Subscribe to Updates
Get the latest creative news from FooBar about art, design and business.
Author: kannadanewsnow09
ಕೆಎನ್ಎನ್ ಸ್ಪೋರ್ಟ್ಸ್ ಡೆಸ್ಕ್: ಪ್ಯಾರಿಸ್ ಒಲಂಪಿಕ್ಸ್ 2024ರಲ್ಲಿ ಭಾರತದ ಪದಕದ ಭೇಟೆ ಆರಂಭಗೊಂಡಿದೆ. ಮಹಿಳೆಯರ ಏರ್ ಪಿಸ್ತೂಲ್ 10 ಮೀಟರ್ ಸ್ಪರ್ಧೆಯಲ್ಲಿ ಭಾರತದ ಮನು ಭಾಕರ್ ಅವರು ಕಂಚಿನ ಪದಕವನ್ನು ಗೆದ್ದಿದ್ದಾರೆ. ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಮನು ಭಾಕರ್ ಭಾರತಕ್ಕೆ ಮೊದಲ ಪದಕ ತಂದುಕೊಟ್ಟಿದ್ದಾರೆ. ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಅವರು ಮೂರನೇ ಸ್ಥಾನ ಪಡೆದು ಕಂಚಿನ ಪದಕ ಗೆದ್ದರು. ನಂತರ ಮನು ಸರಣಿ 6 ರಲ್ಲಿ 10.1 ಮತ್ತು 10.3 ಅಂಕಗಳನ್ನು ಗಳಿಸಿದರು, ಒಟ್ಟು 221.7 ಕ್ಕೆ ತಲುಪಿದರು, ಇದು ಅವರ ಮೂರನೇ ಸ್ಥಾನ ಪಡೆದುಕೊಂಡರು. https://twitter.com/ANI/status/1817507317404914001 https://kannadanewsnow.com/kannada/home-minister-g-parameshwara-clarifies-that-goat-meat-and-not-dog-meat-came-to-bengaluru/ https://kannadanewsnow.com/kannada/itr-filling-can-the-tax-regime-change-by-july-31-what-do-the-income-tax-department-rules-say/
ದಾವಣಗೆರೆ: ಬೆಂಗಳೂರಿಗೆ ರಾಜಸ್ಥಾನದಿಂದ ರೈಲಿನ ಮೂಲಕ ಸರಬರಾಜು ಆಗಿರುವುದು ನಾಯಿ ಮಾಂಸವಲ್ಲ. ಅದು ಮೇಕೆ ಮಾಂಸ ಎಂಬುದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ಸ್ಪಷ್ಟ ಪಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಜಸ್ಥಾನದಿಂದ ಬೆಂಗಳೂರಿಗೆ ರೈಲಿನ ಮೂಲಕ ಬಂದಂತ ಮಾಂಸ ನಾಯಿಯದ್ದು ಎಂಬುದಾಗಿ ಆರೋಪಿಸಲಾಗಿತ್ತು. ಈ ಸಂಬಂಧ ಆರೋಗ್ಯ ಇಲಾಖೆಯಿಂದ ಮಾಂಸದ ಮಾದರಿಯನ್ನು ಸಂಗ್ರಹಿಸಿ ಲ್ಯಾಬ್ ಗೆ ಪರೀಕ್ಷೆಗಾಗಿ ಕಳುಹಿಸಲಾಗಿತ್ತು. ಪರೀಕ್ಷೆಯ ವರದಿ ಬಂದಿದೆ. ಅದರಲ್ಲಿ ಮೇಕೆ ಮಾಂಸ ಎಂಬುದಾಗಿ ತಿಳಿದು ಬಂದಿದೆ. ಆದರೇ ನಾಯಿ ಮಾಂಸ ಎಂಬುದಾಗಿ ಅನಾವಶ್ಯಕವಾಗಿ ದುರುದ್ದೇಶದಿಂದ ದೂರು ನೀಡಲಾಗಿದೆ ಅಂತ ಹೇಳಿದರು. ರಾಜಸ್ಥಾನದಿಂದ ವಾರಕ್ಕೊಮ್ಮೆ, 15 ದಿನಗಳಿಗೊಮ್ಮೆ ಈ ರೀತಿಯಾಗಿ ರೈಲಿನ ಮೂಲಕ ಮಾಂಸವನ್ನು ತರುತ್ತಾರೆ. ಹೀಗೆ ತಂದಂತ ಮಾಂಸವನ್ನು ಮಾರಾಟ ಮಾಡುವುದೇ ಅವರ ಪ್ರವೃತ್ತಿಯಾಗಿದೆ. ಆದರೇ ತಂದಿರೋದು ನಾಯಿಯ ಮಾಂಸವಲ್ಲ. ಅದು ಮೇಕೆಯದ್ದು ಎಂಬುದಾಗಿ ಲ್ಯಾಬ್ ರಿಪೋರ್ಟ್ ನಿಂದ ದೃಢಪಟ್ಟಿದೆ ಎಂದು ಸ್ಪಷ್ಟ ಪಡಿಸಿದರು. ಇದೇ ಸಂದರ್ಭದಲ್ಲಿ ಮುಡಾ ಹಗರಣದ ಬಗ್ಗೆ ಮಾತನಾಡಿದಂತ ಅವರು,…
ಕೆಎನ್ಎನ್ ಸ್ಪೋರ್ಟ್ಸ್ ಡೆಸ್ಕ್: ಪ್ಯಾರಿಸ್ ಒಲಿಂಪಿಕ್ಸ್ 2024 ರ ಮಹಿಳಾ ಸಿಂಗಲ್ಸ್ ಪಂದ್ಯದಲ್ಲಿ ಭಾರತದ ಅಗ್ರ ಶ್ರೇಯಾಂಕಿತ ಟೇಬಲ್ ಟೆನಿಸ್ ಆಟಗಾರ್ತಿ ಶ್ರೀಜಾ ಅಕುಲಾ ಅವರು ಸ್ವೀಡನ್ನ ಕ್ರಿಸ್ಟಿನಾ ಕಾಲ್ಬರ್ಗ್ ವಿರುದ್ಧ 4-0 ಅಂತರದಿಂದ ನಿರ್ಣಾಯಕ ಗೆಲುವು ಸಾಧಿಸುವ ಮೂಲಕ 32ನೇ ಸುತ್ತಿಗೆ ಪ್ರವೇಶಿಸಿದ್ದಾರೆ. ಡಬ್ಲ್ಯುಟಿಟಿ ಸ್ಪರ್ಧಿ ಸಿಂಗಲ್ಸ್ ಪ್ರಶಸ್ತಿಯನ್ನು ಗೆದ್ದ ಮೊದಲ ಭಾರತೀಯ ಪ್ಯಾಡ್ಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾದ ಶ್ರೀಜಾ, ಸ್ವೀಡನ್ ವಿರುದ್ಧ 30 ನಿಮಿಷಗಳ ಪಂದ್ಯದಲ್ಲಿ 11-4, 11-9, 11-7 ಮತ್ತು 11-8 ಅಂಕಗಳಿಂದ ಗೆಲುವು ಸಾಧಿಸಿದರು. ಮೊದಲ ಸೆಟ್ ಅನ್ನು ಸುಲಭವಾಗಿ ತೆಗೆದುಕೊಳ್ಳಲು ಭಾರತೀಯರಿಗೆ ಸುಲಭವಾಗಿತ್ತು ಆದರೆ ಎರಡನೇ ಸೆಟ್ ನಲ್ಲಿ ಹೆಚ್ಚಿನ ಪ್ರತಿರೋಧವನ್ನು ಎದುರಿಸಬೇಕಾಯಿತು, ನಂತರದ ಸೆಟ್ ಗಳಲ್ಲಿಯೂ ಕಾಲ್ಬರ್ಗ್ ಅವರಿಗೆ ಸವಾಲು ಹಾಕಿದರು. ಮೂರನೇ ಸೆಟ್ ನಲ್ಲಿ ಶ್ರೀಜಾ 7-5ರಲ್ಲಿ ಸೋಲನುಭವಿಸಿ ಸೆಟ್ ಗೆಲ್ಲುವವರೆಗೂ ಇಬ್ಬರೂ ಆಟಗಾರರು ಪೈಪೋಟಿ ನಡೆಸಿದರು. ನಾಲ್ಕನೇ ಸೆಟ್ ನಲ್ಲಿ ಉತ್ತಮ ಆರಂಭ ಪಡೆದ ಶ್ರೀಜಾ 9-3ರ ಮುನ್ನಡೆ ಸಾಧಿಸಿದರು.…
