Author: kannadanewsnow09

ಬೆಂಗಳೂರು: ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣದಲ್ಲಿ ಶೋಷಣೆಗೆ ಒಳಗಾದ ಮಹಿಳೆಯರ ಸುರಕ್ಷತೆ ಬಗ್ಗೆ ಆತಂಕ ಇದೆ, ಸರ್ಕಾರ ಈ ಬಗ್ಗೆ ಮಾಹಿತಿ ಕೊಡಬೇಕು ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್ ದಾಸರಿ ಆಗ್ರಹಿಸಿದ್ದಾರೆ. ನಗರದಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿದ ಮೋಹನ್ ದಾಸರಿ, ಇಡೀ ದೇಶ ಕಂಡರಿಯದ ದೊಡ್ಡ ಲೈಂಗಿಕ ಹಗರಣವಾಗಿದೆ. ಪೆನ್‌ಡ್ರೈವ್‌ನಲ್ಲಿ 300ಕ್ಕಿಂತ ಹೆಚ್ಚಿನ ಮಹಿಳೆಯರ ವಿಡಿಯೋ ಇದೆ ಎಂದು ಹೇಳಲಾಗಿದೆ. ಈ ಮಹಿಳೆಯರ ಪರಿಸ್ಥಿತಿ ಏನಾಗಿದೆ? ಈ ಎಲ್ಲಾ ಮಹಿಳೆಯರು ಸುರಕ್ಷಿತವಾಗಿದ್ದಾರಾ? ಅವರಿಗೆ ಬೆದರಿಕೆ ಇದೆಯಾ ಎನ್ನುವುದು ಗೊತ್ತಿಲ್ಲ, ಎಸ್‌ಐಟಿ ಒಂದು ಕಡೆ ತನಿಖೆ ಮಾಡುತ್ತಿದ್ದು, ಗೃಹ ಸಚಿವರು ಎಲ್ಲಾ ಮಹಿಳೆಯರ ಸುರಕ್ಷತೆ ಬಗ್ಗೆ ಮಾಹಿತಿ ಕೊಡಬೇಕು ಎಂದು ಒತ್ತಾಯಿಸಿದರು. ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯದ ಪೆನ್‌ಡ್ರೈವ್ ಬಹಿರಂಗವಾಗುತ್ತಿದ್ದಂತೆ, ಶೋಷಿತ ಮಹಿಳೆಯರು ಭಯಭೀತರಾಗಿದ್ದಾರೆ. ಅವರು ಆಚೆ ಬಂದು ಧೈರ್ಯವಾಗಿ ಮಾತನಾಡಲು ಆಗದಂತಾಗಿದೆ. ರಾಜ್ಯದ ಮಹಿಳಾ ಆಯೋಗ ಹಾಸದಲ್ಲೇ ಇದ್ದು, ಶೋಷಣೆಗೆ ಒಳಗಾದ ಮಹಿಳೆಯರಿಗೆ ಧೈರ್ಯ…

