Subscribe to Updates
Get the latest creative news from FooBar about art, design and business.
Author: kannadanewsnow09
ಶಿವಮೊಗ್ಗ: ಜಿಲ್ಲೆಯಲ್ಲಿ ಕೆಲ ದಿನಗಳ ಹಿಂದಷ್ಟೇ ಮಾರಣಾಂತಿಕ ಹಲ್ಲೆ ಘಟನೆ ನಡೆದಿತ್ತು. ಈ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಇಂದು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದನು. ಈ ಘಟನೆ ಹಸಿಯಾಗಿರೋ ಮುನ್ನವೇ, ಇಂದು ಶಿವಮೊಗ್ಗದಲ್ಲಿ ಹಾಡಹಗಲೇ ಇಬ್ಬರಿಗೆ ಚಾಕುವಿನಿಂದ ಇರಿದಿರುವಂತ ಆಘಾತಕಾರಿ ಘಟನೆ ನಡೆದಿದೆ. ಶಿವಮೊಗ್ಗದ ತುಂಬಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಊರಗಡೂರಿನಲ್ಲಿ ಇಬ್ಬರ ಮೇಲೆ ಹಾಡ ಹಗಲೇ ಮಾರಣಾಂತಿಕವಾಗಿ ಚಾಕುವಿನಿಂದ ಇರಿದು ಹಲ್ಲೆ ಮಾಡಿರುವಂತ ಘಟನೆ ನಡೆದಿದೆ. ಶಬ್ಬೀರ್ ಹಾಗೂ ಶಬಾಜ್ ಎಂಬುವರಿಗೆ ಚಾಕುವಿನಿಂದ ಇರಿದು ಹಲ್ಲೆ ಮಾಡಲಾಗಿದೆ. ಚಾಕುವಿನಿಂದ ಇರಿದು ಭಾವನನ್ನೇ ಗಂಭೀರವಾಗಿ ಗಾಯಗೊಳಿಸಲಾಗಿದೆ. ಫದ್ರೀನ್ ಹಾಗೂ ಆತನ ಸಹೋದರರು, ಸ್ನೇಹಿತರೊಂದಿಗೆ ಸೇರಿ ಶಬ್ಬೀರ್ ಹಾಗೂ ಶಬಾಜ್ ಗೆ ಚಾಕುವಿನಿಂದ ಇರಿಯಲಾಗಿದೆ. ಈ ವಿಷಯ ತಿಳಿದು ಸ್ಥಳದ್ದೆ ಶಿವಮೊಗ್ಗ ಎಸ್ಪಿ ಮಿಥುನ್ ಕುಮಾರ್, ಎಎಸ್ಪಿ ಕಾರಿಯಪ್ಪ, ತುಂಗಾನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಗುರುರಾಜ್ ಭೇಟಿ ನೀಡಿ, ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಶಿವಮೊಗ್ಗ: ಅರಣ್ಯ ಭೂಮಿ ಒತ್ತುವರಿ ತೆರವು ಅಂದ್ರೆ ಒತ್ತುವರಿಗೊಂಡಿರುವಂತ ಭೂಮಿಯನ್ನು ಮೂಲ ಅರಣ್ಯ ರೂಪಕ್ಕೆ ತರುವ ನಿಟ್ಟಿನಲ್ಲಿ ನೆಡೆಸಬೇಕಾದ ಕಾರ್ಯಾಚರಣೆಯಾಗಿದೆ. ಇದನ್ನೇ ಕರ್ನಾಟಕ ಅರಣ್ಯ ಭೂಮಿ ಅಧಿನಿಯಮಗಳಲ್ಲೂ ತಿಳಿಸಲಾಗಿದೆ. ಇದೇ ರೀತಿಯಲ್ಲೇ ಒತ್ತುವರಿ ತೆರವು ಕೂಡ ಮಾಡಬೇಕು. ಆದರೇ ಈ ಯಾವುದನ್ನು ಮಾಡದಂತ ಸಾಗರದ ಆರಣ್ಯ ಇಲಾಖೆಯ ಅಧಿಕಾರಿಗಳು, ಇಂದು ಬಂದ ಪುಟ್ಟ, ಬೋರ್ಡ್ ನೆಟ್ಟು ಹೋದ ಪುಟ್ಟ ಎನ್ನುವಂತೆ ಅರಣ್ಯ ಭೂಮಿ ಒತ್ತುವರಿ ಕಾರ್ಯಾಚರಣೆ ನಡೆಸಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮಲಂದೂರು ಮೀಸಲು ಅರಣ್ಯ ಪ್ರದೇಶದಲ್ಲಿ ಅರಣ್ಯ ಭೂಮಿ ಒತ್ತುವರಿ ಸಾಗರ ವಿಭಾಗದ ಆನಂದಪುರಂ ಹೋಬಳಿಯ ಮಲಂದೂರು ಗ್ರಾಮದ ಸರ್ವೆ ನಂಬರ್.157ರಲ್ಲಿ ಆರ್.ಎಂ ಷಣ್ಣುಖ ಬಿನ್ ಮಂಜಪ್ಪ ಗೌಡ ಎಂಬುವರು ಮಲಂದೂರು ಮೀಸಲು ಅರಣ್ಯ ಪ್ರದೇಶ ಒತ್ತುವರಿ ಮಾಡಿರುವ ದೂರು ಬಂದಿತ್ತು. ಈ ಬಗ್ಗೆ ಪರಿಶೀಲಿಸಿದಂತ ಅರಣ್ಯ ಇಲಾಖೆಯ ಅಧಿಕಾರಿಗಳು ಅದು ಮಲಂದೂರು ಮೀಸಲು ಅರಣ್ಯ ಪ್ರದೇಶದ ಅರಣ್ಯ ಭೂಮಿ ಎಂಬುದನ್ನು ದಾಖಲೆಗಳ ಮೂಲಕ ಖಚಿತ ಪಡಿಸಿಕೊಂಡಿದ್ದಾರೆ. ಅದರಂತೆ ತೆರವು…
ಪಿಶಾಚಿಗಳ ಕಿರು ಪರಿಚಯ* ಭೂಲೋಕದ ಅತ್ಯಂತ ಹೇಯ ಜನ್ಮ ಅದು ಪಿಶಾಚಿ ಜನ್ಮ ಆ ಜನ್ಮ ಹೇಗೆ ಬರುತ್ತದೆ? ಅನೇಕ ಕಾರಣಗಳಿವೆ, ಪ್ರಸ್ತುತದಲ್ಲಿ ೧. ಸಂಧ್ಯಾವಂದನೆಯನ್ನು ಶ್ರದ್ಧೆಯಿಂದ ಮಾಡದೆ ಇದ್ರೆ ( ಅಸದಿತ್ಯುಚ್ಯತೇ ಪಾರ್ಥ ನಚ ತತ್ಪ್ರೇತ್ಯನೋ ಇಹ – ಗೀತಾ ವಾಕ್ಯ ಸಂವಾದ) ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ…
ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ಕಾಡಾನೆ ಹಾವಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಆನೆಗಳನ್ನು ಮರಳಿ ಕಾಡಿಗಟ್ಟಲು ಪ್ರತ್ಯೇಕ ಆನೆ ಕಾರ್ಯಪಡೆ ರಚಿಸಲು ಆದೇಶಿದ್ದ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ, ಈ ಪಡೆಗೆ 48 ಸಿಬ್ಬಂದಿ ನಿಯೋಜನೆಗೆ ಅನುಮೋದನೆ ನೀಡಿದ್ದಾರೆ. ಈ ಕಾರ್ಯಪಡೆಯ ನೇತೃತ್ವವನ್ನು ಮಂಗಳೂರು ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ವಹಿಸಲಿದ್ದು, ಪಡೆಯಲ್ಲಿ ಒಬ್ಬರು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ಒಬ್ಬರು ಪಶುವೈದ್ಯಾಧಿಕಾರಿ, ಒಬ್ಬರು ವಲಯ ಅರಣ್ಯಾಧಿಕಾರಿ, ನಾಲ್ವರು ಉಪ ವಲಯ ಅರಣ್ಯಾಧಿಕಾರಿ ಹಾಗೂ 8 ಅರಣ್ಯ ರಕ್ಷಕರು ಹಾಗೂ 32 ಹೊರಗುತ್ತಿಗೆಯ ಮುಂಚೂಣಿ ಸಿಬ್ಬಂದಿ ಇರಲಿದ್ದಾರೆ. ಈ ಆನೆ ಕಾರ್ಯಪಡೆಯು ಕಾಡಾನೆಗಳು ಓಡಾಡುವ ವಸತಿ ಪ್ರದೇಶ, ರೈತರ ತೋಟ, ಜಮೀನಿನ ಬಳಿ ಗಸ್ತು ತಿರುಗಲಿದ್ದು, ಆನೆಗಳು ಕಂಡು ಬಂದಲ್ಲಿ ಕಾಡಿಗೆ ಮರಳಿಸುವ ಕಾರ್ಯವನ್ನು ತ್ವರಿತವಾಗಿ ಕೈಗೊಳ್ಳಲಿದೆ ಮತ್ತು ಆನೆಗಳ ಚಲನವಲನದ ಬಗ್ಗೆ ಕಂಟ್ರೋಲ್ ರೂಂಗೆ ಮಾಹಿತಿ ನೀಡಿ ಆ ಮೂಲಕ ಸಾರ್ವಜನಿಕರಿಗೆ ಮುನ್ನಚ್ಚರಿಕೆ ಸಂದೇಶ…
ನವದೆಹಲಿ: ಪಾಕಿಸ್ತಾನ ಭಾರತವನ್ನು ಮೊದಲು ಬ್ಯಾಟಿಂಗ್ಗೆ ಇಳಿಸಿದ ನಂತರ ಭಾರತ ಮತ್ತು ಪಾಕಿಸ್ತಾನ ಮಹಿಳಾ ಏಕದಿನ ವಿಶ್ವಕಪ್ 2025 ಪಂದ್ಯವನ್ನು ಮೊದಲ ಇನ್ನಿಂಗ್ಸ್ ಮಧ್ಯದಲ್ಲಿ ಸ್ವಲ್ಪ ಸಮಯದವರೆಗೆ ಸ್ಥಗಿತಗೊಳಿಸಲಾಯಿತು. ಆರ್ ಪ್ರೇಮದಾಸ ಕ್ರೀಡಾಂಗಣದ ಕ್ರೀಸ್ನಲ್ಲಿ ಹಲವಾರು ಪತಂಗಗಳು ಮತ್ತು ನೊಣಗಳು ಇದ್ದ ಕಾರಣ ಎರಡೂ ತಂಡಗಳ ನಡುವಿನ ಹೈ-ಆಕ್ಟೇನ್ ಘರ್ಷಣೆಯನ್ನು ಮೊದಲ ಇನ್ನಿಂಗ್ಸ್ನಲ್ಲಿ ನಿಲ್ಲಿಸಲಾಯಿತು. ನೊಣಗಳು