ಬೆಂಗಳೂರು: ಭಾರೀ ಮಳೆಯಿಂದಾಗಿ ಭೂ ಕುಸಿತ ಉಂಟಾದ ಪರಿಣಾಮ, ಜುಲೈ.29ರ ನಾಳೆಯಿಂದ ಜುಲೈ.4ರವರೆಗೆ ಕೆಲ ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ನೈರುತ್ಯ ರೈಲ್ವೆಯ ಬೆಂಗಳೂರು ವಿಭಾಗವು ಮಾಹಿತಿ ನೀಡಿದೆ. ಯಡಕುಮೇರಿ ನಡುವೆ ಭೂಕುಸಿತ ಸಂಭವಿಸಿದ ಕಾರಣ ನೈಋತ್ಯ ರೈಲ್ವೆಯ ಮೈಸೂರು ವಿಭಾಗದ ಕಡಗರವಳ್ಳಿ ವಿಭಾಗ ಈ ಕೆಳಗಿನ ರೈಲುಗಳನ್ನು ರದ್ದುಪಡಿಸಲಾಗಿದೆ ಅಂತ ತಿಳಿಸಿದೆ. ಅಂದಹಾಗೇ ದಿನಾಂಕ 29-07-2024ರಂದು ಐದು ರೈಲುಗಳು, ದಿನಾಂಕ 30-07-2024ರಂದು 10 ರೈಲುಗಳು, ದಿನಾಂಕ 31-07-2024ರಂದು 10 ರೈಲುಗಳು, ದಿನಾಂಕ 01-08-2024ರಂದು 10 ರೈಲುಗಳು, ದಿನಾಂಕ 02-08-2024ರಂದು 10 ರೈಲುಗಳು, ದಿನಾಂಕ 03-08-2024ರಂದು 10 ರೈಲು ಹಾಗೂ ದಿನಾಂಕ 04-08-2024ರಂದು ಐದು ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ. ದಿನಾಂಕ 29-07-2024ರಂದು ಈ ರೈಲುಗಳ ಸಂಚಾರ ರದ್ದು ರೈಲು ಸಂಖ್ಯೆ 16511 ಕೆ ಎಸ್ ಆರ್ ಬೆಂಗಳೂರು ಟು ಕಣ್ಣೂರು ರೈಲು ಸಂಖ್ಯೆ 16595 ಕೆ ಎಸ್ ಆರ್ ಬೆಂಗಳೂರು ಟು ಕಾರವಾರ ರೈಲು ಸಂಖ್ಯೆ 16585…
ಉತ್ತರ ಕನ್ನಡ: ಜಿಲ್ಲೆಯ ಕಾರವಾರದ ಅಂಕೋಲ ಬಳಿಯ ಶಿರೂರು ಗ್ರಾಮದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತಗೊಂಡು 13 ಜನರು ನಾಪತ್ತೆಯಾಗಿದ್ದರು. ಅವರಲ್ಲಿ ಈವರೆಗೆ 10 ಜನರ ಮೃತದೇಹಗಳು ಪತ್ತೆಯಾಗಿದ್ದವು. ಆದರೇ ಇನ್ನೂ ಮೂವರ ಮೃತದೇಹ ಪತ್ತೆಯಾಗಿರಲಿಲ್ಲ. ಇದರ ನಡುವೆ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲ್ಲೂಕಿನ ಶಿರೂರು ಗ್ರಾಮದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತ ಪ್ರಕರಣ ನಡೆದಿತ್ತು. ಈ ಘಟನೆಯಲ್ಲಿ 13 ಮಂದಿ ನಾಪತ್ತೆಯಾಗಿದ್ದರು. ಇವರಲ್ಲಿ 10 ಮಂದಿಯ ಮೃತದೇಹ ಪತ್ತೆಯಾಗಿತ್ತು. ಆದರೇ 