Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರಾಜ್ಯದಲ್ಲಿ ವ್ಯಾಪಾರಕ್ಕೆ ಕುಳಿತ ಕಾಂಗ್ರೆಸ್ ಸರಕಾರದ ಸಂತೆ ನಡೆಯುತ್ತಿದೆ ಎಂದು ರಾಜ್ಯ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆರೋಪಿಸಿದ್ದಾರೆ. ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಇದು ಸೇವೆಗಾಗಿ ಬಂದ ಕಾಂಗ್ರೆಸ್ ಅಲ್ಲ; ಇದು ವ್ಯಾಪಾರಕ್ಕೆ ಬಂದ ಕಾಂಗ್ರೆಸ್ ಪಕ್ಷ ಎಂದು ಟೀಕಿಸಿದರು. ಚುನಾವಣೆ ವೇಳೆ ಪೇ ಸಿ.ಎಂ., ಶೇ 40 ಪರ್ಸೆಂಟ್ ಸರಕಾರ ಎಂದು ನಮ್ಮ ಮೇಲೆ ಆರೋಪ ಮಾಡಿದ್ದರು ಎಂದು ವಿವರಿಸಿದರು. ಈಗ ನಿಮ್ಮ ಮೇಲೆ ಜನರು ಛೀ ಥೂ ಎಂಬಂತೆ ಆರೋಪ ಮಾಡುತ್ತಿದ್ದಾರೆ. ಸಚಿವರ ಬದಲಾಗಿ ಈ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ರಾಜೀನಾಮೆ ಕೊಟ್ಟು ತೊಲಗಿದರೆ ಬಹುಶಃ ಸ್ವಲ್ಪ ಮಟ್ಟಿನ ಬದಲಾವಣೆಗಳನ್ನು ಕಾಣಬಹುದು ಎಂದು ನುಡಿದರು. ಬಿಹಾರ ಚುನಾವಣೆ ಬೇರೆ ಬರುತ್ತಿದೆ; ಇವರು ಲೂಟಿಗೆ ನಿಂತಿದ್ದಾರೆ ಎಂದು ವಿಶ್ಲೇಷಿಸಿದರು. ಇದೊಂದು ಭ್ರಷ್ಟ ವ್ಯವಸ್ಥೆ ಎಂದು ಟೀಕಿಸಿದರು. ಪ್ರತಿಯೊಬ್ಬರೂ ಭ್ರಷ್ಟಾಚಾರದಲ್ಲೇ ಮುಳುಗಿದ್ದಾರೆ ಎಂದು ದೂರಿದರು. ಸಿದ್ದರಾಮಯ್ಯನವರೇ, ನೀವು…
ಬೆಂಗಳೂರು: ವಿಶ್ವ ಮಟ್ಟದಲ್ಲಿ ಮನ್ನಣೆ ಪಡೆದಿರುವ ಯೋಗವನ್ನು ನಾವು ಹೆಚ್ಚಿನ ಜನರಿಗೆ ಪರಿಚಯಿಸಬೇಕಾಗಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹಲವು ಕಾರ್ಯಕ್ರಮಗಳನ್ನ ಹಾಕಿಕೊಳ್ಳುತ್ತಿದೆ. ರಾಜ್ಯದ ಎಲ್ಲ ಜಿಲ್ಲಾಸ್ಪತ್ರೆಗಳು, ತಾಲೂಕು ಆಸ್ಪತ್ರೆಗಳು ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಯೋಗ ಪರಿಚಯಿಸುವ ‘ಯೋಗ ಮಂದಿರ’ಗಳನ್ನ ಪ್ರಾರಂಭಿಸುವುದಾಗಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. https://twitter.com/KarnatakaVarthe/status/1937130255870783891 ಮೈಸೂರು ಜಿಲ್ಲೆಯನ್ನು ಯೋಗ ಜಿಲ್ಲೆಯನ್ನಾಗಿ ನಿರ್ಮಿಸುವತ್ತ ಈಗಾಗಲೇ ಯೋಜನೆ ರೂಪಿಸಲಾಗಿದೆ. ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದೇವೆ. ಮೈಸೂರು ಜಿಲ್ಲೆಯ ಪ್ರತಿ ಮನೆಗಳಲ್ಲಿ ಒಬ್ಬರಾದರೂ ಯೋಗಭ್ಯಾಸ ನಡೆಸುವ ರೀತಿಯಲ್ಲಿ ವ್ಯವಸ್ಥೆ ಕಲ್ಪಿಸಲು ಗುರಿ ಹೊಂದಲಾಗಿದೆ. ದೇಶದಲ್ಲಿಯೇ ಪ್ರಥಮ ಬಾರಿಗೆ ರಾಜ್ಯದಲ್ಲಿ ಒಂದು ಜಿಲ್ಲೆಯನ್ನು ಸಂಪೂರ್ಣವಾಗಿ ಯೋಗ ಜಿಲ್ಲೆಯನ್ನಾಗಿ ರೂಪಿಸುವತ್ತ ಹೆಜ್ಜೆ ಇಟ್ಟಿದ್ದೇವೆ. ರಾಜ್ಯದಲ್ಲಿ ಪರಂಪರಾಗತವಾಗಿ ಬಂದ ಅಷ್ಟಾಂಗ ಯೋಗಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಆಯುಷ್ ಇಲಾಖೆಯಿಂದ ಇಂದು ಯಶಸ್ವಿಯಾಗಿ 11 ನೇ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಗಿದೆ. ರಾಜ್ಯದ 10 ಸಾವಿರ…
ಬೆಂಗಳೂರು: ರಾಜ್ಯ ಸರ್ಕಾರವು ಜಾತಿಗಣಿತಿಯ ಮರು ಸಮೀಕ್ಷೆಗೆ ಆದೇಶಿಸಿದೆ. ಈ ಮರುಗಣತಿಗೆ ಶಿಕ್ಷಕರನ್ನು ನಿಯೋಜಿಸುವುದಿಲ್ಲ ಎಂಬುದಾಗಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟ ಪಡಿಸಿದ್ದಾರೆ. ರಾಜ್ಯ ಸರ್ಕಾರ ಮತ್ತೊಮ್ಮೆ ನಡೆಸಲಿರುವ ಜಾತಿ ಗಣತಿಗೆ ಸರ್ಕಾರಿ ಶಾಲಾ ಶಿಕ್ಷಕರನ್ನು ನಿಯೋಜಿಸುವುದಿಲ್ಲ. ಬದಲಿಗೆ ಗಣತಿಯ ಹೊಣೆಯನ್ನು ಹೊರಗುತ್ತಿಗೆಗೆ ವಹಿಸಲು ಯೋಚಿಸಲಾಗಿದೆ. ಸಮೀಕ್ಷೆ ಕಾರ್ಯಕ್ಕೆ ಶಿಕ್ಷಕರನ್ನು ನಿಯೋಜಿಸಿದರೆ ವಿದ್ಯಾರ್ಥಿಗಳ ಪಾಠ – ಪ್ರವಚನಕ್ಕೆ ತೊಂದರೆಯಾಗಲಿದೆ ಎಂಬುದನ್ನು ಈಗಾಗಲೇ ಸಂಬಂಧಿಸಿದ ಇಲಾಖೆಗಳಿಗೆ ಸ್ಪಷ್ಟಪಡಿಸಿದ್ದೇನೆ ಎಂದು ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ. https://twitter.com/KarnatakaVarthe/status/1937087705290297853 https://kannadanewsnow.com/kannada/e-attendance-is-mandatory-in-the-states-schools-government-orders-implementation-from-the-prasada-educational-loan/ https://kannadanewsnow.com/kannada/breaking-a-riot-that-started-over-making-sambar-in-bangalore-ended-in-one-persons-death/
ಬೆಂಗಳೂರು: ಐಶ್ವರ್ಯಗೌಡ ನನಗೆ ಪರಿಚಯವಿಲ್ಲ. ಆಕೆಯೊಂದಿಗೆ ಯಾವುದೇ ವ್ಯವಹಾರವೂ ಇಲ್ಲ. ಕನ್ನಡ ರಾಜ್ಯೋತ್ಸವಕ್ಕೆ ನನ್ನನ್ನು ಕರೆದಿದ್ರು. ಆಗ ನಾನು ಹೋಗಿದ್ದೆ ಎಂಬುದಾಗಿ ಮಾಜಿ ಸಂಸದ ಡಿ.