Author: kannadanewsnow09

ಶಿವಮೊಗ್ಗ : ಮೇ.6ರವರೆಗೆ ಪದವೀಧರರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಅರ್ಹ ಮತದಾರರು ತಮ್ಮ ಹೆಸರು ಸೇರ್ಪಡೆ ಮಾಡೋದಕ್ಕೆ ಅವಕಾಶ ನೀಡಲಾಗಿದೆ. ಭಾರತದ ಚುನಾವಣಾ ಆಯೋಗದ ನಿರ್ದೇಶನದಂತೆ ನೈರುತ್ಯ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಂಬಂದಿಸಿದಂತೆ ದಿನಾಂಕ 06.05.2024 ರ ಸಂಜೆ 5-30 ಗಂಟೆಯವರೆಗೆ ನೈರುತ್ಯ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತದಾರರ ಪಟ್ಟಿಗೆ ಹೆಸರುಗಳನ್ನು ಸೇರ್ಪಡೆ ಮಾಡಲು ಅಗತ್ಯ ದಾಖಲೆಗಳೊಂದಿಗೆ ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ದ್ವಿಪ್ರತಿಯಲ್ಲಿ ಸಂಬಂಧಪಟ್ಟ ಸಹಾಯಕ ಮತದಾರರ ನೊಂದಣಾಧಿಕಾರಿಗಳಿಗೆ ಸಲ್ಲಿಸಬಹುದಾಗಿರುತ್ತದೆ ಎಂದು ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ಚುನಾವಣಾಧಿಕಾರಿ ಸಿದ್ದಲಿಂಗರೆಡ್ಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/hd-kumaraswamy-demands-immediate-sit-notice-to-rahul-gandhi/ https://kannadanewsnow.com/kannada/video-rahul-gandhi-will-contest-elections-in-pakistan-and-win-assam-cm-himanta-biswas-statement-goes-viral/

Read More

ರಾಯಚೂರು: ಸಂಸದ ಪ್ರಜ್ವಲ್ ರೇವಣ್ಣ 400 ಮಹಿಳೆಯರ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂದು ಬಹಿರಂಗ ಹೇಳಿಕೆ ನೀಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ತಕ್ಷಣವೇ ವಿಶೇಷ ತನಿಖಾ ದಳ (SIT) ನೊಟೀಸ್ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರು ಆಗ್ರಹಪಡಿಸಿದರು. ಇಷ್ಟು ಕರಾರುವಕ್ಕಾಗಿ, ಅಂಕಿ ಅಂಶಗಳ ಸಮೇತ ರಾಹುಲ್ ಗಾಂಧಿ ಮಾಹಿತಿ ನೀಡಿದ್ದಾರೆ. ಈ ಸರಕಾರಕ್ಕೆ ಗಂಡಸ್ತನ, ತಾಕತ್ತು ಎನ್ನುವುದು ಇದ್ದರೆ ಈ ಕೂಡಲೇ ಆತನಿಗೆ ತನಿಖಾ ದಳದಿಂದ ಕೂಡಲೇ ನೋಟಿಸ್ ಕೊಡಿಸಬೇಕು ಎಂದು ಅವರು ಒತ್ತಾಯಿಸಿದರು. ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಎನ್‌ ಡಿಎ ಅಭ್ಯರ್ಥಿ ಪರವಾಗಿ ಚುನಾವಣಾ ಪ್ರಚಾರ ನಡೆಸುವ ಮುನ್ನ ಮಾಧ್ಯಮಗಳ ಜತೆ ಮಾತನಾಡಿದ ಅವರು; ರಾಹುಲ್ ಗಾಂಧಿ ವಿರುದ್ಧ ತೀವ್ರ ಅಕ್ರೋಶ ವ್ಯಕ್ತಪಡಿಸಿದರು. “ದೇಶದ ಮಾಜಿ ಪ್ರಧಾನಮಂತ್ರಿಯ ಮಗನಾ ಇವನು? ಹಾಗಾದರೆ ಇವನ ಬಳಿ ಎಲ್ಲಾ ಮಾಹಿತಿಯೂ ಇದೆ ಎಂದಾಯಿತು. ಈತನಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ಕೊಟ್ಟಿರಬೇಕು ಅಥವಾ ಉಪ ಮುಖ್ಯಮಂತ್ರಿ…