Read More

ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ಬಿಸಿಲ ತಾಪ 40 ಡಿಗ್ರಿ ಸೆಲ್ಸಿಯಸ್ ದಾಟಿದೆ. ನಿನ್ನೆಯಂತೂ ದಾಖಲೆಯ 46.70 ಡಿಗ್ರಿ ಸೆಲ್ಸಿಯಸ್ ಯಾದಗಿರಿ ಜಿಲ್ಲೆಯಲ್ಲಿ ದಾಖಲಾಗಿತ್ತು. ಬಿಸಿಲ ತಾಪದ ನಡುವೆಯೂ ಮೇ.7ರಂದು ಲೋಕಸಭಾ ಚುನಾವಣೆಗೆ ಮತದಾನ ನಡೆಯುತ್ತಿದೆ. ಹೀಗಾಗಿ ಮತದಾನದ ಅವಧಿಯನ್ನು ಮೇ.7ರಂದು ಒಂದು ಗಂಟೆ ವಿಸ್ತರಿಸುವಂತೆ ಚುನಾವಣಾ ಆಯೋಗಕ್ಕೆ ಬಿಜೆಪಿ ಮನವಿ ಮಾಡಿದೆ. ಮೇ.7ರಂದು ರಾಜ್ಯದಲ್ಲಿ ಲೋಕಸಭಾ ಚುನಾವಣೆಗೆ 2ನೇ ಹಂತದಲ್ಲಿ ಮತದಾನ ನಡೆಯುತ್ತಿದೆ. ಮೊದಲ ಹಂತದ ಮತದಾನದ ವೇಳೆಯಲ್ಲಿ ಕಡಿಮೆಯಿದ್ದಂತ ಬಿಸಿಲು, ಈಗ ತೀವ್ರ ಹೆಚ್ಚಾಗಿದೆ. ಬಹುತೇಕ ಜಿಲ್ಲೆಗಳಲ್ಲಿ 40 ಡಿಗ್ರಿ ಸೆಲ್ಸಿಯಸ್ ಮೀರಿದೆ. ಇದರ ನಡುವೆಯೂ ಮೇ.7ರಂದು ಎರಡನೇ ಹಂತದಲ್ಲಿ ಲೋಕಸಭಾ ಚುನಾವಣೆಗೆ ಮತದಾನ ನಡೆಯುತ್ತಿದೆ. ಬೆಳಿಗ್ಗೆ 7ರಿಂದ ಸಂಜೆ 6 ಗಂಟೆಯವರೆಗೆ ಮತದಾನಕ್ಕೆ ಚುನಾವಣಾ ಆಯೋಗವು ಅವಕಾಶ ನೀಡಿದೆ. ಆದ್ರೇ ತೀವ್ರ ಬಿಸಿಲ ಕಾರಣ ಮಧ್ಯಾಹ್ನದ ವೇಳೆಯಲ್ಲಿ ಮತದಾರರು ಮತ ಚಲಾಯಿಸೋದಕ್ಕೆ ಬರೋದು ಕಡಿಮೆ ಇದೆ. ಮತದಾನವು ಬಿಸಿಲ ಬೇಗೆಯ ತಾಪಮಾನದ ಕಾರಣಕ್ಕೆ ಕುಂಠಿತಗೊಳ್ಳಬಹುದು. ಹೀಗಾಗಿ 1 ಗಂಟೆ…

Read More

ಬೀದರ್: ಗವಂತ ಖೂಬಾ ಸರ್ಕಾರದ ಬೊಕ್ಕಸಕ್ಕೆ ನಷ್ಟ ಮಾಡಿರುವ ವಂಚಕ. ಅಕ್ರಮ ಕಲ್ಲು ಗಣಿಗಾರಿಕೆಯಲ್ಲಿ ಲೂಟಿ ಮಾಡಿರುವ ಕಳ್ಳ. ಒಬ್ಬ ಕೇಂದ್ರ ಸಚಿವರಾಗಿ ಸರ್ಕಾರಕ್ಕೆ ಸುಮಾರು 25 ಕೋಟಿ ರೂಪಾಯಿ ದ್ರೋಹ ಮಾಡಿದ್ದಾರೆ. ವಂಚನೆ ಮಾಡಿದ್ದಾರೆ. ಇದನ್ನು ತಮ್ಮ ಅಫಿಡವಿಟ್ ನಲ್ಲಿ ಕೂಡ ತಪ್ಪು ಮಾಹಿತಿ ನೀಡಿದ್ದಾರೆ. ಇವರ ವಿರುದ್ಧ ಚುನಾವಣಾ ಆಯೋಗ ಕ್ರಮ ಕೈಗೊಳ್ಳಬೇಕು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಆಗ್ರಹಿಸಿದರು. ಇಂದು ಬೀದರ್ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದಂತ ಅವರು, ನಿಮಗೆಲ್ಲಾ ತಿಳಿದಿರುವಂತೆ ಬೀದರ್ ಲೋಕಸಭಾ ಕ್ಷೇತ್ರಕ್ಕೆ ಮೇ 7ರಂದು ರಾಜ್ಯದಲ್ಲಿ 2ನೇ ಹಂತದಲ್ಲಿ ಚುನಾವಣೆ ನಡೆಯುತ್ತಿದೆ. ನನ್ನ ಪುತ್ರ ಸಾಗರ್ ಈಶ್ವರ್ ಖಂಡ್ರೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾನೆ. ನಾವು ಈ ಬಾರಿ ಕ್ಷೇತ್ರದ ಬಹುತೇಕ ಕಡೆಗಳಲ್ಲಿ ಪ್ರಚಾರ ಮಾಡಿದ್ದು, ಹೋದ ಕಡೆಯಲ್ಲೆಲ್ಲಾ ಅಭೂತಪೂರ್ವವಾದ ಜನ ಬೆಂಬಲ ವ್ಯಕ್ತವಾಗುತ್ತಿದೆ. ಎಲ್ಲೆಡೆ ಕಾಂಗ್ರೆಸ್ ಪರವಾದ ಅಲೆ ಕಾಣಿಸುತ್ತಿದೆ. ಈ ಎಲ್ಲ ಸುದ್ದಿಗಳನ್ನೂ ನಿಮ್ಮ ಪತ್ರಿಕೆಗಳಲ್ಲಿ ಪ್ರಕಟಿಸಿದ, ಮಾಧ್ಯಮಗಳಲ್ಲಿ…

