಗಳನ್ನು ಸ್ಥಾಪಿಸಲಾಗುವುದು. ಹೊಸ ತಂತ್ರಜ್ಞಾನದ ಮೂಲಕ ವೈಜ್ಞಾನಿಕವಾಗಿ ಕಸ ವಿಲೇವಾರಿ ಮಾಡಲಾಗುವುದು” ಎಂದು…

Read More

ಬೆಂಗಳೂರು : ಭಾರತದ ತಂತ್ರಜ್ಞಾನ ರಾಜಧಾನಿ ಬೆಂಗಳೂರಿನಲ್ಲಿ ‘ಕ್ವಾಂಟಮ್ ಮೆಟೀರಿಯಲ್ಸ್ ಇನ್ನೋವೇಶನ್ ನೆಟ್‌ವರ್ಕ್’ (Q-MINt) ಸ್ಥಾಪಿಸಲು ರಾಷ್ಟ್ರೀಯ ಕ್ವಾಂಟಮ್ ಮಿಷನ್ ಅಡಿಯಲ್ಲಿ 150 ಕೋಟಿ ರೂ. ಆರ್ಥಿಕ ನೆರವು ನೀಡುವಂತೆ ಕೋರಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು ಅವರ ನೇತೃತ್ವದಲ್ಲಿ ಈ ಪ್ರಸ್ತಾವನೆಯನ್ನು ರೂಪಿಸಲಾಗಿದ್ದು, ರಾಜ್ಯದ ಮಹತ್ವಾಕಾಂಕ್ಷೆಯ ‘ಕ್ವಾಂಟಮ್ ಸಿಟಿ’ ಯೋಜನೆಗೆ ಇದು ಬಹಳ ಅಗತ್ಯವಾಗಿದೆ ಎಂದು ಸರ್ಕಾರ ಪ್ರತಿಪಾದಿಸಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಸಚಿವ ಎನ್.ಎಸ್. ಬೋಸರಾಜು, “ಕ್ವಾಂಟಮ್ ತಂತ್ರಜ್ಞಾನಕ್ಕೆ ಮೆಟೀರಿಯಲ್ಸ್‌ಗಳೆ (Materials) ಮೂಲ ಆಧಾರ. ಸಂಶೋಧನೆ ಮತ್ತು ಕೈಗಾರಿಕಾ ಸಾಧ್ಯತೆಯ ನಡುವಿನ ಅಂತರವನ್ನು ಕಡಿಮೆ ಮಾಡಲು ಈ ಯೋಜನೆ ಒಂದು ‘ಗೇಮ್ ಚೇಂಜರ್’ ಆಗಲಿದೆ. ಜಾಗತಿಕ ಕ್ವಾಂಟಮ್ ಕ್ರಾಂತಿಯಲ್ಲಿ ಭಾರತವನ್ನು ಹಾಗೂ ಬೆಂಗಳೂರು ನಗರವನ್ನು ಮುಂಚೂಣಿಯಲ್ಲಿ ಇರಿಸಲು ಇದು ಬಹಳ ಅಗತ್ಯವಾಗಿದೆ,” ಎಂದು ತಿಳಿಸಿದ್ದಾರೆ. ತಮ್ಮ ಪತ್ರದಲ್ಲಿ…

Read More

ಹಿಂದೂ ಧರ್ಮದಲ್ಲಿ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಮನೆಯಲ್ಲಿರುವ ತುಳಸಿ ಗಿಡ ಶುಭ, ಅಶುಭಗಳ ಮುನ್ಸೂಚನೆಯನ್ನು ನೀಡುತ್ತದೆ ಎಂಬ ನಂಬಿಕೆ ಇದೆ. ತುಳಸಿ ಗಿಡ ಮನೆಗೆ ರಕ್ಷಣೆ ಇದ್ದಂತೆ. ಮನೆಗೆ ಯಾವ ದುಷ್ಟ ಶಕ್ತಿಗಳು ಬಾರದಂತೆ ತಡೆದು ಮನೆಯ ಸದಸ್ಯರಿಗೆ ರಕ್ಷಣೆ ನೀಡುತ್ತದೆ ಎಂದು ಶಾಸ್ತ್ರಗಳಲ್ಲಿ ಹೇಳಲಾಗುತ್ತದೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ,…

Read More

ಬೆಂಗಳೂರು: ಬೆಂಗಳೂರು ಅಪಾರ್ಟ್‌ಮೆಂಟ್‌ ಫೆಡರೇಷನ್‌ ಅವರ ಮನವಿಗೆ ಕರ್ನಾಟಕ ಸರ್ಕಾರದ ನಗರಾಭಿವೃದ್ದಿ ಇಲಾಖೆ ಸಕಾರಾತ್ಮಕವಾಗಿ ಸ್ಪಂದಿಸಿದೆ. ಇದೇ ಡಿಸೆಂಬರ್‌ 13 ರಂದು ಬೆಂಗಳೂರು ಅಪಾರ್ಟ್‌ಮೆಂಟ್‌ ಫೆಡರೇಷನ್‌ ಪ್ರತಿನಿಧಿಗಳೊಂದಿಗೆ ವಿಧಾನಸೌಧದ ಬ್ವಾಂಕ್ವೇಟ್‌ ಹಾಲ್‌ನಲ್ಲಿ ಸನ್ಮಾನ್ಯ ಉಪಮುಖ್ಯಮಂತ್ರಿಗಳೊಂದಿಗೆ ಸಂವಾದವನ್ನು ಆಯೋಜಿಸಿದೆ. ಈ ಸಂವಾದದಲ್ಲಿ ಅಪಾರ್ಟ್‌ಮೆಂಟ್‌ ಮಾಲೀಕರುಗಳ ಬಹುದಿನಗಳ ಬೇಡಿಕೆ ಹಾಗೂ ಆಶೋತ್ತರಗಳು ಈಡೇರಲಿವೆ ಎಂದು ಬೆಂಗಳೂರು ಅಪಾರ್ಟ್‌ಮೆಂಟ್‌ ಫೆಡರೇಷನ್‌ ಅಧ್ಯಕ್ಷರಾದ ಸತೀಶ್‌ ಮಲ್ಯ ತಿಳಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯನ್ನು ನೀಡಿರುವ ಅವರು, ಡಿಸೆಂಬರ್‌ 2 ರಂದು ಬೆಂಗಳೂರು ನಗರದಲ್ಲಿ ಬೆಂಗಳೂರು ಅಪಾರ್ಟ್‌ಮೆಂಟ್‌ ಫೆಡರೇಷನ್‌ ಪದಾಧಿಕಾರಿಗಳು ಪತ್ರಿಕಾಗೋಷ್ಠಿಯನ್ನು ಆಯೋಜಿಸಿ, ಕರ್ನಾಟಕ ಅಪಾರ್ಟ್‌ಮೆಂಟ್‌ (ಮಾಲೀಕತ್ವ ಮತ್ತು ನಿರ್ವಹಣೆ) ವಿಧೇಯಕ, 2025 ಅನ್ನು ಮಂಡಿಸುವಂತೆ ಆಗ್ರಹಿಸಲಾಗಿತ್ತು. ಅಲ್ಲದೇ, ನಗರಾಭಿವೃದ್ದಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಾದ ತುಷಾರ್‌ ಗಿರಿನಾಥ್‌ ಅವರಿಗೆ ಭೇಟಿಯಾಗಿ ಮನವಿ ಸಲ್ಲಿಸಲಾಗಿತ್ತು. ಈ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಅವರು ಶನಿವಾರ, ಡಿಸೆಂಬರ್‌ 13, 2025 ರಂದು ವಿಧಾನಸೌಧದ ಬ್ವಾಂಕ್ವೇಟ್‌ ಹಾಲ್ ನಲ್ಲಿ ಅಪಾರ್ಟ್‌ಮೆಂಟ್‌ ಫೆಡರೇಷನ್‌ ಪ್ರತಿನಿಧಿಗಳೊಂದಿಗೆ…