13 ದಿನಗಳ ಇಂದಿನವರೆಗೂ ಮೂವರ ಮೃತದೇಹ ಪತ್ತೆಯಾಗಿಲ್ಲ. 13ನೇ ದಿನವಾದಂತ ಇಂದು ಬೆಳಿಗ್ಗೆಯಿಂದ ಮೃತದೇಹಕ್ಕಾಗಿ ಶೋಧ ಕಾರ್ಯಾಚರಣೆಯನ್ನು ನಡೆಸಿದರೂ ಮೂವರ ಬಗ್ಗೆ ಸಣ್ಣ ಸುಳಿವೂ ಸಿಕ್ಕಿಲ್ಲ. ಈ ಹಿನ್ನಲೆಯಲ್ಲಿ ತಾತ್ಕಾಲಿಕವಾಗಿ ಶೋಧ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗುತ್ತಿದೆ ಎಂಬುದಾಗಿ ಜಿಲ್ಲಾಡಳಿತದಿಂದ ಮಾಹಿತಿ ಹೊರ ಬಿದ್ದಿರೋದಾಗಿ ಹೇಳಲಾಗುತ್ತಿದೆ. https://kannadanewsnow.com/kannada/i-am-in-congress-party-not-in-government-mlc-bk-hariprasad/ https://kannadanewsnow.com/kannada/itr-filling-can-the-tax-regime-change-by-july-31-what-do-the-income-tax-department-rules-say/
ಬೆಂಗಳೂರು: “ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಜನರ ಕಷ್ಟಗಳನ್ನು ಆಲಿಸಬೇಕು ಹಾಗೂ ಅಗತ್ಯ ನೆರವುಗಳನ್ನು ಒದಗಿಸಿಕೊಡಬೇಕು” ಎಂದು ಸಚಿವ ಸಂಪುಟ ಸಹೋದ್ಯೋಗಿಗಳಿಗೆ ಜಲ ಸಂಪನ್ಮೂಲ ಸಚಿವರೂ ಆಗಿರುವ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿಕೆ ಶಿವಕುಮಾರ್ ಅವರು ಮನವಿ ಮಾಡಿದ್ದಾರೆ. ರಾಜ್ಯದಲ್ಲಿ ಈ ವರ್ಷ ಭಾರಿ ಮಳೆಯಾಗುತ್ತಿದೆ ಮತ್ತು ಪ್ರವಾಹದಿಂದ ರಾಜ್ಯದ ನದಿಗಳು ಉಕ್ಕಿ ಹರಿಯುತ್ತಿದೆ. ಬಹುತೇಕ ಜಲಾಶಯಗಳು ಭರ್ತಿಯಾಗಿ ನೀರಿನ ಹೊರಹರಿವು ಹೆಚ್ಚಾದ ಪರಿಣಾಮ ನೆರೆ ಪರಿಸ್ಥಿತಿ ಎದುರಾಗಿದೆ. ನದಿ ಪಾತ್ರದ ಜನ, ಜಾನುವಾರು, ಆಸ್ತಿ, ಬೆಳೆಗಳಿಗೆ ಹಾನಿಗಳ ಬಗ್ಗೆ ವರದಿಯಾಗುತ್ತಿದೆ. ಇಂತಹ ಕಷ್ಟದ ಸಮಯದಲ್ಲಿ ಜನರ ಜೊತೆ ನಿಲ್ಲಬೇಕಿರುವುದು ನಮ್ಮ ಸರ್ಕಾರದ ಕರ್ತವ್ಯ. ಹೀಗಾಗಿ ಸಚಿವ ಸಹೋದ್ಯೋಗಿಗಳು ತಮ್ಮ ಕ್ಷೇತ್ರ ವ್ಯಾಪ್ತಿ ಹಾಗೂ ಇತರೆ ಪ್ರವಾಹಪೀಡಿತ ಪ್ರದೇಶಗಳ ಶಾಸಕರ ಸಂಪರ್ಕದೊಂದಿಗೆ ಭೇಟಿ ಕೊಟ್ಟು, ಸಂತ್ರಸ್ತರ ಅಹವಾಲುಗಳನ್ನು ಸ್ವೀಕರಿಸಿ ಅವರ ನೆರವಿಗೆ ಧಾವಿಸಬೇಕಾಗಿ ಕೋರುತ್ತೇನೆ” ಎಂದು ಮನವಿ ಮಾಡಿದ್ದಾರೆ. “ವರುಣನ ಕೃಪೆಯಿಂದ ಉತ್ತಮ ಮಳೆಯಾಗುತ್ತಿದೆ. ಇದೇ ವೇಳೆ ಉಂಟಾಗಿರುವ ಅವಘಡಗಳಿಂದ ಜನರು…
