Author: kannadanewsnow09

ಬೆಂಗಳೂರು: ಪರಿಶಿಷ್ಟ ಜಾತಿ/ಮೂಲ ಜಾತಿ ಸಮಗ್ರ ಸಮೀಕ್ಷೆಗಾಗಿ ಗೌರವಾನ್ವಿತ ನೀವೃತ್ತಿ ನ್ಯಾಯಮೂರ್ತಿಗಳಾದ ಡಾ. ಹೆಚ್.ಎನ್ ನಾಗಮೋಹನ್ ದಾಸ್ ರವರ ಅಧ್ಯಕ್ಷತೆಯಲ್ಲಿ ಏಕ ಸದಸ್ಯತ್ವ ಆಯೋಗವನ್ನು ರಚಿಸಲಾಗಿರುತ್ತದೆ. ಮನೆ-ಮನೆಗೆ ಭೇಟಿ ನೀಡಿ ಸಮೀಕ್ಷೆಯನ್ನು ನಡೆಸಲು ಗಣತಿದಾರರು ಪ್ರತಿದಿನವೂ ತಪ್ಪದೇ Mobile App ನಲ್ಲಿ Login ಆಗಿ ಕಡ್ಡಾಯವಾಗಿ ತಮಗೆ ನಿಗಧಿಪಡಿಸಲಾದ ಸಮೀಕ್ಷಾ ಬ್ಲಾಕ್ ನಲ್ಲಿರುವ ಎಲ್ಲಾ ಮನೆಗಳಿಗೂ ತಪ್ಪದೇ ಭೇಟಿ ನೀಡಿ ಮಾಹಿತಿಯನ್ನು ಸಂಗ್ರಹಿಸಲು ನಿರ್ದೇಶನ ನೀಡಲಾಗಿರುತ್ತದೆ. ಈ ಸಂಬಂಧ ಗೌರವಾನ್ವಿತ ನ್ಯಾಯಮೂರ್ತಿ ಡಾ: ಹೆಚ್.ಎನ್. ನಾಗಮೋಹನ್ ದಾಸ್ ಏಕ ಸದಸ್ಯ ವಿಚಾರಣಾ ಆಯೋಗದ ವತಿಯಿಂದ ಕೈಗೊಳ್ಳುತ್ತಿರುವ ಪರಿಶಿಷ್ಟ ಜಾತಿ / ಮೂಲ ಜಾತಿ ಸಮಗ್ರ ಸಮೀಕ್ಷೆ-2025ಕ್ಕೆ ಸಂಬಂಧಿಸಿದಂತೆ, ನಿಗಧಿತ ಸಮಯಕ್ಕೆ ಸಮೀಕ್ಷೆಯ ಬಗ್ಗೆ ಮಾಹಿತಿ ಸಂಗ್ರಹಿಸದೇ ಯಾವುದೇ ರೀತಿ ಪ್ರಗತಿ ಸಾಧಿಸದೇ 5 ನೌಕರರುಗಳು ಕರ್ತವ್ಯ ಲೋಪ ಎಸಗಿರುವುದು ಕಂಡುಬಂದಿರುವ ಹಿನ್ನೆಲೆಯಲ್ಲಿ ಇಲಾಖಾ ವಿಚಾರಣೆ ಕಾಯ್ದಿರಿಸಿ ಅಮಾನತುಗೊಳಿಸಿ ಆದೇಶಿಸಲಾಗಿರುತ್ತದೆ. https://kannadanewsnow.com/kannada/first-in-the-country-starting-chemotherapy-treatment-at-the-district-hospital-level-in-karnataka/ https://kannadanewsnow.com/kannada/the-cet-2025-results-will-be-announced-tomorrow-at-2-pm-check-the-result-like-this/