ಕೆ ಸುರೇಶ್ ಸ್ಪಷ್ಟ ಪಡಿಸಿದ್ದಾರೆ. ಇಂದು ಬೆಂಗಳೂರಿನ ಶಾಂತಿನಗರದಲ್ಲಿರುವಂತ ಇಡಿ ಕಚೇರಿಗೆ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾದ ಬಳಿಕ ಅವರು ಮಾತನಾಡಿದರು. ಇಡಿ ವಿಚಾರಣೆಯಲ್ಲಿ ಏನು ಕೇಳಿದ್ದಾರೋ ಅದಕ್ಕೆ ಉತ್ತರಿಸಿದ್ದೇನೆ. ಜುಲೈ.8ರಂದು ಮತ್ತೆ ವಿಚಾರಣೆಗೆ ಹಾಜರಾಗಲು ಹೇಳಿದ್ದಾರೆ. ಆಗಲೂ ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದರು. ಐಶ್ವರ್ಯಗೌಡ ನನಗೆ ಯಾವುದೇ ರೀತಿಯ ಪರಿಚಯವಿಲ್ಲ. ಕನ್ನಡ ರಾಜ್ಯೋತ್ಸವಕ್ಕೆ ನನ್ನ ಕರೆದಿದ್ರು, ನಾನು ಹೋಗಿದ್ದೆ. ಐಶ್ವರ್ಯಗೌಡ ಜೊತೆ ನನ್ನದು ಯಾವುದೇ ವ್ಯವಹಾರವೂ ಇಲ್ಲ. ರಾಜಕೀಯ ಪಿತೂರಿಗಳ ಬಗ್ಗೆ ನಾನು ಮಾತನಾಡುವುದಿಲ್ಲ ಅಂತ ಹೇಳಿದರು. https://kannadanewsnow.com/kannada/fraud-accused-aishwarya-gowda-receives-a-big-shock-from-the-ed-assets-worth-3-98-crores-seized/ https://kannadanewsnow.com/kannada/breaking-mla-raju-kage-said-he-may-resign-in-2-days-what-did-cm-siddaramaiah-say/
ಬೆಂಗಳೂರು: ವಂಚನೆ ಆರೋಪಿ ಐಶ್ವರ್ಯ ಗೌಡಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಿಗ್ ಶಾಕ್ ನೀಡಿದ್ದಾರೆ. ಅವರಿಗೆ ಸೇರಿದ್ದಂತ 3.98 ಕೋಟಿ ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಬೆಂಗಳೂರಿನ ಇಡಿ, 3.98 ಕೋಟಿ (ಅಂದಾಜು) ಮೌಲ್ಯದ ಫ್ಲಾಟ್ಗಳು, ನಿರ್ಮಿತ ಕಟ್ಟಡ ಮತ್ತು ರೂ. 2.01 ಕೋಟಿ (ಅಂದಾಜು) ಮೌಲ್ಯದ ಭೂಮಿ ಮತ್ತು ರೂ. 1.97 ಕೋಟಿ (ಅಂದಾಜು) ಮೌಲ್ಯದ ನಗದು ಮತ್ತು ವಾಹನದ ರೂಪದಲ್ಲಿ ಚಲಿಸಬಲ್ಲ ಆಸ್ತಿಗಳನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ ಎಂದು ಮಾಹಿತಿ ನೀಡಿದೆ. ಶ್ರೀಮತಿ ಐಶ್ವರ್ಯಾ ಗೌಡ ಮತ್ತು ಇತರರ ಪ್ರಕರಣದಲ್ಲಿ ಹೆಚ್ಚಿನ ಆದಾಯದ ಭರವಸೆ ನೀಡಿ ಹಲವಾರು ವ್ಯಕ್ತಿಗಳಿಂದ ಚಿನ್ನ, ನಗದು ಮತ್ತು ಹಣವನ್ನು ಬ್ಯಾಂಕ್ ಖಾತೆಗಳ ಮೂಲಕ ಪಡೆದು ಕ್ರಿಮಿನಲ್ ಪಿತೂರಿಯಲ್ಲಿ ಹಣ ವರ್ಗಾವಣೆಯ ಅಪರಾಧದಲ್ಲಿ ಭಾಗಿಯಾಗಿದ್ದಾರೆಂದು ಕಂಡುಬಂದಿದೆ ಎಂದು ತಿಳಿಸಿದೆ. https://twitter.com/dir_ed/status/1937113610171670882 https://kannadanewsnow.com/kannada/a-person-assaulted-an-ias-officer-at-the-dc-office-in-bengaluru-as-alleged/ https://kannadanewsnow.com/kannada/breaking-mla-raju-kage-said-he-may-resign-in-2-days-what-did-cm-siddaramaiah-say/
