Author: kannadanewsnow09

ಬೆಂಗಳೂರು: ಬಿಜೆಪಿ ನಾಯಕರು ‘ಲಾಲ್‌ಬಾಗ್‌ ಉಳಿಸಿ’ ಎಂದು ನಾಟಕವಾಡುತ್ತಿದ್ದಾರೆ. ಲಾಲ್‌ಬಾಗ್‌ ಬಗ್ಗೆ ನಿಮ್ಮದು ಕಾಳಜಿಯೋ? ರಾಜಕೀಯವೋ? ಎಂಬುದಾಗಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಪ್ರಶ್ನಿಸಿದ್ದಾರೆ. ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ನಿಮಗೆ ಲಾಲ್‌ಬಾಗ್‌ ಬಗ್ಗೆ ನಿಜವಾಗಿಯೂ ಕಾಳಜಿ ಇದ್ದರೆ, ಇಡೀ ಯೋಜನೆಯನ್ನು ರದ್ದುಪಡಿಸಲು ಹಠ ಹಿಡಿಯುವ ಬದಲು, ಸುರಂಗದ ಪ್ರವೇಶ ಮತ್ತು ನಿರ್ಗಮನಕ್ಕೆ ಪರ್ಯಾಯ ಜಾಗವನ್ನು ಸೂಚಿಸುವ ಧೈರ್ಯ ತೋರಿ. ಅದನ್ನು ಬಿಟ್ಟು, ಜನರ ದಾರಿ ತಪ್ಪಿಸುವ ರಾಜಕೀಯ ಗಿಮಿಕ್ ಏಕೆ? ಎಂದು ಕೇಳಿದ್ದಾರೆ. ನಿಮ್ಮ ದ್ವಂದ್ವ ನೀತಿಗೆ ಇದಕ್ಕಿಂತ ಸಾಕ್ಷಿ ಬೇಕೇ? ಎಂಬುದಾಗಿ ಈ ಕೆಳಗಿನಂತೆ ಪಟ್ಟಿ ನೀಡಿದ್ದಾರೆ. ಡಾ. ಎಂ.ಎಚ್. ಮರಿಗೌಡರು ಲಾಲ್‌ಬಾಗ್ ಅನ್ನು 240 ಎಕರೆಗೆ ವಿಸ್ತರಿಸಿ, ತೋಟಗಾರಿಕಾ ಕ್ಷೇತ್ರಕ್ಕೆ ಮಹತ್ತರ ಕೊಡುಗೆ ನೀಡಿದರು. 2003ರಲ್ಲಿ ಕಾಂಗ್ರೆಸ್ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಶ್ರೀ ಎಸ್‌ಎಂ ಕೃಷ್ಣ ಅವರು ಲಾಲ್‌ಬಾಗ್‌ನ ಪುನರುಜ್ಜೀವನಕ್ಕಾಗಿ ₹17 ಕೋಟಿ ಮಂಜೂರು ಮಾಡಿದ್ದರು. ಎರಡು ಬಾರಿ ಅಧಿಕಾರದಲ್ಲಿದ್ದ ಬಿಜೆಪಿ ಲಾಲ್‌ಬಾಗ್‌ಗೆ ಏನು ಕೊಡುಗೆ…