ಆಟಗಾರರನ್ನು ಸ್ವಲ್ಪ ಸಮಯದವರೆಗೆ ತೊಂದರೆಗೊಳಿಸಿದವು, ಆದರೆ ಅವರು ಆಟವಾಡಬೇಕಾಯಿತು, ಆದರೆ ಅವರ ಬಳಿ ಯಾವುದೇ ಪರಿಹಾರವಿಲ್ಲ. ಏತನ್ಮಧ್ಯೆ, 34 ನೇ ಓವರ್ ನಂತರ ಗ್ರೌಂಡ್ಸ್ಟಾಫ್ ಸದಸ್ಯರು ನೊಣಗಳನ್ನು ತೊಡೆದುಹಾಕಲು ಬಗ್ ಸ್ಪ್ರೇ ಅನ್ನು ತಂದರು. ಆಟವು ಸುಮಾರು 15 ನಿಮಿಷಗಳ ಕಾಲ ಸ್ಥಗಿತಗೊಂಡಿದ್ದರಿಂದ ಆಟಗಾರರು ಮೈದಾನದಿಂದ ಹೊರನಡೆದರು. ಇದಕ್ಕೂ ಮೊದಲು, ಪಾಕಿಸ್ತಾನ ತಂಡದ ಸದಸ್ಯರೊಬ್ಬರು ಫ್ಲೈ ಸ್ಪ್ರೇ ಅನ್ನು ಹೊರತಂದರು, ಮತ್ತು ಆಟಗಾರರು ಅದನ್ನು ಮೇಲೆ ಸಿಂಪಡಿಸಿದರು, ಆದರೆ ಅವರಿಂದ ಯಾವುದೇ ವಿರಾಮ ಸಿಗಲಿಲ್ಲ. ವಿರಾಮದ ಸಮಯದಲ್ಲಿ, ಭಾರತೀಯ ಮಹಿಳೆಯರು 154/4 ರೊಂದಿಗೆ ಸಂಕಷ್ಟದ…
ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ಆನಂದಪುರ ಹೋಬಳಿಯಲ್ಲಿ ಆರ್.ಎಂ ಷಣ್ಮುಖ ಎಂಬುವರು ಒತ್ತುವರಿ ಮಾಡಿಕೊಂಡಿದ್ದಂತ 6 ಎಕರೆ 24 ಗುಂಟೆ ಅರಣ್ಯ ಭೂಮಿಯನ್ನು ಮರಳಿ ಅರಣ್ಯ ಇಲಾಖೆಗೆ ಪಡೆಯುವಲ್ಲಿ ಸಾಗರದ ಅರಣ್ಯಾಧಿಕಾರಿಗಳು ಯಶಸ್ವಿಯಾಗಿದ್ದಾರೆ. ಸಾಗರದ ಅರಣ್ಯಾಧಿಕಾರಿಗಳ ತಂಡವು ಭರ್ಜರಿ ಕಾರ್ಯಾಚರಣೆ ನಡೆಸಿ 6 ಎಕರೆ 24 ಗುಂಟೆ ಅರಣ್ಯ ಭೂಮಿಯನ್ನು ಒತ್ತುವರಿ ತೆರವುಗೊಳಿಸಿ, ಮರಳಿ ಇಲಾಖೆಗೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕುರಿತಂತೆ ಶಿವಮೊಗ್ಗ ಜಿಲ್ಲೆಯ ಸಾಗರದ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಿ.ಮೋಹನ್ ಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಸಾಗರ ವಿಭಾಗ ವ್ಯಾಪ್ತಿಗೆ ಬರುವ ಸಾಗರ ತಾಲ್ಲೂಕು ಆನಂದಪುರಂ ಹೋಬಳಿ ಮಲಂದೂರು ಗ್ರಾಮದ ಸ.