ಬೆಂಗಳೂರು: ಈಗಾಗಲೇ ಧಾರವಾಡ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಕೇಸಲ್ಲಿ ವಿನಯ್ ಕುಲಕರ್ಣ ಜೈಲುಪಾಲಾಗಿದ್ದಾರೆ. ಈ ಬೆನ್ನಲ್ಲೇ ಸಿಬಿಐ ಎಸ್ ಪಿ ಪಿ ಹುದ್ದೆಗೆ ಗಂಗಾಧರ ಶೆಟ್ಟಿ ರಾಜೀನಾಮೆ ನೀಡಿದ್ದಾರೆ. ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣ ಸಿಬಿಐ ಎಸ್ ಪಿಪಿಯಾಗಿ ಗಂಗಾಧರ ಶೆಟ್ಟಿ ನೇಮಕ ಮಾಡಲಾಗಿತ್ತು. ಇಂತಹ ಹುದ್ದೆಗೆ ಅವರು ವೈಯಕ್ತಿಕ ಕಾರಣಗಳಿಂದಾಗಿ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. https://kannadanewsnow.com/kannada/breaking-mla-raju-kage-said-he-may-resign-in-2-days-what-did-cm-siddaramaiah-say/ https://kannadanewsnow.com/kannada/massive-operation-by-the-forest-department-in-bangalore-encroachment-removal-from-120-acres-of-forest-land/
ಬೆಂಗಳೂರು: ಐಶ್ವರ್ಯಗೌಡ ವಿರುದ್ಧ ವಂಚನೆ ಆರೋಪ ಕೇಳಿ ಬಂದಿತ್ತು. ಈ ಪ್ರಕರಣದ ತನಿಖೆ ನಡೆಸುತ್ತಿರುವಂತ ಇಡಿ ಅಧಿಕಾರಿಗಳು, ಇದೀಗ ಐಶ್ವರ್ಯಗೌಡಗೆ ಸೇರಿದಂತ 3.98 ಕೋಟಿ ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಬೆಂಗಳೂರಿನ ಇಡಿ, 3.98 ಕೋಟಿ (ಅಂದಾಜು) ಮೌಲ್ಯದ ಫ್ಲಾಟ್ಗಳು, ನಿರ್ಮಿತ ಕಟ್ಟಡ ಮತ್ತು ರೂ. 2.01 ಕೋಟಿ (ಅಂದಾಜು) ಮೌಲ್ಯದ ಭೂಮಿ ಮತ್ತು ರೂ. 1.97 ಕೋಟಿ (ಅಂದಾಜು) ಮೌಲ್ಯದ ನಗದು ಮತ್ತು ವಾಹನದ ರೂಪದಲ್ಲಿ ಚಲಿಸಬಲ್ಲ ಆಸ್ತಿಗಳನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ ಎಂದಿದೆ. ಶ್ರೀಮತಿ ಐಶ್ವರ್ಯಾ ಗೌಡ ಮತ್ತು ಇತರರ ಪ್ರಕರಣದಲ್ಲಿ ಹೆಚ್ಚಿನ ಆದಾಯದ ಭರವಸೆ ನೀಡಿ ಹಲವಾರು ವ್ಯಕ್ತಿಗಳಿಂದ ಚಿನ್ನ, ನಗದು ಮತ್ತು ಹಣವನ್ನು ಬ್ಯಾಂಕ್ ಖಾತೆಗಳ ಮೂಲಕ ಪಡೆದು ಕ್ರಿಮಿನಲ್ ಪಿತೂರಿಯಲ್ಲಿ ಹಣ ವರ್ಗಾವಣೆಯ ಅಪರಾಧದಲ್ಲಿ ಭಾಗಿಯಾಗಿದ್ದಾರೆಂದು ಕಂಡುಬಂದಿದೆ ಎಂದು