Read More

ವಿಜಯಪುರ: ಜನಪ್ರತಿನಿಧಿ ಅಂದ್ರೆ ತಮ್ಮನ್ನು ಅರಸಿ ಬರುವಂತ ಜನರ ಕಷ್ಟವನ್ನು ಕೇಳಿ, ಅದಕ್ಕೆ ಸೂಕ್ತ ರೀತಿಯಲ್ಲಿ ಪ್ರತಿಸ್ಪಂದಿಸೋದು. ಹೀಗೆ ಪ್ರತಿಸ್ಪಂದಿಸಿದಾಗಲೇ ಜನಪ್ರತಿನಿಧಿ ಅಂದ್ರೆ ಹೀಗೆ ಇರಬೇಕು ಎಂಬುದಾಗೇ ಅನೇಕರು ಹೇಳುತ್ತಾರೆ. ಇದಕ್ಕೆ ಸಾಕ್ಷಿ ಎನ್ನುವಂತೆ ಸಚಿವ ಎಂ.ಬಿ ಪಾಟೀಲ್ 6 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಎಂಬಿಬಿಎಸ್ ಶಿಕ್ಷಣ ನೆರವೇರಿಸಲು ಲಕ್ಷ ಲಕ್ಷ ಆರ್ಥಿಕ ನೆರವಿನ ಸಹಾಯ ಹಸ್ತ ಚಾಚಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಅವರು, ವಿಜಯಪುರ ಜಿಲ್ಲೆಯ 6 ಪ್ರತಿಭಾವಂತ ವಿದ್ಯಾರ್ಥಿಗಳಿಗೆ MBBS ಶಿಕ್ಷಣಕ್ಕೆ ನೆರವಾಗಿದ್ದೇನೆ. ನೀಟ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಸರ್ಕಾರಿ ಕೋಟಾದಡಿ MBBS ಸೀಟು ಪಡೆದರೂ, ಆರ್ಥಿಕ ಅಡಚಣೆಯಿಂದಾಗಿ ತಮ್ಮ ಕನಸಿನ ಶಿಕ್ಷಣವನ್ನು ಮುಂದುವರಿಸಲಾಗದೆ ಕಷ್ಟಪಡುತ್ತಿದ್ದ 6 ಮಂದಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನೆರವು ನೀಡಿದ ಸಂತಸ ನನ್ನದು ಎಂದಿದ್ದಾರೆ. ಈ ಕೆಳಕಂಡ ವಿದ್ಯಾರ್ಥಿಗಳು ಎಂಬಿಬಿಎಸ್ ವ್ಯಾಸಂಗ ಮುಗಿಸಲು ಸಚಿವ ಎಂ.ಬಿ ಪಾಟೀಲ್ ಆರ್ಥಿಕ ನೆರವು ಬಾಬಾನಗರದ ಕೃಷಿ ಕಾರ್ಮಿಕ ಗಣಪತಿ ಶಿಂಧೆ ಅವರ ಪುತ್ರಿ…

Read More

ಕೊಪ್ಪಳ: ರಾಜ್ಯದಲ್ಲಿ ಸಿಎಂ, ಕೆಪಿಸಿಸಿ ಅಧ್ಯಕ್ಷರ ಹುದ್ದೆ ಖಾಲಿಯಿಲ್ಲ. 2028ರವರೆಗೆ ಸಿದ್ಧರಾಮಯ್ಯನವರೇ ಮುಖ್ಯಮಂತ್ರಿಯಾಗಿ ಇರಲಿದ್ದಾರೆ. ಆ ಬಳಿಕ ಡಿ.ಕೆ ಶಿವಕುಮಾರ್ ಸಿಎಂ ಆಗಬೇಕು ಎಂಬುದು ನನ್ನ ಆಸೆಯಾಗಿದೆ ಎಂಬುದಾಗಿ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸಿಎಂ ಆಗಬೇಕು ಎನ್ನುವಂತ ಆಸೆ ಎಲ್ಲರಿಗೂ ಇರುತ್ತದೆ. ಡಿ.ಕೆ ಶಿವಕುಮಾರ್ ಅವರ ಅಭಿಮಾನಿಗಳು ಕೂಡ ಆಸೆಯನ್ನು ಇಟ್ಟುಕೊಂಡಿರುತ್ತಾರೆ. ಸಿಎಂ ಸಿದ್ಧರಾಮಯ್ಯ ಅವರಿಗೆ ಎಲ್ಲಾ ಶಾಸಕರ ಬೆಂಬಲವಿದ್ದು, ಅವರೇ ಪೂರ್ಣ ಅವಧಿಗೆ ಮುಖ್ಯಮಂತ್ರಿ ಆಗಿರುತ್ತಾರೆ. ಆ ಬಳಿಕ ಹೈಕಮಾಂಡ್ ತೀರ್ಮಾನ ಕೈಗೊಳ್ಳುತ್ತದೆ ಎಂದರು. ಡಿ.ಕೆ ಶಿವಕುಮಾರ್ ಅವರು ಅಪಾರ ದೈವಭಕ್ತರಾಗಿದ್ದಾರೆ. ಮೊದಲಿನಿಂದಲೂ ಅವರು ದೇವಸ್ಥಾನಗಳಿಗೆ ಹೋಗುವುದು ಸಾಮಾನ್ಯವಾಗಿದೆ. ಅವರು ದೇವಸ್ಥಾನಕ್ಕೆ ಹೋಗೋದಕ್ಕೂ, ಮುಖ್ಯಮಂತ್ರಿ ಸ್ಥಾನದ ಪೈಪೋಟಿಗೂ ಯಾವುದೇ ಸಂಬಂಧವಿಲ್ಲ. ನವೆಂಬರ್ ನಲ್ಲಿ ರಾಜ್ಯದಲ್ಲಿ ಯಾವುದೇ ಕ್ರಾಂತಿಯೂ ನಡೆಯೋದಿಲ್ಲ. ಇದೆಲ್ಲವೂ ಬಿಜೆಪಿಯ ಕಟ್ಟು ಕಥೆ ಎಂದರು. https://kannadanewsnow.com/kannada/safari-shutdown-if-human-wildlife-conflict-in-bandipur-mysore-not-brought-to-a-standstill-minister-eshwar-khandre/ https://kannadanewsnow.com/kannada/another-good-news-for-the-women-of-the-state-akka-pade-to-be-launched-on-november-19th/