Read More

ರಾಯಚೂರು: ಹಿಂದೆ ನೀನು ಏನೆಲ್ಲಾ ಮಾಡಿದ್ದೆ ಎನ್ನುವುದು ಲೋಕಕ್ಕೆ ಗೊತ್ತು. ಟೆಂಟ್ʼನಲ್ಲಿ ನೀಲಿಚಿತ್ರ ತೋರಿಸಿಕೊಂಡು ಹಣ ಮಾಡಿದವನು ಆ ವ್ಯಕ್ತಿ. ಆತನಿಗೆ ಅಂಥ ಅನುಭವ ಮೊದಲಿನಿಂದಲೂ ಇದೆ. ಹಿಂದೊಮ್ಮೆ ಒಬ್ಬ ಶಾಸಕನ ಜೀವನದಲ್ಲಿ ಏನೆಲ್ಲಾ ಆಟ ಆಡಿದ, ಹೆಣ್ಮಗಳನ್ನು ಹೇಗೆಲ್ಲಾ ಬಳಸಿಕೊಂಡ ಎನ್ನುವುದು ಗೊತ್ತಿದೆ. ಪೆನ್ ಡ್ರೈವ್ ಅನ್ನು ಕುಮಾರಸ್ವಾಮಿಯೇ ಬಿಟ್ಟಿರಬೇಕು ಎಂದು ಹೇಳಿಕೊಂಡು ಓಡಾಡುತ್ತಿದ್ದಾನೆ. ಅಂಥ ಕೆಟ್ಟ ಅನುಭವ ಇರುವವನೇ ಪೇನ್ ಡ್ರೈವ್ ಬೀದಿಗೆ ಬಿಟ್ಟಿದ್ದಾರೆ ಎಂದು ಡಿಕೆಶಿ ವಿರುದ್ಧ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅಕ್ರೋಶ ವ್ಯಕ್ತಪಡಿಸಿದರು. ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಎನ್‌ ಡಿಎ ಅಭ್ಯರ್ಥಿ ಪರವಾಗಿ ಚುನಾವಣಾ ಪ್ರಚಾರ ನಡೆಸುವ ಮುನ್ನ ಮಾಧ್ಯಮಗಳ ಜತೆ ಮಾತನಾಡಿದ ಅವರು ಈ ಸರಕಾರಕ್ಕೆ ಮಾನ ಮರ್ಯಾದೆ ಎನ್ನುವುದು ಇದ್ದರೆ ಪ್ರಕರಣದ ಬಗ್ಗೆಯೂ ನಿಸ್ಪಕ್ಷವಾಗಿ ತನಿಖೆ ನಡೆಸಲಿ. ಅದೇ ರೀತಿ ಆ ದೃಶ್ಯಗಳಲ್ಲಿರುವ ಹೆಣ್ಮಕ್ಕಳ ಚಿತ್ರಗಳನ್ನು ಬೀದಿ ಬೀದಿಯಲ್ಲಿ ಬಿಕರಿ ಮಾಡಿದ ನೀಚರಿಗೂ ಶಿಕ್ಷೆ ಕೊಡಿಸಲಿ. ನಿಮಗೆ, ನಿಮ್ಮ ಪಕ್ಷಕ್ಕೆ ಹೆಣ್ಮಕ್ಕಳ ಬಗ್ಗೆ…