Read More

ಬೆಂಗಳೂರು: ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ ಪುರಸ್ಕೃತರಾದ ಬಾನುಮುಷ್ತಾಕ್, ದೀಪ್ತಿ ಭಾಸ್ತಿ ಅವರಿಗೆ ಗಾಂಧಿಭವನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಮೇ 28 ಬುಧವಾರ ಅಭಿನಂದನಾ ಕಾರ್ಯಕ್ರಮ ಏರ್ಪಡಿಸಲಾಗಿದೆ. ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿಗೆ ಭಾಜನರಾಗಿರುವ ಬಾನುಮುಷ್ತಾಕ್ ಮತ್ತು ದೀಪಾಬಸ್ತಿ ಅವರು ಇಬ್ಬರೂ ಪತ್ರಕರ್ತರಾಗಿದ್ದವರು ಎನ್ನುವುದು ನಮ್ಮೆಲ್ಲರಿಗೆ ಹೆಮ್ಮೆಯ ಸಂಗತಿ. ಬಾನುಮುಷ್ತಾಕ್ ಅವರು ಹಾಸನದಿಂದ ಲಂಕೇಶ್ ಪತ್ರಿಕೆಗೆ ವರದಿಗಾರ್ತಿಯಾಗಿದ್ದವರು ಮತ್ತು ಹಾಸನ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯೆಯಾಗಿದ್ದರು. ಬಾನುಮುಷ್ತಾಕ್ ಅವರ ಎದೆಯ ಹಣತೆ (ಹಾರ್ಟ್ಸ್ ಲ್ಯಾಂಪ್) ಕಥೆಗಳನ್ನು ಅನುವಾದ ಮಾಡಿದ ಕೊಡಗಿನ ದೀಪಾ ಬಸ್ತಿ ಅವರು ಇಂಡಿಯನ್ ಎಕ್ಸ್ ಪ್ರೆಸ್ ಮತ್ತು ಟೈಂಮ್ಸ್ ಆಫ್ ಇಂಡಿಯಾದಲ್ಲಿ ಪತ್ರಕರ್ತೆಯಾಗಿದ್ದವರು. ಹಾಗಾಗಿ ವೃತ್ತಿ ಬಾಂಧವರಾಗಿದ್ದ ಇಬ್ಬರೂ ಪ್ರಶಸ್ತಿ ಪುರಸ್ಕೃತರನ್ನು ಗೌರವಿಸಲು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ನಿರ್ಧರಿಸಿ ಈ ಕಾರ್ಯಕ್ರಮವನ್ನು ಕರ್ನಾಟಕ ಪತ್ರಕರ್ತೆಯರ ಸಂಘ, ಬಹುರೂಪಿ ಮತ್ತು ಗಾಂಧಿ ಸ್ಮಾರಕ ನಿಧಿ ಸಹಕಾರದಲ್ಲಿ ಆಯೋಜಿಸಲಾಗಿದೆ ಎಂದು ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು ತಿಳಿಸಿದ್ದಾರೆ.…