Read More

ಚಾಮರಾಜನಗರ: ಬಂಡೀಪುರ, ಮೈಸೂರು ಜಿಲ್ಲೆಯಲ್ಲಿ ಮಾನವ-ವನ್ಯಜೀವಿ ಸಂಘರ್ಷ ಹೆಚ್ಚುತ್ತಿದ್ದು, ಇದು ತಹಬಂದಿಗೆ ಬಾರದಿದ್ದರೆ ಸಫಾರಿಯನ್ನು ಸಂಪೂರ್ಣ ಬಂದ್ ಮಾಡುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಎಚ್ಚರಿಕೆ ನೀಡಿದ್ದಾರೆ. ಚಾಮರಾಜನಗರದ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ನಡೆದ ಅರಣ್ಯ, ಕಂದಾಯ ಮತ್ತು ಪೊಲೀಸ್ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ವನ್ಯಜೀವಿ- ಮಾನವ ಸಂಘರ್ಷ ಇರುವ ಸ್ಥಳದಲ್ಲಿ ಹೆಚ್ಚಿನ ಸಿಬ್ಬಂದಿ ನಿಯೋಜಿಸಲು ಸಿಬ್ಬಂದಿ ಕೊರತೆ ಎನ್ನುತ್ತೀರಿ. ಹಾಗಾದರೆ ಸಫಾರಿಗೆ ನಿಯೋಜಿಸಿರುವ ಸಿಬ್ಬಂದಿಯನ್ನೇ ಅಲ್ಲಿಗೆ ನಿಯೋಜಿಸಬೇಕಾಗುತ್ತದೆ ಎಂದು ಹೇಳಿದರು. ಮಾನವ-ವನ್ಯಜೀವಿ ಸಂಘರ್ಷ ತಪ್ಪಿಸಲು ಅರಣ್ಯ ಇಲಾಖೆ ಕಂದಾಯ ಮತ್ತು ಪೊಲೀಸ್ ಇಲಾಖೆಯೊಂದಿಗೆ ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು. ಸಮನ್ವಯದ ಕೊರತೆ, ಪರಸ್ಪರ ದೋಷಾರೋಪವನ್ನು ಸರ್ಕಾರ ಕ್ಷಮಿಸುವುದಿಲ್ಲ ಸಬೂಬುಗಳಿಗೆ ಅವಕಾಶವಿಲ್ಲ. ಎಲ್ಲ ಇಲಾಖೆಗಳೂ ಜೊತೆಗೂಡಿ ಮಾನವ- ವನ್ಯಜೀವಿ ಸಂಘರ್ಷ ನಿಯಂತ್ರಿಸಬೇಕು ಎಂದು ಸೂಚಿಸಿದರು. ಆನೆ, ಹುಲಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ. ಇದು ನಿಮಗೂ ತಿಳಿದಿದೆ. ಹೆಚ್ಚುತ್ತಿರುವ ಪ್ರಾಣಿಗಳಿಗೆ ಅನುಗುಣವಾಗಿ ಅರಣ್ಯ ಪ್ರದೇಶ ಹೆಚ್ಚಳ ಮಾಡಲು…