ತಿಳಿಸಿದೆ. https://twitter.com/dir_ed/status/1937113610171670882 https://kannadanewsnow.com/kannada/a-person-assaulted-an-ias-officer-at-the-dc-office-in-bengaluru-as-alleged/ https://kannadanewsnow.com/kannada/breaking-mla-raju-kage-said-he-may-resign-in-2-days-what-did-cm-siddaramaiah-say/
ಬೆಂಗಳೂರು: ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ವ್ಯಕ್ತಿಯೊಬ್ಬರ ಹೈಡ್ರಾಮಾವೇ ನಡೆದಿದೆ. ಐಎಎಸ್ ಅಧಿಕಾರಿಗಳು ಹೊಡೆಯಲು ಬಂದಿದ್ದಾಗಿ ಆರೋಪಿಸಿದಂತ ವ್ಯಕ್ತಿಯೊಬ್ಬ, ಕಿರುಚಾಡಿದ್ದರಿಂದ ಕೆಲ ಕಾಲ ಡಿಸಿ ಕಚೇರಿಯಲ್ಲಿ ಹೈಡ್ರಾಮಾವೇ ನಡೆಯಿತು. ಸ್ಥಳದಲ್ಲಿದ್ದಂತ ಪೊಲೀಸರು ವ್ಯಕ್ತಿಯನ್ನು ವಶಕ್ಕೆ ಪಡೆದು, ವಿಚಾರಣೆಗೆ ಕರೆದೊಯ್ದರು. ಬೆಂಗಳೂರು ನಗರ ಜಿಲ್ಲಾಧಿಕಾರಿಗಳ ಕಚೇರಿ ಬಳಿಯಲ್ಲಿ ವ್ಯಕ್ತಿಯೊಬ್ಬ ಮೊಬೈಲ್ ನಲ್ಲಿ ದೇಶಭಕ್ತಿ ವೀಡಿಯೋ ನೋಡುತ್ತಿದ್ದೆ. ಅದಕ್ಕೆ ನನಗೆ ಐಎಎಸ್ ಅಧಿಕಾರಿ ಒದಿಯೋಕೆ ಬಂದ್ರು ಅಂತ ಆರೋಪಿಸಿದರು. ಸ್ಥಳದಲ್ಲಿದ್ದಂತ ಪೊಲೀಸರು ಹತ್ತಿರ ಹೋಗುತ್ತಿದ್ದಂತೆ ಅವರ ಮುಂದೆ ಒದ್ದಾಡಿ ಕಿರುಚಾಡಿದರು. ವ್ಯಕ್ತಿಯ ಕಿರುಚಾಟದಿಂದ ಕೆಲಕಾಲ ಸ್ಥಳದಲ್ಲಿ ಗೊಂದಲ ಕೂಡ ಸೃಷ್ಠಿಯಾಗಿತ್ತು. ಕೊನೆಗೆ ಆತನನ್ನ ವಶಕ್ಕೆ ಪಡೆದಂತ ಪೊಲೀಸರು ಅಲ್ಲಿಂದ ಕರೆದೊಯ್ದರು. https://kannadanewsnow.com/kannada/good-news-for-engineering-graduates-from-the-states-reserved-category-invitation-to-apply-for-training/ https://kannadanewsnow.com/kannada/breaking-mla-raju-kage-said-he-may-resign-in-2-days-what-did-cm-siddaramaiah-say/
ಬೆಂಗಳೂರು: ರಾಜ್ಯ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2025-26 ನೇ ಸಾಲಿನ ಐಐಎಸ್ಸಿ, ಐಐಟಿ ಮತ್ತು ಎನ್ಐಟಿ ಸಂಸ್ಥೆಗಳ ಮೂಲಕ ಆರ್ಟಿಫಿಷಲ್ ಇಟಲಿಜನ್ಸ್ ಅಂಡ್ ಮಿಷಿನ್ ಲರ್ನಿಂಗ್ ಮುಂತಾದ ವೃತ್ತಿಪರ ತರಬೇತಿ ಕೋರ್ಸ್ಗಳಲ್ಲಿ ಭಾಗವಹಿಸುವ ಪರಿಶಿಷ್ಟ ಪಂಗಡಗಳ 200 ಇಂಜಿನಿಯರಿAಗ್ ಪದವೀಧರರಿಗೆ 15,000/- ರೂ.