Author: kannadanewsnow09

ಮೈಸೂರು: ಅರಣ್ಯ ಇಲಾಖೆಯ ಪರಿಹಾರದ ಆಸೆಗೆ ಪತಿಯನ್ನು ಕೊಲೆಗೈದ ಪತ್ನಿಯೊಬ್ಬರು, ಹುಲಿ ಕೊಂದಿದೆ ಎಂಬುದಾಗಿ ನಾಟಕವಾಡಿದ್ದಾರೆ. ಈ ಕಿಲೇಡಿಯ ನಾಟಕದ ಮಾತು ಕೇಳಿ ಪೊಲೀಸರೇ ಶಾಕ್ ಆಗಿದ್ದರು. ಆದರೇ ತನಿಖೆ ನಡೆಸಿದಾಗ ಪತಿಯನ್ನು ಕೊಲೆಗೈದಿ ವಿಷಯವನ್ನು ಪತ್ನಿ ಬಾಯಿ ಬಿಟ್ಟಿದ್ದಾರೆ. ಮೈಸೂರು ಜಿಲ್ಲೆಯ ಚಿಕ್ಕ ಹೆಜ್ಜೂರು ಗ್ರಾಮದಲ್ಲಿ ಪತಿ ವೆಂಕಟಸ್ವಾಮಿ ಎಂಬಾತನನ್ನು ಕೊಲೆಗೈದಂತ ಪತ್ನಿ ಸಲ್ಲಾಪುರಿ, ಹುಲಿ ಕೊಂದಿದೆ ಎಂಬುದಾಗಿ ನಾಟಕವಾಡಿದ್ದಾರೆ. ಕೊಲೆಗಾತಿ ಪತ್ನಿಯ ಈ ಸ್ಟೋರಿ ಕೇಳಿ ಪೊಲೀಸರೇ ಶಾಕ್ ಆಗಿದ್ದಾರೆ. ಪತಿ ನಾಪತ್ತೆಯಾಗಿರುವ ಬಗ್ಗೆ ದೂರು ಪಡೆದಂತ ಪೊಲೀಸರು, ತನಿಖೆ ನಡೆಸಿದಾಗ ಅರಣ್ಯ ಇಲಾಖೆ ಪರಿಹಾರದಾಸೆಗೆ ಕಿಲೇಡಿ ಪತ್ನಿ ಸಲ್ಲಾಪುರಿ ನಾಟಕ ಬಯಲಾಗಿದೆ. ಅಂದಹಾಗೇ ಕೆಲ ದಿನಗಳ ಹಿಂದೆ ಸೋಮವಾರದಂದು ಹೆಜ್ಜೂರು ಗ್ರಾಮದ ಬಳಿಯಲ್ಲಿ ಹುಲಿ ಓಡಾಡಿತ್ತು. ಇದನ್ನೇ ಬಂಡವಾಳ ಮಾಡಿಕೊಂಡು ಹುಲಿ ಕತೆಯನ್ನು ಪತ್ನಿ ಸಲ್ಲಾಪುರಿ ಕಟ್ಟಿದ್ದಾಳೆ. ಹುಲಿ ಹೊತ್ತೊಯ್ದಿದ್ದಾಗಿ ಪೊಲೀಸರಿಗೆ ದೂರು ನೀಡಿದ್ದಾರೆ. ಈ ದೂರು ಆಧರಿಸಿ ಗ್ರಾಮದ ಬಳಿಯಲ್ಲಿ ಪೊಲೀಸರು, ಅರಣ್ಯ ಇಲಾಖೆ ಸಿಬ್ಬಂದಿ…