ನಂ 157 ರಲ್ಲಿ ಆರ್.ಎಂ ಷಣ್ಮುಖ ಬಿನ್ ಮಂಜಪ್ಪ ಗೌಡ ಇವರು ಮಲಂದೂರು ಮೀಸಲು ಅರಣ್ಯ ಪ್ರದೇಶದಲ್ಲಿ 6-24 ಎ/ಗುಂ ಪ್ರದೇಶವನ್ನು ಅನಧಿಕೃತವಾಗಿ ಒತ್ತುವರಿ ಮಾಡಿರುತ್ತಾರೆ. ಸದರಿಯವರು ಶರಾವತಿ ಮುಳುಗಡೆ ಸಂತ್ರಸ್ತರ ಯೋಜನೆಯಡಿ ಹಾಗೂ ಅರಣ್ಯ ಹಕ್ಕು ಕಾಯ್ದೆಯಡಿ ಇವರು ಜಮೀನುಗಳನ್ನು ಮಂಜೂರಾತಿ ಪಡೆದಿದ್ದು, ಇದರೊಂದಿಗೆ ಹಿಡುವಳಿ ಜಮೀನುಗಳನ್ನು…
ಬೆಂಗಳೂರು: ದಸರಾ ಮತ್ತು ದೀಪಾವಳಿ ಹಬ್ಬದ ಪ್ರಯುಕ್ತ ಎಲ್ಲಾ ಲಿಡ್ಕರ್ ಮಾರಾಟ ಮಳಿಗೆಗಳಲ್ಲಿ ಚರ್ಮದ ಉತ್ಪನ್ನಗಳ ಮೇಲೆ 20% ರಿಯಾಯಿತಿ ನೀಡಲಾಗುತ್ತಿದೆ. ಉನ್ನತ ಗುಣಮಟ್ಟದ ಶೂ, ಬ್ಯಾಗ್, ಬೆಲ್ಟ್ ಮತ್ತು ಪರ್ಸ್ಗಳಂತಹ ವಿವಿಧ ಅಸಲಿ ಚರ್ಮದ ಉತ್ಪನ್ನಗಳು ಸದ್ಯ ವಿಶೇಷ ರಿಯಾಯಿತಿಯೊಂದಿಗೆ ಮಾರಾಟವಾಗುತ್ತಿವೆ. ಹಬ್ಬಗಳ ಸಂಭ್ರಮದ ಜೊತೆಗೆ ಸ್ವದೇಶಿ ಉತ್ಪನ್ನಗಳನ್ನು ಖರೀದಿಸುವ ಮೂಲಕ ನಮ್ಮ ದೇಶದ ಕರಕುಶಲತೆ ಮತ್ತು ಸೃಜನಶೀಲತೆಯನ್ನು ಒಳಗೊಂಡಿರುವ ಉದ್ಯಮ ಮತ್ತು ಸ್ಥಳೀಯ ಚರ್ಮ ಕುಶಲಕರ್ಮಿಗಳ ಬದುಕಿಗೆ ಬೆಂಬಲ ನೀಡಿ ಎಂದು ಕೋರಿದೆ. ಭಾರತೀಯ ಕೌಶಲ್ಯದ ಗೌರವ ಮತ್ತು ಗುಣಮಟ್ಟವನ್ನು ಪ್ರತಿಬಿಂಬಿಸುವ ಲಿಡ್ಕರ್ ಉತ್ಪನ್ನಗಳು ದೀರ್ಘಕಾಲ ಬಾಳಿಕೆ ಮತ್ತು ಆಕರ್ಷಕ ವಿನ್ಯಾಸಗಳಲ್ಲಿ ಲಭ್ಯವಿವೆ. ಸ್ವದೇಶಿ ಉತ್ಪನ್ನಗಳನ್ನು ಬಳಸಿ, ದೇಶದ ಆರ್ಥಿಕತೆಯನ್ನು ಸದೃಢ ಪಡಿಸಿ ಮತ್ತು ಭವಿಷ್ಯವನ್ನು ಮತ್ತಷ್ಟು ಬಲಪಡಿಸಿ ಎಂದು ಮನವಿ ಮಾಡಿದೆ. ಆಫರ್ ಅಕ್ಟೋಬರ್ 18ರವರೆಗೆ ಮಾತ್ರ ಲಭ್ಯ. ವೆಬ್ಸೈಟ್ ಲಿಂಕ್: https://shop.lidkar.com https://twitter.com/SWDGoK/status/1974752853748228477