Read More

ಮಂಡ್ಯ : ವಿಷ ಮಿಶ್ರಿತ ಕಲುಷಿತ ನೀರು ಕುಡಿದು 12 ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿರುವ ದಾರುಣ ಘಟನೆ ಮದ್ದೂರು ತಾಲೂಕಿನ ಸೋಮನಹಳ್ಳಿ ಕೈಗಾರಿಕಾ ಪ್ರದೇಶದ ಬಳಿ ಶುಕ್ರವಾರ ಜರುಗಿದೆ. ಮಂಡ್ಯ ತಾಲೂಕಿನ ಬಸರಾಳು ಹೋಬಳಿಯ ಚನ್ನಾಪುರ ಗ್ರಾಮದ ರಾಜು ಎಂಬುವವರ ಕುರಿಗಳೇ ಸಾವನ್ನಪ್ಪಿರುವುದು ಎನ್ನಲಾಗಿದೆ. ಚನ್ನಾಪುರ ಗ್ರಾಮದಿಂದ ರಾಜು ಎಂಬುವವರು ಕುರಿಗಳಿಗೆ ಆಹಾರ ಅರಸಿಕೊಂಡು (ಮೇಯಿಸಲು) ಅಂದಾಜು 250 ಕ್ಕೂ ಹೆಚ್ಚು ಕುರಿಗಳೊಂದಿಗೆ ಸೋಮನಹಳ್ಳಿ ಕೈಗಾರಿಕಾ ಪ್ರದೇಶದ ಕಡೆ ಬಂದಿದ್ದಾರೆ. ಮಧ್ಯಾಹ್ನದ ನಂತರ ಮೇವು ತಿಂದ ಬಳಿಕ ಅಲ್ಲಿಯೇ ಇದ್ದ ಚರಂಡಿ ನೀರನ್ನು ಕುಡಿದಿವೆ. ಚರಂಡಿಯಲ್ಲಿ ಮಿಶ್ರಣ ಗೊಂಡಿದ್ದ ಕಲುಷಿತ ನೀರು ಕುಡಿದು ಕೆಲ ಹೊತ್ತಿನಲ್ಲೇ 12 ಕ್ಕೂ ಹೆಚ್ಚು ಕುರಿಗಳು ನರಳಾಟದಿಂದ ಸಾವನ್ನಪ್ಪಿವೆ ಎನ್ನಲಾಗಿದೆ. ಸೋಮನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ವಿಷ ಮಿಶ್ರಿತ ನೀರನ್ನು ಕುಡಿದು ಹಲವಾರು ಬಾರಿ ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಕುರಿಗಳು ಮೃತಪಟ್ಟಿವೆ. ಇಂದು ಕೂಡ ವಿಷ ಜಲವನ್ನು ಕುಡಿದು 12 ಕ್ಕೂ ಹೆಚ್ಚು ಕುರಿಗಳು…

Read More

ನವದೆಹಲಿ: ಭಾರತ ಶುಕ್ರವಾರ ಪಾಕಿಸ್ತಾನದಲ್ಲಿ ನೋಂದಾಯಿಸಲಾದ, ಒಡೆತನದ ಮತ್ತು ಗುತ್ತಿಗೆ ಪಡೆದ ಎಲ್ಲಾ ವಿಮಾನಯಾನ ಸಂಸ್ಥೆಗಳಿಗೆ ತನ್ನ ವಾಯುಪ್ರದೇಶದ ಮುಚ್ಚುವಿಕೆಯನ್ನು ಜೂನ್ 23 ರವರೆಗೆ ವಿಸ್ತರಿಸಿದೆ ಎಂದು ನೋಟಾಮ್ ತಿಳಿಸಿದೆ. https://twitter.com/ANI/status/1925905005854289953 ಪಾಕಿಸ್ತಾನದ ವಿಮಾನಯಾನ ಸಂಸ್ಥೆಗಳು ನೋಂದಾಯಿಸಿದ, ನಿರ್ವಹಿಸುವ, ಒಡೆತನದ ಅಥವಾ ಗುತ್ತಿಗೆ ಪಡೆದ ಎಲ್ಲಾ ವಿಮಾನಗಳು ಮತ್ತು ಮಿಲಿಟರಿ ವಿಮಾನಗಳಿಗೂ ಈ ನಿರ್ಬಂಧ ಅನ್ವಯಿಸುತ್ತದೆ. ಏಪ್ರಿಲ್ 30 ರಂದು ಪಾಕಿಸ್ತಾನ ನಿರ್ವಹಿಸುವ ವಿಮಾನಗಳಿಗೆ ಭಾರತ ತನ್ನ ವಾಯುಪ್ರದೇಶವನ್ನು ಮುಚ್ಚಿತ್ತು. ಪಾಕಿಸ್ತಾನವು ಶುಕ್ರವಾರ ಎಲ್ಲಾ ಭಾರತೀಯ ವಿಮಾನಯಾನ ಸಂಸ್ಥೆಗಳಿಗೆ ತನ್ನ ವಾಯುಪ್ರದೇಶದ ಮುಚ್ಚುವಿಕೆಯನ್ನು ಜೂನ್ 24 ರವರೆಗೆ ವಿಸ್ತರಿಸಿದೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ನವದೆಹಲಿ ಘೋಷಿಸಿದ ದಂಡನಾತ್ಮಕ ಕ್ರಮಗಳಿಗೆ ಪ್ರತಿಕ್ರಿಯೆಯಾಗಿ ಇಸ್ಲಾಮಾಬಾದ್ ಏಪ್ರಿಲ್ 24 ರಂದು ಭಾರತೀಯ ವಿಮಾನಯಾನ ಸಂಸ್ಥೆಗಳು ತನ್ನ ವಾಯುಪ್ರದೇಶವನ್ನು ಬಳಸದಂತೆ ನಿರ್ಬಂಧಿಸಿತ್ತು. ಅಂತರರಾಷ್ಟ್ರೀಯ ನಾಗರಿಕ ವಿಮಾನಯಾನ ಸಂಸ್ಥೆಯ (ICAO) ನಿಯಮಗಳು ಒಮ್ಮೆಗೆ ಒಂದು ತಿಂಗಳ ಕಾಲ ಅಂತಹ ಮುಚ್ಚುವಿಕೆಯನ್ನು ನಿರ್ಬಂಧಿಸುತ್ತವೆ. ಮೇ 7 ರಂದು ಪಾಕಿಸ್ತಾನ…