Read More

ಬೆಳಗಾವಿ : ವಿರೋಧ ಪಕ್ಷದವರು ಅಸತ್ಯವನ್ನು ಹೇಳುವುದನ್ನು ಸಾಧ್ಯವಾದಷ್ಟು ನಿಲ್ಲಿಸಿ ವಾಸ್ತವದ ತಳಹದಿಯ ಮೇಲೆ ಟೀಕೆಗಳನ್ನು ಮಾಡಬೇಕು. ಉತ್ತರಗಳನ್ನು ಕೊಡುವಾಗ ದಾರಿತಪ್ಪಿಸದೇ ಸದನದ ಗೌರವವನ್ನು ಎತ್ತಿಹಿಡಿಯುವ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಇಂದು ಕಿವಿಮಾತು ಹೇಳಿದರು. ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಸದನದಲ್ಲಿ ಮಾತನಾಡುವ ಸಂದರ್ಭದಲ್ಲಿ ರೈತರಿಗೆ ಸರ್ಕಾರ ಪರಿಹಾರವನ್ನು ನೀಡಿಲ್ಲ, ರೈತರಿಗೆ ಕೊಡಲು ಸರ್ಕಾರದ ಬಳಿ ಹಣವಿಲ್ಲ ಎಂದಾಗ ಮಧ್ಯ ಪ್ರವೇಶ ಮಾಡಿ ಮಾತನಾಡಿದ ಸಚಿವ ಕೃಷ್ಣಬೈರೇಗೌಡ ಅವರು ಕಳೆದ ಸಾಲಿನಲ್ಲಿ 38 ಲಕ್ಷ ರೈತರಿಗೆ ಪರಿಹಾರವನ್ನು ನೀಡಲಾಗಿದೆ. ಕೇಂದ್ರ ಸರ್ಕಾರಕ್ಕೆ ಮನವಿಯನ್ನೂ ಕೊಟ್ಟೂ ಕೂಡ ಇಲ್ಲಿಯವರೆಗೂ ಒಂದು ಪೈಸೆ ಹಣ ಬಿಡುಗಡೆಯಾಗಿಲ್ಲ. 2245 ಕೋಟಿ ರೈತರಿಗೆ ಪರಿಹಾರ ನೀಡಲಾಗಿದೆ ಎಂದರು ಉತ್ತರ ನೀಡಿದರು. ಈ ಬಗ್ಗೆ ಆಡಳಿತ ಮತ್ತು ವಿರೋಧ ಪಕ್ಷದವರ ಮಧ್ಯೆ ಕೆಲಕಾಲ ಮಾತಿನ ಚಕಮಕಿ ಉಂಟಾಗಿ ಸದನವನ್ನು 10 ನಿಮಿಷಗಳ ಕಾಲ ಮುಂದೂಡಲಾಯಿತು. ಸದನ ಮತ್ತೆ…

Read More

ಶಿವಮೊಗ್ಗ: ದಿನಾಂಕ: 10.12.2025 ರಂದು 110/11ಕೆ.ವಿ. ಚಂದ್ರಗುತ್ತಿ ಉಪ ವಿದ್ಯುತ್ ವಿತರಣಾ ಕೇಂದ್ರದ 10 ಎಂವಿಎ ಶಕ್ತಿ ಪರಿರ್ವಕದ ಡ್ರೈವರ್ಟರ್ ಸ್ವಿಚ್ ಬದಲಾಯಿಸಲು ಕಾಮಗಾರಿ ಕೈಗೊಳ್ಳುವ ಕಾರ್ಯಯೋಜನೆ ಹಮ್ಮಿಕೊಂಡಿರುವ ಕಾರಣ 110/11 ಕೆ.ವಿ ಚಂದ್ರಗುತ್ತಿ ಉಪ ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ 11ಕೆ.ವಿ ಮಾರ್ಗಗಳಿಗೆ ಈ ಕೆಳಗಿನ ಫೀಡರ್‌ಗಳಿಗೆ/ಗ್ರಾಮಗಳಿಗೆ ವಿದ್ಯುತ್‌ ವ್ಯತ್ಯಯವಾಗಲಿದ ಎಂಬುದಾಗಿ ಮೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. 110/11ಕೆವಿ ಚಂದ್ರಗುತ್ತಿ ಉಪ ವಿದ್ಯುತ್ ವಿತರಣಾ ಕೇಂದ್ರದ 10 ಎಂವಿಎ ಶಕ್ತಿ ಪರಿರ್ವಕದ ಡ್ರೈವರ್ಟರ್ ಸ್ವಿಚ್ ಬದಲಾಯಿಸಲು ಕಾಮಗಾರಿ ಕೈಗೊಳ್ಳುವ ಕಾರ್ಯಯೋಜನೆ ನಡೆಸಲು ಉದ್ದೇಶಿಸಿರುವುದರಿಂದ ದಿನಾಂಕ: 10.12.2025 ರಂದು ಎಫ್-1 ಬಾಡದಬೈಲು, ಎಫ್-2 ಅಂದವಳ್ಳಿ ಎಫ್-3 ಕತವಾಯಿ, ಎನ್.ಜೆ.ವೈ, ಎಫ್-4 ಚಂದ್ರಗುತ್ತಿ ಟೌನ್, ಎಫ್-5 ಕಲಗೋಡು, ಎಫ್-6 ಚನ್ನಪಟ್ಟಣ, ಎಫ್-7 ಹುಲ್ತಿಕೊಪ್ಪ, ಎಫ್-8 ಕಡೆಜೋಳದಗುಡ್ಡೆ, ಎಫ್-9 ಹರೀಶಿ ಹಾಗೂ ಎಫ್-10 ಕೊಂಡಬಿ ಫೀಡರ್‌ಗಳ ವ್ಯಾಪ್ತಿಗೊಳಪಡುವ ಎಲ್ಲಾ ಗ್ರಾಮಗಳಿಗೆ ಬೆಳಗ್ಗೆ 09:00 ರಿಂದ ಸಂಜೆ 6:00 ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ…