Read More

ಬೆಂಗಳೂರು: ಎಂಬಿಎ, ಎಂಸಿಎ, ಎಂಇ, ಎಂ.ಟೆಕ್, ಎಂ.ಆರ್ಕ್ ಕೋರ್ಸ್ ಗಳ ಪ್ರವೇಶಕ್ಕೆ ಮೂರನೇ ಸುತ್ತಿನ ಸೀಟು ಹಂಚಿಕೆಗೆ ಇಚ್ಛೆ/ಆಯ್ಕೆಗಳನ್ನು ದಾಖಲಿಸಲು ನ.4ರಿಂದ 6ರವರೆಗೆ ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ. 3ನೇ ಸುತ್ತಿನಲ್ಲಿ ಲಭ್ಯವಿರುವ ಸೀಟುಗಳ ವಿವರಗಳನ್ನು ನ.4ರಂದು KEA ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗುತ್ತದೆ. ಆಸಕ್ತರು ₹25,000 ಕಾಷನ್ ಡೆಪಾಸಿಟ್ ಕಟ್ಟಿ ಇಚ್ಛೆ/ಆಯ್ಕೆಗಳನ್ನು ದಾಖಲಿಸಬಹುದು ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ನ.7ರಂದು ಮಧ್ಯಾಹ್ನ 2ಗಂಟೆಗೆ ತಾತ್ಕಾಲಿಕ ಫಲಿತಾಂಶ ಪ್ರಕಟ. ನ.8ರಂದು ಮಧ್ಯಾಹ್ನ 2 ಗಂಟೆಗೆ ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ. ಸೀಟು ಹಂಚಿಕೆಯಾದವರು ನ.10ರಿಂದ 12ರವರೆಗೆ ಶುಲ್ಕ ಕಟ್ಟಿ ಸೀಟು ಖಾತರಿ ಚೀಟಿ ಡೌನ್‌ಲೋಡ್ ಮಾಡಿಕೊಂಡು ನ.13ರೊಳಗೆ ಕಾಲೇಜುಗಳಿಗೆ ವರದಿ ಮಾಡಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದ್ದಾರೆ. ಮೊದಲ ಮತ್ತು ಎರಡನೇ ಸುತ್ತಿನಲ್ಲಿ ಸಿಕ್ಕಿರುವ ಸೀಟು ರದ್ದುಪಡಿಸಿಕೊಳ್ಳಲು ನ.6ರವರೆಗೆ ಅವಕಾಶ ನೀಡಲಾಗಿದೆ. ಸೀಟು ರದ್ದುಪಡಿಸಿಕೊಂಡವರಿಗೆ 3ನೇ ಸುತ್ತಿನಲ್ಲಿ ಭಾಗವಹಿಸಲು ಅವಕಾಶ ಇರುವುದಿಲ್ಲ ಎಂದು ಅವರು…