Read More

ಬೆಂಗಳೂರು: 2024 ರ ವಿಧಾನಸಭಾ ಚುನಾವಣೆಗಳ ನಂತರ ಬಹು ರಾಜ್ಯ ಸರ್ಕಾರಗಳು ತಮ್ಮ ಮೊದಲ ವರ್ಷವನ್ನು ಪೂರ್ಣಗೊಳಿಸುತ್ತಿರುವುದರಿಂದ, ಒನ್ಇಂಡಿಯಾ, ಪೊಲಿಟಿಕಲ್ ವೈಬ್ ಸಹಯೋಗದೊಂದಿಗೆ, ರಾಷ್ಟ್ರದ ಜನರ ಮನಸ್ಥಿತಿಯನ್ನು ಅಳೆಯುವ ಗುರಿಯನ್ನು ಹೊಂದಿರುವ ವ್ಯಾಪಕ, ಬಹುಭಾಷಾ ಸಮೀಕ್ಷೆಯನ್ನು ಪ್ರಾರಂಭಿಸುತ್ತಿದೆ. ಇದು ಕೇವಲ ನಿಯಮಿತ ಕಾರ್ಯಕ್ಷಮತೆ ಪರಿಶೀಲನೆಯಲ್ಲ – ಅಧಿಕಾರಕ್ಕೆ ಬಂದ ಒಂದು ವರ್ಷದ ನಂತರ ಜನರು ತಮ್ಮ ನಾಯಕರು, ನೀತಿಗಳು ಮತ್ತು ಭರವಸೆಗಳ ಬಗ್ಗೆ ಏನು ಯೋಚಿಸುತ್ತಾರೆ ಎಂಬುದನ್ನು ಅರ್ಥೈಸಿಕೊಳ್ಳಲು ಇದು ಸಕಾಲಿಕ ಮತ್ತು ರಚನಾತ್ಮಕ ಪ್ರಯತ್ನವಾಗಿದೆ. ಯಾವುದೇ ಹೊಸ ಸರ್ಕಾರದ ಮೊದಲ ವಾರ್ಷಿಕೋತ್ಸವವು ನೈಸರ್ಗಿಕ ಚೆಕ್‌ಪಾಯಿಂಟ್ ಅನ್ನು ನೀಡುತ್ತದೆ ಮತ್ತು ಒನ್‌ಇಂಡಿಯಾದ ಉಪಕ್ರಮವು ರಾಜ್ಯಗಳಾದ್ಯಂತ ಸಾರ್ವಜನಿಕ ಅಭಿಪ್ರಾಯದ ಬಗ್ಗೆ ಆಳವಾದ, ಡೇಟಾ-ಬೆಂಬಲಿತ ಒಳನೋಟಗಳನ್ನು ನೀಡಲು ಬಳಸಿಕೊಳ್ಳುತ್ತದೆ. ಈ ಸಮೀಕ್ಷೆಯನ್ನು ಪ್ರತ್ಯೇಕಿಸುವುದು ಅದರ ವಿಸ್ತಾರವಾದ ವಿನ್ಯಾಸ. ಒನ್‌ಇಂಡಿಯಾದ ಸಂಪಾದಕೀಯ ನಾಯಕತ್ವದಿಂದ ರಚಿಸಲ್ಪಟ್ಟ ಮತ್ತು ಪೊಲಿಟಿಕಲ್ ವೈಬ್‌ನ ಅನುಭವಿ ವಿಶ್ಲೇಷಣಾ ತಂಡದಿಂದ ಕಾರ್ಯಗತಗೊಳಿಸಲ್ಪಟ್ಟ ಈ ಸಮೀಕ್ಷೆಯು ನಗರ ಮತ್ತು ಗ್ರಾಮೀಣ ಭೌಗೋಳಿಕತೆಯನ್ನು ವ್ಯಾಪಿಸಲಿದ್ದು, ಜಾತಿ, ವರ್ಗ,…