ಬೆಂಗಳೂರು: ರಾಜ್ಯ ಸರ್ಕಾರದಿಂದ ವೈದ್ಯಕೀಯ ಸಿಬ್ಬಂದಿಗಳ ಶ್ರೋಯೋಭಿವೃದ್ಧಿಗೆ ಬದ್ಧತೆಯ ನಡೆ ತೋರಿಸಿದೆ. ಅಲ್ಲದೇ ವೃತ್ತಿ ನಿರತ ವೈದ್ಯರು, ವೈದ್ಯಕೀಯ ಸಿಬ್ಬಂದಿ ಮೇಲಿನ ಹಿಂಸಾಚಾರ ತಡೆಗೆ ಮಸೂದೆ ಅಂಗೀಕರಿಸಿದೆ. ಹೀಗಾಗಿ ವೃತ್ತಿನಿರತ ವೈದ್ಯರು, ವೈದ್ಯಕೀಯ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ರೇ ಶಿಕ್ಷೆ ಫಿಕ್ಸ್ ಆದ್ರೇ, ಭಾರೀ ದಂಡವನ್ನೂ ವಿಧಿಸಲಾಗುತ್ತದೆ. ಹೌದು. ವೃತ್ತಿಪರ ವೈದ್ಯರು, ವೈದ್ಯಕೀಯ ಸಿಬ್ಬಂದಿ ಮೇಲೆ ಹಿಂಸಾಚಾರ, ಹಲ್ಲೆ, ಅಪಮಾನ ಅಥವಾ ಸಾಮಾಜಿಕ ಜಾಲತಾಣಗಳ ಮೂಲಕ ನಿಂದನೆ ಮಾಡಿದ್ದಲ್ಲಿ 3 ರಿಂದ 7 ವರ್ಷಗಳವರೆಗೆ ಜೈಲು ಶಿಕ್ಷೆ, ₹25 ಸಾವಿರದಿಂದ ₹2 ಲಕ್ಷದವರೆಗೆ ದಂಡ ವಿಧಿಸಲು ಅವಕಾಶ ಕಲ್ಪಿಸುವ ಹಾಗೂ ವೃತ್ತಿಪರ ವೈದ್ಯರಿಗೆ ನೋಂದಣಿ ಕಡ್ಡಾಯ ಮಾಡುವ ಮಹತ್ವದ ಮಸೂದೆಯನ್ನು ವಿಧಾನ ಮಂಡಲದ ಉಭಯ ಸದನಗಳಲ್ಲಿ ಅಂಗೀಕರಿಸಲಾಗಿದೆ. ರಾಜ್ಯದಲ್ಲಿ ನಕಲಿ ವೈದ್ಯರ ಹಾವಳಿ ಹೆಚ್ಚಾಗಿದ್ದು, ಇದನ್ನು ತಡೆಗಟ್ಟಲು ಈಗಾಗಲೇ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದರೊಂದಿಗೆ ನಕಲಿ ವೈದ್ಯ ವೃತ್ತಿಯಲ್ಲಿ ತೊಡಗಿರುವವರಿಗೆ ₹10 ಸಾವಿರದಿಂದ ₹1 ಲಕ್ಷದವರೆಗೆ ದಂಡ ವಿಧಿಸಲಾಗುವುದು. ಈ ಮೂಲಕ…
ಬೆಂಗಳೂರು: ಇಂದು ಬೆಂಗಳೂರಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದಂತ ಆರೋಪದಡಿ ಹಿಂದೂ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿಯನ್ನು ಬಂಧಿಸಲಾಗಿತ್ತು. ಆ ಬಳಿಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ಅವರಿಗೆ ನ್ಯಾಯಾಧೀಶರು 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದ್ದಾರೆ. ಬೆಂಗಳೂರಿನ ಕಾಟನ್ ಪೇಟೆ ಠಾಣೆಯ ಪೊಲೀಸರು ಹಿಂದೂ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿ ಅವರನ್ನು ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದಂತ ಆರೋಪದಡಿ ಬಂಧಿಸಿದ್ದರು. ಆ ಬಳಿಕ ಅವರನ್ನು ಬೆಂಗಳೂರಿನ 5ನೇ ಎಸಿಎಂಎಂ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದಂತ ನ್ಯಾಯಮೂರ್ತಿಗಳು ಪುನೀತ್ ಕೆರೆಹಳ್ಳಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದ್ದಾರೆ. ಅಲ್ಲದೇ ಸೋಮವಾರದಂದು ಜಾಮೀನು ಅರ್ಜಿಯನ್ನು ಸಲ್ಲಿಸುವಂತೆ ಸೂಚಿಸಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಹೀಗಾಗಿ ಹಿಂದೂ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿ ಜೈಲುಪಾಲಾಗಿದ್ದಾರೆ. https://kannadanewsnow.com/kannada/chitradurga-traditional-rituals-are-like-ornaments-of-the-past-says-dr-shivakumar/ https://kannadanewsnow.com/kannada/ssc-cgl-2024-job-seekers-this-is-your-last-chance-apply-now-for-17000-vacancies/
ಚಿತ್ರದುರ್ಗ: ಪೂರ್ವಜರು ಆರಂಭಿಸಿದ ಸಂಪ್ರದಾಯ ಹಳೆಯ ಕಾಲದ ಆಭರಣಗಳಿದ್ದಂತೆ ಅವುಗಳನ್ನು ಇಂದಿನ ಪೀಳಿಗೆ ಹೊಸ ಡಿಸೈನ್ ಮಾಡಿಕೊಂಡು ಬಳಸುವಂತೆ ನಾವು ಸಂಪ್ರದಾಯವನ್ನು ಉಳಿಸಬೇಕು ಎಂದು ಚಿತ್ರದುರ್ಗ ಆಯುಷ್ ಇಲಾಖೆ ವೈದ್ಯಾಧಿಕಾರಿ ಡಾ,ಶಿವಕುಮಾರ್ ಅಭಿಪ್ರಾಯಪಟ್ಟರು. ಚಿತ್ರದುರ್ಗದ ಸ್ಟೇಡಿಯಂ ರಸ್ತೆಯಲ್ಲಿರುವ ವೀರ ಸೌಧದಲ್ಲಿ ಪತಾಂಜಲಿ ಮಹಿಳಾ ಯೋಗ ಸಮಿತಿಯಿಂದ ನಡೆದ ಯೋಗ ಶಿಕ್ಷಕರತರಭೇತಿ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ನಮ್ಮಪೂರ್ವಜರು ಆಚರಿಸುತಿದ್ದ, ಎಲ್ಲಾ ಸಂಪ್ರದಾಯ ನಮ್ಮ ಆರೋಗ್ಯಕ್ಕೆಪೂರಕವಾಗಿವೆ. ಆದರೆ ಇಂದಿನ ಸಮಾಜದಲ್ಲಿ ಶರೀರಕ್ಕಿಂತ ಹೆಚ್ಚಾಗಿ ಮನಸಿನ ಕಾಯಿಲೆ ಹೆಚ್ಚಾಗಿವೆ. ಹೀಗಾಗಿ ಯೋಗ ಸೇರಿದಂತೆ ನಮ್ಮ ಪೂರ್ವಜರು ಆರಂಭಿಸಿದ್ದ ಎಲ್ಲಾ ಸಾಂಪ್ರದಾಯಿಕ ಆಚರಣೆಗಳನ್ನು ನಾವು ಮುನ್ನಡೆಸಬೇಕಿದೆ. ಆ ಸಂಪ್ರದಾಯಗಳು ನಮ್ಮ ಆರೋಗ್ಯ ರಕ್ಷಣೆಗೆ ದಾರಿದೀಪವಾಗಿವೆ. ಆದರೆ ಇಂದಿನ ಮಹಿಳೆಯರು ಆ ಸಾಂಪ್ರದಾಯಿಕ ಆಚರಣೆಗಳನ್ನು ಮರೆತು ಸಾಮರಸ್ಯ ಕದಡುವ ಧಾರವಾಹಿಗಳತ್ತ ಮಾರು ಹೋಗುತ್ತಿದ್ದಾರೆ. ಈ ಹಿಂದೆ ಕೋವಿಡ್ ಮಹಾಮಾರಿ ಆರಂಭವಾದಾಗ ಸಾಮಾಜಿಕ ಅಂತರಪಾಲಿಸುವಂತೆ ಸೂಚಿಸಿದ್ದಾಗ,ಪ್ರಾಣಭಯದಿಂದ ಎಲ್ಲರು ಅದನ್ನು ಪಾಲಿಸಿದೆವು. ಅಂತೆಯೇ ಈಗಿನ ಪೀಳಿಗ ಸಹ ವೈಜ್ಞಾನಿಕ ತತ್ವ ಪಾಲಿಸಿದ್ರೆ ನಮ್ಮ…
ಬೆಂಗಳೂರು: ಕನ್ನಡ ಕಲಿಕೆಗೆ ಅನ್ಯಭಾಷಿಗರು ಆಸಕ್ತಿ ತೋರಿದರೇ, ಅವರಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ ಕನ್ನಡೇತರರಿಗೆ ಕನ್ನಡ ಕಲಿಸುವ ಯೋಜನೆ ಆರಂಭಿಸಲಾಗಿದೆ. ಇದಕ್ಕಾಗಿ ಕಲಿಕಾ ಕೇಂದ್ರ ಆರಂಭಿಸಲು ಇಚ್ಛಿಸುವವರು ಈ ರೀತಿ ಅರ್ಜಿ ಸಲ್ಲಿಸಬಹುದು. ಅನ್ಯ ಭಾಷಿಗರಿಗೆ ಕನ್ನಡ ಕಲಿಸಲು ಕರ್ನಾಟಕ ಅಭಿವೃದ್ಧಿ ಪ್ರಾಧಿಕಾರವು ʼಕನ್ನಡೇತರರಿಗೆ ಕನ್ನಡ ಕಲಿಸುವ ಯೋಜನೆʼಯನ್ನು ಪ್ರಾರಂಭಿಸಿದೆ. ಕನ್ನಡ ಕಲಿಕಾ ಕೇಂದ್ರಗಳನ್ನು ನಡೆಸಲು ಇಚ್ಛಿಸುವವರು ಪ್ರಾಧಿಕಾರದ ಇ-ಮೇಲ್ ವಿಳಾಸ secretary.kanpra@gmail.com ಅಥವಾ chairman.kanpra@gmail.com ಗೆ ಸಂಪರ್ಕಿಸಬಹುದು. ಹೆಚ್ಚಿನ ವಿವರಕ್ಕಾಗಿ 080 22286773 ಕ್ಕೆ ಕರೆ ಮಾಡಬಹುದು. https://twitter.com/KarnatakaVarthe/status/1817167511860727977 https://kannadanewsnow.com/kannada/opposition-mlas-agree-to-set-up-skydeck-near-nice-road-discuss-in-cabinet-meeting-dk-shivakumar-shivakumar/ https://kannadanewsnow.com/kannada/ban-on-tourists-visiting-muttatti-tourist-spot/