Read More

ಬೆಂಗಳೂರು: ಕುಟುಂಬವಾದದ ಕಾಂಗ್ರೆಸ್ ಬೇಕೇ? ಪರಂಪರೆ ಕಾಪಾಡುವ ಬಿಜೆಪಿ ಬೇಕೇ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪ್ರಶ್ನಿಸಿದರು. ಹುಕ್ಕೇರಿಯಲ್ಲಿ ಇಂದು ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಭಾಷಣ ಮಾಡಿದ ಅವರು, ಮೋದಿಜೀಗೆ 10 ವರ್ಷ ಬೆಂಬಲ ನೀಡಿದ್ದೀರಿ ಎಂದರಲ್ಲದೆ, ಅಯೋಧ್ಯೆಯಲ್ಲಿ ರಾಮಮಂದಿರ ಮಾಡಬೇಕಿತ್ತೇ ಎಂದು ಪ್ರಶ್ನಿಸಿ ‘ಹೌದು’ ಎಂದು ಜನರಿಂದ ಉತ್ತರ ಪಡೆದರು. ಕಾಂಗ್ರೆಸ್ ಪಕ್ಷವು ರಾಮಮಂದಿರ ನಿರ್ಮಾಣ ವಿಚಾರವನ್ನು ವಿಳಂಬ ಮಾಡಿತು. ಮೋದಿಜೀ ಅವರು ಕೇಸು ಗೆದ್ದು, ಭೂಮಿಪೂಜೆ ಮಾಡಿ ಪ್ರಾಣ ಪ್ರತಿಷ್ಠಾಪನೆಯನ್ನೂ ಮಾಡಿದರು. ರಾಹುಲ್ ಬಾಬಾ, ಸೋನಿಯಾ ಗಾಂಧಿ, ಖರ್ಗೆಯವರಿಗೆ ಆಮಂತ್ರಣಪತ್ರ ಇದ್ದರೂ ಅವರು ಗೈರುಹಾಜರಾದರು. ಮತಬ್ಯಾಂಕ್‍ಗಾಗಿ ಈ ನಿರ್ಧಾರ ಮಾಡಿದ್ದಾರೆ. ಇವರಿಗೆ ಮತ ಕೊಡಲು ಸಾಧ್ಯವೇ ಎಂದು ಕೇಳಿದರು. ಕಾಶಿ ವಿಶ್ವನಾಥ ಮಂದಿರವನ್ನು ಔರಂಗಬೇಬನು ಹಾಳು ಮಾಡಿದ್ದ. ಕಾಶಿ ಕಾರಿಡಾರ್, ಸೋಮನಾಥ ಮಂದಿರ ಮೊದಲಾದ ಕೆಲಸಗಳನ್ನು ಮೋದಿಜೀ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷವು ತುಷ್ಟೀಕರಣಕ್ಕಾಗಿ ಈ ಎಲ್ಲ ವಿಚಾರಗಳನ್ನು ಕಡೆಗಣಿಸಿತ್ತು ಎಂದು ಆಕ್ಷೇಪಿಸಿದರು. ಕಾಶ್ಮೀರ ನಮ್ಮದಲ್ಲವೇ…