Read More

ಬೆಂಗಳೂರು : ಸರ್ಕಾರದ ಆದೇಶ ದಿನಾಂಕ 2024 ನೇ ನವೆಂಬರ್ 12 ರಲ್ಲಿ ರಾಜ್ಯದಲ್ಲಿ ಶಿಕ್ಷಣ ಮತ್ತು ಸರ್ಕಾರಿ ಸೇವೆಗಳಲ್ಲಿ ಪರಿಶಿಷ್ಟ ಜಾತಿಯ ವಿವಿಧ ಉಪ ಜಾತಿಗಳಿಗೆ ಸೇರಿದವರ ಪ್ರಾತಿನಿಧ್ಯತೆ ಕುರಿತು Empirical Data ಪಡೆದು ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಬಗ್ಗೆ ಸೂಕ್ತ ಶಿಫಾರಸ್ಸಿನೊಂದಿಗೆ ವರದಿ ಸಲ್ಲಿಸಲು ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ಡಾ.ಹೆಚ್.ಎನ್. ನಾಗಮೋಹನ್ ದಾಸ್ ಇವರ ಅಧ್ಯಕ್ಷತೆಯಲ್ಲಿ ಏಕ ಸದಸ್ಯ ಆಯೋಗವನ್ನು ರಚಿಸಲಾಗಿರುತ್ತದೆ. ಪರಿಶಿಷ್ಟ ಜಾತಿಯಲ್ಲಿನ 101 ಜಾತಿಗಳ ವೈಜ್ಞಾನಿಕ ವರ್ಗೀಕರಣ ಮಾಡಲು ದತ್ತಾಂಶವನ್ನು (Emperical Data) ಸಂಗ್ರಹಿಸಲು ಹೊಸದಾದ ಸಮೀಕ್ಷೆಯನ್ನು ನಡೆಸಲು ದಿನಾಂಕ: 27-03-2025 ರ ಆಯೋಗದ ಮಧ್ಯಂತರ ವರದಿಯಲ್ಲಿ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾದ ಹಿನ್ನೆಲೆಯಲ್ಲಿ ಸಮೀಕ್ಷೆಯನ್ನು ದಿನಾಂಕ: 05-05-2025 ರಿಂದ ಗಣತಿದಾರರು ಮನೆ-ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುವುದರ ಮೂಲಕ ರಾಜ್ಯಾದ್ಯಂತ ಈಗಾಗಲೇ ಪ್ರಾರಂಭಿಸಲಾಗಿರುತ್ತದೆ. ಬಿಬಿಎಂಪಿ ವ್ಯಾಪ್ತಿಯ ವಲಯಗಳಲ್ಲಿ ಪರಿಶಿಷ್ಟ ಜಾತಿ ಜನಾಂಗದ ಸಮೀಕ್ಷೆ ಕಾರ್ಯವು ಇನ್ನೂ ಪ್ರಗತಿಯಾಗಬೇಕಾಗಿರುವುದರಿಂದ, ಮಳೆ/ಹವಾಮಾನ ವೈಪರೀತ್ಯ ಕಾರಣಗಳಿಂದಾಗಿ, ಅನೇಕ…