Read More

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 220/66/11 ಕೆವಿ ಸೋಮನಹಳ್ಳಿ ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 10.12.2025 (ಬುಧವಾರ) ರಂದು ಬೆಳಗ್ಗೆ 09:00 ಗಂಟೆಯಿಂದ ಸಂಜೆ 06:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ನಾಳೆ ಬೆಂಗಳೂರಿನ ಐಬೆಕ್ಸ್ ಫ್ಯಾಕ್ಟರಿ, ರಾವುಗೋಡ್ಲು, ನೆಟ್ಟಿಗೆರೆ, ಗುಂಡಾಂಜನೇಯ ಟೆರನ್ಪಲ್, ಗಿರಿಗೌಡನದೊಡ್ಡಿ, ಮುತ್ತುರಾಯನಪುರ, ಗೊಟ್ಟಿಗೆಹಳ್ಳಿ, ಇನೋರದೊಡ್ಡಿ, ಸೋನಾರೆದೊಡ್ಡಿ, ಗಾಂಧಿನಗರ, ಪಟ್ಟರೆಡ್ಡಿಪಾಳ್ಯ, ನೌಕಲ್ಪಾಳ್ಯ, ಗುಡಿಪಾಳ್ಯ, ನಾಗನವಕನಹಳ್ಳಿ, ಮಲ್ಲಿಪಾಳ್ಯ, ತಾಸುದೇವರಪಾಳ್ಯ, ತಾಸುದೇವರಪಾಳ್ಯ, ವಾಸುದೇವರಪಾಳ್ಯ, ಗೊಲ್ಲರಪಾಳ್ಯದಲ್ಲಿ ಕರೆಂಟ್ ಇರೋದಿಲ್ಲ. ಇದಲ್ಲದೇ ನಲ್ಲಕನದೊಡ್ಡಿ. CRPF ಕ್ಯಾಂಪ್ ಗೇಟ್ 1&82, ಎಡಿಫೈ ಸ್ಕೂಲ್ ಸೋಮನಹಳ್ಳಿ, ಕೆರೆಚೂದರ್ನಹಳ್ಳಿ, ಸಾಧನಪಾಳ್ಯ. ಹೊಸದೊಡ್ಡಿ, ನೆಲಗುಳಿ, ಲಿಂಗಪ್ಪರನದೊಡ್ಡಿ, ಯೋಗವನ ಬೇಟ, ಬೋಳಾರೆ, ವೀರಸಾಂದ್ರ, ಜಟ್ಟಿಪಾಳ್ಯ, ಗೊಲ್ಲರಪಾಳ್ಯ, 1912 ತಿಟ್ಟಹಳ್ಳಿ. ಗಂಗಕನಗೊಡ್ಡಿ, ಬೋಕಿಪುರ, ತೋಕತಿಮ್ಮನದೊಡ್ಡಿ, ಏಡುಮಾಡು, ಅವಸರಲ ಫ್ಯಾಕ್ಟರ್, ರಾವರದೊಡ್ಡಿ, ತಾತಗುಪ್ಪೆ, ಗಡಿಪಾಳ್ಯ, ಮುಕ್ಕೋಡ್ಲು, ಮುನಿನಗರ, ಕಗ್ಗಲೀಪುರ ಸುತ್ತಮುತ್ತಲಿನ ಪ್ರದೇಶಗಳ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂ ಮನವಿ ಮಾಡಿದೆ.

Read More