Read More

ಬೆಂಗಳೂರು: ಮೇ.7ರಂದು ರಾಜ್ಯದಲ್ಲಿ ಲೋಕಸಭಾ ಚುನಾವಣೆಗೆ 2ನೇ ಹಂತದಲ್ಲಿ 14 ಜಿಲ್ಲೆಗಳಲ್ಲಿ ಮತದಾನ ನಡೆಯಲಿದೆ. ಈ ಮತದಾನ ನಡೆಯುವ ಕ್ಷೇತ್ರ ವ್ಯಾಪ್ತಿಯಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಿ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ಈ ಕುರಿತಂತೆ ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಜಿಲ್ಲಾಧಿಕಾರಿಗಳು ಆದೇಶಿಸಿದ್ದು ರಾಜ್ಯದಲ್ಲಿ ದಿನಾಂಕ 26-04-2024ರಂದು ಮೊದಲ ಹಂತದ ಮತದಾನದ ಬಳಿಕ, ದಿನಾಂಕ 07-05-2024ರಂದು ಎರಡನೇ ಹಂತದಲ್ಲಿ 14 ಜಿಲ್ಲೆಗಳ ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ ಎಂದಿದ್ದಾರೆ. ಲೋಕಸಭಾ ಚುನಾವಣೆಯನ್ನು ಮುಕ್ತ ಹಾಗೂ ನಿಷ್ಪಕ್ಷಪಾತವಾಗಿ ನಡೆಸಲು ಹಾಗೂ ಶಾಂತಿ ಸುವ್ಯವಸ್ಥೆಯನ್ನು ಕಾಪಾಡಲು ಮತದಾನ ಅಂತ್ಯಗೊಳ್ಳುವ 48 ಗಂಟೆಗಳ ಪೂರ್ವದಲ್ಲಿ ಮತ್ತು ಮತ ಏಣಿಕೆ ದಿನದಂದು ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ, ಒಣದಿನಗಳೆಂದು ಘೋಷಿಸಲು ನಿರ್ದೇಶಿಸಲಾಗಿದೆ. ಹೀಗಾಗಿ ದಿನಾಂಕ 05-05-2024ರ ಸಂಜೆ 5 ಗಂಟೆಯಿಂದ ದಿನಾಂಕ 07-05-2024ರ ಮದ್ಯರಾತ್ರಿ 12 ಗಂಟೆಯವರೆಗೆ ಮತ್ತು ಮತ ಏಣಿಕೆ ಪ್ರಯುಕ್ತ ದಿನಾಂಕ 04-06-2024ರಂದು ಬೆಳಿಗ್ಗೆ 6 ಗಂಟೆಯಿಂದ ಮದ್ಯರಾತ್ರಿ 12 ಗಂಟೆಯವರೆಗೆ ಮದ್ಯ ಮಾರಾಟವನ್ನು…

Read More

ಉತ್ತರ ಕನ್ನಡ: ಜಿಲ್ಲೆಯಲ್ಲಿ ಪ್ರವಾಸಕ್ಕೆ ತೆರಳಿದ್ದಂತ ಖಾಸಗಿ ಬಸ್ ಒಂದು ಪಲ್ಟಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ, ಹಲವರು ಗಾಯಗೊಂಡಿರುವಂತ ಘಟನೆ ನಡೆದಿದೆ. ಗೌರಿಬಿನೂರಿನಿಂದ ಧರ್ಮಸ್ಥಳಕ್ಕೆ 53 ಜನರು ಖಾಸಗಿ ಬಸ್ ನಲ್ಲಿ ಪ್ರವಾಸಕ್ಕೆ ತೆರಳಿದ್ದರು. ಧರ್ಮಸ್ಥಳದ ಜೊತೆಗೆ ವಿವಿಧ ಪ್ರವಾಸಿ ತಾಣಗಳಿಗೂ ಭೇಟಿ ನೀಡಿದ್ದರು. ಇಂದು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಸುಳೆಮುರ್ಕಿಯಲ್ಲಿ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಇದರಿಂದಾಗಿ ತುಮಕೂರಿನ ಲೋಕೇಶ್ ಹಾಗೂ ಚಿಕ್ಕಬಳ್ಳಾಪುರದ ರುದ್ರೇಶ್ ಎಂಬುವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೂ ಅಪಘಾತದಲ್ಲಿ ಗೌರಿಬಿದನೂರಿನ ರಜನಿ ಎಂಬುವರ ಕೈ ಕಟ್ ಆಗಿರೋದಾಗಿ ತಿಳಿದು ಬಂದಿದೆ. ಈ ಅಪಘಾತದಲ್ಲಿ ಹಲವರು ಗಾಯಗೊಂಡಿದ್ದು, ಅವರನ್ನು ಶಿವಮೊಗ್ಗದ ಮೆಗ್ಗಾನ್ ಹಾಗೂ ಹೊನ್ನಾವರ ತಾಲೂಕು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದೆ. ಈ ಸಂಬಂಧ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/no-circular-has-been-issued-on-covishield-health-ministry/ https://kannadanewsnow.com/kannada/those-who-have-rahul-lalus-name-cannot-be-stopped-from-contesting-elections-supreme-court/