Read More

ಬೆಂಗಳೂರು : ನಮ್ಮ ಸರ್ಕಾರ ಕ್ರೀಡೆಗೆ ನಿರಂತರವಾಗಿ ಸಹಕಾರ ನೀಡುತ್ತಿದೆ. ನಿಮ್ಮ ಉತ್ಸಾಹಕ್ಕೆ ತಕ್ಕಂತೆ ನಮ್ಮ ಪ್ರೋತ್ಸಾಹ ಸದಾ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು. ಕ್ರೀಡಾ ಮತ್ತು ಯುವಜನ ಸೇವಾ ಇಲಾಖೆ ಮತ್ತು ರಾಜ್ಯ ಒಲಂಪಿಕ್ ಅಸೋಸಿಯೇಷನ್ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 14 ವರ್ಷದೊಳಗಿನ ಮಕ್ಕಳ ಮಿನಿ ಕರ್ನಾಟಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು. ನಮ್ಮ ಸರ್ಕಾರ ಕ್ರೀಡೆಗೆ ನಿರಂತರವಾಗಿ ಪ್ರೋತ್ಸಾಹ ಕೊಟ್ಟುಕೊಂಡೇ ಬರುತ್ತಿದೆ. ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಕ್ರೀಡೆಗಳಲ್ಲಿ ಭಾಗವಹಿಸಲು ಇಂಥಾ ಕ್ರೀಡಾಕೂಟ ಸಹಕಾರಿ ಆಗುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ಉತ್ಸಾಹದಿಂದ ಭಾಗವಹಿಸಿ. ಕ್ರೀಡೆಯಲ್ಲಿ ಗೆಲುವು ಸೋಲಿಗಿಂತ ಭಾಗವಹಿಸುವಿಕೆ ಅತೀ ಮುಖ್ಯ ಎಂದರು. ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತ ಪಟುಗಳಿಗೆ ಪೊಲೀಸ್ ಇಲಾಖೆಯಲ್ಲಿ ನೇರ ನೇಮಕಾತಿ ಮಾಡಿಕೊಳ್ಳಲು ನಮ್ಮ ಸರ್ಕಾರ ನಿರ್ಧರಿಸಿದೆ. ಪೊಲೀಸ್ ಇಲಾಖೆಯಲ್ಲಿ ಶೇ3 ರಷ್ಟು ಹುದ್ದೆಗಳು ಮತ್ತು ಇತರೆ ಇಲಾಖೆಗಳಲ್ಲಿ ಶೇ2 ರಷ್ಟು ಹುದ್ದೆಗಳನ್ನು ಒದಗಿಸಲಾಗುತ್ತದೆ ಎಂದರು. ರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ವಿಜೇತರಾಗಿ ಪದಕ ತಂದ ಕ್ರೀಡಾ…

Read More

ಶಿವಮೊಗ್ಗ: ರಕ್ತದಾನದ ಮೂಲಕ ಇನ್ನೊಬ್ಬರ ಜೀವ ಉಳಿಸಲು ಸಾಧ್ಯವಿದೆ. ರಕ್ತದಾನ ಮಾಡುವುದರಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವುದಿಲ್ಲ ಎನ್ನುವುದು ವೈಜ್ಞಾನಿಕವಾಗಿ ಸಾಬೀತಾಗಿದೆ ಎಂದು ಸಾಗರ ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ರೋಟರಿ ರೆಡ್‌ಕ್ರಾಸ್ ರಕ್ತನಿಧಿ ಕೇಂದ್ರದ 7ನೇ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದಂತ ಅವರು, ನಾನು ಆರಂಭದ ದಿನಗಳಲ್ಲಿ ನಮ್ಮ ಸಂಸ್ಥೆ ವತಿಯಿಂದ ರಕ್ತದಾನ ಶಿಬಿರ ಆಯೋಜಿಸಿ ಅತಿಹೆಚ್ಚು ಯೂನಿಟ್ ರಕ್ತ ಸಂಗ್ರಹ ಮಾಡಿ ಕೊಟ್ಟಿದ್ದು ಇಂದಿಗೂ ನೆನಪಿದೆ ಎಂದು ನೆನಪು ಮಾಡಿಕೊಂಡರು. ರಕ್ತದಾನ ಅತ್ಯಂತ ಶ್ರೇಷ್ಟವಾದ ಕೆಲಸ. ತುರ್ತು ಸಂದರ್ಭದಲ್ಲಿ ರಕ್ತ ಸಿಗದೆ ಸಾವುನೋವು ಸಂಭವಿಸಿದ ಅನೇಕ ಉದಾಹರಣೆ ಇದೆ. ಸಾಗರದಲ್ಲಿ ರೋಟರಿ ರೆಡ್‌ಕ್ರಾಸ್ ರಕ್ತನಿಧಿ ಕೇಂದ್ರ ಪ್ರಾರಂಭವಾಗಿದ್ದು ಹೆಚ್ಚು ಜನರಿಗೆ ಅನುಕೂಲವಾಗಿದೆ. ರಕ್ತದಾನದ ಬಗ್ಗೆ ಸಮಾಜ ಇನ್ನಷ್ಟು ಜಾಗೃತಿ ಹೊಂದುವ ಅಗತ್ಯವಿದೆ. ಗ್ರಾಮೀಣ ಭಾಗದ ಜನರಲ್ಲಿ ರಕ್ತದಾನದ ಬಗ್ಗೆ ಇರುವ ಭಯ ನಿವಾರಣೆ ಮಾಡಬೇಕು. ಏಳು…

