Subscribe to Updates
Get the latest creative news from FooBar about art, design and business.
Author: ವಸಂತ ಬಿ ಈಶ್ವರಗೆರೆ
ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.
ಬೆಂಗಳೂರು : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವೃತ್ತಿಪರ ಶಿಕ್ಷಣದ ವ್ಯಾಸಂಗಕ್ಕಾಗಿ 72.78 ಕೋಟಿ ರೂ.ಶಿಕ್ಷಣ ಸಾಲ ನೀಡಲಾಗಿದೆ. ಕೆಎಂಡಿಸಿ ಕಚೇರಿಯಲ್ಲಿ ಮಂಗಳವಾರ ಪ್ರಗತಿ ಪರಿಶೀಲನೆ ನಡೆಸಿ ಸುದ್ಧಿಗಾರರ ಜತೆ ಮಾತನಾಡಿದ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್, ವೈದ್ಯಕೀಯ, ದಂತ ವೈದ್ಯಕೀಯ,ಆಯುಷ್, ಫಾರ್ಮಸಿ ಎಂಜಿನಿಯರಿಂಗ್ ಕೋರ್ಸ್ ವ್ಯಾಸಂಗ ಮಾಡಲು ಬಯಸಿದ ಬಡ ಕುಟುಂಬಗಳ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಗರಿಷ್ಠ ಐದು ಲಕ್ಷ ರೂ. ವರೆಗೆ ಸಾಲದ ಸೌಲಭ್ಯ ಒದಗಿಸಲಾಗಿದೆ. ಇದರ ಜತೆಗೆ ವಿದೇಶದಲ್ಲಿ ವ್ಯಾಸಂಗ ಮಾಡಲು 88 ವಿದ್ಯಾರ್ಥಿಗಳಿಗೆ ಗರಿಷ್ಠ 10 ಲಕ್ಷ ರೂ. ವರೆಗೆ 7.5 ಕೋಟಿ ರೂ. ಸಾಲ ನೀಡಲಾಗಿದೆ ಎಂದು ವಿವರಿಸಿದರು. ಅಲ್ಪಸಂಖ್ಯಾತರ ಸಮುದಾಯದ ಮಕ್ಕಳು ವೃತ್ತಿಪರ ಶಿಕ್ಷಣ ಪಡೆಯಲು ಇದರಿಂದ ಸಹಕಾರಿಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಲಹೆ ಮೇರೆಗೆ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಲಾಗುತ್ತಿದೆ ಎಂದು ತಿಳಿಸಿದರು. ಇದೇ ಮೊದಲ ಬಾರಿಗೆ ಸಣ್ಣ ವ್ಯಾಪಾರ ಮಾಡುವ ಮಹಿಳೆಯರಿಗೆ ವಿಶೇಷ…
ಬೆಂಗಳೂರು: ನಟ ದರ್ಶನ್ ಪದೇ ಪದೇ ಸುದ್ದಿಯಾಗುತ್ತಿದ್ದಾರೆ. ಅದೂ ವಿವಿಧ ಕ್ರೈಂಗಳಿಂದ ಆಗಿದೆ. ಈಗ ಚಿತ್ರದುರ್ಗ ಮೂಲಕ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದಾರೆ. ಈ ಪ್ರಕರಣದಲ್ಲಿ ಆರೋಪ ಸಾಭೀತಾದ್ರೆ ಕನ್ನಡ ಚಿತ್ರರಂಗದಿಂದ ನಟ ದರ್ಶನ್ ಬ್ಯಾನ್ ಆಗಲಿದ್ದಾರೆ ಎನ್ನಲಾಗುತ್ತಿದೆ. ನಟ ದರ್ಶನ್ ಗೆಳತಿ ಪವಿತ್ರಾ ಗೌಡಗೆ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎಂಬಾತ ಅಸಭ್ಯ ಮೆಸೇಜ್ ಹಾಗೂ ಪೋಟೋಗಳನ್ನು ಕಳುಹಿಸುತ್ತಿದ್ದ ಎಂಬ ಕಾರಣಕ್ಕೆ ದರ್ಶನ್ ಅಂಡ್ ಗ್ಯಾಂಗ್ ಬರ್ಬರವಾಗಿ ರೇಣುಕಾಸ್ವಾಮಿ ಹತ್ಯೆಗೈದಿದ್ದಾರೆ. ಇದು ಕನ್ನಡ ಚಿತ್ರರಂಗಕ್ಕೆ ದೊಡ್ಡ ಶಾಕ್ ನೀಡಿದಂತೆ ಆಗಿದೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪವಿತ್ರಾ ಗೌಡ ಎ.1 ಆರೋಪಿಯಾದ್ರೇ, ನಟ ದರ್ಶನ್ ಎ.2 ಆರೋಪಿಯಾಗಿದ್ದಾರೆ. ಈಗ 6 ದಿನಗಳ ಕಾಲ ಪೊಲೀಸ್ ಕಸ್ಟಡಿಯಲ್ಲಿರುವಂತ ನಟ ದರ್ಶನ್ ಅಂಡ್ ಟೀಂಗೆ ಆರೋಪ ಸಾಭೀತಾದ್ರೆ ಸಂಕಷ್ಟ ಎದುರಾಗಲಿದೆ ಎನ್ನಲಾಗುತ್ತಿದೆ. ಅದರಲ್ಲೂ ನಟ ದರ್ಶನ್ ಗೆ ದೊಡ್ಡ ಸಂಕಷ್ಟವೇ ಎದುರಾಗಲಿದೆ. ಕನ್ನಡ ಚಿತ್ರರಂಗದಿಂದ ನಟ ದರ್ಶನ್ ಬ್ಯಾನ್ ಮಾಡ್ತಾರಾ ಎಂಬ ಪ್ರಶ್ನೆ…
ಬೆಂಗಳೂರು: ರಾಜ್ಯದ ಮಕ್ಕಳ ಪೋಷಕರಿಗೆ ಸರ್ಕಾರ ಗುಡ್ ನ್ಯೂಸ್ ನೀಡಲಾಗಿದೆ. ಅದೇ ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ಶಾಲೆಗಳ ಆರಂಭಕ್ಕೆ ಗ್ರೀನ್ ಸಿಗ್ನಲ್ ನೀಡಿದೆ. ಹೀಗಾಗಿ ರಾಜ್ಯದ 7 ಜಿಲ್ಲೆಗಳಲ್ಲಿ ಪೂರ್ವ ಪ್ರಾಥಮಿಕ ಶಾಲೆಗಳು ಆರಂಭಗೊಳ್ಳಲಿದ್ದಾವೆ. ಈ ಕುರಿತಂತೆ ರಾಜ್ಯ ಸರ್ಕಾರದ ಆದೇಶ ಹೊರಡಿಸಿದ್ದು, ಪೂರ್ವ ಪ್ರಾಥಮಿಕ ಶಾಲೆ ಆರಂಭಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. 7 ಜಿಲ್ಲೆಗಳಲ್ಲಿ 1,008 ಪೂರ್ವ ಪ್ರಾಥಮಿಕ ಶಾಲೆಗಳು ಈ ವರ್ಷದಿಂದಲೇ ಆರಂಭಿಸಲು ಆದೇಶದಲ್ಲಿ ತಿಳಿಸಿದೆ. ಬಳ್ಳಾರಿ- 119 ಶಾಲೆಗಳು, ಬೀದರ್ -98 ಶಾಲೆಗಳು, ಕೊಪ್ಪಳ-131 ಶಾಲೆಗಳು, ಕಲಬುರಗಿ-234 ಶಾಲೆಗಳು, ರಾಯಚೂರು- 190 ಶಾಲೆಗಳು, ವಿಜಯನಗರ- 142 ಶಾಲೆಗಳು, ಯಾದಗಿರಿಯಲ್ಲಿ 94 ಶಾಲೆಗಳು ಆರಂಭಗೊಳ್ಳಲಿವೆ. https://twitter.com/KarnatakaVarthe/status/1800830877213114558 https://kannadanewsnow.com/kannada/encounter-in-jammu-and-kashmirs-kathua-leaves-2-militants-1-crpf-personnel-dead/ https://kannadanewsnow.com/kannada/renukaswamy-murder-case-darshan-offers-rs-5-lakh-to-surrendered-actor-darshan/