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಮುಂಗಾರು ಹಂಗಾಮಿನಲ್ಲಿ ಬರ ಪರಿಸ್ಥಿತಿಯಿಂದ ಉಂಟಾದಂತ ಬೆಳೆಹಾನಿಗೆ ಅರ್ಹ ರೈತರಿಗೆ ರೂ.2000ವರೆಗೆ ಬಾಕಿ ಬೆಳೆಹಾನಿ ಪರಿಹಾರ ಮೊತ್ತವನ್ನು ಪಾವತಿಸಲು ಅನುದಾನ ಬಿಡುಗಡೆ ಮಾಡಿ ಆದೇಶಿಸಿದೆ. ಈ ಕುರಿತಂತೆ ಇಂದು ರಾಜ್ಯ ಸರ್ಕಾರ ಆದೇಶ ಮಾಡಿದ್ದು, 2023ನೇ ಸಾಲಿನ ನೈರುತ್ಯ ಮುಂಗಾರು ಹಂಗಾಮಿನ ವೈಫಲ್ಯ / ಮಳೆಕೊರತೆ ಕಂಡು ಬಂದ ಹಿನ್ನೆಲೆಯಲ್ಲಿ, ಕೇಂದ್ರ ಸರ್ಕಾರದ ಬರ ಕೈಪಿಡಿ-2020 ರಲ್ಲಿ ಬರ  ಪರಿಸ್ಥಿತಿ ಘೋಷಿಸಲು ಅನುಸರಿಸಬೇಕಾದ ಮಾನದಂಡಗಳಂತೆ ನಿಯಮಾನುಸಾರ ಪರಿಶೀಲಿಸಿ, ರಾಜ್ಯದ 223 ತಾಲ್ಲೂಕುಗಳನ್ನು (196 ತೀವ್ರ ಬರ & 27 ಸಾಧರಣ ಬರ) ಬರ ಪೀಡಿತ ತಾಲ್ಲೂಕುಗಳೆಂದು ಘೋಷಿಸಲಾಗಿರುತ್ತದೆ. ಭಾರತ ಸರ್ಕಾರದಿಂದ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ (NDRF) ಅನುದಾನವನ್ನು ನಿರೀಕ್ಷಿಸಿ, ಭಾರತ ಸರ್ಕಾರದ ಗ್ರಹ ಮಂತ್ರಾಲಯವು SDRF/NDRF ರಡಿ ನೀಡಬಹುದಾದ ಪರಿಹಾರ ಮೊತ್ತದ ಬಗ್ಗೆ ಮೇಲೆ (2)ರಲ್ಲಿ ಓದಲಾದ ದಿನಾಂಕ:11/07/2023ರ Items of Expenditure ಮಾರ್ಗಸೂಚಿಗಳ ಅನುಸಾರ ಬೆಳೆಹಾನಿ ಪರಿಹಾರದ ಮೊದಲನೇ ಕಂತಾಗಿ ಅಥವಾ ಬೆಳೆಹಾನಿ ಪರಿಹಾರವಾಗಿ ಅರ್ಹತೆಯ…