Read More

ಬೆಳಗಾವಿ: ಇಂದು ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿಯೇ ನಡೆದಿದೆ. ಪೊಲೀಸರೇ ಎದುರೇ ಎರಡು ಪಕ್ಷದ ಕಾರ್ಯಕರ್ತರು ಹೊಡೆದಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಮುಂದೂಡಬೇಕು ಎನ್ನುವ ಉದ್ದೇಶದಿಂದ ಠರಾವು ಪಾಸ್ ಮಾಡಬೇಕಿದ್ದಂತ ಸೆಕ್ರೇಟರಿಯನ್ನೇ ಕಾಂಗ್ರೆಸ್ ಕಾರ್ಯಕರ್ತರು ಅಪಹರಿಸಲು ಯತ್ನಿಸಿದ್ದರು. ಕಾರಿನಲ್ಲಿ ಬೆಳಗಾವಿ ಡಿಸಿಸಿ ಬ್ಯಾಂಕ್ ಸೆಕ್ರೇಟರಿ ಭೀಮಪ್ಪ ಅವರನ್ನು ಕಾರಿನಲ್ಲಿ ಕಿಡ್ನಾಪ್ ಮಾಡಿಕೊಂಡು ತೆರಳುತ್ತಿದ್ದರು. ಈ ವಿಷಯ ತಿಳಿದಂತ ಬಿಜೆಪಿ ಕಾರ್ಯಕರ್ತರು ಕಾರನ್ನು ತಡೆದಿದ್ದಾರೆ. ಅಲ್ಲದೇ ಕಾರಿನ ಗ್ಲಾಸ್ ಒಡೆಯಲು ಯತ್ನಿಸಿದಂತ ವೇಳೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ಉಂಟಾಗಿದೆ. ಬಿಜೆಪಿ ಬೆಂಬಲಿತ ಕಾರ್ಯಕರ್ತರು ಕಾರನ್ನು ಸುತ್ತುವರೆದು ಅದರಲ್ಲಿದ್ದಂತ ಸೆಕ್ರೆಟರಿ ಭೀಮಪ್ಪ ಅವರನ್ನು ಕೆಳಗೆ ಇಳಿಸಿದ್ದಾರೆ. ಗಲಾಟೆ ತಾರಕ್ಕೆ ಏರಿದಂತ ಸಂದರ್ಭದಲ್ಲಿ ಪೊಲೀಸರು ತಿಳಿಗೊಳಿಸೋದಕ್ಕೆ ಯತ್ನಿಸಿದ್ದಾರೆ. ಆದರೇ ಅದು ಸಾಧ್ಯವಾಗದೇ ಪೊಲೀಸರ ಎದುರೇ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರು ಕೈ ಕೈ ಮಿಲಾಯಿಸಿಕೊಂಡು ಹೊಡೆದಾಡಿಕೊಂಡಿರುವುದಾಗಿ ಹೇಳಲಾಗುತ್ತಿದೆ.

Read More

ಶಿವಮೊಗ್ಗ: ಸಾಗರದ ಶ್ರೀ ಮಾರಿಕಾಂಬಾ ದೇವಿ ನ್ಯಾಸ ಪ್ರತಿಷ್ಠಾನದ ಸರ್ವ ಸದಸ್ಯರ ಸಭೆಯನ್ನು ದಿನಾಂಕ 20-09-2025ರಂದು ಕರೆಯಲಾಗಿದೆ. ಈ ಕುರಿತಂತೆ ಶಿವಮೊಗ್ಗ ಜಿಲ್ಲೆಯ ಸಾಗರದ ಶ್ರೀ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನದಿಂದ ಮಾಹಿತಿ ನೀಡಲಾಗಿದ್ದು, ದಿನಾಂಕ 20-09-2025ರ ಶನಿವಾರದಂದು ಸಾಗರದ ಆರ್ಯ ಈಡಿಗರ ಕಲ್ಯಾಣ ಮಂದಿರ, ವರದಹಳ್ಳಿ ರಸ್ತೆಯಲ್ಲಿ ಸರ್ವ ಸದಸ್ಯರ ಸಭೆಯನ್ನು ನಿಗದಿ ಪಡಿಸಲಾಗಿದೆ. ಶ್ರೀ ಮಾರಿಕಾಂಬಾ ದೇವಿ ನ್ಯಾಸ ಪ್ರತಿಷ್ಠಾನದ ಅಧ್ಯಕ್ಷ  ಕೆ.ಎನ್ ನಾಗೇಂದ್ರ ಅಧ್ಯಕ್ಷತೆಯಲ್ಲಿ ಸರ್ವ ಸದಸ್ಯ ಸಾಮಾನ್ಯ ಸಭೆಯನ್ನು ಬೆಳಗ್ಗೆ 10 ಗಂಟೆಗೆ ಕರೆಯಲಾಗಿದೆ ಎಂದಿದ್ದಾರೆ. ಈ ಸಭೆಯಲ್ಲಿ ಶ್ರೀ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನದ ಗೌರವಾಧ್ಯಕ್ಷರಾದ ಸಾಗರ-ಹೊಸನಗರ ತಾಲ್ಲೂಕು ಶಾಸಕರಾದಂತ ಗೋಪಾಲಕೃಷ್ಣ ಬೇಳೂರು ಇವರ ಉಪಸ್ಥಿತಿಯಲ್ಲಿ ಸಭೆ ನಡೆಯಲಿದೆ. ಈ ಸಭೆಗೆ ಸದಸ್ಯರೆಲ್ಲರೂ ಹಾಜರಿರುವಂತೆ ತಿಳಿಸಲಾಗಿದೆ. ಇನ್ನೂ ಶ್ರೀ ಮಾರಿಕಾಂಬಾ ನ್ಯಾಸ ಪ್ರತಿಷ್ಠಾನದ ಸದಸ್ಯರುಗಳಿಗೆ ಈಗಾಗಲೇ ಸಭೆಯ ನೋಟಿಸ್ ಅನ್ನು ಅವರವರ ವಿಳಾಸಕ್ಕೆ ಕಳುಹಿಸಲಾಗಿದೆ ಎಂದು ಹೇಳಿದೆ. ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು…