Read More

ಬೆಂಗಳೂರು: ದೇವನಹಳ್ಳಿ ತಾಲ್ಲೂಕು, ಕುಂದಾಣ ಹೋಬಳಿಗೆ ಸೇರಿದ ದೊಡ್ಡಗೊಲ್ಲಹಳ್ಳಿ ಮತ್ತು ಚಪ್ಪರದಹಳ್ಳಿ ಗ್ರಾಮಗಳ ವ್ಯಾಪ್ತಿಯಲ್ಲಿ ಕೈಗಾರಿಕೆ ಸ್ಥಾಪನೆಗಾಗಿ ಫಾಕ್ಸ್ ಕಾನ್ ಕಂಪನಿಗೆ ಭೂಮಿ ಮಂಜೂರಾಗಿದ್ದು, ಸಂಬಂಧಿಸಿದ ಭೂ ಪರಿಹಾರವನ್ನು ನ್ಯಾಯಾಲಯದಲ್ಲಿ ಠೇವಣಿ ಇರಿಸಲಾಗುವುದು ಎಂದು ಕೆಐಎಡಿಬಿ ಸಿಇಓ ಡಾ. ಮಹೇಶ ಅವರು ಶುಕ್ರವಾರ ತಿಳಿಸಿದ್ದಾರೆ. ಈ ಗ್ರಾಮಗಳಲ್ಲಿ ಕಂಪನಿಗೆ ಮಂಜೂರಾಗಿರುವ ಭೂಮಿಗೆ ಭೂಸ್ವಾಧೀನ ಅಧಿಕಾರಿಗಳು ಮತ್ತು ಪೊಲೀಸ್ ಇಲಾಖೆಯ ಸಹಕಾರ ಪಡೆದು ಫೆನ್ಸಿಂಗ್ ಮಾಡಲು ಕ್ರಮ ತೆಗೆದುಕೊಳ್ಳಲಾಗುವುದು ಎಂದೂ ಅವರು ಹೇಳಿದ್ದಾರೆ. ದೇವನಹಳ್ಳಿ 3ನೇ ಅಡಿಷನಲ್ ಸೀನಿಯರ್ ಸಿವಿಲ್ ಜಡ್ಜ್ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯವು ನೇರವಾಗಿ ಖಾತೆದಾರರಿಗೆ ಪರಿಹಾರ ಕೊಡಬಾರದೆಂದು ತಡೆಯಾಜ್ಞೆ ನೀಡಿದೆ. ಹೀಗಾಗಿ, ಪರಿಹಾರ ಹಣವನ್ನು ನ್ಯಾಯಾಲಯದಲ್ಲಿ ಠೇವಣಿ ಇಡಲಾಗುತ್ತದೆ ಎಂದು ವಿವರಿಸಿದ್ದಾರೆ. ಕುಂದಾಣ ಹೋಬಳಿಯ ಅರವನಹಳ್ಳಿ, ದೊಡ್ಡಗೊಲ್ಲಹಳ್ಳಿ, ಚಪ್ಪರದಹಳ್ಳಿ ಮತ್ತು ಬೈರದೇನಹಳ್ಳಿ ಗ್ರಾಮಗಳಲ್ಲಿ ಒಟ್ಟು 867.37 ಎಕರೆ ವಿಸ್ತೀರ್ಣದ ಜಮೀನನ್ನು ಕೈಗಾರಿಕಾ ಪ್ರದೇಶದ ಸ್ಥಾಪನೆಗಾಗಿ ಭೂಸ್ವಾಧೀನ‌ ಮಾಡಿಕೊಳ್ಳಲಾಗಿದ್ದು. ಈ ಪೈಕಿ ಫಾಕ್ಸ್‌ಕಾನ್‌ ಕಂಪನಿಗೆ 300 ಎಕರೆ ಭೂಮಿಯನ್ನು ಹಂಚಿಕೆ…