Read More

ಬೆಂಗಳೂರು: ಕಾಂಗ್ರೆಸ್ ‌ಪಕ್ಷದ ನಾಯಕರನ್ನು ಕೇವಲ ಟೀಕೆ ಮಾಡುವುದಕ್ಕೆ ವಿಧಾನ ಪರಿಷತ್ತಿನ ಸದಸ್ಯ ಸ್ಥಾನವನ್ನು ಪಡೆದ ದೊಡ್ಡ ಗಿರಾಕಿ.‌ ಈ ಪದ ಬಳಸಬಾರದು ಆದರೆ ಕಳೆದ ಎರಡು ದಿನಗಳಿಂದ ನಡೆದ ರಾಜಕಯ ಬೆಳವಣಿಗೆ ಕಾರಣಕ್ಕೆ ಹೇಳಬೇಕಾಗಿದೆ ಅಂತ ಮಾಜಿ ಪರಿಷತ್ ಸದಸ್ಯ, ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ವಾಗ್ಧಾಳಿ ನಡೆಸಿದ್ದಾರೆ. ಇಂದು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು,  ಇವರಿಗೆ ನಾಯಿ ಎನ್ನುವ ಪದದ ಮೇಲೆ ಸಾಕಷ್ಟು ಒಲವಿದೆ ಅನ್ನಿಸುತ್ತದೆ. ಅವರು ಆರ್ ಎಸ್ ಎಸ್ ನ ಬುಲ್‌ಡಾಗ್ ಇರಬಹುದು. ಸಂಘ ಪರಿವಾರದವರು ಅವರನ್ನು ಬುಲ್ ಡಾಗ್ ರೀತಿ ಬೆಳೆಸಿದ್ದಾರಾ ಎಂದು ಹೇಳಬೇಕು. ಈ ಪದವನ್ನು ಇಟ್ಟುಕೊಂಡು ಅವರನ್ನು ನಾನು ಟೀಕೆ ಮಾಡಲು ಹೋಗುವುದಿಲ್ಲ ಎಂದರು. ಯಾವುದೇ ಪಕ್ಷವಾದರೂ ಎಲ್ಲೆಯನ್ನು ಮೀರಿ ಭಾಷೆಯನ್ನು ಬಳಸಿ ಟೀಕೆ ಮಾಡುವ ಸಂಪ್ರದಾಯ ನಮ್ಮ‌ ರಾಜ್ಯದಲ್ಲಿ ಇಲ್ಲ. ಆದರೆ ಕಳೆದ ಐದಾರು ವರ್ಷಗಳಿಂದ ಭಾರತೀಯ ಜನತಾ ಪಕ್ಷದಲ್ಲಿ ನಿರುದ್ಯೋಗಿಗಳ ಸಂಖ್ಯೆ ಹೆಚ್ಚಳವಾಗಿದೆ. ಟೀಕೆ…