Read More

ಬೆಂಗಳೂರು : ಯಾರೇ ಕಾನೂನಿಗೆ ವಿರುದ್ಧವಾಗಿ ನಡೆದುಕೊಂಡಿದ್ದರಡ, ಅಂಥವರ ವಿರುದ್ಧ ಪೊಲೀಸರು ಕ್ರಮ ತೆಗೆದುಕೊಳ್ಳುತ್ತಾರೆ. ಅಲ್ಲಿಗೆ ಪ್ರಚೋದನಾಕಾರಿಯಾಗಿ ಭಾಷಣ ಮಾಡುವುದು ಸರಿಯಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ಸದಾಶಿವನಗರದಲ್ಲಿ ಮಾತಾನಾಡಿದ ಅವರು, ಮದ್ದೂರು ಘಟನೆಯ ವಿಚಾರದಲ್ಲಿ ನಾವು ಮೊದಲಿಂದ ಹೇಳುತ್ತಿದ್ದೇವೆ. ಇದರಲ್ಲಿ ರಾಜಕೀಯ ಮಾಡಬೇಡಿ. ಪೊಲೀಸರಿಗೆ ಬಿಡಿ, ಕಲ್ಲು ಹೊಡೆದವರನ್ನು ಹಿಡಿದು, ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳುತ್ತಾರೆ. ಮುಸಲ್ಮಾನ ಅಗಿರಲಿ, ಹಿಂದು ಆಗಿರಲಿ, ಮತ್ತೊಬ್ಬ ಆಗಿರಲಿ, ಯಾರೇ ಕಾನೂನು ವಿರುದ್ಧವಾಗಿ ನಡೆದುಕೊಂಡಿದ್ದರೆ ಕ್ರಮ ತೆಗೆದುಕೊಳ್ಳುತ್ತಾರೆ. ಈ ವಿಚಾರವನ್ನು ಪೊಲೀಸರಿಗೆ ಬಿಟ್ಟುಬಿಡಬೇಕು. ಅದೆಲ್ಲ ಬಿಟ್ಟು, ಇವರು ಹೋಗಿ ಪ್ರಚೋದನಾಕಾರಿಯಾಗಿ ಭಾಷಣ ಮಾಡಿ, ಮತ್ತೇ ಜನರನ್ನೆಲ್ಲ ಎಬ್ಬಿಸುವುದು ಸರಿಯಲ್ಲ ಎಂದರು. ವೀರಾವೇಷದಲ್ಲಿ ಮಾತಾಡಿ, ಬಳಸಬಾರದ ಪದಗಳನ್ನು ಬಳಸುವುದರಿಂದ ಏನು ಸಾಧನೆ ಮಾಡುತ್ತಾರೋ? ಒಂದಂತು ನಿಜ ರಾಜಕೀಯ ಕಾರಣಕ್ಕಾಗಿ ಇದೆಲ್ಲ ಮಾಡುತ್ತಿದ್ದಾರೆ ಎಂಬುದು ಸ್ಪಷ್ಟವಾಗಿ ಕಾಣುತ್ತಿದೆ. ಎಎಸ್‌ಪಿ ವರ್ಗಾವಣೆ ಮಾಡಿರುವ ಕುರಿತು ಮಾತನಾಡಿ, ಆಂತರಿಕವಾಗಿ ಎಲ್ಲಿ ಲೋಪ ಕಂಡಿದೆ, ಅದಕ್ಕೆ ಕ್ರಮ…