Read More

ತುಳಸಿ ವಿವಾಹದ ದಿನದಂದು ಮಹಿಳೆಯರು ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬಾರದು. 01, ತುಳಸಿ ವಿವಾಹದ ದಿನದಂದು ತುಳಸಿಯ ಎಲೆಗಳನ್ನು ಕೇಳಬಾರದು ಅಥವಾ ತುಳಸಿಯ ಗಿಡವನ್ನು ಕಿತ್ತು ಹಾಕಬಾರದು. 02, ತುಳಸಿ ವಿವಾಹದ ದಿನದಂದು ಮಾಂಸ ಆಹಾರವನ್ನು ಸೇವಿಸಬಾರದು, 03, ಈ ದಿನದಂದು ಆಲ್ಕೋಹಾಲ್ ಯುಕ್ತ ಪದಾರ್ಥಗಳನ್ನು ಅಥವಾ ಪಾನೀಯಗಳನ್ನು ಸೇವಿಸಬಾರದು, ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ 04 ತುಳಸಿಯ ವಿವಾಹ ದಿನದಂದು ಇತರರನ್ನು ಕೆಟ್ಟದಾಗಿ ನೋಡುವುದು ನಿಂದನೆ ಮಾಡುವುದನ್ನು ಮಾಡಬಾರದು, 05, ಈ ತುಳಸಿ ವಿವಾಹದ ದಿನದಂದು ಬೆಳ್ಳುಳ್ಳಿ ಮತ್ತು ಈರುಳ್ಳಿ ಅಂತಹ ಪದಾರ್ಥಗಳನ್ನು ಸೇವಿಸಬಾರದು, 06, ತುಳಸಿ ವಿವಾಹದ ದಿನದಂದು ಮಹಿಳೆಯರು ಅನ್ನವನ್ನು ಸೇವಿಸಬಾರದು ಅದನ್ನು ಅಶುಭವೆಂದು ಪರಿಗಣಿಸಲಾಗಿದೆ, 07, ಈ ದಿನದಂದು…

Read More

ತುಳಸಿ ವಿವಾಹ ಮತ್ತು ತುಳಸಿ ಪೂಜೆ. ಪುರಾಣ ಕಥೆಗಳ ಪ್ರಕಾರ. ಬೃಂದಾ ಎಂಬ ಹೆಣ್ಣು ಮಗಳು ಕಾಲ ನೇಮಿ ಎಂಬ ರಾಕ್ಷಸನ ಮಗಳು ಆದರೂ ಈಕೆಯೂ ಮಹಾ ವಿಷ್ಣುವಿನ ಪರಮ ಭಕ್ತ ಹಾಗೂ ರಾಕ್ಷಸನಾದ ಜಲಂಧರನನ್ನು ವಿವಾಹವಾಗುತ್ತಾಳೆ ಹಾಗೂ ಈಕೆ ಪರಮ ಪವಿತ್ರ ಮತ್ತು ಮಹಾವಿಷ್ಣುವಿನ ಆರಾಧಕ ಳಾಗಿರುವುದರಿಂದ ಈಕೆಯ ಪತಿಯಾದ ಜಲಂಧರ ಎಂಬ ರಾಕ್ಷಸನು ದೇವತೆಗಳನ್ನು ಪೀಡಿಸಲು ಶುರುಮಾಡುತ್ತಾನೆ. ಹಾಗೂ ಶಿವನೋಡನೆ ಯುದ್ಧ ಮಾಡುತ್ತಾನೆ. ಆದರೂ ಇವನು ಸೋಲುವುದಿಲ್ಲ. ಆದ್ದರಿಂದ ಮಹಾವಿಷ್ಣುವೂ ಒಂದು ತಂತ್ರವನ್ನು ಹೂಡಿ ಜಲಂಧರನ ರೂಪದಲ್ಲಿ ಬೃಂದಾಳ ಬಳಿ ಬರುತ್ತಾನೆ. ಬೃಂದಾಳು ಈತ ತನ್ನ ಪತಿ ಜಲಂಧರನೆಂದು ತಿಳಿದು ಜಲಂಧರನ ರೂಪದಲ್ಲಿರುವ ಮಹಾವಿಷ್ಣುವನ್ನು ಸ್ಪರ್ಶಿಸುತ್ತಾಳೆ. ಈಕೆ ಸ್ಪರ್ಶಿಸುತ್ತಲೇ ಅವಳಿಗೆ ತಿಳಿಯುತ್ತದೆ ಈತ ನನ್ನ ಪತಿಯಲ್ಲ. ಬೇರೆ ಯಾರೋ ಎಂದು. ತಿಳಿದು ಜಲಂದನ ರೂಪದಲ್ಲಿರುವ ಮಹಾವಿಷ್ಣುವಿಗೆ ನೀನು ಕಲ್ಲಾಗಿ ಹೋಗು ಎಂದು ಶಪಿಸುತ್ತಾಳೆ. ಆ ಶಾಪವನ್ನು ಮಹಾವಿಷ್ಣುವೂ ಒಪ್ಪಿಕೊಳ್ಳುವುದರಿಂದ ಬೃಂದಾಳು ತನ್ನ ಪತಿವ್ರತ ಧರ್ಮಕ್ಕೆ ಕುಂದು ಬಂದಿತೆಂದುಕೊಂಡು ತನ್ನ…