ಗಳ ಶಿಷ್ಯ ವೇತನದೊಂದಿಗೆ ತರಬೇತಿ ನೀಡಲು ಅರ್ಹರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅರ್ಹ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಅರ್ಜಿಯನ್ನು ಒಳಗೆ ಕಚೇರಿಯಲ್ಲಿ ಅರ್ಜಿಯನ್ನು ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಜುಲೈ 04 ರೊಳಗಾಗಿ ಸಲ್ಲಿಸುವಂತೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ದೂ.ಸಂ.08182-200266 ಮತ್ತು ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆಯನ್ನು ಸಂಪರ್ಕಿಸುವುದು. https://kannadanewsnow.com/kannada/bjp-is-anti-national-they-should-be-hanged-mla-gopalakrishna-belur/ https://kannadanewsnow.com/kannada/breaking-mla-raju-kage-said-he-may-resign-in-2-days-what-did-cm-siddaramaiah-say/
ಶಿವಮೊಗ್ಗ: ಬಿಜೆಪಿಯ ಕೆಲವು ಮುಖಂಡರು ರಾಷ್ಟ್ರಧ್ವಜವನ್ನು ಕೇಸರೀಕರಣ ಮಾಡಬೇಕು ಅಂತ ಹೊರಟಿದ್ದಾರಲ್ಲ ಇದು ಯಾವತರ ಅಂತ ಅರ್ಥವಾಗುತ್ತಿಲ್ಲ. ರಾಷ್ಟ್ರಧ್ವಜವನ್ನ ಕೇಸರೀಕರಣ ಮಾಡಬೇಕು ಅಂತ ಅಂದ್ರೇ ಇವರ ಧ್ಯೇಯ, ಉದ್ದೇಶವೇನಿದೆ? ಇವರೆಲ್ಲ ರಾಷ್ಟ್ರದ್ರೋಹಿಗಳು. ಇಂತವರನ್ನೆಲ್ಲ ನೇಣಿಗೆ ಹಾಕಬೇಕು. ಸಂವಿಧಾನ ಮತ್ತು ರಾಷ್ಟ್ರಧ್ವಜವನ್ನು ಚೇಂಜ್ ಮಾಡಬೇಕು ಅಂತ ಹೇಳ್ತಾರೋ ಅಂತವರನ್ನು ನೇಣುಗಂಬಕ್ಕೆ ಏರಿಸಬೇಕು ಎನ್ನುವುದು ನನ್ನ ಅಭಿಪ್ರಾಯ. ಇದನ್ನು ಉಗ್ರವಾಗಿ ಖಂಡಿಸುತ್ತೇನೆ ಎಂಬುದಾಗಿ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಕಿಡಿಕಾರಿದ್ದಾರೆ. ಇಂದು ಶಿವಮೊಗ್ಗದ ಸಾಗರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ದೇಶದಲ್ಲಿ ರಸಗೊಬ್ಬರದ ಬೆಲೆ ಜಾಸ್ತಿಯಾಗಿದೆ. ಸುಮಾರು 160 ರಿಂದ 180 ಒಂದು ಚೀಲಕ್ಕೆ ಜಾಸ್ತಿ ಮಾಡಿದ್ದಾರೆ. ಇದರಿಂದ ದೇಶದ ಸಣ್ಣ ರೈತರಿಗೆ ಹೊಡೆತ ಬಿದ್ದಿದೆ. ಕರ್ನಾಟಕದಲ್ಲಿ ಹಾಲಿನ ದರ ಒಂದು ರೂಪಾಯಿ, ಎರಡು ರೂಪಾಯಿ ಮಾಡಿದಾಗ ಬೀದಿಗೆ ಬಂದು ಬಿಜೆಪಿಯ ನಾಯಕರು ಬಾಯಿ ಬಡಿದುಕೊಂಡರು. ಈ ದೇಶದ ರೈತರ ಮೇಲೆ ರಸಗೊಬ್ಬರದ ಬಾರ ಹೇರಿದ್ದಾರಲ್ಲ. ಇದರ ಬಗ್ಗೆ ಯಾರಾದರೂ ಚಕಾರ ಎತ್ತಿದ್ದೀರಾ? ಎಂದು ಪ್ರಶ್ನಿಸಿದರು.…