Read More

ಬೆಂಗಳೂರು: ಇಂದು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣದಲ್ಲಿ ಸಿಎಂ ಸಿದ್ಧರಾಮಯ್ಯ ಅವರು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2025ರ ಕುರಿತಂತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಅವರ ಅವರ ಪತ್ರಿಕಾಗೋಷ್ಢಿಯ ಹೈಲೈಟ್ಸ್ ಮುಂದಿದೆ ಓದಿ. ಮಧುಸೂದನ್ ಅವರ ಸಮಿತಿ ಮತ್ತು ಹಿಂದುಳಿದ ವರ್ಗಗಳ ಆಯೋಗ ವೈಜ್ಞಾನಿಕ‌ ಮಾನದಂಡದಲ್ಲಿ ಸಮೀಕ್ಷೆ ನಡೆಸಿ ಡಿಸೆಂಬರ್ ಒಳಗೆ ವರದಿ ನೀಡಲಿದ್ದಾರೆ. ಎಲ್ಲಾ ಜಾತಿ-ಧರ್ಮದವರ ದತ್ತಾಂಶ ಅಂಗೈಯಲ್ಲಿದ್ದರೆ ಮಾತ್ರ ಸಾಮಾಜಿಕ ನ್ಯಾಯದ ವಿಶೇಷ ಕಾರ್ಯಕ್ರಮಗಳನ್ನು ರೂಪಿಸಲು ಸಾಧ್ಯ. ಅಮೆರಿಕದಲ್ಲೂ ಕರಿಯರಿಗೆ affirmative action ಅಂತ ಇದೆ, ನಮ್ಮಲ್ಲಿ ಮೀಸಲಾತಿ ಇದೆ. ನಾವು ಬಡತನ, ನಿರುದ್ಯೋಗ, ಅನಕ್ಷರತೆ ಹೋಗಲಾಡಿದಲು ಸಂವಿಧಾನದ ಕಲಂ 15(), 16(5) ಅಡಿಯಲ್ಲಿ ವಿಶೇಷ ಕಾರ್ಯಕ್ರಮಗಳನ್ನು ರೂಪಿಸಬೇಕಿದೆ. ಹೊಸದಾಗಿ 7 ಕೋಟಿ ಜನರ ಸಾಮಾಜಿಕ, ಶೈಕ್ಷಣಿಕ ಸ್ಥಿತಿ ಗತಿ ಅರಿಯಲು ಈ ಸಮೀಕ್ಷೆ ನಡೆಸಲಾಗುತ್ತಿದೆ. ಆದಷ್ಟೂ ಜಾಗ್ರತೆಯಿಂದ ಸಮೀಕ್ಷೆ ನಡೆಸಿ ವರದಿ ಕೊಡಲು ಸೂಚನೆ ನೀಡಿದ್ದೇವೆ ಎಂದರು. ಹಿಂದುಳಿದ ಆಯೋಗದವರು ಡಿಸೆಂಬರ್ ಒಳಗೆ ವರದಿ ಕೊಡುವ ನಿರೀಕ್ಷೆಯಲ್ಲಿದ್ದಾರೆ. 22 ಸೆಪ್ಟೆಂಬರ್ 2025 ಅಕ್ಟೋಬರ್ 7 ರವರೊಳಗೆ ಸಮೀಕ್ಷೆ ಮುಗಿಸಲು…