ಬೆಂಗಳೂರು: ನಗರದಲ್ಲಿ ಕನ್ನಡಪರ ಸಂಘಟನೆಯಿಂದ ಆನ್ ಲೈನ್ ಗೇಮಿಂಗ್ ಕಂಪನಿ ಮೇಲೆ ದಾಳಿ ನಡೆಸಲಾಗಿದೆ. ಕನ್ನಡ ಪರ ಸಂಘಟನೆಯ ಕಾರ್ಯಕರ್ತರಿಂದ ನಡೆಸಿದಂತ ದಾಳಿಯಲ್ಲಿ ಆನ್ ಲೈನ್ ಗೇಮಿಂಗ್ ಕಂಪನಿಯನ್ನು ಧ್ವಂಸಗೊಳಿಸಲಾಗಿದೆ. ಬೆಂಗಳೂರಿನ ಕೋರಮಂಗಲದಲ್ಲಿ ಇರುವಂತ ಗೋಲ್ಡನ್ ಏಸಸ್ ಪೋಕರ್ ಆನ್ ಲೈನ್ ಗೇಮಿಂಗ್ ಕಂಪನಿಯ ಮೇಲೆ ನಮ್ಮ ಕರ್ನಾಟಕ ಸೇನೆಯಿಂದ ದಾಳಿಯನ್ನು ನಡೆಸಲಾಗಿದೆ. ಗ್ರಾಹಕರು ಆನ್ ಲೈನ್ ಬೆಟ್ಟಿಂಗ್ ಆಡುತ್ತಿದ್ದಾಗಲೇ ದಾಳಿ ನಡೆಸಿ ಕಂಪನಿಯನ್ನು ಧ್ವಂಸ ಮಾಡಲಾಗಿದೆ. ಗೋಲ್ಡನ್ ಏಸಸ್ ಪೋಕರ್ ಕಂಪನಿಯಲ್ಲಿದ್ದಂತ ಪೀಠೋಪಕರಣಗಳನ್ನು ಧ್ವಂಸಗೊಳಿಸಲಾಗಿದೆ. ಪ್ರತಿ ಭಾನುವಾರ ಅಕ್ರಮವಾಗಿ ಆನ್ ಲೈನ್ ಗೇಮ್ ನಡೆಸುತ್ತಿದ್ದಂತ ಆರೋಪ ಕೇಳಿ ಬಂದಿದೆ. ಕನ್ನಡಪರ ಸಂಘಟನೆಗಳಿಂದ ದಾಳಿ ನಡೆಸುತ್ತಿದ್ದಂತೆ ಗ್ರಾಹಕರು ಓಡಿ ಹೋಗಿದ್ದಾರೆ.
ಬಿಹಾರ ವಿಧಾನಸಭೆಗೆ ಚುನಾವಣೆಗಳನ್ನು ನವೆಂಬರ್ 22 ರ ಮೊದಲು ನಡೆಸಲಾಗುವುದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಶನಿವಾರ ದೃಢಪಡಿಸಿದ್ದಾರೆ., ಅಂದರೆ ಪ್ರಸ್ತುತ ವಿಧಾನಸಭೆಯ ಅವಧಿ ಕೊನೆಗೊಳ್ಳುವ ದಿನಾಂಕ ಇದು. ಚುನಾವಣಾ ಆಯೋಗದ ಎರಡು ದಿನಗಳ ಭೇಟಿಯ ಕೊನೆಯಲ್ಲಿ ಪಾಟ್ನಾದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕುಮಾರ್, ಆಯೋಗವು ಹಲವಾರು ಸುಧಾರಣೆಗಳು ಮತ್ತು ವ್ಯವಸ್ಥಾಪನಾ ಬದಲಾವಣೆಗಳನ್ನು ಪರಿಚಯಿಸುತ್ತಿದೆ ಎಂದು ಹೇಳಿದರು. “ಈ ಚುನಾವಣೆಗಳು ನವೆಂಬರ್ 22 ರ ಮೊದಲು ಪೂರ್ಣಗೊಳ್ಳುತ್ತವೆ” ಎಂದು ಸಿಇಸಿ ಹೇಳಿದರು, ರಾಜ್ಯದಲ್ಲಿ ಮುಕ್ತ, ನ್ಯಾಯಯುತ ಮತ್ತು ಸಕಾಲಿಕ ಚುನಾವಣೆಗಳನ್ನು ಖಚಿತಪಡಿಸಿಕೊಳ್ಳಲು ಪೂರ್ಣ ಆಯೋಗವು ಸಿದ್ಧತೆಯ ಎಲ್ಲಾ ಅಂಶಗಳನ್ನು ಪರಿಶೀಲಿಸಿದೆ ಎಂದು ಹೇಳಿದರು. https://twitter.com/ANI/status/1974761694506156234