Read More

ಬೆಂಗಳೂರು: ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾಗಿದೆ. ಅಲ್ಲದೇ ಮಹಿಳೆಯೊಬ್ಬರ ಅಪಹರಣದ ಪ್ರತ್ಯೇಕ ಎಫ್ಐಆರ್ ಗೆ ಸಂಬಂಧಿಸಿದಂತೆ ರೇವಣ್ಣ ಸಲ್ಲಿಸಿದ್ದಂತ ಮಧ್ಯಂತರ ಜಾಮೀನು ಮಂಜೂರಾತಿಯನ್ನು ತಕ್ಷಣವೇ ಪರಿಗಣಿಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರಾಕರಿಸಿದೆ. ಆದ್ರೇ ನಾಳೆಗೆ ವಿಚಾರಣೆ ಮುಂದೂಡಿದ್ದು, ವಾದ ಆಲಿಸಿದ ನಂತ್ರ ಆದೇಶ ನೀಡುವುದಾಗಿ ಹೇಳಿದೆ. ಶಾಸಕ ಹೆಚ್.ಡಿ ರೇವಣ್ಣ, ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದಂತ ಸಂತೋಷ ಗಜಾನನ ಭಟ್ ಇಂದು ನಡೆಸಿದರು. ಮಧ್ಯಂತರ ಜಾಮೀನು ಅರ್ಜಿಯ ವಿಚಾರಣೆಯ ವೇಳೆಯಲ್ಲಿ ರೇವಣ್ಣ ಪರವಾಗಿ ಹಿರಿಯ ವಕೀಲ ಮೂರ್ತಿ ಡಿ ನಾಯಕ್ 15 ನಿಮಿಷಗಳ ಕಾಲ ವಾದ ಮಂಡಿಸಿದರು. ಈ ವೇಳೆ ಮತ್ತೊಂದು ಎಫ್ಐಆರ್ ನಲ್ಲಿ ಮಹಿಳೆಯ ಹೆಸರು ಕಾಣಿಸುತ್ತಿಲ್ಲ. ಆದ್ದರಿಂದ ಈ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ನೀಡುವಂತೆ ಮನವಿ ಮಾಡಿದರು. ಈ ವಾದ ಆಲಿಸಿದಂತ ನ್ಯಾಯಪೀಠವು, ಈ…

Read More

ಬೆಂಗಳೂರು: ಪುತ್ರ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಕೆ ಆರ್ ಪೇಟೆ ಪೊಲೀಸ್ ಠಾಣೆಯಲ್ಲಿ ಜಾಮೀನು ರಹಿತ ಸೆಕ್ಷನ್ ಅಡಿಯಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಹೆಚ್.ಡಿ ರೇವಣ್ಣ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದಂತ ಕೋರ್ಟ್, ವಿಚಾರಣೆಯನ್ನು ನಾಳೆ ಬೆಳಿಗ್ಗೆ 11 ಗಂಟೆಗೆ ಮುಂದೂಡಿಕೆ ಮಾಡಿತು. ಇಂದು ಹೆಚ್ ಡಿ ರೇವಣ್ಣ ವಿರುದ್ಧ ಕೆ.ಆರ್ ನಗರ ಠಾಣೆಯಲ್ಲಿ ದಾಖಲಾಗಿದ್ದಂತ ಜಾಮೀನು ರಹಿತ ಸೆಕ್ಷನ್ ಕೇಸಿನಲ್ಲಿ ನಿರೀಕ್ಷಣಾ ಜಾಮೀನಿಗಾಗಿ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆ ನಡೆಯಿತು. ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ನಲ್ಲಿ ನಡೆದಂತ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯ ವೇಳೆಯಲ್ಲಿ ಹೆಚ್.ಡಿ ರೇವಣ್ಣ ಪರವಾಗಿ ಹಿರಿಯ ವಕೀಲರು 364ಎ, 364 ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂಬುದಾಗಿ ವಾದಿಸಿದರು. ಅಲ್ಲದೇ ಕೆ ಆರ್ ಪೇಟೆ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಹಿಳೆ ಸಲ್ಲಿಸಿದ್ದಂತ…