ನವದೆಹಲಿ: ಜೂನ್ 15-16 ರಂದು ಸ್ವಿಟ್ಜರ್ಲೆಂಡ್ನಲ್ಲಿ ನಡೆಯಲಿರುವ ಉಕ್ರೇನ್ ಕುರಿತ ಜಾಗತಿಕ ಶಾಂತಿ ಶೃಂಗಸಭೆಯಲ್ಲಿ ಭಾರತ ಭಾಗವಹಿಸಲಿದೆ ಎಂದು ವಿದೇಶಾಂಗ ಕಾರ್ಯದರ್ಶಿ ವಿನಯ್ ಕ್ವಾತ್ರಾ ಬುಧವಾರ ತಿಳಿಸಿದ್ದಾರೆ. ಜಾಗತಿಕ ಶಾಂತಿ ಶೃಂಗಸಭೆ ಜೂನ್ 15-16 ರಂದು ಸ್ವಿಟ್ಜರ್ಲೆಂಡ್ ನ ಲೇಕ್ ಲುಸೆರ್ನ್ ಮೇಲಿನ ಬರ್ಗೆನ್ ಸ್ಟಾಕ್ ಹೋಟೆಲ್ ನಲ್ಲಿ ನಡೆಯಲಿದೆ. ಭಾರತವು “ಸೂಕ್ತ ಮಟ್ಟದಲ್ಲಿ” ಶೃಂಗಸಭೆಯಲ್ಲಿ ಭಾಗವಹಿಸಲಿದೆ ಎಂದು ಕ್ವಾತ್ರಾ ಹೇಳಿದರು. https://twitter.com/NayanimaBasu/status/1800827842110107696 https://kannadanewsnow.com/kannada/encounter-in-jammu-and-kashmirs-kathua-leaves-2-militants-1-crpf-personnel-dead/ https://kannadanewsnow.com/kannada/renukaswamy-murder-case-police-form-three-teams-of-murder-accused/
ನವದೆಹಲಿ: ಏರ್ ಏಷ್ಯಾ ಏರ್ಲೈನ್ಸ್ ಮಾಲೀಕ ಎಐಎಕ್ಸ್ ಕನೆಕ್ಟ್ ಪ್ರೈವೇಟ್ ಲಿಮಿಟೆಡ್ ಅನ್ನು ಏರ್ ಇಂಡಿಯಾ ಎಕ್ಸ್ಪ್ರೆಸ್ ಲಿಮಿಟೆಡ್ ಕಂಪನಿಯೊಂದಿಗೆ ವಿಲೀನಗೊಳಿಸಲು ಚಂಡೀಗಢದ ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿ (ಎನ್ಸಿಎಲ್ಟಿ) ಮಂಗಳವಾರ ಅನುಮೋದನೆ ನೀಡಿದೆ. ನ್ಯಾಯಾಂಗ ಸದಸ್ಯ ಹರ್ನಾಮ್ ಸಿಂಗ್ ಠಾಕೂರ್ ಮತ್ತು ತಾಂತ್ರಿಕ ಸದಸ್ಯ ಎಲ್.ಎನ್.ಗುಪ್ತಾ ಅವರನ್ನೊಳಗೊಂಡ ನ್ಯಾಯಪೀಠವು ವಿಲೀನ ಪ್ರಸ್ತಾಪಕ್ಕೆ ಕಂಪನಿಗಳ ರಿಜಿಸ್ಟ್ರಾರ್ ಮತ್ತು ನಾಗರಿಕ ವಿಮಾನಯಾನ ಸಚಿವಾಲಯ (ಎಂಒಸಿಎ) ಸೇರಿದಂತೆ ವಲಯ ನಿಯಂತ್ರಕರಿಂದ ಅನುಮೋದನೆ ನೀಡಲಾಗಿದೆ ಎಂದು ಗಮನಿಸಿದೆ. ಅದರಂತೆ, 2013 ರ ಕಂಪನಿಗಳ ಕಾಯ್ದೆಯ ಸೆಕ್ಷನ್ 230 ರಿಂದ 232 ರ ಅಡಿಯಲ್ಲಿ ಎನ್ಸಿಎಲ್ಟಿ ಮುಂದೆ ಸಲ್ಲಿಸಿದ ಎರಡು ಕಂಪನಿಗಳನ್ನು ವಿಲೀನಗೊಳಿಸುವ ಯೋಜನೆಗೆ ಅದು ಅವಕಾಶ ನೀಡಿತು. “ಅರ್ಜಿದಾರರ ಕಂಪನಿಗಳು ಮತ್ತು ಅವುಗಳ ಷೇರುದಾರರ ನಡುವೆ ಸೆಕ್ಷನ್ 230 ರಿಂದ 232 ಮತ್ತು ಕಂಪನಿಗಳ ಕಾಯ್ದೆ, 2013 ರ ಅನ್ವಯವಾಗುವ ಇತರ ನಿಬಂಧನೆಗಳ ಅಡಿಯಲ್ಲಿ ‘ವಿಲೀನ ಯೋಜನೆಗೆ’ ಈ ಮೂಲಕ ಅನುಮತಿ ನೀಡಲಾಗಿದೆ” ಎಂದು ನ್ಯಾಯಮಂಡಳಿ…