Read More

ಮಂಡ್ಯ : ಮದ್ದೂರು ಪುರಸಭೆಯನ್ನು ನಗರಸಭೆಯನ್ನಾಗಿ ಮಾಡಬೇಕೆಂಬುದು ನನ್ನ ಮಹತ್ವಾಕಾಂಕ್ಷಿ ಯೋಜನೆಯಾಗಿತ್ತು. ಆದರೆ, ರಾಜ್ಯ ಸರ್ಕಾರ ಇಷ್ಟು ಬೇಗ ನಮ್ಮ ಬೇಡಿಕೆಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಆಭಾರಿಯಾಗಿದ್ದೇನೆ ಎಂದು ಶಾಸಕ ಕೆ.ಎಂ.ಉದಯ್ ಹೇಳಿದರು. ಮದ್ದೂರು ಪಟ್ಟಣದ ಶ್ರೀ ಗುರುಶಾಂತಪ್ಪ ಸರ್ಕಾರಿ ಆಸ್ಪತ್ರೆ ಹಾಗೂ ವಸತಿ ಗೃಹಗಳ ಮೂಲ ಸೌಕರ್ಯಗಳ ಕಾಮಗಾರಿಗೆ ಅಂದಾಜು 1 ಕೋಟಿ 30 ಲಕ್ಷ ರೂ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗೆ ಶುಕ್ರವಾರ ಚಾಲನೆ ನೀಡಿ ಮಾತನಾಡಿದರು. ಮದ್ದೂರು ಇತಿಹಾಸದಲ್ಲಿ ಸುವರ್ಣ ಅಕ್ಷರಗಳಲ್ಲಿ ಬರೆದಿಡಬಹುದಾದ ದಿನ ಈ ದಿನವಾಗಿದೆ. ಹಲವು ದಶಕಗಳಿಂದ ಸಣ್ಣ ಹಳ್ಳಿಯಂತ್ತಿರುವ ಮದ್ದೂರು ಪಟ್ಟಣ ಸಮಗ್ರ ಅಭಿವೃದ್ಧಿಯಿಂದ ಸಾಕಷ್ಟು ಹಿಂದುಳಿದಿದೆ. ನಾನು ಶಾಸಕನಾಗಿ ಆಯ್ಕೆಯಾದ ದಿನದಿಂದಲೇ ಮದ್ದೂರು ಪುರಸಭೆಯನ್ನು ನಗರಸಭೆಯನ್ನಾಗಿ ಮೇಲ್ದರ್ಜೆಗೆ ಏರಿಸಬೇಕೆಂಬುದು ನನ್ನ ಬಹು ದಿನಗಳ ಕನಸಾಗಿತ್ತು. ಈ ಸಂಬಂಧ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿತ್ತು. ಹೀಗಾಗಿ ಸರ್ಕಾರದ ಮಟ್ಟದಲ್ಲಿ ಸಾಕಷ್ಟು ಹೋರಾಟ, ಒತ್ತಡ…

Read More

ಬೆಂಗಳೂರು: ಸಾಮಾನ್ಯ ದಿನಗಳಲ್ಲಿ ಬೆಳಗ್ಗೆ 7 ಗಂಟೆಯಿಂದ ನಮ್ಮ ಮೆಟ್ರೋ ರೈಲು ಸಂಚಾರ ಆರಂಭಗೊಳ್ಳುತ್ತದೆ. ಆದರೇ ಮೇ.25ರಂದು ಬೆಂಗಳೂರಲ್ಲಿ ಕೇಂದ್ರ ಲೋಕಸೇವಾ ಆಯೋಗದ ಪ್ರಿಲಿಮಿನರಿ ಪರೀಕ್ಷೆ ನಡೆಯಲಿದೆ. ಹೀಗಾಗಿ ಮೇ.25ರಂದು ಬೆಳಗ್ಗೆ 6 ಗಂಟೆಯಿಂದಲೇ ನಮ್ಮ ಮೆಟ್ರೋ ರೈಲು ಸಂಚಾರ ಆರಂಭಗೊಳ್ಳಲಿದೆ. ಈ ಬಗ್ಗೆ ಬಿಎಂಆರ್ ಸಿಎಲ್ ಮಾಹಿತಿ ನೀಡಿದ್ದು, ದಿನಾಂಕ 25.05.2025 ಭಾನುವಾರ ದಂದು ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆ (UPSC Preliminary Exams, 2025) ನಡೆಯಲಿರುವುದರಿಂದ, ಮೆಟ್ರೋ ರೈಲು ಸೇವೆಗಳು ವೈಟ್‌ಫೀಲ್ಡ್ (ಕಾಡುಗೋಡಿ), ಚಲ್ಲಘಟ್ಟ, ಮಾದಾವರ, ಮತ್ತು ರೇಷ್ಮೆ ಸಂಸ್ಥೆ, ಈ ನಾಲ್ಕು ಟರ್ಮಿನಲ್ ನಿಲ್ದಾಣಗಳಿಂದ ಬೆಳಿಗ್ಗೆ 07.00 ಗಂಟೆಗೆ ಬದಲಾಗಿ 06.00 ಗಂಟೆಗೆ ಪ್ರಾರಂಭವಾಗಲಿದೆ ಎಂದಿದೆ. https://kannadanewsnow.com/kannada/important-information-for-students-regarding-the-bmtc-concession-bus-pass/ https://kannadanewsnow.com/kannada/employment-news-notification-from-the-state-government-for-the-recruitment-of-51000-guest-teachers-here-is-the-complete-information/