Read More

ಮಂಡ್ಯ: ಶ್ರೀರಂಗಪಟ್ಟಣ ದಸರಾವನ್ನು ಈ ಬಾರಿ ಸೆಪ್ಟೆಂಬರ್ 25 ರಿಂದ 28 ರವರೆಗೆ ಅದ್ದೂರಿಯಾಗಿ ಆಚರಿಸಲಾಗುತ್ತಿದ್ದು, ಲೋಗೋ ವನ್ನು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಬಿಡುಗಡೆಗೊಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಲೋಗೋ‌ ಬಿಡುಗಡೆಯ ನಂತರ ಮಾತನಾಡಿ ಈ ಬಾರಿಯ ಶ್ರೀರಂಗಪಟ್ಟಣ ದಸರಾ ಕಾರ್ಯಕ್ರಮವನ್ನು ಖ್ಯಾತ ಚಲನಚಿತ್ರ ನಿರ್ದೇಶಕ ಹಾಗೂ ನಟ ಟಿ.ಎಸ್ ನಾಗಾಭರಣ ಅವರು ನೆರವೇರಿಸಲಿದ್ದಾರೆ ಎಂದರು. ಈ ಬಾರಿಯ ಕಾರ್ಯಕ್ರಮಗಳನ್ನು ಸಹ ಉತ್ತಮವಾಗಿ ಸಂಘಟಿಸಲಾಗುವುದು. ಈಗಾಗಲೇ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಸೆ. 25 ರಂದು ಉದ್ಘಾಟನೆ ಹಾಗೂ 28 ರಂದು ಸಮಾರೋಪ ಸಮಾರಂಭ ನಡೆಯಲಿದೆ ಎಂದರು. ಇದೇ ಸಂದರ್ಭದಲ್ಲಿ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ರಮೇಶ್‌ ಬಾಬು ಬಂಡಿಸಿದ್ದೇಗೌಡ, ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ಪಿ.ರವಿಕುಮಾರ್, ಜಿಲ್ಲಾಧಿಕಾರಿ ಡಾ: ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್. ನಂದಿನಿ, ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ ಸೇರಿದಂತೆ ಇನ್ನಿತರೆ ಗಣ್ಯರು ಉಪಸ್ಥಿತರಿದ್ದರು. ವರದಿ: ಗಿರೀಶ್ ರಾಜ್, ಮಂಡ್ಯ https://kannadanewsnow.com/kannada/cumin-water-vs-chia-seeds-which-is-better-for-weight-loss-heres-the-information/

Read More

ತೂಕ ಇಳಿಸಿಕೊಳ್ಳಲು ನೈಸರ್ಗಿಕ ಪರಿಹಾರಗಳ ವಿಷಯಕ್ಕೆ ಬಂದರೆ, ಅಡುಗೆಮನೆಯಲ್ಲಿ ಸಿಗುವ ಆಹಾರ ಪದಾರ್ಥಗಳು ಹೆಚ್ಚಾಗಿ ಗಮನ ಸೆಳೆಯುತ್ತವೆ. ಎರಡು ಜನಪ್ರಿಯ ಪಾನೀಯಗಳಾದ ಜೀರಿಗೆ ನೀರು ಮತ್ತು ಚಿಯಾ ಬೀಜಗಳ ನೀರು ಚಯಾಪಚಯ ಕ್ರಿಯೆಯನ್ನು ಹೆಚ್ಚಿಸಲು ಮತ್ತು ಜೀರ್ಣಕ್ರಿಯೆಗೆ ಸಹಾಯ ಮಾಡಲು ವ್ಯಾಪಕವಾಗಿ ಶಿಫಾರಸು ಮಾಡಲ್ಪಡುತ್ತವೆ. ಆದರೆ ತೂಕ ಇಳಿಸಿಕೊಳ್ಳಲು ಯಾವುದು ಹೆಚ್ಚು ಪರಿಣಾಮಕಾರಿ? ಬನ್ನಿ ನೋಡೋಣ. ಪೌಷ್ಟಿಕಾಂಶದ ಮೌಲ್ಯ ಜೀರಿಗೆ (ಜೀರಿಗೆ) ಉತ್ಕರ್ಷಣ ನಿರೋಧಕಗಳು ಮತ್ತು ಕಬ್ಬಿಣದಿಂದ ಸಮೃದ್ಧವಾಗಿದೆ ಜೀರ್ಣಕ್ರಿಯೆಯನ್ನು ಉತ್ತೇಜಿಸುವ ಸಾರಭೂತ ತೈಲಗಳನ್ನು ಹೊಂದಿರುತ್ತದೆ ಕಡಿಮೆ ಕ್ಯಾಲೋರಿಗಳು ಚಿಯಾ ಬೀಜಗಳು ಒಮೆಗಾ-3 ಕೊಬ್ಬಿನಾಮ್ಲಗಳು, ಫೈಬರ್ ಮತ್ತು ಸಸ್ಯ ಆಧಾರಿತ ಪ್ರೋಟೀನ್‌ಗಳಲ್ಲಿ ಅಧಿಕವಾಗಿದೆ ಕ್ಯಾಲ್ಸಿಯಂ, ಮೆಗ್ನೀಸಿಯಮ್ ಮತ್ತು ಉತ್ಕರ್ಷಣ ನಿರೋಧಕಗಳಿಂದ ತುಂಬಿರುತ್ತದೆ ನೆನೆಸಿದಾಗ ವಿಸ್ತರಿಸುತ್ತದೆ, ಹೊಟ್ಟೆ ತುಂಬಿದ ಭಾವನೆಯನ್ನು ಉಂಟುಮಾಡುತ್ತದೆ ತೂಕ ನಷ್ಟಕ್ಕೆ ಪ್ರಯೋಜನಗಳು ಜೀರಾ ಪಾನೀಯ ನೈಸರ್ಗಿಕವಾಗಿ ಚಯಾಪಚಯ ಕ್ರಿಯೆಯನ್ನು ಹೆಚ್ಚಿಸುತ್ತದೆ ಉಬ್ಬುವಿಕೆಯನ್ನು ಕಡಿಮೆ ಮಾಡುತ್ತದೆ ಮತ್ತು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ ಚಿಯಾ…