ಕೈವ್: ರಷ್ಯಾ ಭಾನುವಾರ ರಾತ್ರಿ ಉಕ್ರೇನ್ ಮೇಲೆ ಡ್ರೋನ್ಗಳು, ಕ್ಷಿಪಣಿಗಳು ಮತ್ತು ಮಾರ್ಗದರ್ಶಿ ವೈಮಾನಿಕ ಬಾಂಬ್ಗಳನ್ನು ಹಾರಿಸಿದ ನಂತರ ಕನಿಷ್ಠ ಐದು ನಾಗರಿಕರು ಪ್ರಾಣ ಕಳೆದುಕೊಂಡರು, ಇತರ 10 ಜನರು ಗಾಯಗೊಂಡರು. ದಾಳಿಯನ್ನು ಖಂಡಿಸಿದ ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ, ರಷ್ಯಾ ಲ್ವಿವ್, ಇವಾನೋ-ಫ್ರಾಂಕಿವ್ಸ್ಕ್, ಜಪೋರಿಝಿಯಾ, ಚೆರ್ನಿಹಿವ್, ಸುಮಿ, ಖಾರ್ಕಿವ್, ಖೆರ್ಸನ್, ಒಡೆಸಾ ಮತ್ತು ಕಿರೊವೊಹ್ರಾದ್ನಂತಹ ಪ್ರದೇಶಗಳನ್ನು ಗುರಿಯಾಗಿಸಿಕೊಂಡು 50 ಕ್ಕೂ ಹೆಚ್ಚು ಕ್ಷಿಪಣಿಗಳು ಮತ್ತು ಸುಮಾರು 500 ದಾಳಿ ಡ್ರೋನ್ಗಳನ್ನು ಹಾರಿಸಿದೆ ಎಂದು ಹೇಳಿದರು. ಮೃತರಿಗೆ ಗೌರವ ಸಲ್ಲಿಸಿದ ಝೆಲೆನ್ಸ್ಕಿ, ಪೀಡಿತ ಪ್ರದೇಶಗಳಲ್ಲಿ ಈ ದಾಳಿಯ ಪರಿಣಾಮಗಳನ್ನು ತೊಡೆದುಹಾಕಲು ತಮ್ಮ ಸರ್ಕಾರ “ತ್ವರಿತವಾಗಿ ಮತ್ತು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತದೆ” ಎಂದು ಹೇಳಿದರು. ಉಕ್ರೇನ್ನಲ್ಲಿನ ಯುದ್ಧವು ಕೊನೆಗೊಳ್ಳುವುದನ್ನು ಖಚಿತಪಡಿಸಿಕೊಳ್ಳಲು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಅವರು ಯುನೈಟೆಡ್ ಸ್ಟೇಟ್ಸ್ ಮತ್ತು ಯುರೋಪ್ ಅನ್ನು ಒತ್ತಾಯಿಸಿದರು. ಇಂದು, ರಷ್ಯನ್ನರು ಮತ್ತೊಮ್ಮೆ ನಮ್ಮ ಮೂಲಸೌಕರ್ಯವನ್ನು ಗುರಿಯಾಗಿಸಿಕೊಂಡಿದ್ದಾರೆ – ನಮ್ಮ ಜನರಿಗೆ ಸಾಮಾನ್ಯ…