Read More

ರಾಯಚೂರು: ಪದೇ ಪದೇ ಪ್ರಧಾನಿ ನರೇಂದ್ರ ಮೋದಿಯವರನ್ನು, ಬಿಜೆಪಿಯನ್ನು ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋ ಪ್ರಕರಣದಲ್ಲಿ ಏಕೆ ಎಳೆದು ತರುತ್ತೀರಿ? ಪ್ರಧಾನಿ ಮೋದಿಗೂ ಈ ಪ್ರಕರಣಕ್ಕೂ ಏನು ಸಂಬಂಧ ಎಂಬುದಾಗಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಾಗ್ಧಾಳಿ ನಡೆಸಿದ್ದಾರೆ. ರಾಯಚೂರಿನ ಸಿಂಧನೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಈಗಾಗಲೇ ಪ್ರಜ್ವಲ್ ರೇವಣ್ಣ ಅಶ್ಲೀಲ ಪ್ರಕರಣದ ಬಗ್ಗೆ ಕೇಂದ್ರ ಗೃಹ ಸಚಿವರು ಸಲಹೆ ಕೊಟ್ಟಿದ್ದಾರೆ. ನೋಟಿಸ್ ಬಳಿಕ ಆ ವ್ಯಕ್ತಿ ಒಂದು ವಾರ ಟೈಂ ಕೇಳಿದ್ದಾರೆ. ಇಲ್ಲಿಗೆ ಆ ವ್ಯಕ್ತಿ ಬರಲ್ಲ ಅಂದಿಲ್ಲವಲ್ಲ ಎಂದರು. ಮಾಜಿ ಸಚಿವ ಹೆಚ್.ಡಿ ರೇವಣ್ಣ ಕೂಡ ಸಮಯ ಕೇಳಿದ್ದಾರೆ. ಮೊದಲ ಸಮನ್ಸ್ ಹಂತದಲ್ಲೇ ಈ ರೀತಿಯಾಗಿ ಮಾಡುತ್ತಿದ್ದೀರಿ. ನೀವು ಹಾಗೂ ನಿಮ್ಮ ಡಿಸಿಎಂ ಹೇಳಿಕೆ ಕೊಡುವ ಮೂಲಕ ಪ್ರಕರಣದ ತನಿಖೆ ಸರಿಯಾಗಿ ನಡೆಸಲು ಹೇಳುತ್ತಿದ್ದಿರೋ ಅಥವಾ ಪ್ರಚಾರಕ್ಕೆ ಈ ಪ್ರಕರಣವನ್ನು ಬಳಕೆ ಮಾಡ್ತಿದ್ದಿರೋ ಎಂದು ಕಿಡಿಕಾರಿದರು. ನಾನು ದಾಖಲೆ ರೆಡಿ ಮಾಡಿದ್ದೇನೆ. ಯಾವಾಗ ಬೇಕಾದ್ರೂ ಬಿಡುಗಡೆ ಮಾಡುತ್ತೇನೆ…

Read More

ಉತ್ತರ ಕನ್ನಡ: ಬಿಜೆಪಿ ಸರ್ಕಾರ ಸತ್ತು ಹೋಗಿದೆ. ಜನರ, ಬಡವರ ಪರವಾಗಿ ಇಲ್ಲವಾಗಿದೆ. ಕೋರೊನಾ ಸಮಯದಲ್ಲಿ ಆಕ್ಸಿಜನ್ ಇಲ್ಲದೆ ಜನ ಸತ್ತರು, ಚಿಕಿತ್ಸೆ ಸರಿಯಾಗಿ ಸಿಗದೆ ರಾಜ್ಯದಲ್ಲಿ 4 ಲಕ್ಷ ಜನ ಸತ್ತಿದ್ದಾರೆ. ಈಗ ವ್ಯಾಕ್ಸಿನ್ ತೆಗೆದುಕೊಂಡವರು ಸಾಯುವ ಕಾಲ ಬಂದಿದೆ. ಬಿಜೆಪಿಯವರು ಈ ವ್ಯಾಕ್ಸಿನ್ ಕೊಟ್ಟ ಕಂಪೆನಿಯಿಂದಲೂ ಲಂಚ ಹೊಡೆದಿದ್ದಾರೆ ಎಂಬುದಾಗಿ ಡಿಸಿಎಂ ಡಿಕೆ ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ. ಉತ್ತರ ಕನ್ನಡದ ಮುಂಡಗೋಡದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದಂತ ಅವರು, ಕೊರೋನಾ ಲಸಿಕೆ ಹಾಕಿಸಿಕೊಂಡವರಿಗೆ ಮೋದಿ ಫೋಟೊ ಇರುವ ಪ್ರಮಾಣ ಪತ್ರ ಕೊಟ್ಟರು. ಸತ್ತವರ ಸರ್ಟಿಫಿಕೆಟ್ಗೆ ಏಕೆ ಮೋದಿ ಫೋಟೋ ಹಾಕಿಲಿಲ್ಲ. ಜನಕ್ಕೆ ಏನೂ ಸಹಾಯ ಮಾಡದೆ ದೀಪ ಹಚ್ಚಿ, ಚಪ್ಪಾಳೆ ಹೊಡೆಯಿರಿ ಮಂಗಮಾಯ ಆಗುತ್ತೆ ಎಂದರು, ಏನೂ ಆಗಲಿಲ್ಲ. ಕೋರೋನಾ ಸಮಯದಲ್ಲಿ ಕೇಂದ್ರ ಸರ್ಕಾರ 20 ಲಕ್ಷ ಕೋಟಿ ಕೊಟ್ಟಿದ್ದೇನೆ ಎಂದು ಹೇಳಿತು. ಆ ಹಣ ಯಾರಿಗಾದರೂ ಬಂದಿದೆಯೇ? ಎಂದು ಪ್ರಶ್ನಿಸಿದರು. ನಮ್ಮ ಕರಾವಳಿಯ ಕಾರ್ಪೋರೇಷನ್ ಬ್ಯಾಂಕ್,…