Read More

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ನಕಲಿ ವಿಡಿಯೋ ಪ್ರಕರಣದಲ್ಲಿ ‘ಸ್ಪಿರಿಟ್ ಆಫ್ ಕಾಂಗ್ರೆಸ್’ ಎಕ್ಸ್ ಖಾತೆಯನ್ನು ನಿರ್ವಹಿಸುವ ಅರುಣ್ ರೆಡ್ಡಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಅಮಿತ್ ಶಾ ಹೇಳಿಕೆಯನ್ನು ತಿರುಚಿ ವೀಡಿಯೋ ಶೇರ್ ಮಾಡಿದ ಸಂಬಂಧ ಈಗಾಗಲೇ ಕೆಲವರನ್ನು ಪೊಲೀಸರು ಬಂಧಿಸಿದ್ದಾರೆ. ತೆಲಂಗಾಣ ಎಕ್ಸ್ ಖಾತೆಯನ್ನು ನಿರ್ಬಂಧಗೊಳಿಸಲಾಗಿತ್ತು. ಇಂದು ಅಮಿತ್ ಶಾ ನಕಲಿ ವೀಡಿಯೋ ಪ್ರಕರಣ ಸಂಬಂಧ ಮತ್ತೋರ್ವ ಆರೋಪಿಯಾಗಿರುವಂತ ಸ್ಪಿರಿಟ್ ಆಫ್ ಕಾಂಗ್ರೆಸ್ ನ ಎಕ್ಸ್ ಖಾತೆಯನ್ನು ನಿರ್ವಹಿಸುತ್ತಿದ್ದಂತ ಅರುಣ್ ರೆಡ್ಡಿ ಎಂಬಾತನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. https://kannadanewsnow.com/kannada/no-circular-has-been-issued-on-covishield-health-ministry/

Read More

ಶಿವಮೊಗ್ಗ: ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆಯ ಮತದಾನವು ಮೇ 07 ರಂದು ನಡೆಯಲಿದ್ದು ಮತದಾನದ ದಿನ ಮತ್ತು ಮತದಾನದ ಹಿಂದಿನ ದಿನ ಅಭ್ಯರ್ಥಿಗಳು/ಸಂಸ್ಥೆಗಳು ಅಥವಾ ಯಾವುದೇ ವ್ಯಕ್ತಿಯು ಮುದ್ರಣ ಮಾಧ್ಯಮದಲ್ಲಿ ಯಾವುದೇ ರೀತಿಯ ರಾಜಕೀಯ ಜಾಹೀರಾತು ಪ್ರಕಟಿಸಬೇಕಾದರೆ ಸದರಿ ಜಾಹೀರಾತಿಗೆ ಜಿಲ್ಲಾ ಮಟ್ಟದ ಮಾಧ್ಯಮ ಪ್ರಮಾಣೀಕರಣ ಹಾಗೂ ಕಣ್ಗಾವಲು ಸಮಿತಿಯ(ಎಂಸಿಎಂಸಿ) ಕಡೆಯಿಂದ ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿದೆ. ಚುನಾವಣೆಯ ಕಡೆಯ ಹಂತದಲ್ಲಿ ಆಕ್ಷೇಪಾರ್ಹ ಮತ್ತು ತಪ್ಪುದಾರಿಗೆಳೆಯುವ ಜಾಹಿರಾತುಗಳನ್ನು ಪ್ರಕಟಿಸಿದಲ್ಲಿ ಚುನಾವಣಾ ಪ್ರಕ್ರಿಯೆಯನ್ನು ಹದಗೆಡಿಸುವ ಸಂಭವ ಇರುವ ಕಾರಣ ಮುದ್ರಣ ಮಾಧ್ಯಮಗಳಲ್ಲಿ ಚುನಾವಣಾ ಜಾಹೀರಾತು ಪ್ರಕಟಿಸಲು ಬಯಸುವ ಅಭ್ಯರ್ಥಿಗಳು ಜಾಹಿರಾತು ಪ್ರಕಟಿಸುವ ಎರಡು ದಿನಗಳ ಮುಂಚಿತವಾಗಿ ಎಂಸಿಎಂಸಿ ಗೆ ಅರ್ಜಿ ಸಲ್ಲಿಸಬೇಕು. ಮೇ 06 ಮತ್ತು 07 ರಂದು ಮುದ್ರಣ ಮಾಧ್ಯಮಗಳಲ್ಲಿ ಜಾಹೀರಾತು ಪ್ರಕಟಿಸಬೇಕಾದರೆ ಸದರಿ ಜಾಹೀರಾತಿನ ಎರಡು ಸ್ವಯಂ ದೃಢೀಕೃತ ಪ್ರತಿಗಳೊಂದಿಗೆ ನಿಗದಿತ ಅರ್ಜಿ ನಮೂನೆಯಲ್ಲಿ ಜಾಹಿರಾತು ಪ್ರಕಟಿಸುವ 2 ದಿನ ಮುಂಚಿತವಾಗಿ ಪೂರ್ವಾನುಮತಿ ಪಡೆಯಲು ಮಾಧ್ಯಮ ಪ್ರಮಾಣೀಕರಣ ಹಾಗೂ ಕಣ್ಗಾವಲು ಸಮಿತಿ(ಎಂಸಿಎಂಸಿ)ಗೆ ಅರ್ಜಿ…