ಬೆಂಗಳೂರು: ಚಿತ್ರದುರ್ಗದಿಂದ ಅಶ್ಲೀಲ ಸಂದೇಶವನ್ನು ಕಳುಹಿಸುತ್ತಿದ್ದಾನೆ ಎನ್ನುವಂತ ಒಂದೇ ಒಂದು ಕಾರಣಕ್ಕೆ ರೇಣುಕಾಸ್ವಾಮಿ ಎಂಬಾತನನ್ನು ಕಿಡ್ನ್ಯಾಪ್ ಮಾಡಿಕೊಂಡು ಬೆಂಗಳೂರಿಗೆ ಡಿ ಬಾಸ್ ಅಂಡ್ ಗ್ಯಾಂಗ್ ಬಂದಿತ್ತು. ಅವರನ್ನು ಶೆಡ್ ಒಂದರಲ್ಲಿ ಕೂಡಿ ಹಾಕಿ, ಹಲ್ಲೆ ನಡೆಸಿ ಹತ್ಯೆಗೈದಿದೆ. ಈ ಪ್ರಕರಣದಲ್ಲಿ ನಟ ದರ್ಶನ್ ಸರೆಂಡರ್ ಆದವರಿಗೆ 5 ಲಕ್ಷ ಕೊಡುವುದಾಗಿ ಆಫರ್ ನೀಡಿದ್ರು ಎಂಬುದಾಗಿ ಹೇಳಲಾಗುತ್ತಿದೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಈಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ, ಪೊಲೀಸರಿಗೆ ಸರೆಂಡರ್ ಆದಂತ ಆರೋಪಿಗಳಿಗೆ ತನ್ನ ಗ್ಯಾಂಗ್ ಟೀಂ ಸದಸ್ಯರ ಮೂಲಕ 5 ಲಕ್ಷ ನೀಡುವ ಆಫರ್ ಕೊಟ್ಟಿದ್ದರು ಎಂಬುದಾಗಿ ಹೇಳಲಾಗುತ್ತಿದೆ. ದೀಪಕ್ ಮೂಲಕ ಪ್ರದೋಶ್ ಗೆ ನಟ ದರ್ಶನ್ ಗೆ ಹಲ್ಲೆ ಮಾಡಿ, ಪೊಲೀಸರಿಗೆ ಸರೆಂಡರ್ ಆದಂತವರಿಗೆ ಐದು ಲಕ್ಷ ನೀಡುವುದಾಗಿ ಹಣದ ಆಫರ್ ನೀಡಿದ್ದರು ಎನ್ನಲಾಗುತ್ತಿದೆ. ಈಗಾಗಲೇ ಈ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 13 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ನಿನ್ನೆ…
ಬೆಂಗಳೂರು: ದೇಶದಲ್ಲೇ ಪ್ರಥಮ ಎನ್ನುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಅಪಘಾತದಲ್ಲಿ ಮೃತರಾಗುವಂತ ನೌಕರರಿಗೆ 1 ಕೋಟಿ ವಿಮಾ ಪರಿಹಾರ ಘೋಷಣೆ ಮಾಡಿತ್ತು. ಅದರಂತೆ ಅಪಘಾತದಲ್ಲಿ ಮೃತಪಟ್ಟಂತ ನಾಲ್ವರು ಅವಲಂಭಿತರಿಗೆ ತಲಾ 1 ಕೋಟಿ ವಿಮಾ ಪರಿಹಾರವನ್ನು ವಿತರಿಸಲಾಗಿದೆ. ಇದಲ್ಲದೇ ಕುಟುಂಬ ಕಲ್ಯಾಣ ಯೋಜನೆಯಡಿ ಸೇವೆಯಲ್ಲಿದ್ದು ಮೃತಪಟ್ಟಂತ 23 ಮಂದಿ ನೌಕರರ ಅವಲಂಭಿತರಿಗೆ ತಲಾ 10 ಲಕ್ಷ ಪರಿಹಾರ ನೀಡಿದೆ. ಈ ಕುರಿತಂತೆ ಕೆ ಎಸ್ ಆರ್ ಟಿ ಸಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಈ ವಿಮಾ ಪರಿಹಾರ ವಿತರಣೆ ಬಳಿಕ ಮಾತನಾಡಿದಂತ ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಅವರು, ನಿಗಮದ ವತಿಯಿಂದ ಕಾರ್ಮಿಕರ ಕಲ್ಯಾಣಕ್ಕಾಗಿ ಹಾಗೂ ಪ್ರಯಾಣಿಕರಿಗಾಗಿ ಹಲವಾರು ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸಿದೆ. ಮೃತಪಟ್ಟವರ ಜೀವ ಅಮೂಲ್ಯವಾದದ್ದು, ಅದನ್ನು ಮರಳಿ ತರಲಾಗುವುದಿಲ್ಲ. ಆದರೆ ಅವರ ಕುಟುಂಬದ ಆರ್ಥಿಕ ಸ್ವಾವಲಂಬನೆಗಾಗಿ ನಿಗಮವು ರೂಪಿಸಿರುವ ಯೋಜನೆ ದೂರದೃಷ್ಠಿಯನ್ನು ಹೊಂದಿರುವುದಾಗಿ ತಿಳಿಸಿದರು. ಈ ಮೊತ್ತವನ್ನು ಸದುಪಯೋಗ ಪಡಿಸಿಕೊಂಡು ಮಕ್ಕಳ ವಿದ್ಯಾಭ್ಯಾಸ ಹಾಗೂ…