Read More

ಮಂಡ್ಯ: ಜಿಲ್ಲೆಯ ಮದ್ದೂರಲ್ಲಿ ಗಣೇಶೋತ್ಸವ ವಿಸರ್ಜನಾ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದು, ಗಲಾಟೆಯಾಗಿತ್ತು. ಈ ಪ್ರಕರಣದಲ್ಲಿ ಕರ್ತವ್ಯ ಲೋಪದ ಹಿನ್ನಲೆಯಲ್ಲಿ ಪೋಲೀಸ್ ಠಾಣೆಯ ಇನ್ಸ್ಪೆಕ್ಟರ್ ಶಿವಕುಮಾರ್ ತಲೆದಂಡವಾಗಿದೆ. ಅವರನ್ನು ಅಮಾನತುಗೊಳಿಸಿ ಸರ್ಕಾರ ಆದೇಶಿಸಿದೆ. ಮಂಡ್ಯದಲ್ಲಿ ಸಚಿವ ಎನ್.ಚಲುವರಾಯಸ್ವಾಮಿ ಮದ್ದೂರು ಗಲಭೆ ಪ್ರಕರಣದಲ್ಲಿ ಎಎಸ್ಪಿ ವರ್ಗಾವಣೆ ವಿಚಾರವಾಗಿ ಮಾತನಾಡಿ ಅವರ ಅವಧಿ ಮುಗಿದಿತ್ತು. ಡಿಸೆಂಬರ್ ವರೆಗೂ ಮುಂದುವರೆಸಲು ಹೇಳಿದ್ದೆ. ಎಎಸ್ಪಿ ವರ್ಗಾವಣೆಗೂ ಮದ್ದೂರು ಪ್ರಕರಣಕ್ಕೂ ಸಂಬಂಧ ಇಲ್ಲ. ಸಾಮಾನ್ಯ ವರ್ಗಾವಣೆಯಂತೆ ವರ್ಗವಾಗಿದೆ. ತಿಮ್ಮಯ್ಯ ಒಳ್ಳೆಯ ಕೆಲಸ ಮಾಡಿದ್ದಾರೆ. ಸರ್ಕಾರದಲ್ಲಿ ವರ್ಗಾವಣೆ ಪ್ರಕ್ರಿಯೆ ಸಹಜ. ನೂರಕ್ಕೆ ಲಕ್ಷ ಪರ್ಸೆಂಟ್ ಮದ್ದೂರು ಗಲಾಟೆಗೂ ವರ್ಗಾವಣೆಗೂ ಸಂಬಂಧ ಇಲ್ಲ ಎಂದರು. ಈ ಘಟನೆಗೆ ಪೊಲೀಸ್ ವೈಫಲ್ಯ ಕಾರಣ ಎಂಬ ವಿಚಾರವಾಗಿ ಪ್ರತಿಕ್ರಿಯಿಸಿದಂತ ಅವರು ಇನ್ನು ವರದಿ ಬಂದಿಲ್ಲ. ವರದಿ ಬಂದ ನಂತರ ಆ ಬಗ್ಗೆ ಮಾಹಿತಿ ನೀಡುವೆ. ಘಟನೆ ಸಂಬಂಧ ಮತ್ತೋರ್ವ ಪೊಲೀಸ್ ಅಧಿಕಾರಿ ತಲೆದಂಡವಾಗಿದೆ. ಮದ್ದೂರು ಟೌನ್ ಇನ್ಸ್ ಪೆಕ್ಟರ್ ಶಿವಕುಮಾರ್ ಸಸ್ಪೆಂಡ್ ಮಾಡಲಾಗಿದೆ.…

Read More

ಶಿವಮೊಗ್ಗ: ಜಿಲ್ಲೆಯ ವಾರ್ತಾಧಿಕಾರಿಯಾಗಿದ್ದಂತ ಮಾರುತಿ.ಆರ್ ಅವರನ್ನು ಸರ್ಕಾರ ದಿಢೀರ್ ವರ್ಗಾವಣೆ ಮಾಡಲಾಗಿತ್ತು. ಅಲ್ಲದೇ ಶಿವಮೊಗ್ಗ ನೂತನ ವಾರ್ತಾಧಿಕಾರಿಯಾಗಿ ಧನಂಜಯ ಅವರನ್ನು ನೇಮಕ ಮಾಡಲಾಗಿತ್ತು. ರಾಜ್ಯ ಸರ್ಕಾರದ ಈ ಆದೇಶವನ್ನು ಪ್ರಶ್ನಿಸಿ ಮಾರುತಿ.ಆರ್ ಅವರು ಕೆಎಟಿ ಮೊರೆ ಹೋಗಿದ್ದರು. ಈ ಪ್ರಕರಣವನ್ನು ವಿಚಾರಣೆ ನಡೆಸಿದಂತ ಕೋರ್ಟ್ ಸರ್ಕಾದ ವರ್ಗಾವಣೆ ಆದೇಶಕ್ಕೆ ತಡೆಯಾಜ್ಞೆ ನೀಡಿದೆ. ಅಲ್ಲದೇ ಶಿವಮೊಗ್ಗ ವಾರ್ತಾಧಿಕಾರಿಯಾಗಿಯೇ ಮುಂದುವರಿಕೆ ಆದೇಶ ಮಾಡಿದೆ. ಆಗಸ್ಟ್.22ರಂದು ವಾರ್ತಾ ಇಲಾಖೆಯ ಅಧೀನ ಕಾರ್ಯದರ್ಶಿಯವರು ಶಿವಮೊಗ್ಗ ವಾರ್ತಾಧಿಕಾರಿಯಾಗಿದ್ದಂತ ಮಾರುತಿ.ಆರ್ ಅವರನ್ನು ವರ್ಗಾವಣೆ ಮಾಡಿ ಆದೇಶಿಸಿದ್ದರು. ಈ ಆದೇಶದ ಕಾರಣ ಅಂದೇ ವಾರ್ತಾ ಇಲಾಖೆಯ ಆಯುಕ್ತರು ಮಾರುತಿ.ಆರ್ ಅವರನ್ನು ವರ್ಗಾವಣೆಗೊಳಿಸಿ ಚಾಲನಾದೇಶವನ್ನು ಮಾಡಿದ್ದರು. ಮಾರುತಿ.ಆರ್ ಅವರ ಸ್ಥಾನಕ್ಕೆ ದಾವಣಗೆರೆಯ ವಾರ್ತಾಧಿಕಾರಿಯಾಗಿದ್ದಂತ ಧನಂಜಯ ಅವರನ್ನು ನೇಮಕ ಮಾಡಲಾಗಿತ್ತು. ರಾಜ್ಯ ಸರ್ಕಾರದ ವರ್ಗಾವಣೆ ಆದೇಶವನ್ನು ಪ್ರಶ್ನಿಸಿ ಆಗಸ್ಟ್.23ರಂದು ಶಿವಮೊಗ್ಗ ವಾರ್ತಾಧಿಕಾರಿ ಮಾರುತಿ.ಆರ್ ಅವರು ಕೆಎಟಿ ಮೊರೆ ಹೋಗಿದ್ದರು. ಕೆಎಟಿಯಲ್ಲಿ OA A.No.3832/2025 ರಡಿ ಸಲ್ಲಿಸಲಾಗಿದ್ದಂತ ಅರ್ಜಿಯನ್ನು ವಿಚಾರಣೆ ನಡೆಸಿದಂತ ಕರ್ನಾಟಕ ಆಡಳಿತ ನ್ಯಾಯಮಂಡಳಿಯು…