Read More

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸಲಾದಂತ ಕೆಇಟಿ-2025ರ ಪರೀಕ್ಷೆಯ ಫಲಿತಾಂಶ ( KCET-2025 Exam Results) ನಾಳೆ ಪ್ರಕಟವಾಗಲಿದೆ. ಈ ಬಗ್ಗೆ ಉನ್ನತ ಶಿಕ್ಷಣ ಸಚಿವ ಎಂ.ಸಿ ಸುಧಾಕರ್ ಅವರು ಮಾಹಿತಿ ಬಿಡುಗಡೆ ಮಾಡಿದ್ದು, ನಾಳೆ ಬೆಳಗ್ಗೆ 11.30ಕ್ಕೆ ಸುದ್ದಿಗೋಷ್ಠಿಯಲ್ಲಿ ಪ್ರಕಟಿಸಲಿದ್ದಾರೆ ಎಂಬುದಾಗಿ ತಿಳಿಸಿದ್ದಾರೆ. ನಾಳೆ ಮಧ್ಯಾಹ್ನ 2 ಗಂಟೆಗೆ ಸಿಇಟಿ-2025ರ ಪರೀಕ್ಷೆಯ ( CET-2025 ) ಫಲಿತಾಂಶವನ್ನು ವಿದ್ಯಾರ್ಥಿಗಳು ವೀಕ್ಷಿಸಬಹುದಾಗಿದೆ. ಫಲಿತಾಂಶ ವೀಕ್ಷಿಸಲು ವಿದ್ಯಾರ್ಥಿಗಳು cetonline.karnataka.gov.in ಅಥವಾ kea.kar.nic.in ಜಾಲತಾಣಕ್ಕೆ ಭೇಟಿ ನೀಡುವಂತೆ ಸೂಚಿಸಿದೆ. https://twitter.com/KEA_karnataka/status/1925880959242588459 ಸಿಇಟಿ ಪರೀಕ್ಷೆ ( CET Exam 2025) ಫಲಿತಾಂಶ ಈ ರೀತಿ ಚೆಕ್ ಮಾಡಿ -ವಿದ್ಯಾರ್ಥಿಗಳು ಅಧಿಕೃತ ಜಾಲತಾಣ cetonline.karnataka.gov.in ಜಾಲತಾಣಕ್ಕೆ ಭೇಟಿ ನೀಡಬೇಕು. -ಕೆಸಿಇಟಿ ಫಲಿತಾಂಶ 2024 ಎಂಬಲ್ಲಿ ಕ್ಲಿಕ್ ಮಾಡಬೇಕು. -ನಿಮ್ಮ ನೋಂದಣಿ ಸಂಖ್ಯೆ ಸೇರಿದಂತೆ ಇತರೆ ಮಾಹಿತಿ ನಮೂದಿಸಿ. -ಈ ಬಳಿಕ ಸಬ್ ಮಿಟ್ ಬಟಲ್ ಕ್ಲಿಕ್ ಮಾಡಿದರೇ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ. https://kannadanewsnow.com/kannada/trump-threatens-25-tariff-on-iphones-mad-outside-us/ https://kannadanewsnow.com/kannada/employment-news-notification-from-the-state-government-for-the-recruitment-of-51000-guest-teachers-here-is-the-complete-information/

Read More