Read More

ನವದೆಹಲಿ: ಬಿರು ಬೇಸಿಗೆಯಲ್ಲಿ ವಾಹನಗಳಿಗೆ ಪುಲ್ ಟ್ಯಾಂಕ್ ಪೆಟ್ರೋಲ್, ಡೀಸೆಲ್ ಮಾಡಿಸಬೇಡಿ. ಮಾಡಿಸಿದ್ರೇ ಬ್ಲಾಸ್ಟ್ ಆಗಿ ಹೊತ್ತಿಕೊಳ್ಳೋ ಸಾಧ್ಯತೆ ಇದೆ ಎಂಬುದಾಗಿ ವೈರಲ್ ಸುದ್ದಿಯೊಂದು ಹರಿದಾಡುತ್ತಿತ್ತು. ಆದ್ರೇ ಬೇಸಿಗೆಯಲ್ಲಿ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಪುಲ್ ಟ್ಯಾಂಕ್ ಮಾಡಿಸಿದ್ರೆ ಸಮಸ್ಯೆ ಆಗಲ್ಲ. ಯಾವುದೇ ವಾಹನ ಸವಾರರು ಆತಂಕಕ್ಕೆ ಒಳಗಾಗ ಬಾರದು ಅಂತ ಇಂಡಿಯನ್ ಆಯಿಲ್ ಸ್ಪಷ್ಟ ಪಡಿಸಿದೆ. ಈ ಬಗ್ಗೆ ಬಿಸಿಲಿನ ವಾತಾವರಣದಲ್ಲಿ ತಮ್ಮ ವಾಹನಗಳ ಇಂಧನ ಟ್ಯಾಂಕ್ ಗಳನ್ನು ಗರಿಷ್ಠ ಸಾಮರ್ಥ್ಯಕ್ಕೆ ತುಂಬಿಸದಂತೆ ನಾಗರಿಕರಿಗೆ ಎಚ್ಚರಿಕೆ ನೀಡುವ ಕಂಪನಿಯ ‘ಸಲಹೆ’ ಎಂದು ವ್ಯಾಪಕವಾಗಿ ಪ್ರಸಾರವಾಗುತ್ತಿರುವ ವಾಟ್ಸಾಪ್ ಸಂದೇಶವು ನಕಲಿ ಎಂದು ಇಂಡಿಯನ್ ಆಯಿಲ್ ಸ್ಪಷ್ಟನೆ ನೀಡಿದೆ. ಆಟೋಮೊಬೈಲ್ ತಯಾರಕರು ಕಾರ್ಯಕ್ಷಮತೆಯ ಅವಶ್ಯಕತೆಗಳು, ಹಕ್ಕುಗಳು ಮತ್ತು ಪರಿಸರ ಪರಿಸ್ಥಿತಿಗಳ ಎಲ್ಲಾ ಅಂಶಗಳನ್ನು ಅಂತರ್ನಿರ್ಮಿತ ಸುರಕ್ಷತಾ ಅಂಶಗಳೊಂದಿಗೆ ಪರಿಗಣಿಸಿ ವಾಹನಗಳನ್ನು ವಿನ್ಯಾಸಗೊಳಿಸುತ್ತಾರೆ. ಪೆಟ್ರೋಲ್ / ಡೀಸೆಲ್ ವಾಹನಗಳಿಗೆ ಇಂಧನ ಟ್ಯಾಂಕ್ ನಲ್ಲಿ ನಿರ್ದಿಷ್ಟಪಡಿಸಿದ ಗರಿಷ್ಠ ಪರಿಮಾಣವು ಇದಕ್ಕೆ ಹೊರತಾಗಿಲ್ಲ. ಆದ್ದರಿಂದ, ಚಳಿಗಾಲ ಅಥವಾ ಬೇಸಿಗೆಯನ್ನು ಲೆಕ್ಕಿಸದೆ,…