Read More

ಬಾದಾಮಿ ಪ್ರಪಂಚದಾದ್ಯಂತ ಆನಂದಿಸಲ್ಪಡುವ ಪೌಷ್ಟಿಕ ಮತ್ತು ರುಚಿಕರವಾದ ಆಹಾರವಾಗಿದ್ದು, ಆರೋಗ್ಯಕರ ಕೊಬ್ಬುಗಳು, ಪ್ರೋಟೀನ್, ಜೀವಸತ್ವಗಳು ಮತ್ತು ಖನಿಜಗಳ ಸಮೃದ್ಧ ಅಂಶಕ್ಕೆ ಹೆಸರುವಾಸಿಯಾಗಿದೆ. ಅನೇಕ ಜನರು ಬಾದಾಮಿಯನ್ನು ತಿನ್ನುವ ಮೊದಲು ರಾತ್ರಿಯಿಡೀ ನೆನೆಸಿಡುತ್ತಾರೆ, ಈ ಪ್ರಕ್ರಿಯೆಯು ಅವರ ಆರೋಗ್ಯ ಪ್ರಯೋಜನಗಳನ್ನು ಹೆಚ್ಚಿಸುತ್ತದೆ ಮತ್ತು ಜೀರ್ಣಿಸಿಕೊಳ್ಳಲು ಸುಲಭವಾಗುತ್ತದೆ ಎಂದು ನಂಬುತ್ತಾರೆ. ಆದರೆ ಬಾದಾಮಿಯನ್ನು ನೆನೆಸುವುದು ನಿಜವಾಗಿಯೂ ಪ್ರಯೋಜನಕಾರಿಯೇ ಅಥವಾ ಇದು ಪೀಳಿಗೆಯಿಂದ ಪೀಳಿಗೆಗೆ ಬಂದಿರುವ ಸಾಂಪ್ರದಾಯಿಕ ಅಭ್ಯಾಸವೇನು ಎನ್ನುವ ಬಗ್ಗೆ ಮುಂದೆ ಓದಿ. ಬಾದಾಮಿಯನ್ನು ನೆನೆಸುವುದರಿಂದ ಫೈಟಿಕ್ ಆಮ್ಲದಂತಹ ಪೋಷಕಾಂಶ ವಿರೋಧಿ ಅಂಶಗಳು ಕಡಿಮೆಯಾಗುತ್ತವೆ ಎಂದು ಹೇಳಲಾಗುತ್ತದೆ, ಇದು ಖನಿಜ ಹೀರಿಕೊಳ್ಳುವಿಕೆಗೆ ಅಡ್ಡಿಯಾಗುತ್ತದೆ. ಹೆಚ್ಚುವರಿಯಾಗಿ, ನೆನೆಸಿದ ಬಾದಾಮಿಯ ಮೃದುವಾಗಿರುತ್ತದೆ, ಕೆಲವು ಜನರಿಗೆ ಅವುಗಳನ್ನು ಅಗಿಯಲು ಮತ್ತು ಜೀರ್ಣಿಸಿಕೊಳ್ಳಲು ಸುಲಭವಾಗುತ್ತದೆ. ಆದಾಗ್ಯೂ, ಪೌಷ್ಠಿಕಾಂಶದ ಮೇಲಿನ ಒಟ್ಟಾರೆ ಪರಿಣಾಮವು ವೈಯಕ್ತಿಕ ಆರೋಗ್ಯ ಅಗತ್ಯಗಳು ಮತ್ತು ಆದ್ಯತೆಗಳನ್ನು ಅವಲಂಬಿಸಿ ಬದಲಾಗಬಹುದು. ಬಾದಾಮಿಯನ್ನು ನೆನೆಸಿ ತಿನ್ನುವುದರ ಪ್ರಯೋಜನಗಳು ಬಾದಾಮಿಯನ್ನು ನೆನೆಸುವುದರಿಂದ ಹಲವಾರು ಪ್ರಯೋಜನಗಳಿವೆ, ಅವುಗಳೆಂದರೆ: 1. ಮೆದುಳಿನ ಕಾರ್ಯವನ್ನು ಹೆಚ್ಚಿಸುತ್ತದೆ…

Read More