ಬೆಂಗಳೂರು: ನಟ ದರ್ಶನ್ ಅಂಡ್ ಟೀಂನಿಂದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎಂಬಾತನನ್ನು ಕೊಲೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 13 ಆರೋಪಿಗಳನ್ನು ಪೊಲೀಸರ ವಶಕ್ಕೆ ಕೋರ್ಟ್ ನೀಡಿದೆ. ಈ ಆರೋಪಿಗಳನ್ನು ಮೂರು ಟೀಂ ಮಾಡಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ನಿನ್ನೆ ಕೋರ್ಟ್ ಗೆ ಹಾಜರುಪಡಿಸಿ, ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 13 ಆರೋಪಿಗಳನ್ನು ಪೊಲೀಸರು ತಮ್ಮ ವಶಕ್ಕೆ ಹೆಚ್ಚಿನ ವಿಚಾರಣೆಗಾಗಿ ಪಡೆದಿದ್ದರು. ಈಗಾಗಲೇ ಸ್ಥಳ ಮಹಜರು ಪ್ರಕ್ರಿಯೆಯನ್ನು ನಡೆಸುತ್ತಿರೋ ಅನ್ನಪೂರ್ಣೇಶ್ವರಿ ನಗರ ಠಾಣೆಯ ಪೊಲೀಸರು ಹಲವರನ್ನು ವಿಚಾರಣೆಗೆ ಒಳಪಡಿಸುತ್ತಿದ್ದಾರೆ. ಕೊಲೆ ಪ್ರಕರಣದಲ್ಲಿ ಪ್ಲಾನ್ ಮಾಡಿ ಉತ್ತರ ನೀಡೋ ಸಾಧ್ಯತೆಯ ಬಗ್ಗೆ ಊಹೆ ಮಾಡಿರುವಂತ ಪೊಲೀಸರು, ಕೊಲೆ ಆರೋಪಿಗಳನ್ನು ಮೂರು ಟೀಂ ಮಾಡಿ, ವಿಚಾರಣೆ ನಡೆಸೋದಕ್ಕೆ ತಯಾರಿ ನಡೆಸಿದ್ದಾರೆ. ಪ್ಲಾನ್ ಮಾಡಿ ಉತ್ತರ ಕೊಡೋದಕ್ಕೆ ಅವಕಾಶ ನೀಡದಂತೆ ಮೂರು ಟೀಂಗಳನ್ನು ನಟ ದರ್ಶನ್ ಸೇರಿದಂತೆ 13 ಆರೋಪಿಗಳನ್ನು ಮಾಡಿ ವಿಚಾರಣೆಯನ್ನು ಪೊಲೀಸರು ನಡೆಸುತ್ತಿದ್ದಾರೆ ಎನ್ನಲಾಗುತ್ತಿದೆ.…
ಕುವೈತ್: ಕುವೈತ್ನ ದಕ್ಷಿಣ ಮಂಗಾಫ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಬೆಂಕಿಯಲ್ಲಿ ಕನಿಷ್ಠ 35 ಜನರು ಸಾವನ್ನಪ್ಪಿದ್ದಾರೆ ಎಂದು ಸರ್ಕಾರಿ ಸ್ವಾಮ್ಯದ ಕುವೈತ್ ಸುದ್ದಿ ಸಂಸ್ಥೆ (ಕುನಾ) ತಿಳಿಸಿದೆ. ಬುಧವಾರ ಮುಂಜಾನೆ ಬೆಂಕಿ ಕಾಣಿಸಿಕೊಂಡಿದ್ದು, ಕಟ್ಟಡವು ಬೆಂಕಿಗೆ ಆಹುತಿಯಾಗಿದೆ. ಮುಂಜಾನೆ ಪ್ರಾರಂಭವಾದ ಬೆಂಕಿ ಬೇಗನೆ ಕಟ್ಟಡದಾದ್ಯಂತ ಹರಡಿತು, ಅನೇಕರನ್ನು ಒಳಗೆ ಸಿಲುಕಿಸಿತು. ಬೆಂಕಿಯಲ್ಲಿ ಸಾವನ್ನಪ್ಪಿದವರಲ್ಲಿ ಐವರು ಕೇರಳಿಗರು ಸೇರಿದ್ದಾರೆ ಎಂದು ಒನ್ಮನೋರಮಾ ವರದಿ ಮಾಡಿದೆ. ಬೆಂಕಿಯ ಕಾರಣದ ಬಗ್ಗೆ ತನಿಖೆಯನ್ನು ಪ್ರಾರಂಭಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಂಕಿಯಿಂದಾಗಿ ಸುಮಾರು 43 ಜನರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಭಾರತದ ಐವರು ಸೇರಿದಂತೆ ಈವರೆಗೆ 35 ಮಂದಿ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗೋ ಸಾಧ್ಯತೆ ಇದೆ. https://kannadanewsnow.com/kannada/actress-harshika-ponacha-assault-case-court-rejects-anticipatory-bail-plea-of-accused/ https://kannadanewsnow.com/kannada/encounter-in-jammu-and-kashmirs-kathua-leaves-2-militants-1-crpf-personnel-dead/
ಬೆಂಗಳೂರು: ನಟಿ ಹರ್ಷಿಕಾ ಪೊಣಚ್ಚ ಹಾಗೂ ಭುವನ್ ಅವರ ಕಾರು ತಡೆದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೇ, ಹಲ್ಲೆ ನಡೆಸಿದ್ದರ ಸಂಬಂಧ ನಾಲ್ವರು ಆರೋಪಿಗಳ ವಿರುದ್ಧ ಕೇಸ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದಂತ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ನಟಿ ಹರ್ಷಿಕಾ ಪೊಣಚ್ಚ, ಭುನವ್ ಪೊನ್ನಣ್ಣ ಮೇಲೆ ಹಲ್ಲೆ ಪ್ರಕರಣ ಸಂಬಂಧ ನಾಲ್ವರು ಆರೋಪಿಗಳು ನಿರೀಕ್ಷಣಾ ಜಾಮೀನಿಗಾಗಿ ಹೈಕೋರ್ಟ್ ಗೆ ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಪೀಠವು, ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಅಂದಹಾಗೇ ಬೆಂಗಳೂರಿನ ಫ್ರೆಜರ್ ಟೌನ್ ಪ್ರದೇಶದ ಪುಲಕೇಶಿ ನಗರದ ಮಸೀದಿ ರಸ್ತೆಯಲ್ಲಿ ಕಾರು ತಡೆದಿದ್ದಂತ ಆರೋಪಿಗಳು ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿದ್ದರು. ಈ ಸಂಬಂಧ ಫರ್ವೇಜ್ ಆಲಿ ಫಹೀಮ್, ಶಾಬಾಜ್ ಖಾನ್, ದನೀಶ್ ಆಲಿ ಫರ್ವೇಜ್ ಸೇರಿದಂತೆ ನಾಲ್ವರ ವಿರುದ್ಧ ಕೇಸ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನಿಗಾಗಿ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. https://kannadanewsnow.com/kannada/encounter-in-jammu-and-kashmirs-kathua-leaves-2-militants-1-crpf-personnel-dead/ https://kannadanewsnow.com/kannada/at-least-35-people-including-four-indians-killed-in-kuwait-fire/