Read More

ಬೆಂಗಳೂರು: ದೇಶವನ್ನು 10 ವರ್ಷಗಳ ಕಾಲ ಸರ್ವತೋಮುಖ ಅಭಿವೃದ್ಧಿಯತ್ತ ಒಯ್ದ ನರೇಂದ್ರ ಮೋದಿಯವರು ಸಮರ್ಥ ನಾಯಕ. ದೇಶ, ಬಡವರಿಗೆ ಒಳ್ಳೆಯದು ಮಾಡಿದ್ದಾರೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ತಿಳಿಸಿದರು. ಬೀದರ್‍ನಲ್ಲಿ ರೆಡ್ಡಿ ಸಮುದಾಯದ ಸಾರ್ವಜನಿಕ ಸಭೆಯಲ್ಲಿ ಇಂದು ಮಾತನಾಡಿದ ಅವರು, ಇಲ್ಲಿನ ಕಾಂಗ್ರೆಸ್ ಅಭ್ಯರ್ಥಿಗೆ ರಾಹುಲ್ ಗಾಂಧಿಯವರಂತೆ ಸಮಸ್ಯೆಗಳ ಅರಿವಿಲ್ಲ ಎಂದು ಟೀಕಿಸಿದರು. ಭಗವಂತ ಖೂಬಾ ಅವರು ಜನರ ಸಮಸ್ಯೆಗಳ ಪರಿಹಾರಕ್ಕೆ ಶ್ರಮಿಸಿದ್ದಾರೆ. ಜನಮೆಚ್ಚುಗೆ ಗಳಿಸಿದ್ದಾರೆ ಎಂದು ವಿಶ್ಲೇಷಿಸಿದರು. ರೈತ ಯೋಜನೆಗಳು, ಅಭಿವೃದ್ಧಿಗೆ ಸಂಸತ್ತಿನಲ್ಲಿ ಮನವಿ ಮಾಡಲು ಬಿಜೆಪಿಯ ಸಮರ್ಥ ಅಭ್ಯರ್ಥಿ ಆಯ್ಕೆ ಮಾಡಿ ಎಂದು ವಿನಂತಿಸಿದರು. ಫಲಿತಾಂಶ ಬಂದ ಬಳಿಕ ರಾಹುಲ್ ಗಾಂಧಿಯವರು ವಿದೇಶಕ್ಕೆ ಓಡಿ ಹೋಗಲಿದ್ದಾರೆ. ಯಾಕೆಂದರೆ ಫಲಿತಾಂಶ ಈಗಾಗಲೇ ಗೊತ್ತಾಗಿದೆ ಎಂದು ತಿಳಿಸಿದರು. ದೇಶದ ಭವಿಷ್ಯ, ಸುರಕ್ಷತೆ, ಅಭಿವೃದ್ಧಿಗೆ ಮೋದಿಜೀ, ಬಿಜೆಪಿ ಆಯ್ಕೆ ಅನಿವಾರ್ಯ. ಕಾಂಗ್ರೆಸ್ ಪಕ್ಷ ಈ ದೇಶಕ್ಕೆ ಒಳ್ಳೆಯದು ಮಾಡಿಲ್ಲ. 50 ವರ್ಷಕ್ಕೂ ಹೆಚ್ಚು ಕಾಲ ಆಳ್ವಿಕೆ ನಡೆಸಿದರೂ ದೇಶಕ್ಕೆ…

Read More