Read More

ಬಾಗಲಕೋಟೆ : “ಕಲ್ಯಾಣ ಕರ್ನಾಟಕದ 5 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಗೆದ್ದೇ ಗೆಲ್ಲಲಿದ್ದು, ರಾಜ್ಯದಲ್ಲಿ 20ಕ್ಕೂ ಹೆಚ್ಚು ಸ್ಥಾನವನ್ನು ಗೆಲ್ಲಲಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಬಾಗಲಕೋಟೆಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, “ಜನರಿಗೆ ಗ್ಯಾರಂಟಿ ಬಗ್ಗೆ ಭರವಸೆ ಮೂಡಿದೆ. ಮಹಾಲಕ್ಷ್ಮಿ ಯೋಜನೆ ಮೂಲಕ ಬಡ ಕುಟುಂಬದ ಮಹಿಳೆಗೆ ವಾರ್ಷಿಕ 1 ಲಕ್ಷ, ನಿರುದ್ಯೋಗಿ ಯುವಕರಿಗೆ ವಾರ್ಷಿಕ 1 ಲಕ್ಷ ಶಿಷ್ಯ ವೇತನ ಹಾಗೂ ತರಬೇತಿ, 25 ಲಕ್ಷವರೆಗಿನ ಆರೋಗ್ಯ ವಿಮೆ, ರೈತರ ಸಾಲಮನ್ನಾ ಹಾಗೂ ಸ್ವಾಮಿನಾಥನ್ ಆಯೋಗದಂತೆ ಬೆಂಬಲ ಬೆಲೆ, ನರೇಗಾ ಯೋಜನೆಯಲ್ಲಿ ಕೇಂದ್ರದ ಕೂಲಿಯ ಪಾಲು 400ಕ್ಕೆ ಹೆಚ್ಚಳ, ನಗರದಲ್ಲಿ ಉದ್ಯೋಗ ಖಾತ್ರಿ ಯೋಜನೆಗಳು ಜನರನ್ನು ಆಕರ್ಷಿಸಿವೆ. ಇಂತಹ ಒಂದೇ ಒಂದು ಗ್ಯಾರಂಟಿ ಬಿಜೆಪಿ ನೀಡಿಲ್ಲ ಎಂದರು. ಮೋದಿ ಗ್ಯಾರಂಟಿಯಲ್ಲಿ ಜನರಿಗೆ ಹೊಟ್ಟೆ ತುಂಬಿಸುವ, ಜನರ ಬದುಕಿನಲ್ಲಿ ಬದಲಾವಣೆ ತರುವ ಯೋಜನೆಗಳಲ್ಲಿ. ನಾವು ಜನರ ಬದುಕಿನ ಬಗ್ಗೆ ಆಲೋಚಿಸುತ್ತಿದ್ದೇವೆ ಎಂದು ದೇಶದೆಲ್ಲೆಡೆ ಇಂಡಿಯಾ ಮೈತ್ರಿ ಕೂಟದ ಬಗ್ಗೆ ಒಲವು…

Read More