Read More

ಪುರುಷರು ಮತ್ತು ಮಹಿಳೆಯರು ಇಬ್ಬರೂ ಕಾಲಿಗೆ ಕಪ್ಪು ದಾರವನ್ನು ಧರಿಸುವುದು ಬಹಳ ಹಿಂದಿನಿಂದಲೂ ಇರುವ ಪ್ರವೃತ್ತಿಯಾಗಿದೆ. ಇದನ್ನು ಫ್ಯಾಶನ್ ಎಂದು ಪರಿಗಣಿಸಲಾಗಿದೆ. ನವಜಾತ ಶಿಶುವಿನ ಕಾಲುಗಳ ಸುತ್ತ ಕಪ್ಪು ದಾರವನ್ನು ಕಟ್ಟುವ ತಾಯಂದಿರು ಮತ್ತು ಅಜ್ಜಿಯರನ್ನು ನೀವು ನೋಡಿರಬಹುದು. ಆದರೆ ಅವರು ಅದನ್ನು ಫ್ಯಾಷನ್‌ಗಾಗಿ ಮಾಡುವುದಿಲ್ಲ. ಕಾಲಿನ ಮೇಲಿನ ಕಪ್ಪು ದಾರವು ಮಗುವನ್ನು ನಕಾರಾತ್ಮಕತೆ ಮತ್ತು ದುಷ್ಟ ಕಣ್ಣಿನಿಂದ ರಕ್ಷಿಸುತ್ತದೆ ಎಂದು ಅವರು ನಂಬುತ್ತಾರೆ. ಕಪ್ಪು ದಾರವು ರಕ್ಷಣೆಯಾಗಿ ಕಾರ್ಯನಿರ್ವಹಿಸುತ್ತದೆ ಎಂದು ನಂಬುವವರು ಮಾತ್ರವಲ್ಲ. ಜ್ಯೋತಿಷ್ಯಶಾಸ್ತ್ರವು ಕಪ್ಪು ದಾರವನ್ನು ಪಾದದ ಮೇಲೆ ಧರಿಸುವುದರಿಂದ ಅನೇಕ ಪ್ರಯೋಜನಗಳಿವೆ ಎಂದು ನಂಬುತ್ತದೆ. ಇದಲ್ಲದೆ, ಪ್ರಾಚೀನ ಕಾಲದಿಂದಲೂ ಜನರು ತಮ್ಮ ಕಣಕಾಲುಗಳ ಮೇಲೆ ಕಪ್ಪು ದಾರಗಳನ್ನು ಧರಿಸುತ್ತಾರೆ. ವೈದಿಕ ಜ್ಯೋತಿಷ್ಯದ ಪ್ರಕಾರ, ಕಪ್ಪು ದಾರವು ಒಂದು ಪ್ರಮುಖ ಅರ್ಥವನ್ನು ಹೊಂದಿದೆ. ಕಪ್ಪು ಬಣ್ಣವು ಶನಿ ಗ್ರಹವನ್ನು ಪ್ರತಿನಿಧಿಸುತ್ತದೆ ಎಂದು ನಂಬಲಾಗಿದೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್…

Read More